Author: kannadanewsnow05

ಕಲಬುರ್ಗಿ : ರಾಜ್ಯದಲ್ಲಿ ರಣ ಬಿಸಿಲಿಗೆ ಜನತೆ ಹೈರಾಣಾಗಿದ್ದಾರೆ. ಬಿಸಿಲಿನ ತಾಪಮಾನದಿಂದ ರಕ್ಷಿಸಿಕೊಳ್ಳಲು ಜನ ನಾನಾ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಸೂರ್ಯನ ಬಿಸಿಲಿನ ಹೋಡೆತಕ್ಕೆ ಜನ ತತ್ತರಿಸಿದ್ದಾರೆ. ಇದೀಗ ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಪೊಲೀಸ್ ಸಿಬ್ಬಂದಿ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ. ಹೌದು ಕಲ್ಬುರ್ಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಗು ಹೆಚ್ಚಾಗಿ ಇದ್ದು ಇದೀಗ ಕಲ್ಬುರ್ಗಿಯಲ್ಲಿ ಪೊಲೀಸರು ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಮಾಡಿದ್ದಾರೆ. ಇನ್ನು ಬೀದರ್ ಜಿಲ್ಲೆಯಲ್ಲಿ ಮನೆಯ ಮೇಲ್ಚಾವಣಿಯಲ್ಲಿ ತಾಡಪತ್ರಿ ಹಾಕಿ ನೀರು ಸುರಿದು ಜನ ಮೇಲ್ಚಾವಣಿ ತಂಪು ಮಾಡುತ್ತಿದ್ದಾರೆ. ಅಲ್ಲದೆ ಬಿಸಿಲಿನ ತಾಪಮಾನಕ್ಕೆ ಇಂದು ಬೀದರ್ ಜಿಲ್ಲೆಯ ಕಮಲಾಪುರದಲ್ಲಿ ಉತ್ತರ ಪ್ರದೇಶ ಮೂಲದ 20 ವರ್ಷದ ಯುವಕನೊಬ್ಬ ಸಾವನ್ನಪ್ಪಿದ್ದಾನೆ.

Read More

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, ಕಾಫಿ ತೋಟದಲ್ಲಿ ಆಟವಾಡುತ್ತಿದ್ದ 7 ವರ್ಷದ ಬಾಲಕನ ಮೇಲೆ 5-6 ಸಾಕು ನಾಯಿಗಳು ಭೀಕರವಾಗಿ ದಾಳಿ ಮಾಡಿದ್ದು, ಸ್ಥಿತಿ ಗಂಭೀರವಾಗಿದೆ. ಕಳಸ ತಾಲೂಕಿನ ಕೆಳಗೂರು ಗ್ರಾಮದ ಕಾಫಿ ತೋಟದಲ್ಲಿ ಘಟನೆ ನಡೆದಿದೆ.ಕಾಫಿ ಗಿಡದ ಕಸಿಗೆ ಬಂದಿದ್ದ ತಮಿಳುನಾಡಿನ ಕಾರ್ಮಿಕ ಕುಟುಂಬದ 7 ವರ್ಷದ ಮಾಧವ ನಾಯಿ ದಾಳಿಗೆ ಒಳಗಾದ ಬಾಲಕ. ಕಾಫಿ ತೋಟದ ಕಾರ್ಮಿಕರ ಮಕ್ಕಳು ತೋಟದೊಳಗಿನ ಲೈನ್ ಮನೆಗಳ ಬಳಿ ಆಟವಾಡುತ್ತಿದ್ದರು. ಈ ವೇಳೆ 5-6 ಸಾಕು ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಮಗುವಿನ ತಲೆ, ಭುಜ, ಕುತ್ತಿಗೆಯಲ್ಲಿ ಗಂಭೀರ ಗಾಯಗಳಾಗಿವೆ. ಕೂಡಲೇ ಬಾಲಕನ ಪೋಷಕರು ಕಳಸ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್​ಲಾಕ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಮೈಸೂರು : ರಾಜ್ಯಕ್ಕೆ ಬಂದಾಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಿವಿಯಲ್ಲಿ ಏನು ಹೇಳಿದರು ಎಂಬ ಗುಟ್ಟನ್ನು ಸಿಎಂ ಸಿದ್ದರಾಮಯ್ಯ ಬಿಚ್ಚಿಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ, ಮಹಿಳಾ ಮೀಸಲಾತಿ ವಿಚಾರದಲ್ಲಿ ನಿಮ್ಮ ನಿಲುವು ಏನು ಎಂದು ನನ್ನ ಕಿವಿಯಲ್ಲಿ ಪ್ರಧಾನಿ ಮೋದಿ ಕೇಳಿದರು. ನಾನು ಮಹಿಳಾ ಮೀಸಲಾತಿ ಪರವಾಗಿದ್ದೇನೆ ಎಂದು ಹೇಳಿದೆ ಅಂತಾ ಪಿಎಂ ಗುಟ್ಟನ್ನು ಸಿಎಂ ರಟ್ಟು ಮಾಡಿದ್ದಾರೆ. ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರುದ್ಧ ಇಲ್ಲ. ಕ್ಷೇತ್ರ ಪುನರ್ ವಿಂಗಡಣೆ ವಿಚಾರವಾಗಿ ಮಾತ್ರ ನಮ್ಮ ತಕರಾರು ಇದೆ. ಮಹಿಳಾ ಮೀಸಲಾತಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಮೀಸಲಾತಿ ಜಾರಿಯ ಬದ್ಧತೆ ಬಿಜೆಪಿಗೆ ಇಲ್ಲ. ವಿಧೇಯಕದ ವಿಚಾರದಲ್ಲಿ ಸುಳ್ಳು ಹೇಳುತ್ತಾ ರಾಜಕಾರಣ ಮಾಡುತ್ತಿದೆ. 2023 ಮೀಸಲಾತಿ ವಿಧೇಯಕ ಇತ್ತು. ಅದನ್ನ ಅವತ್ತೇ ಯಾಕೆ ಜಾರಿ ಮಾಡಬಾರದಿತ್ತು. ಈಗ ಕ್ಷೇತ್ರ ಪುನರ್ ವಿಗಂಡಣೆ ವಿಚಾರದಲ್ಲಿ ಯಾಕೆ ಅದನ್ನ ತಳುಕು ಹಾಕಿದ್ರು ಎಂದು ಪ್ರಶ್ನಿಸಿದರು. ಹೊಸ ಜನಗಣತಿ ಪ್ರಕಾರ ಕ್ಷೇತ್ರ ಪುನರ್ ವಿಂಗಡಣೆಯಾಗಬೇಕು.…

Read More

ಉತ್ತರಕನ್ನಡ : ಉತ್ತರಕನ್ನಡದಲ್ಲಿ ಭೀಕರ ಕೊಲೆ ನಡೆದಿದ್ದು, ಎರಡನೇ ಮದುವೆಯಾಗಲು ಸಿದ್ಧತೆ ನಡೆಸಿದ್ದ ವೈದ್ಯರೊಬ್ಬರ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಭಯಾನಕ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ನ್ಯೂ ಕೆ.ಹೆಚ್.ಬಿ. ಕಾಲೋನಿಯಲ್ಲಿ ನಡೆದಿದೆ. ಡಾ. ರಮೇಶ್ ಕಲಘುಟಕರ್ (51) ಕೊಲೆಯಾದ ಆಯುರ್ವೇದ ವೈದ್ಯ ಎಂದು ತಿಳಿದುಬಂದಿದೆ. ಕಳೆದ ಐದು ತಿಂಗಳ ಹಿಂದಷ್ಟೇ ಕೊಲೆಯಾದ ವೈದ್ಯ ರಮೇಶ್ ಅವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಸೋಮವಾರ (ಇಂದು) ಶಿರಸಿ ತಾಲೂಕಿನ ಮಂಜಗುಣಿಯಲ್ಲಿ ವೈದ್ಯ ರಮೇಶ್​ ಅವರು ತಮ್ಮ ಪತ್ನಿಯ ತಂಗಿಯ ಜೊತೆಯಲ್ಲಿಯೇ ಮದುವೆ ಆಗುವವರಿದ್ದರು. ಒಬ್ಬರೇ ಇರುತ್ತಿದ್ದ ವೈದ್ಯ ರಮೇಶ್​ ಮನೆಗೆ ಸಂಬಂಧಿಕರು ಬಂದಿದ್ದರು. ಈ ವೇಳೆ ಅವರು ಬಾಗಿಲು ತೆರೆದಿಲ್ಲ. ಹೀಗಾಗಿ ಬಾಗಿಲು ಒಡೆದು ತೆಗೆದಾಗ ಕೊಲೆಯಾದ ವಿಷಯ ಬೆಳಕಿಗೆ ಬಂದಿದೆ. ಇನ್ನು, ವೈದ್ಯರ ಒಬ್ಬ ಮಗ ಬೆಂಗಳೂರಿನಲ್ಲಿ ಹಾಗೂ ಇನ್ನೋರ್ವ ಉತ್ತರ ಪ್ರದೇಶದಲ್ಲಿ ವೈದ್ಯಕೀಯ ಕೋರ್ಸ್​ ಓದುತ್ತಿದ್ದಾರೆ. ಮದುವೆಯ ಕಾರಣ ಮನೆಗೆ ಬಂಗಾರದ ಆಭರಣಗಳನ್ನು ವೈದ್ಯ ರಮೇಶ್…

Read More

ಚಿಕ್ಕಮಗಳೂರು : ಚಾಮರಾಜನಗರ ಜಿಲ್ಲೆಯಲ್ಲಿ ವ್ಯಕ್ತಿಯ ಬರ್ಬರ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ರಾಡ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿ ಕುಣಗಳ್ಳಿ ನಿವಾಸಿ ರಾಮಕೃಷ್ಣ ಬರ್ಬರವಾಗಿ ಹತ್ಯೆಯಾದ ವ್ಯಕ್ತಿ. ಸುರಪುರ ಗ್ರಾಮದ ಮಲ್ಲಿಕಾರ್ಜುನನಿಂದ ಕೊಲೆ ಆಗಿದೆ. ರಾಮಕೃಷ್ಣ ಕೊಲೆ ಮಾಡಿದ ಬಳಿಕ ಮಲ್ಲಿಕಾರ್ಜುನ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ರಾಮಕೃಷ್ಣ ಪದೇ ಪದೇ ತನ್ನ ವಿರುದ್ಧ ದೂರು ನೀಡುತ್ತಿದ್ದ ಹಾಗಾಗಿ ಕೊಲೆ ಮಾಡಿದ್ದಾಗಿ ತಪ್ಪೋಪ್ಪಿಕೊಂಡಿದ್ದಾನೆ.

Read More

ಬೆಂಗಳೂರು : ಬೆಂಗಳೂರಲ್ಲಿ ಕಿಲ್ಲರ್ ‘BMTC’ ಗೆ ಮತ್ತೊಂದು ಬಲಿಯಾಗಿದ್ದು, ಬೈಕ್ ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ಹೆಸರಘಟ್ಟದ ಬೆನಕ ಚೌಟ್ರಿ ಬಳಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಾಮಾಕ್ಷಿಪಾಳ್ಯ ನಿವಾಸಿ ವೃದ್ಧ  ನಾಗರಾಜ್ (60) ಎಂದು ತಿಳಿದುಬಂದಿದೆ. BMTC ಬಸ್ ನೆಲಮಂಗಲದಿಂದ ಹೆಸರಘಟ್ಟ ಮಾರ್ಗವಾಗಿ ಯಲಹಂಕಕ್ಕೆ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ರಾಭಸಕ್ಕೆ ಗಂಭೀರ ಗಾಯಗೊಂಡು ನಾಗರಾಜ್ ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದರೆ. ಸ್ಥಳಕ್ಕೆ ಸೋಲದೇವನಹಳ್ಳಿ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೂ, ಬಸ್ ಸಮೇತ ಚಾಲಕ ನರಸಿಂಹಮೂರ್ತಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ

Read More

ಬೀದರ್ : ಬೀದರ್ ಜಿಲ್ಲೆಯ ಕಮಲನಗರದಲ್ಲಿ 20 ವರ್ಷದ ಯುವಕನೋರ್ವ ರಸ್ತೆ ಬದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್, ಬಿಸಿಲಿನ ತಾಪ ತಾಳಲಾರದೆ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತ ಯುವಕನನ್ನು ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್ ಎಂದು ಗುರುತಿಸಲಾಗಿದೆ. ಕಳೆದ ಹಲವು ತಿಂಗಳಿಂದ ಮೃತ ಸಮೀರ್ ಕಮಲನಗರ ಪಟ್ಟಣದ ಕಟಿಂಗ್ ಶಾಪ್‌ನಲ್ಲಿ ಕೆಲಸ ಮಾಡಿಕೊಂಡಿದ್ದನು. ಬಿಸಿಲಿನ ತಾಪ ತಾಳಲಾರದೇ ತಲೆ ಸುತ್ತು ಬಿದ್ದು ಸಮೀರ್ ಮೃತನಾಗಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ. ಪ್ರಕರಣದ ವಿವರಗಳು: ಮೃತ ಯುವಕ: ಮೊಹ್ಮದ್ ಸಮೀರ್ (20 ವರ್ಷ). ಮೂಲ: ಉತ್ತರ ಪ್ರದೇಶ ರಾಜ್ಯದ ನಿವಾಸಿ. ಸ್ಥಳ: ಕಮಲನಗರದ ರಸ್ತೆ ಬದಿ. ಸಾವಿನ ಶಂಕೆ: ಪ್ರಸ್ತುತ ಬೀದರ್ ಜಿಲ್ಲೆಯಾದ್ಯಂತ ತೀವ್ರವಾದ ಬಿಸಿಲಿದ್ದು, ಉಷ್ಣಾಂಶವು ಅಧಿಕವಾಗಿದೆ. ಯುವಕನು ಈ ಬಿಸಿಲಿನ ತಾಪವನ್ನು ತಾಳಲಾರದೆ (Heatstroke) ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಪೊಲೀಸ್ ಕ್ರಮ: ಸ್ಥಳಕ್ಕೆ ಭೇಟಿ ನೀಡಿದ…

Read More

ಬೆಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಶೀತಲ ಸಮರ ಈಗ ಸ್ಫೋಟಗೊಂಡಿದೆ. ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಡಿ ಸಿ ಆರ್ ಇ (DCRE) ಎಸ್‌ಪಿ ಕಾಶಿನಾಥ್ ಅವರು ಡಿಜಿಪಿ ಸಲೀಂ ಅವರಿಗೆ ಗಂಭೀರ ಆರೋಪಗಳಿರುವ ಪತ್ರ ಬರೆಯುವ ಮೂಲಕ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದಾರೆ. ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ತಾರತಮ್ಯ ಮಾಡುತ್ತಿದ್ದಾರೆ ಎಂದು ಎಸ್‌ಪಿ ಕಾಶಿನಾಥ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. “ನನಗೆ ಕೇವಲ 30 ನಿಮಿಷಗಳ ಕಾಲಾವಕಾಶ ನೀಡಿ, ಈ ಐಪಿಎಸ್ ಅಧಿಕಾರಿಯ ಎಲ್ಲಾ ಕರ್ಮಕಾಂಡಗಳನ್ನು ನಿಮ್ಮ ಮುಂದೆ ಬಯಲು ಮಾಡುತ್ತೇನೆ” ಎಂದು ಡಿಜಿಪಿಯವರಿಗೆ ಬರೆದ ಪತ್ರದಲ್ಲಿ ಸವಾಲು ಹಾಕಿದ್ದಾರೆ. ವಿವಾದದ ಹಿನ್ನೆಲೆ ಪತ್ರ ಸಮರ: ಡಿ ಸಿ ಆರ್ ಇ (ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ) ಎಸ್‌ಪಿ ಕಾಶಿನಾಥ್ ಅವರು ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ಗಂಭೀರ…

Read More

ಬೆಳಗಾವಿ : ಬೆಳಗಾವಿಯಲ್ಲಿ ಘೋರ ಘಟನೆ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಜ್ಯೋತಿ ನಗರದಲ್ಲಿ ನಡೆದಿದೆ. ಶ್ರೀನಿಧಿ ಸಂತೋಷ್ ನಾವಿ (28) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ ಎಂದು ತಿಳಿದುಬಂದಿದೆ. ಶ್ರೀನಿಧಿ ಹಾಗೂ ಸಂತೋಷ್ 2021ರಲ್ಲಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಗಂಡ, ಹೆಂಡತಿ ಮಧ್ಯೆ ಆಗಾಗ ಗಲಾಟೆ ನಡೆಯುತ್ತಿತ್ತು. ಕೌಟುಂಬಿಕ ಕಲಹ, ಕಿರುಕುಳಕ್ಕೆ ಬೇಸತ್ತು ಮನೆಯ ಮೊದಲ ಮಹಡಿಯಲ್ಲಿ ಕಿಟಿಕಿ ಗ್ರಿಲ್‌ಗೆ ವೇಲ್ ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ತವರು ಮನೆಯವರೊಂದಿಗೆ ಮಾತನಾಡಬಾರದೆಂದು ಮೊಬೈಲ್ ಫೋನ್ ಕಿತ್ತುಕೊಂಡಿದ್ದ ಎಂದು ಶ್ರೀನಿಧಿ ಕುಟುಂಬಸ್ಥರು ಆರೋಪಿಸಿದ್ದಾರೆ. ಗಂಡ, ಅತ್ತೆ ಹಾಗೂ ಇನ್ನಿಬ್ಬರೂ ಸಂಬಂಧಿಕರ ವಿರುದ್ಧ ಶ್ರೀನಿಧಿ ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಘಟನೆ ಸಂಬಂಧ ಬೆಳಗಾವಿ ಎಪಿಎಂಸಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Read More

ಬೆಂಗಳೂರು : ಮೈಸೂರು ಜಿಲ್ಲೆಯ ಕೆ.ಆರ್. ನಗರದ ಅರ್ಕೇಶ್ವರ ಸ್ವಾಮಿ ದೇವಸ್ಥಾನದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಆರು ಮಂದಿ ಮೃತಪಟ್ಟ ಘಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಮೈಸೂರಿನ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ 6 ಮಂದಿ ನೀರುಪಾಲಾದ ವಿಚಾರ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರಿಗೆ ಅಗಲಿಕೆಯ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡು ನೊಂದಿರುವ ಜೀವಗಳಿಗೆ ಆರ್ಥಿಕ ಸವಾಲುಗಳು ಮತ್ತಷ್ಟು ಬಾಧಿಸದಿರಲಿ ಎಂಬ ಮಾನವೀಯ ಕಾಳಜಿಯೊಂದಿಗೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ದುರ್ಘಟನೆಯಲ್ಲಿ ರಕ್ಷಿಸಲ್ಪಟ್ಟು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಿ ತಮ್ಮವರನ್ನು ಕೂಡಿಕೊಳ್ಳಲಿ ಎಂದು…

Read More