Author: kannadanewsnow05

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ನಡು ರಾತ್ರಿ ಯುವತಿಯರಿಬ್ಬರರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂದಿನಿಂದ ಬಂದು ಯುವಕನೊಬ್ಬ ಯುವತಿಯನ್ನು ಗೋಡೆಗೆ ಒರಗಿಸಿ ಖಾಸಗಿ ಅಂಗ ಸ್ಪರ್ಶಿಸಿ, ಲೈಂಗಿಕ ಕಿರುಕುಳ ನೀಡಿ ಓಡಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಸುದ್ದಗುಂಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಪೊಲೀಸರು ಈತನನ್ನು ಕೇರಳದಲ್ಲಿ ಅರೆಸ್ಟ್ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಸಂತೋಷ್ ಎಂಬಾತನನ್ನು ಬಂಧನ ಮಾಡಲಾಗಿದ್ದು, ಬೆಂಗಳೂರಿಗೆ ಕರೆತರಲಾಗಿದೆ. ಈತ ಬೆಂಗಳೂರಿನ ತಿಲಕನಗರದ ಗುಲ್ಬರ್ಗಾ ಕಾಲೋನಿಯ ನಿವಾಸಿಯಾಗಿದ್ದು, ವೈಟ್‌ಫೀಲ್ಡ್ ವ್ಯಾಪ್ತಿಯ ಕಾರು ಶೋರೂಮ್‌ವೊಂದರಲ್ಲಿ ಕಾರು ಚಾಲಕನಾಗಿದ್ದ. ಘಟನೆ ಹಿನ್ನೆಲೆ? ಏಪ್ರಿಲ್ 3ರಂದು ಮುಂಜಾನೆ ಸುಮಾರು 1.55ಕ್ಕೆ ಇಬ್ಬರು ಯುವತಿಯರು ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನ 1ನೇ ಕ್ರಾಸ್‌ನಲ್ಲಿ ಸಾಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಅಪರಿಚಿತ ವ್ಯಕ್ತಿ ಏಕಾಏಕಿ ಓರ್ವ ಯುವತಿಯನ್ನು ಹಿಡಿದುಕೊಂಡು ಗೋಡೆಗೆ ಒರಗಿಸಿ, ಆಕೆಯ ಖಾಸಗಿ ಅಂಗಾಂಗ ಸ್ಪರ್ಶಿಸಿ ಅಸಭ್ಯವಾಗಿ…

Read More

ಹೈದ್ರಾಬಾದ್ : ಹೈದ್ರಾಬಾದ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಅದರಲ್ಲೂ ಐಪಿಎಲ್ ಫ್ರಾಂಚೈಸಿ ತಂಡವಾದ ಸನ್ ರೈಸರ್ಸ್ ಹೈದರಾಬಾದ್ ಆಟಗಾರರು ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ತಂಡದ ಎಲ್ಲಾ ಆಟಗಾರರು ಸೇಫ್ ಆಗಿದ್ದಾರೆ ಎಂದು ವರದಿಯಾಗಿದೆ. ಹೌದು ಹೈದರಾಬಾದ್‌ನ ಬಂಜಾರ ಹಿಲ್ಸ್‌ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಈ ಘಟನೆ ಸಂಭವಿಸಿದೆ.ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲಾ ಆಟಗಾರರನ್ನು ಸ್ಥಳಾಂತರಿಸಲಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಸನ್ ರೈಸರ್ಸ್ ಹೈದರಾಬಾದ್ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್ 14, ಇಂದು ಹೈದರಾಬಾದ್ ಬಂಜಾರ ಹಿಲ್ಸ್‌ನಲ್ಲಿರುವ ಪಾರ್ಕ್ ಹಯಾತ್ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಸನ್‌ರೈಸರ್ಸ್ ಹೈದರಾಬಾದ್ ತಂಡವು ಪ್ರಸ್ತುತ ಹೋಟೆಲ್‌ನಲ್ಲಿ ತಂಗಿದೆ. ಎಲ್ಲಾ ಆಟಗಾರರು ಸುರಕ್ಷಿತವಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದೆ. https://twitter.com/Orangearmyforvr/status/1911699096131477582?t=3AkCYV-w44dRMOIlhEodLw&s=19

Read More

ಧಾರವಾಡ : ಅತ್ಯಾಚಾರ ಪ್ರಕಾರಣಗಳಲ್ಲಿ ಕಠಿಣ ಶಿಕ್ಷೆ ಆದರೆ ಇಂತಹ ಘಟನೆ ಕಡಿಮೆಯಾಗುತ್ತವೆ ಈ ಸಂಬಂಧ ನ್ಯಾಯಾಂಗದಲ್ಲಿ ಬದಲಾವಣೆ ಬರಬೇಕು.ಅತ್ಯಾಚಾರ ಪ್ರಕರಣಗಳಲ್ಲಿ ಆದಷ್ಟು ಬೇಗ ಶಿಕ್ಷೆ ಆಗಬೇಕು ಎಂದು ನಿವೃತ್ತ ನ್ಯಾ.ಸಂತೋಷ ಹೆಗಡೆ ಅವರು ತಿಳಿಸಿದರು. ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಗ ತಪ್ಪು ಮಾಡಿದ್ರೆ ಶಿಕ್ಷೆ ಆಗುತ್ತೆ ಎಂಬ ಭಾವನೆ ಬರುತ್ತದೆ ಇಂತಹ ಪ್ರಕರಣಗಳಲ್ಲಿ ಗಂಭೀರತೆಯನ್ನು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಜನರಲ್ಲಿ ಎಲ್ಲೆಡೆ ಆಗುತ್ತೆ ಬಿಡಿ ಎಂಬ ಭಾವನೆ ಇದೆ. ಎನ್ಕೌಂಟರ್ ಮಾಡೋದು ಶಿಕ್ಷೆ ರೀತಿ ಅಲ್ಲ ಎಂದು ತಿಳಿಸಿದರು. ಅತ್ಯಾಚಾರ ಆರೋಪ ಸಾಬೀತಾದಾಗ ಶೀಘ್ರವೇ ಶಿಕ್ಷೆಯಾಗಬೇಕು ಗಂಭೀರವಾದ ಶಿಕ್ಷೆ ಕೊಟ್ಟರೆ ಸಮಾಜಕ್ಕೆ ಸಂದೇಶ ಹೋಗುತ್ತದೆ ಇಂಥ ತಪ್ಪು ಮಾಡಿದರೆ ಬೇಗ ಶಿಕ್ಷೆಯಾಗುತ್ತದೆ ಎಂಬ ಭಾವನೆ ಜನರಲ್ಲಿ ಬರುತ್ತದೆ ಎಂದು ಸಂತೋಷ್ ಹೆಗಡೆ ತಿಳಿಸಿದರು.

Read More

ವಿಜಯಪುರ : ಬಿಜೆಪಿ ಪಕ್ಷದಿಂದ 6 ವರ್ಷಗಳ ಕಾಲ ಉಚ್ಛಾಟಿತರಾಗಿರುವ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೀಗ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟಿಂಗ್ ಬೀಸಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಅಷ್ಟು ಸುಲಭವಾದದ್ದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಗೆ ನನ್ನನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಲು ಷಡ್ಯಂತ್ರ ಮಾಡಿದ್ದರೊ, ಅದೇ ರೀತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದರು. ಆದರೆ ಸಿಎಂ ಸಿದ್ದರಾಮಯ್ಯ ಅವರನ್ನು ಯಾವುದೇ ಕಾರಣಕ್ಕೂ ಅಷ್ಟು ಸುಲಭವಾಗಿ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ಶಾಸಕ ಬಸನಗೌಡ ಪಾಟೀಲ ಇದೀಗ ಬ್ಯಾಟಿಂಗ್ ಬೀಸಿದ್ದಾರೆ.

Read More

ಹುಬ್ಬಳ್ಳಿ : ಇಂದು ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಿಹಾರ ಮೂಲದ ಯುವಕನೊಬ್ಬ ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಗೆಯನ್ನು ಕಿಡ್ನ್ಯಾಪ್ ಮಾಡಿ ಬಳಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿತ್ತು. ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ. ಸರ್ಕಾರದ ಪರಿಹಾರದ ಬಗ್ಗೆ ಸಲೀಂ ಅಹಮದ್ ಮಾಹಿತಿ ನೀಡಿದ್ದಾರೆ. ವಿಧಾನ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮದ್ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇನ್ನು ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪಿಎಸ್ಐ ಅನ್ನಪೂರ್ಣ ಹಾಗೂ ಇಬ್ಬರು ಕಾನ್ಸ್ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಕೂಡಲೇ ಪಿಎಸ್ಐ ಅನ್ನಪೂರ್ಣ ಅವರು ಆರೋಪಿ ಮೇಲೆ ತಮ್ಮ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ…

Read More

ಬೀದರ್ : ಬೀದರ್ ನಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ 14 ಎಕರೆ ಜೋಳ, 6 ಎಕರೆಯಲ್ಲಿ ಬೆಳೆದಿದ್ದ ಕಬ್ಬು, ಪರಂಗಿ ಹಣ್ಣು ಜೊತೆಗೆ 120 ಮಾವಿನ ಗಿಡಗಳು ಬೆಂಕಿಗಾಹುತಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಹೊರವಲಯದ ತೋಟದಲ್ಲಿ ನಡೆದಿದೆ. ಸುಮಾರು 120 ಮಾವಿನ ಗಿಡಗಳಿಗೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. ಜೊತೆಗೆ ಅಕ್ಕಪಕ್ಕದ ಹೊಲದಲ್ಲಿನ ಬೆಳೆಗಳಿಗೂ ಹಾನಿಯಾಗಿದೆ. ಟ್ರಾನ್ಸ್‌ಫಾರ್ಮ್‌ನಲ್ಲಿನ ವಿದ್ಯುತ್ ಪ್ರವಹಸಿ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಪ್ರಶಾಂತ್ ಪಾಟೀಲ್ ಎಂಬುವವರಿಗೆ ಸೇರಿದ 6 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು, ಪಪ್ಪಾಯಿ, ಮಾವು ಹಾಗೂ ಭರತ್ ನಾಟೀಕರ್ ಎಂಬುವವರ 14 ಎಕರೆಯ ಜೋಳ ಸುಟ್ಟು ಭಸ್ಮವಾಗಿದೆ. ಘಟನೆ ಕುರಿತು ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾದ ಬಳಿಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ, ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಬೆಂಗಳೂರಿನಲ್ಲಿ ಪರೀಕ್ಷೆ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿಯೋರ್ವಳು ಅಪಾರ್ಟ್ಮೆಂಟ್ ನ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಬ್ಬಾಳದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿರುವ ದಂತ ವೈದ್ಯಕೀಯ ವಿದ್ಯಾರ್ಥಿನಿಯನ್ನು ಸೌಮ್ಯ (19) ಎಂದು ತಿಳಿದುಬಂದಿದೆ. ಅಪಾರ್ಟ್ಮೆಂಟಿನ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.ದಂತ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿನಿ ಸೌಮ್ಯ 2ನೇ ವರ್ಷದಲ್ಲಿ ಓದುತ್ತಿದ್ದಳು. ಪರೀಕ್ಷೆ ವಿಚಾರವಾಗಿ ವಿದ್ಯಾರ್ಥಿನಿ ಸೌಮ್ಯ ಭಯಗೊಂಡಿದ್ದಾಳೆ ಎನ್ನಲಾಗಿದೆ. ಈ ಹಿಂದೆಯೂ ವಿದ್ಯಾರ್ಥಿ ಸೌಮ್ಯ ಆತ್ಮಹತ್ಯೆಗೆ ಯತ್ನಿಸಿದ್ದಳು ಎಂದು ತಿಳಿದುಬಂದಿದೆ. ಘಟನೆ ಕುರಿತಂತೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ತಾಲೂಕಿನ ಗಣೇಶ ಗುಡಿಯ ಬಾಡಗುಂದದ ಹೋಂಸ್ಟೇಯೊಂದರ ಈಜುಕೊಳದಲ್ಲಿ 6 ವರ್ಷದ ಬಾಲಕನೋರ್ವ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಬಾಲಕನನ್ನು ಹುಸೇನೈನ್ ರಹೀಮ್ ಖಾನ್ (06) ಎಂದು ತಿಳಿದುಬಂದಿದೆ. ಬಲ್ಲ ಮೂಲಗಳ ಪ್ರಕಾರ ಬೆಳಗಾವಿಯಿಂದ ಪ್ರವಾಸಕ್ಕೆಂದು ಕುಟುಂಬಸ್ಥರ ಜೊತೆ ಗಣೇಶಗುಡಿಯ ಬಾಡಗುಂದದ ಅಶೋಕ ಹೋಮ್‌ಸ್ಟೇಗೆ ಬಂದಿದ್ದ ಈ ಬಾಲಕ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿಬಂದಿದೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕ ಹುಸೇನೈನ್ ರಹೀಮ್ ಖಾನ್ ಮೃತಪಟ್ಟಿದ್ದಾನೆ. ಆಸ್ಪತ್ರೆಯಲ್ಲಿ ಬಾಲಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ರಜೆ ಸಮಯವನ್ನು ಕಳೆಯಲು ಬಂದ ಕುಟುಂಬಕ್ಕೆ ಇದೀಗ ಬಾಲಕನ ಸಾವು ಬಿಗ್ ಶಾಕ್ ನೀಡಿದೆ.

Read More

ಹುಬ್ಬಳ್ಳಿ : ಇದು ಹುಬ್ಬಳ್ಳಿಯಲ್ಲಿ ಬಿಹಾರ್ ಮೂಲದ ಯುವಕನಿಂದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಅರೆಸ್ಟ್ ಮಾಡಿವರು ಘಟನೆ ವರದಿಯಾಗಿದೆ. ಹೌದು ಆರೋಪಿ ಯುವಕನ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಇದೀಗ ಆರೋಪಿ ಯುವಕನನ್ನು ಅರೆಸ್ಟ್ ಮಾಡಿದ್ದಾರೆ. ಘಟನೆಯಲ್ಲಿ ಒಬ್ಬ ಪಿಎಸ್ಐ ಮತ್ತು ಇಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿದ್ದು, ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಸದ್ಯ ಗಾಯಾಳು ಪೊಲೀಸ್ ಸಿಬ್ಬಂದಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಆರೋಪಿಯು 5 ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಕಿಡ್ನಾಪ್ ಮಾಡಿ ಬಳಿಕ ಅತ್ಯಾಚಾರ ಆಗಿದ್ದಾನೆ. ನಂತರ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಘಟನೆ ಖಂಡಿಸಿ ಹುಬ್ಬಳ್ಳಿ ನಗರದಾದ್ಯಂತ ಪ್ರತಿಭಟನೆ ಜೋರಾಗಿದ್ದು ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನಾಕಾರರು ಆತನನ್ನು ಎನ್ಕೌಂಟರ್ ಮಾಡುವಂತೆ ಆಕ್ರೋಶ…

Read More

ದಾವಣಗೆರೆ : ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮುಸ್ಲಿಂ ಮಹಿಳೆ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಲಾಗಿದೆ. ನಡು ರಸ್ತೆಯಲ್ಲಿಯೇ ಮಹಿಳೆಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ತಾವರೆಕೆರೆ ಗ್ರಾಮದಲ್ಲಿ ನಡೆದಿದೆ. ತಾವರೆಕೆರೆ ಗ್ರಾಮದಲ್ಲಿ ಏಪ್ರಿಲ್ 9ರಂದು ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಸ್ರೀನ್ ಬಾನು, ನಸ್ರಿನ್ ಮತ್ತು ಫಯಾಜ್ ಎನ್ನುವವರ ಮೇಲೆ ಹಲ್ಲೆ ನಡೆಸಲಾಗಿದೆ. ಮಹಿಳೆ ಮೇಲೆ ಹಗ್ಗ ಮತ್ತು ದೊಣ್ಣೆ ಕಬ್ಬಿಣದ ಪೈಪ್ ಗಳಿಂದ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಮೊಹಮ್ಮದ್ ಫಯಾಜ್ ಎನ್ನುವ ವ್ಯಕ್ತಿಯಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ ಎಂದು ತಿಳಿದುಬಂದಿದೆ. ಮಹಮ್ಮದ್ ಗೌಸ್ ಪೀರ್, ಚಾಂದ್ ಪೀರ್, ದಸ್ತಗಿರ್ ಇನಾಯತ್ ಉಲ್ಲಾ, ರಸೂಲ್ ಟಿ ಆರ್ ನಿಂದ ಮಹಿಳೆಯ ಮೇಲೆ ಹಲ್ಲೆ ನಡೆದಿದೆ. ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಅಲ್ಲದೆ ಮಹಿಳೆಯ ಮೇಲೆ ಹಲ್ಲೆ ಮಾಡುವ ದೃಶ್ಯ ಕೂಡ ಸಾಮಾಜಿಕ…

Read More