Author: kannadanewsnow05

ಚಿಕ್ಕಮಗಳೂರು : ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸೇರಿದಂತೆ ಚಿಕ್ಕಮಂಗಳೂರು ಜಿಲ್ಲೆಯಿಂದ ಒಟ್ಟು 15 ಜನರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ. ಚಿಕ್ಕಮಗಳೂರು ಜಿಲ್ಲಾಡಳಿತ ಬಿಜೆಪಿ ಯುವ ಮೋರ್ಚಾ ಸೇರಿದಂತೆ 15 ಜನರ ವಿರುದ್ಧ ಈ ಒಂದು ಗಡಿಪಾರು ಆದೇಶ ಹೊರಡಿಸಿದೆ. ವಿಚಾರಣೆಗೆ ಬರುವಂತೆ ಜಿಲ್ಲಾಡಳಿತದಿಂದ ಗಡಿಪಾರು ನೋಟಿಸ್ ಜಾರಿ ಮಾಡಿದ್ದು, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್, ಬಜರಂಗದಳ ಹಾಸನ ವಿಭಾಗದ ಸಹ ಸಂಯೋಜಕ ಶ್ಯಾಮ್ ವಿ.ಗೌಡ ಮುಸ್ಲಿಂ ಸಂಘಟನೆಯ ನಾಲ್ವರು ಸೇರಿದಂತೆ 15 ಜನರಿಗೆ ಇದೀಗ ಗಡಿಪಾರು ನೋಟಿಸ್ ನೀಡಲಾಗಿದೆ. ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಉಪವಿಭಾಗಾಧಿಕಾರಿ ನಟೇಶ್ ನೋಟಿಸ್ ಜಾರಿ ಮಾಡಿದ್ದಾರೆ. ಗಡಿಪಾರು ಮಾಡುವಂತೆ ಜಿಲ್ಲಾಡಳಿತಕ್ಕೆ ಪೊಲೀಸರು ಪ್ರಸ್ತಾವನೆ ಕಳುಹಿಸಿದ್ದರು. ಮಾರ್ಚ್ 25ರಂದು ವಿಚಾರಣೆಗೆ ಹಾಜರಾಗುವಂತೆ 15 ಜನರಿಗೆ ಸೂಚನೆ ನೀಡಲಾಗಿದೆ ಚಿಕ್ಕಮಂಗಳೂರು ಎಸಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ ಸಾರ್ವಜನಿಕ ಶಾಂತಿಗೆ ಭಂಗ, ನೈತಿಕ ಪೊಲೀಸ್ ಗಿರಿ,…

Read More

ಬೆಂಗಳೂರು : ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆಯ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ ಆದರೆ ಬಾಗಲಕೋಟೆಯಲ್ಲಿ ದಿವಂಗತ ಎಚ್.ವೈ ಮೇಟಿ ಅವರ ಮಕ್ಕಳಲ್ಲಿ ಟಿಕೆಟ್ ಗಾಗಿ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿಗೆ ಕರೆದು ಸಂಧಾನ ಮಾಡಿದ್ದು, ಇದೀಗ ಅದು ಯಶಸ್ವಿಯಾಗಿದೆ. ಹೌದು ಬೆಂಗಳೂರಿಗೆ ಕರೆಯಿಸಿಕೊಂಡು ಮಹತ್ವದ ಸಭೆ ಮಾಡಿದ್ದು, ತಮ್ಮ ಕುಟುಂಬಕ್ಕೆ ನೀಡುತ್ತೇವೆ. ಆದ್ರೆ, ನಾಲ್ವರಲ್ಲಿ ಒಬ್ಬರಿಗೆ ನೀಡಿದರೆ ಉಳಿದವರು ಪಕ್ಷಕ್ಕೆ ಕೆಲಸ ಮಾಡಬೇಕೆಂದು ಸಿದ್ದರಾಮಯ್ಯ ಸಭೆಯಲ್ಲಿ ಖಡಕ್ ಆಗಿ ಹೇಳಿದ್ದಾರೆ. ಇದಕ್ಕೆ ಮೇಟಿ ಮಕ್ಕಳು ಸಹ ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಮೂಲಕ ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಮೇಟಿ ಕುಟುಂಬಕ್ಕೆ ಎನ್ನುವುದು ಕನ್ಫರ್ಮ್ ಆದಂತಾಗಿದೆ. ಶಾಸಕ ಮೇಟಿಯವರ ಹಿರಿಯ ಪುತ್ರ ಮಲ್ಲಿಕಾರ್ಜುನ, ಕಿರಿಯ ಪುತ್ರ ಉಮೇಶ, ಪುತ್ರಿಯರಾದ ಬಾಯಕ್ಕ ಹಾಗೂ ಮಹಾದೇವಿ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಮುಖ್ಯವಾಗಿ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಸ್ಪರ್ಧೆ ಮಾಡುವುದಾಗಿ ಮಹಾದೇವಿ ಬಹಿರಂಗ ಎಚ್ಚರಿಕೆ…

Read More

ಬೆಂಗಳೂರು : ಕೋಗಿಲು ನಿರಾಶ್ರಿತರಿಗೆ ಸರ್ಕಾರದಿಂದ ಯುಗಾದಿ ರಂಜಾನ್ ಗಿಫ್ಟ್ ನೀಡಿದ್ದು, 3-4 ತಿಂಗಳ ಬಳಿಕ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕೋಗಿಲು ನಿರಾಶ್ರಿತರಿಗೆ ಹಕ್ಕು ಪತ್ರ ವಿತರಣೆ ಮಾಡಿದ್ದಾರೆ. ವಿಕಾಸ ಸಹೋದರರಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಪತ್ರ ವಿತರಿಸಿದರು. ಕೇವಲ 40 ಅರ್ಹ ಕುಟುಂಬಕ್ಕೆ ಮಾತ್ರ ಸಚಿವ ಜಮೀರ್ ಅಹ್ಮದ್ ಖಾನ್ ಅವರು ನಿವೇಶನದ ಪತ್ರ ವಿತರಣೆ ಮಾಡಿದರು. ರಾಜೀವ್ ಗಾಂಧಿ ವಸತಿ ನಿಗಮದ ಸಮುಚ್ಚಯದಲ್ಲಿ ನಿವೇಶನ ಹಂಚಿಕೆ ಮಾಡಲಾಯಿತು. ಬೆಂಗಳೂರಿನ ಬ್ಯಾಟರಾಯನಪುರದಲ್ಲಿರುವ ನಿಗಮದ ಸಂಮುಚ್ಚೆಯದಲ್ಲಿ ಈ ಒಂದು ನಿವೇಶನ ಪತ್ರ ವಿತರಣೆ ಮಾಡಲಾಯಿತು. ಈ ವೇಳೆ ಸಚಿವರಾದ ಕೃಷ್ಣಭೈರೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಬೆಂಗಳೂರು : ಸಾರ್ವಜನಿಕ ಶಾಂತಿ ಮತ್ತು ಶಬ್ದ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಳ್ಳಲು ಮುಂದಾಗಿದೆ. ರಾಜ್ಯದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಜಾತ್ರೆ ಮತ್ತು ಮೆರವಣಿಗೆಗಳಲ್ಲಿ ಡಿಜೆ (DJ) ಬಳಕೆಯಿಂದ ಸಾರ್ವಜನಿಕರಿಗೆ ಹಾಗೂ ವಯೋವೃದ್ಧರಿಗೆ ತೊಂದರೆಯಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಇದನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸುತ್ತಿದೆ. ಇಂದು ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಬ್ಬರದ ಸಂಗೀತ ಪ್ರಸಾರಕ್ಕೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ, ಡಿಜೆ ನಿಷೇಧಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ವಿಧಾನಸಭೆಗೆ ಈ ವಿಚಾರ ತಿಳಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ನಿಯಮಿತವಾಗಿ ‘ಸಹ್ಯಾದ್ರಿ ಉತ್ಸವ’ವನ್ನು ಆಯೋಜಿಸಲು ಸರ್ಕಾರ ಅನುದಾನ ಬಿಡುಗಡೆ ಮಾಡಬೇಕು ಎಂದು ಸದನದಲ್ಲಿ ಕೋರಿದರು. ಇದೇ ವೇಳೆ, ಬಿಜೆಪಿಯ ಜನಾರ್ಧನ ರೆಡ್ಡಿ ಅವರು ಕೊಪ್ಪಳದಲ್ಲಿ ಆನೆಗುಂದಿ ಉತ್ಸವವನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿದರು. ಇದರಿಂದಾಗಿ, ಡಿಜೆ ವಿಚಾರ ಚರ್ಚೆಯಾಯಿತು. ಆಗ…

Read More

ಕೊಡಗು : ಇಂದು ರಾಜ್ಯಾದ್ಯಂತ ಹತ್ತನೇ ತರಗತಿ ಪರೀಕ್ಷೆ ಆರಂಭವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಇಬ್ಬರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನಿರಾಕರಣೆ ಮಾಡಲಾಗಿದೆ. ಈ ಹಿನ್ನೆಲೆ ಪರೀಕ್ಷಾ ಕೇಂದ್ರದ ಆಭರಣದಲ್ಲಿ ಪೋಷಕರು ಹಾಗೂ ಇಬ್ಬರು ವಿದ್ಯಾರ್ಥಿಗಳು ಕಣ್ಣೀರು ಹಾಕಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮದ ಉದಯ ಪ್ರೌಢಶಾಲೆ ಆವರಣದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳು ಕಣ್ಣೀರು ಹಾಕಿರುವ ಘಟನೆ ವರದಿಯಾಗಿದೆ. ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಒತ್ತಾಯ ಮಾಡಿದ್ದಾರೆ. ಬೆಟ್ಟಗೇರಿ ಪರೀಕ್ಷಾ ಕೇಂದ್ರಕ್ಕೆ ಬಿ ಇ ಓ ಮಹೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲಾ ಆಡಳಿತ ಮಂಡಳಿ ಎಡವಟ್ಟಿನಿಂದ ಸಮಸ್ಯೆ ಉಂಟಾಗಿದೆ. ಉದಯ ಪ್ರೌಢಶಾಲೆ ಅನಧಿಕೃತವಾಗಿದೆ. ಏಪ್ರಿಲ್ ನಲ್ಲಿ ನಡೆಯುವ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡುತ್ತೇವೆ. ಬಿಇಒ ಬಂದರು ಶಾಲಾ ಆಡಳಿತ ಮಂಡಳಿ ಸದಸ್ಯರು ಸ್ಥಳಕ್ಕೆ ಬಂದಿಲ್ಲ. ಹಾಗಾಗಿ ಬೇರೆ ದಾರಿ ಕಾಣದೆ ವಿದ್ಯಾರ್ಥಿಗಳು ಮತ್ತು ಪೋಷಕರು ಅಸಹಾಯಕರಾಗಿದ್ದಾರೆ.

Read More

ಬೆಂಗಳೂರು : ಇತ್ತೀಚಿಗೆ ಕೆಪಿಎಸ್ಸಿ ಅಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ವರದಿಯಾಗಿತ್ತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಕೆಪಿಎಸ್ಸಿ ಅಕ್ರಮ ಸಂಬಂಧ ರಾಜ್ಯ ಸರ್ಕಾರ ಉತ್ತರಿಸಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು ಕೆಪಿಎಸ್ಸಿ ಅಲ್ಲಿ ಮಾತ್ರ ಇದು ಸಮಸ್ಯೆಯಾಗುತ್ತಿದೆ ಆದರೆ ಕೆಇಎ ನಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಉತ್ತರಿಸಿದರು. ಕೆಇನಲ್ಲಿ 2000 ಪ್ರಶ್ನೆ ಸಿದ್ಧಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗಿದೆ. ಪ್ರಶ್ನಾವಳಿ ಮಾಡುವಾಗ 20 ರಿಂದ 30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ ಮಾಡಿರುವುದರಿಂದ ಲೋಪ ದೋಷ ಕಡಿಮೆ ಕಂಡು ಬಂದಿದೆ. ಇದನ್ನೇ ಕೆಪಿಎಸ್ಸಿಯಲ್ಲಿ ಅನುಷ್ಠಾನ ಮಾಡಲು ಚರ್ಚೆಯಾಗುತ್ತಿದೆ. ಪ್ರತಿವರ್ಷ ಇಂತಹ ತಿಂಗಳು ಇಂತಹ ದಿನ ಪರೀಕ್ಷೆ ನಡೆಸಬೇಕು ನಿಗದಿತ ದಿನದಲ್ಲಿ ಕಡ್ಡಾಯವಾಗಿ ಕೆಪಿಎಸ್ಸಿ ಪರೀಕ್ಷೆ ನಡೆಯಬೇಕು. ಸಿ ಗ್ರೂಪ್ ಹಾಗೂ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಯುಪಿಎಸ್ಸಿ ಮಾದರಿ ನಿರ್ದಿಷ್ಟ ದಿನದಲ್ಲಿ ಪರೀಕ್ಷೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಬರುವ ಐದು ವರ್ಷಕ್ಕೆ ಎಷ್ಟು ಹುದ್ದೆಗಳು ನೇಮಕಾತಿ ಮಾಡಲಾಗುತ್ತದೆ.…

Read More

ಬೆಳಗಾವಿ : ಮದುವೆಯಾಗಲು ನಿರಾಕರಿಸಿದಕ್ಕೆ ಯುವತಿಯ ತಲೆ ಒಡೆದ ಘಟನೆ ಜೋಡ ಕುರುಳಿಯಲ್ಲಿ ನಡೆದಿದೆ. ವಿದ್ಯಾಶ್ರೀ ಕಿಲಾರಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರುಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಬೀರಪ್ಪ ರಾಮಪ್ಪನಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು ಕಣ್ಣಿಗೆ ಕಾರದ ಪುಡಿ ಅರ್ಜಿ ಕಬ್ಬಿಣದ ರಾಡ್ ನಿಂದ ಯುವತಿಯ ಮೇಲೆ ಹಲ್ಲೆ ಮಾಡಿದ್ದಾನೆ. ಹತ್ತು ಜನರನ್ನು ಕರೆತಂದು ವಿದ್ಯಾಶ್ರೀ ತಂದೆ ತಾಯಿ ಮೇಲೆ ಕೂಡ ಹಲ್ಲೆ ಮಾಡಿದ್ದಾನೆ. ಎರಡು ವರ್ಷದಿಂದ ವಿದ್ಯಾಶ್ರೀ ಮದುವೆ ಮಾಡಿ ಕೊಡುವಂತೆ ಬೀರಪ್ಪ ಕಾಟ ಕೊಡುತ್ತಿದ್ದ. ಬೀರಪ್ಪನಿಗೆ ಮಗಳನ್ನು ಕೊಡಲು ಮಹದೇವ ಕಿಲಾರಿ ನಿರಾಕರಿಸಿದ್ದ. ಹಾಗಾಗಿ ನಿನ್ನೆ ಇದೇ ಕೋಪದಲ್ಲಿ ರಾತ್ರಿ ಏಕಾಏಕಿ ಮನೆಗೆ ನುಗ್ಗಿ ಕಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾನೆ. ವಿದ್ಯಾಶ್ರೀ ತಂದೆ ತಾಯಿ ಮೇಲೆಯು ಬೀರಪ್ಪ ಹಲ್ಲೆ ಮಾಡಿದ್ದಾನೆ. ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾದವರ ರಕ್ಷಣೆಗಾಗಿ ಹೊಸ ವಿಧೇಯಕ ಮಂಡನೆ ಆಯಿತು. ವಿಧಾನಸಭೆಯಲ್ಲಿ ಇವ ನಮ್ಮವ ಇವ ನಮ್ಮವ ವಿಧೇಯಕ ಮಂಡನೆ ಆಗಿದೆ. ಅಂತರ್ಜಾತಿ ವಿವಾಹದ ಜೋಡಿಗಳ ಹತ್ಯೆ ಮಾಡಿದರೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತೆ. ಅಂತರ್ಜಾತಿ ವಿವಾಹವಾದರೆ ಸಾಮಾಜಿಕ ಆರ್ಥಿಕ ಬಹಿಷ್ಕಾರ ಹಾಕುವಂತಿಲ್ಲ. ಸಂಬಂಧಿಸಿದ ಜೋಡಿ ವಾಸ ಸ್ಥಳದಿಂದ ಹೊರ ಹೋಗುವಂತೆ ಒತ್ತಾಯಿಸುವುದು ಅವರ ಕುಟುಂಬವನ್ನು ಹೊರ ಹಾಕುವುದು ಕಾನೂನುಬಾಹಿರ. ಜಾತಿ ಇಲ್ಲವೇ ಸಮುದಾಯದಲ್ಲಿ ಬಲವಂತವಾಗಿ ಸಂಪ್ರದಾಯ ಇರುವಂತಿಲ್ಲ. ಅಂತರ್ಜಾತಿ ವಿವಾಹಿತರಿಗೆ ಪೂಜಾ ಸ್ಥಳಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಅಂತರ್ಜಾತಿ ವಿವಾಹಿತರಿಂದ ಕುಟುಂಬದ ಆಸ್ತಿ ದಂಡ ಹಾಕುವಂತಿಲ್ಲ. ಕೆಲಸಕ್ಕೆ ಅಡ್ಡಿ ಕೆಲಸ ಕೊಡಲು ಹಿಂದೇಟು ಹಾಕುವುದು ಅಪರಾಧವಾಗಿದೆ. ಅಂತರ್ಜಾತಿ ವಿವಾಹವಾಗಲು ಅವರ ಕುಟುಂಬಸ್ಥರು ವಿರೋಧಿಸುವಂತಿಲ್ಲ. ಇಬ್ಬರ ವಯಸ್ಕರ ವಿವಾಹಕ್ಕೆ ಪೋಷಕರ ಒಪ್ಪಿಗೆ ಅಗತ್ಯವಿಲ್ಲ. ವಿವಾಹಿತ ಜೋಡಿಗೆ ಹಿಂಸೆ ಮಾನಸಿಕ ನಿಂದನೆ ಕಾನೂನುಬಾಹಿರ. ದಂಪತಿಯನ್ನು ಬಲವಂತವಾಗಿ ದೂರ ಇಡುವ ಪ್ರಯತ್ನ ಮಾಡುವುದು ಸರಿಯಲ್ಲ.…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೆಜ್ಜೆನು ದಾಳಿ ಮಾಡಿದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹೊಸನಗರ ತಾಲೂಕು ರಿಪ್ಪನಪೇಟೆಯಲ್ಲಿ ನಡೆದಿದೆ. ರಿಪ್ಪನ್​ಪೇಟೆ ಗ್ರಾಮದ ಮುಖ್ಯರಸ್ತೆಯಲ್ಲಿನ ಎಸ್​ಬಿಐ ಬ್ಯಾಂಕ್‌ ಮುಂಭಾಗ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ. ಈ ವೇಳೆ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಮಕ್ಕಳ ಮೇಲೆ ಹಾಗೂ ಬ್ಯಾಂಕ್ ನೌಕರ ತೌಸಿಫ್ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ.‌ ಇದರಲ್ಲಿ ತೌಸಿಫ್ ಅವರ ಮುಖಕ್ಕೆ 20ಕ್ಕೂ ಹೆಚ್ಚು ಜೇನು ನೊಣಗಳು ದಾಳಿ ಮಾಡುತ್ತಿದ್ದಂತಯೇ ಶಾಲಾ ವಿದ್ಯಾರ್ಥಿಗಳು ಓಡಿ ಹೋಗಿ ಬಚಾವ್ ಆಗಿದ್ದಾರೆ.‌ ಆದರೂ ವಿದ್ಯಾರ್ಥಿಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಜೇನು ಕಚ್ಚಿವೆ. ತಕ್ಷಣ ಎಲ್ಲರನ್ನೂ ರಿಪ್ಪನ್​ಪೇಟೆಯ ಪ್ರಾಥ‌ಮಿಕ‌ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ‌ ನೀಡಲಾಗಿದೆ.

Read More

• 1.6 ಕೋಟಿ ಅರ್ಜಿಗಳ ಪೈಕಿ 98 ಲಕ್ಷ ಅರ್ಜಿಗಳಿಗೆ ಸಕಾಲದಲ್ಲಿ ಸೇವೆ • ಮನೆಯಲ್ಲೇ ಕುಳಿತು ಜಾತಿ-ಆದಾಯ ಪ್ರಮಾಣ ಪತ್ರ ಪಡೆಯಲು ಸವಕಾಶ • ಇನ್ಮುಂದೆ ಸ್ವಯಂ ಚಾಲಿತವಾಗಿ ಜಾತಿ-ಆದಾಯ ಪ್ರಮಾಣ ಪತ್ರ ಬೆಂಗಳೂರು ಮಾರ್ಚ್18: ಸಕಾಲ ಯೋಜನೆ ಅಡಿಯಲ್ಲಿ ಪ್ರಸ್ತುತ ವರ್ಷ ಶೇ.99.35 ರಷ್ಟು ಅರ್ಜಿಗಳಿಗೆ ನಿಗದಿತ ಕಾಲ ಮಿತಿಯೊಳಗೆ ಸೇವೆ ಒದಗಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನ ಪರಿಷತ್ನಲ್ಲಿ ಕೆ.ಅಬ್ದುಲ್ ಜಬ್ಬರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, “ನಾಡ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಜನರಿಗೆ ಎಲ್ಲಾ ಸೇವೆಗಳೂ ತ್ವರಿತವಾಗಿ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಪರಿಣಾಮ ಜಾತಿ-ಆದಾಯ ಪ್ರಮಾಣ ಪತ್ರ ಸೇರಿದಂತೆ ಸಕಾಲ ಯೋಜನೆಯ ಅಡಿಯಲ್ಲಿ ಲಭ್ಯವಾಗುವ ಎಲ್ಲಾ ಸೇವೆಗಳನ್ನೂ ನಿಗದಿತ ಅವಧಿಯಲ್ಲಿ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು. “ಕಳೆದ ವರ್ಷ ವಿವಿಧ ಸೇವೆಗಳಿಗಾಗಿ ನಾಡ ಕಚೇರಿಗೆ ಸುಮಾರು…

Read More