Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮವನ್ನು ಖಂಡಿಸಿ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ದೆಹಲಿಯಲ್ಲಿ ನಡೆದ ಯಶಸ್ವಿ ಪ್ರತಿಭಟನೆಯ ಬೆನ್ನಲ್ಲೇ, ಇಂದು ಬೆಂಗಳೂರಿನ ಪ್ರಸಿದ್ಧ ಫ್ರೀಡಂ ಪಾರ್ಕ್‌ನಲ್ಲಿ ಕಾಕ್ರಾಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ಯುವಕರು, ವಿದ್ಯಾರ್ಥಿಗಳು ಹಾಗೂ ಆಕ್ರೋಶಿತ ಪೋಷಕರು ಪಾಲ್ಗೊಂಡಿದ್ದರು. ಭ್ರಷ್ಟಾಚಾರ ಮತ್ತು ಪರೀಕ್ಷಾ ಅಕ್ರಮಗಳಿಂದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು. ಫ್ರೀಡಂ ಪಾರ್ಕ್ ಆವರಣವು ಕೇಂದ್ರ ಸರ್ಕಾರದ ವಿರುದ್ಧದ ಘೋಷಣೆಗಳಿಂದ ಮೊಳಗಿಹೋಗಿತ್ತು. ಕೇಂದ್ರ ಸಚಿವರ ರಾಜೀನಾಮೆಗೆ ಆಗ್ರಹ: ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇಷ್ಟೊಂದು ದೊಡ್ಡ ಮಟ್ಟದ ಪರೀಕ್ಷಾ ಹಗರಣ ನಡೆದಿದ್ದರೂ…

Read More

ಹುಬ್ಬಳ್ಳಿ: “ತ್ರಿಶೂಲವನ್ನು ದೇವರ ಮನೆಯಲ್ಲಿ ಇಟ್ಟು ಪೂಜೆ ಮಾಡಲು ನೀಡುತ್ತಿಲ್ಲ. ಅದನ್ನು ನಿಮ್ಮ ವ್ಯಾನಿಟಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಓಡಾಡಿ. ನಿಮ್ಮ ಮೇಲೆ ಯಾರಾದರೂ ಆಕ್ರಮಣ ಮಾಡಲು ಬಂದರೆ, ಅದರಿಂದ ಅವರ ಹೊಟ್ಟೆಗೆ ಚುಚ್ಚಿ ಆತ್ಮರಕ್ಷಣೆ ಮಾಡಿಕೊಳ್ಳಿ” ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಆಯೋಜನೆಗೊಂಡಿದ್ದ ತ್ರಿಶೂಲ ದೀಕ್ಷಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹಿಳೆಯರು ತಮ್ಮ ರಕ್ಷಣೆಗೆ ಶಸ್ತ್ರ ಹೊಂದುವುದು ಅನಿವಾರ್ಯವಾಗಿದೆ ಎಂದು ಪ್ರತಿಪಾದಿಸಿದರು. ಇದೇ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸರ್ಕಾರದ ನಡೆಗಳ ವಿರುದ್ಧ ಆಕ್ರೋಶ ಹೊರಹಾಕಿದ ಅವರು, “ಶ್ರೀರಾಮನ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಭಗವಾನ್ ಎಂಬುವವರ ವಿರುದ್ಧ ಸರ್ಕಾರ ಯಾವುದೇ ಕೇಸ್ ದಾಖಲಿಸಿಲ್ಲ. ಆದರೆ ನಾವು ‘ಭಾರತ್ ಮಾತಾ ಕಿ ಜೈ’ ಎಂದರೆ ನಮಗೆ ನೋಟಿಸ್ ನೀಡಲಾಗುತ್ತದೆ. ನಾವು ಕೇವಲ ತ್ರಿಶೂಲ ದೀಕ್ಷೆ ನೀಡುವುದಕ್ಕೆ ಸೀಮಿತವಾಗುವುದಿಲ್ಲ, ಮುಂದಿನ ದಿನಗಳಲ್ಲಿ ತಲ್ವಾರ್ (ಖಡ್ಗ) ಗಳನ್ನೂ ವಿತರಿಸುತ್ತೇವೆ. ತಲ್ವಾರ್ ನೀಡುವುದನ್ನು ತಡೆಯುವ ಧೈರ್ಯ ಯಾರಿಗಾದರೂ ಇದ್ದರೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಜ್ಯುವೆಲರಿ ಶಾಪ್ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮೇ 30 ರಂದು ಚಿನ್ನಾಭರಣ ಅಂಗಡಿ ದರೋಡೆ ನಡೆಸಿದ್ದಾರು. ಕೇವಲ 30 ಸೆಕೆಂಡ್ ನಲ್ಲಿ 30 ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ನೆಲಮಂಗಲ ತಾಲೂಕಿನ ಟಿ. ಬೇಗುರಿನಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಕು ಹಿಡಿದು ಖರೀಮರು ದರೋಡೆ ಮಾಡಿದ್ದರು. ಇದೀಗ ಸಿಸಿಟಿವಿ ದೃಶ್ಯ ಆಧರಿಸಿ ರಾಜಸ್ಥಾನ ಮೂಲದ ಕಳ್ಳರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪೇಂದ್ರ ಸಿಂಗ್ ಬಾಬುಲಾಲ್ ಹಾಗೂ ಮತ್ತೋರ್ವ ವ್ಯಕ್ತಿ ಬಂದಿತ ಆರೋಪಿಗಳು ಎಂದು ತಿಳಿದುಬಂದಿದೆ.

Read More

ಬಾಗಲಕೋಟೆ: ಕರ್ನಾಟಕ ರಾಜ್ಯದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಇನ್‌ಸ್ಟಾಗ್ರಾಮ್ ಖಾತೆಯೊಂದರ ವಿರುದ್ಧ ಬಾಗಲಕೋಟೆಯಲ್ಲಿ ಕಾನೂನು ಸಮರ ಆರಂಭವಾಗಿದೆ. ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಲಾಗಿದೆ. ಜಮಖಂಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಕೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಿಲ್ಲಾ ಯುವ ಕಾಂಗ್ರೆಸ್ ನಿಯೋಗವು, ಇನ್‌ಸ್ಟಾಗ್ರಾಮ್ ಖಾತೆಯೊಂದರ ವಿರುದ್ಧ ಲಿಖಿತ ದೂರನ್ನು ಹಸ್ತಾಂತರಿಸಿತು. ಜಮಖಂಡಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಅವರಿಗೆ ಅಧಿಕೃತ ದೂರು ಪತ್ರವನ್ನು ಸಲ್ಲಿಸಿದ ಯುವ ಕಾಂಗ್ರೆಸ್ ಮುಖಂಡರು, ಮುಖ್ಯಮಂತ್ರಿಗಳ ತೇಜೋವಧೆ ಮಾಡುತ್ತಿರುವವರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಶಿವಕುಮಾರ ದಾನಕ್ಕನವರ ನೇತೃತ್ವ ಈ ಪ್ರತಿಭಟನಾತ್ಮಕ ದೂರು ಸಲ್ಲಿಕೆಯ ನೇತೃತ್ವವನ್ನು ಬಾಗಲಕೋಟೆ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ ದಾನಕ್ಕನವರ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳು ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಮರುದೃಢೀಕರಿಸಲು ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆದೇಶ ಹೊರಡಿಸಲಾಗಿದೆ. ಆದರೆ, ಈ ಆದೇಶವನ್ನು ಮುಂದಿಟ್ಟುಕೊಂಡು ವಿರೋಧ ಪಕ್ಷವಾದ ಬಿಜೆಪಿ, “ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಂಚು ರೂಪಿಸಿದೆ” ಎಂದು ಟೀಕಿಸಿತ್ತು. ವಿಪಕ್ಷಗಳ ಈ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮ ಪ್ರಕಟಣೆ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಯೋಜನೆಗಳು ನಿಲ್ಲುವುದಿಲ್ಲ, ವದಂತಿ ನಂಬಬೇಡಿ ರಾಜ್ಯದಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಡಿ.ಕೆ. ಶಿವಕುಮಾರ್ ಅವರು ಖಡಾಖಂಡಿತವಾಗಿ ಹೇಳಿದ್ದಾರೆ. ಇವು ಕಾಂಗ್ರೆಸ್ ಸರ್ಕಾರದ ಹೆಮ್ಮೆಯ ಯೋಜನೆಗಳಾಗಿದ್ದು, ನೂರಕ್ಕೆ ನೂರರಷ್ಟು ಮುಂದುವರೆಯಲಿವೆ. ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಸಾರ್ವಜನಿಕರಲ್ಲಿ ಗೊಂದಲ ಮೂಡಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಸಾರ್ವಜನಿಕರು ಹಾಗೂ ಮಹಿಳೆಯರು ಇಂತಹ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಮನವಿ ಮಾಡಿದ್ದಾರೆ. ಮರು-ಅರ್ಜಿಗೆ…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಮರು ಅರ್ಜಿ ಸಲ್ಲಿಸುವಂತೆ ಸರ್ಕಾರ ಸೂಚನೆ ಬೆನ್ನಲ್ಲೇ, ರಾಜ್ಯಾದ್ಯಂತ ಫಲಾನುಭವಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಚಿತ್ರದುರ್ಗ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಹಿಳೆಯರು ಸರ್ಕಾರದ ಈ ನಿರ್ಧಾರದ ವಿರುದ್ಧ ಬೀದಿಗಿಳಿದು ಅಸಮಾಧಾನ ಹೊರಹಾಕುತ್ತಿದ್ದಾರೆ. ಗೊಂದಲ ಮೂಡಿಸಿದ ಸರ್ಕಾರದ ಹೊಸ ಆದೇಶ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಗೃಹಲಕ್ಷ್ಮಿ ಯೋಜನೆಯೂ ಒಂದಾಗಿತ್ತು. ಆದರೆ, ಈಗ ತಾಂತ್ರಿಕ ಕಾರಣಗಳು ಹಾಗೂ ನಿಯಮಗಳ ಬದಲಾವಣೆಯ ನೆಪವೊಡ್ಡಿ ಫಲಾನುಭವಿಗಳಿಗೆ ಮತ್ತೆ ಮರು ಅರ್ಜಿ ಸಲ್ಲಿಸಲು ಸೂಚಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮೂಡಿಸಿದೆ. ಈಗಾಗಲೇ ಲಕ್ಷಾಂತರ ಮಹಿಳೆಯರು ಯೋಜನೆಯಡಿ ನೋಂದಾಯಿಸಿಕೊಂಡು ಸೌಲಭ್ಯ ಪಡೆಯುತ್ತಿರುವಾಗ, ಈ ಹಂತದಲ್ಲಿ ಮರು ಅರ್ಜಿಯ ಅಗತ್ಯವೇನಿತ್ತು ಎಂದು ಮಹಿಳೆಯರು ಪ್ರಶ್ನಿಸುತ್ತಿದ್ದಾರೆ. ತಿಂಗಳ ಹಣ ಬಾಕಿ: ಸಮರ್ಪಕವಾಗಿ ಜಾರಿಯಾಗದ ಯೋಜನೆ “ಸರ್ಕಾರ ಅಧಿಕಾರಕ್ಕೆ ಬರುವಾಗ ಕೊಟ್ಟ ಅಶ್ವಾಸನೆಯನ್ನು ಸಮರ್ಪಕವಾಗಿ ಈಡೇರಿಸುತ್ತಿಲ್ಲ” ಎಂದು ಫಲಾನುಭವಿಗಳು ನೇರವಾಗಿಯೇ ಕಿಡಿಕಾರಿದ್ದಾರೆ. ಯೋಜನೆ…

Read More

ಬೆಂಗಳೂರು: ಬಿಡದಿ ಸ್ಮಾರ್ಟ್ ಸಿಟಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಜಟಾಪಟಿ ತಾರಕಕ್ಕೇರಿದೆ. ಈ ಯೋಜನೆ ಜಾರಿಯಾದರೆ ಡಿ.ಕೆ. ಶಿವಕುಮಾರ್ ಅವರಿಗೆ ಕ್ರೆಡಿಟ್ ಸಿಗುತ್ತದೆ ಎಂಬ ಒಂದೇ ಕಾರಣಕ್ಕಾಗಿ ಕುಮಾರಸ್ವಾಮಿ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ರಾಜಕೀಯ ಲಾಭಕ್ಕಾಗಿ ಯೋಜನೆಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ. ಯೋಜನೆಯ ಪ್ರಗತಿಯ ಕುರಿತು ಮಾತನಾಡಿದ ಶಾಸಕರು, ಬಿಡದಿ ಟೌನ್‌ಶಿಪ್‌ಗಾಗಿ ಭೂಮಿ ನೀಡಲು ಬಹುತೇಕ ರೈತರು ಮತ್ತು ಸಾರ್ವಜನಿಕರು ಈಗಾಗಲೇ ಸ್ವಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಾರೆ. ಈ ಕುರಿತು ಸರ್ಕಾರದ ಮಟ್ಟದಲ್ಲಿ ಅಧಿಕೃತ ಅಧಿಸೂಚನೆ (ನೋಟಿಫಿಕೇಶನ್) ಕೂಡ ಪ್ರಕಟವಾಗಿದೆ. ಯಾವುದೇ ಕಾರಣಕ್ಕೂ ಈ ಯೋಜನೆಯನ್ನು ಸರ್ಕಾರ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಇವತ್ತಲ್ಲದಿದ್ದರೆ ನಾಳೆಯಾದರೂ ಈ ಭಾಗದಲ್ಲಿ ಭೂ ಅಭಿವೃದ್ಧಿ ಹಾಗೂ ಕೈಗಾರಿಕಾ ಪ್ರಗತಿ ಆಗಲೇಬೇಕು. ಆದರೆ…

Read More

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಸಿ. ಬಾಲಕೃಷ್ಣ ನಡುವಿನ ರಾಜಕೀಯ ವಾಕ್ಸಮರ ಈಗ ದೇವಸ್ಥಾನದಲ್ಲಿ ಪ್ರಮಾಣ ಮಾಡುವ ಹಂತಕ್ಕೆ ಬಂದು ತಲುಪಿದೆ. ಜಮೀನು ಸ್ವಾಧೀನ ಮತ್ತು ರೈತರಿಗೆ ನೀಡುವ ಪರಿಹಾರದ ವಿಚಾರವಾಗಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಶಾಸಕ ಬಾಲಕೃಷ್ಣ ನೇರ ಸವಾಲು ಹಾಕಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದೆ. 2018ರಲ್ಲಿ ರೈತರ ಪರವಾಗಿ ಜಮೀನು ಬಿಟ್ಟುಕೊಡಲು ತಾವು ಒಪ್ಪಿಕೊಂಡಿದ್ದಾಗಿ ಕುಮಾರಸ್ವಾಮಿ ಹೇಳುತ್ತಿರುವುದು ಸುಳ್ಳು ಎಂದು ಬಾಲಕೃಷ್ಣ ಆರೋಪಿಸಿದ್ದಾರೆ. ಒಂದು ವೇಳೆ ತಾವು ಹೇಳುತ್ತಿರುವುದು ಸತ್ಯವೇ ಆಗಿದ್ದರೆ, ಎಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡೇಶ್ವರಿ ತಾಯಿಯ ಮೇಲೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಎಸೆದಿದ್ದಾರೆ. ಇದಕ್ಕೆ ಪ್ರತಿಯಾಗಿ ತಾವು ಕೂಡ ಕೋಡಿಹಳ್ಳಿಯ ಪ್ರಸಿದ್ಧ ಅಜ್ಜಯ್ಯನ (ರಂಗನಾಥ ಸ್ವಾಮಿ) ಸನ್ನಿಧಿಯಲ್ಲಿ ಪ್ರಮಾಣ ಮಾಡಲು ಸಿದ್ಧವಿರುವುದಾಗಿ ಅವರು ಘೋಷಿಸಿದ್ದಾರೆ. ಈ ವಿವಾದಕ್ಕೆ ಪುಷ್ಟಿ ನೀಡುವಂತೆ ಶಾಸಕ ಬಾಲಕೃಷ್ಣ ಅವರು ಎಚ್.ಡಿ. ಕುಮಾರಸ್ವಾಮಿ ಅವರ ವಿಡಿಯೋ…

Read More

ಬಳ್ಳಾರಿ : ವಿವಾಹಿತ ಮಹಿಳೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಮಹಿಳೆ ಮತ್ತು ಆಕೆಯ ಪತಿ ಮತ್ತು ಸಹೋದರನಿಂದ ಬಸವನಗೌಡನ ಎನ್ನುವ ಯುವಕನ ಭೀಕರ ಕೊಲೆಯಾಗಿದೆ. ಶ್ವೇತಾ ಆಕೆಯ ಪತಿ ದೊಡ್ಡ ಬಸವನಗೌಡ ಮತ್ತು ಸೋದರ ವಿಜಯ್ ನನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. Nಜೂನ್ 7ರಂದು ರಾತ್ರಿ ಬಸವನಗೌಡನ ಕೊಲೆ ಮಾಡಿದ್ದಾರೆ. ಬಳಿಕ LLC ಕಾಲುವೆ ಹತ್ತಿರ ಶವಕ್ಕೆ ಬೆಂಕಿ ಹಚ್ಚಿದ್ದರು. ಪ್ರಕರಣದ ದಾಖಲಿಸಿಕೊಂಡು ಸದ್ಯ ಮೋಕಾ ಪೋಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಬಸವನಗೌಡ ಮದುವೆಯಾದ ಮಹಿಳೆ ಹಿಂದೆ ಬಿದ್ದಿರುವುದು ಪತ್ತೆಯಾಗಿದೆ. 2 ವರ್ಷದ ಹಿಂದೆ ಮದುವೆ ಒಂದರಲ್ಲಿ ಶ್ವೇತಗೆ ಬಸವನಗೌಡ ಪರಿಚಯವಾಗಿದ್ದ ಸಂಬಂಧದಲ್ಲಿ ಅತ್ತಿಗೆಯಾಗುವ ಶ್ವೇತಾಗೆ ಮೆಸೇಜ್ ಕಳುಹಿಸಿ ಬಸವನಗೌಡ ಕಿರುಕುಳ ನೀಡಿದ್ದಾನೆ. ಹಾಗಾಗಿ ಆಕೆ ಹಲವು ಬಾರಿ ಬುದ್ದಿವಾದ ಹೇಳಿದರೂ ಕೂಡ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಇದರಿಂದ ಬೇಸತ್ತು ಈ ವಿಚಾರ ಪತಿ ಮತ್ತು ಸಹೋದರನಿಗೆ ಶ್ವೇತಾ ತಿಳಿಸಿದ್ದಾಳೆ. ಬಳಿಕ 3 ಸೇರಿ ಬಸವನಗೌಡ…

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯವಾಗಿರುವ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಎರಡೂ ಯೋಜನೆಗಳಲ್ಲಿ ಭಾರಿ ಪ್ರಮಾಣದ ದುರುಪಯೋಗ ಮತ್ತು ತಾಂತ್ರಿಕ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ, ವ್ಯವಸ್ಥೆಯನ್ನು ಸರಿಪಡಿಸಲು ಸರ್ಕಾರ ಮುಂದಾಗಿದೆ. ನಕಲಿ ಫಲಾನುಭವಿಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಹಾಲಿ ಸೌಲಭ್ಯ ಪಡೆಯುತ್ತಿರುವವರೂ ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಆದೇಶಿಸಿದೆ. ನಕಲಿ ಫಲಾನುಭವಿಗಳ ಪತ್ತೆಗೆ ಮಾಸ್ಟರ್ ಪ್ಲಾನ್: ಸರ್ಕಾರದ ಈ ದಿಢೀರ್ ನಿರ್ಧಾರಕ್ಕೆ ಯೋಜನೆಗಳಲ್ಲಿ ನುಸುಳಿರುವ ಲಕ್ಷಾಂತರ ನಕಲಿ ಫಲಾನುಭವಿಗಳೇ ಮುಖ್ಯ ಕಾರಣ ಎನ್ನಲಾಗಿದೆ. ಅರ್ಹರಲ್ಲದವರೂ ಸಹ ಸರ್ಕಾರದ ಯೋಜನೆಯ ದುಡ್ಡನ್ನು ಜೇಬಿಗಿಳಿಸುತ್ತಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಹೀಗಾಗಿ, ಸಂಪೂರ್ಣ ವ್ಯವಸ್ಥೆಯನ್ನು ಶುದ್ಧೀಕರಿಸಲು ಮತ್ತು ಕೇವಲ ನಿಜವಾದ ಅರ್ಹ ಜನರಿಗೆ ಮಾತ್ರ ಈ ಸೌಲಭ್ಯ ತಲುಪುವಂತೆ ಮಾಡಲು ಇಡೀ ಪ್ರಕ್ರಿಯೆಗೆ ಒಂದು ‘ಮೇಜರ್ ಸರ್ಜರಿ’…

Read More