Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಲ್ಲಿ ಎರಡು ತಿಂಗಳ ಹಿಂದೆ ವಿವಾಹವಾಗಿದ್ದ ನವ ವಿವಾಹಿತ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಬಿ ಚೆನ್ನಸಂದ್ರ ದಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಗಾನವಿ (26) ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹನಿಮೂನ್ ಗೆ ಶ್ರೀಲಂಕಾ ಗೆ ಹೋಗಿ ದಂಪತಿ ಅರ್ಧಕ್ಕೆ ಹಿಂದಿರುಗಿದ್ದಾರೆ. ವರದಕ್ಷಿಣೆ ಕಿರುಕುಳದಿಂದ ಬೆಸತ್ತು ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎನ್ನುವ ಆರೋಪ ಕೇಳಿ ಬಂದಿದೆ. ಕಳೆದ ಅಕ್ಟೋಬರ್ 29ರಂದು ಗಾನ್ವಿ ಮತ್ತು ಸೂರಜ್ ಮದುವೆಯಾಗಿತ್ತು. ಸೂರಜ್ ಮನೆಯವರ ಬೇಡಿಕೆಯಂತೆ ಅದ್ದೂರಿಯಾಗಿ ಆರತಕ್ಷತೆ ನಡೆದಿತ್ತು.
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ವಿಚಾರವಾಗಿ ಭಾರಿ ಚರ್ಚೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸುತ್ತಿದ್ದು, ಇದರ ಮಧ್ಯ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಮಾರ್ಮಿಕ ಪೋಸ್ಟ್ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಗುರಿಯನ್ನು ಬೇಗ ತಲುಪಬೇಕು ಎನ್ನುವವರು ದಾರಿಯಲ್ಲಿ ವಿಶ್ರಮಿಸುತ್ತ ಕುಳಿತುಕೊಳ್ಳಬಾರದು ಎಂದು ಪಾಟೀಲ್ ಪುಟ್ಟಪ್ಪ ಹೇಳಿಕೆಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿದ್ದಾರೆ. ಅಂದರೆ ತಮ್ಮ ಸಹೋದರ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ಈ ಒಂದು ಪೋಸ್ಟ್ ಮಾಡಿರಬಹುದು ಎಂದು ಇದೀಗ ಭಾರಿ ಚರ್ಚೆ ಆಗುತ್ತಿದೆ. https://twitter.com/DKSureshINC/status/2004009199802744861?t=6VIJDTA42loYsmfpelrLkw&s=19
ಬೆಂಗಳೂರು : ರಾಜ್ಯದಲ್ಲಿ ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿ ಕೂತಿದ್ದೇವೆ. ಆದರೆ 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ನಾಳೆಯೇ ಚುನಾವಣೆ ನಡೆದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಾನು ರಾಜ್ಯದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಮುಂಬರುವ ಜಿಲ್ಲಾ ಪಂಚಾಯತ್ ಹಾಗು ತಾಲೂಕ ಪಂಚಾಯತ್ ಚುನಾವಣೆಗೆ ಸಿದ್ಧರಾಗೋಣ ಎಂದು ಕಾರ್ಯಕರ್ತರಿಗೆ ಬಿವೈ ವಿಜಯೇಂದ್ರ ಕರೆ ನೀಡಿದರು.
ಬೆಂಗಳೂರು : ರಾಜ್ಯದಲ್ಲಿ ನಮ್ಮ ಸ್ವಯಂಕೃತ ಅಪರಾಧದಿಂದ ವಿಪಕ್ಷದಲ್ಲಿ ಕೂತಿದ್ದೇವೆ ಎಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿವೈ ವಿಜಯೇಂದ್ರ ಹೇಳಿಕೆ ನೀಡಿದರು. ನಾಳೆಯೇ ಚುನಾವಣೆ ನಡೆದರೂ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2028ಕ್ಕೆ ಚುನಾವಣೆ ನಡೆದರೂ ಸ್ವಂತ ಶಕ್ತಿಗಳು ಮೇಲೆ ಅಧಿಕಾರಕ್ಕೆ ಬರಲಿದೆ. 130 ರಿಂದ 140 ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ನಾನು ರಾಜ್ಯದ್ಯಂತ ಪ್ರವಾಸ ಮಾಡುತ್ತಿದ್ದೇನೆ.ಮುಂಬರುವ ಜಿಲ್ಲಾ ಪಂಚಾಯತ್ ಹಾಗು ತಾಲೂಕ ಪಂಚಾಯತ್ ಚುನಾವಣೆಗೆ ಸಿದ್ಧರಾಗೋಣ ಎಂದು ಕಾರ್ಯಕರ್ತರಿಗೆ ಬಿವೈ ವಿಜಯೇಂದ್ರ ಕರೆ ನೀಡಿದರು.
ಹುಬ್ಬಳ್ಳಿ : ಹುಬ್ಬಳ್ಳಿ ಪಕ್ಕದ ತಾರಿಹಾಳ ಬ್ರಿಡ್ಜ್ನಿಂದ ಗಾಮನಗಟ್ಟಿಗೆ ಸಂಪರ್ಕ ಕಲ್ಪಿಸುವ ವಿಮಾನ ನಿಲ್ದಾಣದ ಹಿಂಬದಿಯ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿರುವುದು ಹುಬ್ಬಳ್ಳಿ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕಕ್ಕೆ ಉಂಟುಮಾಡಿದೆ. ಈ ಕುರಿತು ಸ್ಥಳೀಯ ನಿವಾಸಿಗಳು ತಮ್ಮ ಮೊಬೈಲ್ ಫೋನ್ಗಳಲ್ಲಿ ಚಿರತೆಯ ಓಡಾಟದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ.ಇದೇ ಚಿರತೆ ಗೋಕುಲ್ ರೋಡ್ ವ್ಯಾಪ್ತಿಯ ರೇಣುಕಾ ನಗರದಲ್ಲಿಯೂ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಆತಂಕ ಹೆಚ್ಚಿಸಿದೆ. ಈ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ‘CWC’ ಸಭೆಗೆ ನನ್ನ ಕರೆದಿಲ್ಲ ಕರೆದರೆ ಹೋಗುತ್ತೇನೆ ಎಂದು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಖರ್ಗೆ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, CWC ಸಭೆಗೆ ನನ್ನ ಕರೆದಿಲ್ಲ ಕರೆದರೆ ಹೋಗುತ್ತೇನೆ.ಸಿಎಂ ಸಿದ್ದರಾಮಯ್ಯ ಸೇರಿ ಮೂವರು ಸಿಎಂಗಳನ್ನು ಕರೆದಿದ್ದಾರೆ. CWC ಸಭೆಗೆ ಸಿಎಂ ಮಾತ್ರ ಕರೆದಿದ್ದಾರೆ, ಡಿಸಿಎಂ ಕರೆದಿಲ್ಲ. AICC ಅಧ್ಯಕ್ಷ ಜೊತೆ ಬೇರೆ ವಿಚಾರ ಚರ್ಚೆ ಮಾಡಿಲ್ಲ ಹೈಕಮಾಂಡ್ ನಿರ್ಧಾರಕ್ಕೆ ಬದ್ದ ಎಂದು ನಾನು ಸಿಎಂ ಹೇಳಿದ್ದೇವೆ ಎಂದು ತಿಳಿಸಿದರು. ನಾನು ಪಕ್ಷದ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ! ನಾನು ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ಭಾಷಣ ಮಾಡಿಕೊಂಡು ಹೋಗು ಕೆಲಸ ಮಾಡಿಲ್ಲ ಸ್ಟೇಜ್ ಗೆ ಬಂದ ಮೇಲೆ ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ತಿರುಗೇಟು ನೀಡಿದ್ದಾರೆ.…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕುರ್ಚಿಯ ವಿಚಾರವಾಗಿ ಆಂತರಿಕ ಕಿಚ್ಚಾಟ ಹೆಚ್ಚಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ನಾನು ಎಲ್ಲರ ಹಾಗೆ ಸ್ಟೇಜ್ ಮೇಲೆ ಬಂದು ಭಾಷಣ ಮಾಡಿಕೊಂಡು ಸುಮ್ಮನೆ ಹೋಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಗೆ ಶಿವಕುಮಾರ್ ನೀಡಿದ್ದಾರೆ. ನಾನು ಬಾವುಟ ಕಟ್ಟಿದ್ದೇನೆ. ಕಸ ಗುಡಿಸಿದ್ದೇನೆ. ಪಕ್ಷಕ್ಕೆ ಏನೇನು ಬೇಕು ಎಲ್ಲವನ್ನು ಮಾಡಿದ್ದೇನೆ. ಭಾಷಣ ಮಾಡಿಕೊಂಡು ಹೋಗು ಕೆಲಸ ಮಾಡಿಲ್ಲ ಸ್ಟೇಜ್ ಗೆ ಬಂದ ಮೇಲೆ ಭಾಷಣ ಮಾಡಿಕೊಂಡು ಹೋಗಿಲ್ಲ ಎಂದು ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ನಾವು ಲೈಫ್ ಟೈಮ್ ವರ್ಕರ್. ನಾನು ಸಿದ್ದರಾಮಯ್ಯ ಈಗಾಗಲೇ ಹೇಳಿದ್ದೇವೆ ಹೈಕಮಾಂಡ್ ಏನ್ ಹೇಳುತ್ತೆ ಅದರಂತೆ ಹೇಳಿಕೊಂಡು ಹೋಗುತ್ತೇವೆ ಅಂತ ಹೇಳಿದ್ದೇವೆ. ನಾನು ನನಗೆ ಯಾವ ಪೋಸ್ಟ್ ಇದ್ದರು ಪಕ್ಷದ…
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಸದ್ಯ ಸಾವಿನ ದವಡೆಯಿಂದ ಇಬ್ಬರು ಯುವತಿಯರು ಹೊರಬಂದಿದ್ದಾರೆ. ಧಗಧಗನೇ ಉರಿಯುತ್ತಿದ್ದ ಬಸ್ನಿಂದ ಇಬ್ಬರು ಯುವತಿಯರು ಪ್ರಾಣ ಉಳಿಸಿ ಬಂದ ದೃಶ್ಯ ವೈರಲ್ ಆಗಿದೆ. ಇನ್ನು ಇದೆ ವೇಳೆ ಅಪಘಾತದಲ್ಲಿ ಐದು ವರ್ಷದ ಮಗು ಸಹ ಸಾವನಪ್ಪಿದೆ ಎಂದು ತಿಳಿದುಬಂದಿದೆ. ಭೀಕರ ಬಸ್ ದೂರದಲ್ಲಿ 5 ವರ್ಷದ ಮಗು ಸಹ ಇದೀಗ ಸಾವನಪ್ಪಿದೆ. ನಾಲ್ಕು ಶವಗಳಲ್ಲಿ ಮಗುವಿನ ಶವದ ಗುರುತು ಪತ್ತೆಯಾಗಿದೆ. ಸಂಬಂಧಿಕರು ಮೃತ ಮಗುವಿನ ಗುರುತು ಪತ್ತೆ ಹಚ್ಚಿದ್ದಾರೆ. ಐದು ವರ್ಷದ ಪುಟ್ಟ ಮಗು ಸಹ ಈ ಒಂದು ಭೀಕರ ಬಸ್ ದುರಂತದಲ್ಲಿ ಸುಟ್ಟು ಕರಕಲಾಗಿದೆ. ಸಂಬಂಧಿಕರು ಮೃತ ಮಗುವಿನ ಗುರುತು ಪತ್ತೆ ಹಚ್ಚಿದ್ದಾರೆ. ಘಟನೆ ವಿವರ ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ನಡುವೆ…
ವಿಜಯನಗರ : ವಿಜಯನಗರದಲ್ಲಿ ಪೊಲೀಸರು ಭರ್ಜರಿ ಕಾರ್ಯ ಆಚರಣೆ ನಡೆಸಿದ್ದು ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಲಕ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿ 500 ರೂ. ಮುಖ ಬೆಲೆಯ ಒಟ್ಟು 40,000 ಮೊತ್ತದ 80 ಖೋಟಾ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರಸೀಕೆರೆ ಗ್ರಾಮದಲ್ಲಿ ನಡೆದ ಶ್ರೀ ದಂಡಿ ದುರ್ಗಮ್ಮ ದೇವಸ್ಥಾನದ ಜಾತ್ರಾ ಸಮಯದಲ್ಲಿ ಆಟಿಕೆ ನಡೆಸುವ ಶ್ರೀಮಾತ ಅಮ್ಯೂಸ್ಮೆಂಟ್ ಪಾರ್ಕ್ ಅಂಗಡಿಯಲ್ಲಿ ಅಪರಿಚಿತರು 500 ರೂ. ಮುಖ ಬೆಲೆಯ ಎರಡು ನೋಟುಗಳನ್ನು ಚಲಾವಣೆ ಮಾಡಿದ್ದರು.ಈ ಕುರಿತು ಆಟಿಕೆ ಅಂಗಡಿ ಮಾಲೀಕ ವೀರಭದ್ರಪ್ಪ ಎಚ್.ಕೆ ಅವರು ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತಕ್ಷಣ ಕಾರ್ಯ ಪ್ರವೃತ್ತರಾದ ಅರಸೀಕೆರೆ ಪೊಲೀಸರು ಪ್ರಕರಣ ದಾಖಲಾಗಿ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಅರಸೀಕೆರೆ ಕೆ.ಮಹಮ್ಮದ್ ರಿಹಾನ್ (18), ಉಚ್ಚಂಗಿದುರ್ಗದ ಮುಹಮ್ಮದ್ ಅಖಿಲ್ (18), ಆರಸೀಕೆರೆ ನರೇಂದ್ರ ಪ್ರಸಾದ್ ಎನ್.ಪಿ (19),…
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಪಾಪುರ ಗ್ರಾಮದಲ್ಲಿ ಕೊನೆಗೂ ಹುಲಿ ಬೋನಿಗೆ ಬಿದ್ದಿದೆ. ಬೋನಿಗೆ ಬಿದ್ದ ಹುಲಿ ನೋಡಲು ಗ್ರಾಮಸ್ಥರು ಕಿಕ್ಕಿರಿದು ಸೇರಿದ್ದಾರೆ. ಕೇಜ್ ನಲ್ಲಿ ಲಾಕ್ ಆಗುತ್ತಿದ್ದಂತೆ ಹುಲಿ ವಿಚಲಿತವಾಗಿ ಗರ್ಜಿಸಿದೆ. ಕಳೆದ ಎರಡು ಮೂರು ತಿಂಗಳಿಂದ ಹುಲಿ ಆಗಾಗ ಗ್ರಾಮದ ಸುತ್ತಮುತ್ತ ಕಾಣಿಸಿಕೊಳ್ಳುತ್ತಿತ್ತು ಇದೀಗ ಅರಣ್ಯ ಸಿಬ್ಬಂದಿಗಳು ಹುಲಿ ಸೆರೆಹಿಡಿದಿದ್ದು ದೆಪಾಪುರ ಗ್ರಾಮಸ್ಥರು ನೆಟ್ಟು ಉಸಿರು ಬಿಟ್ಟಿದ್ದಾರೆ. ಸ್ಥಳಕ್ಕೆ ಬಂಡಿಪುರ ಹುಲಿ ಸಂರಕ್ಷಿತ ಅರಣ್ಯದ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ














