Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಇತ್ತೀಚಿಗೆ ಕೆಪಿಎಸ್ಸಿ ಅಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ವರದಿಯಾಗಿತ್ತು. ಈ ವಿಚಾರವಾಗಿ ವಿಧಾನಸಭೆಯಲ್ಲಿ ಕೆಪಿಎಸ್ಸಿ ಅಕ್ರಮ ಸಂಬಂಧ ರಾಜ್ಯ ಸರ್ಕಾರ ಉತ್ತರಿಸಿದ್ದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾತನಾಡಿದ್ದು ಕೆಪಿಎಸ್ಸಿ ಅಲ್ಲಿ ಮಾತ್ರ ಇದು ಸಮಸ್ಯೆಯಾಗುತ್ತಿದೆ ಆದರೆ ಕೆಇಎ ನಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಉತ್ತರಿಸಿದರು. ಕೆಇನಲ್ಲಿ 2000 ಪ್ರಶ್ನೆ ಸಿದ್ಧಪಡಿಸಿ ಕನ್ನಡಕ್ಕೆ ಭಾಷಾಂತರ ಮಾಡಲಾಗಿದೆ. ಪ್ರಶ್ನಾವಳಿ ಮಾಡುವಾಗ 20 ರಿಂದ 30 ಪ್ರಶ್ನೆ ಆಯ್ಕೆ ಮಾಡುತ್ತಾರೆ. ಆಗಲೇ ಭಾಷಾಂತರ ಮಾಡಿರುವುದರಿಂದ ಲೋಪ ದೋಷ ಕಡಿಮೆ ಕಂಡು ಬಂದಿದೆ. ಇದನ್ನೇ ಕೆಪಿಎಸ್ಸಿಯಲ್ಲಿ ಅನುಷ್ಠಾನ ಮಾಡಲು ಚರ್ಚೆಯಾಗುತ್ತಿದೆ. ಪ್ರತಿವರ್ಷ ಇಂತಹ ತಿಂಗಳು ಇಂತಹ ದಿನ ಪರೀಕ್ಷೆ ನಡೆಸಬೇಕು ನಿಗದಿತ ದಿನದಲ್ಲಿ ಕಡ್ಡಾಯವಾಗಿ ಕೆಪಿಎಸ್ಸಿ ಪರೀಕ್ಷೆ ನಡೆಯಬೇಕು. ಸಿ ಗ್ರೂಪ್ ಹಾಗೂ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗೆ ಯುಪಿಎಸ್ಸಿ ಮಾದರಿ ನಿರ್ದಿಷ್ಟ ದಿನದಲ್ಲಿ ಪರೀಕ್ಷೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಬರುವ ಐದು ವರ್ಷಕ್ಕೆ ಎಷ್ಟು ಹುದ್ದೆಗಳು ನೇಮಕಾತಿ ಮಾಡಲಾಗುತ್ತದೆ.…
ಬೆಳಗಾವಿ : ಮದುವೆಯಾಗಲು ನಿರಾಕರಿಸಿದಕ್ಕೆ ಯುವತಿಯ ತಲೆ ಒಡೆದ ಘಟನೆ ಜೋಡ ಕುರುಳಿಯಲ್ಲಿ ನಡೆದಿದೆ. ವಿದ್ಯಾಶ್ರೀ ಕಿಲಾರಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರುಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಬೀರಪ್ಪ ರಾಮಪ್ಪನಿಂದ ಮಾರಣಾಂತಿಕ ಹಲ್ಲೆ ನಡೆದಿದ್ದು ಕಣ್ಣಿಗೆ ಕಾರದ ಪುಡಿ ಅರ್ಜಿ ಕಬ್ಬಿಣದ ರಾಡ್ ನಿಂದ ಯುವತಿಯ ಮೇಲೆ ಹಲ್ಲೆ ಮಾಡಿದ್ದಾನೆ. ಹತ್ತು ಜನರನ್ನು ಕರೆತಂದು ವಿದ್ಯಾಶ್ರೀ ತಂದೆ ತಾಯಿ ಮೇಲೆ ಕೂಡ ಹಲ್ಲೆ ಮಾಡಿದ್ದಾನೆ. ಎರಡು ವರ್ಷದಿಂದ ವಿದ್ಯಾಶ್ರೀ ಮದುವೆ ಮಾಡಿ ಕೊಡುವಂತೆ ಬೀರಪ್ಪ ಕಾಟ ಕೊಡುತ್ತಿದ್ದ. ಬೀರಪ್ಪನಿಗೆ ಮಗಳನ್ನು ಕೊಡಲು ಮಹದೇವ ಕಿಲಾರಿ ನಿರಾಕರಿಸಿದ್ದ. ಹಾಗಾಗಿ ನಿನ್ನೆ ಇದೇ ಕೋಪದಲ್ಲಿ ರಾತ್ರಿ ಏಕಾಏಕಿ ಮನೆಗೆ ನುಗ್ಗಿ ಕಾರದ ಪುಡಿ ಎರಚಿ ಹಲ್ಲೆ ಮಾಡಿದ್ದಾನೆ. ವಿದ್ಯಾಶ್ರೀ ತಂದೆ ತಾಯಿ ಮೇಲೆಯು ಬೀರಪ್ಪ ಹಲ್ಲೆ ಮಾಡಿದ್ದಾನೆ. ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾದವರ ರಕ್ಷಣೆಗಾಗಿ ಹೊಸ ವಿಧೇಯಕ ಮಂಡನೆ ಆಯಿತು. ವಿಧಾನಸಭೆಯಲ್ಲಿ ಇವ ನಮ್ಮವ ಇವ ನಮ್ಮವ ವಿಧೇಯಕ ಮಂಡನೆ ಆಗಿದೆ. ಅಂತರ್ಜಾತಿ ವಿವಾಹದ ಜೋಡಿಗಳ ಹತ್ಯೆ ಮಾಡಿದರೆ ಆರೋಪಿಗಳಿಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತೆ. ಅಂತರ್ಜಾತಿ ವಿವಾಹವಾದರೆ ಸಾಮಾಜಿಕ ಆರ್ಥಿಕ ಬಹಿಷ್ಕಾರ ಹಾಕುವಂತಿಲ್ಲ. ಸಂಬಂಧಿಸಿದ ಜೋಡಿ ವಾಸ ಸ್ಥಳದಿಂದ ಹೊರ ಹೋಗುವಂತೆ ಒತ್ತಾಯಿಸುವುದು ಅವರ ಕುಟುಂಬವನ್ನು ಹೊರ ಹಾಕುವುದು ಕಾನೂನುಬಾಹಿರ. ಜಾತಿ ಇಲ್ಲವೇ ಸಮುದಾಯದಲ್ಲಿ ಬಲವಂತವಾಗಿ ಸಂಪ್ರದಾಯ ಇರುವಂತಿಲ್ಲ. ಅಂತರ್ಜಾತಿ ವಿವಾಹಿತರಿಗೆ ಪೂಜಾ ಸ್ಥಳಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ. ಅಂತರ್ಜಾತಿ ವಿವಾಹಿತರಿಂದ ಕುಟುಂಬದ ಆಸ್ತಿ ದಂಡ ಹಾಕುವಂತಿಲ್ಲ. ಕೆಲಸಕ್ಕೆ ಅಡ್ಡಿ ಕೆಲಸ ಕೊಡಲು ಹಿಂದೇಟು ಹಾಕುವುದು ಅಪರಾಧವಾಗಿದೆ. ಅಂತರ್ಜಾತಿ ವಿವಾಹವಾಗಲು ಅವರ ಕುಟುಂಬಸ್ಥರು ವಿರೋಧಿಸುವಂತಿಲ್ಲ. ಇಬ್ಬರ ವಯಸ್ಕರ ವಿವಾಹಕ್ಕೆ ಪೋಷಕರ ಒಪ್ಪಿಗೆ ಅಗತ್ಯವಿಲ್ಲ. ವಿವಾಹಿತ ಜೋಡಿಗೆ ಹಿಂಸೆ ಮಾನಸಿಕ ನಿಂದನೆ ಕಾನೂನುಬಾಹಿರ. ದಂಪತಿಯನ್ನು ಬಲವಂತವಾಗಿ ದೂರ ಇಡುವ ಪ್ರಯತ್ನ ಮಾಡುವುದು ಸರಿಯಲ್ಲ.…
ಶಿವಮೊಗ್ಗ : ಶಿವಮೊಗ್ಗದಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಏಕಾಏಕಿ ಹೆಜ್ಜೆನು ದಾಳಿ ಮಾಡಿದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ ನಾಲ್ವರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಹೊಸನಗರ ತಾಲೂಕು ರಿಪ್ಪನಪೇಟೆಯಲ್ಲಿ ನಡೆದಿದೆ. ರಿಪ್ಪನ್ಪೇಟೆ ಗ್ರಾಮದ ಮುಖ್ಯರಸ್ತೆಯಲ್ಲಿನ ಎಸ್ಬಿಐ ಬ್ಯಾಂಕ್ ಮುಂಭಾಗ ಏಕಾಏಕಿ ಜೇನು ನೊಣಗಳು ದಾಳಿ ನಡೆಸಿವೆ. ಈ ವೇಳೆ ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಶಾಲಾ ಮಕ್ಕಳ ಮೇಲೆ ಹಾಗೂ ಬ್ಯಾಂಕ್ ನೌಕರ ತೌಸಿಫ್ ಅವರ ಮೇಲೆ ಜೇನು ನೊಣಗಳು ದಾಳಿ ನಡೆಸಿವೆ. ಇದರಲ್ಲಿ ತೌಸಿಫ್ ಅವರ ಮುಖಕ್ಕೆ 20ಕ್ಕೂ ಹೆಚ್ಚು ಜೇನು ನೊಣಗಳು ದಾಳಿ ಮಾಡುತ್ತಿದ್ದಂತಯೇ ಶಾಲಾ ವಿದ್ಯಾರ್ಥಿಗಳು ಓಡಿ ಹೋಗಿ ಬಚಾವ್ ಆಗಿದ್ದಾರೆ. ಆದರೂ ವಿದ್ಯಾರ್ಥಿಗಳಿಗೆ ಸ್ವಲ್ಪ ಪ್ರಮಾಣದಲ್ಲಿ ಜೇನು ಕಚ್ಚಿವೆ. ತಕ್ಷಣ ಎಲ್ಲರನ್ನೂ ರಿಪ್ಪನ್ಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದೆ.
• 1.6 ಕೋಟಿ ಅರ್ಜಿಗಳ ಪೈಕಿ 98 ಲಕ್ಷ ಅರ್ಜಿಗಳಿಗೆ ಸಕಾಲದಲ್ಲಿ ಸೇವೆ • ಮನೆಯಲ್ಲೇ ಕುಳಿತು ಜಾತಿ-ಆದಾಯ ಪ್ರಮಾಣ ಪತ್ರ ಪಡೆಯಲು ಸವಕಾಶ • ಇನ್ಮುಂದೆ ಸ್ವಯಂ ಚಾಲಿತವಾಗಿ ಜಾತಿ-ಆದಾಯ ಪ್ರಮಾಣ ಪತ್ರ ಬೆಂಗಳೂರು ಮಾರ್ಚ್18: ಸಕಾಲ ಯೋಜನೆ ಅಡಿಯಲ್ಲಿ ಪ್ರಸ್ತುತ ವರ್ಷ ಶೇ.99.35 ರಷ್ಟು ಅರ್ಜಿಗಳಿಗೆ ನಿಗದಿತ ಕಾಲ ಮಿತಿಯೊಳಗೆ ಸೇವೆ ಒದಗಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಬುಧವಾರ ವಿಧಾನ ಪರಿಷತ್ನಲ್ಲಿ ಕೆ.ಅಬ್ದುಲ್ ಜಬ್ಬರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, “ನಾಡ ಕಚೇರಿ ಹಾಗೂ ತಹಶೀಲ್ದಾರ್ ಕಚೇರಿಗಳಲ್ಲಿ ಜನರಿಗೆ ಎಲ್ಲಾ ಸೇವೆಗಳೂ ತ್ವರಿತವಾಗಿ ಲಭ್ಯವಾಗಬೇಕು ಎಂಬ ನಿಟ್ಟಿನಲ್ಲಿ ಕಳೆದ ಎರಡೂವರೆ ವರ್ಷದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದೆ. ಪರಿಣಾಮ ಜಾತಿ-ಆದಾಯ ಪ್ರಮಾಣ ಪತ್ರ ಸೇರಿದಂತೆ ಸಕಾಲ ಯೋಜನೆಯ ಅಡಿಯಲ್ಲಿ ಲಭ್ಯವಾಗುವ ಎಲ್ಲಾ ಸೇವೆಗಳನ್ನೂ ನಿಗದಿತ ಅವಧಿಯಲ್ಲಿ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು. “ಕಳೆದ ವರ್ಷ ವಿವಿಧ ಸೇವೆಗಳಿಗಾಗಿ ನಾಡ ಕಚೇರಿಗೆ ಸುಮಾರು…
ಕೋಲಾರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು,ಕೋಲಾರದಲ್ಲಿ ಪೊಲೀಸ್ ಮುಖ್ಯಪೇದೆ ಒಬ್ಬರು ಹಾರ್ಟ್ ಅಟ್ಯಾಕ್ ಜಿಂದಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೋಲಾರ ತಾಲೂಕಿನ ಸೀಸಂದ್ರ ಗ್ರಾಮದ ವೆಂಕಟರಮಣಪ್ಪ (50) ಮೃತ ದುರ್ದೈವಿ. ವೆಂಕಟರಮಣಪ್ಪ ಕೆಜಿಎಫ್ ಜಿಲ್ಲಾ ಪೊಲೀಸ್ನ ಊರಿಗಾಂ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಕಳೆದ ವರ್ಷ ಹಾಸನ ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ 45ಕ್ಕೂ ಹೆಚ್ಚು ದಿನ ಹೃದಯಾಘಾತಕ್ಕೆ ಬಲಿಯಾಗಿದ್ದು ಬೆಚ್ಚಿಬಿಳಿಸಿತ್ತು.
ಬೆಂಗಳೂರು : ರಾಜ್ಯದಲ್ಲಿ ಗೃಹಬಳಕೆ ಸಿಲಿಂಡರ್ಗಳ ಸಮಸ್ಯೆ ಇಲ್ಲ ಎಂದು ವಿಧಾನ ಪರಿಷತ್ ನಲ್ಲಿ ಆಹಾರ ಸಚಿವ ಮುನಿಯಪ್ಪ ಸ್ಪಷ್ಟಪಡಿಸಿದರು ಗೃಹಬಳಕೆ ಸಿಲಿಂಡರ್ ಎಷ್ಟು ಪೂರೈಕೆ ಆಗಬೇಕು ಅಷ್ಟು ಪೂರೈಕೆ ಆಗುತ್ತಿದೆ ಮೂರು ಲಕ್ಷಕ್ಕೂ ಹೆಚ್ಚು ಸಿಲಿಂಡರ್ ಬಳಕೆ ಆಗುತ್ತಿದೆ ಅದನ್ನು ಈಗಾಗಲೇ ಕೊಡುತ್ತಿದ್ದೇವೆ. ಆದರೆ ಕಮರ್ಷಿಯಲ್ ಸಿಲಿಂಡರ್ ಸಮಸ್ಯೆ ಆಗಿದೆ 20ರಷ್ಟು ಮಾತ್ರ ವಾಣಿಜ್ಯ ಸಿಲಿಂಡರ್ ಕೊಡಲು ಕೇಂದ್ರ ಹೇಳಿದೆ 9000 ಕಮರ್ಷಿಯಲ್ ಸಿಲಿಂಡರ್ ಕೊಡುತ್ತಿದ್ದೇವೆ ಆಸ್ಪತ್ರೆ ಹಾಸ್ಟೆಲ್ ಇಂದಿರಾ ಕ್ಯಾಂಟೀನ್ ಗಳಿಗೂ ಸಿಲಿಂಡರ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವ ಕೆ ಎಸ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದರು. ರಾಜ್ಯದಲ್ಲಿ ಹಲವಡೆ ವಾಣಿಜ್ಯ ಸಿಲಿಂಡರ್ಗಳ ಅಭಾವ ವಿಚಾರಕ್ಕೆ ಸಂಬಂಧಪಟ್ಟಂತೆ ರೆಸ್ಟೋರೆಂಟ್ ಹೋಟೆಲಗಳಿಗೆ 1,000 ಗ್ಯಾಸ್ ಮಾತ್ರ ವಿತರಣೆ ಮಾಡಲಾಗುತ್ತದೆ. ಆದರೆ ಯಾರಿಗೆ ಕೊಡಬೇಕು ಅಂತ ನಮಗೆ ಗೊತ್ತಾಗುತ್ತಿಲ್ಲ ಹೀಗಾಗಿ ಒಂದು ವಾರ ಸಹಿಸಿಕೊಳ್ಳಬೇಕು ಹೋಟೆಲ್ ಉದ್ಯಮಿಗಳು ಸಹಕಾರ ಕೊಡಬೇಕು ಎಂದು ವಿಧಾನ ಪರಿಷತ್ತಿನಲ್ಲಿ ಆಹಾರ ಸಚಿವ ಕೆ…
ಹಾಸನ : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ಒಂದು ಪ್ರಕರಣದಲ್ಲಿ ಪ್ರೀತಮ್ ಗೌಡ ಹಾಗೂ ಶ್ರೇಯಸ್ ಪಟೇಲ್ ಅತ್ಯಾಪ್ತರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಶಾಸಕ ಪ್ರೀತಮ್ ಗೌಡ ಹಾಗು ಸಂಸದ ಶ್ರೇಯಸ್ ಪಟೇಲ್ ಆಪ್ತರ ಹೆಸರು ಈ ಪ್ರಕರಣದಲ್ಲಿ ಉಲ್ಲೇಖವಾಗಿತ್ತು. ಆದರೆ SIT ಅಧಿಕಾರಿಗಳು ಈ ಮೂವರ ಹೆಸರನ್ನು ಕೈಬಿತ್ತದೆ. ಹಾಗಾಗಿ ಮೂವರಿಗೂ ಇದೀಗ ಬಿಗ್ ರಿಲೀಫ್ ಸಿಕ್ಕಿದ್ದು, ಆರೋಪ ಮುಕ್ತರಾಗಿದ್ದಾರೆ. ಪ್ರೀತಂ ಗೌಡ ಆಪ್ತರಾಗಿರುವ ಶರತ್ ಮತ್ತು ಕಿರಣ್ ಹಾಗೂ ಶ್ರೇಯಸ್ ಪಟೇಲ್ ಆಪ್ತರಾಗಿರುವ ಪುಟ್ಟರಾಜು ಮೂವರಿಗೂ ಬಿಗ್ ರಿಲೀಫ್ ಸಿಕ್ಕಿದ್ದು, ಇದಕ್ಕೆ ಕಾರಣ ಇವರ ಮೇಲಿರುವ ಆರೋಪ ಸಾಬೀತು ಆಗಿಲ್ಲ. ಹಾಗಾಗಿ ಎಸ್ಐಟಿ ಇವರ ಹೆಸರುಗಳನ್ನು ಕೈ ಬಿಟ್ಟಿದೆ. ಫೆಬ್ರವರಿ 19ರಂದುಪ್ರಕರಣಕ್ಕೆ ಸಬಂಧಿಸಿದಂತೆ 13, 712 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿತ್ತು. ಇದೀಗ ಶರತ್, ಕಿರಣ್ ಮತ್ತು ಪುಟ್ಟರಾಜು ಅವರ ಹೆಸರನ್ನು ಅಧಿಕಾರಿಗಳು ಮೂವರ ಹೆಸರನ್ನು ಕೈಬಿಟ್ಟಿದೆ.…
BREAKING : ರಾಜ್ಯದಲ್ಲಿ ಮರ್ಯಾದಾ ಹತ್ಯೆ ತಡೆಗೆ ಕಠಿಣ ಕಾನೂನು : ವಿಧಾನಸಭೆಯಲ್ಲಿ ‘ಇವ ನಮ್ಮವ ಇವ ನಮ್ಮವ’ ಬಿಲ್ ಮಂಡನೆ
ಬೆಂಗಳೂರು : ಕರ್ನಾಟಕದಲ್ಲಿ ಮರ್ಯಾದಾ ಹತ್ಯೆಗಳನ್ನು (Honor Killings) ತಡೆಗಟ್ಟಲು ರಾಜ್ಯ ಸರ್ಕಾರವು “ಇವ ನಮ್ಮವ, ಇವ ನಮ್ಮವ” ಎಂಬ ಹೊಸ ಕಠಿಣ ಮಸೂದೆಗೆ ಒಪ್ಪಿಗೆ ನೀಡಿದೆ. ಈ ಮೂಲಕ ಜಾತಿ, ಅಂತರ್ಜಾತಿ ವಿವಾಹದ ಹೆಸರಿನಲ್ಲಿ ನಡೆಯುವ ಕೊಲೆಗಳಿಗೆ ಕಡಿವಾಣ ಹಾಕಲು ಮತ್ತು ಸಂತ್ರಸ್ತರಿಗೆ ರಕ್ಷಣೆ ನೀಡಲು ಸರ್ಕಾರ ಕಾನೂನು ರೂಪಿಸುತ್ತಿದೆ. ಹೌದು ಇಂದು ವಿಧಾನಸಭಾದಲ್ಲಿ ಇವನ ನಮ್ಮವ ಇವ ನಮ್ಮವ ವಿಧೇಯಕ ಮಂಡನೆ ಮಾಡಲಾಯಿತು. ಅಂತರ ಜಾತಿ ವಿವಾಹಕ್ಕೆ ಮಾನ್ಯತೆ ನೀಡುವ ವಿಧೇಯಕ ಇದಾಗಿದ್ದು ಹಲ್ಲೆ ದೌರ್ಜನ್ಯ ತಡೆಗಟ್ಟುವ ವಿಧೇಯಕವನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಮಂಡಿಸಿದರು. ಈ ಮಸೂದೆ ಮೂಲಕ ವ್ಯಕ್ತಿಗಳಿಗೆ ತಮ್ಮ ಇಚ್ಛೆಯಂತೆ ವಿವಾಹವಾಗುವ ಸ್ವಾತಂತ್ರ್ಯವನ್ನು ಖಾತ್ರಿ ಪಡಿಸುವುದು, ಜಾತಿ ಆಧಾರಿತ ಅಪರಾಧಗಳನ್ನು ತಡೆಯುವುದು, ಮಾನವ ಹಕ್ಕುಗಳ ಉಲ್ಲಂಘನೆಯನ್ನು ತಪ್ಪಿಸುವುದು ಮತ್ತು ಅಂತರ್ಜಾತಿ ವಿವಾಹಗಳಿಗೆ ಗೌರವ ನೀಡುವ ವ್ಯವಸ್ಥೆ ರೂಪಿಸುವ ಉದ್ದೇಶವನ್ನು ಹೊಂದಲಾಗಿದೆ. ಜೊತೆಗೆ ಅಂತರ್ಜಾತಿ ವಿವಾಹಗಳನ್ನು ನೆರವೇರಿಸಲು ‘ಇವ ನಮ್ಮವ ಇವ ನಮ್ಮವ ವೇದಿಕೆ’ ಸ್ಥಾಪಿಸಲು…
ಕಲಬುರ್ಗಿ : ಬಾಲಕಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ ಮುತ್ಯ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ತಡೆ ನೀಡಿ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ಹೊರಡಿಸಿದೆ. ಹೌದು ತನಿಖೆಗೆ ಕಲಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ಇದೀಗ ತಡೆ ನೀಡಿದೆ. ವಿಚಾರಣೆಗೆ ತಡೆ ನೀಡುವಂತೆ ಮಲ್ಲಿಕಾರ್ಜುನ ಮುತ್ಯಾ ಅರ್ಜಿ ಸಲ್ಲಿಕೆ ಮಾಡಿದರು. ಅರ್ಜಿ ವಿಚಾರಣೆ ನಡೆಸಿ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಫೆಬ್ರವರಿ 25 ರಂದು ಗೋಗಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪ್ರಕರಣದ ಕುರಿತು ಶಹಾಪುರ ಸಿಪಿಐ ಶರಣಗೌಡ ನ್ಯಾಮಣ್ಣನವರ್ ತನಿಖೆ ನಡೆಸುತ್ತಿದ್ದಾರೆ.













