Subscribe to Updates
Get the latest creative news from FooBar about art, design and business.
Author: kannadanewsnow05
ಬೆಳಗಾವಿ : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಅಲ್ಲದೆ ಕೆಲವು ಕಡೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು ಸಂಪೂರ್ಣವಾಗಿ ಹಿಮಮಯವಾಗಿವೇ. ಬೆಳಗಾವಿಯಲ್ಲಿ ಬಿರುಗಾಳಿ ಹಾಗೂ ಭಾರಿ ಮಳೆಯಿಂದ ಗೋಡಿ ಕುಸಿದು ಮಹಿಳೆ ಒಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಪತ್ನಿ ಮೃತಪಟ್ಟು, ಪತಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ವಂಟಮೂರಿ ಗ್ರಾಮದ ಫರ್ವಿನ್ ಶರೀಫ್ ಬೇಪಾರಿ(34) ಮೃತರು. ಶರೀಫ್ ಬೇಪಾರಿ ಅವಘಡದಲ್ಲಿ ಬದುಕುಳಿದ ಪತಿ ಎಂದು ತಿಳಿದುಬಂದಿದೆ. ಕೋಳಿಗಳನ್ನು ಮಾರಾಟ ಮಾಡಲು ಬೈಕ್ನಲ್ಲಿ ದಂಪತಿ ಹೊರಟಿದ್ದರು. ಈ ವೇಳೆ ದಾರಿಯಲ್ಲಿ ಮಳೆ ಹೆಚ್ಚಾಗಿದ್ದು ಹೊಸೂರ ಗ್ರಾಮದ ಬಳಿ ಪಾಳು ಬಿದ್ದ ಮನೆಯ ಕೆಳಗೆ ನೆರಳಲ್ಲಿ ನಿಂತಿದ್ದರು. ಇದೇ ವೇಳೆ ಏಕಾಏಕಿ ಗೋಡೆ ಕುಸಿದು ಬಿದ್ದಿದೆ. ತೀವ್ರವಾಗಿ ಗಾಯಗೊಂಡ ಫರ್ವಿನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಾಯಾಳು ಶರೀಫ್ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೌತಿಕವಾಗಿ ಬೇಸಿಗೆಯಲ್ಲಿ ಅನೇಕ ವೈರಸ್ ಮತ್ತು ಬ್ಯಾಕ್ಟೀರಿಯಾಗಳು ಬಿಡುಗಡೆಯಾಗುತ್ತದೆ. ಆ ಸೂಕ್ಷ್ಮಾಣು ಜೀವಿಗಳು ಶರೀರ ಮತ್ತು ಮನೆಗೆ ಪ್ರವೇಶವಾಗದಿರಲಿ ಎಂಬ ಉದ್ದೇಶದಿಂದ ಮನೆಯ ಮುಂದೆ ಮಾವು ಮತ್ತು ಬೇವನ್ನು ಇರಿಸುತ್ತಾರೆ. ಮತ್ತು ಸೇವಿಸುವುದು ಆಗಿದೆ. ಅದೇ ರೀತಿ ಆಂತರಿಕವಾಗಿ ಒಂದು ಕಾರ್ಯವನ್ನು ಮಾಡುವಾಗ ಅಲ್ಲಿ ಕಹಿ ಮತ್ತು ಸಿಹಿಯು ಇರುತ್ತದೆ. ಕೆಲಸಮಾಡುವುದು ಕಹಿಯಾದರೆ ಅದರಿಂದ ಬರುವ ಫಲವು ಸಿಹಿಯಾಗುತ್ತದೆ. ಎಲ್ಲರ ಜೀವನದಲ್ಲಿ ಸಿಹಿಯು ಉಂಟಾಗಲಿ ಕರ್ಮದ ಫಲವು ಸಿಗಲಿ ಎಂಬುದು ಆ ಪರಮಾತ್ಮನ ಶಕ್ತಿಯು ಎಲ್ಲರಲ್ಲೂ ತುಂಬಿ ಹರಿಸುವಂತಾಗಲಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಯುಗಾದಿ ಹಬ್ಬದ ವಿಶೇಷತೆ:- ಯುಗಾದಿಯ ಅರ್ಥ: – ಯರಕಃ ಉತ್ಪನ್ನಃ ಗಮನಂ ಗಮ್ಯಂ ಧರ್ಶನಂ ಇಜ್ಞೋಪಃ ಆತ್ಮನನ್ನು ದರ್ಶಿಸಿ ಯರಕವನ್ನು…
ಮೈಸೂರು : ಜೆಡಿಎಸ್ ವರಿಷ್ಠ HD ದೇವೇಗೌಡ ಹಾಗು ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ಜಿ.ಟಿ.ದೇವೇಗೌಡರು, ಮುಂದಿನ ಚುನಾವಣೆಯಲ್ಲಿ ಒಂದು ವೇಳೆ ಟಿಕೆಟ್ ಸಿಗದಿದ್ದರೆ, ಮತದಾರರ ತೀರ್ಮಾನಕ್ಕೆ ಬದ್ಧ ಎಂದಿರುವ ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಹೌದು ಮೈಸೂರಲ್ಲಿ ಮಾತನಾಡಿದ ಜಿ.ಟಿ.ದೇವೇಗೌಡರು, ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ ಇರುತ್ತೇನೆ. ಟಿಕೆಟ್ ಕೊಡದಿದ್ರೆ ಮತದಾರರು ನೀವು ಏನ್ ಹೇಳ್ತಿರಾ ಅದಕ್ಕೆ ನಾನು ಬದ್ಧವಾಗಿರುತ್ತೇನೆ. ಅರ್ಜಿ ಹಾಕು ಅಂದ್ರೆ ಹಾಕುತ್ತೇನೆ. ನಿಮ್ಮ ಪ್ರೀತಿ ಆಶೀರ್ವಾದವೇ ನನಗೆ ಧೈವ. ನನ್ನ ಬಳಿ ಏನು ಸಹಾಯ ಮಾಡಿಸಿಕೊಳ್ಳದ ಜನರು ನನ್ನನ್ನು ಗೆಲ್ಲಿಸಿದ್ದಾರೆ. ನಾನು ಬೆಳೆಸಿದವರು, ದುಡ್ಡು ಮಾಡಿದವರು ನನ್ನ ವಿರುದ್ಧವೇ ನಿಂತಿದ್ದಾರೆ ಎಂದು ಗುಡುಗಿದರು. ಈ ಹಿಂದೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಜಿ.ಟಿ.ದೇವೇಗೌಡರ ಬದಲಾಗಿ ಅವರ ಪುತ್ರ ಹರೀಶ್ ಗೌಡ ಅವರಿಗೆ ಟಿಕೆಟ್ ನೀಡುವ ಕುರಿತು ಚಿಂತನೆಗಳು ನಡೆದಿವೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಎಲ್ಲಾ ಬೆಳವಣಿಗೆ ನಡುವೆ ಶಾಸಕ ಜಿ.ಟಿ.ದೇವೇಗೌಡರು ಹೊಸ ರಾಜಕೀಯ ದಾಳವನ್ನು…
ಬೆಂಗಳೂರು : ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ವಿರುದ್ಧ 13, 712 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ಈ ಒಂದು ಚಾರ್ಜ್ ಶೀಟ್ ನಲ್ಲಿ ಸ್ಪೋಟಕ ಅಂಶ ಬಯಲಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಮತ್ತು ಕಾಂಗ್ರೇಸ್ ಕಾರ್ಯಕರ್ತರು ಇದ್ದಾರೆ ಎನ್ನುವುದು ಚಾರ್ಜ್ ಶೀಟ್ ನಲ್ಲಿ ಬಯಲಾಗಿದೆ. ಹೌದು ಮಾಜಿ ಸಂಸದ ಪ್ರಜ್ವಲ್ ರೇವಣ್ಣಅಶ್ಲೀಲ ವಿಡಿಯೋ ವೈರಲ್ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್ಐಟಿ 13,712 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪ ಹೊರಿಸಲಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರೂ ಇದರಲ್ಲಿದ್ದಾರೆ ಎಂದು ವರದಿಯಾಗಿದೆ. ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿದ್ದ ಪೆನ್ಡ್ರೈವ್ ಹಂಚಿಕೆ ವಿಚಾರವಾಗಿ ವಿಶೇಷ ತನಿಖಾ ತಂಡ (SIT) ಹಾಸನದ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ವಿವರವಾದ ಚಾರ್ಜ್ಶೀಟ್ ಸಲ್ಲಿಸಿದೆ. ಒಟ್ಟು 13,712 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು,…
ಬೆಂಗಳೂರು : ನೀವು ಎಲ್ಪಿಜಿ (LPG) ಸಿಲಿಂಡರ್ ಬಳಸುತ್ತಿದ್ದೀರಾ? ಹಾಗಿದ್ದಲ್ಲಿ ಇಕೆವೈಸಿ ಪ್ರಕ್ರಿಯೆಯ ಬಗ್ಗೆ ಹರಿದಾಡುತ್ತಿರುವ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ. ಕೇಂದ್ರ ಸರ್ಕಾರದ ಸೂಚನೆಯಂತೆ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಮಾಡಿಸುವುದು ಈಗ ಅನಿವಾರ್ಯವಾಗಿದೆ. ಹೌದು ಎಲ್ಪಿಜಿ ಗ್ರಾಹಕರು ಇಕೆವೈಸಿ ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಲ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್ಪಿಜಿ ಗ್ರಾಹಕರಿಗೂ ಕಡ್ಡಾಯವೇನಲ್ಲ. ಇಕೆವೈಸಿ ಮಾಡಿಸಿಲ್ಲದ ಎಲ್ಪಿಜಿ ಗ್ರಾಹಕರು ಮಾತ್ರ ಈ ಗ್ಯಾಸ್ ಪಡೆಯಲು ಇಕೆವೈಸಿ ಮಾಡುವುದು ಕಡ್ಡಾಯ ಎಂದು ಸಚಿವಾಲಯವು ಹೇಳಿದೆ. * ಉಜ್ವಲ ಯೋಜನೆ ಫಲಾನುಭವಿಗಳು: ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ಪಡೆದವರು ತಪ್ಪದೇ ಇಕೆವೈಸಿ ಮಾಡಿಸಬೇಕು. * ಸಬ್ಸಿಡಿ ಪಡೆಯುವ ಗ್ರಾಹಕರು: ಗ್ಯಾಸ್ ಸಬ್ಸಿಡಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ಇಕೆವೈಸಿ ಕಡ್ಡಾಯ. * ಬಹಳ ದಿನಗಳಿಂದ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬಾಗಲೂರಿನ ಹೊಸೂರು ಬಂಡೆ ಬಳಿ ಅಗ್ನಿ ಅವಘಡ ಸಂಭವಿಸಿದೆ. ಶ್ರೀ ಕೃಷ್ಣ ಗೋಶಾಲೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಮೇವು ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಸುಗಳಿಗೆ ಮೇವು ಸಂಗ್ರಹಿಸಿದ ಗೋದಾಮಿನಲ್ಲಿ ಈ ಒಂದು ಅಗ್ನಿ ದುರಂತ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಗಳು ಬಿಡಿ ಸೇದಿ ಎಸೆದಿದ್ದ ತುಂಡಿನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಮುಂಬೈ : ಇತ್ತೀಚಿಗೆ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಯರ ಹಾಗೂ ಯುವತಿಯರ ಫೋಟೋ ಸೆರೆ ಹಿಡಿದ ಪ್ರಕರಣ ನಡೆದಿತ್ತು. ಇದೀಗ ಮುಂಬೈನಲ್ಲಿ ಬೆಚ್ಚಿಬಿಳಿಸುವ ಘಟನೆ ವರದಿಯಾಗಿದ್ದು ಸರ್ಕಾರಿ ಕೆಲಸದಲ್ಲಿದ್ದ ತನ್ನ ಪತ್ನಿಯ ಖಾಸಗಿ ಫೋಟೋಗಳನ್ನು ಸೆರೆ ಹಿಡಿದು ಪ್ರತಿಯೊಬ್ಬ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಹೌದು ಪತ್ನಿಯ ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದಿದ್ದಾನೆ. ಬಾತ್ರೂಂನಲ್ಲಿ ಮೊಬೈಲ್ ಇಟ್ಟು ಪತ್ನಿಯ ಸ್ನಾನದ ವಿಡಿಯೋಗಳನ್ನು ಸೆರೆ ಹಿಡಿದಿದ್ದಾನೆ. ಬಳಿಕ ಸರ್ಕಾರಿ ಉದ್ಯೋಗದಲ್ಲಿರುವ ಪತ್ನಿಗೆ 1.5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಬೇಡಿಕೆ ಈಡೇರಿಸದಿದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾನೆ. ಕೆರಳಿದ ಪತ್ನಿ ದೂರು ನೀಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 1.5 ಲಕ್ಷ ರೂಪಾಯಿ ಹಣದ ಬೇಡಿಕೆ ಈಡೇರಿಸಲು ನಿರಾಕರಿಸಿದಾಗ ಪತ್ನಿಯ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಬೆದರಿಸಿದ್ದಾನೆ. ಗಂಡ ಹಾಗೂ ಆತನ ಪೋಷಕರ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಲು ಪತ್ನಿ ಮುಂದಾಗಿದ್ದಾಳೆ. ಆದರೆ ಪ್ರಯೋಜನವಾಗಿಲ್ಲ. ಹಣ ಕೊಡದಿದ್ದರೆ…
ಬೆಳಗಾವಿ : ಇವನೆಂತ ಕಿಲಾಡಿ ಇದಾನೆ ಎಂದರೆ ಮದುವೆಯಾಗುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಈ ವೇಳೆ ತನ್ನ ಹೆಸರಿನಲ್ಲಿದ್ದ ಆಸ್ತಿ ಬರೆದು ಕೊಡಲು ಮಹಿಳೆ ಒಪ್ಪದೇ ಇದ್ದಾಗ, ಆಕೆಯನ್ನು ಗದ್ದೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ, ಆರೋಪಿಯು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ತೆರಳಿದ್ದಾನೆ. ಆದರೆ ಪೊಲೀಸರು ಸಿನೆಮಾ ಶೈಲಿಯಲ್ಲಿ ಆತನನ್ನು ಅಲ್ಲಿಯೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಅಥಣಿ ಸ್ಥಳೀಯ ನಿವಾಸಿ ಕುಮಾರ್ ಕಲ್ಲಪ್ಪ ಹವಾಲ್ದಾರ್ ಬಂಧಿತ ಆರೋಪಿ. ಅಥಣಿಯಲ್ಲಿ ವಾಸವಾಗಿದ್ದ ಸುಜಾತಾ (34) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮಾರ್ಚ್ 12ರಂದು ಅಥಣಿಯಿಂದ ಸುಮಾರು 4 ಕಿಲೋಮೀಟರ್ ದೂರದಲ್ಲಿರುವ ಕಬ್ಬಿನ ತೋಟದಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಸ್ಥಳೀಯರನ್ನು ವಿಚಾರಣೆ ನಡೆಸಿದಾಗ, ಲೀಲಾವತಿ ಭೀಮಪ್ಪ ಎಂಬುವರು ಇದು ತನ್ನ ಮಗಳು ಸುಜಾತಾಳ ಮೃತದೇಹ ಎಂದು ಗುರುತಿಸಿದ್ದಾರೆ. ಸುಜಾತಾ ಕೌಟುಂಬಿಕ ಸಮಸ್ಯೆಯಿಂದ ಆರು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ಬಂದು ಅಥಣಿಯಲ್ಲಿ ವಾಸವಾಗಿದ್ದರು. ಈ ವೇಳೆ ಕುಮಾರ್ ಕಲ್ಲಪ್ಪ ಹವಾಲ್ದಾರ್ ಪರಿಚಯವಾಗಿ,…
ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಸಿಲಿಂಡರ್ ಅಭಾವ ಒಂದು ಕಡೆ ಆದರೆ, ಮತ್ತೊಂದು ಕಡೆ, ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಗೃಹ ಬಳಕೆ ಸಿಲಿಂಡರ್ ಗಳನ್ನು ಬೇಕರಿ, ಅಂಗಡಿ ಮಾಲೀಕರು ಬಳಸುತ್ತಿದ್ದಾರೆ. ಅಂಗಡಿ, ಬೇಕರಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುಮಾರು 30ಕ್ಕೂ ಅಧಿಕ ಸಿಲೆಂಡರ್ ಗಳನ್ನು ಆಹಾರ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಚಿಕ್ಕಬಳ್ಳಾಪುರ, ಗೌರಿಬಿದನೂರು ಶಿಡ್ಲಘಟ್ಟದಲ್ಲಿ ಜಪ್ತಿ ಮಾಡಿಕೊಂಡಿದ್ದಾರೆ. ಹೋಟೆಲ್ ಬೇಕರಿ ರಸ್ತೆ ಬದಿ ವ್ಯಾಪಾರಿಗಳಿಂದ ಸಿಲಿಂಡರ್ ಜಪ್ತಿ ಮಾಡಿಕೊಳ್ಳಲಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದ ಹಿನ್ನೆಲೆಯಲ್ಲಿ ಇವರು ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದರು. ಗೃಹ ಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್ ಮತ್ತು ಬೇಕರಿ ಮಾಲೀಕರು, ಹಾಗಾಗಿ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.
ಬೆಂಗಳೂರು : ನಿರ್ದೇಶಕ ಪ್ರೇಮ್ ನಿರ್ದೇಶನದ KD ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದ. ಸರ್ಸೆ ಸರಸೆ ನಿನ್ನ ಸೆರಗ ಸರಸೆ ಹಾಡಿನ ವಿರುದ್ಧ ಇದೀಗ ಆಕ್ರೋಶ ಭುಗಿಲೆದಿದೆ. ವಿರೋಧದ ಜೊತೆಗೆ ಸಾಲು ಸಾಲು ದೂರುಗಳು ದಾಖಲಾಗಿದೆ. ವಿನೀತ್ ಎಂಬುವವರಿಂದ ಸೆನ್ಸಾರ್ ಮಂಡಳಿಗೆ ದೂರು ದಾಖಲಾಗಿದೆ. ಮುಂಬೈ ಸೈಬರ್ ಠಾಣೆಗೂ ವಿನೀತ್ ದೂರು ನೀಡಿದ್ದಾರೆ. ದೆಹಲಿ ಮೂಲದ ವಕೀಲ ವಿನೀತ ಜಿಂದಾಲ್ ದೂರು ಸಲ್ಲಿಸಿದ್ದಾರೆ. ಮದನ್ ಗುಪ್ತ ಮತ್ತೊಂದು ದೂರು ನೀಡಿದ್ದಾರೆ. ಇತ್ತೀಚಿಗೆ KD ಸಿನಿಮಾದ ಸರಸೇ ಸರ್ಸೆ ನಿನ್ನ ಸೆರಗ ಸರಸೆ ಎನ್ನುವ ಸಾಂಗ್ ರಿಲೀಸ್ ಆಗಿತ್ತು. ಇದೀಗ ಈ ಒಂದು ಹಾಡಿನ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯವೂ ಕೂಡ ಎಂಟ್ರಿ ಆಗಿದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಚಿತ್ರತಂಡಕ್ಕೆ ನೋಟಿಸ್ ನೀಡಲಾಗಿದೆ ನೋಟಿಸ್ ಗೆ ಚಿತ್ರತಂಡ ಇದೀಗ ಉತ್ತರಿಸಬೇಕಾಗಿದೆ.














