Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಅತಿ ವೇಗ ಚಾಲನೆಯಿಂದ ರಸ್ತೆ ಮಧ್ಯೆಯೇ ಟಿಟಿ ವಾಹನ ಪಲ್ಟಿಯಾಗಿದೆ. ರಾಯಸಂದ್ರ ಬಳಿ ತಿರುವಿನಲ್ಲಿ ಮೂರು ಬಾರಿ ಟಿಟಿ ವಾಹನ ಪಲ್ಟಿ ಹೊಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ಈ ಒಂದು ಅಪಘಾತ ಸಂಭವಿಸಿದೆ ಟಿಟಿ ವಾಹನಗಳ ಚಾಲಕರ ಪೈಪೋಟಿಯಿಂದ ಅಪಘಾತ ಸಂಭವಿಸಿದೆ ಅದೃಷ್ಟ ವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದಾವಣಗೆರೆ : ರಾಜ್ಯದಲ್ಲಿ ಸಿಎಂ ಕುರ್ಚಿ ಜಟಾಪಟಿ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಕರೆದು ಎಲ್ಲದಕ್ಕೂ ತೆರೆ ಎಳೆದರು. ಇದೀಗ ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯನವರು ಗಟ್ಟಿಯಾಗಿದ್ದಾರೆ ಅವರೇ ಮುಂದುವರೆಯುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಹೇಳಿದ್ದಾರೆ. ಕರ್ನಾಟಕದ ಕುರ್ಚಿ ಕಿತ್ತಾಟಕ್ಕೆ ಈಗ ಬ್ರೇಕ್‌ ಬಿದ್ದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬದಲಾವಣೆ ವಿಷಯ ಪಕ್ಷದ ಮುಂದೆಯೇ ಇಲ್ಲ. ಅಂತೆ ಕಂತೆ ಮಾತುಗಳು ಈಗ ಯಾಕೆ? ಯಾವುದೇ ಗೊಂದಲ ಇರಬಾರದು ಎಂದು ಸಿಎಂ ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದಾರೆ ಎಂದರು. ನಮ್ಮ ಸರ್ಕಾರ ಸ್ಥಿರವಾಗಿದ್ದು ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಬಿಜೆಪಿಯವರು ವಿಧಾನಸೌಧದಲ್ಲಿ ಕಾಂಗ್ರೆಸ್‌ನವರು ಶಾಸಕರ ಖರೀದಿ ಕೇಂದ್ರ ಮಾಡಿದ್ದಾರೆ ಎಂದು ಅರೋಪ ಮಾಡುತ್ತಾರೆ. ಅವರು ಹೇಗೆ ಅಧಿಕಾರಕ್ಕೆ ಬಂದರು ಎಂಬುದನ್ನು ಹೇಳಲಿ. ಅವರೇನು ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿದ್ದಾರಾ? ಕನ್ನೇರಿ ಶ್ರೀಗಳು ಏನ್ ಹೇಳಿಕೆ ನೀಡುತ್ತಾರೆ ಎನ್ನುವುದು ಗೊತ್ತಿಲ್ಲ.…

Read More

ಬೆಂಗಳೂರು : ನಗರದ ಟ್ರಾಫಿಕ್​ ಸಮಸ್ಯೆ ಮತ್ತೋಮ್ಮೆ ಸುದ್ದಿಯಾಗಿದೆ. ಇಲ್ಲಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಸಾಮಾಜಿಕ ಮಾಧ್ಯಮಗಳ ಮೂಲಕ ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.ಬೆಂಗಳೂರಿನ ಸಂಚಾರ ದಟ್ಟಣೆಯಿಂದ ಬೇಸತ್ತ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಅವರು, ಬೆಂಗಳೂರು ಟ್ರಾಫಿಕ್​ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾನುವಾರ ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬರುವಾಗ ರಾಜ್‌ಕುಮಾರ್ ಸಮಾಧಿ ರಸ್ತೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿದ್ದ ರೈ, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬೆಂಗಳೂರಿನ ಸಂಚಾರ ನಿರ್ವಹಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. “ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳೇ ಕ್ಷಮಿಸಿ, ನೀವು ಅತ್ಯಂತ ಕೆಟ್ಟ ಸಂಚಾರ ನಿರ್ವಹಣೆಯನ್ನು ಹೊಂದಿದ್ದೀರಿ” ಎಂದು ಪೋಸ್ಟ್​ ಮಾಡಿದ್ದಾರೆ. ಪೊಲೀಸರು ಫೋನ್ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ಅವರೊಂದಿಗೆ ಮಾತನಾಡಲು ನಾನು ಮಾಡಿದ ಪ್ರಯತ್ನದ ಸ್ಕ್ರೀನ್‌ಶಾಟ್ ಇಲ್ಲಿದೆ. ಅವರಲ್ಲಿ ಯಾರೂ ನನ್ನ ಕರೆಯನ್ನು ಸ್ವೀಕರಿಸಲಿಲ್ಲ.…

Read More

ಉಡುಪಿ : ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಕನಕ ಕಿಂಡಿಗೆ ನಾನು ಸೇವಾ ರೂಪದಲ್ಲಿ ಸ್ವರ್ಣ ಕವಚವನ್ನು ಸಮರ್ಪಿಸಿದ್ದೇನೆ. ಇದರ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಿರುವುದು ನನಗೆ ನನಗೆ ತುಂಬಾ ಸಂತೋಷ ತಂದಿದೆ. ಈ ಸಂದರ್ಭದಲ್ಲಿ ನನಗೂ ಭಾಗವಹಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದೆ. ಕಾರಣಾಂತರದಿಂದ ನನಗೆ ಅವಕಾಶ ತಪ್ಪಿ ಹೋಗಿದೆ. ಇದನ್ನು ಯಾರು ತಪ್ಪಿಸಿದ್ದಾರೆಂದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಜಿಲ್ಲಾ ಬಿಜೆಪಿ ನಾಯಕರು ಪ್ರಮೋದ್​​ ಮಧ್ವರಾಜ್​​ ಅವರ ಜೊತೆಯಾಗಿ ಇಂದು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಎಲ್ಲ ಊಹಾಪೋಹಗಳಿಗೂ ಮಾಜಿ ಸಚಿವರು ಉತ್ತರಿಸಿದ್ದಾರೆ.ತಮ್ಮ ಹಿಂದಿನ ಹೇಳಿಕೆಗಳಲ್ಲಿ ಅಸಮಾಧಾನದ ಭಾವನೆ ಇರಲಿಲ್ಲ. ನನ್ನ ಸೇವೆಯನ್ನು ಪ್ರಧಾನಿ ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ಎಂದು ಅವರು ಪುನರುಚ್ಛರಿಸಿದ್ದಾರೆ. ಮಠದವರಾಗಲಿ, ಜಿಲ್ಲಾ ಬಿಜೆಪಿ ನಾಯಕರಾಗಲಿ ಯಾರೂ ಕೂಡ ನನ್ನ ಕಡೆಗಣಿಸಿದ್ದಾರೆ ಎನಿಸುತ್ತಿಲ್ಲ. ಅದನ್ನು ಹುಡುಕುವ ಪ್ರಯತ್ನವನ್ನೂ ನಾನು ಮಾಡಿಲ್ಲ ಎಂದಿದ್ದಾರೆ. ಇದನ್ನು ಯಾರು…

Read More

ಬೆಂಗಳೂರು : ಬೆಂಗಳೂರಲ್ಲಿ ಅತೀ ದೊಡ್ಡ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧಿತ ಎಲ್ಲ 9 ಆರೋಪಿಗಳನ್ನು ಪೊಲೀಸರು ಮತ್ತೆ ಕಸ್ಟಡಿಗೆ ಪಡೆದಿದ್ದಾರೆ.ಇಂದು ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆರೋಪಿಗಳನ್ನು ಕೋರ್ಟ್ ಹಾಜರುಪಡಿಸಿದ್ದರು. ವಿಚಾರಣೆ ಬಳಿಕ ಪೊಲೀಸರು ಹೆಚ್ಚಿನ ವಿಚಾರಣೆಗೆ ಎಂದು ಮತ್ತೆ ಕಸ್ಟಡಿಗೆ ಪಡೆದುಕ್ಕೊಂಡಿದ್ದಾರೆ. 7.11 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಸಿದ್ದಾಪುರ ಠಾಣೆ ಪೊಲೀಸರು ಮತ್ತೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ತನಿಖೆ, ಮಹಜರು, ವಿಚಾರಣೆ ಹಿನ್ನೆಲೆಯಲ್ಲಿ ಮತ್ತಷ್ಟು ದಿನಗಳ ಕಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

Read More

ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಅವರು ಇಂದಿರಾ ಫುಡ್ ಕಿಟ್ ಯೋಜನೆ ಅನುಷ್ಠಾನ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಆಹಾರ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಅನ್ನ ಭಾಗ್ಯ ಯೋಜನೆ ಅಡಿ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಾಗಿ ಸಮಗ್ರ ಪೋಷಣೆ ಮತ್ತು ಆಹಾರ ಪದ್ಧತಿ ಉಪಕ್ರಮದ ಅಡಿ ಇಂದಿರಾ ಕಿಟ್ ವಿತರಿಸಲು ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ಪ್ರತಿ ತಿಂಗಳು 10 ನೇ ತಾರೀಖಿನಂದು ಇಂದಿರಾ ಫುಡ್ ಕಿಟ್ ವಿತರಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಹೆಚ್ಚುರಿಯಾಗಿ ನೀಡುತ್ತಿರುವ 5 ಕೆಜಿ ಅಕ್ಕಿ ಬದಲು ತೊಗರಿಬೇಳೆ ಸೂರ್ಯಕಾಂತಿ ಎಣ್ಣೆ ಸಕ್ಕರೆ, ಉಪ್ಪು ವಿತರಿಸಲು ನಿರ್ಧರಿಸಲಾಯಿತು. ಪ್ರತಿ ತಿಂಗಳು 1,25,08,262 ಇಂದಿರಾ ಫುಡ್ ಕಿಟ್ ಅಗತ್ಯವಿದೆ. ಪ್ರತಿ ತಿಂಗಳು 466 ಕೋಟಿ ರೂಪಾಯಿ ವೆಚ್ಚವಾಗಬಹುದೆಂದು ಅಂದಾಜಿಸಲಾಗಿದೆ. ಪ್ರತಿ ತಿಂಗಳು 18,628 ಮೆಟ್ರಿಕ್ ಟೆನ್ ತೊಗರಿ ಬೆಳೆ,12,419 ಮೆಟ್ರಿಕ್ ಟನ್ ಸೂರ್ಯಕಾಂತಿ ಎಣ್ಣೆ, ಸಕ್ಕರೆ, ಉಪ್ಪು…

Read More

ಚಾಮರಾಜನಗರ: ತಂದೆಯ ನಿಧನದ ಬೆನ್ನಲ್ಲೇ ಪುತ್ರನೂ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಣಗಳ್ಳಿದೊಡ್ಡಿಯಲ್ಲಿ ನಡೆದಿದೆ. ಅಣಗಳ್ಳಿ ದೊಡ್ಡಿ ಗ್ರಾಮದ ನಿವಾಸಿ ಮಲ್ಲಣ್ಣ (54) ಮೃತರು. ಇವರು ಶಿಕ್ಷಕರಾಗಿದ್ದರು. ಮಲ್ಲಣ್ಣ ಅವರ ತಂದೆ ದೊಡ್ಡಲಿಂಗಯ್ಯ ವಯೋಸಹಜವಾಗಿ ಮೃತಪಟ್ಟಿದ್ದರು. ಶನಿವಾರ ಇವರ ಅಂತ್ಯಕ್ರಿಯೆ ಮುಗಿಸಿ ಬಂದು ಮಲಗಿದ್ದ ಪುತ್ರ ಕೂಡ ಇಂದು ಕೊನೆಯುಸಿರೆಳೆದಿದ್ದಾರೆ. ಹಲಗಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಮಲ್ಲಣ್ಣ ಮೃದು ಸ್ವಭಾವದವರಾಗಿದ್ದರು. ಇಂದು ಸಂಜೆ ಮಲ್ಲಣ್ಣ ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿತು. ಮಲ್ಲಣ್ಣ ಮೇಷ್ಟ್ರು ಎಂದೇ ಜನಜನಿತವಾಗಿದ್ದ ಇವರು ಶಿಸ್ತಿಗೆ ಹೆಸರುವಾಸಿಯಾಗಿದ್ದರು. ತಂದೆ ಇಲ್ಲದ್ದನ್ನು ಅರಗಿಸಿಕೊಳ್ಳಲಾಗದೇ ಅವರಿಗೆ ಹೃದಯಾಘಾತವಾಗಿರಬಹುದು ಎಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಇದೀಗ ಇಂದು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯಗೆ ತನಿಖಾ ವರದಿ ಸಲ್ಲಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾರಿಂದ ವರದಿ ಸಲ್ಲಿಸಲಾಯಿತು. ಕೋವಿಡ್ ವೇಳೆ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ದುರಂತ ಸಂಭವಿಸಿತ್ತು.ಈ ಪ್ರಕಾರಣಕ್ಕೆ ಸಂಬಂಧಪಟ್ಟಂತೆ ಹಾಲಿ ಸಂಸದ ಡಾ.ಕೆ ಸುಧಾಕರ್ ಅವರ ವಿರುದ್ಧ ಕೂಡ ಅಕ್ರಮ ಆರೋಪ ಕೇಳಿ ಬಂದಿತ್ತು. ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಪ್ರಕರಣದ ತನಿಖೆಗೆ ಸೂಚನೆ ನೀಡಲಾಗಿತ್ತು. ಇದೀಗ ಕುನ್ಹಾ ಅವರು ಸಿಎಂ ಸಿದ್ದರಾಮಯ್ಯಗೆ ವರದಿ ಸಲ್ಲಿಸಿದ್ದಾರೆ.

Read More

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು. ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ ಸೇರಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮತ್ತೆ ಒಂದು ಸಲ ಕುಳಿತು ಮಾತನಾಡುತ್ತಾರೆ ಎಂದರು. ಜನೆವರಿ, ಫೆಬ್ರವರಿ ಬದಲಾವಣೆ ಆಗಬಹುದು. ಎಲ್ಲರು ಕುಳಿತು ಮಾತನಾಡುತ್ತಾರೆ. ಆದರೆ ಈಗ ತೊಂದರೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿಎಂ ಡಿಸಿಎಂ ಪ್ರೆಸ್ ಮೀಟ್ ಮಾಡಿದ್ದಾರೆ. ಅಂದ್ರೆ ತೊಂದರೆ ಇಲ್ಲ ಎಂದರು. ಇನ್ನು ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ…

Read More

ಬೆಂಗಳೂರು : ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು. ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು. ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ…

Read More