Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ದಕ್ಷಿಣ ಕನ್ನಡ : ಮುಂಬರುವ ರಾಜ್ಯಸಭಾ ಚುನಾವಣೆಯ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ಮತ್ತು ನಾಯಕರು ದೆಹಲಿಗೆ ತೆರಳಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ಊಹಾತ್ಮಕ ಪ್ರಶ್ನೆಗಳಿಗೆ ಉತ್ತರಿಸುವುದಿಲ್ಲ ಎಂದರು. ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚೆಕ್ ಪೋಸ್ಟ್ ಸ್ಥಾಪಿಸಲು ಆದೇಶ ನೀಡಿರುವುದಾಗಿ ಇದೇ ವೇಳೆ ಸಚಿವರು ತಿಳಿಸಿದರು. ತಾವು ಇಂದು ದೇವಾಲಯಕ್ಕೆ ಬರುವಾಗ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ಬಿದ್ದಿರುವುದನ್ನು ನೋಡಿ ಆತಂಕವಾಯಿತು. ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಚೆಕ್ ಪೋಸ್ಟ್ ಸ್ಥಾಪಿಸಿ 2 ಹಂತದ ತಪಾಸಣೆ ಮಾಡಲು ಸೂಚಿಸಿರುವುದಾಗಿ ಹೇಳಿದರು. ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಇದೆ. ಬಿಜೆಪಿ ಅಧಿಕಾರಾವಧಿಯಲ್ಲಿ 2022ರಲ್ಲಿ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ 3.33 ಲಕ್ಷ ಹೆಕ್ಟೇರ್ ಭೂಮಿ…

Read More

ನವದೆಹಲಿ : ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಹಲವು ವಿಚಾರಗಳ ಕುರಿತು ಚರ್ಚಿಸಲು ಹೈಕಮಾಂಡ್ ಬುಲಾವ್ ನೀಡಿದ ಹಿನ್ನೆಲೆ ನಿನ್ನೆ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು ಇಂದು ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು. ಇದೀಗ ರಾಹುಲ್ ಗಾಂಧಿ ಜೊತೆಗಿನ ಸಿಎಂ ಸಿದ್ದರಾಮಯ್ಯ ಸಭೆ ಈಗ ಅಂತ್ಯವಾಗಿದೆ. 30 ನಿಮಿಷಗಳ ಸಭೆ ನಡೆಸಿದ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಸಭೆ ಮುಕ್ತಾಯವಾಗಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜೊತೆಗೆ ರಾಹುಲ್ ಪ್ರತ್ಯೇಕವಾದ ಮಾತುಕತೆ ನಡೆಸಲಿದ್ದಾರೆ ಹೌದು, ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ಮುಗಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಜೊತೆ

Read More

ಕೊಪ್ಪಳ: ರಾಜ್ಯ ರಾಜಕಾರಣದ ‘ಪಟ್ಟದ ಪಗಡೆ’ ಆಟ ಇದೀಗ ದೇಶದ ರಾಜಧಾನಿ ದೆಹಲಿಯ ಅಂಗಳಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಿಢೀರ್ ದೆಹಲಿಗೆ ಭೇಟಿ ನೀಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಚರ್ಚೆ ನಡೆಸುತ್ತಿದ್ದಾರೆ. ಈ ಹೈಕಮಾಂಡ್ ಭೇಟಿಯು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದು, ನಾಯಕತ್ವ ಬದಲಾವಣೆಯ ಆಟ ಬಿರುಸುಗೊಂಡಿದೆಯೇ ಎಂಬ ಚರ್ಚೆಗಳು ಮುಂಚೂಣಿಗೆ ಬಂದಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ಕೊಪ್ಪಳ ತಾಲೂಕಿನ ಇರಕಲ್‌ಗಡ ಗ್ರಾಮದಲ್ಲಿ ಗಂಗಾವತಿ ಶಾಸಕ ಹಾಗೂ ಬಿಜೆಪಿ ಮುಖಂಡ ಜಿ. ಜನಾರ್ದನ ರೆಡ್ಡಿ ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. “ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ದನ ರೆಡ್ಡಿ, “ಇಂದು ಸಿದ್ದರಾಮಯ್ಯನವರು ಸಿಎಂ ಸ್ಥಾನ ಬಿಟ್ಟುಕೊಡುವಂತಹ ಪರಿಸ್ಥಿತಿ ಎದುರಾಗಿದೆ. ಅದಕ್ಕೆ ಪೂರಕವಾದ ವಾತಾವರಣ ಈಗಾಗಲೇ ನಿರ್ಮಾಣಗೊಂಡಿದ್ದು,…

Read More

ಕುಕ್ಕೆ ಸುಬ್ರಹ್ಮಣ್ಯ, ಮೇ 26: ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರಲು ಇರುವ ನಾಲ್ಕೂ ಪ್ರವೇಶ ರಸ್ತೆಗಳಲ್ಲಿ ಏಕಬಳಕೆ ಪ್ಲಾಸ್ಟಿಕ್ ತಪಾಸಣೆಗಾಗಿ ಚಕ್ ಪೋಸ್ಟ್ ಸ್ಥಾಪಿಸಲು ಆದೇಶ ನೀಡಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದರ್ಶನಾನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾವು ಇಂದು ದೇವಾಲಯಕ್ಕೆ ಬರುವಾಗ ರಸ್ತೆಯ ಬದಿಯಲ್ಲಿ ಪ್ಲಾಸ್ಟಿಕ್ ಬಾಟಲಿ, ತಟ್ಟೆ ಇತ್ಯಾದಿ ಬಿದ್ದಿರುವುದನ್ನು ನೋಡಿ ಆತಂಕವಾಯಿತು. ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಚಕ್ ಪೋಸ್ಟ್ ಸ್ಥಾಪಿಸಿ 2 ಹಂತದ ತಪಾಸಣೆ ಮಾಡಲು ಸೂಚಿಸಿರುವುದಾಗಿ ತಿಳಿಸಿದರು. ರಾಜ್ಯದಲ್ಲಿ ಡೀಮ್ಡ್ ಅರಣ್ಯಕ್ಕೆ ಸಂಬಂಧಿಸಿದಂತೆ ಸಮಸ್ಯೆ ಇದೆ. ಬಿಜೆಪಿ ಕಾರ್ಯಕಾಲದಲ್ಲಿ 2022ರಲ್ಲಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ 3.33ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಎಂದು ಉಲ್ಲೇಖಿಸಲಾಗಿದೆ. ಆದರೆ ಇದರಲ್ಲೂ ಅಂಗನವಾಡಿ, ಸರ್ಕಾರಿ ಆಸ್ಪತ್ರೆ, ಪಟ್ಟಾ ಭೂಮಿ ಇದ್ದು, ಈ ಸಮಸ್ಯೆ ಪರಿಹರಿಸಲು ಕಂದಾಯ ಇಲಾಖೆಯ ಜೊತೆಯಲ್ಲಿ ಜಂಟಿ ಸರ್ವೆ ನಡೆಸುತ್ತಿರುವುದಾಗಿ ತಿಳಿಸಿದರು.…

Read More

ಮೈಸೂರು: ‘ಕಾಂತಾರ’ ಸಿನಿಮಾದ ಪಂಜುರ್ಲಿ ಹಾಗೂ ಚಾವುಂಡಿ ದೈವದ ಪಾತ್ರವನ್ನು ಹೆಣ್ಣು ದೆವ್ವ ಎಂದು ಕರೆದು, ಅಪಹಾಸ್ಯ ಮಾಡಿದ್ದ ಆರೋಪ ಎದುರಿಸುತ್ತಿದ್ದ ಬಾಲಿವುಡ್ ನಟ ರಣವೀರ್ ಸಿಂಗ್, ಇದೀಗ ಮೈಸೂರಿನ ಸಾಂಸ್ಕೃತಿಕ ನಗರಿಗೆ ಭೇಟಿ ನೀಡಿದ್ದಾರೆ. ಯಾರಿಗೂ ಮುನ್ಸೂಚನೆ ನೀಡದಂತೆ ರಹಸ್ಯವಾಗಿ ಮೈಸೂರಿನ ಪ್ರಸಿದ್ಧ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿದ ಅವರು, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೆ, ತಮ್ಮಿಂದಾದ ತಪ್ಪಿಗೆ ತಾಯಿಯ ಸನ್ನಿಧಿಯಲ್ಲಿ ತಲೆಬಾಗಿ ಕ್ಷಮೆಯಾಚಿಸಿದ್ದಾರೆ. ರಣವೀರ್ ಸಿಂಗ್ ಅವರು ದೇವಸ್ಥಾನದ ಗರ್ಭಗುಡಿಯ ಮುಂದೆ ಅತ್ಯಂತ ಭಕ್ತಿಭಾವದಿಂದ ಕುಳಿತು, ಕೈಮುಗಿದು ತಲೆಬಾಗಿ ಕ್ಷಮೆ ಕೇಳುತ್ತಿರುವ ಫೋಟೋಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಈ ಹಿಂದೆ ಈ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ, ರಣವೀರ್ ಸಿಂಗ್ ಅವರು ತಮ್ಮ ಅಧಿಕೃತ ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದರು. ಅಷ್ಟೇ ಅಲ್ಲದೆ, ಶೀಘ್ರದಲ್ಲೇ ಕರ್ನಾಟಕದ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಖುದ್ದಾಗಿ ಭೇಟಿ ನೀಡಿ ಪ್ರಾಯಶ್ಚಿತ್ತ…

Read More

ನವದೆಹಲಿ: ಕರ್ನಾಟಕ ಕಾಂಗ್ರೆಸ್ ರಾಜಕಾರಣದ ಅತ್ಯಂತ ಕುತೂಹಲಕಾರಿ ‘ಪಟ್ಟದ ಪಗಡೆಯಾಟ’ ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ರಾಜ್ಯ ರಾಜಧಾನಿಯಿಂದ ದೇಶದ ರಾಜಧಾನಿ ದೆಹಲಿಗೆ ಶಿಫ್ಟ್ ಆಗಿರುವ ಈ ಹೈವೋಲ್ಟೇಜ್ ರಾಜಕೀಯದ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮುಖಾಮುಖಿಯಾಗಿದ್ದಾರೆ. ಹೈಕಮಾಂಡ್ ನಾಯಕರೊಂದಿಗಿನ ಪ್ರಮುಖ ‘ಒನ್ ಟು ಒನ್’ ಚರ್ಚೆಗೂ ಮುನ್ನ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ. ಪ್ರತ್ಯೇಕವಾಗಿ ದೆಹಲಿ ತಲುಪಿದ್ದ ನಾಯಕರು: ನಿನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು ಹಾಗೂ ಶಾಸಕರ ದಂಡಿನೊಂದಿಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಮತ್ತೊಂದೆಡೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೂಡ ತಮ್ಮ ಆಪ್ತ ಶಾಸಕರು ಮತ್ತು ಸಚಿವರನ್ನು ಒಳಗೊಂಡ ಪ್ರತ್ಯೇಕ ತಂಡದೊಂದಿಗೆ ದೆಹಲಿಗೆ ತಲುಪಿದ್ದರು. ಆದರೆ, ದೆಹಲಿ ತಲುಪಿದಾಗಿನಿಂದ ಇಂದು ಬೆಳಗ್ಗಿನವರೆಗೂ ಇಬ್ಬರು ನಾಯಕರು ಎಲ್ಲೂ ಪರಸ್ಪರ ಭೇಟಿಯಾಗಿರಲಿಲ್ಲ. ಇದು ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಗ್ರಾಸ ಮಾಡಿಕೊಟ್ಟಿತ್ತು.…

Read More

ಧಾರವಾಡ : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿಕ್ಷೆ ಅಮಾನತ್ತಿನಲ್ಲಿ ಇಟ್ಟು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮಾಜಿ ಶಾಸಕ ವಿನಯ ಕುಲಕರ್ಣಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಶಿಕ್ಷೆ ಆಗಿರುವುದರಿಂದ ಶಾಸಕ ಸ್ಥಾನದಿಂದ ವಿನಯ್ ಕುಲಕರ್ಣಿ ಅನರ್ಹಗೊಂಡಿದ್ದಾರೆ. ಖಾಲಿ ಸ್ಥಾನಕ್ಕೆ ಆಯೋಗ ಚುನಾವಣೆ ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ ತುರ್ತು ವಿಚಾರಣೆಗೆ ವಿನಯ್ ಕುಲಕರ್ಣಿ ಪರ ವಕೀಲರು ಮನವಿ ಮಾಡಿದರು. ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸಿಬಿಐ ವಕೀಲರಿಗೆ ಸೂಚನೆ ನೀಡಿತು. ವಿಚಾರಣೆಯನ್ನು ಹೈಕೋರ್ಟ್ ವಿಭಾಗಿಯ ಪೀಠ ಜೂನ್ 1ಕ್ಕೆ ಮುಂದೂಡಿತು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಚೇರಿಗೆ ಪಾರ್ಸೆಲ್ ನಲ್ಲಿ ಗಾಂಜಾ ಬಂದಿತ್ತು. 3 ಕೋಟಿ ಮೌಲ್ಯದ 3 ಕೆಜಿ 312 ಗ್ರಾಂ ಮೌಲ್ಯದ ಹೈಡ್ರೋಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಸ್ನಾಕ್ಸ್ ಬಾಕ್ಸ್ ನಲ್ಲಿ ಅಪಾರ ಪ್ರಮಾಣ ಮೌಲ್ಯದ ಹೈಡ್ರೋಗಾಂಜಾ ಪಾರ್ಸೆಲ್ ಮೂಲಕ ಅಂಚೆ ಕಚೇರಿಗೆ ಬಂದಿತ್ತು. ಅನುಮಾನ ಬಂದು ಅಂಚೆ ಕಚೇರಿ ಸಿಬ್ಬಂದಿಗಳು ಸಿಸಿಬಿಗೆ ಮಾಹಿತಿ ನೀಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ 3 ಕೋಟಿಗೂ ಅಧಿಕ ಮಾಡಿದ ಗಾಂಜಾ ವಶಕ್ಕೆ ಪಡೆದಿದ್ದಾರೆ .

Read More

ಬೀದರ್ : ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬೀದರ್‌ನ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 45 ಕೋಟಿ ರೂಪಾಯಿಗಳ ಬಹುಕೋಟಿ ಹಗರಣವು ಇದೀಗ ಸಾಬೀತಾಗಿದ್ದು, ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಸೇರಿದಂತೆ ಒಟ್ಟು ಆರು ಜನ ಪ್ರಮುಖ ಆರೋಪಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ. ಹೆಚ್.ಡಿ. ನಾರಾಯಣಸ್ವಾಮಿ, 2017-18ರ ಅವಧಿಯಲ್ಲಿ ವಿವಿಯ ಹಣಕಾಸು ನಿಯಂತ್ರಣಾಧಿಕಾರಿಯಾಗಿದ್ದ ಕೆ.ಎಲ್. ಸುರೇಶ್, ಮೃತ್ಯುಂಜಯ ಹಿರೇಮಠ, ಬೊಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತ ಆರೋಪಿಗಳಾಗಿದ್ದಾರೆ. ಬೀದರ್ ಜಿಲ್ಲಾ ಸತ್ರ ನ್ಯಾಯಾಲಯವು ಆರೋಪಿಗಳ ವಿರುದ್ಧ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಈ ಹಠಾತ್ ಬಂಧನ ಪ್ರಕ್ರಿಯೆಯನ್ನು ಕೈಗೊಂಡಿದ್ದಾರೆ. ಏನಿದು 45 ಕೋಟಿ ರೂ. ಹಗರಣ? 2017-18ರ ಅವಧಿಯಲ್ಲಿ ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ವಿವಿಧ ಸಾಮಗ್ರಿಗಳ ಖರೀದಿಯ ಹೆಸರಿನಲ್ಲಿ ಈ ದೈತ್ಯ ಹಗರಣ ನಡೆದಿತ್ತು. ಆರೋಪಿಗಳು ಯಾವುದೇ ಸಾಮಗ್ರಿಗಳನ್ನು ಖರೀದಿಸದೆಯೇ, ಕೇವಲ ನಕಲಿ…

Read More

ಬೆಂಗಳೂರು: ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ಚುನಾವಣಾ ಕಣ ರಂಗೇರಿದೆ. ರಾಜ್ಯ ವಿಧಾನ ಪರಿಷತ್ತಿನ (ಮೇಲ್ಮನೆ) ಒಟ್ಟು 7 ಸ್ಥಾನಗಳು ಶೀಘ್ರದಲ್ಲೇ ತೆರವಾಗಲಿರುವ ಹಿನ್ನೆಲೆಯಲ್ಲಿ, ಕೇಂದ್ರ ಚುನಾವಣಾ ಆಯೋಗವು ಮಹತ್ವದ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 18 ರಂದು ಈ 7 ಸ್ಥಾನಗಳಿಗೆ ಅಧಿಕೃತವಾಗಿ ಚುನಾವಣೆ ನಡೆಯಲಿದ್ದು, ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಕುರಿತು ಬಿರುಸಿನ ಚಟುವಟಿಕೆಗಳು ಆರಂಭವಾಗಿವೆ. ಪ್ರಸಕ್ತ ಸಾಲಿನ ಜೂನ್ 26 ರಂದು ಹಾಲಿ ಇರುವ ಏಳು ಜನ ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ಪ್ರಮುಖ ನಾಯಕರ ನಿವೃತ್ತಿಯಿಂದ ತೆರವಾಗುತ್ತಿರುವ ಈ ಸ್ಥಾನಗಳನ್ನು ತುಂಬಲು ಜೂನ್ 18 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅಂದೇ ಸಂಜೆ ಮತ ಎಣಿಕೆ ಕಾರ್ಯವೂ ನಡೆದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಪ್ರಕಟಣೆ ತಿಳಿಸಿದೆ. ಈ ಚುನಾವಣೆಯು ವಿಧಾನಸಭೆಯ ಸದಸ್ಯರಿಂದ (ಶಾಸಕರಿಂದ) ಚುನಾಯಿತವಾಗುವ ಕೋಟಾದಡಿಯೇ ನಡೆಯುತ್ತಿರುವುದರಿಂದ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು…

Read More