Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕ ಉಪ ಚುನಾವಣೆ ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ, ಇದೀಗ ಗೃಹ ಸಚಿವ ಜಿ ಪರಮೇಶ್ವರ್ ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಫೋಟಕವಾದ ಹೇಳಿಕೆ ನೀಡಿದ್ದು, ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದಕ್ಕೆ ಹೈ ಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ತಿಳಿಸಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು…
ಬೆಂಗಳೂರು : ಬೆಂಗಳೂರು ಏರ್ಪೋರ್ಟ್ ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿದ್ದ ಆರೋಪಿ ಮೊಹಮ್ಮದ್ ಅಫಾನ್ ಅಹಮದ್ ಅರ್ಜಿಯನ್ನು ಹೈಕೋರ್ಟ್ ಇದೀಗ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಶೋಧನೆಯ ನೆಪದಲ್ಲಿ ಅಸಭ್ಯವಾಗಿ ಸ್ಪರ್ಶಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪುರುಷರ ಶೌಚಾಲಯಕ್ಕೆ ಕರೆದೊಯ್ದು ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ದಕ್ಷಿಣ ಕೊರಿಯಾ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಳು. ದಕ್ಷಿಣ ಕೊರಿಯಾ ಗೆ ತೆರಳಲು ಇಮ್ಮಿಗ್ರೇಶನ್ ತಪಾಸಣೆ ಮುಗಿದ ಬಳಿಕ ಆರೋಪಿ ಈ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಹೈಕೋರ್ಟ್ ಗರಂ ಆಗಿದೆ. ಮಹಿಳೆಯೊಂದಿಗೆ ಹೀಗೆ ನಡೆದುಕೊಂಡವನನ್ನು ಹಾಗೆ ಬಿಟ್ಟುಬಿಡಬೇಕ? ವಿದೇಶಿ ಮಹಿಳೆ ದೂರಿನಲ್ಲಿ ಈತನ ಕೃತ್ಯವನ್ನು ವಿವರಿಸಿದ್ದಾರೆ. ಪ್ರಕರಣ ರದ್ದು ಸಾಧ್ಯವಿಲ್ಲ ಎಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result
ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 7 ಅಂದರೆ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಣೆಯ ಕುರಿತು ಇಲಾಖೆಯು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 7 ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ. ಇನ್ನು ಪ್ರಕಟ…
ನವದೆಹಲಿ : ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಲಾಗುವುದು ಎಂಬ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 1.4 ರಷ್ಟು ಏರಿಕೆಯಾಗಿ 110.60 ಡಾಲರ್ಗೆ (10,287 ರೂಪಾಯಿ) ಏರಿಕೆ ಕಂಡಿದ್ದರೆ, ಅಮೆರಿಕದ ಕಚ್ಚಾ ತೈಲದ ಬೆಲೆ ಶೇ. 1.8 ರಷ್ಟು ಏರಿಕೆಯಾಗಿ 113.60 (10,568 ರೂಪಾಯಿ) ಡಾಲರ್ಗೆ (US Dollar) ತಲುಪಿದೆ. ಇರಾನಿನ ಶತ್ರು ರಾಷ್ಟ್ರಗಳಿಗೆ ತೈಲ ಪೂರೈಕೆ ಮಾರ್ಗ ಬಂದ್ ಮಾಡಿರುವುದರಿಂದ ಜಾಗತಿಕ ಇಂಧನ ಪೂರೈಕೆ ಮೇಲೆ ಸಾಕಷ್ಟು ಪರಿಣಾಮ ಬೀರಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಮನಕಲಕುವ ಘಟನೆ ಒಂದು ನಡೆದಿದ್ದು, ಒಂದೇ ದಿನ ದಂಪತಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಅನಾಥರಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿಯಲ್ಲಿ ನಡೆದಿದೆ. ಅರವಳ್ಳಿ ಗ್ರಾಮದ ದಂಪತಿಗಳಾದ ಕರೆಪ್ಪ (36) ಹಾಗೂ ಮಧುರ (30) ಒಂದೇ ದಿನ ಸಾವನ್ನಪ್ಪಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಪತ್ನಿ ಮಧುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕ್ರಿಮಿನಾಶಕ ಮಾದರಿ ಸೇವಿಸಿ ಮಧುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮಧುರ ಸಾವನಪ್ಪಿದ್ದು, ಪತ್ನಿ ಸಾವಿನ ವಿಚಾರ ತಿಳಿದು ಬೈಕ್ ನಲ್ಲಿ ಬರುತ್ತಿದ್ದ ಪತಿಗೆ ಅಪಘಾತ ಸಂಭವಿಸಿದೆ. ಬಸ್ ಚಕ್ರಕ್ಕೆ ಸಿಲುಕಿದ್ದಾನೆ. ಈ ಒಂದು ಘಟನೆಯಿಂದ ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮಧುರ ಹಾಗೂ ಕರಪ್ಪಗೆ ಮೂರು ಮಕ್ಕಳಿದ್ದು, ಸದ್ಯ ತಂದೆ ತಾಯಿಯನ್ನು ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಒಂದೇ ದಿನ ಪತ್ನಿ ಮತ್ತು ಪತಿ ಸಾವಿನ ಸುದ್ದಿ ತಿಳಿದು ಇಡೀ ಗ್ರಾಮವೇ ಶೋಕದಲ್ಲಿ ಮುಳುಗಿದೆ.
ನವದೆಹಲಿ : ಇರಾನ್ ಇಸ್ರೇಲ್ ಯುದ್ಧದ ನಡುವೆ ಇದೀಗ ಮೊದಲ ಬಾರಿಗೆ ಇರಾನ್ ಪರಮೋಚ್ಚ ನಾಯಕ ಮೊಜ್ತಾಬಾ ಖಮನೈ ಮೊದಲ ಬಾರಿಗೆ ಪ್ರತ್ಯಕ್ಷನಾಗಿದ್ದು, ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಎಂಟ್ರಿ ಆಗಿರುವ ವಿಡಿಯೋ ವೈರಲ್ ಆಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಇಸ್ರೇಲ್ ಹೇಳುವ ಪ್ರಕಾರ ಮೊಜ್ತಾಬಾ ಖಮನೈ ನನ್ನ ಕೊಲೆ ಮಾಡಿದ್ದೇವೆ ಅಥವಾ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುವ ಹಂತದಲ್ಲಿದ್ದಾನೆ ಎಂದು ಹೇಳಿಕೆ ನೀಡಿದ್ದವು. ಆದರೆ IRGC ಮೊಜ್ತಾಬಾ ಖಮನೈ ಅವರ ನಿರ್ದೇಶನದ ಮೇರೆಗೆ ನಾವು ದಾಳಿ ಮಾಡುತ್ತಿದ್ದೇವೆ ಎನ್ನುವಂತಹ ಹೇಳಿಕೆಗಳನ್ನು ಕೊಡುತ್ತಿದ್ದರು ಅದರ ಜೊತೆಗೆ ಇದರ ಮಧ್ಯದಲ್ಲಿ ಅನೇಕ ಆಡಿಯೋಗಳು ಕೂಡ ಬಿಟ್ಟಿದ್ದರು. ಖಮನೈ ಹೇಳಿಕೆ ಕೊಟ್ಟಿದ್ದಾರೆ ಎನ್ನುವ ಆಡಿಯೋ ಆಗಿದ್ದವು. ಆದರೆ ಇದೀಗ ವೈರಲ್ ಆಗಿರುವ ವಿಡಿಯೋ ನೋಡಿದರೆ ಸೈನಿಕರಿಗೆ ಉರಿದುಂಬಿಸುವಂತಹ ಕೆಲಸ ಮಾಡುತ್ತಿದ್ದು ವಾರ್ ರೂಂಗೆ ಗ್ರಾಂಡ್ ಎಂಟ್ರಿ ಕೊಟ್ಟಿದ್ದರೆ. ವಾರ್ ರೂಂಗೆ ನಡೆದುಕೊಂಡು ಬರುತ್ತಿರುವ ಮೊಟ್ಟಮೊದಲ ವಿಡಿಯೋ ವೈರಲಾಗಿದೆ. ಈ ಮೂಲಕ…
ಕಲಬುರ್ಗಿ : ಕಲ್ಬುರ್ಗಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ ಶಾಲಾ ಶಿಕ್ಷಕಿ ಎಂದು ತಿಳಿದುಬಂದಿದೆ. ಕಲಬುರಗಿ ನಗರದ ಆನಂದ್ ಕಾಲೋನಿ ನಿವಾಸಿಯಾಗಿರುವ ಜ್ಯೋತಿ ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ವಂದರಖೇಡ ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬೀದರ್ನಲ್ಲೇ ಮನೆ ಮಾಡಿ ಶಾಲೆಗೆ ಹೋಗಿಬರುತ್ತಿದ್ದ ಜ್ಯೋತಿ ವಾರಕ್ಕೊಂದು ಬಾರಿ ಕಲಬುರಗಿಗೆ ಬಂದು ವಾಪಸ್ ತೆರಳುತ್ತಿದ್ದರು. ಕಲಬುರಗಿಯಿಂದ ಬೀದರ್ ತೇರಳುವಾಗ ಮಾರ್ಗ ಮಧ್ಯದ ಕಮಲಾಪುರದ ಕಲ್ಮೂಡನಲ್ಲಿ ಜ್ಯೋತಿಯನ್ನು ಕೊಲೆಮಾಡಿದ್ದಾರೆ. ಬಳಿಕ ದುಷ್ಕರ್ಮಿಗಳು ರಸ್ತೆ ಪಕ್ಕದಲ್ಲಿ ಐದು ಲೀಟರ್ ಪೆಟ್ರೋಲ್ ಹಾಕಿ ಶವವನ್ನು ಸುಟ್ಟಿದ್ದಾರೆ.ಈ ಕುರಿತು ಪೊಲೀಸರು ಅಪರಿಚಿತ ಶವ ಪತ್ತೆ ಪ್ರಕರಣ ದಾಖಲಿಸಿಕೊಂಡಿದ್ದರು. ತನಿಖೆ ವೇಳೆಯಲ್ಲಿ ಕಲಬುರಗಿ ನಿವಾಸಿ ಕೊಲೆಯಾಗಿರೋದು ಬೆಳಕಿಗೆ ಬಂದಿದೆ. ಘಟನೆ ಸಂಬAಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, ಭದ್ರಾ ನದಿಯಲ್ಲಿ ಮುಳುಗಿ ಐಟಿ ಕಂಪನಿಯ ಉದ್ಯೋಗಿ ಸಾವನಪ್ಪಿದ್ದಾನೆ. ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿ ಅಭಿಷೇಕ್ (27) ಎಂಬಾತ ಸಾವನಪ್ಪಿದ್ದಾನೆ. ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಗದಗ ಮೂಲದ ಅಭಿಷೇಕ್ ಎಂಬಾತ ಸ್ನೇಹಿತನ ಮದುವೆಗಾಗಿ ಬಂದಿದ್ದ ಸ್ನೇಹಿತರ ಜೊತೆಗೆ ಹೋಂ ಸ್ಟೇನಲ್ಲಿ ಅಭಿಷೇಕ್ ವಾಸ್ತವ್ಯ ಹೂಡಿದ್ದ. ಬಳಿಕ ಸ್ನೇಹಿತರ ಜೊತೆ ನದಿಯಲ್ಲಿ ಈಜಲು ಹೋಗಿದ್ದಾಗ ಮುಳುಗಿ ಸಾವನಪ್ಪಿದ್ದಾನೆ. ಬೆಂಗಳೂರಿನ ಐಟಿ ಕಂಪನಿಯಲ್ಲಿ ಅಭಿಷೇಕ್ ಕೆಲಸ ಮಾಡುತ್ತಿದ್ದ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಅಭಿಷೇಕ್ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತುಮಕೂರು : ಹೆಜ್ಜೇನು ದಾಳಿಯಿಂದ ರೈತ ಹಾಗೂ ಬಾಲಕನ ಸ್ಥಿತಿ ಗಂಭೀರವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಯಲ್ಕೂರು ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಕೃಷಿ ಕೆಲಸ ಮಾಡುತ್ತಿದ್ದಾಗ ನರಸಿಂಹ ಗೌಡ ಮತ್ತು ಸುಪ್ರೀತ್ ಎಂಬ ಬಾಲಕನ ಮೇಲೆ ಏಕಾಏಕಿ ಹೆಜ್ಜೆನು ದಾಳಿ ನಡೆಸಿವೆ. ಅಜ್ಜ ನರಸಿಂಹ ಗೌಡ ಹಾಗೂ ಸುಪ್ರೀತ್ ಗಂಭೀರವಾದ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದ್ದು, ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಇರಾನ್ ಇಸ್ರೇಲ್ ಯುದ್ಧದ ಪರಿಣಾಮ ರಾಜ್ಯದ ಹಲವೆಡೆ ಆಟೋಗಳಿಗೆ ಗ್ಯಾಸ್ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ಈ ಹಿನ್ನೆಲೆ ಚಾಲಕರು ಪರದಾಟ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಕೇಂದ್ರ ಸರ್ಕಾರಕ್ಕೆ ನಾವು ಕೂಡ ಬೇಡಿಕೆ ಇಟ್ಟಿದ್ದೇವೆ. ಕಾಳ ಸಂತೆಯಲ್ಲಿ ಸಿಲಿಂಡರ್ ಏನಾದರು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ವಿಚಾರವಾಗಿ ಮಾತನಾಡಿದ ಅವರು ಯುದ್ಧದಿಂದ ತೊಂದರೆ ಆಗುತ್ತಿದೆ ಅನ್ನುವುದು ಎಲ್ಲರಿಗೂ ಗೊತ್ತು. ಆದರೆ ನಮಗೆ ಕೊಡಬೇಕಾಗಿರುವುದನ್ನು ಕೊಡಬೇಕು ಅಲ್ವಾ? ಎಲ್ಲಾ ರಾಜ್ಯಗಳಿಗೆ ಕೊಟ್ಟಂತೆ ನಮಗೂ ಪೂರೈಕೆ ಮಾಡಬೇಕು. ನಮಗೂ ಸಿಲಿಂಡರ್ ಹಾಗು ತೈಲ ಬೇಕು. ಆದರೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.














