Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿಕ್ಕಮಗಳೂರು : ಅಂದಾಜು 1 ಕೋಟಿಗೂ ಅಧಿಕ ಮೌಲ್ಯ ಎರಡು ತಲೆ ಮಣ್ಣು ಮುಕ್ಕ ಹಾವನ್ನ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇ ಔಟ್ ಬಡಾವಣೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಆಂಧ್ರ ಪ್ರದೇಶ ಹಾಗೂ ಕರ್ನಾಟಕ ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಶಪಡಿಸಿಕೊಂಡ ಮಣ್ಣು ಮುಕ್ಕ ಹಾವು ಆರೋಗ್ಯವಾಗಿದ್ದು, ಅದನ್ನು ಅರಣ್ಯ ಇಲಾಖೆ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಹಾವನ್ನು ಯಾವ ಪ್ರದೇಶದಿಂದ ಹಿಡಿದು ತರಲಾಗಿತ್ತು ಹಾಗೂ ಇದರ ಹಿಂದೆ ದೊಡ್ಡ ಜಾಲವಿದೆಯೇ? ಎಂಬ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರ ಪಾತ್ರ ಇರುವ ಶಂಕೆಯೂ ವ್ಯಕ್ತವಾಗಿದೆ. ಮಣ್ಣು ಮುಕ್ಕ ಹಾವು ಅಪರೂಪದ ಜಾತಿಗೆ ಸೇರಿದೆ. ಇದನ್ನು ಅಕ್ರಮವಾಗಿ ಸಾಗಾಟ ಹಾಗೂ ಮಾರಾಟ ಮಾಡಿದರೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಕಠಿಣ ಶಿಕ್ಷೆಯಿದೆ. ಆದರೂ ಕೆಲ…
ನವದೆಹಲಿ : ದೇಶಾದ್ಯಂತ ಸಂಚಲನ ಸೃಷ್ಟಿಸಿರುವ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಹೊಸ ಕೊಂಡಿ ಪತ್ತೆಯಾಗಿದೆ. ಸಿಬಿಐ ಕಾರ್ಯಾಚರಣೆ ನಡೆಸಿ ಪ್ರಮುಖ ಶಂಕಿತನನ್ನು ಬಂಧಿಸಿದೆ. ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ತೀವ್ರಗೊಂಡಿದೆ. ಮೊಬೈಲ್ ದತ್ತಾಂಶಗಳ ಮೂಲಕ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಈ ಹಗರಣದಲ್ಲಿ ಇನ್ನೂ ದೊಡ್ಡ ವ್ಯಕ್ತಿಗಳು ಸಿಲುಕುವ ಸಾಧ್ಯತೆ ಇದೆ. ರಾಜಸ್ಥಾನ ಮತ್ತು ಬಿಹಾರದಲ್ಲಿ ಈ ಹಿಂದೆ ನಡೆದಿದ್ದ ಬಂಧನಗಳ ಬೆನ್ನಲ್ಲೇ, ತನಿಖಾ ಸಂಸ್ಥೆಗಳಿಗೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಈ ದಂಧೆಯ ಕೊಂಡಿಗಳು ಇರುವುದು ಸಾಬೀತಾಗಿದೆ. ವಶಕ್ಕೆ ಪಡೆದ ಶಂಕಿತ ವ್ಯಕ್ತಿಯು ಪರೀಕ್ಷೆಗೂ ಮುನ್ನವೇ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ತಲುಪಿಸುವಲ್ಲಿ ಅಥವಾ ಹಣಕಾಸಿನ ವ್ಯವಹಾರ ಕುದುರಿಸುವಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ನಾಸಿಕ್ನಲ್ಲಿ ವಶಕ್ಕೆ ಪಡೆದ ವ್ಯಕ್ತಿಯನ್ನು ರಹಸ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದ್ದು, ಈತನ ಹಿಂದೆ ದೊಡ್ಡ ಶಿಕ್ಷಣ ಮಾಫಿಯಾ ಇರುವ ಶಂಕೆ ವ್ಯಕ್ತವಾಗಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಪತ್ರಿಕೆಯು ಕೇವಲ ಒಂದು ರಾಜ್ಯಕ್ಕೆ…
ನವದೆಹಲಿ: ಮೇ 3 ರಂದು ನಡೆದಿದ್ದ ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್’ (NEET) ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬೆನ್ನಲ್ಲೇ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಈ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ವಿಶೇಷ ತನಿಖಾ ತಂಡ (SIT) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಯ ಮಾಸ್ಟರ್ಮೈಂಡ್ ಹಾಗೂ ಓರ್ವ ಎಂಬಿಬಿಎಸ್ ವಿದ್ಯಾರ್ಥಿ ಸೇರಿದಂತೆ ಒಟ್ಟು 40 ಜನರನ್ನು ಬಂಧಿಸಿದೆ. ಬಂಧಿತ ಆರೋಪಿಗಳ ವಿವರ: ಪೊಲೀಸರ ಬಲೆಗೆ ಬಿದ್ದಿರುವ ಪ್ರಮುಖ ಆರೋಪಿಗಳನ್ನು ಮನೀಶ್ ಯಾದವ್ ಮತ್ತು ರಾಕೇಶ್ ಮಾಂಡವ್ರಿಯ ಎಂದು ಗುರುತಿಸಲಾಗಿದೆ. ಬಂಧಿತರ ಗುಂಪಿನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳೂ ಸೇರಿರುವುದು ತನಿಖಾ ತಂಡಕ್ಕೆ ಆಘಾತ ತಂದಿದೆ. ಪರೀಕ್ಷಾ ಅಕ್ರಮದ ಹಿಂದೆ ವ್ಯವಸ್ಥಿತ ಜಾಲವೊಂದು ಕೆಲಸ ಮಾಡುತ್ತಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಪೊಲೀಸರು ಎಲ್ಲರನ್ನೂ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಾಟ್ಸ್ಅಪ್ ಮೂಲಕ ಪತ್ರಿಕೆ ಹಂಚಿಕೆ: ತನಿಖೆಯ ವೇಳೆ ಬಯಲಾದ ಅತ್ಯಂತ ದಿಗಿಲುಗೊಳಿಸುವ ವಿಷಯವೆಂದರೆ, ಪರೀಕ್ಷೆ ನಡೆಯುವ ಒಂದು…
ಬೆಂಗಳೂರು: ರಾಜ್ಯದಲ್ಲಿ ಒಂದು ಕಡೆ ಗುಡುಗು ಸಹಿತ ಜೋರು ಮಳೆ, ಮತ್ತೊಂದು ಭಾಗದಲ್ಲಿ ಉರಿಬಿಸಿಲಿನ ಪ್ರಮಾಣ ಹೆಚ್ಚಾಗುವ ಮುನ್ನೆಚ್ಚರಿಕೆ ಕೊಡಲಾಗಿದೆ. ಮುಂದಿನ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಆಗಲಿದೆ. ವಾತಾವರಣದಲ್ಲಿ ತೀವ್ರ ಸ್ವರೂಪದ ಬದಲಾವಣೆಗಳು ಆಗಲಿದ್ದು, ಇದಕ್ಕೆ ಬಂಗಾಳಕೊಲ್ಲಿ ಸಮುದ್ರ ಭಾಗದಲ್ಲಿ ಸೃಷ್ಟಿಯಾದ ಚಂಡಮಾರುತ ಪರಿಚಲನೆ ಮತ್ತು ಇತರ ಕಡೆಗಳಲ್ಲಿ ಉಂಟಾದ ಹವಾಮಾನ ವೈಪರೀತ್ಯಗಳು ಕಾರಣವೆಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮೇ 17ರವರೆಗೆ ಮಳೆ ಹಾಗೂ ಗರಿಷ್ಠ ತಾಪಮಾನದಲ್ಲಿ ಏರಿಕೆ ಆಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ 65-115 ಮಿಲಿ ಮೀಟರ್ ವರೆಗೆ ಮಳೆ ಬರುವ ಕಾರಣಕ್ಕೆ ಮೇ 15, 16ರಂದು ಯೆಲ್ಲೋ ಅಟರ್ಲ್ ನೀಡಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆ ನಿರೀಕ್ಷೆ ಇದೆ. ಮುಂದಿನ ಐದು ದಿನಗಳಲ್ಲಿ ಪೂರ್ವ ಮುಂಗಾರು ಮಳೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಲಿದೆ ಅಂದರೆ ಹೆಚ್ಚಿನ ಪ್ರದೇಶದಲ್ಲಿ ಮಳೆ ಹಂತ ಹಂತವಾಗಿ…
SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!
ವಿಜಯಪುರ : ವಿಜಯಪುರದಲ್ಲಿ ಬಾಲಕನ ಮೇಲೆ ಬೀದಿ ನಾಯಿ ದಾಳಿ ನಡೆದ ಬೆನ್ನಲ್ಲೇ, ಕಿಡಿಗೇಡಿಗಳು ನಾಯಿಗಳಿಗೆ ವಿಷವಿಕ್ಕಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆಯಲ್ಲಿ ಒಂದು ನಾಯಿ ಸಾವನ್ನಪ್ಪಿದ್ದು, ಎರಡು ನಾಯಿಗಳು ಅಸ್ವಸ್ಥಗೊಂಡಿದ್ದು, ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಶಾಸ್ತ್ರಿ ನಗರದ ಜನ್ನತ್ ಹಾಲ್ ಬಳಿ ಬೀದಿ ನಾಯಿಗಳಿಗೆ ವಿಷ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆಹಾರದಲ್ಲಿ ವಿಷ ಬೆರೆಸಿ ನಾಯಿಗಳಿಗೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ವಿಷಪೂರಿತ ಆ ಆಹಾರ ಸೇವಿಸಿದ ಮೂರು ನಾಯಿಗಳ ಪೈಕಿ ಒಂದು ನಾಯಿ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನೆರಡು ನಾಯಿಗಳು ಅಸ್ವಸ್ಥಗೊಂಡಿದ್ದು, ಪ್ರಾಣಿಪ್ರಿಯರು ಅವುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಈ ಘಟನೆಗೆ ಮುನ್ನ ವಿಜಯಪುರದ ರಾಜಕುಮಾರ್ ಲೇಔಟ್ನಲ್ಲಿ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದವು. ಗಾಯಗೊಂಡ ಬಾಲಕನ ಘಟನೆ ನಗರಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಕೂಡ ಬೀದಿ ನಾಯಿಗಳ ಸ್ಥಳಾಂತರ ಕಾರ್ಯಕ್ಕೆ ಮುಂದಾಗಿತ್ತು. ಆದರೆ ಇದೇ ವೇಳೆ ನಗರದಲ್ಲಿ…
BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್
ಬೆಂಗಳೂರು : ಬೆಂಗಳೂರಲ್ಲಿ ಪ್ರಧಾನಿ ಮೋದಿ ಸಂಚರಿಸುವ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿ ಸಿಕ್ಕ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಆ ಜಾಗದಲ್ಲಿ ಜಾಗದಲ್ಲಿ ಟೈಮರ್ ಪತ್ತೆ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣವನ್ನು ಎನ್ಐಎಗೆ ತನಿಖೆ ಮಾಡಲು ಕೊಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಇಂದು ಮಾತನಾಡಿದ ಅವರು, ಕರೆ ಮಾಡಿ ಬಾಂಬ್ ಬೆದರಿಕೆ ಹಾಕಿದವನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ತನಿಖೆಯೂ ಆಗುತ್ತಿದೆ. ಹೋಗುವ ದಾರಿಯಲ್ಲಿ ಸಿಕ್ಕ ಜಿಲೆಟಿನ್ ಕಡ್ಡಿ ಸೇರಿದಂತೆ ಏನೆಲ್ಲ ಸಿಕ್ಕಿದೆಯೋ ಅದನ್ನು ತನಿಖೆ ಮಾಡಲಾಗುತ್ತಿದೆ ಎಂದರು. ಎನ್ಐಎ ಕೂಡ ತನಿಖೆ ಮಾಡಲು ಕೇಳಿದ್ದಾರೆ. ಅವರಿಗೂ ತನಿಖೆ ಮಾಡಲು ಕೊಡುತ್ತೇವೆ. ಪ್ರಧಾನಿ ಬರುವ ಕಾರ್ಯಕ್ರಮಕ್ಕೆ ಹೈಲೆವೆಲ್ ಸೆಕ್ಯೂರಿಟಿ ಇರುತ್ತದೆ. ನಾವು ಹಾಗೂ ಕೇಂದ್ರ ಸೆಕ್ಯೂರಿಟಿ ಕೊಡುತ್ತೇವೆ. ರಾಜ್ಯ ಸರ್ಕಾರಕ್ಕೂ ಸೂಚನೆ ಬಂದಿರುತ್ತದೆ. ಭದ್ರತೆ ನೀಡಿರುತ್ತೇವೆ. ಕಾರ್ಯಕ್ರಮಕ್ಕೆ ಬರುವ ಎರಡು ಗಂಟೆ ಮುಂಚೆ ಅಂದರೆ ಬೆಳಗ್ಗೆ 9 ಗಂಟೆಗೆ ಜಿಲೆಟಿನ್ ಕಡ್ಡಿ ಪತ್ತೆ ಹಚ್ಚಿದ್ದಾರೆ. ಇದು…
ನವದೆಹಲಿ: ಬಾಲಿವುಡ್ನ ಖ್ಯಾತ ನಟಿ, ‘ನಾಗಿಣಿ’ ಖ್ಯಾತಿಯ ಮೌನಿ ರಾಯ್ ಅವರ ವೈವಾಹಿಕ ಜೀವನದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ. ಮೌನಿ ರಾಯ್ ಮತ್ತು ಅವರ ಪತಿ ಸೂರಜ್ ನಂಬಿಯಾರ್ ಪರಸ್ಪರ ಇನ್ಸ್ಟಾಗ್ರಾಮ್ನಲ್ಲಿ ಅನ್ಫಾಲೋ (Unfollow) ಮಾಡಿರುವುದು ಅಭಿಮಾನಿಗಳಲ್ಲಿ ಆತಂಕ ಮತ್ತು ಕುತೂಹಲವನ್ನು ಮೂಡಿಸಿದೆ. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದ ಈ ಜೋಡಿ ದಿಢೀರನೆ ಈ ನಿರ್ಧಾರ ತೆಗೆದುಕೊಂಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಸೋಷಿಯಲ್ ಮೀಡಿಯಾ ಪೋಸ್ಟ್ಗಳ ರಹಸ್ಯ: ಮೌನಿ ರಾಯ್ ಮತ್ತು ಸೂರಜ್ ನಂಬಿಯಾರ್ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಜೋಡಿ. ಪ್ರವಾಸದ ಫೋಟೋಗಳು, ಹಬ್ಬದ ಸಂಭ್ರಮ ಹಾಗೂ ಪರಸ್ಪರರ ಮೇಲಿರುವ ಪ್ರೀತಿಯನ್ನು ಫೋಟೋಗಳ ಮೂಲಕ ಹಂಚಿಕೊಳ್ಳುತ್ತಿದ್ದ ಇವರು, ಈಗ ಇನ್ಸ್ಟಾಗ್ರಾಮ್ನಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡುತ್ತಿಲ್ಲ. ಅಷ್ಟೇ ಅಲ್ಲದೆ, ಈ ಹಿಂದೆ ಹಂಚಿಕೊಂಡಿದ್ದ ಕೆಲವು ಫೋಟೋಗಳು ಡಿಲೀಟ್ ಆಗಿವೆ ಎಂಬ ಸುದ್ದಿಯೂ ಹರಿದಾಡುತ್ತಿದ್ದು, ಇದು ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತಿಗೆ ಪುಷ್ಟಿ ನೀಡುವಂತಿದೆ. ವದಂತಿಗಳಿಗೆ…
ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ಮಾದಕದ ಅಮಲಿನಲ್ಲಿದ್ದ ಪುಂಡರ ಗುಂಪೊಂದು ಸಾರ್ವಜನಿಕರ ಮೇಲೆ ಮಾರಕಾಸ್ತ್ರ ಬೀಸಿ ಹಣ ಹಾಗೂ ಮೊಬೈಲ್ ದೋಚಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೇ 5 ರಂದು ಜೆ.ಜೆ ನಗರ ವ್ಯಾಪ್ತಿಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಾರಕ ಆಯುಧಗಳನ್ನ ಹಿಡಿದು ಎಂಟ್ರಿ ಕೊಟ್ಟ ಐದಾರು ಯುವಕರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಮನಬಂದಂತೆ ಹಲ್ಲೆ ನಡೆಸಿದೆ. ಮಾದಕ ಪದಾರ್ಥಗಳನ್ನ ಸೇವಿಸಿ ಕಿಕ್ಕೇರಿಸಿಕೊಂಡಿದ್ದ ಆರೋಪಿಗಳು, ಸಾರ್ವಜನಿಕರಿಂದ ಬಲವಂತವಾಗಿ ಮೊಬೈಲ್ ಫೋನ್ಗಳು, ಹಣವನ್ನು ಕಿತ್ತುಕೊಂಡಿದ್ದಾರೆ. ಪುಂಡರು ಮಾರಕಾಸ್ತ್ರ ಬೀಸುತ್ತಿರುವ ದೃಶ್ಯಗಳು ಸ್ಥಳೀಯ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿದ ಜೆ.ಜೆ ನಗರ ಠಾಣೆ ಪೊಲೀಸರು ಓರ್ವ ಅಪ್ರಾಪ್ತ ಸೇರಿದಂತೆ ನಾಲ್ವರು ಆರೋಪಿಗಳನ್ನ ಬಂಧಿಸಿದ್ದಾರೆ. ಆದರೆ, ಘಟನೆ ನಡೆದು ಹಲವು ದಿನಗಳಾದರೂ ಪೊಲೀಸರು ಕೇವಲ ಒಬ್ಬಿಬ್ಬರನ್ನು ಬಂಧಿಸಿ ಕೈತೊಳೆದುಕೊಂಡಿದ್ದಾರೆ.
ಬೀದರ್ : ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬೀದರ್ ಸಮೀಪದ ತೆಲಂಗಾಣ ಕರ್ನಾಟಕದ ಗಡಿಯ ಬಳಿ ಒಂದು ಅಪಘಾತ ಸಂಭವಿಸಿದೆ. ಬಂಗ್ಲಾ ಮರ್ಜಾಪುರದ ನರಸಿಂಹಲು (54) ಮತ್ತು ಅರುಣ್ (22) ಮೃತರು ಎಂದು ತಿಳಿದುಬಂದಿದೆ. ಮೃತರ ಗುರುತು: ಅಪಘಾತದಲ್ಲಿ ಮೃತಪಟ್ಟವರನ್ನು ಬಂಗ್ಲಾ ಮರ್ಜಾಪುರ ಗ್ರಾಮದ ನಿವಾಸಿಗಳಾದ ನರಸಿಂಹಲು (54) ಮತ್ತು ಅರುಣ್ (22) ಎಂದು ಗುರುತಿಸಲಾಗಿದೆ. ಇಬ್ಬರು ತಮ್ಮ ಕೆಲಸ ನಿಮಿತ್ತ ಬೈಕ್ನಲ್ಲಿ ತೆರಳುತ್ತಿದ್ದಾಗ ವೇಗವಾಗಿ ಬಂದ ಸಾರಿಗೆ ಬಸ್ ಇವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಘಟನೆಯ ವಿವರ: ಪ್ರತ್ಯಕ್ಷದರ್ಶಿಗಳ ಪ್ರಕಾರ, ಸಾರಿಗೆ ಬಸ್ ಅತೀ ವೇಗವಾಗಿ ಚಲಿಸುತ್ತಿದ್ದದ್ದೇ ಈ ಅನಾಹುತಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಸ್ಥಳಕ್ಕೆ ಧಾವಿಸಿದರಾದರೂ, ಸವಾರರು ಅಷ್ಟರಲ್ಲೇ…
ನವದೆಹಲಿ : ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಇದೀಗ ರದ್ದುಗೊಳಿಸಿದೆ. ಮೇ 3ರಂದು ದೇಶಾದ್ಯಂತ ನೀಟ್ ಪರೀಕ್ಷೆ ನಡೆದಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ನೀಟ್ ಪರೀಕ್ಷೆಯನ್ನು ಇದೀಗ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆಯಲ್ಲಿ ಏನೋ ಒಂದು ಅಕ್ರಮ ನಡೆದಿದೆ ಎನ್ನುವ ಅನುಮಾನದ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದೀಗ ಮತ್ತೆ ಪರೀಕ್ಷೆ ನಡೆಸಬೇಕಾಗಿದ್ದು ಅದಕ್ಕೆ ಮತ್ತೆ ದಿನಾಂಕವನ್ನು ನಿಗದಿಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ. ಮೇ 3ರಂದು ದೇಶದ ವಿವಿಧ ಕೇಂದ್ರಗಳಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ, ಪರೀಕ್ಷೆ ಮುಗಿದ ಬೆನ್ನಲ್ಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಎನ್ಟಿಎ, ಪ್ರಶ್ನೆ ಪತ್ರಿಕೆಯ ಪಾವಿತ್ರ್ಯತೆಗೆ ಧಕ್ಕೆಯಾಗಿರುವ ಸಾಧ್ಯತೆಯನ್ನು ಮನಗಂಡು ಪರೀಕ್ಷೆಯನ್ನೇ ರದ್ದುಪಡಿಸುವ ಕಠಿಣ ತೀರ್ಮಾನಕ್ಕೆ ಬಂದಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾತ್ರವಲ್ಲದೆ, ಪರೀಕ್ಷಾ ಕೇಂದ್ರಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳು ನಡೆದಿರುವ…













