Author: kannadanewsnow05

ಚೆನ್ನೈ: ತಮಿಳುನಾಡು ರಾಜಕೀಯದ ಇತಿಹಾಸದಲ್ಲಿ ಇಂದು ಅಭೂತಪೂರ್ವ ತಿರುವು ಕಂಡುಬಂದಿದೆ. ಚಿತ್ರರಂಗದಿಂದ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ರಾಜ್ಯದ ಪ್ರಬಲ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಡಿಎಂಕೆಗೆ ಭರ್ಜರಿ ಶಾಕ್ ನೀಡಿದೆ. ಚೊಚ್ಚಲ ಚುನಾವಣೆಯಲ್ಲೇ ವಿಜಯ್ ಅಬ್ಬರದ ಪ್ರದರ್ಶನ ನೀಡುವ ಮೂಲಕ ತಮಿಳುನಾಡಿನ ರಾಜಕೀಯ ಸಮೀಕರಣವನ್ನೇ ಬದಲಿಸಿದ್ದಾರೆ. ಮುಖ್ಯಮಂತ್ರಿ ಸ್ಟಾಲಿನ್‌ಗೆ ಮುಖಭಂಗ ಈ ಬಾರಿಯ ಚುನಾವಣೆಯ ಅತ್ಯಂತ ದೊಡ್ಡ ಅಚ್ಚರಿ ಎಂದರೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು. ತಮ್ಮ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ಟಾಲಿನ್ ಅವರು ಪರಾಜಯಗೊಂಡಿದ್ದಾರೆ. ವಿಜಯ್ ಅವರ TVK ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ ಐತಿಹಾಸಿಕ ಜಯ ಸಾಧಿಸುವ ಮೂಲಕ ಇಡೀ ದೇಶದ ಗಮನ ಸೆಳೆದಿದ್ದಾರೆ. ಇದು ಡಿಎಂಕೆ ಪಾಲಿಗೆ ಜೀರ್ಣಿಸಿಕೊಳ್ಳಲಾಗದ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಚೆಪಾಕ್‌ನಲ್ಲಿ ಉದಯನಿಧಿ ಭರ್ಜರಿ ಜಯ ಒಂದೆಡೆ ಸ್ಟಾಲಿನ್ ಸೋಲನುಭವಿಸಿದ್ದರೆ, ಮತ್ತೊಂದೆಡೆ ಅವರ ಪುತ್ರ ಹಾಗೂ…

Read More

ಬೆಂಗಳೂರು : ಶೃಂಗೇರಿ ವಿಧಾನಸಭಾ ಚುನಾವಣೆಯಲ್ಲಿ ಅಂಚೆ ಮತ ಎಣಿಕೆಯಲ್ಲಿ ಟ್ವಿಸ್ಟ್ ಸಿಕ್ಕಿದ್ದು, ಬಿಜೆಪಿಯ ಡಿ.ಎನ್ ಜೀವರಾಜ್ ಶಾಸಕರ ಪ್ರಮಾಣ ಪತ್ರ ನೀಡಲಾಗಿದೆ. ಇನ್ನು ಈ ವಿಚಾರವಾಗಿ ಶೃಂಗೇರಿ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಇಡೀ ದೇಶಕ್ಕೆ ಮಾರಕವಾಗಿದೆ. ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಲ್ಲಿ KPCC ಕಚೇರಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಷ್ಟರಮಟ್ಟಿಗೆ ಕ್ರಿಮಿನಲ್ ಗಳಿದ್ದರೆಂದು ಅನ್ನಿಸಿರಲಿಲ್ಲ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಆದರೆ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವುದು ಷಡ್ಯಂತ್ರ. ಈ ಬಗ್ಗೆ ನಾವು ಸರ್ಕಾರದ ಮಟ್ಟದಲ್ಲಿ ತನಿಖೆ ಮಾಡಿಸುತ್ತೇವೆ. ನಮಗೆ ಅನುಮಾನ ಇದ್ದರೆ ಸುಪ್ರೀಂ ಕೋರ್ಟ್ ಗೆ ಹೋಗುತ್ತಿದ್ದೆವು. ಶೃಂಗೇರಿಯಲ್ಲಿ ಮತ ಎಣಿಕೆ ಬಾಕ್ಸ್ ಗಳನ್ನು ತೆರೆಯಲಾಗಿದೆ. ನಮಗೆ ಹಾಕಿದ್ದ ಬ್ಯಾಲೆಟ್ ಪೇಪರ್ ಗಳ ಮೇಲೆ ಮತ್ತೊಂದು ಗುರುತು. ಎಲ್ಲ ಬಂಡಲ್ ಮಾನ್ಯ ಎಂದ ಮೇಲೆ ಈ ತಿದ್ದುಪಡಿ ಹೇಗಾಯಿತು. ಹಿಂದೆ ಫಲಿತಾಂಶ…

Read More

ತಮಿಳುನಾಡು : ತಮಿಳುನಾಡಲ್ಲಿ TVK ಪಕ್ಷದ ನಾಯಕ ಹಾಗು ನಟ ವಿಜಯ್ ಭರ್ಜರಿ ಜಯ ಸಾಧಿಸಿದ್ದು, ಡಿಎಂಕೆ, ಹಾಗು ಎಐಡಿಎಂಕೆಗೆ ಶಾಕ್ ನೀಡಿದ್ದಾರೆ. ಇದೀಗ ತಮಿಳುನಾಡಲ್ಲಿ ಮುಖ್ಯಮಂತ್ರಿ ಎ..ಕೆ ಸ್ಟಾಲಿನ್ ಗೆ ಸೋಲಾಗಿದೆ.ಕೊಳತ್ತೂರು ಕ್ಷೇತ್ರದಲ್ಲಿ TVK ಅಭ್ಯರ್ಥಿ ವಿ.ಎಸ್ ಬಾಬು ವಿರುದ್ಧ ಸ್ಟಾಲಿನ್ ಗೆ ಸೋಲಾಗಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ಗೆ ಶಾಕ್: ಕೊಳತ್ತೂರಿನಲ್ಲಿ ಸೋಲು ಈ ಚುನಾವಣೆಯ ಅತಿ ದೊಡ್ಡ ಆಘಾತಕಾರಿ ಫಲಿತಾಂಶವೆಂದರೆ ಅದು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು. ಕಳೆದ ಹಲವು ಅವಧಿಗಳಿಂದ ಡಿಎಂಕೆಯ ಭದ್ರಕೋಟೆಯಾಗಿದ್ದ ಕೊಳತ್ತೂರು ಕ್ಷೇತ್ರದಲ್ಲಿ ಸ್ವತಃ ಸ್ಟಾಲಿನ್ ಅವರು ಪರಾಜಯಗೊಂಡಿದ್ದಾರೆ. ಅಚ್ಚರಿಯ ಫಲಿತಾಂಶದಲ್ಲಿ TVK ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ ಐತಿಹಾಸಿಕ ಜಯ ದಾಖಲಿಸುವ ಮೂಲಕ ತಮಿಳುನಾಡು ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ್ದಾರೆ. ಧೂಳೀಪಟವಾದ ದ್ರಾವಿಡ ಕೋಟೆಗಳು ವರ್ಷಗಳಿಂದ ತಮಿಳುನಾಡನ್ನು ಆಳುತ್ತಿದ್ದ ಡಿಎಂಕೆ ಮತ್ತು ಎಐಡಿಎಂಕೆ ಪಕ್ಷಗಳ ಅಧಿಪತ್ಯಕ್ಕೆ ವಿಜಯ್ ಅವರ TVK ಪಕ್ಷವು ಬ್ರೇಕ್ ಹಾಕಿದೆ. ಯುವ ಸಮೂಹ…

Read More

ಬೆಂಗಳೂರು : ದಾವಣಗೆರೆಯಲ್ಲಿ ಎಸ್‌ಡಿಪಿಐನ್ನು ಲೈಟ್ಆಗಿ ತೆಗೆದುಕೊಂಡಿರಲಿಲ್ಲ. ಅದು ಪೊಲಿಟಿಕಲ್ ಪಾರ್ಟಿ ಅಲ್ಲ. ಮುಸ್ಲಿಂ ನಾಯಕರು ಕೆಲಸ ಮಾಡಿಲ್ಲ ಅನ್ನೋ ಬಗ್ಗೆ ನಾನು ಮಾತನಾಡಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಚೆನ್ನಾಗಿ ನಡೆಯುತ್ತಿವೆ. ಎಸ್​ಡಿಪಿಐ ಓಟ್ ನಮಗೆ ಡೇಂಜರ್ ಆಗಿದೆ. ಇಷ್ಟು ಆಗಲಿದೆ ಅಂತ ನಿರೀಕ್ಷೆ ಮಾಡಿರಲಿಲ್ಲ. ಎಸ್​ಡಿಪಿಐ ಕೂಡ 12 ಸಾವಿರ ಓಟ್ ತೆಗೆದುಕೊಂಡಿದೆ. ಈ ಬಗ್ಗೆ ಸಿಎಂ ಕೂಡ ಮಾತಾನಾಡಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದಿಂದ ನಮ್ಮಲ್ಲಿ ಯಾವುದೇ ಬದಲಾವಣೆ ಆಗಲ್ಲ. ಕೆಲವರು ಖುಷಿ ಆಗಬಹುದು. ಕೆಲವರಿಗೆ ಬೇಜಾರಾಗಬಹುದು. ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರದಲ್ಲೇ ಏನೂ ಆಗಲಿಲ್ಲ. ಈಗ ಏನಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಓಟ್ ಡಿಲೀಟ್ ಮಾಡಿದ್ರು. ಮಷಿನ್ ಕೂಡ ಸಮಸ್ಯೆ ಮಾಡಿದ್ರು. ಗೆಲ್ಲಲೇಬೇಕು ಅನ್ನೋ ಕಾರಣಕ್ಕೆ ಬಿಜೆಪಿ ಏನೇನೋ ಮಾಡಿದ್ರು ಎಂದು ಆರೋಪಿಸಿದರು. ಅಸ್ಸಾಂ ಚುನಾವಣೆಯಲ್ಲಿ ಪಾರ್ಟಿ ಡ್ಯೂಟಿ ಮಾಡಿದ್ದೇನೆ. ಹೆಚ್ಚು ಸೀಟ್ ನಿರೀಕ್ಷೆ…

Read More

ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಮೂವರ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರ ಮೇಲೆ ಎಫ್‌ಐಆರ್ ದಾಖಲಿಸುವ ಮೂಲಕ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಅವರನ್ನು ಮೊದಲ ಆರೋಪಿ (A1), ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು ಎರಡನೇ ಆರೋಪಿ (A2) ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರನ್ನು ಮೂರನೇ ಆರೋಪಿಯನ್ನಾಗಿ (A3) ಹೆಸರಿಸಲಾಗಿದೆ. ಶೃಂಗೇರಿ ಕ್ಷೇತ್ರದ ಚುನಾವಣಾ ಫಲಿತಾಂಶದ ಬೆನ್ನಲ್ಲೇ ದಾಖಲಾಗಿರುವ ಈ ಕ್ರಿಮಿನಲ್ ಪ್ರಕರಣ ಇದೀಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಅಂಚೆ ಮತ ಎಣಿಕೆ ಟೇಬಲ್‌ನ ಏಜೆಂಟ್ ಆಗಿದ್ದ ಸುಧೀರ್ ಕುಮಾರ್ ಮುರೋಳ್ಳಿ ಅವರು ನೀಡಿದ ದೂರಿನ ಅನ್ವಯ…

Read More

ಬಾಗಲಕೋಟೆ / ದಾವಣಗೆರೆ : ತೀವ್ರ ಪೈಪೋಟಿಯಲ್ಲಿ ಕರ್ನಾಟಕದ ಎರಡು ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದ್ದು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಸ್ಪರ್ಧೆ ಮಾಡಿದ್ದರು. ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಸ್ಪರ್ಧೆ ಮಾಡಿದ್ದರು. 21ನೇ ಸುತ್ತಿನಲ್ಲಿ ಉಮೇಶ್ ಮೇಟಿ ಅವರಿಗೆ 21,866 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಒಟ್ಟು 97,841ಮತಗಳು ಬಂದಿದ್ದು ಇನ್ನು ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಬಂದಿವೆ. ಅದೇ ರೀತಿಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಭರ್ಜರಿ ಗೆಲುವು ಕಂಡಿದ್ದಾರೆ. 6430 ಮತಗಳಿಂದ ಸಮರ್ಥ ಶಾಮನವರು…

Read More

ದಾವಣಗೆರೆ : ಕರ್ನಾಟಕ ಚುನಾವಣೆಯಲ್ಲಿ ಈಗಾಗಲೇ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ವಿರುದ್ಧ ಬರೋಬ್ಬರಿ 22 ಸಾವಿರಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇದೀಗ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲೂ ಕೂಡ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಮರ್ಥ ಶಾಮನೂರು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಹೌದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಭರ್ಜರಿ ಗೆಲುವು ಕಂಡಿದ್ದಾರೆ. 6430 ಮತಗಳಿಂದ ಸಮರ್ಥ ಶಾಮನವರು ಅವರು ಗೆಲುವು ಸಾಧಿಸಿದ್ದಾರೆ.ಇನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರು ಸೋತಿದ್ದಾರೆ.ಇನ್ನು ಮೂರು EVM ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ವಿಳಂಬವಾಗುತ್ತಿದ್ದು ಈಗಾಗಲೇ ಸಮರ್ಥ ಶಾಮನೂರು ಬೆಂಬಲಿಗರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ

Read More

ಚೈನ್ನೈ: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಇಂದು ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ದಿನ. ದಳಪತಿ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಚುನಾವಣಾ ಅಖಾಡದಲ್ಲಿ ಅಭೂತಪೂರ್ವ ಮುನ್ನಡೆ ಸಾಧಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದೆ. ಸದ್ಯದ ಟ್ರೆಂಡ್ ಪ್ರಕಾರ, ಟಿವಿ ಕೆ ಪಕ್ಷವು 112ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ತಮಿಳುನಾಡಿನಲ್ಲಿ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಸರಳ ಬಹುಮತದ ಹೊಸ್ತಿಲಲ್ಲಿ ಟಿವಿ ಕೆ: ತಮಿಳುನಾಡಿನಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಟಿವಿ ಕೆ ಪಕ್ಷಕ್ಕೆ ಸರಳ ಬಹುಮತಕ್ಕೆ ಕೇವಲ 14 ಸ್ಥಾನಗಳ ಕೊರತೆ ಇದೆ. ಪ್ರಾದೇಶಿಕ ಪಕ್ಷಗಳ ಭದ್ರಕೋಟೆಯನ್ನು ಭೇದಿಸಿರುವ ವಿಜಯ್ ಅವರ ಸಂಘಟನಾ ಶಕ್ತಿ ಈಗ ಮ್ಯಾಜಿಕ್ ನಂಬರ್ ಹತ್ತಿರಕ್ಕೆ ಬಂದು ನಿಂತಿದೆ. ಈ ಫಲಿತಾಂಶವು ರಾಜ್ಯದ ಸಾಂಪ್ರದಾಯಿಕ ದ್ರಾವಿಡ ರಾಜಕಾರಣದಲ್ಲಿ ದೊಡ್ಡ ಬದಲಾವಣೆಯ ಮುನ್ಸೂಚನೆ ನೀಡಿದೆ. ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೆಗೆ ಎಸ್.ಎ. ಚಂದ್ರಶೇಖರ್ ಒಲವು: ಫಲಿತಾಂಶದ ಬೆನ್ನಲ್ಲೇ ನಟ ವಿಜಯ್ ಅವರ ತಂದೆ ಹಾಗೂ ಖ್ಯಾತ…

Read More

ಸಿನಿಮಾ ಪ್ರಿಯರಲ್ಲಿ ಭಾರಿ ಕುತೂಹಲ ಕೆರಳಿಸಿರುವ ‘ಲವ್ ಸೀಸನ್ಸ್’ ಚಿತ್ರದ ಸಂಗೀತ ಪಯಣ ಅಧಿಕೃತವಾಗಿ ಆರಂಭವಾಗಿದ್ದು, ಚಿತ್ರದ ಮೊದಲ ಲಿರಿಕಲ್ ವಿಡಿಯೋ ಸಾಂಗ್ “ಮಳೆಯಾಗೋ ಮೊದಲೇ” ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕೃತ್ವಿಕ್ ನಿರ್ದೇಶನದ ಈ ಚಿತ್ರವು ಒಂದು ಸುಂದರ ಪ್ರೇಮಕಥೆಯನ್ನು ಹೊತ್ತು ತರುತ್ತಿದ್ದು, ಆರಂಭದಲ್ಲೇ ತನ್ನ ಇಂಪಾದ ಸಂಗೀತದ ಮೂಲಕ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಹಾಡಿನ ವಿಶೇಷತೆಯೆಂದರೆ, ಇದಕ್ಕೆ ‘ಕಾಂತಾರ’ ಖ್ಯಾತಿಯ ಸಾಹಿತಿ ಪ್ರಮೋದ್ ಮರವಂತೆ ಅವರು ಅತ್ಯಂತ ಮೋಹಕವಾಗಿ ಸಾಹಿತ್ಯ ಬರೆದಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ವೀರ್ ಸಮರ್ಥ್ ಅವರ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಬಾಲಿವುಡ್‌ನ ಸ್ಟಾರ್ ಗಾಯಕ ಅರ್ಮಾನ್ ಮಲಿಕ್ ಮತ್ತು ಸರೆಗಮಪ ಸೀಸನ್ 10ರ ಪ್ರತಿಭೆ ಪ್ರಜ್ಞಾ ಮರಾಠೆ ಧ್ವನಿಯಾಗಿದ್ದಾರೆ. ಸದ್ಯ ಈ ಹಾಡು ‘ಎನ್‌.ಆರ್‌ ಸ್ಟುಡಿಯೋ’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಲಭ್ಯವಿದ್ದು, ಕೇಳುಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರದ ತಾರಾಗಣವೂ ಅಷ್ಟೇ ಸಮೃದ್ಧವಾಗಿದ್ದು, ನಾಯಕನಾಗಿ ಮುಕುಂದ ರಾಮಸ್ವಾಮಿ…

Read More

ಚಿಕ್ಕಮಗಳೂರು : ತೀವ್ರ ಗೊಂದಲ, ಹೈಡ್ರಾಮಾ ನಡುವೆ ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಶನಿವಾರ ತಡರಾತ್ರಿ ವೇಳೆಗೆ ಮುಕ್ತಾಯಗೊಂಡಿದ್ದು, 2023ರಲ್ಲಿ ಹಾಲಿ ಕಾಂಗ್ರೆಸ್‌ ಶಾಸಕ ಟಿ.ಡಿ.ರಾಜೇಗೌಡರು ಪಡೆದ ಮತಗಳ ಪೈಕಿ ಬರೋಬ್ಬರಿ 255 ಮತಗಳನ್ನು ಅಸಿಂಧು ಎಂದು ಪರಿಗಣಿಸಲಾಗಿದೆ. ಹೀಗಾಗಿ, ಪರಾಜಿತ ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌ ಗೆ ಇದೀಗ 52 ಮತಗಳ ಮುನ್ನಡೆ ಸಿಕ್ಕಿದೆ. ಇಂದು ಡಿ.ಎನ್.ಜೀವರಾಜ್‌ ಅವರಿಗೆ ಚುನಾವಣಾ ಅಧಿಕಾರಿ ಶಾಸಕ ಪ್ರಮಾಣ ಪತ್ರ ಹಸ್ತಾಂತರಿಸಿದರು. ಕಳೆದ 2023ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರು ಬಿಜೆಪಿಯ ಡಿ.ಎನ್.ಜೀವರಾಜ್ ವಿರುದ್ಧ ಕೇವಲ 201 ಮತಗಳ ಅಲ್ಪ ಅಂತರದಿಂದ ಜಯಗಳಿಸಿದ್ದರು. ಅಂದು ರಾಜೇಗೌಡರು ಇವಿಎಂ ಮತಗಳ ಎಣಿಕೆ ವೇಳೆ 324 ಮತಗಳ ಮುನ್ನಡೆ ಸಾಧಿಸಿದ್ದರು.ಆದರೆ, ಅಂಚೆ ಮತ ಪತ್ರದಲ್ಲಿ ಜೀವರಾಜ್‌ಗಿಂತ 123 ಮತಗಳ ಹಿನ್ನಡೆ ಉಂಟಾಗಿದ್ದರೂ ಒಟ್ಟಾರೆ 201 ಮತಗಳಿಂದ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ಜೀವರಾಜ್ ಅವರು ಹೈಕೋರ್ಟ್‌ಗೆ ಅರ್ಜಿ…

Read More