Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಜಾಗತಿಕವಾಗಿ ಆತಂಕ ಮೂಡಿಸುತ್ತಿರುವ ಮಾರಕ ಎಬೋಲಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈಗಿನಿಂದಲೇ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ಆರೋಗ್ಯ ಸಂಸ್ಥೆಗಳಿಗೆ ಇಲಾಖೆಯು ಮಹತ್ವದ ತುರ್ತು ಸುತ್ತೋಲೆಯೊಂದನ್ನು ಹೊರಡಿಸಿದೆ. ತಕ್ಷಣವೇ ವರದಿ ಮಾಡಲು ಕಡಾSubದಿ ಆದೇಶ ರಾಜ್ಯದಲ್ಲಿ ಎಬೋಲಾ ವೈರಸ್‌ನ ಯಾವುದೇ ಶಂಕಿತ ಅಥವಾ ದೃಢಪಟ್ಟ ಪ್ರಕರಣಗಳು ಕಂಡುಬಂದಲ್ಲಿ, ಅವುಗಳ ಬಗ್ಗೆ ಯಾವುದೇ ವಿಳಂಬವಿಲ್ಲದೆ ತಕ್ಷಣವೇ ಇಲಾಖೆಯ ಗಮನಕ್ಕೆ ತರಬೇಕು ಎಂದು ಸುತ್ತೋಲೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣವೇ ರೋಗಿಗಳ ವಿವರಗಳನ್ನು ದಾಖಲಿಸಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ‘IHIP’ ಪೋರ್ಟಲ್ ಮೂಲಕ ಮಾಹಿತಿ ಸಲ್ಲಿಕೆ ಎಬೋಲಾ ಪ್ರಕರಣಗಳ ನಿಖರ ಮತ್ತು ವೇಗದ ನಿಗಾ ವಹಿಸುವಿಕೆಗಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ. ಆಸ್ಪತ್ರೆಗಳು ಯಾವುದೇ ಶಂಕಿತ ಪ್ರಕರಣವನ್ನು ತಕ್ಷಣವೇ ‘IHIP’ (Integrated Health Information Platform) ಅಂದರೆ ಸಮಗ್ರ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬೆಳವಣಿಗೆಯೊಂದರಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಅಚ್ಚರಿಯ ರೀತಿಯಲ್ಲಿ ನೇಮಕಗೊಂಡಿದ್ದಾರೆ. ಈ ದಿಢೀರ್ ನೇಮಕಾತಿಯು ಕಾಂಗ್ರೆಸ್ ವಲಯದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಪಕ್ಷದ ಸಂಘಟನೆಗೆ ಹೊಸ ದಿಕ್ಕು ಸಿಕ್ಕಂತಾಗಿದೆ. ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. “ಯಾರಿಗೆ ಅಧಿಕಾರ ಬೇಕೋ ಅವರು ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಹೋಗಲಿ, ಆದರೆ ಯಾರಿಗೆ ಪಕ್ಷವನ್ನು ತಳಮಟ್ಟದಿಂದ ಬೆಳೆಸಬೇಕೆಂಬ ಹಂಬಲವಿದೆಯೋ ಅವರು ನನ್ನ ಜೊತೆಗೆ ಬನ್ನಿ” ಎಂದು ಮುಕ್ತವಾಗಿ ಕರೆ ನೀಡಿದ್ದಾರೆ. ಮುಂದುವರಿದು ಮಾತನಾಡಿದ ಅವರು, ಪಕ್ಷ ಮತ್ತು ಸರ್ಕಾರದ ನಡುವೆ ಸಮತೋಲನ ಕಾಯ್ದುಕೊಳ್ಳುವ ಅಗತ್ಯವನ್ನು ಒತ್ತಿಹೇಳಿದರು. “ಸರ್ಕಾರದಲ್ಲಿ ಬೇರೆ ಬೇರೆ ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವ ಎಲ್ಲರಲ್ಲೂ ನಾನು ಕಳಕಳಿಯಿಂದ ಪ್ರಾರ್ಥನೆ ಮಾಡುತ್ತೇನೆ. ನಾವು ಸಂಘಟನೆ ಮತ್ತು ಸರ್ಕಾರವನ್ನು…

Read More

ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ಶಹಬಾದ್ ತಾಲೂಕಿನಲ್ಲಿ ಅತ್ಯಂತ ಹೃದಯವಿದ್ರಾವಕ ಘಟನೆಯೊಂದು ಸಂಭವಿಸಿದ್ದು, ಆಟವಾಡಲು ಕಾರಿನೊಳಗೆ ಹೊಕ್ಕ ಮೂರು ವರ್ಷದ ಕಂದಮ್ಮನೊಂದು ಉಸಿರುಗಟ್ಟಿ ದುರಂತವಾಗಿ ಸಾವನ್ನಪ್ಪಿದೆ. ತಾಲೂಕಿನ ತೊನಸನಹಳ್ಳಿ ಗ್ರಾಮದಲ್ಲಿ ನಡೆದಿರುವ ಈ ಘಟನೆ ಇಡೀ ಜಿಲ್ಲೆಯನ್ನು ಕಣ್ಣೀರಿಡುವಂತೆ ಮಾಡಿದ್ದು, ಪೋಷಕರಲ್ಲಿ ತೀವ್ರ ಆತಂಕ ಹಾಗೂ ಸಾರ್ವಜನಿಕರಲ್ಲಿ ತೀವ್ರ ದಿಗ್ಭ್ರಮೆ ಮೂಡಿಸಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಕೊಟ್ಟೂರೇಶ್ವರ ಮುತ್ಯಾ ಎಂಬುವರ ಮೂರು ವರ್ಷದ ಪುತ್ರ ಬಸವಪ್ರಭು ಎಂದು ಗುರುತಿಸಲಾಗಿದೆ. ಎಂದಿನಂತೆ ಪೋಷಕರು ಮಗುವನ್ನು ಕಾರಿನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದರು. ಆದರೆ, ವಿಧಿಯ ಆಟ ಬೇರೆಯೇ ಆಗಿತ್ತು. ಕ್ಷಣಾರ್ಧದ ಬೇಜವಾಬ್ದಾರಿತನ ಅಥವಾ ಅಜಾಗರೂಕತೆ ಇಡೀ ಕುಟುಂಬಕ್ಕೆ ಎಂದಿಗೂ ಮರೆಯಲಾಗದ ದೊಡ್ಡ ದುಃಖವನ್ನು ತಂದಿಟ್ಟಿದೆ. ಘಟನೆಯ ಹಿನ್ನೆಲೆ: ಮಾಹಿತಿಯ ಪ್ರಕಾರ, ಪೋಷಕರು ಮಗುವಿನೊಂದಿಗೆ ಶಾಲೆಯ ಬಳಿ ಬಂದು ಕಾರನ್ನು ಪಾರ್ಕ್ ಮಾಡಿದ್ದರು. ಆದರೆ, ಕಾರಿನ ಡೋರ್‌ಗಳನ್ನು ಸರಿಯಾಗಿ ಲಾಕ್ ಮಾಡದೆ ಹಾಗೇ ಬಿಟ್ಟು ತೆರಳಿದ್ದರು ಎನ್ನಲಾಗಿದೆ. ಇದೇ ವೇಳೆ ಪೋಷಕರ ಕಣ್ಣು ತಪ್ಪಿಸಿ ಆಟವಾಡುತ್ತಾ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಏಳು ತಿಂಗಳ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ದೊಡ್ಡಮೂಡಹಳ್ಳಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ ಮುಬಾರಕ್ (70) ಹಾಗೂ 7 ತಿಂಗಳ ಗಂಡು ಮಗು ಸಾವನ್ನಪ್ಪಿದೆ ಇನ್ನೂ ಘಟನೆಯಲ್ಲಿ ಐವರಿಗೆ ಗಂಭೀರವಾದ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚಾಮರಾಜನಗರ ಸಂಚಾರಿ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಸಚಿವ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಒಂದು ಹಂತಕ್ಕೆ ಬಂದಿದ್ದು, ಹೊಸ ಸರ್ಕಾರ ಅಧಿಕೃತವಾಗಿ ಕಾರ್ಯಾರಂಭ ಮಾಡಿದೆ. ನಿನ್ನೆ ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಿ.ಕೆ. ಶಿವಕುಮಾರ್ ಅವರು ಅಜ್ಜಯ್ಯನ ಹೆಸರಿನಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿಗಳ ಜೊತೆಯಲ್ಲೇ ಒಟ್ಟು 14 ಶಾಸಕರು ನೂತನ ಸಚಿವರಾಗಿ ಪದಗ್ರಹಣ ಮಾಡಿರುವುದು ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ಮುಗಿಯುತ್ತಿದ್ದಂತೆ, ನೂತನವಾಗಿ ಸಚಿವರಾದ 13 ಪ್ರಮುಖ ನಾಯಕರುಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಹಿರಿಯ ಹಾಗೂ ಅನುಭವಿ ನಾಯಕರುಗಳಿಗೆ ಪ್ರಮುಖ ಖಾತೆಗಳನ್ನು ನೀಡಲಾಗಿದ್ದು, ನಿರೀಕ್ಷಿತ ನಾಯಕರಿಗೆ ಅವರದ್ದೇ ಆದ ಆದ್ಯತೆಯ ಇಲಾಖೆಗಳನ್ನು ವಹಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಈ ಹಿಂದಿನ ಚರ್ಚೆಗಳಿಗೆ ಹೋಲಿಸಿದರೆ ಸದ್ಯ ಹಂಚಿಕೆಯಾಗಿರುವ ಪಟ್ಟಿಯಲ್ಲಿ ಕೆಲವರಿಗೆ ಖಾತೆಗಳು ಅದಲು ಬದಲಾಗಿವೆ ಎಂಬ ಮಾತುಗಳು ರಾಜಕೀಯ ವಲಯದಿಂದ ಕೇಳಿಬರುತ್ತಿವೆ. ಖಾತೆ ಹಂಚಿಕೆಯ ಪ್ರಮುಖ ವಿವರಗಳನ್ನು…

Read More

ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದೆ. ಕಳೆದ ಕೆಲವು ವರ್ಷಗಳಿಂದ ಸುಂದರ ಸಂಸಾರ ನಡೆಸುತ್ತಿದ್ದ ಈ ಜೋಡಿ, ಈಗ ತಮ್ಮ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಮುಕ್ತಾಯ ಹಾಡಲು ನಿರ್ಧರಿಸಿದೆ. ಮದುವೆಯಾಗಿ ಕೇವಲ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಹಲವು ವರ್ಷಗಳ ಕಾಲ ಪ್ರೀತಿಯಲ್ಲಿದ್ದರು. ಇಬ್ಬರ ನಡುವಿನ ಪ್ರೀತಿ ಮಾಗಿದ ನಂತರ, 2022ರ ಜನವರಿ 5 ರಂದು ಶುಭಾ ಪೂಂಜಾ ಅವರ ಸ್ವಂತ ಊರಿನಲ್ಲಿ ಅತ್ಯಂತ ಸರಳವಾಗಿ, ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಇವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಂದರವಾಗಿಯೇ ಸಾಗುತ್ತಿದ್ದ ಇವರ ಸಂಸಾರದಲ್ಲಿ ಈಗ ಬಿರುಕು…

Read More

ಚಿಕ್ಕಬಳ್ಳಾಪುರ : ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ವೃದ್ಧ ದಂಪತಿಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಸಾಧಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಅಪಘಾತದಲ್ಲಿ ವಿರುದ್ಧ ದಂಪತಿಗಳಾದ ಲಕ್ಷ್ಮಣ (75) ಮತ್ತು ರತ್ನಮ್ಮ (70) ಸಾವನಪ್ಪಿದ್ದಾರೆ. ಮೃತ ದಂಪತಿ ಶಿಡ್ಲಘಟ್ಟ ತಾಲೂಕಿನ ತಿರುಕಾಚೇನಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಟಿವಿಎಸ್ ಎಕ್ಸೆಲ್ ವಾಹನದಲ್ಲಿ ವೃದ್ಧ ದಂಪತಿಗಳು ತೆರಳುತ್ತಿದ್ದರು. ಈ ವೇಳೆ ಬಸ್ ಬರೋದನ್ನು ನೋಡದೆ ರಸ್ತೆ ತಿರುವು ಪಡೆದಾಗ ಬಸ್ ಡಿಕ್ಕಿ ಹೊಡೆದಿದೆ. ಟಿ ವಿ ಎಸ್ ಗೆ ಹಿಂದಿನಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶದ ಕದಿರೆಯಿಂದ ಕೆಎಸ್ಆರ್ಟಿಸಿ ಬಸ್ ಬೆಂಗಳೂರಿಗೆ ಬರುತ್ತಿತ್ತು. ಪೆರೆಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ

Read More

ನವದೆಹಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸರ್ಕಾರಿ ನೌಕರನೊಬ್ಬನನ್ನು ಅಪರಾಧಿ ಎಂದು ಸಾಬೀತುಪಡಿಸಲು ಆತನೇ ನೇರವಾಗಿ ಲಂಚದ ಹಣವನ್ನು ಕೈಯಾರೆ ಸ್ವೀಕರಿಸಿರಬೇಕು ಎಂಬ ನಿಯಮವೇನೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಧಿಕಾರಿಯ ಪರವಾಗಿ ಮಧ್ಯವರ್ತಿಗಳು ಅಥವಾ ಇನ್ಯಾರೇ ಲಂಚ ಪಡೆದಿದ್ದರೂ, ಅದಕ್ಕೆ ಸಂಬಂಧಪಟ್ಟ ಸರ್ಕಾರಿ ನೌಕರನನ್ನೇ ನೇರ ಹೊಣೆಗಾರನನ್ನಾಗಿ ಮಾಡಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶ ವಜಾ: ಈ ಪ್ರಮುಖ ತೀರ್ಪಿನ ಮೂಲಕ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪೊಲೀಸ್‌ ಠಾಣೆಯ ಪಿಎಸ್‌ಐ ಕೆ. ರಂಗಯ್ಯ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್, ಪಿಎಸ್‌ಐ ರಂಗಯ್ಯ ಅವರು ನೇರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿಲ್ಲ ಅಥವಾ ಹಣವನ್ನು ವೈಯಕ್ತಿಕವಾಗಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಿ 2023ರ ಜೂನ್‌ನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆ‌ರ್ ಅನ್ನು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದೆ. ಜೂನ್ 3ರ ಬುಧವಾರದಂದು ರಾಜಭವನದಲ್ಲಿ ಆಯೋಜಿಸಲಾಗಿರುವ ಸರಳ ಸಮಾರಂಭದಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೊಸ ಸರ್ಕಾರದ ರಚನೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ, ನೂತನ ಸಚಿವ ಸಂಪುಟ ಸೇರ್ಪಡೆ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಭಾರಿ ತಲೆನೋವು ಶುರುವಾಗಿದೆ. ಯಾರಿಗೆ ಸಚಿವ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎಂಬುದು ಸದ್ಯದ ದೊಡ್ಡ ಸವಾಲಾಗಿದೆ. ದೆಹಲಿಗೆ ದೌಡಾಯಿಸಿದ ಸಿದ್ದರಾಮಯ್ಯ, ಡಿಕೆಶಿ ಸಚಿವ ಸಂಪುಟ ರಚನೆಯ ಗೊಂದಲವನ್ನು ಬಗೆಹರಿಸಿಕೊಳ್ಳಲು ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹೈಕಮಾಂಡ್‌ನ ಪ್ರಮುಖ ನಾಯಕರೊಂದಿಗೆ ಇವರಿಬ್ಬರೂ ಮಹತ್ವದ ಸಭೆ ನಡೆಸಲಿದ್ದು, ಯಾರಿಗೆ ಯಾವ ಸಚಿವ ಸ್ಥಾನ ನೀಡಬೇಕು ಮತ್ತು ಖಾತೆಗಳ ಹಂಚಿಕೆ ಹೇಗೆ ಮಾಡಬೇಕು ಎನ್ನುವುದರ ಕುರಿತು ಸುದೀರ್ಘ ಚರ್ಚೆ ನಡೆಸಲಿದ್ದಾರೆ. ಆದರೆ, ಈ ಇಬ್ಬರು…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐತಿಹಾಸಿಕ ಗೆಲುವಿನ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಭಾನುವಾರ ನಡೆದ ಐಪಿಎಲ್ 2026ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ಜಯಭೇರಿ ಬಾರಿಸುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿಗೆ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಈ ಅಭೂತಪೂರ್ವ ಗೆಲುವನ್ನು ಸಂಭ್ರಮಿಸಲು ನಗರದಾದ್ಯಂತ ಅಭಿಮಾನಿಗಳು ಬೀದಿಗಿಳಿದಿದ್ದು, ಇಡೀ ಬೆಂಗಳೂರು ಕೆಂಪು ಮತ್ತು ಚಿನ್ನದ ಬಣ್ಣದಿಂದ ಕಂಗೊಳಿಸುತ್ತಿದೆ. ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಅಭಿಮಾನಿಗಳ ಹರ್ಷೋದ್ಗಾರ ಜೋರಾಗಿತ್ತು. ಭಾನುವಾರ ತಡರಾತ್ರಿಯಿಡೀ ನಗರದ ಪ್ರಮುಖ ರಸ್ತೆಗಳಲ್ಲಿ ಅಭಿಮಾನಿಗಳು ಬೈಕ್ ರ್ಯಾಲಿಗಳನ್ನು ನಡೆಸಿದರು. ‘ಈ ಸಲ ಕಪ್ ನಮ್ದೆ’ ಎಂಬ ಘೋಷಣೆಯ ಜೊತೆಗೆ ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಕೋರಮಂಗಲ ಹಾಗೂ ಇಂದಿರಾನಗರ ಸೇರಿದಂತೆ ನಗರದ ಪ್ರಮುಖ ಜಂಕ್ಷನ್‌ಗಳು ಅಭಿಮಾನಿಗಳಿಂದ ಹೌಸ್‌ಫುಲ್ ಆಗಿದ್ದವು. ಮದ್ಯಪಾನ ಮಾಡಿ ವಾಹನ ಚಾಲನೆ: ಪೊಲೀಸರ ಭರ್ಜರಿ ಬೇಟೆ ಒಂದೆಡೆ ವಿಜಯೋತ್ಸವದ ಸಂಭ್ರಮ ಮಿತಿಮೀರುತ್ತಿದ್ದರೆ,…

Read More