Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ಲೋಕಾಯುಕ್ತ ಪೊಲೀಸರ ಪರವಾಗಿ ಎಸ್ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು. ಇವೇಳೆ ವಾದ ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿತು. ಮೂರು ಜಿಲ್ಲೆಗಳ ಸಿಬ್ಬಂದಿಯೊಂದಿಗೆ ಲೋಕಾಯುಕ್ತ ಪೊಲೀಸರು ಕೆಲಸ ಮಾಡಿದ್ದಾರೆ. ಕೇಸ್ ಡೈರಿ ತಾವು ಪರಿಶೀಲಿಸಿದರೆ ತನಿಖೆ ನಡೆಸುವುದು ತಿಳಿಯುತ್ತದೆ. ಅವರು ಅದನ್ನು ಬಹಿರಂಗಪಡಿಸದಂತೆ ನಿರ್ಬಂಧಿಸಲು ಎಸ್ಪಿಪಿ ಮನವಿ ಮಾಡಿದರು. ಕೋರ್ಟಿಗೆ ಲೋಕಾಯುಕ್ತ ಎಸ್ಪಿಪಿ ವೆಂಕಟೇಶ್ ಅರಬ್ಬಟ್ಟಿ ಮರವಿ ಮಾಡಿದರು. ಲೋಕಾಯುಕ್ತ ಪೊಲೀಸ್ರಿಂದ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಕೆಯಾಗಿದ್ದು ತನಿಖೆ ಅಂತಿಮ ಹಂತದಲ್ಲಿ ಇದೆ ತನಿಕೆಯನ್ನು ಅನಗತ್ಯವಾಗಿ ವಿಳಂಬಿಸುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಕೇಸ್ ಡೈರಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವುದಾಗಿ ಎಸ್ಪಿಪಿ ವೆಂಕಟೇಶ್ ಅರಬಟ್ಟಿ ಹೇಳಿಕೆ ನೀಡಿದರು. ಬಿ ರಿಪೋರ್ಟ್ ಮೇಲೆ ಕೋರ್ಟ್ ಆದೇಶ ನೀಡುವುದನ್ನು ಮುಂದೂಡಿತ್ತು. ತನಿಖೆ ಪೂರ್ಣಗೊಳ್ಳಲಿ…
GOOD NEWS : ಆದಾಯ ಮಿತಿ ಪರಿಷ್ಕರಣೆಗೆ ಹಿನ್ನೆಲೆ, ಯಾವುದೇ ‘BPL’ ಕಾರ್ಡ್ ರದ್ದು ಮಾಡಲ್ಲ : ಸಚಿವ ಕೆ.ಹೆಚ್.ಮುನಿಯಪ್ಪ
ಬೆಳಗಾವಿ : ರಾಜ್ಯ ಸರ್ಕಾರ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್ದಾರರ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಗೆ ಮಿತಿಗೊಳಿಸಿದೆ. ಆದರೆ, ಕೂಲಿ ಕೆಲಸಗಾರರಿಗೂ ನಿತ್ಯ 500 ರೂ. ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಳಿಗೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಾದಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ…
ಬೆಳಗಾವಿ : ಹಣಕಾಸು ಇಲಾಖೆಯಿಂದ ಬಿಡುಗಡೆ ಆಗಿರುವ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು ಎಂಬ ವಿಪಕ್ಷಗಳ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ. ಅಂದಮೇಲೆ ಅದು ಎಲ್ಲಿ ಹೋಗುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ಬುಧವಾರ ವಿಧಾನಸಭೆಯಲ್ಲಿ ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಕೊನೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ಬಂದು ವಿಷಾದ ಮತ್ತು ಕ್ಷಮೆ ಕೇಳಿದ್ದರು. ಅಲ್ಲದೆ, ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ವ್ಯತ್ಯಯದ ಬಗ್ಗೆಯೂ ಸದನದಲ್ಲಿ ಸಚಿವರು ಒಪ್ಪಿಕೊಂಡಿದ್ದರು. ಆರ್ಥಿಕ ಇಲಾಖೆಯಿಂದ ಪ್ರತಿ ಒಂದನೇ ತಾರೀಖು ದುಡ್ಡು ಬಿಡುಗಡೆ ಆಗುತ್ತದೆ. ಹಣ ಬಿಡುಗಡೆ ಆದ ತಕ್ಷಣವೇ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತೇವೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳುಗಳ ಹಣ ಬಿಡುಗಡೆ ಹೆಚ್ಚು ಕಮ್ಮಿ ಆಗಿದ್ದರೆ, ಹಣಕಾಸು…
ಶಿವಮೊಗ್ಗ : ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಯಿಂದ ಶಿವಮೊಗ್ಗ ಜನತೆ ಬೆಚ್ಚಿ ಬಿದ್ದಿದ್ದಾರೆ. ASI ಅಮೃತಾಬಾಯಿ ಕತ್ತಿನಲ್ಲಿದ್ದ 60 ಗ್ರಾಂ ಮಾಂಗಲ್ಯಸರ ಕಳವು ಮಾಡಲಾಗಿದೆ. ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿದ್ದರು. ಈ ವೇಳೆ ಬಂದೋ ಬಸ್ತ್ ಗೆ ASI ಅಮೃತಾಬಾಯಿ ನಿಯೋಜನೆ ಮಾಡಲಾಗಿತ್ತು. ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ. ಪೊಲೀಸ್ ಅಧಿಕಾರಿ ಎನ್ನುವ ಭಯವೇ ಇಲ್ಲವಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್ಸೆಂಟರ್ನ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್ಗಳಲ್ಲಿಯೂ ಪೊಲೀಸ್ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಇದೀಗ ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ…
ಚಾಮರಾಜನಗರ : ಚಾಮರಾಜನಗರದಲ್ಲಿ ಕಾಡಾನೆ ದಾಳಿ ಮುಂದುವರೆದಿದೆ ಇದಿಗ ಕಾಡಾನೆ ದಾಳಿಗೆ ಬೈಕ್ ಸವಾರನೊಬ್ಬ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜಲ್ಲಿಪಾಳ್ಯ ಸಮೀಪ ಘಟನೆ ಸಭವಿಸಿದೆ. ಬೈಕ್ ಸವಾರ ಶಿವಮೂರ್ತಿ (50) ಎನ್ನುವವರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯದಿಂದ ಮೂಕನಪಾಳ್ಯಕ್ಕೆ ಬೈಕ್ ನಲ್ಲಿ ತೆರಳುವಾಗ ಆನೆ ದಾಳಿ ಮಾಡಿದೆ. ಕೂಲಿ ಕೆಲಸ ಮುಗಿಸಿ ವಾಪಸ್ ಆಗುವ ವೇಳೆ ಒಂಟಿ ಸಲಗ ದಾಳಿ ಮಾಡಿದೆ. ಬಾಳೆ ಕಟಾವು ಬಳಿಕ ಬೈಕ್ ನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಸ್ಥಳದಲ್ಲೇ ಶಿವಮೂರ್ತಿ ಮೃತಾಪಟ್ಟಿದ್ದಾರೆ. ಸ್ಥಳಕ್ಕೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಧಾರವಾಡ : ಹೈಟೆನ್ಷನ್ ವಿದ್ಯುತ್ ವೈರ್ ಸ್ಪರ್ಶದಿಂದ ಇದೀಗ ಯುವಕ ಸಾವನಪ್ಪಿದ್ದಾನೆ. ಲಾರಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಯಂತ್ರ ಸಾಗಣೆ ವೇಳೆ ಈ ಒಂದು ಘಟನೆ ನಡೆದಿದೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ. ಮೃಣಾಲ್ ಸಕ್ಕರೆ ಕಾರ್ಖಾನೆಗೆ ಯಂತ್ರ ತರುತ್ತಿದ್ದಾಗ ಘಟನೆ ಸಂಭವಿಸಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾಲಿಕತ್ವದ ಮೃಣಾಲ್ ಸಕ್ಕರೆ ಕಾರ್ಖಾನೆ , ಬುಡಕಲಕಟ್ಟಿ ಗ್ರಾಮದ ಬಳಿ ಇರುವ ಮೃಣಾಲ್ ಶುಗರ್ ಕಾರ್ಖಾನೆಗೆ ನಂದಗಡದಿಂದ ಲಾರಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಯಂತ್ರ ಸಾಗಣೆ ಮಾಡಲಾಗುತ್ತಿತ್ತು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಿಂದ ಯಂತ್ರ ಸಾಗಣೆ ಮಾಡುತ್ತಿದ್ದ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಾಗಿದೆ. ವಿದ್ಯುತ್ ವೈರ್ ಮೇಲೆ ಯುವಕ ಸಾವನಪ್ಪಿದ್ದಾನೆ. ವಿದ್ಯುತ್ ಪ್ರವಹಿಸಿ ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ನಿನ್ನೆ ಸದನದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಿಪಕ್ಷಗಳು ರಾಜ್ಯ ಸರ್ಕಾರದವರು ಇದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು ತಿಂಗಳ ಕಂತು ಹಣ ಬಾಕಿ ಇದೆ ಎಂದು ಒಪ್ಪಿಕೊಂಡು ಸರಿಯಾದ ವ್ಯಕ್ತಿ ಪಡಿಸಿದ್ದರು. ಇದೀಗ ಚುನಾವಣೆ ಪೂರ್ವ ಕರ್ನಾಟಕದ ಮಹಿಳೆಯರಿಗೆ ಮಾಡಿದಂತ ವಾಗ್ದಾನ ಏನು ಇತ್ತೋ ಆ ವಾಗ್ದಾನ ಸಂಪೂರ್ಣವಾಗಿ ಬದ್ಧತೆಯಿಂದ ನಾವು ನಮ್ಮ ಸರ್ಕಾರ ನಮ್ಮ ಇಲಾಖೆ ನಿಭಾಯಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸರಿಯಾದ ರೀತಿಯಲ್ಲಿ ಗೃಹಲಕ್ಷ್ಮಿ ಹಣ ಹಾಕುತ್ತಿದ್ದೇವೆ 23 ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಹಾಕಿದ್ದೇವೆ. 46 ಸಾವಿರ ರೂಪಾಯಿ ಒಬ್ಬರಿಗೆ ಬಂದಿದೆ. ಆಗಸ್ಟ್ ವರೆಗೂ ಕ್ಲಿಯರ್ ಇದೆ. 23 ಕಂತುಗಳಲ್ಲಿ ಈಗಾಗಲೇ ಹಣ ಹಾಕಿದ್ದೇವೆ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಆಗಿದ್ದೇನೆ. ಇವರು ಕೇಳಿದ್ದು ಫೆಬ್ರವರಿ ಮಾರ್ಚ್ ತಿಂಗಳದ್ದು, ಫೈನಾನ್ಸಿಯಲ್ ಡಿಪಾರ್ಟ್ಮೆಂಟ್ಗೆ ಪ್ರತಿ ತಿಂಗಳು ನಮ್ಮ ಇಲಾಖೆಯಿಂದ ನಾನು ಫೈಲ್ ಮಾಡುತ್ತೇನೆ. 1ನೇ ತಾರೀಕು ಅಥವಾ 3ನೇ…
ಬೆಂಗಳೂರು : ಇತ್ತೀಚಿಗೆ ಹೃದಯಘಾತ ಎನ್ನುವುದು ಸಾಮಾನ್ಯವಾಗಿ ಬಿಟ್ಟಿದೆ ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರು ಸಹ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ವ್ಯಕ್ತಿಯೊಬ್ಬರು ಲಘು ಹೃದಯಾಘಾತಕ್ಕೆ ಒಳಗಾಗಿ, ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ. ಆತನ ಪತ್ನಿ ಸಹಾಯಕ್ಕೆ ಅಂಗಲಾಚಿದರೂ ಯಾರೊಬ್ಬರೂ ಕೂಡ ಅವರ ನೋವಿಗೆ ಸ್ಪಂದಿಸಿಲ್ಲ. ಹೌದು ಇಂದಿನ ಕಾಲದಲ್ಲಿ ಮಾನವೀಯತೆ ಕರುಣೆ ಅನ್ನೋದು ಅತ್ಯಂತ ವಿರಳವಾಗಿದೆ.ವ್ಯಕ್ತಿಯೊಬ್ಬ ನಡುರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ ಆತನನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಸಕಾಲದಲ್ಲಿ ಅಂಬ್ಯುಲೆನ್ಸ್ ಲಭ್ಯವಾಗಲಿಲ್ಲ.. ರಸ್ತೆಯಲ್ಲಿ ಜನರ ಸಹಾಯಕ್ಕಾಗಿ ಅವರ ಹೆಂಡತಿ ಅಂಗಲಾಚಿದರೂ ಯಾರೊಬ್ಬರು ಅವರ ನೋವಿಗೆ ಸ್ಪಂದಿಸದೆ ಮಾನವೀಯತೆ ತೋರದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ವರದಿಯಾಗಿದೆ. ನಗರದ ಬಾಲಾಜಿ ನಗರದ ಮೋಟಾರ್ ವಾಹನ ಮೆಕ್ಯಾನಿಕ್ ಆಗಿದ್ದ 34ವರ್ಷದ ವೆಂಕಟರಮಣನ್ ಡಿಸೆಂಬರ್ 13ರ ಮುಂಜಾನೆ ಎದೆ ನೋವಿನಿಂದ ಅಸ್ವಸ್ಥರಾಗಿದ್ದರು. ಈ ವೇಳೆ ಅಂಬ್ಯುಲೆನ್ಸ್ ಸಿಗದ ಕಾರಣ ಅವರ ಪತ್ನಿ ರೂಪಾ ಪತಿಯನ್ನು ದ್ವಿಚಕ್ರ ವಾಹನದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗೆ…
ಬೆಳಗಾವಿ : ರಾಜ್ಯದಲ್ಲಿ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ 4000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಪರಿಷತ್ ವಿಪಕ್ಷ ನಾಯಕ ಕೆಲವಾದಿ ನಾರಾಯಣಸ್ವಾಮಿ ಟ್ವೀಟ್ ಮುಖಾಂತರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸದ್ಯದ ರಾಜ್ಯದ ಆರ್ಥಿಕ ಸಮಸ್ಯೆಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ತಿರುಗಟು ನೀಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ 2023ರಲ್ಲಿ ಅಧಿಕಾರ ಬಿಟ್ಟುಕೊಟ್ಟ ಸಂದರ್ಭದಲ್ಲಿ 80,000 ಕೋಟಿ ಬಿಲ್ ಬಾಕಿ ಇತ್ತು. ಆಮೇಲೆ ಬಜೆಟ್ ನಲ್ಲಿ ಇರುವುದನೆಲ್ಲಾ ಅನುಮೋದನೆ ಮಾಡಿಕೊಂಡರು. ಬಜೆಟ್ ನಲ್ಲಿ ಇಲ್ಲದೆ ಇರುವಂತ ನಾಲ್ಕು ಲಕ್ಷ ಕೋಟಿ ಬಜೆಟೆ ಇಲ್ಲ ಆದರೂ ಅನುಮೋದನೆ ಮಾಡಿಕೊಂಡರು. ಅವರು ಮಾಡಿರುವಂತಹ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ. ನಮ್ಮ ಶಕ್ತಿ ಯೋಜನೆಯಲ್ಲಿ 11748 ಕೋಟಿ ಬಿಡುಗಡೆಯಾಗಿದೆ. ಇನ್ನು ನಾಲ್ಕು ಸಾವಿರ ಕೋಟಿ ಬಿಡುಗಡೆ ಆಗುತ್ತೆ. ಆದರೆ ಬಿಜೆಪಿಯವರಿಗೆ ಒಂದು ಪ್ರಶ್ನೆ ಕೇಳುತ್ತೇನೆ ನೀವು…













