Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ನವದೆಹಲಿ : ಅಮೆರಿಕ-ಇರಾನ್ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಪರಿಣಾಮವಾಗಿ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದ್ದರ ಬೆನ್ನಲ್ಲೇ ಅವುಗಳ ದರ ಮತ್ತೊಮ್ಮೆ ಏರಿಕೆಯಾಗುವ ಸಾಧ್ಯತೆಗಳಿವೆ. ದೈನಂದಿನ ಬಳಕೆಯ ವಸ್ತುಗಳನ್ನು ತಯಾರಿಸುವ ಫಾಸ್ಟ್ ಮೂವಿಂಗ್ ಕನ್ಯೂಮರ್ ಗೂಡ್ಸ್ (ಎಫ್ಎಂಸಿಜಿ) ಕಂಪನಿಗಳು ಈ ನಿಟ್ಟಿನಲ್ಲಿ ಆಲೋಚಿಸಿದ್ದು ಶೀಘ್ರವೇ ಬೆಲೆ ಏರಿಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಿವೆ. ಇತ್ತೀಚೆಗಷ್ಟೇ ದೈನಂದಿನ ಬಳಕೆ ವಸ್ತುಗಳ ಬೆಲೆ ಶೇ. 3ರಿಂದ 5ರಷ್ಟು ಹೆಚ್ಚಳವಾಗಿತ್ತು. ಈಗ ಮತ್ತೆ ಅದೇ ಪ್ರಮಾಣದಲ್ಲಿ ಸೋಪು, ಡಿಟರ್ಜೆಂಟ್, ಬಿಸ್ಕೆಟ್, ಪ್ಯಾಕ್ ಮಾಡಲಾದ ಆಹಾರಗಳು, ಪೇಯಗಳು ಮುಂತಾದ ವಸ್ತುಗಳ ಬೆಲೆ ಏರಲಿದ್ದು, ಜನಸಾಮಾನ್ಯರ ಕಿಸೆಗೆ ಮತ್ತಷ್ಟು ಕತ್ತರಿ ಬೀಳಲಿದೆ. ಬೆಲೆ ಹೆಚ್ಚಳಕ್ಕೆ ಕಾರಣವೇನು? ಇರಾನ್-ಅಮೆರಿಕ ಯುದ್ಧದಿಂದಾಗಿ ಕಚ್ಚಾತೈಲ ಬೆಲೆಯಲ್ಲಿ ಹೆಚ್ಚಳವಾಗಿದ್ದು, ಸರಕು ಸಾಗಣೆ ಶುಲ್ಕದಲ್ಲಿ ಏರಿಕೆಯಾಗಿದೆ. ಮಧ್ಯಪ್ರಾಚ್ಯ ಬಿಕ್ಕಟ್ಟಿನಿಂದ ಜಾಗತಿಕ ಪೂರೈಕೆ ವ್ಯವಸ್ಥೆಯಲ್ಲಿ ಭಾರಿ ಪ್ರಮಾಣದಲ್ಲಿ ಅಡೆತಡೆಯುಂಟಾಗಿದ್ದು, ಅಮೆರಿಕದ ಡಾಲರ್ ವಿರುದ್ಧ ಭಾರತೀಯ ಕರೆನ್ಸಿ ಮೌಲ್ಯ ಕುಸಿತವಾಗಿದೆ. ಹೀಗಾಗಿ ನಷ್ಟ ತುಂಬಿಕೊಳ್ಳಲು ಹಲವು ಕಂಪನಿಗಳು ಬೆಲೆ…
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಗ್ನಿ ಅವಘಡ ಸಂಭವಿಸಿದ್ದು, ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.ಇಲ್ಲಿನ ಡಾಂಗೆ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಹಾಗೂ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ಪ್ರಾಥಮಿಕ ವರದಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಪ್ಲಾಸ್ಟಿಕ್ ಕಚ್ಚಾ ವಸ್ತುಗಳು ಹಾಗೂ ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ತಡರಾತ್ರಿ ಕಂಪನಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿದ್ದರಿಂದ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಯಾದ್ಯಂತ ವ್ಯಾಪಿಸಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ : ಸಂತಾನ ಹರಣ ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರಿಂದ ಎಡವಟ್ಟು ಆರೋಪ ಕೇಳಿ ಬಂದಿದೆ. ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಸಾವನಪ್ಪಿದ್ದು ಆಸ್ಪತ್ರೆಯ ಮುಂದೆ ಬಾಣಂತಿಯ ಮೃತದೇಹ ಇಟ್ಟು ಇದೀಗ ಬಾಣಂತಿಯ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ ಬಟ್ಲಹಳ್ಳಿಯ ನಿವಾಸಿ ಜಿಎನ್ ನರ್ಮದಾ (24) ಶವ ಬಿಟ್ಟು ಧರಣಿ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಳಳ್ಳಿ ನಿವಾಸಿಯಾಗಿದ್ದು ಎರಡು ಮಕ್ಕಳು ಆದ ಬಳಿಕ ಸಂತಾನ ಹರಣ ಶಸ್ತ್ರಚಿಕಿತ್ಸೆಗೆ ನರ್ಮದಾ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಬೆಳೆ ಆಕಸ್ಮಿಕವಾಗಿ ಸಣ್ಣ ಕರುಳನ್ನು ಕತ್ತರಿಸುವ ಆರೋಪ ಕೇಳಿ ಬಂದಿದೆ ಇನ್ಫೆಕ್ಷನ್ ಆಗಿ ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ಬಾಣಂತಿಗೆ ಸಾವನಪ್ಪಿದ್ದಾರೆ ಸ್ತ್ರೀರೋಗ ತಜ್ಞೆ ಡಾಕ್ಟರ್ ವಾಣಿ ರೆಡ್ಡಿ ವಿರುದ್ಧ ಎಡಬಟ್ಟು ಆರೋಪ ಕೇಳಿ ಬಂದಿದೆ. ವೈದ್ಯರ ವಿರುದ್ಧ ಬಾಣಂತಿ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚೈನ್ನೈ : ತಮಿಳುನಾಡಿನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪದಗ್ರಹಣ ಮಾಡಿದ್ದಾಯ್ತು. ಇದೀಗ ರಾಜಕೀಯದಲ್ಲಿ ವಿಜಯ್ ಪರ್ವ ಶುರುವಾಗಿದೆ. ಹಾಗಂತ ಸಿನಿಮಾ ಫ್ಯಾನ್ಸ್ಗೆ ನಿರಾಸೆ ಮಾಡುತ್ತಿಲ್ಲ ವಿಜಯ್. ಇದೀಗ ʼಜನನಾಯಗನ್ʼ ಚಿತ್ರ ರಿಲೀಸ್ಗೆ ಕೌಂಟ್ಡೌನ್ ಶುರುವಾಗಿದೆ. ಈ ಮೂಲಕ ಮತ್ತೊಂದ್ ಮಾಸ್ ವಿಜಯೋತ್ಸವಕ್ಕೆ ಫ್ಯಾನ್ಸ್ ಸಜ್ಜಾಗುತ್ತಿದ್ದಾರೆ. ಹೌದು ಶೀಘ್ರದಲ್ಲೇ ವಿಜಯ್ ಕಟ್ಟ ಕಡೆಯ ಚಿತ್ರ ಎಂದು ಘೋಷಿಸಿರುವ ಜನನಾಯಗನ್ ಚಿತ್ರ ರಿಲೀಸ್ ಆಗಲಿದೆ. ಕಳೆದ ಜನವರಿ 9 ರಂದೇ ಚಿತ್ರ ತೆರೆಕಾಣಬೇಕಿತ್ತು. ಆದರೆ ಈ ಚಿತ್ರವು ಜನರ ಮೇಲೆ ಪ್ರಭಾವ ಬೀರಿ ವಿಜಯ್ಗೆ ಪ್ಲಸ್ ಆಗಬಹುದು ಅನ್ನೋ ಕಾರಣಕ್ಕೆ ಹಿಂದಿನ ಸರ್ಕಾರದ ಕೈವಾಡದಲ್ಲಿ ಸೆನ್ಸಾರ್ ಆಗದೆ ಉಳಿದಿತ್ತು. ಹಲವು ಬಾರಿ ಸೆನ್ಸಾರ್ ಮಂಡಳಿ ಕದ ತಟ್ಟಿದ್ದರೂ ಕಾರಣಗಳನ್ನ ಕೊಟ್ಟು ಸೆನ್ಸಾರ್ ಮಂಡಳಿ ನಿರಾಕರಿಸಿತ್ತು. ಇದುವರೆಗೂ ಜನನಾಯಗನ್ ಸೆನ್ಸಾರ್ ಆಗಿಲ್ಲ. ಆದರೆ ಇದೀಗ ವಿಜಯ್ ಸರ್ಕಾರವೇ ರಚನೆ ಆಗಿದೆ. ವಿಜಯ್ ಕೊನೆಯ ಚಿತ್ರ ಜನನಾಯಗನ್ಗೆ ಎದುರಾಗಿದ್ದ ವಿಘ್ನಗಳು ಅಷ್ಟಿಷ್ಟಾಗಿರಲಿಲ್ಲ. ಡಿಸ್ಟ್ರಿಬ್ಯೂಷನ್ ಹಕ್ಕುಗಳು ಸೇಲ್ ಆಗಿತ್ತು,…
ಬೆಂಗಳೂರು : ಬೆಂಗಳೂರಿನ ಹೊರವಲಯದ ಆರ್ಟ್ ಆಫ್ ಲಿವಿಂಗ್ನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭದ್ರತೆಯಲ್ಲಿ ಲೋಪ ಉಂಟಾಗಿದ್ದು, ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲೀಪುರ ಪೊಲೀಸರು, ತನಿಖೆಗೆ 4 ತಂಡ ರಚನೆ ಮಾಡಿ ವಿವಿಧ ಆಯಾಮಗಳಲ್ಲಿ ವಿಚಾರಣೆ ಆರಂಭಿಸಿದ್ದಾರೆ. ಬೆಂಗಳೂರು ಹೊರವಲಯದ ಕಗ್ಗಲೀಪುರ ಸಮೀಪ ಇರುವ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಲಾದ ಧ್ಯಾನ ಮಂದಿರ ಉದ್ಘಾಟನೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವ ಹಿನ್ನೆಲೆ ಪ್ರಧಾನಿ ಮೋದಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ವಾಪಸ್ ತೆರಳಿದ ಬಳಿಕ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ. ಮೋದಿ ತೆರಳುವ ರಸ್ತೆ ಮಾರ್ಗದಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿರೋದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನೂ ಪ್ರಕರಣದ ತನಿಖೆಗೆ ರಾಮನಗರ ಡಿವೈಎಸ್ಪಿ ಶ್ರೀನಿವಾಸ್ ನೇತೃತ್ವದಲ್ಲಿ ನಾಲ್ಕು ತಂಡಗಳ ರಚನೆ ಮಾಡಲಾಗಿದ್ದು, 50ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಘಟನಾ ಸ್ಥಳದ…
ಚಿತ್ರದುರ್ಗ : ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ನಿನ್ನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಇಂದು ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ರ ಸುಹಾಸ್ ಸುಧಾಕರ್ ಹೇಳಿಕೆ ನೀಡಿದ್ದಾರೆ. ಇದೀಗ ಸಚಿವ ಸುಧಾಕರ್ ಅಂತಿಮ ಸಂಸ್ಕಾರದ ಸ್ಥಳ ಬದಲಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.ಶಟಲ್ ಕೋರ್ಟ್ ಬದಲಾಗಿ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಪಾವಗಡ ರಸ್ತೆಯಲ್ಲಿ ಇರುವ ಮುಕ್ತಿ ಧಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.
ನವದೆಹಲಿ : ಪಾಕಿಸ್ತಾನದಲ್ಲಿ ಎಚ್ಐವಿ (HIV) ಸೋಂಕು ಪ್ರಕರಣಗಳ ಕುರಿತು ಆತಂಕಕಾರಿ ಮಾಹಿತಿ ಹೊರಬಂದಿದೆ. ದೇಶದಲ್ಲಿ ನೋಂದಾಯಿತ ಸುಮಾರು 84,000 ಸೋಂಕಿತರಲ್ಲಿ, ಆಂಟಿರೆಟ್ರೋವೈರಲ್ ಚಿಕಿತ್ಸೆ ಆರಂಭಿಸಿದ ಬಳಿಕ 20,000ಕ್ಕೂ ಹೆಚ್ಚು ರೋಗಿಗಳು ಕಾಣೆಯಾಗಿರುವುದು ಆರೋಗ್ಯ ವಲಯದಲ್ಲಿ ಗಂಭೀರ ಕಳವಳಕ್ಕೆ ಕಾರಣವಾಗಿದೆ. ಪಾಕಿಸ್ತಾನದ ಪ್ರಮುಖ ದಿನಪತ್ರಿಕೆ ದಿ ಎಕ್ಸ್ಪ್ರೆಸ್ ಟ್ರಿಬ್ಯೂನ್ ವರದಿ ಪ್ರಕಾರ, ಪಶ್ಚಿಮ ಏಷ್ಯಾ, ಉತ್ತರ ಆಫ್ರಿಕಾ ಹಾಗೂ ಮಧ್ಯ ಏಷ್ಯಾ ಪ್ರದೇಶಗಳನ್ನು ಒಳಗೊಂಡ WHO ಯ ಪೂರ್ವ ಮೆಡಿಟರೇನಿಯನ್ ವಲಯದಲ್ಲಿ ಪಾಕಿಸ್ತಾನವು ವೇಗವಾಗಿ ಬೆಳೆಯುತ್ತಿರುವ ಎಚ್ಐವಿ ಸೋಂಕಿನ ಕೇಂದ್ರಗಳಲ್ಲಿ ಒಂದಾಗಿ ಹೊರಹೊಮ್ಮುತ್ತಿದೆ. ವರದಿಯ ಪ್ರಕಾರ, ಕಳೆದ 15 ವರ್ಷಗಳಲ್ಲಿ ದೇಶದಲ್ಲಿ ಹೊಸ ಸೋಂಕು ಪ್ರಕರಣಗಳು ಶೇ.200ರಷ್ಟು ಹೆಚ್ಚಳ ಕಂಡಿದ್ದು, 2010ರಲ್ಲಿ 16,000 ಇದ್ದುದು 2024ರಲ್ಲಿ ಸುಮಾರು 48,000ಕ್ಕೆ ಏರಿಕೆಯಾಗಿದೆ. ಸಾರ್ವಜನಿಕ ಜಾಗೃತಿ ಅಭಿಯಾನಗಳು ಮತ್ತು ತಡೆ ಕ್ರಮಗಳು ಪರಿಣಾಮಕಾರಿಯಾಗಿಲ್ಲ ಎಂದು ಹೇಳಲಾಗಿದೆ. ಒಟ್ಟು ಸುಮಾರು 3.69 ಲಕ್ಷ ಜನರು ಸೋಂಕಿತರಾಗಿರಬಹುದು ಎಂಬ ಅಂದಾಜು ಇದ್ದರೂ, ಕೇವಲ 84,000 ಮಂದಿ ಮಾತ್ರ…
ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿರಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ…
ಉತ್ತರ ಪ್ರದೇಶ : ಕ್ಷುಲ್ಲಕ ಆಸ್ತಿ ವಿಚಾರಕ್ಕಾಗಿ ನಡೆದ ಜಗಳವೊಂದು ಭೀಕರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಂಡಾ ಜಿಲ್ಲೆಯಲ್ಲಿ ನಡೆದಿದೆ. ಪಿತ್ರಾರ್ಜಿತ ಆಸ್ತಿ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ಮಗನೇ ತನ್ನ ಹೆತ್ತ ತಾಯಿ ಹಾಗೂ ಸ್ವಂತ ತಮ್ಮನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಘಟನೆಯ ಹಿನ್ನೆಲೆ: ಆರೋಪಿಯನ್ನು ರಾಜ್ಕಿಶೋರ್ ಗುಪ್ತಾ ಎಂದು ಗುರುತಿಸಲಾಗಿದೆ. ಈತನ ತಂದೆಯು ಕುಟುಂಬದ ಪಿತ್ರಾರ್ಜಿತ ಆಸ್ತಿಯನ್ನು ಮಾರಾಟ ಮಾಡಿದ್ದರು. ಈ ನಿರ್ಧಾರಕ್ಕೆ ರಾಜ್ಕಿಶೋರ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಲ್ಲದೆ, ಮನೆಯಲ್ಲಿ ಪದೇ ಪದೇ ಜಗಳವಾಡುತ್ತಿದ್ದನು. ಇಂದು ಮುಂಜಾನೆ ಕೂಡ ಇದೇ ವಿಚಾರವಾಗಿ ತಾಯಿ ಮತ್ತು ತಮ್ಮನೊಂದಿಗೆ ರಾಜ್ಕಿಶೋರ್ ನಡುವೆ ಮಾತಿನ ಚಕಮಕಿ ನಡೆದಿದೆ. ಪೊಲೀಸರ ಪರಿಶೀಲನೆ: ಜಗಳ ತೀವ್ರ ಸ್ವರೂಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಆರೋಪಿಯು ತನ್ನ ಬಳಿಯಿದ್ದ ಬಂದೂಕಿನಿಂದ ತಾಯಿ ಮತ್ತು ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಇಂದು ಮುಂಜಾನೆ ಮನೆಯೊಳಗೆ ಗುಂಡಿನ ಸದ್ದು ಕೇಳಿ ಆತಂಕಗೊಂಡ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.…
ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಡಿ.ಸುಧಾಕರ್ ಅಂತ್ಯಕ್ರಿಯೆ : ಚಿತ್ರದುರ್ಗದ ಎಲ್ಲ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ
ಬೆಂಗಳೂರು : ಸಚಿವ ಡಿ. ಸುಧಾಕರ್ ನಿಧನಕ್ಕೆ ಸಂತಾಪ ಸೂಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಚಿತ್ರದುರ್ಗಕ್ಕೆ ಸೋಮವಾರ ಸರ್ಕಾರ ರಜೆ ಘೋಷಣೆ ಮಾಡಿದ್ದು, ರಾಜ್ಯಾದ್ಯಂತ 3 ದಿನ ಸಂತಾಪ ಕೋರಲು ತಿಳಿಸಲಾಗಿದೆ. ಇನ್ನು ಮೃತರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಸರ್ಕಾರ ಸೂಚನೆ ನೀಡಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯೂರು ಶಾಸಕರು ಹಾಗೂ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್ ಅವರು ಮೇ 10 ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಹಿನ್ನೆಲೆ ಸರ್ಕಾರ ಸಂತಾಪ ಸೂಚಿಸಿ ಅಧಿಸೂಚನೆ ಹೊರಡಿಸಿದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ. ಮೇ 10 ರಿಂದ 12 ರವರೆಗೆ ಮೂರು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿದಲಾಗಿದೆ.














