Author: kannadanewsnow05

ಬೆಂಗಳೂರು : ಬೆಂಗಳೂರಿನ ಕೋಗಿಲು ಲೇಔಟ್ ನಲ್ಲಿ ಅಕ್ರಮ ಮನೆಗಳ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರು ಕರ್ನಾಟಕದವರಿದ್ದರೆ ಮಾತ್ರ ಮನೆ ಕೊಡುತ್ತೇವೆ. ಹೊರಗಿನಿಂದ ಬಂದವರಿಗೆ ನಾವು ಮನೆ ಕೊಡಲ್ಲ ಎಂದು ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆ ತೆರವು ವಿವಾದಕ್ಕೆ ವಸತಿ ಸಚಿವ ಜಮೀರ್ ಅಹ್ಮದ್ ಸ್ಪಷ್ಟನೆ ನೀಡಿದರು. ಕೋಗಿಲು ಲೇಔಟ್ ಅಕ್ರಮ ಮನೆ ತೆರವು ವಿಚಾರಕ್ಕೆ ಪಾಕಿಸ್ತಾನ ಎಂಟ್ರಿಗೆ ಸಚಿವ ಜಮೀರ್ ಕಿಡಿಕಾರಿದ್ದಾರೆ. ಪಾಕಿಸ್ತಾನಕ್ಕೂ ಈ ವಿಷಯಕ್ಕೂ ಏನು ಸಂಬಂಧ? ಪಾಕಿಸ್ತಾನಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ನಮ್ಮ ಬಗ್ಗೆ ಹೇಳೋಕೆ ಅರ‍್ಯಾರು? ನಮ್ಮ ದೇಶದಲ್ಲಿ ನಾವು ಇದ್ದೇವೆ. ಮುಸ್ಲಿಮರನ್ನ ನೋಡಿಕೊಳ್ಳೋಕೆ, ಅವರು ಯಾರು ನಮಗೆ ಹೇಳೋಕೆ. ಮೊದಲು ಪಾಕಿಸ್ತಾನ ಅವರು ಅವರ ದೇಶ ನೋಡಿಕೊಳ್ಳಲಿ. ಪಾಕಿಸ್ತಾನದಲ್ಲಿ ಬಡತನ ಇದೆ. ಮೊದಲು ಅದನ್ನ ನೋಡಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು. ನಾವು ಯಾರ ಟ್ರ‍್ಯಾಪ್‌ಗೂ ಬೀಳೊಲ್ಲ. ಕೇರಳ ನಿಯೋಗ ಬಂದಿತ್ತು. ಅವರು ಏನು ಮಾಡಿದ್ರು? ಯುಪಿಯಲ್ಲೂ ಬುಲ್ಡೋಜ್ ಆಗಿತ್ತು. ಯಾಕೆ ಅಲ್ಲಿಗೆ ಹೋಗಲಿಲ್ಲ ಅವರು.…

Read More

ಹುಬ್ಬಳ್ಳಿ : ಕೊಪ್ಪಳದಲ್ಲಿ ಜನಿಸಿದ ನವಜಾತ ಶಿಶುವೊಂದಕ್ಕೆ ಕರುಳುಗಳು ಹೊರಗೆ ಬಂದಿದ್ದು, ತುರ್ತು ಚಿಕಿತ್ಸೆಯ ಅಗತ್ಯವಿದೆ. ಮಗುವಿನ ಜೀವ ಉಳಿಸಲು, ಝೀರೋ ಟ್ರಾಫಿಕ್ ಮೂಲಕ ಕೊಪ್ಪಳದಿಂದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆಂಬುಲೆನ್ಸ್ ಸಿಬ್ಬಂದಿಯ ಸಹಕಾರದಿಂದ ಮಗುವನ್ನು ಸಕಾಲದಲ್ಲಿ ತಲುಪಿಸುವ ಪ್ರಯತ್ನ ಮಾಡಲಾಗಿದೆ. ಆದ್ರೆ ಇದೀಗ ವೈದ್ಯರು ಸಿಬ್ಬಂದಿಗಳ ಶ್ರಮವೆಲ್ಲ ವ್ಯರ್ಥವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಗಂಡು ಮಗು ಸಾವನ್ನಪ್ಪಿದೆ. ಕೇವಲ 10 ಗಂಟೆ ಹಿಂದೆ ಜನಿಸಿದ ಮಗು ಆ ಮಗುವಿನ ಕರಳುಗಳು ಹೊರಗೆ ಬಂದಿದ್ದವು. ಹೀಗಾಗಿ ತುರ್ತು ಚಿಕಿತ್ಸೆ ಅನಿವಾರ್ಯವಾಗಿತ್ತು. ನಿನ್ನೆ ರಾತ್ರಿ ಜನಿಸಿದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿತ್ತು.ಆದರೆ ಇದೀಗ ಚಿಕೆತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದೆ. ಘಟನೆ ಹಿನ್ನೆಲೆ? ಕೊಪ್ಪಳದಲ್ಲಿ ಶನಿವಾರ ರಾತ್ರಿ 10 ಗಂಟೆ ಹಿಂದೆ ಜನಿಸಿದ ಮಗುವೊಂದನ್ನ ಝೀರೋ ಟ್ರಾಫಿಕ್​ನಲ್ಲಿ ಸುಮಾರು 110 ಕಿ.ಮೀ ದೂರದ ಹುಬ್ಬಳ್ಳಿ ಕಿಮ್ಸ್​ಗೆ ಕರೆದುಕೊಂಡು ಹೋಗಲಾಗಿದೆ. ಕುಕನೂರ ತಾಲೂಕಿನ ಗುತ್ತೂರ…

Read More

ಬೆಂಗಳೂರು : ಸರ್ಕಾರಿ ಶಾಲೆಗಳನ್ನ ಮುಚ್ಚಬೇಡಿ ಎಂಬ ಸಾಹಿತಿ ಬರಗೂರು ರಾಮಚಂದ್ರಪ್ಪ ಮನವಿ ಮಾಡಿದ ವಿಚಾರಕ್ಕೆ ಒಂದೇ‌ ಒಂದು ಮಗು ಇದ್ದರೂ ಸರ್ಕಾರ ಮುಚ್ಚೋದಿಲ್ಲ, ವಿಲೀನವೂ ಮಾಡೋದಿಲ್ಲ ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚಾರ ಮಾಡಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ‌ನೀಡಿದ ಅವರು, ಶಾಲೆಗಳನ್ನು ವಿಲೀನ ಮಾಡೋ ಅಧಿಕಾರ ನಮಗೆ ಇಲ್ಲ. ನಾವು ವೀಲಿನವೂ ಮಾಡೊಲ್ಲ. ಬರಗೂರು ರಾಮಚಂದ್ರಪ್ಪ ಅವರಿಗೂ ಮಾಹಿತಿ ಕೊಡಲಾಗಿದೆ ಎಂದ ತಿಳಿಸಿದರು. ಸ್ವ-ಇಚ್ಚೆಯಿಂದ KPS ಶಾಲೆಗೆ ವಿಲೀನ ಮಾಡ್ತೀವಿ ಅಂದರೆ ನಾನು ಇಲ್ಲ ಅನ್ನೋಕೆ ಅಗೊಲ್ಲ. ನಾನು ಈಗಾಗಲೇ ಹೇಳಿದ್ದೇನೆ. ಒಂದು ಮಗು ಇದ್ದರೂ ಶಾಲೆ ಮುಚ್ಚೋದಿಲ್ಲ. ಟೀಚರ್ ಇರ್ತಾರೆ, ಮಧ್ಯಾಹ್ನದ ಊಟವೂ ಇರುತ್ತದೆ ಎಂದರು. ಯಾರೇ ಮುಚ್ಚುತ್ತಾರೆ ಅಂತ ಹೇಳಿದರೆ ಅದಕ್ಕೆ ನಾನು ಉತ್ತರ ಕೊಡಲು ಆಗೊಲ್ಲ. ಬರಗೂರು ಅವರಿಗೆ ಹೇಳ್ತೀನಿ. ಬೇರೆ ಅವರ ಮಾತು ಕೇಳಿ ಅವರು ಹೇಳಿಕೆ ಕೊಡಬಾರದು. ಸಿಎಂ ಅವರು ಕೂಡಾ ಮಾತಾಡೋದಾಗಿ ಹೇಳಿದ್ದಾರೆ. KPS ಒಳ್ಳೆಯ ಪ್ರಾಜೆಕ್ಟ್‌ ನಿಲ್ಲಿಸಲು…

Read More

ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಸಿಮೆಂಟ್ ತುಂಬಿದ ಲಾರಿ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾಲಶಿರಗೂರು ಬಳಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು 5ನೇ ತರಗತಿಯ ಅಮಿತ್ ಕಾಂಬಳೆ (11) ಎಂದು ತಿಳಿದುಬಂದಿದೆ. ಇಬ್ಬರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಹಾರೂಗೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಚಿಯಿಂದ ಹಾರೂಗೇರಿ ಕಡೆಗೆ ಸಿಮೆಂಟ್ ಲಾರಿ ತೆರಳುತ್ತಿತ್ತು. ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಈ ವೇಳೆ ಲಾರಿಯ ಅಡಿ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾರಿ ಪಲ್ಟಿಯಾಗಿದೆ. ಈ ವೇಳೆ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಘಟನೆ ಅಂಜಲಿ ಕಾಂಬಳೆ (15) ಅವಿನಾಶ್ ಕಾಂಬಳೆ (14) ಸ್ಥಿತಿ ಗಂಭೀರವಾಗಿದೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರ ಮರ್ಡರ್ ಆಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರಸ್ತೆಯಲ್ಲಿಯೇ ವ್ಯಕ್ತಿಯೋರ್ವ ಕೊಲೆಗೀಡಾದ ಘಟನೆ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಮುಂಭಾಗ ಮಂಗಳವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಮೊಗ್ಗದ ಕಾಶಿಪುರ ಬಡಾವಣೆಯ ತಮಿಳು ಕ್ಯಾಂಪ್‌ ನಿವಾಸಿ ಅರುಣ್ (26) ಎಂದು ಗುರುತಿಸಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡಿದ್ದ. ನಿನ್ನೆ ರಾತ್ರಿ 8:45ರ ಸುಮಾರಿಗೆ ತನ್ನ ಬೈಕ್​ನಲ್ಲಿ ಎಪಿಎಂಪಿ ತರಕಾರಿ ಮಾರುಕಟ್ಟೆ ಬಳಿಯ ಶ್ರೀನಿಧಿ ವೈನ್ಸ್ ಮುಂಭಾಗ ಬಂದಿದ್ದ. ಬೈಕ್ ನಿಲ್ಲಿಸುತ್ತಿದ್ದಂತೆಯೇ ಹಿಂದಿನಿಂದ ಇನ್ನೊಂದು ಬೈಕ್​ನಲ್ಲಿ ಬಂದ ಇಬ್ಬರು ರಾಡ್​​ನಿಂದ ತಲೆಗೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ಅರುಣ್​ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ.‌ ಹಲ್ಲೆ ನಡೆಸಿದವರು ಕೆಲ‌ಕಾಲ ಅಲ್ಲೇ ನಿಂತು, ಬಳಿಕ ಅರುಣ್​​ ತಂದಿದ್ದ ಬೈಕ್ ಅನ್ನು ಸಹ ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

Read More

ಬೆಂಗಳೂರು : ಬೆಂಗಳೂರಲ್ಲಿ ಕೋಗಿಲು ಲೇಔಟ್ ಅಕ್ರಮ ಮನೆಗಳ ತೆರವು ವಿಚಾರವಾಗಿ ಕೇರಳದ ಅಕ್ರಮ ವಲಸಿಗರಿಗೆ ಮನೆ ಕೊಡುವ ನಿರ್ಧಾರವೇ ಅಕ್ರಮವಾಗಿದೆ. ರಾಜ್ಯದ ಹಿತಾಸಕ್ತಿಗೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳಬೇಕು. ಯಾರದ್ದೋ ಮಾತು ಕೇಳಿ ಮನಸೋ ಇಚ್ಛೆ ತೀರ್ಮಾನ ಸಾಧ್ಯವೇ? ಕೆಸಿ ವೇಣುಗೋಪಾಲ ಬೆದರಿಕೆ ಬೆನ್ನೆಲೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಉಲ್ಟಾ ಹೊಡೆದರು. ಅಕ್ರಮ ವಲಸಿಗರಿಗೆ ಮನೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದರು. ಬೆಳಗಾವಿಯಲ್ಲಿ ಮಾತನಾಡಿದ ವಿಜಯೇಂದ್ರ, ನಿಯಮಗಳಿಗೆ ತೋರಿ ಹೊಲಸಿಗರಿಗೆ ಮನೆ ಕೊಡಲು ಹೊರಟಿದ್ದಾರೆ. ಕಾನೂನು ವಿರುದ್ಧವಾಗಿ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಂಡಿದ್ದಾರೆ ಅತೀ ವೃಷ್ಟಿಯಿಂದ ಹಾನಿಯಾಗಿದೆ ರೈತರು ಪರಿಹಾರ ನಿರೀಕ್ಷೆಯಲ್ಲಿದ್ದರು ಪರಿಹಾರ ಘೋಷಿಸದೆ ಕೇಂದ್ರ ಸರ್ಕಾರದತ್ತ ಸಿಎಂ ಸಿದ್ದರಾಮಯ್ಯ ಬೊಟ್ಟು ಮಾಡಿದರು. ಪರಿಹಾರ ಕೊಡಿ ಅಂದರೆ ಪ್ರಧಾನಿಗೆ ಪತ್ರ ಬರೆದಿದ್ದೆ ಸಿಎಂ ಸಿದ್ದರಾಮಯ್ಯ ಸಾಧನೆ ಆಗಿದೆ. ತಮ್ಮ ಕುರ್ಚಿ ಉಳಿಸಿಕೊಳ್ಳಲು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಅಕ್ರಮ ವಲಸಿಗರಿಗೆ ಮನವಿ…

Read More

ಬೆಳಗಾವಿ : ರಾಜ್ಯದಲ್ಲಿ ಡಾಬಾ ಪಾನ್ ಶಾಪ್ ನಲ್ಲೂ ಕೂಡ ಮದ್ಯ ಮಾರಾಟಕ್ಕೆ ಅನುಮತಿ ಸಿಗುತ್ತಿದೆ. ರಾಜ್ಯದ 6ನೇ ಗ್ಯಾರಂಟಿ ಕುಡುಕರ ರಾಜ್ಯ ಎಂದು ಘೋಷಣೆ ಮಾಡಿ. ಸಿಎಂ ಸಿದ್ದರಾಮಯ್ಯ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಬೆಳಗಾವಿಯಲ್ಲಿ ಮಾತನಾಡಿದ ಬಿ ವೈ ವಿಜಯೇಂದ್ರ ಸರ್ಕಾರದ ವಿರುದ್ಧ ಜನ ದಂಗೆ ಹೇಳುವ ಸ್ಥಿತಿ ನಿರ್ಮಾಣವಾಗಿದೆ. ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಪ್ಪು ಮಾಹಿತಿಯನ್ನು ನೀಡಿದ್ದಾರೆ. ಎರಡು ತಿಂಗಳ ಕಂತು 5 ಸಾವಿರ ಕೋಟಿ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ ಸದನಕ್ಕೆ ಸಮರ್ಪಕವಾಗಿ ಉತ್ತರ ಕೊಡಬೇಕಿತ್ತು 5,000 ಕೋಟಿಯ ಬಗ್ಗೆ ಏನು ಅವ್ಯವಹಾರ ಆಗಿದೆ ಗೊತ್ತಿಲ್ಲ ಗ್ಯಾರಂಟಿ ಗಳಿಗೆ ಹಣ ಸಂಗ್ರಹಿಸುವುದೇ ದೊಡ್ಡ ಸವಾಲಾಗಿದೆ ಎಂದು ಕಿಡಿ ಕಾರಿದರು.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರ ಆಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ಓವರ್ ಟೆಕ್ ಮಾಡಲು ಹೋಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸ್ಥಳದಲ್ಲೇ ಇಬ್ಬರು ಸವಾರರು ಸಾವನ್ನಪ್ಪಿದ್ದು, ಮಗುವಿನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಪಘಾತದಲ್ಲಿ ಮೃತಪಟ್ಟವರ ಮಾಹಿತಿಯನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

Read More

ತುಮಕೂರು : ಕಳೆದ ಶನಿವಾರ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ ಮಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪರಪುರುಷನ ಸಹವಾಸ ಮಾಡಿದ್ದಕ್ಕೆ, ಆತ ಅಕ್ರಮ ಸಂಬಂಧದ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಬ್ಲಾಕ್ ಮೇಲ್ ಗೆ ಹೆದರಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶನಿವಾರ 8 ವರ್ಷದ ಮಗುವಿನ ಜೊತೆಗೆ ಕೆರೆಗೆ ಹಾರಿ ಹಂಸಲೇಖ ಆತ್ಮಹತ್ಯೆಗೆ ಶರಣಾಗಿದ್ದರು. ಮಲ್ಲಿಕಾರ್ಜುನ ಎಂಬಾತನ ಜೊತೆಗೆ ಹಂಸಲೇಖ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಮಲ್ಲಿಕಾರ್ಜುನ ಅಕ್ರಮ ಸಂಬಂಧದ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಪುತ್ರ ಗುರುಪ್ರಸಾದ್ ಜೊತೆಗೆ ಹಂಸಲೇಖ ಮನೆ ಬಿಟ್ಟು ಹೋಗಿದ್ದರು. ಶುಕ್ರವಾರ ಸ್ನೇಹಿತೆಯ ಮನೆಯಲ್ಲಿ ಉಳಿದುಕೊಂಡಿದ್ದು ಶನಿವಾರ ತನ್ನ 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದರು ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಮಲ್ಲಿಕಾರ್ಜುನ್ ಎಂಬತನ ವಿರುದ್ಧ ಪೊಲೀಸರು FIR…

Read More

ಮಂಗಳೂರು : ಪುತ್ತೂರಿನಲ್ಲಿ ಬಿಜೆಪಿ ನಾಯಕನ ಪುತ್ರ ಕೃಷ್ಣ ಜೆ ರಾವ್ ಯುವತಿಯೊಬ್ಬರನ್ನು ಪ್ರೀತಿಸಿ ಗರ್ಭವತಿಯನ್ನಾಗಿಸಿ ಆಕೆಗೆ ಮಗು ಜನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ DNA ಪರೀಕ್ಷೆಯಲ್ಲಿ ಮಗುವಿಗೆ ತಂದೆಯೆಂದು ಸಾಬೀತಾದರೂ, ಶಿಶು ಜನಿಸಿ 6 ತಿಂಗಳಾದರೂ ಆರೋಪಿ ಮದುವೆಯಾಗಲು ಒಪ್ಪುತ್ತಿಲ್ಲ. ಪ್ರಮುಖ ಬಿಜೆಪಿ ನಾಯಕರ ಸಂಧಾನ ವಿಫಲವಾಗಿದೆ. ಹೌದು ನ್ಯಾಯಾಲಯದ ನಿರ್ದೇಶನದಂತೆ ಡಿಎನ್​​ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಆತ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಸೇರಿ ಅನೇಕರು ಸಂಧಾನಕ್ಕೆ ಯತ್ನಿಸಿದ್ದರೂ ವಿಫಲವಾಗಿದೆ. ಪರಿಣಾಮವಾಗಿ ಕಾನೂನು ಹೋರಾಟವೊಂದೇ ನಮಗೆ ಉಳಿದಿರುವ ದಾರಿ ಎಂದು ಸಂತ್ರಸ್ತೆಯ ಕುಟುಂಬ ಹೇಳಿಕೊಂಡಿದೆ. ಪ್ರಕರಣ ಹಿನ್ನೆಲೆ? ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್, ಶಾಲಾ ದಿನಗಳಿಂದ ಪರಿಚಿತವಾಗಿದ್ದ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಂತರ ವಂಚಿಸಿದ್ದಾನೆ ಎಂಬ ಆರೋಪ ಸುಮಾರು 7-8 ತಿಂಗಳುಗಳ ಹಿಂದೆ ಕೇಳಿಬಂದಿತ್ತು.…

Read More