Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ವಿಜಯಪುರ : ಸಾಮಾಜಿಕ ಪಿಡುಗು ವರದಕ್ಷಣೆಗೆ ಬಂಜಾರ ಸಮುದಾಯದಲ್ಲಿ ಇದೀಗ ಬ್ರೇಕ್ ಹಾಕಲಾಗಿದೆ. ಲಂಬಾಣಿ ತಂಡಗಳನ್ನು ವರದಕ್ಷಿಣೆ ಮುಕ್ತ ಮಾಡುವ ಸಂಕಲ್ಪ ಹೊಂದಿದ್ದು ವಿಜಯಪುರ ಜಿಲ್ಲೆಯ 331 ತಾಂಡಾಗಳ ನಾಯಕರು ಕಾರಭಾರಿಗಳು ಹಾಗೂ ಸ್ವಾಮೀಜಿಗಳಿಂದ ಇಂದು ಮಹತ್ವದ ಸಭೆ ನಡೆಯಿತು. ವಿಜಯಪುರದ ಬಂಜಾರ ಭವನದಲ್ಲಿ ನಡೆದ ಸಭೆಯಲ್ಲಿ ಈ ಒಂದು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಲಾಯಿತು. ಮದುವೆಗಳಲ್ಲಿ ವರದಕ್ಷಿಣೆ ಪಡೆಯುವುದು ಮತ್ತು ನೀಡುವುದಕ್ಕೆ ನಿಷೇಧ. ಯಾವುದೇ ಕಾರಣಕ್ಕೂ ವರದಕ್ಷಿಣೆ ಪಡೆಯಬಾರದೆಂದು ನಿರ್ಧಾರ ಕೈಗೊಳ್ಳಲಾಯಿತು. ವರದಕ್ಷಿಣೆಯಿಂದ ಸಮಾಜದಲ್ಲಿ ಹೆಚ್ಚುತ್ತಿರುವ ಸಮಸ್ಯೆಗಳ ಬಗ್ಗೆ ಇದೇ ಸಂದರ್ಭದಲ್ಲಿ ಆತಂಕ ವ್ಯಕ್ತಪಡಿಸಲಾಯಿತು. ಮಗಳ ಮದುವೆಗಾಗಿ ಸಾಲದ ಸುಳಿಯಲ್ಲಿ ಕುಟುಂಬಗಳು ಸಿಲುಕುತ್ತಿವೆ. ವಿಜಯಪುರ ಜಿಲ್ಲೆಯ 350ಕ್ಕೂ ಹೆಚ್ಚು ತಾಂಡಗಳಲ್ಲಿ ಜಾಗೃತಿ ಅಭಿಯಾನ ಕೈಗೊಳ್ಳಲಾಗಿತ್ತು. ಇದೀಗ ಎಲ್ಲಾ ತಂಡಗಳಲ್ಲಿ ವರದಕ್ಷಿಣೆ ಪದ್ಧತಿ ನಿರ್ಮೂಲನೆಗೆ ಮುಖಂಡರು ಪಣತೊಟ್ಟಿದ್ದಾರೆ. ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಮಾಜದ ಶ್ರೀಗಳು ಕರೆ ನೀಡಿದ್ದಾರೆ.

Read More

ಮುಂಬೈ: ಮನರಂಜನಾ ಉದ್ಯಮದಿಂದ ಮತ್ತೊಂದು ಅತ್ಯಂತ ಆಘಾತಕಾರಿ ಮತ್ತು ದುಃಖದಾಯಕ ಸುದ್ದಿಯೊಂದು ಹೊರಬಿದ್ದಿದೆ. ಕಿರುತೆರೆ ಹಾಗೂ ಹಿರಿತೆರೆಯ ಉದಯೋನ್ಮುಖ ನಟಿ ಸಂಚಿತ ಉಗಾಳೆ (30) ಅವರು ಮುಂಬೈನ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಅನಿರೀಕ್ಷಿತ ಘಟನೆಯು ಅವರ ಕುಟುಂಬಸ್ಥರು, ಆಪ್ತರು ಹಾಗೂ ಇಡೀ ಚಿತ್ರರಂಗವನ್ನು ತೀವ್ರ ದಿಗ್ಭ್ರಮೆ ಮತ್ತು ಶೋಕ ಸಾಗರದಲ್ಲಿ ಮುಳುಗಿಸಿದೆ. ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದ ನಟಿ: ಸಂಚಿತ ಉಗಾಳೆ ಅವರು ಕಿರುತೆರೆಯಲ್ಲಿ ಅತ್ಯಂತ ಸಕ್ರಿಯರಾಗಿದ್ದರು ಮತ್ತು ತಮ್ಮ ಅಮೋಘ ನಟನೆಯ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಪ್ರಸಿದ್ಧ ಧಾರಾವಾಹಿಗಳಾದ ‘ಸಂಜನ್ ಘರ್’ ಮತ್ತು ‘ದಿಲ್ವಾಲೇ ದುಲ್ಹನಿಯಾ ಲೇ ಜಾಯೇಗೇ’ ಸೇರಿದಂತೆ ಹಲವು ಜನಪ್ರಿಯ ಸೀರಿಯಲ್‌ಗಳಲ್ಲಿ ಅವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದರು. ಅವರ ನಿರರ್ಗಳ ನಟನೆ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಅವರಿಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ತಂದುಕೊಟ್ಟಿತ್ತು. ‘ಕುಂಕುಮ ಭಾಗ್ಯ’ ತಂದುಕೊಟ್ಟ ಜನಪ್ರಿಯತೆ: ಸಂಚಿತ ಅವರ ನಟನಾ ವೃತ್ತಿಜೀವನಕ್ಕೆ ದೊಡ್ಡ ಬ್ರೇಕ್ ಸಿಕ್ಕಿದ್ದು ಅತ್ಯಂತ…

Read More

ರಾಜಸ್ಥಾನ : ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್ ಅವರು ನೀಡಿರುವ ರಾಜಕೀಯ ಹೇಳಿಕೆಯೊಂದು ದೇಶಾದ್ಯಂತ ಭಾರಿ ಸಂಚಲನ ಮತ್ತು ವಿವಾದವನ್ನು ಸೃಷ್ಟಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಸಂಪೂರ್ಣವಾಗಿ ನಿಷೇಧಿಸುತ್ತಿದ್ದರು ಎಂದು ಹೇಳುವ ಮೂಲಕ ಅವರು ಆಡಳಿತಾರೂಢ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಅತ್ಯಂತ ಅಪಾಯಕಾರಿ ವಾತಾವರಣ ಪ್ರಸ್ತುತ ದೇಶದಲ್ಲಿ ನಿರ್ಮಾಣವಾಗಿರುವ ರಾಜಕೀಯ ಮತ್ತು ಸಾಮಾಜಿಕ ವಾತಾವರಣದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಅಶೋಕ್ ಗೆಹ್ಲೋಟ್, ಇಂದಿನ ಪರಿಸ್ಥಿತಿ ಅತ್ಯಂತ ಅಪಾಯಕಾರಿ ಹಂತಕ್ಕೆ ತಲುಪಿದೆ ಎಂದು ಎಚ್ಚರಿಸಿದ್ದಾರೆ. “ನನ್ನ ಸುದೀರ್ಘ 50 ವರ್ಷಗಳ ಸಕ್ರಿಯ ರಾಜಕಾರಣದ ಇತಿಹಾಸದಲ್ಲೇ ಇಂತಹದೊಂದು ಆತಂಕಕಾರಿ ಮತ್ತು ಉಸಿರುಗಟ್ಟಿಸುವ ಪರಿಸ್ಥಿತಿಯನ್ನು ನಾನು ಎಂದಿಗೂ ನೋಡಿರಲಿಲ್ಲ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಜನತೆಗೆ ಎಚ್ಚರಿಕೆ ಮುಂದುವರಿದು ಮಾತನಾಡಿದ ಅವರು, ದೇಶದ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಜನಸಾಮಾನ್ಯರು ಮತ್ತು ಪ್ರಜಾಪ್ರಭುತ್ವವಾದಿಗಳು…

Read More

ಬೆಂಗಳೂರು : ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾಗಿದ್ದ ದಿ. ಸೂರಜ್‌ ಹೆಗ್ಡೆ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ, ನುಡಿನಮನ ಸಲ್ಲಿಸಿದ ಸಿಎಂ ಡಿಕೆ ಶಿವಕುಮಾರ್ ಟ್ವೀಟ್ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ. ಇದು ಅತ್ಯಂತ ದುಃಖದ ಸಂಗತಿ. ನಮಗೆಲ್ಲಾ ಒಬ್ಬ ಆತ್ಮೀಯ ಸ್ನೇಹಿತ, ದಕ್ಷ ಕಾರ್ಯಕರ್ತ ಹಾಗೂ ಜನಾನುರಾಗಿ ಮುಖಂಡರನ್ನು ಕಳೆದುಕೊಂಡಂತಾಗಿದೆ. ನನ್ನ ಆತ್ಮೀಯ ಸ್ನೇಹಿತ ಸೂರಜ್‌ ಅವರು ಅತ್ಯಂತ ಆದರ್ಶಪ್ರಾಯವಾದ ಜೀವನವನ್ನು ನಡೆಸಿದವರು. ತ್ಯಾಗ, ಪ್ರಾಮಾಣಿಕತೆ ಮತ್ತು ಕರ್ತವ್ಯ ಪ್ರಜ್ಞೆ – ಈ ಮೂರನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿದ್ದರು. ಎಂದಿಗೂ ಯಾವುದೇ ಅಧಿಕಾರ ಅಥವಾ ಸ್ಥಾನಮಾನಕ್ಕೆ ಆಸೆ ಪಡದ ಅವರು, ಯಾವಾಗಲೂ ಪಕ್ಷ ಸಂಘಟನೆಯೇ ಮುಖ್ಯ ಎಂದು ನಂಬಿ ನಡೆದವರು. ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ರಕ್ತ ಅವರ ಮೈಯಲ್ಲಿದ್ದ ಕಾರಣಕ್ಕಾಗಿಯೇ ಏನೋ, ಅವರು ಅರಸರ ಆ ಎಲ್ಲ ಜನಪರ ಆದರ್ಶಗಳನ್ನು ತಮ್ಮ ಉಸಿರಾಗಿಸಿಕೊಂಡಿದ್ದರು.…

Read More

ಬೆಂಗಳೂರು : ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ ಬಂದಿದೆ, ಈಗಲೂ ಮುಂದುವರೆದಿದೆ. ಈ ಯೋಜನೆಗಳ ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಕ್ಕೆ ಈಡಾಗಬೇಕಾಗಿಲ್ಲ. ಬಿಜೆಪಿ ಮೂಲತ: ಬಡವರ ವಿರೋಧಿ ಪಕ್ಷ.‌ ಅದು ಗ್ಯಾರಂಟಿ ಯೋಜನೆಗಳನ್ನು ಮೊದಲ ದಿನದಿಂದಲೇ ವಿರೋಧಿಸುತ್ತಾ ಬಂದಿದೆ. ಮೊದಲು ಗ್ಯಾರಂಟಿ ಯೋಜನೆಗಳ ಜಾರಿಯೇ ಅಸಾಧ್ಯ ಎಂದರು, ನಂತರದ ದಿನಗಳಲ್ಲಿ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದರು. ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎನ್ನುವ ಪುಕಾರು ಹಬ್ಬಿಸುತ್ತಿದ್ದಾರೆ. ಇದು ಅವರ ರಾಜಕೀಯ ಹತಾಶೆಯ ಪ್ರತೀಕ. ಮುಖ್ಯಮಂತ್ರಿಯಾಗಿ ಐದು ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೆ ತಂದಿದ್ದಲ್ಲದೆ, ಇದರಿಂದಾಗಿ ರಾಜ್ಯದ ಆರ್ಥಿಕತೆ ಮೇಲೆ ಏನೂ ದುಷ್ಪರಿಣಾಮ ಬೀರದಂತೆ ನೋಡಿಕೊಂಡಿದ್ದೇನೆ. ಇಂದು ಕರ್ನಾಟಕ ರಾಜ್ಯವು ತಲಾವಾರು…

Read More

ಬೆಂಗಳೂರು : ದೇಶದ ಪ್ರತಿಷ್ಠಿತ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಾದ ‘ಅಶೋಕ ವಿಶ್ವವಿದ್ಯಾಲಯ’ದ ನೂತನ ಉಪಕುಲಪತಿಯಾಗಿ ಪ್ರೊ. ರಿಷಿಕೇಶ ಟಿ. ಕೃಷ್ಣನ್ ನೇಮಕವಾಗಿದ್ದಾರೆ. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ನಡೆಸಿದ ಕಟ್ಟುನಿಟ್ಟಿನ ಆಯ್ಕೆ ಪ್ರಕ್ರಿಯೆಯ ನಂತರ ಈ ನೇಮಕ ಮಾಡಲಾಗಿದೆ. ಪ್ರೊ. ರಿಷಿಕೇಶ ಅವರು 2026ರ ಆಗಸ್ಟ್ 1ರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಮೂರು ವರ್ಷಗಳ ಕಾಲ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಹಿಂದೆ ಉಪಕುಲಪತಿಯಾಗಿದ್ದ ಪ್ರೊ. ಸೋಮಕ್ ರಾಯ್‌ಚೌಧರಿ ಅವರ ಜಾಗಕ್ಕೆ ಪ್ರೊ. ರಿಷಿಕೇಶ ಟಿ. ಕೃಷ್ಣನ್ ಅವರು ಬರಲಿದ್ದಾರೆ. ಯಾರು ಈ ಪ್ರೊ. ರಿಷಿಕೇಶ ಟಿ. ಕೃಷ್ಣನ್? ಪ್ರೊ. ರಿಷಿಕೇಶ ಅವರು ಭಾರತದ ಪ್ರಸಿದ್ಧ ಹಾಗೂ ಗೌರವಾನ್ವಿತ ಶಿಕ್ಷಣ ತಜ್ಞರಲ್ಲಿ ಒಬ್ಬರಾಗಿದ್ದಾರೆ. ಶಿಕ್ಷಣ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ದಶಕಗಳ ಅನುಭವವನ್ನು ಇವರು ಹೊಂದಿದ್ದಾರೆ. ಕಾನ್ಪುರದ ಐಐಟಿಯಿಂದ ಭೌತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್, ಮತ್ತು ಐಐಎಂ-ಅಹಮದಾಬಾದ್‌ನಿಂದ ಮ್ಯಾನೇಜ್ಮೆಂಟ್ ಹಾಗೂ ಪಬ್ಲಿಕ್ ಪಾಲಿಸಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಅವರು ಈ…

Read More

ಕೇರಳ : ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು ಉದ್ಘಾಟಿಸಿದರು. ಯೋಜನೆಯ ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ, ಈ ಬಸ್ ಅನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು.ಈ ಯೋಜನೆಯಡಿ ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಡೆಸುವ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ರಾಜ್ಯದಾದ್ಯಂತ ಸುಮಾರು 3,125 ಸಾಮಾನ್ಯ ಬಸ್‌ಗಳು ಈ ಯೋಜನೆಯ ವ್ಯಾಪ್ತಿಗೆ ಬರಲಿವೆ. ಯೋಜನೆಯಿಂದ KSRTCಗೆ ಆಗುವ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಖಾಸಗಿ ಬಸ್‌ಗಳಿಗೂ ಯಾವುದೇ ತೊಂದರೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆರಂಭಿಕ ಹಂತದಲ್ಲಿ ಮೊದಲ 100 ದಿನಗಳ ಕಾಲ ಮಹಿಳೆಯರು ಮತ್ತು ತೃತೀಯಲಿಂಗಿಗಳು ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಬಳಿಕ ಯೋಜನೆಯ ಪರಿಣಾಮವನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಅನುಷ್ಠಾನದಲ್ಲಿ ಹಲವು ಲೋಪದೋಷಗಳು ಕಂಡುಬಂದ ಹಿನ್ನೆಲೆಯಲ್ಲಿ, ಸರ್ಕಾರ ಈಗ ಮಹತ್ವದ ಪರಿಷ್ಕರಣೆಗೆ ಮುಂದಾಗಿದೆ. ಇನ್ಮುಂದೆ ರಾಜ್ಯದಲ್ಲಿ ಮತದಾನದ ಹಕ್ಕು ಹೊಂದಿರುವವರಿಗೆ (ವೋಟ್ ಇದ್ದವರಿಗೆ) ಮಾತ್ರ ಈ ಗ್ಯಾರಂಟಿ ಯೋಜನೆಗಳ ಲಾಭ ಸಿಗಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಗಳ ದುರುಪಯೋಗವನ್ನು ತಡೆಯಲು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಿಯಮಗಳನ್ನು ಬಿಗಿಗೊಳಿಸಲಾಗುತ್ತಿದೆ ಎಂದು ತಿಳಿಸಿದರು. ಆರಂಭದಲ್ಲಿ ಸಾರ್ವಜನಿಕರು ತರಾತುರಿಯಲ್ಲಿ ಅರ್ಜಿ ಸಲ್ಲಿಸಿದ್ದರಿಂದ ತಾಂತ್ರಿಕ ಹಾಗೂ ಪ್ರಾಯೋಗಿಕ ದೋಷಗಳು ಸೃಷ್ಟಿಯಾಗಿದ್ದು, ಇವುಗಳನ್ನು ಸರಿಪಡಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದರು. ಬ್ಯಾಂಕ್ ಖಾತೆ ಲಿಂಕ್ ದೋಷ: ಯಾರದೋ ಹಣ ಇನ್ನಾರದ್ದೋ ಅಕೌಂಟ್‌ಗೆ! ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಾರ್ವಜನಿಕರು ನೀಡಿದ ತಪ್ಪು ಮಾಹಿತಿಗಳಿಂದಾಗಿ ಸದ್ಯ ದೊಡ್ಡ ಗೊಂದಲ ನಿರ್ಮಾಣವಾಗಿದೆ. “ಯೋಜನೆಯ ಲಾಭ ಪಡೆಯಲು ಅಗತ್ಯ ದಾಖಲೆಗಳು…

Read More

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಜ್ಯೋತಿ’ಗೆ ಇದೀಗ ಭಾರಿ ಸರ್ಜರಿ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಇತ್ತೀಚೆಗಷ್ಟೇ ಗೃಹಲಕ್ಷ್ಮಿ ಯೋಜನೆಗೆ ನಿಯಮಾವಳಿಗಳ ಬಿಸಿ ಮುಟ್ಟಿಸಿದ್ದ ಸರ್ಕಾರ, ಇದೀಗ ಉಚಿತ ವಿದ್ಯುತ್ ಯೋಜನೆಯಲ್ಲೂ ಆಗುತ್ತಿರುವ ಲೋಪದೋಷಗಳನ್ನು ತಡೆಗಟ್ಟಲು ಕಠಿಣ ಕ್ರಮಗಳಿಗೆ ಮುಂದಾಗಿದೆ. ಅರ್ಹರಿಗೆ ಮಾತ್ರ ಯೋಜನೆಯ ಲಾಭ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 1.70 ಕೋಟಿಗೂ ಅಧಿಕ ಕುಟುಂಬಗಳು ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆದುಕೊಳ್ಳುತ್ತಿವೆ. ಇದರಿಂದಾಗಿ ಬೊಕ್ಕಸಕ್ಕೆ ಪ್ರತಿ ತಿಂಗಳು ಬರೋಬ್ಬರಿ 440 ಕೋಟಿ ರೂಪಾಯಿಗಳಷ್ಟು ಭಾರಿ ವೆಚ್ಚ ತಗುಲುತ್ತಿದೆ. ಆದರೆ, ಇಷ್ಟೊಂದು ದೊಡ್ಡ ಪ್ರಮಾಣದ ಹಣ ವ್ಯಯವಾಗುತ್ತಿದ್ದರೂ, ಯೋಜನೆಯ ದುರ್ಬಳಕೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಈ ಪರಿಶೀಲನಾ ಕ್ರಮ ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ವಾಣಿಜ್ಯ ಬಳಕೆಗೆ ಬ್ರೇಕ್ ಮುಖ್ಯವಾಗಿ, ಗೃಹಬಳಕೆಯ ಹೆಸರಿನಲ್ಲಿ ಉಚಿತ ವಿದ್ಯುತ್ ಪಡೆದುಕೊಂಡು, ಅದನ್ನು ವಾಣಿಜ್ಯ ಉದ್ದೇಶಗಳಿಗೆ (Commercial Use)…

Read More

ನವದೆಹಲಿ: ಪಾಕಿಸ್ತಾನ ವಾಯುಸೇನೆಯ (PAF) ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಭೀಕರವಾಗಿ ಪತನಗೊಂಡಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಈ ಭೀಕರ ದುರಂತದಲ್ಲಿ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಹೊರಬರಲಾಗದೆ ವಿಮಾನದೊಳಗೇ ಸಜೀವ ದಹನವಾಗಿದ್ದಾರೆ. ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪ್ರಮುಖ ಹೆದ್ದಾರಿಯೊಂದರ ಮೇಲೆ ಈ ಘಟನೆ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಹೆದ್ದಾರಿಗೆ ಅಪ್ಪಳಿಸಿ ಹೊತ್ತಿ ಉರಿದ ವಿಮಾನ ನಿಯಮಿತ ತರಬೇತಿ ಹಾರಾಟ ನಡೆಸುತ್ತಿದ್ದ ಈ ವಾಯುಸೇನೆ ವಿಮಾನವು ಹತೋಟಿ ತಪ್ಪಿ ಪಂಖ್ತುಂಕ್ವಾದ ಜನನಿಬಿಡ ಹೆದ್ದಾರಿಗೆ ನೇರವಾಗಿ ಅಪ್ಪಳಿಸಿದೆ. ರಸ್ತೆಗೆ ಅಪ್ಪಳಿಸುತ್ತಿದ್ದಂತೆ ವಿಮಾನದಲ್ಲಿ ಭಾರಿ ಪ್ರಮಾಣದ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಇಡೀ ವಿಮಾನವು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿದೆ. ವಿಮಾನಕ್ಕೆ ಹೊತ್ತಿಕೊಂಡ ಜ್ವಾಲೆ ಎಷ್ಟು ತೀವ್ರವಾಗಿತ್ತೆಂದರೆ, ಸ್ಥಳೀಯರು ರಕ್ಷಣಾ ಕಾರ್ಯಕ್ಕೆ ಧಾವಿಸುವಷ್ಟರಲ್ಲೇ ಇಬ್ಬರು ಪೈಲಟ್‌ಗಳು ತೀವ್ರವಾಗಿ ಸುಟ್ಟು ಭಸ್ಮವಾಗಿದ್ದಾರೆ. ಬೈಕ್ ಸವಾರನಿಗೂ ಗಂಭೀರ ಗಾಯ ವಿಮಾನವು ಹೆದ್ದಾರಿಯ ಮೇಲೆ ಪತನಗೊಂಡ ಸಮಯದಲ್ಲಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಇತ್ತು ಎನ್ನಲಾಗಿದೆ. ವಿಮಾನವು…

Read More