Subscribe to Updates
Get the latest creative news from FooBar about art, design and business.
Author: kannadanewsnow05
ಮೈಸೂರು : ಇತ್ತೀಚಿಗೆ ತಾನೇ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪೌರಾಯುಕ್ತೆ ಅಮೃತಗೌಡಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿಂದನೆ ಮಾಡಿದ್ದು ಅಲ್ಲದೆ ಕೊಲೆ ಬೆದರಿಕೆ ಹಾಕಿದ್ದ. ಈ ಒಂದು ಘಟನೆ ಮಾಸುವ ಮುನ್ನವೇ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿಯೇ ಮಹಿಳಾ ಅಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಹೌದು ಸಿಎಂ ತವರು ಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಗ್ರಾಮದ ಆಡಳಿತ ಅಧಿಕಾರಿಗೆ ಪುಟ್ಟಸ್ವಾಮಿಯ ಕೊಲೆ ಬೆದರಿಕೆ ಹಾಕಿದ್ದಾನೆ ಮೊದಲು ನಿನ್ನ ಹೆಣ ಬೀಳುತ್ತೆ ಎಂದು ಸ್ಥಳೀಯ ಪುಟ್ಟಸ್ವಾಮಿ ಕೊಲೆ ಬೆದರಿಕೆ ಹಾಕಿ ಮೊಬೈಲ್ ಕಿತ್ತುಕೊಂಡಿದ್ದಾನೆ. ಮೈಸೂರು ದಕ್ಷಿಣ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು ಅವಾಚ್ಯ ಶಬ್ದಗಳಿಂದಲೇ ಕರ್ತವ್ಯ ಎಂದ FIR ದಾಖಲಿಸಲಾಗಿದೆ. ಸರ್ಕಾರದ ಜಮೀನು ಸ್ವಾಧೀನದ ವೇಳೆ ಅಧಿಕಾರಿಗೆ ಧಮ್ಕಿ ಹಾಕಲಾಗಿದೆ ಜಮೀನು ಪರಿಶೀಲನೆಗೆ ತೆರಳಿದ ಗ್ರಾಮದ ಆಡಳಿತ ಅಧಿಕಾರಿ ಬಂಡಿಪಾಳ್ಯ ವೃತ್ತದ ಜಿ ಭವ್ಯ ಎನ್ನುವ ಅಧಿಕಾರಿ ಗ್ರಾಮ ಸಹಾಯಕ ನವೀನ್ ಕುಮಾರ್ ಜೊತೆಗೆ ತೆರಳಿದಾಗ ಕೊಲೆ ಬೆದರಿಕೆ…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಮೂವರು ಸವಾರರು ಹಿಟ್ ಅಂಡ್ ನನಗೆ ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅಗಲಕೋಟೆ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದೆ. ಬೈಕ್ ಸವಾರ ತೌಸಿಫ್ ಸೇರಿದಂತೆ ಮೂವರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಬೈಕಿಗೆ ಡಿಕ್ಕಿ ಹೊಡಿಸಿ ಟಿಪ್ಪರ್ ಸಮೇತ ಚಾಲಕ ಪರಾರಿಯಾಗಿದ್ದಾನೆ. ದೇವನಹಳ್ಳಿಯಿಂದ ಬೂದಿಗೆರೆ ರಸ್ತೆಯಲ್ಲಿ ಸವರರು ತೆರಳುತ್ತಿದ್ದರು. ಅದು ವೇಗವಾಗಿ ಬಂದು ಟಿಪ್ಪರ್ ವಾಹನ ಬೈಕಿಗೆ ಡಿಕ್ಕಿ ಹೊಡೆದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಮೂವರ ತಲೆಗಳು ಸಂಪೂರ್ಣ ಛಿದ್ರ ಛಿದ್ರವಾಗಿವೆ. ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಟಿಪ್ಪರ್ ಚಾಲಕನಿಗಾಗಿ ಶೋಧ ಮುಂದುವರಿಸಿದ್ದಾರೆ.
ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ ಹನುಮಂತನ್ನು ಆರಾಧನೆ ಮಾಡುವವರಿಗೆ ಅವರ ಕೋರಿಕೆಗಳು ಖಂಡಿತವಾಗಿ ನೆರವೇರಿತ್ತವೆ. ಭಕ್ತರ ಕೋರಿಕೆಯನ್ನು ಅನುಸರಿಸಿ ಆಂಜನೇಯ ಸ್ವಾಮಿಯ ಶ್ಲೋಕಗಳನ್ನು ಭಕ್ತಿಯಿಂದ ಪಠಿಸುವುದರಿಂದ ತಮ್ಮ ತಮ್ಮ ಕಾರ್ಯ ಸಿದ್ಧಿಯನ್ನು ಸಾಧಿಸಬಹುದು 1.- *ವಿದ್ಯಾ ಪ್ರಾಪ್ತಿಗೆ ಪೂಜ್ಯಾಯ ವಾಯುಪುತ್ರಾಯ ವಾಗ್ದೋಷ ವಿನಾಶನ | ಸಕಲ ವಿದ್ಯಾಂಕುರಮೇ ದೇವ ರಾಮದೂತ ನಮೋಸ್ತುತೆ || 2. :- *ಉದೋಗ ಪ್ರಾಪ್ತಿಗೆ ಹನುಮಾನ್ ಸರ್ವಧರ್ಮಜ್ಞ ಸರ್ವಾ ಪೀಡಾ ವಿನಾಶಿನೇ | ಉದ್ಯೋಗ ಪ್ರಾಪ್ತ ಸಿದ್ಧ್ಯರ್ಥಂ ಶಿವರೂಪಾ ನಮೋಸ್ತುತೇ || 3. :- ಕಾರ್ಯ ಸಾಧನೆಗೆ ಅಸಾಧ್ಯ ಸಾಧಕ ಸ್ವಾಮಿನ್ ಅಸಾಧ್ಯಂ ತಮಕಿಮ್ ವದ | ರಾಮದೂತ…
ಬಾಗಲಕೋಟೆ : ಕೊಲೆಯಾದ ಸ್ಥಿತಿಯಲ್ಲಿ ಒಂಟಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧ ಹೊಂದಿದ ಪ್ರಿಯಕರನೆ ಮಹಿಳೆಯ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾಗಿದೆ. ಜನವರಿ 14ರಂದು ರಾತ್ರಿಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನಡೆದಿತ್ತು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಪ್ರಿಯಕರ ಶ್ರೀಶೈಲ ಮಹಿಳೆಯನ್ನು ಕೊಲಗೈದು ಹಾರ್ಟ್ ಅಟ್ಯಾಕ್ ಆಗಿದೆ ಎಂದು ಬಿಂಬಿಸಿದ್ದ. ಆಸ್ಪತ್ರೆಗೆ ಸೇರಿಸಲು ಯತ್ನಿಸಿ ಕಣ್ಣೀರು ಹಾಕಿ ಶ್ರೀಶೈಲ್ ಡ್ರಾಮ ಮಾಡಿದ್ದ ಕತ್ತು ಹಿಸುಕಿ ಯಮನವ್ವ (40) ಎನ್ನುವ ಮಹಿಳೆಯನ್ನು ಶ್ರೀಶೈಲ್ ಪಾಟೀಲ್ (67) ಭೀಕರವಾಗಿ ಕೊಲೆ ಮಾಡಿದ್ದ. ಯಮನವ್ವ ಕಳೆದ 20 ವರ್ಷದ ಹಿಂದೆ ಗಂಡನಿಂದ ವಿಚ್ಛೇದನ ಪಡೆದಿದ್ದಳು. ಬಳಿಕ ಅದೇ ಗ್ರಾಮದ ಶ್ರೀಶೈಲ್ ಪಾಟೀಲ್ ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಇತ್ತೀಚಿಗೆ ಯುವಕನ ಜೊತೆ ಯಮುನವ್ವ ಸಂಬಂಧ ಹೊಂದಿದ್ದಾಳೆ ಎಂದು ಭಾವಿಸಿ, ನನಗೆ ಮೋಸ ಮಾಡುತ್ತಿದ್ದಾಳೆ ಎಂದು ಶ್ರೀಶೈಲ್ ಆಕೆ…
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರು ಶಿವಮೊಗ್ಗ ಬೆಳಗಾವಿ ಧಾರವಾಡ ಹಾಗೂ ಕಲ್ಬುರ್ಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಈ ಒಂದು ಕೇಸ್ಗೆ ಟ್ವಿಸ್ಟ್ ಸಿಕ್ಕಿದ್ದು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಕೇವಲ 30 ರೂಪಾಯಿಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ಹೌದು ಈ ಕೃತ್ಯದಲ್ಲಿ 6 ಶಿಕ್ಷಕರು ಹಾಗೂ 9 ವಿದ್ಯಾರ್ಥಿಗಳು ಭಾಗಿಯಾಗಿದ್ದು, ಕೆಲವರಿಗೆ 30 ರೂ.ಗೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿರುವ ವಿಚಾರ ತಿಳಿದು ಬಂದಿದೆ. ಪ್ರಶ್ನೆ ಪತ್ರಿಕೆ ಪಡೆದ ಕೆಲವು ವಿದ್ಯಾರ್ಥಿಗಳು ಬರೀ 30 ರೂ.ಗೆ ಮಾರಾಟ ಮಾಡಿದ್ದಾರೆ. ಇನ್ನು ಕೆಲವರು 50 ರೂ. 100 ರೂ. ಹಾಗೂ 150 ರೂ.ಗೆ ಮಾರಾಟ ಮಾಡಿದ್ದಾರೆ. ಮಾರಾಟ ಮಾಡಿ ಬಂದಿರೋ ಹಣ 1500 ರೂ. ಆಗಿದೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಬಗ್ಗೆ ಶಿಕ್ಷಕರ ಬ್ಯಾಂಕ್ ಅಕೌಂಟ್ಗಳನ್ನು ಸೈಬರ್…
ಬೆಳಗಾವಿ : ಬೆಳಗಾವಿಯಲ್ಲಿ ಬೀದಿ ನಾಯಿಗೆ ಹೆದರಿ ಬೈಕ್ ಸವಾರ ಒಬ್ಬ ಸಾವನ್ನಪ್ಪಿರುವ ವಿಚಿತ್ರ ಘಟನೆ ವರದಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಕುಂಬಾರ ಗಲ್ಲಿಯಲ್ಲಿ ಈ ಒಂದು ಕಡೆ ನಡೆದಿದ್ದು, ವಿಶ್ವನಾಥ ಶಿರೋಳ ಎಂಬ ಬೈಕ್ ಸವಾರ ಸಾವನಪ್ಪಿದ್ದಾನೆ. ಬೈಕ್ ಅಪಘಾತ ಎಂದು ಭಾವಿಸಿ ಪೊಲೀಸರು ಸುಮ್ಮನಾಗಿದ್ದರು. ಆದರೆ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ನೋಡಿ ಸಾವಿನ ರಹಸ್ಯ ಇದೀಗ ಬಯಲಾಗಿದೆ.ಬೀದಿ ನಾಯಿ ಒಂದು ವಿಶ್ವನಾಥನನ್ನು ಅಟ್ಟಾಡಿಸಿಕೊಂಡು ಬಂದಾಗ ಸ್ಕೂಟಿಯಲ್ಲಿ ತೆರಳುತ್ತಿದ್ದ. ವಿಶ್ವನಾಥ್ ವೇಗವಾಗಿ ಓಡಿಸಿದ್ದಾರೆ. ಈ ವೇಳೆ ಮನೆಯ ಗೋಡೆಗೆ ಸ್ಕೂಟಿ ಡಿಕ್ಕಿ ಹೊಡೆದು ಸ್ಥಳದಲ್ಲೇ ವಿಶ್ವನಾಥ್ ಸಾವನಪ್ಪಿದ್ದಾರೆ.
ಬೆಂಗಳೂರು : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ವೇಳೆ ಕಾಂಗ್ರೆಸ್ ಕಾರ್ಯಕರ್ತನು ಒಬ್ಬ ಸಾವನ್ನಪ್ಪಿದ್ದ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಜನಾರ್ಧನ ರೆಡ್ಡಿ ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಸಮಾವೇಶ ನಡೆಸಲು ಮುಂದಾಗಿದ್ದಾರೆ. ಇನ್ನು ಈ ಒಂದು ಸಮಾವೇಶದ ಕುರಿತಾಗಿ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಬಳ್ಳಾರಿಯಲ್ಲಿ ಸಮಾವೇಶಕ್ಕೆ ಇದುವರೆಗೂ ಪರ್ಮಿಷನ್ ಕೊಟ್ಟಿಲ್ಲ. ಅವಕಾಶ ಕೊಡೋ ವಿಚಾರ ಸ್ಥಳೀಯ ಪೊಲೀಸರಿಗೆ ಬಿಟ್ಟಿದ್ದೇವೆ. ಅಲ್ಲಿನ ಸ್ಥಿತಿಗತಿ ನೋಡಿಕೊಂಡು ನೀವು ಅವರಿಗೆ ಪರ್ಮಿಷನ್ ಕೊಡಬೇಕ ಬೇಡ್ವಾ ಅನ್ನೋದನ್ನ ನೀವೇ ತೀರ್ಮಾನ ಮಾಡಿ ಅಂತ ಹೇಳಿದ್ದೇವೆ. ಹಾಗಾಗಿ ಅಲ್ಲಿನ ಸ್ಥಳೀಯ ಪೊಲೀಸರು ಪರ್ಮಿಷನ್ ಕೊಡುವ ವಿಚಾರವಾಗಿ ನಿರ್ಧರಿಸುತ್ತಾರೆ ಎಂದರು.
ಗದಗ : ಜಿಲ್ಲೆಯ ಐತಿಹಾಸಿಕ ಗ್ರಾಮ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಈಗ ಗ್ರಾಮವನ್ನು ಸ್ಥಳಾಂತರಿಸುವ ಯಾವುದೇ ಪ್ರಸ್ತಾಪವಿಲ್ಲ. ನಡೆಯುತ್ತಿರುವ ಉತ್ಖನನದ ವೇಳೆ ಮಹತ್ವದ ಅವಶೇಷ ಸಿಕ್ಕರೆ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್ ಶ್ರೀಧರ್ ಅವರು ತಿಳಿಸಿದ್ದಾರೆ. ಈ ಮೂಲಕ ಗ್ರಾಮವನ್ನು ಸ್ಥಳಾಂತರಿಸುವ ಮುನ್ಸೂಚನೆ ನೀಡಿದ್ದಾರೆ. ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ನಡೆಯುತ್ತಿದೆ. ಉತ್ಖನನ ವೇಳೆ ಪುರಾತನ ವಸ್ತು ಒಂದು ಪತ್ತೆಯಾಗಿದ್ದು, ಕೋಟೆ ವೀರಭದ್ರೇಶ್ವರ ದೇವಸ್ಥಾನದ ಬಳಿ ಉತ್ಖನನ ಕಾರ್ಯ ನಡೆಸಲಾಯಿತು. ಈ ವೇಳೆ ಎರಡನೇ ದಿನದ ಉತ್ಕನ ಕಾರ್ಯದ ವೇಳೆ ಪುರಾತನ ಮಸ್ತು ಒಂದು ಪತ್ತೆಯಾಗಿದೆ. ನಿಧಿ ಪತ್ತೆಯ ಬಳಿಕ ಲಕ್ಕುಂಡಿಯಲ್ಲಿ ಪುರಾತನ ಮತ್ತು ಪತ್ತೆಯಾಗಿದೆ. ಪತ್ತೆಯಾದ ಪುರಾತನ ವಸ್ತು ಕುತೂಹಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆ ಮತ್ತಷ್ಟು ನಿಧಿ ಸಿಕ್ಕರೆ, ಇಡೀ ಗ್ರಾಮವೇ ಸ್ಥಳಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಸಹ ಉತ್ಖನನ ಕಾರ್ಯ ಮುಂದುವರೆಲಿದೆ. ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಅಂಗಳದಲ್ಲಿ ಉತ್ಖನನ ನಡೆಯುತ್ತಿದೆ. ಈ…
ಹುಬ್ಬಳ್ಳಿ : ಜನವರಿ 24ರಂದು ಸರ್ಕಾರದಿಂದ 42,345 ಮನೆಗಳ ಹಂಚಿಕೆ ಮಾಡಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ವಸತಿ ಸಚಿವ ಜಮೀರ್ ಅಹ್ಮದ್ಕನ್ ಹೇಳಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ ಮನೆಗಳ ಹಂಚಿಕೆ ಮಾಡಲಾಗುತ್ತದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದರು. ಹಿಂದಿನ ಬಿಜೆಪಿ ಸರ್ಕಾರ ಬಡವರಿಗೆ ಒಂದು ಮನೆ ಕೂಡ ನೀಡಲಿಲ್ಲ ಬಡವರ ಮನೆಗೆ ಕೇಂದ್ರ ಸರ್ಕಾರ ಶೇಕಡ 18ರಷ್ಟು ಜಿಎಸ್ಟಿ ಹಾಕುತ್ತಿದೆ. 2024 ರಲ್ಲಿ ನಾವು 36,789 ಮನೆಗಳನ್ನು ನೀಡಿದ್ದೆವು . ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾರೆ. ಆದರೆ ಗ್ಯಾರಂಟಿಗಳ ಜೊತೆಗೆ ಬಡವರಿಗೆ ಮನೆಗಳನ್ನು ನೀಡುತ್ತಿದ್ದೇವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳು ಇರಲಿಲ್ಲ ಆದರೂ ಬಿಜೆಪಿಯವರು ಬಡವರಿಗೆ ಒಂದೇ ಒಂದು ಮನೆ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.
ಬೀದರ್ : ಶತಾಯುಷಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ (102) ಅವರು ನಿನ್ನೆ ವಿಧಿವಶರಾಗಿದ್ದಾರೆ. ಭೀಮಣ್ಣ ಕಂಡ್ರಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ರಾಜಕೀಯ ಗಣ್ಯರು ಸಂತಾಪ್ ಸೂಚಿಸಿದ್ದು, ಇದೀಗ ಕಾಂಗ್ರೆಸ್ ನಾಯಕರ ರಾಹುಲ್ ಗಾಂಧಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ನಲ್ಲಿ ರಾಹುಲ್ ಗಾಂಧಿ ಸಂತಾಪಸೂಚಿಸಿದ್ದು ಭೀಮಣ್ಣ ಕಂಡ್ರೆ ಅವರ ನಿಧನ ನನಗೆ ತೀವ್ರ ನೋವು ತಂದಿದೆ. ಅವರು ಸ್ವತಂತ್ರ ಹೋರಾಟಗಾರ ಹಾಗೂ ಶಿಕ್ಷಣ ತಜ್ಞರಾಗಿದ್ದರು. ತಮ್ಮ ಸೇವೆಯನ್ನ ಕರ್ನಾಟಕ ಜನರಿಗೆ ಮುಡುಪಾಗಿಟ್ಟಿದ್ದರು. ಖಂಡ್ರೆ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ಟ್ವೀಟ್ ಖಾತೆಯ ಮೂಲಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. https://twitter.com/RahulGandhi/status/2012378703851061651?t=2bDjT1zv4kwC3fIHmtcnWg&s=19














