Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಇಂದು ಲಿಫ್ಟ್ ನ ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಲಿಫ್ಟನಲ್ಲಿ ಸಿಲುಕಿರುವ ಘಟನೆ ನಡೆದಿದೆ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬರುತ್ತಿದ್ದರು. ಬೆಂಗಳೂರಿನ ಬಿಎಂಆರ್ಸಿಎಲ್ ಮುಖ್ಯ ಕಚೇರಿಯಲ್ಲಿ ಪ್ರಗತಿ ಪರಿಶೀಲನ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಬಂದಿದ್ದರು. ಈ ವೇಳೆ ಲಿಫ್ಟ್ ನಲ್ಲಿ ಕೆಲ ಕಾಲ ಸಿಲುಕಿದ್ದರು. ಬಳಿಕ ಸೆಕ್ಯೂರಿಟಿ ಗಾರ್ಡ್ ಗಳು ಲಿಫ್ಟ್ ಓಪನ್ ಮಾಡಿದರು.
ಬೆಂಗಳೂರು : ನಕಲಿ ಸ್ಟ್ಯಾಂಪ್ ಪೇಪರ್ ಹಗರಣದಲ್ಲಿ ಶ್ರೀನಿವಾಸ್ ನಾಯ್ಡು CBI ವಶಕ್ಕೆ ಪಡೆದುಕೊಂಡಿದೆ. ದಿ.ಆದಿಕೇಶವುಲು ನಾಯ್ಡು ಪುತ್ರ ಶ್ರೀನಿವಾಸ್ ನಾಯ್ಡುಯನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದ್ದಾರೆ. ಟಿಟಿಡಿ ಮಾಜಿ ಅಧ್ಯಕ್ಷ, ಮಾಜಿ ಸಂಸದ ಆದಿಕೇಶವುಲು ಪುತ್ರನನ್ನು ಇದೀಗ CBI ವಶಕ್ಕೆ ಪಡೆದುಕೊಂಡಿದ್ದಾರೆ. ಇದೆ ಪ್ರಕರಣದಲ್ಲಿ ಸಾಕ್ಷಿ ನಾಶ ಆರೋಪದಲ್ಲಿ ಡಿವೈಎಸ್ಪಿ ಮೋಹನ್ ಸಹ ಸಿಬಿಐ ವಶಕೆ ಪಡೆದುಕೊಂಡಿದ್ದಾರೆ. ನಕಲಿ ಸ್ಟ್ಯಾಂಪ್ ಪೇಪರ್ ಮತ್ತು ರಘುನಾಥ್ ಕೊಲೆ ಕೇಸ್ ನಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಆದಿಕೇಶವುಲು ಪುತ್ರಿ ಕಲ್ಪಜಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 2019 ರಲ್ಲಿ ಗೆಸ್ಟ್ ಹೌಸ್ ನಲ್ಲಿ ರಘುನಾಥ್ ಮೃತಪಟ್ಟಿದ್ದರು. HAL ಠಾಣಾ ವ್ಯಾಪ್ತಿಯಲ್ಲಿ ನೇಣುಬಿಗಿದು ಸ್ಥಿತಿಯಲ್ಲಿ ಪತ್ತೆ ಆಗಿದ್ದ. ಸಾವಿಗೂ ಮುನ್ನ ಆಸ್ತಿ ತಮ್ಮ ಹೆಸರಿಗೆ ಮಾರಿದ ರೀತಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಆಸ್ತಿಗಾಗಿ ಕೊಲೆ ಎಂದು HAL ಠಾಣೆಗೆ ದೂರು ನಿದ್ದಿದ್ದ ರಘುನಾಥ್ ಪತ್ನಿ ಪ್ರಕರಣದ ತನಿಖೆಯನ್ನು SIT ಗೆ ನೀಡಲಾಗಿತ್ತು. ನಂತರ ಈ ಪ್ರಕರಣ ಸಿಬಿಐಗೆ ನೀಡಿ ಹೈಕೋರ್ಟ್…
ಅವಿನಾಶ್ ಆರ್ ಭೀಮಸಂದ್ರ ನವದೆಹಲಿ: ನೀವು ಹೂಡಿಕೆಯನ್ನು ಯೋಜಿಸುತ್ತಿದ್ದರೆ ಮತ್ತು ನಿಮ್ಮ ಹಣವು ಸುರಕ್ಷಿತವಾಗಿರಲು ಮತ್ತು ಅದರ ಮೇಲೆ ಬಲವಾದ ಆದಾಯವನ್ನು ಪಡೆಯಲು ಬಯಸಿದರೆ, ಈ ನಿಟ್ಟಿನಲ್ಲಿ ಪೋಸ್ಟ್ ಆಫೀಸ್ (ಪೋಸ್ಟ್ ಆಫೀಸ್ ಉಳಿತಾಯ ಯೋಜನೆಗಳು) ನಡೆಸುವ ಯೋಜನೆಗಳು ನಿಮಗೆ ಉಪಯುಕ್ತವಾಗಬಹುದು. ಇವುಗಳಲ್ಲಿ ಮಾಡಿದ ಹೂಡಿಕೆಗಳಿಗೆ, ಅಂದರೆ ಅಪಾಯ-ಮುಕ್ತ ಹೂಡಿಕೆಗೆ ಸರ್ಕಾರವೇ ಭದ್ರತೆಯನ್ನು ಖಾತರಿಪಡಿಸುತ್ತದೆ. ಇಂತಹ ಸರ್ಕಾರಿ ಯೋಜನೆಯ ಬಗ್ಗೆ ನಾವು ನಿಮಗೆ ಹೇಳುತ್ತಿದ್ದೇವೆ, ಇದರಲ್ಲಿ ಹಣವನ್ನು ಹೂಡಿಕೆ ಮಾಡುವ ಮೂಲಕ ನೀವು ಕೇವಲ 2 ಲಕ್ಷದವರೆಗೆ ಬಡ್ಡಿಯಿಂದ ಗಳಿಸಬಹುದು. ಹೌದು, ಇದೊಂದು ಅದ್ಭುತ ಯೋಜನೆ, ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್, ಇದರ ಬಗ್ಗೆ ತಿಳಿದುಕೊಳ್ಳೋಣ… 1 ರಿಂದ 5 ವರ್ಷಗಳವರೆಗೆ ಹೂಡಿಕೆಯ ಆಯ್ಕೆ ಪೋಸ್ಟ್ ಆಫೀಸ್ ಸಣ್ಣ ಉಳಿತಾಯ ಯೋಜನೆಗಳು ತಮ್ಮ ಉತ್ತಮ ಆದಾಯದಿಂದಾಗಿ ಸಾಕಷ್ಟು ಜನಪ್ರಿಯವಾಗಿವೆ. ಪೋಸ್ಟ್ ಆಫೀಸ್ ಟೈಮ್ ಡೆಪಾಸಿಟ್ ಸ್ಕೀಮ್ (ಪಿಒ ಟಿಡಿ ಸ್ಕೀಮ್) ಬಗ್ಗೆ ಮಾಹಿತಿ ತಿಳಿದುಕೊಳ್ಲೋಣ. ಆದ್ದರಿಂದ ಇದರಲ್ಲಿ ಹೂಡಿಕೆದಾರರು…
ಮೈಸೂರು : ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಾರೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ ? ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಶಾಂತಿ ಹಾಗೂ ಭಾತೃತ್ವ ಕಾಪಾಡಲು ಈ ಮಸೂದೆ ಜಾರಿ ಮಾಡಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲೆಂದು ಮಸೂದೆ ರೂಪಿಸಿದೆ ಎಂದರು. ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕಾಗಿ ಎಂದು ಅವರು ಹೇಳಿದರು. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆ ಆಗುವಾಗ ಲಪಟಾಯಿಸುವ ಪ್ರಶ್ನೆ…
ಮೈಸೂರು : ಇಂದು ಬೆಳಿಗ್ಗೆ ತಾನೇ ಹಾಸನ ಜಿಲ್ಲೆಯ ಅಲ್ದೂರು ತಾಲೂಕಿನ ತಹಶೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು ಅದರ ಬೆನ್ನಲ್ಲೇ, ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ RDX ಬಾಂಬ್ ಸ್ಪೋಟಿಸೋದಾಗಿ ಇದೀಗ ಬೆದರಿಕೆ ಸಂದೇಶ ಬಂದಿದೆ. ಸರಗೂರು ತಾಲೂಕು ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕು ಕಚೇರಿಗೆ ಇ-ಮೇಲ್ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಪೋಟಗೊಳ್ಳುತ್ತೆ ಎಂದು ಸಂದೇಶ ಬಂದಿದೆ. ಇ- ಮೇಲ್ ನೋಡಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಸದ್ಯಘಟನಾ ಸ್ಥಳಕ್ಕೆ ಸರಗೂರು ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಮೈಸೂರು : ಮಾಜಿ ಸಚಿವ ಕೆ ಎನ್ ರಾಜಣ್ಣರನ್ನ ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದರು ಈ ವೇಳೆ ಕೆ.ಎನ್ ರಾಜಣ್ಣರನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದು ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಕ್ರಾಂತಿ ಬೆಳೆಯ ರಾಜ್ಯ ಕಾಂಗ್ರೆಸ್ ನಲ್ಲಿ ಕ್ರಾಂತಿ ಆಗಲಿದೆ ಎನ್ನುವ ವಿಚಾರವಾಗಿ ಯಾವ ಕ್ರಾಂತಿಯಾಗಿಲ್ಲ ಏನು ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಕೆ.ಎನ್ ರಾಜಣ್ಣರನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್ಎಂ ಕೃಷ್ಣ ಮತ್ತು ಅಂದಿನ ಸರ್ಕಾರ. ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು ಸರ್ಕಾರ ಇರುತ್ತದೆ ಅಧಿಕಾರ ಕೊಡುತ್ತದೆ ಎಂದು ತಿಳಿಸಿದರು. ಎಲ್ಲರಿಗಿಂತ ಪಕ್ಷ…
ಮೈಸೂರು : ಮಾಜಿ ಸಚಿವ ಕೆ ಎನ್ ರಾಜಣ್ಣರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಭೇಟಿಯಾಗಿದ್ದರು ಈ ವೇಳೆ ಕೆ.ಎನ್ ರಾಜಣ್ಣರನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ತಿರುಗೇಟು ನೀಡಿದ್ದು ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಕ್ರಾಂತಿ ಬೆಳೆಯ ರಾಜ್ಯ ಕಾಂಗ್ರೆಸ್ ನಲ್ಲಿ ಕ್ರಾಂತಿ ಆಗಲಿದೆ ಎನ್ನುವ ವಿಚಾರವಾಗಿ ಯಾವ ಕ್ರಾಂತಿಯಾಗಿಲ್ಲ ಏನು ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಕೆ.ಎನ್ ರಾಜಣ್ಣರನ್ನು ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ನಾನೇ ಎಂದು ಡಿಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್ಎಂ ಕೃಷ್ಣ ಮತ್ತು ಅಂದಿನ ಸರ್ಕಾರ. ಅಧಿಕಾರದಲ್ಲಿದ್ದಾಗ ಮಾಡಿದ್ದನ್ನು ನಾನು ಮಾಡಿದೆ ಅಂತ ಹೇಳಬಾರದು ಸರ್ಕಾರ ಇರುತ್ತದೆ ಅಧಿಕಾರ ಕೊಡುತ್ತದೆ ಎಂದು ತಿಳಿಸಿದರು. ಎಲ್ಲರಿಗಿಂತ ಪಕ್ಷ…
ಹಾಸನ : ಹಾಸನ ಜಿಲ್ಲೆಯ ಆಲೂರು ತಾಲೂಕು ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿಯಿಂದ ಇಮೇಲ್ ಬೆದರಿಕೆ ಸಂದೇಶ ಬಂದಿದೆ.ಈ ಕುರಿತು ತಹಶೀಲ್ದಾರ್ ಮಲ್ಲಿಕಾರ್ಜುನ್ ಗೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಕೂಡಲೇ ತಶಿಲ್ದಾರ್ ಮಲ್ಲಿಕಾರ್ಜುನ್ ಪೊಲೀಸರಿಗೆ ಈ ಕುರಿತು ಮಾಹಿತಿ ತಲುಪಿಸಿದ್ದಾರೆ. ಆಲೂರು ಪೊಲೀಸ್ ಠಾಣೆ ಪಕ್ಕದಲ್ಲಿಯೇ ತಾಲೂಕು ಕಚೇರಿ ಇದೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಡಿಸೆಂಬರ್ 15 ರಂದು ಸಹ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು.
BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30 ಮಂದಿಗೆ ಗಾಯ!
ಬೆಳಗಾವಿ : ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಮೈಸೂರಿನಲ್ಲಿ ನಡೆಯುವ ವಿಶ್ವ ರೈತ ಸಮಾವೇಶಕ್ಕೆ ತೆರಳುತ್ತಿದ್ದ ವಾಹನ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬೈಲಹೊಂಗಲ ತಾಲೂಕಿನ ಜಾಲಿಕ್ಕೊಪ್ಪ ಗ್ರಾಮದಲ್ಲಿ ನಡೆದಿದೆ. ಜಾಲಿಕೊಪ್ಪ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಪರಿಣಾಮ ಸುಮಾರು 9ಕ್ಕೂ ಹೆಚ್ಚು ಜನರ ಕೈಕಾಲು ಬೆನ್ನಿಗೆ ಗಂಭೀರ ಗಾಯಗಳಾಗಿವೆ. ಬೈಲಹೊಂಗಲ ತಾಲೂಕಿನ ಗರಜೂರ ಗ್ರಾಮದ ರೈತರು, ಮಹಿಳೆಯರು ಸಮಾವೇಶಕ್ಕೆ ತೆರಳುವಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಬೆಳಗಾವಿ ಹಾಗೂ ಬೈಲಹೊಂಗಲದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಕ್ಷಿಣಕನ್ನಡ : ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪ್ರಶಾತಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ 4000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಅದರ ಬೆನ್ನೆಲೆ ಇದೀಗ ಆರು ತಿಂಗಳ ಸಂಬಳ ಇಲ್ಲದೆ ಗುತ್ತಿಗೆ ವೈದ್ಯಾಧಿಕಾರಿ ರಾಜಿನಾಮೆ ನೀಡಿರುವ ಘಟನೆ ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲೋಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಆಗಿರುವಂತಹ ಡಾಕ್ಟರ್ ಕುಲದೀಪ್ ಎಂ ಡಿ ರಾಜೀನಾಮೆ ನೀಡಿದ್ದಾರೆ ಕಳೆದ ಎರಡುವರೆ ವರ್ಷದಿಂದ ಕುಲದೀಪ್ ವೈದ್ಯಾಧಿಕಾರಿಯಾಗಿದ್ದರು ಸಂಬಳ ಆಗದೆ ಇರುವುದರಿಂದ ಜೀವನ ನಿರ್ವಹಣೆ ಕಷ್ಟ ಅಂತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ರಾಜೀನಾಮೆ ನೀಡಿದ್ದಾರೆ.













