Author: kannadanewsnow05

ಕೊಪ್ಪಳ : ಕೊಪ್ಪಳ ನಗರಸಭೆಯಲ್ಲಿ 10 ಕೋಟಿ ರೂಪಾಯಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಪ್ಪಳ ನಗರ ಸಭೆಯ ಜೆಇ ಸೋಮಲಿಂಗಪ್ಪ ಅಮಾನತುಗೊಳಿಸಲಾಗಿದೆ. ಪೌರಾಡಳಿತ ಇಲಾಖೆಯ ನಿರ್ದೇಶಕರಿಂದ ಈ ಒಂದು ಅಮಾನತು ಆದೇಶ ಹೊರಡಿಸಿದ್ದು, ನಗರ ಸಭೆಯ 366 ಕಾಮಗಾರಿಗಳಲ್ಲಿ ಬಹು ದೊಡ್ಡ ಭ್ರಷ್ಟಾಚಾರ ನಡೆದಿತ್ತು ಲೋಕಾಯುಕ್ತ ದಡಿಯ ಬೆಲೆ 10 ಕೋಟಿ ಭ್ರಷ್ಟಾಚಾರ ಬಳಿಕೆಗೆ ಬಂದಿತ್ತು ಈ ಹಿನ್ನೆಲೆಯಲ್ಲಿ ಜೈಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

Read More

ಚಿಕ್ಕಬಳ್ಳಾಪುರ : ಇರಾನ್ ಇಸ್ರೇಲ್ ಯುದ್ಧದ ಪರಿಣಾಮದಿಂದ ಈಗಾಗಲೇ ದೇಶ ಹಾಗೂ ರಾಜ್ಯದಲ್ಲಿ ಗ್ಯಾಸ್ ಹಾಗು ಪೆಟ್ರೋಲ್ ಡೀಸೆಲ್ ಕೊರತೆ ಕಾಣುತ್ತಿದೆ. ಇದರ ಮಧ್ಯ ಚಿಕ್ಕಬಳ್ಳಾಪುರದಲ್ಲಿ ಪೆಟ್ರೋಲ್ ಡೀಸೆಲ್ ದರದಲ್ಲಿ ಭಾರಿ ಏರಿಕೆ ಮಾಡಲಾಗಿದೆ. ಹೌದು ರಾಜ್ಯದಲ್ಲಿ ಪೆಟ್ರೋಲ್ ಅಭಾವದ ವದಂತಿ ಹಬ್ಬಿದ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ಬಂಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಈ ಮಧ್ಯೆ ಚಿಕ್ಕಬಳ್ಳಾಪುರದ ನಯಾರ ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಮಾಡಲಾಗಿದೆ. ಪೆಟ್ರೋಲ್‌ ಪ್ರತಿ ಲೀಟರ್‌ ಮೇಲಿನ ದರ 5 ರೂಪಾಯಿ ಹಾಗೂ ಡೀಸೆಲ್‌ ದರ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ 1 ಲೀಟರ್‌ ಪೆಟ್ರೋಲ್‌ ಬೆಲೆ 108.28 ರೂ.ಗಳಿಗೆ ತಲುಪಿದ್ದರೆ, ಡೀಸೆಲ್‌ ಬೆಲೆ 1 ಲೀಟರ್‌ಗೆ 94.10 ರೂ.ಗಳಿಗೆ ಮಾರಾಟ ಮಾಡಲಾಗ್ತಿದೆ.

Read More

ಬೆಂಗಳೂರು : ಹೈಕಮಾಂಡ್ ಒಪ್ಪಿದ್ರೆ ಮುಂದಿನ ಎರಡು ಬಜೆಟ್ ನಾನೇ ಮಂಡಿಸುವೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸದನದಲ್ಲಿ ಪುನರುಚ್ಚರಿಸಿದ್ದಾರೆ. ಹೈಕಮಾಂಡ್ ಮಾತನ್ನು ಎಲ್ಲರೂ ಕೇಳಲೇಬೇಕು. ನಾನು ಏನು ಹೈಕಮಾಂಡ್ ಮಾತು ಕೇಳಲ್ಲ ಅಂತಾ ಹೇಳಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೆ ಸದನದಲ್ಲಿ ಪ್ರತಿಪಕ್ಷ ನಾಯಕರಿಗೆ ತಿರುಗೇಟು ನೀಡಿದರು. ಬಜೆಟ್ ಚರ್ಚೆ ಮೇಲೆ ಉತ್ತರದ ವೇಳೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತೆ ಎರಡು ಬಜೆಟ್ ಮಂಡಿಸಬೇಕಿದೆ ನೀವು ಎಂಬ ಮಾತಿಗೆ ಪ್ರತಿಕ್ರಿಯಿಸುತ್ತಾ, ಮುಂದಿನ ಎರಡು ವರ್ಷ ನಮ್ಮ ಸರ್ಕಾರನೇ ಬಜೆಟ್ ಮಂಡಿಸಲಿದೆ. ಹೈಕಮಾಂಡ್ ಒಪ್ಪಿದರೆ ಮತ್ತೆರಡು ಬಜೆಟ್ ನಾನೇ ಮಂಡಿಸ್ತೇನೆ. ಈ ಬಾರಿಯೂ ನಾವೇ ಅಧಿಕಾರದಲ್ಲಿದ್ದೇವೆ. ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಪುನರುಚ್ಚರಿಸಿದರು. ಈ ವೇಳೆ, ಮಧ್ಯಪ್ರವೇಶಿಸಿದ ಸುನಿಲ್ ಕುಮಾರ್, ಜೆಡಿಎಸ್​ನಲ್ಲಿದ್ದಾಗ ನೀವು ರಾಷ್ಟ್ರೀಯ ಅಧ್ಯಕ್ಷರ ಮಾತು ಕೇಳಿಲ್ಲ ಅಂತ ಹೇಳಿದ್ದೀರಿ. ಅದೇ ರೀತಿ ಇವಾಗ್ಲೂ ನಿಮ್ಮ ರಾಷ್ಟ್ರೀಯ ನಾಯಕರ ಮಾತು ಕೇಳಬಾರದು. ರಾಜ್ಯದ ಗಟ್ಟಿ ನಾಯಕ ನೀವು. ನಿಮ್ಮ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಮತ್ತೆ ಹುಲಿ ಉಪಟಳ ಮುಂದುವರೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನಮ್ಮಲ್ಲಿಪುರ ಗ್ರಾಮದಲ್ಲಿ ಹುಲಿ ಮತ್ತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಮೂರು ದಿನಗಳ ಹಿಂದೆ ಅಷ್ಟೇ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿತ್ತು. ಇದೀಗ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರದಲ್ಲಿ ಮತ್ತೊಂದು ಹುಲಿ ಕಾಣಿಸಿಕೊಂಡಿದೆ ಹುಲಿ ಓಡಾಟ ಹಿನ್ನೆಲೆಯಲ್ಲಿ ಚೆನ್ನಮ್ಮಲ್ಲಿಪುರ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಹುಲಿ ಸೆರೆಗೆ ಅರಣ್ಯ ಸಿಬ್ಬಂದಿಗಳು ಮತ್ತೆ ಕುಂಬಿಂಗ್ ಕಾರ್ಯಚರಣೆ ನಡೆಸಲಿದ್ದಾರೆ.

Read More

ಬೆಂಗಳೂರು : ವಾಹನಗಳ ತೆರಿಗೆ ಪರಿಷ್ಕರಿಸುವ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರವಾಗಿದೆ. ಈ ಕಾಯ್ದೆ ಜಾರಿಯಿಂದ 2026-27ನೇ ಸಾಲಿನಲ್ಲಿ ನೋಂದಣೆಯಾಗುವ ವಿವಿಧ ಬಗೆಯ ವಾಹನಗಳಿಂದ 250 ಕೋಟಿ ರೂ. ಸಂಗ್ರಹವನ್ನು ಸಾರಿಗೆ ಇಲಾಖೆ ನಿರೀಕ್ಷಿಸಿದೆ. ಈಗ ತಿದ್ದುಪಡಿ ವಿಧೇಯಕ ಮೂಲಕ ರಾಜ್ಯದಲ್ಲಿ ಹೊಸ ವಾಹನಗಳ ನೋಂದಣಿ ತೆರಿಗೆಯನ್ನು ಇಳಿಸಲಾಗಿದೆ. ಅದರಂತೆ ರಾಜ್ಯದಲ್ಲಿ ನೋಂದಣಿಯಾಗುವ 12ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುವ ಒಪ್ಪಂದ ವಾಹನ ಹಾಗೂ ಸ್ಲೀಪರ್‌ ಕೋಚ್‌ ಬಸ್‌ಗಳಿಗೆ ಪ್ರತಿ ಆಸನಗಳಿಗೆ ಈಗಿರುವ ತೆರಿಗೆ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ಅಂದರೆ ಕ್ರಮವಾಗಿ ಸಾವಿರ ರೂ.ಗಳಷ್ಟು ಇಳಿಕೆ ಮಾಡಲಾಗಿದೆ. ಪ್ರಸ್ತುತ ಬಾಡಿಗೆಗೆ ಓಡಿಸುವ 12ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಸಾಗಿಸುವ ವಾಹನಗಳಿಗೆ ಪ್ರತಿ ಆಸನಕ್ಕೆ 3,500 ರೂ. ಹಾಗೂ ಸ್ಲೀಪರ್‌ ಕೋಚ್‌ ಬಸ್‌ಗಳಿಗೆ ಪ್ರತಿ ಆಸನಕ್ಕೆ 4,000 ರೂ. ತೆರಿಗೆ ಇದೆ. ಈಗ ಅದನ್ನು ಕ್ರಮವಾಗಿ 2,500 ರೂ. ಮತ್ತು 3,000 ರೂ.ಗಳಿಗೆ ಇಳಿಕೆ ಮಾಡಲಾಗಿದೆ. ಕಾನೂನು…

Read More

ಬೆಂಗಳೂರು : ರಾಜ್ಯದಲ್ಲಿ ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಮತ್ತು ಮದ್ಯ ಖರೀದಿ ಮಾಡುವವರ ವಯಸ್ಸಿನ ದೃಢೀಕರಣವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ಹೆಜ್ಜೆ ಇರಿಸಿದೆ. ಮದ್ಯದ ಅಂಗಡಿ ಹಾಗೂ ಬಾರ್‌ಗಳಲ್ಲಿ ಗ್ರಾಹಕರ ವಯಸ್ಸಿನ ಪುರಾವೆ ಪರಿಶೀಲಿಸುವುದನ್ನು ಕಡ್ಡಾಯಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜ್ಯ ಸರ್ಕಾರ ಮತ್ತು ಬಾರ್ ಮಾಲೀಕರ ಸಂಘಕ್ಕೆ ನೋಟಿಸ್ ಜಾರಿ ಮಾಡಿದೆ. ಅಪ್ರಾಪ್ತರಿಗೆ ಮದ್ಯ ಪೂರೈಕೆ ಮತ್ತು ಬ್ರಿವರಿಂಗ್ ಕಂಪನಿಗಳು ಸೇರಿದಂತೆ ಮದ್ಯ ಸರಬರಾಜು ಸಂಸ್ಥೆಗಳಲ್ಲಿ ಅವರ ಪ್ರವೇಶಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹತ್ವದ ಆದೇಶ ಹೊರಡಿಸಿರುವ ಹೈಕೋರ್ಟ್, ಈ ಪಿಡುಗಿನಿಂದ ಯುವಕರು ವಿಶೇಷವಾಗಿ ಅಪ್ರಾಪ್ತ ವಯಸ್ಸಿನವರನ್ನು ರಕ್ಷಿಸುವುದು ಕೇವಲ ಶಾಸನಾತ್ಮಕ ಕರ್ತವ್ಯವಲ್ಲ, ಬದಲಿಗೆ ನೈತಿಕ ಕರ್ತವ್ಯವೂ ಆಗಿದೆ ಎಂದು ಸಾರಿದೆ. ಈ ವಿಚಾರದಲ್ಲಿ ಯಾವುದೇ ತಪ್ಪು ಮಾಡಿದರೂ ಅಂತಹ ಸಂಸ್ಥೆಗಳ ಆಡಳಿತ ಮಂಡಳಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದೂ ಹೇಳಿದೆ. ಬ್ರಿವರೀಸ್ ಮತ್ತು ಅಂತಹದ್ದೇ ಮದ್ಯ ಮಾರಾಟ ಸಂಸ್ಥೆಗಳು ತನ್ನಲ್ಲಿಗೆ ಬರುವವರ…

Read More

ಗೋವಾ : ಕಳೆದ ವರ್ಷ ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣ ಬಾರಿ ಸದ್ದು ಮಾಡಿತ್ತು. ಬಳಿಕ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಇದೇ ರೀತಿ ಗೋವಾದಲ್ಲಿ ಪ್ರಕರಣ ನಡೆದಿದ್ದು ಬಿಜೆಪಿಯ ಕೌನ್ಸಿಲರ್ ಮಗ 30 ಬಾಲಕಿಯರ ಮೇಲೆ ಅತ್ಯಾಚಾರ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸದ್ಯ ಪೋಲಿಸಿರುವ ಆತನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ದಕ್ಷಿಣ ಗೋವಾದ ಬಿಜೆಪಿ ಕೌನ್ಸಿಲರ್ ಸುಶಾಂತ್ ನಾಯಕ್ ಪುತ್ರ ಸೋಹಂ ನಾಯಕ್ (20) ಬಂಧಿತ ಆರೋಪಿಯಾಗಿದ್ದಾನೆ. ಈತ 30ಕ್ಕೂ ಹೆಚ್ಚು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ್ದು ಅಲ್ಲದೆ ಅವುಗಳನ್ನು ವಿಡಿಯೋ ಮಾಡಿ ಬಾಲಕಿಯರಿಗೆ ಬೆದರಿಸುತ್ತಿದ್ದ ಈ ಒಂದು ವಿಡಿಯೋ ಅವರ ಸ್ನೇಹಿತರ ಮೂಲಕ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆರೋಪಿತನಿಗೆ ಕುಡಿತದ ಚಟ ಇತ್ತು ಈ ಹಿನ್ನಲೆ ಕುಡಿದ ನಶೆಯಲ್ಲಿ ತಾನು ಬಾಲಕಿಯರ ಜೊತೆಗೆ ಮಾಡಿದ್ದ ದುಷ್ಕೃತ್ಯ ವಿಡಿಯೋಗಳನ್ನು ಹಾಗೂ ಫೋಟೋಗಳನ್ನು ನಶೆಯಲ್ಲಿ ತನ್ನ ಸ್ನೇಹಿತರಿಗೆ ಫಾರ್ವರ್ಡ್ ಮಾಡಿದ್ದಾನೆ. ಬಳಿಕ ಆತನ ಸ್ನೇಹಿತರು ಈ ವಿಡಿಯೋಗಳನ್ನು…

Read More

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಕಾಂಗ್ರೆಸ್ ಶಾಸಕ ಸತೀಶ ಸೈಲ್ ಆಪ್ತ ಗೋಪಾಲಕೃಷ್ಣ ನಾಯಕ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕಾರವಾರ ಪೊಲೀಸರು ನಾಲ್ವರ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಅಂಕೋಲಾ ತಾಲೂಕಿನ ಕಿಣಿ ಬಳಿ ಎಂದು ಬೆಳಿಗ್ಗೆ ಚಾಕು ಇರಿದ ಘಟನೆ ನಡೆದಿತ್ತು. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಿಣಿ ಗ್ರಾಮದಲ್ಲಿ ಈ ಒಂದು ಕೊಲೆ ಪ್ರಕರಣ ನಡೆದಿದೆ. ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಗೆ ಆರೋಪಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು.ಸದ್ಯ ಗೋವಾ ಗಡಿಯಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರನ್ನು ವಶಕ್ಕೆ ಪಡೆದಿದ್ದೇವೆ ಚಾಕುವಿನಿಂದ ಇರಿದು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ತನಿಖೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬರಲಿದೆ ಎಂದು ಉತ್ತರ ಕನ್ನಡ ಎಸ್ ಪಿ ಎಂ. ಎನ್ ದೀಪನ್ ಮಾಹಿತಿ ನೀಡಿದರು.

Read More

ಬೆಂಗಳೂರು : ಜನರ ಸಮಸ್ಯೆಗೆ ಕಷ್ಟಕ್ಕೆ ಪೊಲೀಸರು ಸದಾ ಕಾವಲು. ಇರಬೇಕು. ಆದರೆ ಇಲ್ಲೊಬ್ಬ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಲೇಡಿ ರೌಡಿ ಮೇಲೆ ಲವ್ ಆಗಿ ಚಿನ್ನು, ಮುದ್ದು ಅಂತಾ ಮಂಚಕ್ಕೆ ಕರೆದು ಪೇಚಿಗೆ ಸಿಲುಕಿದ್ದಾನೆ. ಪೊಲೀಸ್ ಇನ್‌ಸ್ಪೆಕ್ಟರ್ ವಿರುದ್ಧ ಲೇಡಿ ರೌಡಿ ಕಮಿಷನರ್‌ಗೆ ದೂರು ನೀಡಿದ್ದಾರೆ. ಹೌದು ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ, ನಟೋರಿಯಸ್ ಮಹಿಳಾ ರೌಡಿಶೀಟರ್‌ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಇಬ್ಬರ ನಡುವಿನ ಸಂಭಾಷಣೆ ಹಾಗೂ ಅಶ್ಲೀಲ ಚಾಟ್ ಸಮೇತ ಮಹಿಳಾ ರೌಡಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಪೊಲೀಸ್ ಇನ್‌ಸ್ಪೆಕ್ಟರ್ ಪಾಪಣ್ಣ, ಲೇಡಿ ರೌಡಿಶೀಟರ್‌ಳನ್ನು ‘ಚಿನ್ನು’, ‘ಮುದ್ದು’, ‘ಬಂಗಾರಿ’ ಎಂದು ಸಂಬೋಧಿಸಿದ್ದು, ಆಡಿಯೋದಲ್ಲಿ ರೆಕಾರ್ಡ್ ಆಗಿದೆ. ಅಲ್ಲದೇ, ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬರುವಂತೆ ಕರೆಯುತ್ತಿದ್ದರು ಎಂದು ದೂರಲಾಗಿದೆ. ‘ಮುದ್ದು ಬಂಗಾರಿ’ ಎಂದು ಕರೆದು ಲೈಂಗಿಕ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಾಟ್ಸಪ್ ಸಂದೇಶಗಳ ಮೂಲಕವೂ ಮಂಚಕ್ಕೆ ಕರೆದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ…

Read More

ಬೆಂಗಳೂರು : ಕಗ್ಗಲಿಪುರದ ಸರ್ಕಾರಿ ಜಮೀನು ಕೆರೆ ಒತ್ತುವರಿ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ಟ್ ಆಫ್ ಲಿವಿಂಗ್ನ ಶ್ರೀ ಶ್ರೀ ರವಿಶಂಕರ್ ಗುರೂಜಿ ವಿರುದ್ಧ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ನ್ಯಾಯಮೂರ್ತಿ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಬಿಎಂಟಿಎಫ್ ಪೊಲೀಸರು ಒತ್ತುವರಿ ಸಂಬಂಧ ರವಿಶಂಕರ್ ಗುರೂಜಿ ಎಫ್ಆರ್ ದಾಖಲಿಸಿದ್ದರು. ಒತ್ತೂವರಿ ಆರೋಪಕ್ಕು ಶ್ರೀ ರವಿಶಂಕರ್ ಗುರೂಜಿಗೂ ಯಾವುದೇ ಸಂಬಂಧವಿಲ್ಲ ಆಧಾರಗಳು ಇಲ್ಲದೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ರವಿಶಂಕರ್ ಪರ ವಕೀಲ ಪಿ ಪ್ರಸನ್ನ ಕುಮಾರ್ ವಾದಿಸಿದ್ದರು. ಹೀಗಾಗಿ ಹೈಕೋರ್ಟ್ ರವಿಶಂಕರ್ ಗುರೂಜಿ ಅವರ ವಿರುದ್ಧ ದಾಖಲಾಗಿದ್ದ FIR ರದ್ದುಪಡಿಸಿ ಆದೇಶ ಹೊರಡಿಸಿದೆ.

Read More