Author: kannadanewsnow05

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದ್ದು ಮೆಟ್ರೋ ಪ್ರಯಾಣದ ದರ ಹೆಚ್ಚಳ ಇಲ್ಲ ಎಂದು ಹೇಳಲಾಗುತ್ತಿದೆ ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.ಈ ವಿಚಾರವಾಗಿ ಬಿಎಂಆರ್‌ಸಿಎಲ್ ಇಂದ ಅಧಿಕೃತ ಮಾಹಿತಿ ಬರಬೇಕಷ್ಟೇ. ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಕಟ್ಟರ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ್ದೇನೆ, ಸೋಮವಾರದಿಂದ ಪ್ರಾರಂಭಿಸಲು ಪ್ರಸ್ತಾಪಿಸಲಾದ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ದರ ಏರಿಕೆಯ ವಿರುದ್ಧ ತಕ್ಷಣದ ಮಧ್ಯಪ್ರವೇಶವನ್ನು ಕೋರಿದ್ದೇನೆ. ಬೆಂಗಳೂರಿನಲ್ಲಿ ಈಗಾಗಲೇ ಭಾರತದಲ್ಲಿ ಅತ್ಯಂತ ದುಬಾರಿ ಮೆಟ್ರೋ ದರಗಳಿವೆ ಎಂದು ನಾನು ಗಮನಸೆಳೆದಿದ್ದೇನೆ. ಈ ಹೆಚ್ಚಳವು ಲಕ್ಷಾಂತರ ನಾಗರಿಕರಿಗೆ ಸಾರ್ವಜನಿಕ ಸಾರಿಗೆಯನ್ನು ತಲುಪಲು ಕಷ್ಟವಾಗುತ್ತದೆ ಮತ್ತು ಅದರ ಉದ್ದೇಶವನ್ನು ವಿಫಲಗೊಳಿಸುತ್ತದೆ. ಪ್ರಸ್ತಾವಿತ ಹೆಚ್ಚಳವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಅವರು ಸೂಚನೆ ನೀಡಿದ್ದಾರೆ. ಇದು ಸೋಮವಾರದಿಂದ ಜಾರಿಗೆ ಬರುವುದಿಲ್ಲ. FFC ಯಲ್ಲಿನ ವೈಪರೀತ್ಯಗಳ ವೈಯಕ್ತಿಕ ಪರಿಶೀಲನೆಯನ್ನು ಸಹ ಅವರು ಭರವಸೆ…

Read More

ಬೆಂಗಳೂರು : ಮಂಗಳೂರು ಸೇರಿದಂತೆ ಕರಾವಳಿ ಕರ್ನಾಟಕ ಭಾಗದ ಜನರ ಬಹುದಿನಗಳ ಕನಸು ಶೀಘ್ರದಲ್ಲಿ ನನಸಾಗಲಿದೆ. ಹೌದು ಶೀಘ್ರದಲ್ಲಿ ಬೆಂಗಳೂರು-ಮಂಗಳೂರು ಕರಾವಳಿ ಭಾಗದ ಮಾರ್ಗದಲ್ಲಿ ಎರಡು ವಂದೇ ಭಾರತ್ ರೈಲು ಸೇವೆ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರುಗೆ ಶೀಘ್ರದಲ್ಲಿ ವಂದೇ ಭಾರತ್​ ರೈಲು ಆರಂಭಿಸಲಾಗುವುದು ಎಂದರು. ಶಿರಾಡಿ ಘಾಟ್ ಭಾಗದ ಮಾರ್ಗದಲ್ಲಿ ವಿದ್ಯುದೀಕರಣ ಪೂರ್ಣವಾಗಿದೆ. ಇನ್ನೂ, ಹಲವು ಸುರಕ್ಷತಾ ಪರೀಕ್ಷೆಗಳು ನಡೆಯಬೇಕಿವೆ. ಸುರಕ್ಷತಾ ದೃಢೀಕರಣ ಪತ್ರ ಬಂದ ಬಳಿಕ, ಸಂಸದರು, ಜನಪ್ರತಿನಿಧಿಗಳು ಸೇರಿ ಎಲ್ಲರಿಂದ ಸಲಹೆ ಪಡೆದು ವಂದೇ ಭಾರತ್ ರೈಲು ಸೇವೆಯ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ವಂದೇ ಭಾರತ್ ಕರ್ನಾಟಕದ ಕರಾವಳಿ ಭಾಗವನ್ನು ಸಂಪರ್ಕಿಸಲಿದೆ. ಮಂಗಳೂರು, ಉಡುಪಿ ಮುಖೇನ ಕಾರವಾರದವರೆಗೆ ವಂದೇ ಭಾರತ್ ರೈಲು ಸಂಚರಿಸಲಿದೆ. ಕರಾವಳಿ ಕರ್ನಾಟಕದ ಅತಿ ಉದ್ದದ ಮಾರ್ಗವನ್ನು ಸಂಪರ್ಕಿಸುವ ಕಾರಣ ಎರಡು ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸಲಾಗುವುದು.‌ ಒಂದು ಕೋಸ್ಟಲ್ ನಿಂದ ಬೆಂಗಳೂರು, ಮತ್ತೊಂದು…

Read More

ಬೆಳಗಾವಿ : ಬೆಳಗಾವಿಯಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು ಇಬ್ಬರೂ ಮಹಿಳೆಯರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಬೆಳಗಾವಿ ತಾಲೂಕಿನ ಹಾನಗ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ನೀಲವ್ವ ಸದಾಶಿವ ಕೋರೆ (55) ಹಾಗೂ ಮಹದೇವಿ ನಾವಲಗಿ (50) ಮೃತ ಮಹಿಳೆಯರು ಮದುವೆ ಸಮಾರಂಭಕ್ಕೆ ಹೋಗಲು ಮಹಿಳೆಯರು ಹೆದ್ದಾರಿ ದಾಟುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಸದ್ಯ ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಕರ್ತವಲೋಪ ಆರೋಪದ ಅಡಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಠಾಣೆಯ ಸಿಪಿಐ ಎಚ್ಆರ್ ಪಾಟೀಲ್ ರನ್ನು ಸಸ್ಪೆಟ್ ಮಾಡಲಾಗಿದೆ. ಬೆಳಗಾವಿ ಉತ್ತರ ವಲಯ ಐಜಿಪಿ ಡಾ.ಚೇತನ ಸಿಂಗ್ ರಾಥೋಡ್ ಆದೇಶ ಹೊರಡಿಸಿದ್ದು ಯಾವುದೇ ಕಾರಣ ಉಲ್ಲೇಖಿಸದೆ ಬನಹಟ್ಟಿ ಠಾಣೆ ಸಿಪಿಐ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ. ಬಳಿಕ ಕರ್ತವಲೋಪ ಆರೋಪದ ಅಡಿ ಅಮಾನತುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಬನಹಟ್ಟಿ ವೃತ್ತದ ಸಿಪಿಐ ಪ್ರಭಾರ ಹುದ್ದೆಯನ್ನ ಮುಧೋಳ ಸಿಪಿಐಗೆ ವಹಿಸಿ ಆದೇಶಿಸಿದ್ದಾರೆ.

Read More

ಬೆಂಗಳೂರು : ನಾವು ಇನ್ನೂ 5,000 ಕಾರ್ಯಕ್ರಮಗಳನ್ನು ಮಾಡುತ್ತೇವೆ ದ್ವೇಷ ಭಾಷಣಗಳನ್ನು ಮಾಡುತ್ತೇವೆ. ಈ 5000 ದ್ವೇಷ ಭಾಷಣಗಳು ರಾಜ್ಯದಲ್ಲಿ ಆಳುವ ಅರಸರಿಗೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಸ್ವಯಂಸೇವಾ ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಗೋವಿಂದರಾಜ ನಗರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆದಿದ್ದು, ಸಮಾಜೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಭಾಷಣ ಮಾಡಿದರು. ದೇಶಕ್ಕಾಗಿ ಬದುಕುವುದು ಕ್ಷಣಿಕವಾದ ಸಂಗತಿ ಅಲ್ಲ. ಆರ್ ಎಸ್ ಎಸ್ ತನಗೋಸ್ಕರ ಏನನ್ನು ಮಾಡಿಕೊಳ್ಳುವುದಿಲ್ಲ. ಹೊಗಳಿಕೆಗೋಸ್ಕರ ಆರ್‌ಎಸ್‌ಎಸ್‌ ಏನು ಮಾಡಿಕೊಳ್ಳುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಮೈದಾನ ಪಡೆಯಲು ಓಡಾಡಿಸಿದರು ಹಿಂದೂ ಸಮಾಜ ಎದ್ದಿದೆ ತನ್ನ ಕಾಲುಗಳ ಮೇಲೆ ಎದ್ದು ನಿಂತಿದೆ ನೀವು ಮೈದಾನ ಕೊಡದಿದ್ದರೆ ರಸ್ತೆಗಳನ್ನೇ ಮೈದಾನ ಮಾಡುತ್ತೇವೆ. ನಾವು ಇನ್ನು 5000 ಕಾರ್ಯಕ್ರಮಗಳನ್ನು ಮಾಡುತ್ತೇವೆ. ನಾವು ದ್ವೇಷ ಭಾಷಣಗಳನ್ನು ಮಾಡುತ್ತೇವೆ ಕರ್ನಾಟಕವನ್ನು ಆಳುವ ಅರಸರಿಗೆ…

Read More

ಬೀದರ್ : ಶಿವರಾತ್ರಿ ಚಂದಾ ಹಣ ನೀಡದಿದ್ದಕ್ಕೆ ನಾಲ್ಕೈದು ಯುವಕರಿಂದ ಓರ್ವ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಕೇಳಿದಷ್ಟು ಚಂದಾ ಕೊಡದಿದ್ದಕ್ಕೆ ನಾಲ್ಕೈದು ಯುವಕರಿಂದ ಹಲ್ಲೆ ನಡೆದಿದೆ. ಬೀದರ್ ನ ಮೈಲೂರು ಬಡಾವಣೆಯಲ್ಲಿ ಈ ಒಂದು ಚಾಕು ಇರಿದಿರುವ ಘಟನೆ ವರದಿಯಾಗಿದೆ. ಮಹೇಶ್ ಎಂಬ ಯುವಕನಿಗೆ ನಾಲ್ಕೈದು ಯುವಕರು ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಶಿವರಾತ್ರಿಗೆ 10,000 ಚೆಂದಾ ಕೊಡುವಂತೆ ಯುವಕರು ಮಹೇಶನಿಗೆ ಕೇಳಿದ್ದಾರೆ. ಅಷ್ಟೊಂದು ಹಣ ಕೊಡಲ್ಲ ಅಂದಿದ್ದಕ್ಕೆ ಮಹೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಮಹೇಶ್ ಮೇಲೆ ವಿದ್ಯಾನಗರ ಬಡಾವಣೆ ಯುವಕರು ಹಲ್ಲೆ ಮಾಡಿದ್ದಾರೆ. ಗಾಯಾಳು ಮಹೇಶನನ್ನು ತಕ್ಷಣ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯುವಕರು ಹಲ್ಲೆ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಕುರಿತು ಗಾಂಧಿಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೋಲಾರ : ಕೋಲಾರದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು ಏಳು ದಿನದ ನವಜಾತ ಗಂಡು ಮಗುವನ್ನು 5 ಲಕ್ಷಕ್ಕೆ ಮಾರಾಟ ಮಾಡುವಾಗ ದಂಪತಿಗಳು ಸಿಗಿಬಿದ್ದಿರುವ ಘಟನೆ ವರದಿಯಾಗಿದೆ. ನಿತು ಮತ್ತು ರಾಘವೇಂದ್ರ ಎನ್ನುವ ದಂಪತಿಗಳು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಧ್ಯವರ್ತಿ ನಾರಾಯಣಸ್ವಾಮಿ ಮೂಲಕ ಮಗು ಮಾರಾಟಕ್ಕೆ ತಂದೆ ರಾಘವೇಂದ್ರ ಮತ್ತು ತಾಯಿ ನೀತು ಮುಂದಾಗಿದ್ದರು. ಈಗಾಗಲೇ ದಂಪತಿಗಳಿಗೆ ಇಬ್ಬರು ಮಕ್ಕಳಿದ್ದು ಮೂರನೇ ಮಗು ಬೇಡ ಎಂದು ಮಾರಾಟಕ್ಕೆ ಮುಂದಾಗಿದ್ದಾರೆ. ಮಗು ಮಾರಾಟದ ವಿಷಯ ತಿಳಿದು ಸದ್ಯ ಪೋಲೀಸರು ದಂಪತಿಯನ್ನು ಹಾಗು ಮಧ್ಯವರ್ತಿ ನಾರಾಯಣಸ್ವಾಮಿಯನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಉತ್ತರಕನ್ನಡ : ಮಧ್ಯಾಹ್ನದ ಊಟ ಸೇವಿಸಿದ 70ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥರಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಪಂಚವಟಿಯಲ್ಲಿ ಇರುವ ಪಿಎಂಶ್ರೀ ಜವಹಾರ ನವೋದಯ ವಿದ್ಯಾಲಯದಲ್ಲಿ ನಡೆದಿದೆ. ಫೆಬ್ರುವರಿ 4ರಂದು 518 ಮಕ್ಕಳು ಮಧ್ಯಾಹ್ನದ ಬಿಸಿ ಊಟ ಸೇವಿಸಿದರು. ಈ ಪೈಕಿ 70 ಮಕ್ಕಳಿಗೆ ಜ್ವರ, ವಾಂತಿ, ಭೇದಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿತು. ತಕ್ಷಣ ಮಕ್ಕಳನ್ನು ಮುಂಡಗೋಡು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಸ್ಥಳಕ್ಕೆ ಆಗಮಿಸಿ ಆರೋಗ್ಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸುತ್ತಿದೆ. ಅಧಿಕಾರಿಗಳು ಬೆಳಗಾವಿ ಇಲಾಖೆ ಕಳುಹಿಸಿದ್ದಾರೆ. ಇನ್ನು 8 ಶಾಲಾ ಮಕ್ಕಳಲ್ಲಿ ಜ್ವರ ಹಾಗೂ ವಾಂತಿಯ ಲಕ್ಷಣ ಕಂಡು ಬಂದಿದೆ. ಎಲ್ಲ ಮಕ್ಕಳಿಗೆ ಪರೀಕ್ಷೆ ನಡೆಸಿರುವ ಆರೋಗ್ಯ ಅಧಿಕಾರಿಗಳ ತಂಡ ಘಟನೆಗೆ ಕಾರಣ ಏನು ಎನ್ನುವುದರ ಕುರಿತು ತನಿಖೆ ನಡೆಸಲಾಗುತ್ತಿದೆ.

Read More

ಹಾಸನ : ಹಾಸನದಲ್ಲಿ ಘೋರ ದುರಂತವೊಂದು ನಡೆದಿದ್ದು, ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾದ ಘಟನೆ ಹಾಸನ ಹೊರವಲಯದ ಉದ್ದುರು ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ವಿದ್ಯಾರ್ಥಿಯನ್ನು ಪ್ರಜ್ವಲ್ (18) ಎಂದು ಗುರುತಿಸಲಾಗಿದೆ. ಈತ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ. ಇಂದು (ಫೆ.7) ಮಧ್ಯಾಹ್ನ ನಾಲ್ವರು ಸ್ನೇಹಿತರ ಜೊತೆ ಉದ್ದೂರು ಕೆರೆಗೆ ಈಜಲು ತೆರಳಿದ್ದ. ಐವರಲ್ಲಿ ಇಬ್ಬರು ಸ್ನೇಹಿತರು ಈಜಲು ನೀರಿಗೆ ಇಳಿದಿದ್ದರು. ಕೆರೆಯ ಆಳವಾದ ಪ್ರದೇಶಕ್ಕೆ ಈಜುತ್ತಾ ಹೋಗಿದ್ದ ಪ್ರಜ್ವಲ್ ವಾಪಾಸ್ ಬರಲು ಆಗದೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ರಾಯಚೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದರ ಸೋಮವಾರದಿಂದ ಏರಿಕೆ ಆಗಲ್ಲ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೌಂಟರ್ ನೀಡಿದ್ದು, ಸುಮ್ಮನೆ ಖಾಲಿ ಮಾತನಾಡುವುದು ಬೇಡ ಮೊದಲು ರಾಜ್ಯ ಸರ್ಕಾರಕ್ಕೆ, ನನಗೆ, ಕೇಂದ್ರ ಸರ್ಕಾರಕ್ಕೆ ಹಾಗು ಎಲ್ಲಾ ಸಂಸದರಿಗೆ ಪತ್ರ ಬರೆಯಿರಿ ಎಂದು ಕೌಂಟರ್ ನೀಡಿದರು. ರಾಯಚೂರಿನಲ್ಲಿ ಇದೆ ವಿಚಾರವಾಗಿ ಮಾತನಾಡಿದ ಅವರು ತೇಜಸ್ವಿ ಸೂರ್ಯ ಸುಮ್ಮನೆ ಖಾಲಿ ಮಾತನಾಡುವುದು ಬೇಡ. ಕೇಂದ್ರ ಸರ್ಕಾರಕ್ಕೆ, ರಾಜ್ಯ ಸರ್ಕಾರಕ್ಕೆ, ನನಗೆ ಹಾಗು ಎಲ್ಲಾ ಸಂಸದವರಿಗೆ ಮೊದಲು ಪತ್ರ ಬರೆಯಿರಿ ಯಾರು ಬೇಡ ಅಂತಿದ್ದಾರೆ. ನಾವು ಬೇಡ ಅಂತಿದ್ದೀವಿ ಅದು ಬೇರೆ ವಿಚಾರ. ಯಾರು ಎಂಪಿ ಒಬ್ಬರ ಹೆಸರು ಹೇಳಿಲ್ಲ ಎಲ್ಲರೂ ಸೇರಿ ಪತ್ರ ಬರೆಯಿರಿ. ಪ್ರತಿಭಟನೆಗೆ ವಿರೋಧ ಮಾಡಬಾರದು ಅನ್ನೋ ದೃಷ್ಟಿಯಿಂದ ಪ್ರಧಾನಿ ಮೋದಿ, ಕೇಂದ್ರ ಸಚಿವರಿಗೂ ಪತ್ರ ಬರೆಯಲಿ. ಆಮೇಲೆ ಆ ವಿಚಾರವಾಗಿ ಮಾತನಾಡೋಣ ಬರೀ ಮೀಡಿಯಾ ಮುಂದೆ ಮಾತನಾಡುವುದನ್ನು ಯಾರು…

Read More