Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬಾಗಲೂರಿನ ಹೊಸೂರು ಬಂಡೆ ಬಳಿ ಅಗ್ನಿ ಅವಘಡ ಸಂಭವಿಸಿದೆ. ಶ್ರೀ ಕೃಷ್ಣ ಗೋಶಾಲೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಮೇವು ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಸುಗಳಿಗೆ ಮೇವು ಸಂಗ್ರಹಿಸಿದ ಗೋದಾಮಿನಲ್ಲಿ ಈ ಒಂದು ಅಗ್ನಿ ದುರಂತ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಿಬ್ಬಂದಿಗಳು ಬಿಡಿ ಸೇದಿ ಎಸೆದಿದ್ದ ತುಂಡಿನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಮುಂಬೈ : ಇತ್ತೀಚಿಗೆ ಬೆಂಗಳೂರಿನಲ್ಲಿ ಪ್ರತಿಷ್ಠಿತ ಕಂಪನಿಯ ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಯರ ಹಾಗೂ ಯುವತಿಯರ ಫೋಟೋ ಸೆರೆ ಹಿಡಿದ ಪ್ರಕರಣ ನಡೆದಿತ್ತು. ಇದೀಗ ಮುಂಬೈನಲ್ಲಿ ಬೆಚ್ಚಿಬಿಳಿಸುವ ಘಟನೆ ವರದಿಯಾಗಿದ್ದು ಸರ್ಕಾರಿ ಕೆಲಸದಲ್ಲಿದ್ದ ತನ್ನ ಪತ್ನಿಯ ಖಾಸಗಿ ಫೋಟೋಗಳನ್ನು ಸೆರೆ ಹಿಡಿದು ಪ್ರತಿಯೊಬ್ಬ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಹೌದು ಪತ್ನಿಯ ಖಾಸಗಿ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದಿದ್ದಾನೆ. ಬಾತ್ರೂಂನಲ್ಲಿ ಮೊಬೈಲ್ ಇಟ್ಟು ಪತ್ನಿಯ ಸ್ನಾನದ ವಿಡಿಯೋಗಳನ್ನು ಸೆರೆ ಹಿಡಿದಿದ್ದಾನೆ. ಬಳಿಕ ಸರ್ಕಾರಿ ಉದ್ಯೋಗದಲ್ಲಿರುವ ಪತ್ನಿಗೆ 1.5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಬೇಡಿಕೆ ಈಡೇರಿಸದಿದ್ದರೆ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಸಿದ್ದಾನೆ. ಕೆರಳಿದ ಪತ್ನಿ ದೂರು ನೀಡಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 1.5 ಲಕ್ಷ ರೂಪಾಯಿ ಹಣದ ಬೇಡಿಕೆ ಈಡೇರಿಸಲು ನಿರಾಕರಿಸಿದಾಗ ಪತ್ನಿಯ ವಿಡಿಯೋಗಳನ್ನು ಲೀಕ್ ಮಾಡುವುದಾಗಿ ಬೆದರಿಸಿದ್ದಾನೆ. ಗಂಡ ಹಾಗೂ ಆತನ ಪೋಷಕರ ಜೊತೆ ಮಾತನಾಡಿ ಸಮಸ್ಯೆ ಪರಿಹರಿಸಲು ಪತ್ನಿ ಮುಂದಾಗಿದ್ದಾಳೆ. ಆದರೆ ಪ್ರಯೋಜನವಾಗಿಲ್ಲ. ಹಣ ಕೊಡದಿದ್ದರೆ…
ಬೆಳಗಾವಿ : ಇವನೆಂತ ಕಿಲಾಡಿ ಇದಾನೆ ಎಂದರೆ ಮದುವೆಯಾಗುವುದಾಗಿ ಮಹಿಳೆಯನ್ನು ನಂಬಿಸಿದ್ದಾನೆ. ಈ ವೇಳೆ ತನ್ನ ಹೆಸರಿನಲ್ಲಿದ್ದ ಆಸ್ತಿ ಬರೆದು ಕೊಡಲು ಮಹಿಳೆ ಒಪ್ಪದೇ ಇದ್ದಾಗ, ಆಕೆಯನ್ನು ಗದ್ದೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿ, ಆರೋಪಿಯು ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ತೆರಳಿದ್ದಾನೆ. ಆದರೆ ಪೊಲೀಸರು ಸಿನೆಮಾ ಶೈಲಿಯಲ್ಲಿ ಆತನನ್ನು ಅಲ್ಲಿಯೇ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಅಥಣಿ ಸ್ಥಳೀಯ ನಿವಾಸಿ ಕುಮಾರ್ ಕಲ್ಲಪ್ಪ ಹವಾಲ್ದಾರ್ ಬಂಧಿತ ಆರೋಪಿ. ಅಥಣಿಯಲ್ಲಿ ವಾಸವಾಗಿದ್ದ ಸುಜಾತಾ (34) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಮಾರ್ಚ್ 12ರಂದು ಅಥಣಿಯಿಂದ ಸುಮಾರು 4 ಕಿಲೋಮೀಟರ್ ದೂರದಲ್ಲಿರುವ ಕಬ್ಬಿನ ತೋಟದಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಪೊಲೀಸರು ಸ್ಥಳೀಯರನ್ನು ವಿಚಾರಣೆ ನಡೆಸಿದಾಗ, ಲೀಲಾವತಿ ಭೀಮಪ್ಪ ಎಂಬುವರು ಇದು ತನ್ನ ಮಗಳು ಸುಜಾತಾಳ ಮೃತದೇಹ ಎಂದು ಗುರುತಿಸಿದ್ದಾರೆ. ಸುಜಾತಾ ಕೌಟುಂಬಿಕ ಸಮಸ್ಯೆಯಿಂದ ಆರು ವರ್ಷಗಳ ಹಿಂದೆ ಗಂಡನನ್ನು ಬಿಟ್ಟು ಬಂದು ಅಥಣಿಯಲ್ಲಿ ವಾಸವಾಗಿದ್ದರು. ಈ ವೇಳೆ ಕುಮಾರ್ ಕಲ್ಲಪ್ಪ ಹವಾಲ್ದಾರ್ ಪರಿಚಯವಾಗಿ,…
ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಸಿಲಿಂಡರ್ ಅಭಾವ ಒಂದು ಕಡೆ ಆದರೆ, ಮತ್ತೊಂದು ಕಡೆ, ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಗೃಹ ಬಳಕೆ ಸಿಲಿಂಡರ್ ಗಳನ್ನು ಬೇಕರಿ, ಅಂಗಡಿ ಮಾಲೀಕರು ಬಳಸುತ್ತಿದ್ದಾರೆ. ಅಂಗಡಿ, ಬೇಕರಿ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸುಮಾರು 30ಕ್ಕೂ ಅಧಿಕ ಸಿಲೆಂಡರ್ ಗಳನ್ನು ಆಹಾರ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಗೃಹಬಳಕೆ ಸಿಲಿಂಡರ್ ಗಳನ್ನು ಜಪ್ತಿ ಮಾಡಿಕೊಂಡಿದ್ದು, ಚಿಕ್ಕಬಳ್ಳಾಪುರ, ಗೌರಿಬಿದನೂರು ಶಿಡ್ಲಘಟ್ಟದಲ್ಲಿ ಜಪ್ತಿ ಮಾಡಿಕೊಂಡಿದ್ದಾರೆ. ಹೋಟೆಲ್ ಬೇಕರಿ ರಸ್ತೆ ಬದಿ ವ್ಯಾಪಾರಿಗಳಿಂದ ಸಿಲಿಂಡರ್ ಜಪ್ತಿ ಮಾಡಿಕೊಳ್ಳಲಾಗಿದೆ. ಕಮರ್ಷಿಯಲ್ ಸಿಲಿಂಡರ್ ಸಿಗದ ಹಿನ್ನೆಲೆಯಲ್ಲಿ ಇವರು ಗೃಹಬಳಕೆ ಸಿಲಿಂಡರ್ ಬಳಸುತ್ತಿದ್ದರು. ಗೃಹ ಬಳಕೆ ಸಿಲಿಂಡರ್ ಬಳಸುತ್ತಿದ್ದ ಹೋಟೆಲ್ ಮತ್ತು ಬೇಕರಿ ಮಾಲೀಕರು, ಹಾಗಾಗಿ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.
ಬೆಂಗಳೂರು : ನೀವು ಎಲ್ಪಿಜಿ (LPG) ಸಿಲಿಂಡರ್ ಬಳಸುತ್ತಿದ್ದೀರಾ? ಹಾಗಿದ್ದಲ್ಲಿ ಇಕೆವೈಸಿ ಪ್ರಕ್ರಿಯೆಯ ಬಗ್ಗೆ ಹರಿದಾಡುತ್ತಿರುವ ಗೊಂದಲಗಳಿಗೆ ಇಲ್ಲಿದೆ ಸ್ಪಷ್ಟನೆ. ಕೇಂದ್ರ ಸರ್ಕಾರದ ಸೂಚನೆಯಂತೆ ಗ್ಯಾಸ್ ಸಂಪರ್ಕಕ್ಕೆ ಇಕೆವೈಸಿ ಮಾಡಿಸುವುದು ಈಗ ಅನಿವಾರ್ಯವಾಗಿದೆ. ಹೌದು ಎಲ್ಪಿಜಿ ಗ್ರಾಹಕರು ಇಕೆವೈಸಿ ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಲ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್ಪಿಜಿ ಗ್ರಾಹಕರಿಗೂ ಕಡ್ಡಾಯವೇನಲ್ಲ. ಇಕೆವೈಸಿ ಮಾಡಿಸಿಲ್ಲದ ಎಲ್ಪಿಜಿ ಗ್ರಾಹಕರು ಮಾತ್ರ ಈ ಗ್ಯಾಸ್ ಪಡೆಯಲು ಇಕೆವೈಸಿ ಮಾಡುವುದು ಕಡ್ಡಾಯ ಎಂದು ಸಚಿವಾಲಯವು ಹೇಳಿದೆ. * ಉಜ್ವಲ ಯೋಜನೆ ಫಲಾನುಭವಿಗಳು: ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ಸಂಪರ್ಕ ಪಡೆದವರು ತಪ್ಪದೇ ಇಕೆವೈಸಿ ಮಾಡಿಸಬೇಕು. * ಸಬ್ಸಿಡಿ ಪಡೆಯುವ ಗ್ರಾಹಕರು: ಗ್ಯಾಸ್ ಸಬ್ಸಿಡಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಆಗಬೇಕೆಂದರೆ ಇಕೆವೈಸಿ ಕಡ್ಡಾಯ. * ಬಹಳ ದಿನಗಳಿಂದ…
ಬೆಂಗಳೂರು : ನಿರ್ದೇಶಕ ಪ್ರೇಮ್ ನಿರ್ದೇಶನದ KD ಸಿನಿಮಾಗೆ ಇದೀಗ ಸಂಕಷ್ಟ ಎದುರಾಗಿದ. ಸರ್ಸೆ ಸರಸೆ ನಿನ್ನ ಸೆರಗ ಸರಸೆ ಹಾಡಿನ ವಿರುದ್ಧ ಇದೀಗ ಆಕ್ರೋಶ ಭುಗಿಲೆದಿದೆ. ವಿರೋಧದ ಜೊತೆಗೆ ಸಾಲು ಸಾಲು ದೂರುಗಳು ದಾಖಲಾಗಿದೆ. ವಿನೀತ್ ಎಂಬುವವರಿಂದ ಸೆನ್ಸಾರ್ ಮಂಡಳಿಗೆ ದೂರು ದಾಖಲಾಗಿದೆ. ಮುಂಬೈ ಸೈಬರ್ ಠಾಣೆಗೂ ವಿನೀತ್ ದೂರು ನೀಡಿದ್ದಾರೆ. ದೆಹಲಿ ಮೂಲದ ವಕೀಲ ವಿನೀತ ಜಿಂದಾಲ್ ದೂರು ಸಲ್ಲಿಸಿದ್ದಾರೆ. ಮದನ್ ಗುಪ್ತ ಮತ್ತೊಂದು ದೂರು ನೀಡಿದ್ದಾರೆ. ಇತ್ತೀಚಿಗೆ KD ಸಿನಿಮಾದ ಸರಸೇ ಸರ್ಸೆ ನಿನ್ನ ಸೆರಗ ಸರಸೆ ಎನ್ನುವ ಸಾಂಗ್ ರಿಲೀಸ್ ಆಗಿತ್ತು. ಇದೀಗ ಈ ಒಂದು ಹಾಡಿನ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯವೂ ಕೂಡ ಎಂಟ್ರಿ ಆಗಿದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಚಿತ್ರತಂಡಕ್ಕೆ ನೋಟಿಸ್ ನೀಡಲಾಗಿದೆ ನೋಟಿಸ್ ಗೆ ಚಿತ್ರತಂಡ ಇದೀಗ ಉತ್ತರಿಸಬೇಕಾಗಿದೆ.
ಬೆಂಗಳೂರು : ನಾಳೆಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿವೇ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಇದೀಗ ಶುಭ ಕೋರಿದ್ದಾರೆ. ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ನಾಳೆಯಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್. ನಮ್ಮ ಸರ್ಕಾರ ಹಲವು ಸುಧಾರಣೆ ಮಾಡಿ ಮೂರು ಪರೀಕ್ಷೆ ಮಾಡುತ್ತಿದ್ದೇವೆ. ವಿದ್ಯಾರ್ಥಿಗಳು ಯಾರು ಆತಂಕ ಪಡಬೇಕಿಲ್ಲ ಒಂದಲ್ಲ ಇನ್ನೊಂದು ಪರೀಕ್ಷೆ ಬರೆಯಬಹುದು. ಯಾವುದೇ ಆತಂಕ ಬೇಡ ಎಲ್ಲರಿಗೂ ಒಳ್ಳೆಯದಾಗಲಿ. ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಸ್ ಆಗಲಿ. ಸರ್ಕಾರದ ಕಡೆಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶುಭ ಕೋರುತ್ತೇನೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿಗೆ ಇಂದು 3ನೇ ಬಾರಿ ಗಡಿಪಾರು ಆದೇಶ ನೀಡಲಾಗಿತ್ತು. ಈ ವಿಚಾರವಾಗಿ ಅವರು ಹೈಕೋರ್ಟಿಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದು, ಮಹೇಶ್ ಶೆಟ್ಟಿ ತಿಮರೋಡಿ ಮೇಲ್ಮನವಿಯನ್ನು ಇದೀಗ ಹೈಕೋರ್ಟ್ ವಿಭಾಗಿಯ ಪೀಠ ವಜಾಗೊಳಿಸಿದೆ. ಗಡಿಪಾರು ಸಂಬಂಧ ಅಕ್ಷೇಪಣೆ ಪರಿಗಣನೆಗೆ ಏಕ ಸದಸ್ಯ ಪೀಠ ಸೂಚಿಸಿತ್ತು. 3 ವಾರಗಳಲ್ಲಿ ಆಕ್ಷೇಪಣೆ ಪರಿಗಣಿಸಿ ಆದೇಶ ನೀಡಲು ಸೂಚಿಸಿತ್ತು. ಉಪ ವಿಭಾಗಾಧಿಕಾರಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ಸೂಚನೆ ನೀಡಿತ್ತು. ಈ ಆದೇಶ ಪ್ರಶ್ನಿಸಿ ಮಹೇಶ ಶೆಟ್ಟಿ ಮರೋಡಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಏಕ ಸದಸ್ಯ ಪೀಠದ ಆದೇಶ ಎತ್ತಿ ಹಿಡಿದು ಇದೀಗ ಮಹೇಶ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಭಾಗಿಯ ಪೀಠ ವಜಗೊಳಿಸಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಪ್ರಾಪ್ತ ಬಾಲಕಿಯ ಕತ್ತು ಕೊಯ್ದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಯುವತಿಯನ್ನು ಜೋಯಾ ಎಂದು ತಿಳಿದುಬಂದಿದೆ. ಭೀಕರವಾಗಿ ಹತ್ಯೆಗೈದ ಬಳಿಕ ಆರೋಪಿ ಶಬೀಲ್ ಪರಾರಿಯಾಗಿದ್ದಾನೆ. ಜಯ ಜೊತೆಗೆ ಸುಬಿಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದ ತನ್ನ ಕುಟುಂಬಕ್ಕೆ ಸೇರಿದ ಪಾಳು ಬಿದ್ದ ಮನೆಗೆ ಕರೆದೋಯ್ದು ಕೊಲೆ ಮಾಡಿದ್ದಾನೆ. ಬೆಳಿಗ್ಗೆ 6:30ರ ಸುಮಾರಿಗೆ ಈ ಒಂದು ಕೊಲೆ ನಡೆದಿದ್ದು, ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು ಸದ್ಯ ಆರೋಪಿ ಪತ್ತೆಗಾಗಿ ಡಿಜೆ ಹಳ್ಳಿ ಠಾಣೆ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
ಗದಗ : ಗದಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಯುವತಿಯ ಜೊತೆ ಮದುವೆ ವಿಚಾರಕ್ಕೆ ಅಣ್ಣನೊಬ್ಬ ಸ್ವಂತ ತಮ್ಮನನ್ನೇ ಕೊಲೆ ಮಾಡಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದಲ್ಲಿ ನಡೆದಿದೆ. ತಲೆಯ ಮೇಲೆ ಕಲ್ಲು ಎತ್ತಿಹಾಕಿ ಫಕೀರಪ್ಪ (19) ಎನ್ನುವ ಯುವಕನ ಕೊಲೆ ಆಗಿದೆ. ಆರೋಪಿ ಸಹೋದರ ಅಶೋಕನನ್ನು ಸದ್ಯ ಪೋಲೀಸರು ಅರೆಸ್ಟ್ ಮಾಡಿದ್ದಾರೆ.ಇವರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚಿಕ್ಕ ಮೊಲಂಗಿ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದೆ. ಅಲ್ಲಿಂದ ಹಿರೇಕೊಪ್ಪಕೆ ಕುರಿ ಮೇಯಿಸಲು ಬಂದಿದ್ದಾರೆ. ಈ ವೇಳೆ ಯುವತಿ ಜೊತೆಗೆ ಮದುವೆ ವಿಚಾರವಾಗಿ ಗಲಾಟೆ ನಡೆದು ತಮ್ಮ ಫಕೀರಪ್ಪನನ್ನು ಅಣ್ಣ ಅಶೋಕ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.














