Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಮ್ಮ ಮೆಟ್ರೋ 3ನೇ ಹಂತಕ್ಕಾಗಿ ಭಾರತ ಜಪಾನ್ ನಿಂದ ಸಾಲ ಪಡೆದುಕೊಂಡಿದ್ದು ಎರಡು ಹಂತದಲ್ಲಿ 6775 ಕೋಟಿ ರೂಪಾಯಿ ಸಾಲ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಜಪಾನ ಸಂಸ್ಥೆ ಜೊತೆಗೆ ಭಾರತ ಸರ್ಕಾರ ಇದೀಗ ಸಹಿ ಹಾಕಿದೆ. ಜಪಾನ್ ಇಂಟರ್ನ್ಯಾಷನಲ್ ಕೋ-ಆಪರೇಟಿವ್ ಏಜೆನ್ಸಿ ಇಂದ ಸಾಲ ಪಡೆದುಕೊಳ್ಳಲಾಗಿದೆ. ಜಪಾನಿಂದ 30 ವರ್ಷಗಳ ಅವಧಿಯ ಸಾಲ ಪಡೆದಿದೆ. ಮೊದಲ ಹಂತದಲ್ಲಿ 6,100 ಕೋಟಿ ಸಾಲ ಮಂಜೂರು ಆಗಿದ್ದು ಉಳಿದ ಮೊತ್ತದ ಹಣ ಎರಡನೇ ಹಂತದಲ್ಲಿ ಮಂಜೂರು ಮಾಡಲಾಗುತ್ತೆ. ಮೂರನೇ ಹಂತದಲ್ಲಿ ಆರೆಂಜ್ ಲೈನ್ ನಿರ್ಮಾಣ ಆಗಲಿದೆ 44.6 ಕಿಲೋಮೀಟರ್ ಉದ್ದದ ಮೆಟ್ರೋದ ಮೂರನೇ ಹಂತ ನಿರ್ಮಾಣ ಆಗಲಿದೆ ಜೆಪಿ ನಗರ ನಾಲ್ಕನೇ ಹಂತದಿಂದ ಕೆಂಪಾಪುರದ ಮಾರ್ಗ ಹೊಸಹಳ್ಳಿಯಿಂದ ಕಡಬಗೆರೆ ಮಾರ್ಗದ ಲೈನ್ ನಿರ್ಮಾಣ ಆಗಲಿದೆ. ಮೇ ತಿಂಗಳಿನಲ್ಲಿ ಸಿವಿಲ್ ಟೆಂಡರ್ ಆಗುವ ಸಾಧ್ಯತೆ ಇದೆ. 2032ಕ್ಕೆ ಆರೆಂಜ್ ಮಾರ್ಗ ಸಂಚಾರ ಮುಕ್ತ ಆಗಿರಲಿದೆ.
ಬೆಂಗಳೂರು : ಕಳೆದ ಜನೆವರಿಯಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ ಅವರು ವಿಮಾನ ದುರಂತದಲ್ಲಿ ಸಾವನ್ನಪ್ಪಿದರು. ಇದೀಗ ಈ ಒಂದು ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿಮಾನ ದುರಂತದ ಹಿಂದೆ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ನಡೆದಿದೆ ಎಂಬ ಆರೋಪದಡಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹೌದು ಅಜಿತ್ ಪವಾರ್ ಅವರ ಅಳಿಯ ಹಾಗೂ ಎನ್ಸಿಪಿ ಶಾಸಕ ರೋಹಿತ್ ಪವಾರ್ ಅವರು ನೀಡಿರುವ ದೂರಿನನ್ವಯ ಬೆಂಗಳೂರಿನಲ್ಲಿ ‘ಜೀರೋ ಎಫ್ಐಆರ್’ ದಾಖಲಾಗಿದೆ.ಇದು ಕೇವಲ ಅಪಘಾತವಲ್ಲ, ಬದಲಾಗಿ ದೊಡ್ಡ ಮಟ್ಟದ ಕ್ರಿಮಿನಲ್ ಪಿತೂರಿ ಇರಬಹುದು ಎಂದು ಆರೋಪಿಸಿರುವ ರೋಹಿತ್ ಪವಾರ್, ಸುರಕ್ಷತಾ ನಿಯಮಗಳ ಉಲ್ಲಂಘನೆಯಾಗಿರುವುದಾಗಿ ಆರೋಪಿಸಿದ್ದಾರೆ. ಅಂದು ದೃಶ್ಯದರ್ಶಕ ಮಿತಿ ಕನಿಷ್ಠ 5 ಕಿ.ಮೀ ಇರಬೇಕಿತ್ತು. ಆದರೆ, ಕೇವಲ 2-3 ಕಿ.ಮೀ ಇದ್ದರೂ ವಿಮಾನ ಇಳಿಸಲು ಅನುಮತಿ ನೀಡಲಾಗಿತ್ತು. ಅಂತಿಮ ಕ್ಷಣದಲ್ಲಿ ಸುರಕ್ಷಿತ ರನ್ವೇ ಬಿಟ್ಟು ಅಪಾಯಕಾರಿ ‘ಟೇಬಲ್ಟಾಪ್’ ರನ್ವೇಯನ್ನು ಬಳಸಲಾಗಿತ್ತು. ವಿಮಾನ ಪತನಗೊಳ್ಳುವ ಮುನ್ನ ಸಹ-ಪೈಲಟ್ ‘ಓಹ್ ಶಿಟ್’ ಎಂದು…
ಮಂಡ್ಯ :- ಬಾಬು ಜಗಜೀವನ್ ರಾಂ ಹಾಗೂ ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಮದ್ದೂರು ತಾಲೂಕಿನ ತಹಸೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಇಬ್ಬರು ಮಹನೀಯರ ಜನ್ಮ ದಿನವನ್ನು ಅದ್ದೂರಿಯಾಗಿ ಆಚರಿಸಲು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು ಹಾಗೂ ಕಾರ್ಯಕ್ರಮ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಏ.5 ರಂದು ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಂ ಅವರ ಜಯಂತಿ ಮತ್ತು ಏ.14 ರಂದು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರ ಜಯಂತಿಯಂದು ನಗರದಿಂದ ಶ್ರೀ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ಮೆರವಣಿಗೆ ಹೊರಟು ಪ್ರಮುಖ ರಸ್ತೆಗಳಲ್ಲಿ ಜಾನಪದ ಕಲಾ ತಂಡಗಳು, ಸ್ಥಬ್ಧ ಚಿತ್ರಗಳು, ವಿವಿಧ ಶಾಲೆಗಳ ಮಕ್ಕಳೊಂದಿಗೆ ಮೆರವಣಿಗೆ ಸಾಗಿ ನಗರಸಭಾ ಕಛೇರಿ ಮುಂಭಾಗ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ…
ಬೆಂಗಳೂರು, ಮಾರ್ಚ್ 24, (ಕರ್ನಾಟಕ ವಾರ್ತೆ) : ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆ ಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಕರ್ನಾಟಕ ವಿಧಾನಸಭೆಯಿಂದ ತಿದ್ದುಪಡಿಯೊಂದಿಗೆ ಅಂಗೀಕೃತ ರೂಪದಲ್ಲಿರುವ ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026 ನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್ ಅವರು ವಿಧಾನ ಪರಿಷತ್ತಿನ ಕಲಾಪದ ವೇಳೆ ಮಂಡಿಸುತ್ತಾ ವಿಧೇಯಕದ ಉದ್ದೇಶಗಳು ಮತ್ತು ಕಾರಣಗಳ ಬಗ್ಗೆ ವಿವರಿಸಿದರು. ಕರ್ನಾಟಕ ರಾಜ್ಯದಲ್ಲಿ ಜಾತಿ-ಆಧಾರಿತ ತಾರತಮ್ಯವು ನಿರಂತರವಾಗಿ, ಅಂತರ್ಜಾತಿ ವಿವಾಹಗಳ ಮೂಲಕ ಅವರ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವವರ, ವಿಶೇಷವಾಗಿ ಯುವ ವಯಸ್ಕರ ವಿರುದ್ಧ ಮರ್ಯಾದೆಗೇಡು ಹತ್ಯೆಗಳನ್ನು ಒಳಗೊಂಡಂತೆ ಕ್ರೂರ ಸ್ವರೂಪದ ಹಿಂಸಾಚಾರಗಳು ವ್ಯಕ್ತವಾಗುತ್ತಿರುವುದು ಮುಂದುವರಿಯುತ್ತಿರುವುದರಿಂದ ಮತ್ತು ಕೊಲೆ, ಹಲ್ಲೆ ಮತ್ತು ಅಪರಾಧಿಕ…
ಬೆಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ‘ಹರ್ ಘರ್ ಜಲ್’ (ಪ್ರತಿ ಮನೆಗೂ ನೀರು) ಗುರಿಯನ್ನು ಹೊಂದಿರುವ ಜಲ ಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಹಿನ್ನಡೆಯಾಗಿದೆ ಎಂದು ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು (CAG) ತಮ್ಮ ಇತ್ತೀಚಿನ ವರದಿಯಲ್ಲಿ ತಿಳಿಸಿದ್ದಾರೆ. ಯೋಜನೆಗೆ ಮೀಸಲಿಟ್ಟ ಹಣವನ್ನು ಬಳಸಿಕೊಳ್ಳುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯದ ಕೊರತೆ ಹಾಗೂ ಆಡಳಿತಾತ್ಮಕ ವಿಳಂಬವೇ ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಗ್ರಾಮೀಣ ಮನೆಗಳಿಗೆ ನಲ್ಲಿ ಮೂಲಕ ನೀರು ಒದಗಿಸುವ ಕೇಂದ್ರದ ಮಹತ್ವಾಕಾಂಕ್ಷಿ ಜಲಜೀವನ್ ಮಿಷನ್ (ಜೆಜೆಎಂ) ಯೋಜನೆ ರಾಜ್ಯದಲ್ಲಿ ಬಹುಮಟ್ಟಿಗೆ ವಿಫಲವಾಗಿದೆ ಎಂದು ಭಾರತ ಲೆಕ್ಕನಿಯಂತ್ರಕರು ಹಾಗೂ ಮಹಾ ಲೆಕ್ಕಪರಿಶೋಧಕರ (ಸಿಎಜಿ) ವರದಿ ತಿಳಿಸಿದೆ. ಈ ಹಿನ್ನಡೆಯಿಂದಾಗಿ ವಿಶೇಷವಾಗಿ ಬಯಲು ಸೀಮೆ ಮತ್ತು ನೀರಿನ ಅಭಾವವಿರುವ ಜಿಲ್ಲೆಗಳಲ್ಲಿ ಜನರು ಇನ್ನೂ ಹನಿ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಡಳಿತಾತ್ಮಕ ವಿಳಂಬವು ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಅಪಾಯವನ್ನೂ ತಂದೊಡ್ಡಿದೆ. ವಿಧಾನಸಭೆಯಲ್ಲಿ ಜೆಜೆಎಂ ಕಾರ್ಯನಿರ್ವಹಣೆ ಸಂಬಂಧ ಸಿಎಜಿ…
ಕಲಬುರ್ಗಿ : ಕಲಬುರ್ಗಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದ್ದು, ಜಿಲ್ಲೆಯ ಚಿಂಚೋಳಿ ತಾಲೂಕಿನ ಶಾದಿಪುರ ತಾಂಡಾದಲ್ಲಿ ಸಿಡಿಲು ಬಡಿದು ರೈತ ಸಾವನಪ್ಪಿದ್ದಾನೆ. ಕೃಷಿ ಕೆಲಸ ಮಾಡುತ್ತಿದ್ದ ರೈತ ಮಹೇಶ್ ಚವ್ಹಾಣ (24) ಎಂಬ ಯುವ ರೈತ ಸಾವನಪ್ಪಿದ್ದಾನೆ. ಕಲಬುರ್ಗಿ ಜಿಲ್ಲೆ ಸೇರಿದಂತೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುತ್ತಿದೆ. ಹಾಗಾಗಿ ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ಗಂಟೆಯಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ! ಇನ್ನು ಮುಂದಿನ 5 ದಿನಗಳಲ್ಲಿ ರಾಜ್ಯದ 10 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಸ್ಥಳೀಯರು ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಿದೆ. ತಮಿಳುನಾಡು ಮತ್ತು ಕರ್ನಾಟಕದ ಒಳನಾಡಿನಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಇರಲಿದೆ. ಈ ಹಿನ್ನೆಲೆ ಮಾರ್ಚ್ 23 ರಿಂದ 5 ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಗದಗ, ಹಾವೇರಿ, ಯಾದಗಿರಿ, ಕಲಬುರಗಿ, ಚಿತ್ರದುರ್ಗ, ವಿಜಯನಗರ,…
ಬೆಂಗಳೂರು : ರಾಜ್ಯದ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪಾರಂಪರಿಕ ಕಟ್ಟಡಗಳ 100 ಮೀಟರ್ ಸುತ್ತಮುತ್ತ ಯಾವುದೇ ವಾಣಿಜ್ಯ ಚಟುವಟಿಕೆಗಳು ಮತ್ತು ಬಹುಮಹಡಿ ಕಟ್ಟಡಗಳನ್ನು ನಿರ್ಮಿಸುವಂತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಸದಸ್ಯ ಕೆ.ಶಿವಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜಿಲ್ಲಾ ಮಟ್ಟದಲ್ಲಿ ಪಾರಂಪರಿಕ ತಾಣಗಳ ಸಂರಕ್ಷಣಾ ಸಮಿತಿಗಳು ಕಾರ್ಯನಿರ್ವಹಿಸುತ್ತಿದ್ದು, ಪಾರಂಪರಿಕ ಕಟ್ಟಡಗಳ ಸ್ಥಿತಿಗತಿಗಳ ಬಗ್ಗೆ ಕಾಲಕಾಲಕ್ಕೆ ಸಭೆ ಸೇರಿ ಅವಲೋಕನ ಮಾಡುತ್ತಿವೆ. ಈ ಸಮಿತಿಗಳು ನೀಡುವ ಶಿಫಾರಸುಗಳ ಆಧಾರದಲ್ಲಿ ಪಾರಂಪರಿಕ ಕಟ್ಟಡಗಳ ಸುತ್ತಮುತ್ತಲಿನ ಚಟುವಟಿಕೆಗಳಿಗೆ ಅನುಮತಿ ನೀಡುವುದು ಅಥವಾ ನಿಯಂತ್ರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಲ್ಯಾನ್ಸ್ ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆಗಳು, ವಾಣಿವಿಲಾಸ ಮಾರುಕಟ್ಟೆ ಮತ್ತು ಮಂಡಿ ಮೊಹಲ್ಲಾ ಮಾರುಕಟ್ಟೆಗಳು ಶಿಥಿಲಾವಸ್ಥೆಯಲ್ಲಿರುವುದನ್ನು ಸರ್ಕಾರ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಲ್ಯಾನ್ಸ್ ಡೌನ್ ಕಟ್ಟಡವನ್ನು ನೆಲಸಮ ಮಾಡಿ ಹೊಸ ಕಟ್ಟಡ…
ಬೆಳಗಾವಿ : ಬೆಳಗಾವಿಯಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿದ್ದು, ಬೆಳಗಾವಿ ಜಿಲ್ಲೆಯ ಆದ್ಯಂತ ರಸ್ತೆಗಳೆಲ್ಲ ನದಿಯಂತೆ ಮಾರ್ಪಟ್ಟಿವೆ. ಆಲಿಕಲ್ಲು ಸಹಿತ ಭಾರಿ ಮಳೆ ಆಗುತ್ತಿರುವುದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಅಲ್ಲದೆ ಬೆಳಗಾವಿ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಮಳೆಯ ನೀರು ನುಗ್ಗಿದ್ದು ಕಚೇರಿಯಲ್ಲಿ ಇದ್ದಂತಹ ದಾಖಲೆಗಳು ಹಾಗೂ ಕಂಪ್ಯೂಟರ್ ಗಳು ಎಲ್ಲಾ ನಿರುಪಾಲಾಗಿರುವ ಘಟನೆ ಇದೀಗ ವರದಿಯಾಗಿದೆ. ಇನ್ನು ಕಳೆದ ಕೆಲವು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ಹಾಲಿಕಲ್ಲು ಮಳೆಯಾಗಿದ್ದು ಒಂದು ರೀತಿಯಲ್ಲಿ ಕಾಶ್ಮೀರ ಆದಂತೆ ಆಗಿತ್ತು.
ನವದೆಹಲಿ : ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸೋಶಿಯಲ್ ಮೀಡಿಯಾದಲ್ಲಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದುಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ (MOPNG) ಜಂಟಿ ಕಾರ್ಯದರ್ಶಿ ಸುಜಾತ ಶರ್ಮ ಈ ಒಂದು ಹೇಳಿಕೆ ನೀಡಿದ್ದಾರೆ. ದೇಶಾದ್ಯಂತದ ಇರುವ ಸಂಸ್ಕರಣಾಗಾರಗಳು ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ತಮ್ಮ ಅತ್ಯುನ್ನತ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ನಮ್ಮಲ್ಲಿ ಸಾಕಷ್ಟು ಪೆಟ್ರೋಲ್ ಡೀಸೆಲ್ ಇದೆ. ಸೋಶಿಯಲ್ ಮೀಡಿಯಾದಲ್ಲಿರುವ ಯಾವುದೇ ವದಂತಿಗಳನ್ನು ನಂಬಬೇಡಿ ಆತಂಕ ಬೇಡ ಚಿಲ್ಲರೆ ಮಾರಾಟ ಮಳಿಗೆಗಳಿಗೆ ತೊಂದರೆ ಆಗಿಲ್ಲ ಎಂದು ತಿಳಿಸಿದರು. ಈ ಕುರಿತ ಪ್ರಮುಖ ಅಂಶಗಳು ಇಲ್ಲಿವೆ: ಸಂಪೂರ್ಣ ಲಭ್ಯತೆ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ. ವದಂತಿಗಳಿಗೆ ಬ್ರೇಕ್: ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಇತರ ಮೂಲಗಳ ಮೂಲಕ ಹರಡುವ “ಇಂಧನ ಖಾಲಿಯಾಗುತ್ತಿದೆ” ಎಂಬ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ಗಾಬರಿ ಬೇಡ: ತೈಲ…














