Author: kannadanewsnow05

ನವದೆಹಲಿ : ಯಾರ್ ಮೇಲೆ ನಿರಂತರವಾಗಿ ದಾಳಿ ನಡೆಸಿರುವ ಇಸ್ರೇಲ್, ಇದೀಗ ಇಸ್ರೇಲ್ ಸಚಿವ ಜೀವ್ ಎಲ್ಕಿನ್ ವಿವಾದಾತ್ಮಕ ಹೇಳಿಕೆ ಒಂದನ್ನು ನೀಡಿದ್ದು, ಯುದ್ಧ ಮುಗಿಯಲ್ಲ, ಅದು ನಮಗೆ ವರದಾನ. ಯುದ್ಧ ಯಾವಾಗ ಮುಗಿಯುತ್ತೆ ಅನ್ನುವುದಕ್ಕಿಂತ. ಶತ್ರುಗಳಿಗೆ ಎಷ್ಟು ಡ್ಯಾಮೇಜ್ ಮಾಡುತ್ತೇವೆ ಅನ್ನುವುದು ಮುಖ್ಯವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯುದ್ಧ ಮುಗಿಯಲ್ಲ ಯುದ್ಧವೇ ನಮಗೆ ವರದಾನವಿದ್ದಂತೆ. ಯುದ್ಧ ಯಾವಾಗ ಮುಗಿಯುತ್ತೆ ಅನ್ನುವ ಬಗ್ಗೆ ಚರ್ಚೆಯಾಗಿಲ್ಲ. ಶತ್ರುಗಳಿಗೆ ಎಷ್ಟು ಡ್ಯಾಮೇಜ್ ಮಾಡುತ್ತೇವೆ ಅನ್ನೋದೇ ಮುಖ್ಯವಾಗಿದೆ. ಪ್ರತಿದಿನ ದಾಳಿ ಮಾಡುವುದರಿಂದ ಇಸ್ರೇಲ್ ಪಾಲಿಗೆ ಅದು ಒಂದು ವರದಾನ ಇದ್ದಂತೆ. ಇಸ್ರೇಲ್ ಸೇನೆಯ ರೇಡಿಯೋ ಜೊತೆಗೆ ಸಚಿವ ಜೀವ್ ಎಲ್ಕೀನ್ ಮಾತನಾಡಿದ್ದು ಈ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Read More

ಹಾಸನ : ಮಾಜಿ ಪ್ರಧಾನಿ ಹಾಗು ಜೆಡಿಎಸ್ ವರಿಷ್ಟರು ಆಗಿರುವ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.ಇಂದು ಸಂಜೆ ಹೊಳೆನರಸೀಪುರದ ಬಸವನಾಯಕನಹಳ್ಳಿ ಅವರ ಅಂತ್ಯಕ್ರಿಯೆ ನೆರವೇರಲಿದೆ.

Read More

ಬೆಂಗಳೂರು : ಕೆಡಿ ಚಿತ್ರದ ವಸರ್ಕೆ ಚುನರ ತೇರಿ ಹಾಡಿನಲ್ಲಿ ಅಶ್ಲೀಲತೆ ಆರೋಪ ಹಿನ್ನೆಲೆಯಲ್ಲಿ ಇದೀಗ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಚಿತ್ರದ ನಿರ್ದೇಶಕ ಪ್ರೇಮ್ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಮಾರ್ಚ್ 24 ಮಧ್ಯಾಹ್ನ 12:30 ಕ್ಕೆ ವಿಚಾರಣೆಗೆ ಹಾಜರಾಗಲು ಮಹಿಳಾ ಆಯೋಗ ನೋಟಿಸ್ ನೀಡಿದೆ. ಕೇಡಿ ಚಿತ್ರದ ನಿರ್ದೇಶಕ ಪ್ರೇಮ್, ನಿರ್ಮಾಪಕ ವೆಂಕಟ್ ನಾರಾಯಣ, ನಟಿ ನೊರಾ ಫತೆಹಿ, ನಟ ಸಂಜಯ್ ದತ್ ಹಾಗೂ ರಕೀಬ್ ಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ, ಆಯೋಗ ನೋಟಿಸ್ ಜಾರಿಗೊಳಿಸಿದೆ. 1990ರ NCW ಕಾಯ್ದೆಯ ಅಡಿ ಕುಯಂ ಪ್ರೇರಿತವಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ಈ ಚಿತ್ರದಲ್ಲಿ ಪ್ರಾಥಮಿಕವಾಗಿ ಲೈಂಗಿಕವಾಗಿ ಸೂಚಿಸುವ ಆಕ್ಷೇಪಾರ್ಹ ಮತ್ತು ಭಾರತೀಯ ನ್ಯಾಯ ಸಂಹಿತಾ, ಐಟಿ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿಯಲ್ಲಿರುವ ನಿಬಂಧನೆಗಳನ್ನು ಸಿನಿಮಾ ಟೀಂ ಉಲ್ಲಂಘಿಸಿದೆ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಿದೆ.

Read More

ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳ ಜೈಲುಗಳಲ್ಲಿ ಕೈದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ವೈದ್ಯರ ಪರೀಕ್ಷೆ ವೇಳೆ ಹಲವರು ಡ್ರಗ್ಸ್ ಸೇವನೆ ಮಾಡಿರುವುದು ಪತ್ತೆಯಾಗಿದೆ. ಅದರಲ್ಲೂ ಹೆಚ್ಚಾಗಿ ಮಹಿಳಾ ಕೈದಿಗಳ ಸೇವನೆ ಮಾಡಿರುವುದು ಪತ್ತೆಯಾಗಿದೆ. ಹೌದು ರಾಜ್ಯದ ಎಲ್ಲಾ ಜೈಲಿನಲ್ಲಿ ಅಧಿಕಾರಿಗಳು ಡ್ರಗ್ಸ್ ಟೆಸ್ಟ್ ನಡೆಸುತ್ತಿದ್ದಾರೆ.ಜೈಲಿನ ವೈದ್ಯರಿಗೆ ಡ್ರಗ್ಸ್ ಟೆಸ್ಟ್ ಕೊಟ್ಟು ಕೈದಿಗಳಿಗೆ ಟೆಸ್ಟ್ ನಡೆಸಲಾಗುತ್ತಿದೆ. ಸದ್ಯ ಪಾಸಿಟಿವ್ ಬಂದಿರುವ ಕೈದಿಗಳಿಗೆ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ವ್ಯಸನದ ಮಟ್ಟ ಎಷ್ಟು ಇದೆ ಎಂದು ತಿಳಿಯಲು ಸ್ಯಾಂಪಲ್ಸ್ ಗಳನ್ನು ರವಾನಿಸಲಾಗಿದೆ. ನಿಮ್ಹಾನ್ಸ್ ನಿಂದ ವರದಿ ಬಂದ ನಂತರ ವ್ಯಸನದ ಮಟ್ಟ ನೋಡಿ ಚಿಕಿತ್ಸೆ ನೀಡಲಾಗುತ್ತದೆ. ವಿಚಾರಣಾಧೀನ ಕೈದಿಗಳಲ್ಲಿ ಮಾದಕ ವ್ಯಸನ ಹೆಚ್ಚಾಗಿ ಕಂಡುಬಂದಿದೆ. ಟೆಸ್ಟ್ ವೇಳೆ ವಿಚಾರಣಾ ಧನ ಕೈದಿಗಳಲ್ಲಿ ಹೆಚ್ಚು ಪಾಸಿಟಿವ್ ಬಂದಿದೆ. ಸಜಾ ಕೈದಿಗಳಲ್ಲಿ ದೊಡ್ಡ ಪ್ರಮಾಣದಲ್ಲಿ ವ್ಯಸನ ಕಂಡುಬಂದಿಲ್ಲ. ಯೂರಿನ್ ಸ್ಯಾಂಪಲ್ ಶೇಕರಣೆ ವೇಳೆ ಮಹಿಳಾ ಕೈದಿಗಳು ಕಳ್ಳಾಟ ನಡೆಸಿದ್ದಾರೆ. ಯೂರಿನ್ ಬದಲಿಗೆ ನೀರು ಮಿಶ್ರಣ ಮಾಡಿ ಕೊಟ್ಟಿರುವುದು ಇದೀಗ…

Read More

ಮಂಗಳೂರು : ಪ್ರೇಮ ವೈಫಲ್ಯದಿಂದ ಮನನೊಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲೆಸೆದ 19 ವರ್ಷದ ಯುವಕನನ್ನು ಆಲುವಾ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ತನ್ನ ಪ್ರೇಯಸಿ ಬಿಟ್ಟು ಹೋದ ಕೋಪದಲ್ಲಿ, ಆಕೆಯ ಮನೆಯ ಸಮೀಪ ಹಾದುಹೋಗುವ ರೈಲನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ. ಅಂಕಮಾಲಿ ಪಾರಕ್ಕಡವು ನಿವಾಸಿ ಸುಜಿತ್ ಸುರೇಶ್ ಬಂಧಿತ ಆರೋಪಿ. ರೈಲಿನ ಹೊರಭಾಗದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಗಳನ್ನು ಆಧರಿಸಿ ಪೊಲೀಸರು ಈತನನ್ನು ಪತ್ತೆಹಚ್ಚಿದ್ದಾರೆ. ಈ ತಿಂಗಳ 7ರಂದು ಬೆಳಿಗ್ಗೆ 7:15ರ ಸುಮಾರಿಗೆ ನೆಡುಂಬಾಶೇರಿ ವಿಮಾನ ನಿಲ್ದಾಣದ ಸಮೀಪವಿರುವ ಅಕಪರಂಬು ರೈಲ್ವೆ ಗೇಟ್ ಬಳಿ ಈ ಘಟನೆ ನಡೆದಿತ್ತು. ತಿರುವನಂತಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಮೇಲೆ ಮೂರು ಬಾರಿ ಕಲ್ಲು ತೂರಲಾಗಿತ್ತು. ಕಲ್ಲೇಟಿನಿಂದಾಗಿ ರೈಲಿನ ಕಿಟಕಿಯ ಗಾಜುಗಳು ಪುಡಿಯಾಗಿದ್ದವು. ಪೊಲೀಸ್ ವಿಚಾರಣೆಯ ವೇಳೆ ಸುಜಿತ್ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ. ತನ್ನ ಪ್ರೇಯಸಿಯ ಮನೆಯು ರೈಲ್ವೆ ಹಳಿಗಳ ಸಮೀಪದಲ್ಲೇ ಇದ್ದು, ಆಕೆ ತನ್ನನ್ನು ಬಿಟ್ಟು…

Read More

ನವದೆಹಲಿ : ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅವರು ಉದ್ಯಮಿಯ ಬರುತ್ತದೆ ಮದುವೆ ಆಗಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ಇದೀಗ ಅನುಷ್ಕಾ ಶೆಟ್ಟಿ ಅವರ ತಂಡ ಇದಕ್ಕೆ ಖಾರವಾಗಿ ಸ್ಪಷ್ಟನೆ ಕೊಟ್ಟಿದ್ದು, ಯಾರದ್ದೋ ಜೀವನ. ನಿಜವೋ ಅಲ್ಲವೋ ಎಂದು ಪರಿಶೀಲಿಸುವ ಮೊದಲು ಸುದ್ದಿಯನ್ನಾಗಿ ಮಾಡುವುದಿಲ್ಲ. ಊಹಾಪೋಹ ಮಾಡುವುದು, ಭವಿಷ್ಯ ನುಡಿಯುವುದು ಮತ್ತು ಅನಧಿಕೃತ ಮಾಹಿತಿಯನ್ನು ಪದೇ ಪದೇ ಪ್ರಕಟಿಸುವುದು ಸರಿಯಲ್ಲ. ಅವರ ವಯಸ್ಸಿಗೆ ಅನಗತ್ಯ ಗಮನ ನೀಡುವುದು ಮತ್ತು ಪ್ರತಿ ಪೋಸ್ಟ್‌ನಲ್ಲಿ ’44’ ಸಂಖ್ಯೆಯನ್ನು ಯಾವುದೋ ವಿವಾದಾತ್ಮಕ ವಿಷಯದಂತೆ ಹೈಲೈಟ್ ಮಾಡುವುದು ಸರಿಯಲ್ಲ. ನಟಿಯರಿಗೆ ವಯಸ್ಸು ಇಷ್ಟು ದೊಡ್ಡ ಸಮಸ್ಯೆಯಾಗಿದ್ದರೆ, ನಾಯಕರಿಗೆ ಏಕೆ ಅಷ್ಟು ಗಮನ ಕೊಡಲ್ಲ? ಮಹಿಳೆಯರಿಗೆ ಅದು ಏಕೆ ಭಿನ್ನವಾಗಿದೆ? ಅನುಷ್ಕಾ ಶೆಟ್ಟಿ ತಮ್ಮ ವೃತ್ತಿಜೀವನವನ್ನು ಪ್ರತಿಭೆ ಮತ್ತು ಘನತೆಯಿಂದ ನಿರ್ಮಿಸಿಕೊಂಡಿದ್ದಾರೆ. ಅವರು ಎಂದಿಗೂ ಪಿಆರ್ ಸ್ಟಂಟ್‌ಗಳನ್ನು ಅವಲಂಬಿಸಿಲ್ಲ’ ಎಂದು ಹೇಳಲಾಗಿದೆ. ಇದು ಬ್ರೇಕಿಂಗ್ ನ್ಯೂಸ್ ಅಲ್ಲ. ಇದು ಟ್ರೆಂಡ್ ಅಲ್ಲ. ಜವಾಬ್ದಾರಿಯುತವಾಗಿರಿ. ಗಡಿಗಳನ್ನು ಗೌರವಿಸಿ. ಪ್ರಕಟಿಸುವ…

Read More

ವಿಜಯಪುರ : ಏಪ್ರಿಲ್ ಒಂಬತ್ತರಂದು ಕರ್ನಾಟಕ ಉಪಚುನಾವಣೆ ನಡೆಯಲಿದ್ದು ಬಾಗಲಕೋಟೆ ಹಾಗೂ ದಾವಣಗೆರೆಯ ದಕ್ಷಿಣ ಕ್ಷೇತ್ರಕ್ಕೆ ಈ ಒಂದು ಉಪಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ ಬಾಗಲಕೋಟೆಗೆ ಮಾಜಿ ಶಾಸಕರಾದಂತಹ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶ್ರೀನಿವಾಸ್ ಟಿ ದಾಸಕರಿಯಪ್ಪಗೆ ಟಿಕೆಟ್ ಘೋಷಣೆ ಮಾಡಿದೆ. ಆದರೆ ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಸಿದ್ದೇಶ್ವರ ಆಪ್ತಗೆ ನೀಡಿದ್ದಾರೆ. ಆದರೆ, ಇದು ಪಕ್ಕಾ ಅಲ್ಲ, ಕೊನೆ ಕ್ಷಣದಲ್ಲಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಪಡಬೇಡಿ. ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ಮುಗಿಯುವ ವರೆಗೂ ಇದನ್ನ ನಂಬುವ ಹಾಗಿಲ್ಲ. ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಟ್ಟರೆ ಇದು ಬದಲಾಗುತ್ತೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಸಿಗುತ್ತೆ. ಶಾಮನೂರು ಅವರ ಉಪಕಾರ ಪೂಜ್ಯ ತಂದೆ ಯಡ್ಡಿಯೂರಪ್ಪ, ಪುತ್ರರಾದ ರಾಘವೇಂದ್ರ, ವಿಜಯೇಂದ್ರ ಮೇಲೆ ತುಂಬಾ ಇದೆ. ರಾಘವೇಂದ್ರ ಹಾಗೂ ವಿಜಯೇಂದ್ರ ಗೆಲ್ಲಲು ಶಾಮನೂರು ಅವರ ಸಹಾಯ…

Read More

ಬೆಂಗಳೂರು : ವಾಣಿಜ್ಯ ಸಿಲಿಂಡರ್ ಇಲ್ಲದೆ ಬೆಂಗಳೂರಿನಲ್ಲಿ ಹೋಟೆಲ್ ಮಾಲೀಕರು ಇದೀಗ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ವಾಣಿಜ್ಯ ಸಿಲಿಂಡರ್ ಗಳನ್ನು ಪೂರೈಕೆ ಮಾಡಿ ಎಂದು ಪತ್ರ ಬರೆದು ಮನವಿ ಮಾಡಿದ್ದಾರೆ. ಹೌದು ಇರಾನ್ ಇಸ್ರೇಲ್ ಹಾಗೂ ಅಮೆರಿಕ ಯುದ್ಧದ ಹಿನ್ನೆಲೆಯಲ್ಲಿ ಇದೀಗ ಭಾರತದಲ್ಲಿ ಗ್ಯಾಸ್ ಸಿಲಿಂಡರ್ ಗಳ ಕೊರತೆ ಹೆಚ್ಚಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ದೊಡ್ಡ ದೊಡ್ಡ ಹೋಟೆಲ್ಗಳು ವಾಣಿಜ್ಯ ಸಿಲಿಂಡರ್ ಇಲ್ಲದೆ ಬಂದ್ ಆಗಿವೆ. ಇನ್ನು ರಾಜ್ಯ ಸರ್ಕಾರ ಕೂಡ ಒಂದು ಸಾವಿರ ಸಿಲಿಂಡರ್ ಪೂರೈಕೆ ಮಾಡಲಾಗುತ್ತೆ ಎಂದು ಹೇಳಿದೆ. ಆದರೆ ಬೆಂಗಳೂರಲ್ಲಿರುವ 40,000ಕ್ಕೂ ಹೆಚ್ಚು ಹೋಟಲ್ ಗಳಿಗೆ ಕೇವಲ ಒಂದು ಸಾವಿರ ಸಿಲಿಂಡರ್ ಸಾಕಾಗಲ್ಲ. ಹಾಗಾಗಿ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಅವರು ಇದೀಗ ಪ್ರಧಾನಿ ಮೋದಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಇನ್ನು ಹಲವು ಜಿಲ್ಲೆಗಳಲ್ಲಿ ಗ್ಯಾಸ್ ಸಿಲಿಂಡರ್…

Read More

ಹುಬ್ಬಳ್ಳಿ : ಕಳೆದ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ನಾಲ್ವರು ಕಾರ್ಮಿಕರು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬಂಧಸಿದಂತೆ ಇದೀಗ ಓರ್ವ ಕಾರ್ಮಿಕ ಸವಣ್ಣಪ್ಪಿದ್ದಾನೆ. ಹೌದು ಕಾರ್ಮಿಕರು ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡಿ ಮಲಗಿದ್ದರು. ಈ ವೇಳೆ ಅವರು ಮಲಗಿದ್ದ ಜಾಗದಲ್ಲಿ ಆಕ್ಸಿಜನ್ ಕೊರತೆ ಹಿನ್ನೆಲೇ ಅಸ್ವಸ್ಥರಾಗಿದ್ದರು. ತಕ್ಷಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾನೆ.

Read More

ಬೆಂಗಳೂರು : ಹಿಂದೆ ರಾಜ್ಯದಲ್ಲಿ ಆಲಿಕಲ್ಲು ಮಳೆಯಾಗಿ ಕರ್ನಾಟಕ ಮಿನಿ ಕಾಶ್ಮೀರ ಎಂಬಂತೆ ಆಗಿತ್ತು. ಇದೀಗ ಅವಮಾನ ಇಲಾಖೆ ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

Read More