Subscribe to Updates
Get the latest creative news from FooBar about art, design and business.
Author: kannadanewsnow05
ಕಲಬುರ್ಗಿ : ಕಲ್ಬುರ್ಗಿ ನಗರದ ಹೃದಯ ಭಾಗದಲ್ಲಿ ಇರುವ ಬಹುಮಾನ ಕೋಟೆಯಲ್ಲಿ ಇರುವಂತಹ ಸೋಮೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಪೂಜೆ ಮಾಡಲು ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೂಜೆಗೆ ಅವಕಾಶ ಕೊಡುವಂತೆ ಕಲ್ಬುರ್ಗಿ ಕೋಟೆಯ ಮುಂಭಾಗ ಹಿಂದೂ ಮುಖಂಡರು ಧರಣಿ ನಡೆಸಿದರು. ಕಲ್ಬುರ್ಗಿ ಕೋಟೆ ಆವರಣದಲ್ಲಿರುವ ಶಿವಲಿಂಗ ಪೂಜೆಗೆ ಯತ್ನಿಸಲಾಯಿತು. ಶಿವರಾತ್ರಿಯ ಅಂಗವಾಗಿ ಶಿವಲಿಂಗಕ್ಕೆ ಪೊಲೀಸರು ಪೂಜೆ ಮಾಡಲು ಅವಕಾಶ ನೀಡಲಿಲ್ಲ. ಬಹುಮನಿ ಕೋಟೆ ಒಳಗೆ ಇರುವ ಸೋಮೇಶ್ವರ ದೇಗುಲದಲ್ಲಿ ಈ ಒಂದು ಶಿವಲಿಂಗ ಇದೆ ಶಿವರಾತ್ರಿ ಅಂಗವಾಗಿ ಪೂಜೆಗೆ ಅವಕಾಶ ಕೊಡುವಂತೆ ಹಿಂದೂ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು ಆದರೆ ಪೊಲೀಸರು ಅವಕಾಶ ಕೊಡದೆ ಇಂದು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೋಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಐಡಿ ಅಧಿಕಾರಿಗಳು ಜಡ್ಜ್ ಮುಂದೆ ಇಂದು ಭೈರತಿ ಬಸವರಾಜ್ ಅವರನ್ನು ಹಾಜರುಪಡಿಸಿದರು. ಕೋರಮಂಗಲದಲ್ಲಿರುವ 42ನೇ ACJM ಕೋರ್ಟ್ ನಿವಾಸದಲ್ಲಿ ಹಾಜರುಪಡಿಸಿದರು. ಸಿಐಡಿ ಪೊಲೀಸರ ಪರವಾಗಿ ಎಸ್ಪಿಪಿ ಅಶೋಕ್ ನಾಯಕ್ ಇದೆ ವೇಳೆ ಹಾಜರಾದರು. ವಿಚಾರಣೆಯ ವೇಳೆ ನ್ಯಾಯಾಧೀಶರು ಫೆಬ್ರವರಿ 21 ರವರೆಗೆ ಅಂದರೆ 7 ದಿನಗಳ ಕಾಲ ಬಿಜೆಪಿ ಶಾಸಕ ಭೈರತಿ ಬಸವರಾಜ ನೀಡಿ ಆದೇಶ ನೀಡಿದರು. ಈ ಒಂದು ಕೊಲೆ ಪ್ರಕರಣದಲ್ಲಿ ಅವರು ಕಳೆದ ಕೆಲವು ದಿನಗಳ ಹಿಂದೆ ತಲೆಮರಿಸಿಕೊಂಡಿದ್ದರು. ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ಹೈ ಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಎರಡು ಕಡೆ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿತ್ತು.
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘೋರ ಘಟನೆ, ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆಯ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದೆ. ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಬಿಹಾರ ಮೂಲಕ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ ನಡೆಯುತ್ತಿತ್ತು. ಕಳೆದ ಒಂದು ತಿಂಗಳಂದಲೂ ಸ್ಥಳಾಂತರದ ಕೆಲಸ ನಡೆಯುತ್ತಿತ್ತು. ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ಕಾರ್ಮಿಕರು, ಈ ವೇಳೆ ಟ್ಯಾಂಕ್ಸ್ ಸ್ಪೋಟಗೊಂಡು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳೂರು : ಮಂಗಳೂರಿನಲ್ಲಿ ಪತಿಯ ಪ್ರೀತಿ ಪ್ರೇಮ ಪ್ರಣಯದಾಟಕ್ಕೆ ಪತ್ನಿಯೊಬ್ಬಳು ರೋಸಿ ಹೋಗಿದ್ದು ಪತಿಯ ವಿರುದ್ಧವೇ ಪತ್ನಿ ಇದಿ ದೂರು ಕೊಟ್ಟಿದ್ದಾಳೆ. ಮದುವೆ ಆಗಿದ್ದರೂ ಕೂಡ ಪತಿ ಬೇರೆ ಯುವತಿಯರ ಜೊತೆಗೆ ಪ್ರೀತಿ ಪ್ರೇಮ ನಾಟಕವಾಡುತ್ತಿದ್ದ. ವಿದೇಶದಲ್ಲಿಯ ಕುಳಿತು ಈತ ಯುವತಿಯರಿಗೆ ಗಾಳ ಹಾಕುತ್ತಾನೆ. ಕರಾವಳಿ ಮಂಗಳೂರು ಯುವತಿಯರೇ ಈತನ ನೇರ ಟಾರ್ಗೆಟ್ ಆಗಿದ್ದು, ಗಂಡನ ಪ್ರೇಮ, ಪ್ರೀತಿ ಪ್ರಣಯದಾಟಕ್ಕೆ ಪತ್ನಿ ಬೇಸತ್ತು ಹೋಗಿದ್ದಾಳೆ. ಮಂಗಳೂರಿನ ಬಜಪೆ ನಿವಾಸಿ ಮನಿಶ್ ವಿರುದ್ಧ ಪತ್ನಿ ಪ್ರೀತಿ ಇದೀಗ ದೂರು ಕೊಟ್ಟಿದ್ದಾಳೆ. ಮಂಗಳೂರು ಮಹಿಳಾ ಠಾಣೆಯಲ್ಲಿ ಮನಿಶ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಮದುವೆ ಆಗಿದ್ದರೂ ಕೂಡ ಹಿತ ಬೇರೆ ಯುವತಿಯರೊಂದಿಗೆ ನೌಟಂಕಿ ಆಟ ಆಡುತ್ತಿದ್ದ. ಫೇಸ್ಬುಕ್ ನಲ್ಲಿ ಪ್ರೀತಿಯನ್ನು ಪರಿಚಯ ಮಾಡಿಕೊಂಡಿದ್ದ ಮನೀಶ್ ಬ್ಲ್ಯಾಕ್ಮೇಲ್ ಮಾಡಿ ನನ್ನ ಮದುವೆಯಾಗಿದ್ದಾನೆ ಎಂದು ಆರೋಪ ಮಾಡಿದ್ದಾರೆ. ಮದುವೆಗೆ ಮೂರು ದಿನ ಇರುವಾಗ ಮನೀಶ್ ಆತ್ಮಹತ್ಯೆ ನಾಟಕ ಕೂಡ ಆಡಿದ್ದ ಎಲ್ಲ ಖರ್ಚು ಹಾಕಿ ಪ್ರೀತಿ ಪೋಷಕರು…
ಶಿವಮೊಗ್ಗ : ಕಾರಿನ ಬಾಡಿಗೆ ಹಣ ನೀಡಲು ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಕೆಎಎಸ್ ಅಧಿಕಾರಿ ಹಾಗೂ ನಾಡ ಕಚೇರಿ ಸಹಾಯಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ರಾಷ್ಟ್ರೀಯ ಹೆದ್ದಾರಿ 206 ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ದಲಿಂಗ ರೆಡ್ಡಿ ಹಾಗೂ ಹೊಳಲೂರು ನಾಡಕಚೇರಿ ಸಹಾಯಕ ರಾಜೇಶ್ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಗಿಬಿದ್ದಿದ್ದಾರೆ. ಶಿವಮೊಗ್ಗ ಓತಿಘಟ್ಟ ಗ್ರಾಮ ನಿವಾಸಿ ಕೇಶವಮೂರ್ತಿ ಎಂಬುವರು ತಮ್ಮ ಎರ್ಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ವಿಶೇಷ ಭೂ ಸ್ವಾಧೀನಾಧಿಕಾರಿಗಳ ಕಚೇರಿಗೆ ಬಾಡಿಗೆಗೆ ಬಿಟ್ಟಿದ್ದರು. ಕೇಶವಮೂರ್ತಿಗೆ ಕಳೆದ ವರ್ಷದ ನವೆಂಬರ್ ತಿಂಗಳ ಬಾಡಿಗೆ ಹಣದ ಬಾಕಿ ಬರಬೇಕಿತ್ತು. ಈ ಕುರಿತು ಬಾಡಿಗೆ ಕೇಳಿದಾಗ 40 ಸಾವಿರ ರೂ. ಹಣ ಲಂಚ ನೀಡುವಂತೆ ಸಿದ್ದಲಿಂಗ ರೆಡ್ಡಿ ಬೇಡಿಕೆ ಇಟ್ಟಿದ್ದಾರೆ ಎಂದು ಕೇಶವಮೂರ್ತಿ ಲೋಕಾಯುಕ್ತರಿಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಶನಿವಾರ 40 ಸಾವಿರ ರೂ. ಹಣ ಲಂಚ ಪಡೆಯುವಾಗ ದಾಳಿ ನಡೆಸಲಾಗಿದೆ. ಸಿದ್ದಲಿಂಗ ರೆಡ್ಡಿ ಸೂಚನೆ ಮೇರೆಗೆ…
ಬೆಂಗಳೂರು : ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಎರಡನೇ ಮಗುವಿನ ಖುಷಿಯಲ್ಲಿದ್ದ ದಂಪತಿಗೆ ಆಘಾತವಾಗಿದೆ. ಗರ್ಭಿಣಿ ಫೋಟೋಶೂಟ್ ವೇಳೆ ಮೊದಲ ಮಗು ಸಾವನ್ನಪ್ಪಿದೆ. ಬೆಂಗಳೂರು ಹೊರವಲಯದ ಗಿಡ್ಡೆನಹಳ್ಳಿ ಈ ಒಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಎಂಟು ತಿಂಗಳ ಗರ್ಭಿಣಿ ಫೋಟೋ ಶೂಟ್ ವೇಳೆ ಈ ದುರ್ಘಟನೆ ಸಂಭವಿಸಿದೆ. ಫೋಟೋಶೂಟ್ ವೇಳೆ ಸ್ಥಳದಲ್ಲಿಯೇ ಸಣ್ಣ ನೀರಿನ ಪೋಲ್ ಇತ್ತು. ಈ ವೇಳೆ ಮೊದಲ ಮಗನ ಕಡೆ ಗಮನ ಹರಿಸದೆ ನಿರ್ಲಕ್ಷ ವಹಿಸಿದ್ದಕ್ಕೆ ಆಟವಾಡುತ್ತಾ ನೀರಿಗೆ ಬಿದ್ದು ಮೂರು ವರ್ಷದ ಲಕ್ಷ್ಮೀರ ಎಂಬ ಮಗು ಸಾವನ್ನಪ್ಪಿದೆ. ನಿನ್ನೆ ಸ್ವಾತಿ ಎಂಬಾಕೆ ತನ್ನ ಸ್ನೇಹಿತೆ ಜೊತೆ ಫೋಟೋಶೂಟ್ ಮಾಡಲು ತೆರಳಿದ್ದರು. ಖಾಸಗಿ ರೆಸಾರ್ಟ್ ಗೆ ತೆರಳಿ ಫೋಟೋ ಶೂಟ್ ಮಾಡುತ್ತಿದ್ದರು ಈ ವೇಳೆ ಮೂರು ವರ್ಷದ ಲಕ್ಷ್ಮೀರನನ್ನು ಆಟವಾಡಲು ಬಿಟ್ಟು ಫೋಟೋಶೂಟ್ ಮಾಡುತ್ತಿದ್ದರು. ಈ ವೇಳೆ ಮಗುವನ್ನು ಗಮನಿಸಿದೆ ಫೋಟೋಶೂಟ್ ಮಾಡುತ್ತಿದ್ದರು. ಆಗ ಮಗು ಆಟವಾಡುತ್ತ ಹೋಗಿ ನೀರಲ್ಲಿ ಬಿದ್ದು ಸಾವನಪ್ಪಿದೆ. ಅರ್ಧ ಗಂಟೆಯ…
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘೋರ ಘಟನೆ, ಮಂಡ್ಯದ ಬಸರಾಳು ಸಮೀಪದ ಕಾರೆಕಟ್ಟೆಯ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಸಂಭವಿಸಿದೆ. ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆಯನ್ನು ಶಿಫ್ಟ್ ಮಾಡಲಾಗುತ್ತಿತ್ತು. ಬಿಹಾರ ಮೂಲಕ ಕಾರ್ಮಿಕರಿಂದ ಕಾರ್ಖಾನೆ ಸ್ಥಳಾಂತರ ಕಾರ್ಯ ನಡೆಯುತ್ತಿತ್ತು. ಕಳೆದ ಒಂದು ತಿಂಗಳಂದಲೂ ಸ್ಥಳಾಂತರದ ಕೆಲಸ ನಡೆಯುತ್ತಿತ್ತು. ಇಂದು ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದ ಕಾರ್ಮಿಕರು, ಈ ವೇಳೆ ಟ್ಯಾಂಕ್ಸ್ ಸ್ಪೋಟಗೊಂಡು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದೇ ಕಾರ್ಖಾನೆಯಲ್ಲಿ ನಾಲ್ಕು ವರ್ಷಗಳ ಹಿಂದೆಯೂ ಕೂಡ ಅವಘಡ ಸಂಭವಿಸಿತ್ತು. ರಾಸಾಯನಿಕ ಸೋರಿಕೆಯಾಗಿ ನೂರಾರು ಎಕರೆ ಬೆಳೆ ಹಾನಿಯಾಗಿತ್ತು. ಅಲ್ಲದೆ ರಾಸಾಯನಿಕ ಸೋರಿಕೆ ಇಂದ ಎರಡು ನಾಯಿಗಳು ಮೃತಪಟ್ಟಿದ್ದವು. ಬಳಿಕ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾನಿಯಾದ ಬೆಳಿಗ್ಗೆ ಮಂಡ್ಯ ಜಿಲ್ಲಾ ಆಡಳಿತ ಪರಿಹಾರ ಕೊಡಿಸಿತ್ತು. ಹೀಗಾಗಿ ಕಾರ್ಖಾನೆ…
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಕೊಲೆಯ ರಹಸ್ಯವನ್ನು ಭೇದಿಸಿದ್ದಾರೆ. ಕೊಲೆಯಾದ ವ್ಯಕ್ತಿ ಹಾಗು ಆತನ ಪತ್ನಿಯ ಸಹೋದರ ಹಾಗೂ ಸಂಬಂಧಿಯಿಂದ ನಡೆದ ಕೊಲೆ ಎಂದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಪ್ರಕರಣದಲ್ಲಿ ವ್ಯಕ್ತಿಯ ಮಗನೂ ಭಾಗಿಯಾಗಿದ್ದು, ಒಟ್ಟು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 73 ವರ್ಷದ ಕೆ.ಸಿ. ವರ್ಗೀಸ್ ಕೊಲೆಯಾದ ವ್ಯಕ್ತಿ. ಈತನ ಮಗ ಕೆ.ವಿ. ತೋಮಸ್ ಹಾಗೇ ಮೃತನ ಪತ್ನಿಯ ಸಹೋದರ ಸಿ.ಟಿ. ರಾಜು, ಸಂಬಂಧಿ ಚಾಕೊಚ್ಚ ಬಂಧಿತರು.ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಇದೇ ಫೆಬ್ರವರಿ 9ರಂದು ಯುಡಿಆರ್ ಅಡಿಯಲ್ಲಿ ವರ್ಗೀಸ್ ಅವರದ್ದು ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಾಗಿರುತ್ತದೆ. ಆದರೆ ವೈದ್ಯಕೀಯ ವರದಿಯಲ್ಲಿ ತಲೆಗೆ ಉಂಟಾದ ಗಂಭೀರ ಹಲ್ಲೆ ಮತ್ತು ದೇಹದ ಇತರ ಭಾಗಗಳಿಗೆ ಆಗಿರುವ ಗಾಯಗಳಿಂದ ವರ್ಗೀಸ್ ಮೃತಪಟ್ಟಿರುವುದು ದೃಢಪಟ್ಟಿರುತ್ತದೆ. ಈ ಹಿನ್ನೆಲೆ ಫೆ. 13 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಮೊದಲು ದಾಖಲಾಗಿದ್ದ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಬದಲಾಯಿಸಿ ಪೊಲೀಸರು…
ಮಂಡ್ಯ : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು ಡಿಕೆ ಶಿವಕುಮಾರ್ ಸಿಎಂ ಆಗೋದನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಶಾಸಕ ಗಣಿಗ ರವಿಕುಮಾರ್ ಬ್ಯಾಟಿಂಗ್ ಬೀಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಗೆ ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಇದೆ. ಯಾವಾಗ ಯಾವ ಪ್ಲಾನ್ ಮೂವ್ ಮಾಡಿದರೆ ಗೇಮ್ ಗೆಲ್ಲಬಹುದು ಎಂದು ಗೊತ್ತಿದೆ. ಬುದ್ಧಿವಂತಿಕೆ ಇರುವುದಕ್ಕೆ ಸೈಲೆಂಟಾಗಿ ಕಾಯಿನ್ ಮೂವ್ ಮಾಡುತ್ತಿದ್ದಾರೆ. ರಾಜಕಾರಣ ಅಂದಮೇಲೆ ಆಟ ಇರಲೇಬೇಕು ಆಟ ಬಿಡಲು ಆಗಲ್ಲ. ನಮ್ಮದು ಐರ್ಲೆಂಡ್ ಟೀಮ್ ಅಲ್ಲ ಬಲಿಷ್ಠ ಭಾರತ ಟೀಂ. ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಡಿಕೆ ಶಿವಕುಮಾರ್ ಗೆ ಇದೆ. ಪ್ರಶ್ನೆಗಳಿಗೆ ಅತಿ ಶೀಘ್ರದಲ್ಲಿ ಉತ್ತರ ಬರಲಿದೆ ಎಂದು ತಿಳಿಸಿದರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಯತೀಂದ್ರ ಹೇಳಿಕೆಯ ವಿಚಾರವಾಗಿ ಯತಿಂದ್ರ ಸಿದ್ದರಾಮಯ್ಯ ಅವರೇ ನಮ್ಮ ಹೈಕಮಾಂಡ್ ಎಂದು ಗಣಿಗ ರವಿಕುಮಾರ್ ವ್ಯಂಗ್ಯವಾಡಿದರು. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು…
ಚಿಕ್ಕಮಗಳೂರು : ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಸಮೀಪ ಸಂಭವಿಸಿದೆ. ನೀರು ಪಾಲಾದ ಯುವಕರನ್ನು ಅಭಿಷೇಕ್ (27) ಹಾಗೂ ಯೋಗೀಶ್ (17) ಎಂದು ಗುರುತಿಸಲಾಗಿದೆ. ಇವರು ಮೂಲತಃ ಕೊಡಗು ಜಿಲ್ಲೆಯವರಾಗಿದ್ದಾರೆ ಎಂದು ತಿಳಿದು ಬಂದಿದೆ. ಅಭಿಷೇಕ್ ತನ್ನ ಅಕ್ಕನ ಮನೆಗೆ ಬಂದಿದ್ದ ವೇಳೆ ಸ್ನೇಹಿತರೊಂದಿಗೆ ಭದ್ರಾ ನದಿಗೆ ಈಜಲು ತೆರಳಿದ್ದಾನೆ. ಮೃತ ಅಭಿಷೇಕ್ ಅವರ ಅಕ್ಕ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕಳಸ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದು, ಮುಂದಿನ ತನಿಖೆ ನಡೆಯುತಿದೆ.














