Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಮೂವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ತಾಲ್ಲೂಕಿನ ಬೈರಾಪುರ ಗ್ರಾಮದ ಬಳಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಈ ದುರ್ಘಟನೆ ನಡೆದಿದೆ. ವೇಗವಾಗಿ ಬಂದ ಲಾರಿಯೊಂದು ಬೊಲೆರೊ ವಾಹನಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೊಲೆರೊ ವಾಹನವು ಸಂಪೂರ್ಣವಾಗಿ ಜಖಂಗೊಂಡಿದ್ದು, ಅದರಲ್ಲಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಮೊಳಕಾಲ್ಮೂರು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯಕ್ಕೆ ಮೃತಪಟ್ಟ ದುರ್ದೈವಿಗಳ ಗುರುತು ಇನ್ನು ಪತ್ತೆಯಾಗಬೇಕದ್ದು, ಪೊಲೀಸರು ಆ ನಿಟ್ಟಿನಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಅಪಘಾತದ ಬಳಿಕ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಲಾರಿ…
BREAKING : ನಾನು ಕಮಿಟ್ ಆಗಿದ್ದೇನೆ, ರಾಜೀನಾಮೆ ಕೊಡ್ತೀನಿ ಅಂತ ಸಿಎಂ ಹೇಳಿದ್ದಾರೆ : ಶಾಸಕ ಆರ್ ವಿ ದೇಶಪಾಂಡೆ ಹೇಳಿಕೆ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಭಾರಿ ಸಂಚಲನ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿವೆ ಎಂಬ ಸ್ಪೋಟಕ ಮಾಹಿತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ಆರ್. ವಿ. ದೇಶಪಾಂಡೆ ಬಿಚ್ಚಿಟ್ಟಿದ್ದಾರೆ. ಈ ಬೆಳವಣಿಗೆಯು ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ಹಾಗೂ ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್. ವಿ. ದೇಶಪಾಂಡೆ ಅವರು, ತಾವೇ ಖುದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾಗಿ ತಿಳಿಸಿದರು. ಈ ಭೇಟಿಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು, “ನಾನು ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಹೇಳಿರುವುದಾಗಿ ದೇಶಪಾಂಡೆ ಬಹಿರಂಗಪಡಿಸಿದ್ದಾರೆ. “ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದಾಗ ಅವರು ನಾಳೆಯೇ ರಾಜೀನಾಮೆ ಕೊಡುವುದಾಗಿ ಹೇಳಿದರು. ಆದರೆ, ನಾವು ಅವರಿಗೆ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದೇವೆ. ಆದಾಗ್ಯೂ, ನಾಳೆ ಅವರು ರಾಜೀನಾಮೆ ನೀಡಬಹುದು ಎಂಬ ಮುನ್ಸೂಚನೆ ನನಗೆ ಸಿಗುತ್ತಿದೆ” ಎಂದು ದೇಶಪಾಂಡೆ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.…
ಬೆಂಗಳೂರು : ನಿನ್ನೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರ ಜೊತೆಗೆ ಸಿಎಂ ಸಿದ್ದರಾಮಯ್ಯ ಹಲವು ವಿಚಾರಗಳು ಕುರಿತು ಚರ್ಚಿಸಿದ್ದು ಈ ವೇಳೆ ರಾಜೀನಾಮೆ ವಿಚಾರವಾಗಿ ನನಗೆ ಸ್ವಲ್ಪ ದಿನ ಕಾಲಾವಕಾಶ ಬೇಕು ಎಂದು ಕೇಳಿದಾಗ ರಾಹುಲ್ ಗಾಂಧಿ ಅವರ ಮನವಿಯನ್ನು ಸರಸಾಗಾಟವಾಗಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಮಾನವೊಲಿಕೆಗೆ ಸಿದ್ದರಾಮಯ್ಯ ಯತ್ನ ಮಾಡಿದ್ದು, ಚಿಂತನೆಗೆ ಕಾಲಾವಕಾಶ ನೀಡಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು ಕನಿಷ್ಠ 15 ದಿನ ಕಾಲಾವಕಾಶ ನೀಡಿ ಎಂದು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದರು. ಜಾತಿಗಣತಿ ವರದಿ ಅನುಷ್ಠಾನ ನನ್ನ ಕನಸು ಜಾದಿಗಣತಿ ವರದಿ ಸ್ವೀಕರಿಸಲು ಅವಕಾಶ ಕೊಡಿ ಎಂದು ಮನವಿ ಮಾಡಿದ್ದರು. ಬಳಿಕ ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರ ಮನವಿ ನಿರಾಕರಿಸಿದ್ದಾರೆ. ಹೆಚ್ಚಿನ ಸಮಯ ನೀಡಲು ಸಾಧ್ಯವಿಲ್ಲ ಎರಡು ದಿನಗಳಲ್ಲಿ ರಾಜೀನಾಮೆ ನೀಡಿ ಎಂದು ಖಡಕ್ ಸೂಚನೆ ಕೊಟ್ಟಾಗ ಸಿದ್ದರಾಮಯ್ಯ ರಾಹುಲ್ ಗಾಂಧಿ ಮಾತಿಗೆ ಸಮ್ಮತಿ ಸೂಚಿಸಿದ್ದಾರೆ.
ಶಿವಮೊಗ್ಗ: ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಕರ್ತವ್ಯದಲ್ಲಿದ್ದ ಯುವ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತ ದುರ್ದೈವಿಯನ್ನು 26 ವರ್ಷದ ಈರಣ್ಣ ಗುಡಾದಾರ್ ಎಂದು ಗುರುತಿಸಲಾಗಿದ್ದು, ಇವರ ಅಕಾಲಿಕ ಮರಣವು ಪೊಲೀಸ್ ಇಲಾಖೆ ಹಾಗೂ ಅವರ ಕುಟುಂಬಸ್ಥರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮೂಲತಃ ಬೆಳಗಾವಿಯ ಯುವಕ: ಮೃತ ಈರಣ್ಣ ಗುಡಾದಾರ್ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನವರಾಗಿದ್ದಾರೆ. ಇವರು ಕಳೆದ 7 ವರ್ಷಗಳಿಂದ ಶಿವಮೊಗ್ಗದ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (KSRP) 8ನೇ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿ ಅತ್ಯಂತ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇಲಾಖೆಯಲ್ಲಿ ಉತ್ತಮ ನಡವಳಿಕೆಯಿಂದ ಎಲ್ಲರ ಗಮನ ಸೆಳೆದಿದ್ದ ಯುವ ಸಿಬ್ಬಂದಿಯನ್ನು ಕಳೆದುಕೊಂಡು ಸಹೋದ್ಯೋಗಿಗಳು ಕಣ್ಣೀರಿಡುತ್ತಿದ್ದಾರೆ. 18 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ಈರಣ್ಣ: ಈ ದುರಂತದ ಬೆನ್ನಲ್ಲೇ ಮತ್ತೊಂದು ಅತ್ಯಂತ ನೋವಿನ ಸಂಗತಿ ಬೆಳಕಿಗೆ ಬಂದಿದೆ. ಮೃತ ಈರಣ್ಣ ಅವರಿಗೆ ಕೇವಲ 18 ದಿನಗಳ ಹಿಂದೆಯಷ್ಟೇ ಅತ್ಯಂತ…
ಬೆಂಗಳೂರು : ಅಂದುಕೊಂಡಂತೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಬಹುತೇಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಸಾಧ್ಯತೆ ಇದೆ. ಹಾಗಾಗಿ ಅವರು ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಕೂಡ ಇದೆ. ಹೌದು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ಅಂಗಳದಲ್ಲಿ ಚರ್ಚೆ ನಡೆದಿದ್ದು ಸಿಎಂ ಡಿಸಿಎಂ ಆಯ್ಕೆ ಆಧರಿಸಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಲಾಗುತ್ತದೆ. ಶಾಸಕಾಂಗ ಪಕ್ಷದ ಸಭೆಯ ಬಳಿಕ ಕೆಪಿಸಿಸಿ ಅಧ್ಯಕ್ಷರ ರಾಜೀನಾಮೆ ಕೂಡ ನಡೆಯುತ್ತೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಈಗಾಗಲೇ ರಾಜ್ಯ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆ ಶಿವಕುಮಾರ್ ರಾಜೀನಾಮೆ ನೀಡಿದಂತೆ ಆ ಒಂದು ಅಧ್ಯಕ್ಷ ಸ್ಥಾನದ ಮೇಲೆ ಸತೀಶ್ ಜಾರಕಿಹೊಳಿ ಕಣ್ಣು ಇಟ್ಟಿದ್ದಾರೆ. ಕೆಲ ನಾಯಕರ ಜೊತೆಗೆ ಸತೀಶ್ ಜಾರಕಿಹೊಳಿ ಮಾತುಕತೆ ಕೂಡ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿ ಆಯ್ಕೆ…
ಬೆಂಗಳೂರು : ನಾಳೆ ಬೆಳಿಗ್ಗೆ 10:30ಕ್ಕೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಇದೀಗ ಟ್ವೀಟ್ ನಲ್ಲಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ವಿದಾಯದ ಸಂದೇಶ ತಿಳಿಸಿದ್ದಾರೆ. ರಾಜ್ಯದ ಜನರ ಆಶೀರ್ವಾದದೊಂದಿಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ಪೂರೈಸಿರುವ ಈ ಸಾರ್ಥಕ ಸಂದರ್ಭದಲ್ಲಿ ನಮ್ಮ ಸರ್ಕಾರದ ಎಲ್ಲಾ ಸಾಧನೆಗಳ ಶ್ರೇಯವನ್ನು ಪ್ರತಿಯೊಬ್ಬ ಕನ್ನಡಿಗನಿಗೂ ಅರ್ಪಿಸುತ್ತಿದ್ದೇವೆ. ಚುನಾವಣಾ ಪೂರ್ವದಲ್ಲಿ ರಾಜ್ಯದ ಜನತೆಗೆ ನೀಡಿದ ಪ್ರತಿ ಮಾತಿಗೂ ಬದ್ಧರಾಗಿ ನಡೆಯುವ ಮೂಲಕ ನುಡಿದಂತೆ ನಡೆದ ಹೆಮ್ಮೆ ನಮಗಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ, ಪ್ರತಿ ಮನೆಗೂ ತಲುಪಿಸುವಲ್ಲಿ ಯಶಸ್ವಿಯಾಗಿದ್ದೇವೆ. ಯಾರೂ ಹಸಿವಿನಿಂದ ಮಲಗಬಾರದು ಎಂಬ ಸಂಕಲ್ಪದೊಂದಿಗೆ ಜಾರಿಗೊಂಡ ಅನ್ನಭಾಗ್ಯ ಯೋಜನೆಯು ಕೋಟ್ಯಂತರ ಕುಟುಂಬಗಳಿಗೆ ಪೌಷ್ಟಿಕ ಆಹಾರದ ಭದ್ರತೆ ನೀಡುವ ಮೂಲಕ ಆರೋಗ್ಯವಂತ ಸಮಾಜಕ್ಕೆ ಆಧಾರವಾಗಿದೆ. ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ವಿತರಿಸಲು ಈವರೆಗೆ 18,897 ಕೋಟಿ ರೂ. ವ್ಯಯಿಸಲಾಗಿದ್ದು, 4.26 ಕೋಟಿ ಪಡಿತರದಾರರು ಮೂರು ಹೊತ್ತು ನೆಮ್ಮದಿಯಿಂದ ಊಟ ಮಾಡುತ್ತಿದ್ದಾರೆ. https://twitter.com/siddaramaiah/status/2059535232995635525?t=XBW1iNQ8aFRHsrCi_jMZug&s=19
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಮತ್ತು ನಾಯಕತ್ವ ಬದಲಾವಣೆ ಬೆನ್ನಲ್ಲೇ, ಕರ್ನಾಟಕ ಸರ್ಕಾರದ ಇಡೀ ಸಚಿವ ಸಂಪುಟವೇ ಪುನಾರಚನೆಯಾಗುವ ಮುನ್ಸೂಚನೆಗಳು ಲಭ್ಯವಾಗಿವೆ. ಮುಖ್ಯಮಂತ್ರಿಗಳು ಬದಲಾದರೆ ಇಡೀ ಸಂಪುಟವೂ ಕರಗಿ ಹೋಗಲಿದ್ದು, ನೂತನ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಂಪೂರ್ಣ ಹೊಸ ತಂಡ ಅಸ್ತಿತ್ವಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಮಹತ್ವದ ರಾಜಕೀಯ ಬೆಳವಣಿಗೆಯ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ: ಸಂಪುಟದ ಎಲ್ಲಾ 32 ಸ್ಥಾನಗಳಿಗೂ ಸರ್ಜರಿ? ಹಾಲಿ ಸಚಿವ ಸಂಪುಟದಲ್ಲಿರುವ ಎಲ್ಲಾ 32 ಸಚಿವ ಸ್ಥಾನಗಳೂ ಈ ಬದಲಾವಣೆಯ ಪ್ರಕ್ರಿಯೆಗೆ ಒಳಪಡಲಿವೆ. ಹಾಲಿ ಸಚಿವರ ಪೈಕಿ ಹಲವರನ್ನು ಕೈಬಿಟ್ಟು, ಅವರ ಜಾಗದಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಲು ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಆಡಳಿತಕ್ಕೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಹಾಗೂ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಬಾರಿ “ಸಂಪೂರ್ಣ ಸರ್ಜರಿ”ಗೆ ಕಾಂಗ್ರೆಸ್ ನಾಯಕತ್ವ ಮುಂದಾಗಿದೆ. ಕೆಪಿಸಿಸಿ ಮತ್ತು ಕಾರ್ಯಾಧ್ಯಕ್ಷರ ಹುದ್ದೆಗಳಿಗೂ…
ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಧಾರವಾಡಕ್ಕೆ ಪ್ರತ್ಯೇಕ ಪಾಲಿಕೆ ರಚಿಸುವ ಪ್ರಸ್ತಾವನೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಷರತ್ತುಬದ್ಧ ಅನುಮೋದನೆ ನೀಡಿ ಕಡತ ಹಿಂತಿರುಗಿಸಿದ್ದಾರೆ. ಹಾಲಿ ಸದಸ್ಯರ ಅವಧಿ ಮುಕ್ತಾಯವಾದ ನಂತರ ಹಾಗೂ ಜನಗಣತಿ ಪ್ರಕ್ರಿಯೆ ಮುಗಿದ ನಂತರವಷ್ಟೇ ವಿಭಜನೆ ಜಾರಿಯಾಗಬೇಕು ಎಂದು ರಾಜ್ಯಪಾಲರು ತಿಳಿಸಿದ್ದಾರೆ. ಬೆಂಗಳೂರು ಬಿಟ್ಟರೆ ರಾಜ್ಯದಲ್ಲೇ ಅತ್ಯಂತ ದೊಡ್ಡದಾದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಧಾರವಾಡವನ್ನು ಪ್ರತ್ಯೇಕಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಹುಬ್ಬಳ್ಳಿಗೇ ಹೆಚ್ಚಿನ ಅನುದಾನ ಸಿಗುತ್ತಿದೆ ಎಂಬ ಅಸಮಾಧಾನದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕಳೆದ ವರ್ಷ ಧಾರವಾಡ ಪ್ರತ್ಯೇಕ ಪಾಲಿಕೆ ಘೋಷಿಸಿದ್ದರು. ಆದರೆ ಈಗ ಈ ಪ್ರಕ್ರಿಯೆಗೆ ಕಾನೂನು ಮತ್ತು ತಾಂತ್ರಿಕ ಒಳಸುಳಿಗಳು ಎದುರಾಗಿವೆ. ಪ್ರಸ್ತುತ ಇರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರ 5 ವರ್ಷಗಳ ಅಧಿಕಾರ ಅವಧಿ ಪೂರ್ಣಗೊಂಡ ನಂತರವೇ ವಿಭಜನೆ ಜಾರಿಗೆ ಬರಬೇಕು.2026ರ ಜನವರಿ 1ರಿಂದ 2027ರ ಮಾರ್ಚ್ 31ರವರೆಗೆ ಯಾವುದೇ ಆಡಳಿತಾತ್ಮಕ ಘಟಕಗಳ ಗಡಿ ಬದಲಾಯಿಸಬಾರದು ಎಂದು ಜನಗಣತಿ…
ಗಾಂಧಿನಗರ: ಗುಜರಾತ್ನಲ್ಲಿ ಮಾನವೀಯತೆಯನ್ನೇ ಮರೆತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತಿಯೊಬ್ಬ ತನ್ನ ಸ್ವಂತ ಪತ್ನಿಯನ್ನೇ ಕೇವಲ 50 ಸಾವಿರ ರೂಪಾಯಿಗೆ ಸ್ನೇಹಿತರಿಗೆ ಮಾರಾಟ ಮಾಡಿದ್ದಾನೆ. ಹಣದ ಆಸೆಗಾಗಿ ಹೆಂಡತಿಯನ್ನು ಮಾರಿದ ಪತಿಯ ಕ್ರೌರ್ಯಕ್ಕೆ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಷ್ಟಕ್ಕೆ ನಿಲ್ಲದ ಆತನ ಸ್ನೇಹಿತರು, ಆ ಮಹಿಳೆಯನ್ನು ಕೂಡಿಹಾಕಿ ಸತತ 10 ದಿನಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಭೀಕರ ಘಟನೆಯು ಮೇ ತಿಂಗಳ ಆರಂಭದಲ್ಲಿ ಗುಜರಾತ್ನ ಪಲನ್ಪುರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ‘ನಾಪತ್ತೆ’ ಪ್ರಕರಣದ ತನಿಖೆಯ ವೇಳೆ ಬಯಲಾಗಿದೆ. ಮೇ 11ರಂದು ಆರೋಪಿ ಪತಿಯೇ ಪೊಲೀಸ್ ಠಾಣೆಗೆ ಬಂದು, ತನ್ನ ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದನು. ಪೊಲೀಸರು ಆತನ ದೂರನ್ನು ಸ್ವೀಕರಿಸಿ ತನಿಖೆ ಆರಂಭಿಸಿದ್ದರು. ಆದರೆ, ದೂರು ನೀಡಿದ ಕೇವಲ ಎರಡು ದಿನಗಳಲ್ಲೇ ಪತಿ ಕೂಡ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದನು. ಇದು ಪೊಲೀಸರಲ್ಲಿ ತೀವ್ರ ಅನುಮಾನವನ್ನು ಹುಟ್ಟುಹಾಕಿತು. ಪೊಲೀಸರ ತನಿಖೆ: ಪತ್ನಿ…
ರಾಮನಗರ: ರಾಜ್ಯ ರಾಜಕಾರಣದಲ್ಲಿ ನಾಳೆ ಒಂದು ಅತ್ಯಂತ ಪ್ರಮುಖ ಹಾಗೂ ಬಹುದೊಡ್ಡ ತಿರುವು ಸಿಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜಕೀಯ ವಿದ್ಯಮಾನಗಳು ಈಗ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿವೆ. ನಾಳೆ ಬೆಳಿಗ್ಗೆ 10:30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಡುತ್ತಿದ್ದು, ಇಡೀ ರಾಜ್ಯದ ಗಮನ ಈಗ ರಾಜಧಾನಿಯತ್ತ ನೆಟ್ಟಿದೆ. ಡಿಕೆ ಶಿವಕುಮಾರ್ಗೆ ಸಿಎಂ ಪಟ್ಟ ಗ್ಯಾರಂಟಿ? ಸಿದ್ದರಾಮಯ್ಯ ಅವರ ರಾಜೀನಾಮೆ ಬೆನ್ನಲ್ಲೇ, ತೆರವಾಗಲಿರುವ ಮುಖ್ಯಮಂತ್ರಿ ಗಾದಿಗೆ ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರು ಏರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಹೈಕಮಾಂಡ್ ಮಟ್ಟದಲ್ಲಿ ಈಗಾಗಲೇ ಈ ಕುರಿತು ಮಹತ್ವದ ಚರ್ಚೆಗಳು ಮುಗಿದಿದ್ದು, ‘ಕನಕಪುರ ಬಂಡೆ’ಗೆ ಸಿಎಂ ಪಟ್ಟ ಸಿಗುವುದು ಬಹುತೇಕ ಗ್ಯಾರಂಟಿ ಎಂದು ಅವರ ಆಪ್ತ ವಲಯ ಹಾಗೂ ರಾಜಕೀಯ ವಿಶ್ಲೇಷಕರು ಬಲವಾಗಿ ನಂಬಿದ್ದಾರೆ. ಇದು ಅವರ ಬೆಂಬಲಿಗರಲ್ಲಿ ಹೊಸ ಸಂಚಲನ ಮೂಡಿಸಿದೆ. ರಾಮನಗರದಲ್ಲಿ ಮುಗಿಲು ಮುಟ್ಟಿದ…














