Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆಗೊಳಿಸಲಾಗಿದೆ. ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ನಿರ್ದೇಶಕರಾಗಿ ವರ್ಗಾವಣೆಗೊಳಿಸಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ.ಎಸ್ ಭರತ್ ಕುಮಾರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ ಪ್ರಧಾನ ಜಿಲ್ಲಾ ನ್ಯಾಯಾಧೀಶರಾಗಿ ಸಂತೋಷ ಗಜಾನನ ಭಟ್ ಅವರನ್ನು ವರ್ಗಾವಣೆ ಮಾಡಿದ್ದು, 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾಯಿಸಿ ಹೈಕೋರ್ಟ್ ರಿಜಿಸ್ಟರ್ ಜನರಲ್ ಕೆ ಎಸ್ ಭರತ್ ಕುಮಾರ್, ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ನಡೆಯುವ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯಂತೆ ವರ್ಗಾವಣೆ ನಡೆಸಲಾಗಿದೆ, ಜೂನ್ 1 ರಿಂದ ಹೊಸ ಕಾರ್ಯಭಾರ ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ ಸಮಾಧಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ಸಂಕೇತ್ ಕೊಲೆ ಪ್ರಕರಣದಲ್ಲಿ ತಮ್ಮ ಸ್ನೇಹಿತರು ಜೈಲು ಪಾಲಾಗಿದ್ದಾರೆ ಎಂಬ ಸಿಟ್ಟಿಗೆ ಅಪ್ರಾಪ್ತ ಈ ಕೃತ್ಯ ಎಸಗಿರುವುದು ಬಯಲಾಗಿದೆ. ಸಂಕೇತ್ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ಆರೋಪಿಗಳ ಅಪ್ರಾಪ್ತ ಸ್ನೇಹಿತನೇ ಈ ಕೃತ್ಯ ಎಸಗಿರೋದು ಬಯಲಾಗಿದ್ದು, ಮಾರ್ಚ್ 31ರಂದು ಸಂಕೇತ್ ಸಮಾಧಿಯನ್ನು ಧ್ವಂಸಗೊಳಿಸಲಾಗಿತ್ತು. ಈ ಹಿನ್ನೆಲೆ ಆರೋಪಿ ಪತ್ತೆಗೆ ತೀವ್ರ ತನಿಖೆ ನಡೆಸಿದ್ದ ತುಂಗಾನಗರ ಪೋಲಿಸರು, ಹಲವು ಆಯಾಮಗಳಲ್ಲಿ ಈ ಬಗ್ಗೆ ತನಿಖೆ ನಡೆಸಿದ್ದರು. ಅಂತಿಮವಾಗಿ ತ್ತಾಂತ್ರಿಕ ಆಧಾರದ ಹಿನ್ನೆಲೆಯಲ್ಲಿ ಸಮಾಧಿ ಕೆಡವಿದ್ದ ಅಪ್ರಾಪ್ತ ಆರೋಪಿಯನ್ನ ಬಂಧಿಸಿದ್ದಾರೆ. ಕಳೆದ ಫೆಬ್ರವರಿ 23ರಂದು ಶಿವಮೊಗ್ಗ ನಗರದಲ್ಲಿ ಸಂಕೇತ ಸ್ನೇಹಿತ ಗಿರೀಶನನ್ನು ಹಿಡಿದು ಐವರು ಬಾಲಕರು ಹಲ್ಲೆ ಮಾಡುತ್ತಿದ್ದರು. ಇದನ್ನು ಬಿಡಿಸಲು ಹೋದ ಸಂಕೇತ ಮೇಲೆ ಬಾಲಕರು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ನಂತರ ಮೃತ ಸಂಕೇತ್ನ ಅಂತ್ಯಕ್ರಿಯೆಯನ್ನು ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಿದ್ದ…
ನವದೆಹಲಿ : ದೆಹಲಿ ಕೋರ್ಟ್ ಪ್ರಕರಣ ಒಂದರಲ್ಲಿ ಐತಿಹಾಸಿಕ ತೀರ್ಪು ನೀಡಿದ್ದು, ಸೈನಿಕನ ಪತ್ನಿ ಆಸೆಯನ್ನು ಪೂರ್ಣಗೊಳಿಸಲು ಮುಂದಾಗಿದೆ. ದೀರ್ಘಕಾಲದವರೆಗೆ ಕೋಮಾದಲ್ಲಿರುವ ಭಾರತೀಯ ಸೇನಾ ಸೈನಿಕನ ಸ್ಪರ್ಮ್ ಹೊರತೆಗೆದು ಸಂರಕ್ಷಿಸಲು ದೆಹಲಿ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರ್ ನೇತೃತ್ವದ ಪೀಠವು ತನ್ನ ತೀರ್ಪಿನಲ್ಲಿ, ಸೈನಿಕನು ತನ್ನ ಪತ್ನಿಯೊಂದಿಗೆ ಐವಿಎಫ್ ಚಿಕಿತ್ಸೆಗೆ ಒಳಗಾಗಲು ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಕಳೆದ ಜುಲೈ 2025 ರಲ್ಲಿಸೈನಿಕ ಗಸ್ತಿನಲ್ಲಿದ್ದಾಗ ಮೇಲಿನಿಂದ ಕೆಳಗೆ ಬಿದ್ದಿದ್ದರು. ಅವರ ತಲೆಗೆ ತೀವ್ರವಾದ ಗಾಯವಾಗಿತ್ತು. ಮಿದುಳಿನಲ್ಲಾದ ಗಾಯದಿಂದ ಸೈನಿಕ ಕೋಮಾ ಸ್ಥಿತಿಯಲ್ಲಿದ್ದಾರೆ. ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. 2023 ರಲ್ಲಿ ಸೈನಿಕ ಹಾಗೂ ಅವರ ಪತ್ನಿ ಐವಿಎಫ್ ಗೆ ಒಪ್ಪಿಗೆ ನೀಡಿ ಚಿಕಿತ್ಸೆ ಶುರು ಮಾಡಿದ್ದರು. ಆದ್ರೆ ಸೈನಿಕನ ಆರೋಗ್ಯ ಹದಗೆಟ್ಟಿದ್ದರಿಂದ ಚಿಕಿತ್ಸೆ ನಿಲ್ಲಿಸಲಾಗಿದೆ. ಈಗ ಪತ್ನಿ ಕೋರ್ಟ್ ಮೆಟ್ಟಿಲೇರಿ ಒಪ್ಪಿಗೆ ಚಿಕಿತ್ಸೆ ಮುಂದುವರೆಸಲು ಒಪ್ಪಿಗೆ ಕೇಳಿದ್ದಾರೆ. ಸೈನಿಕನ ಪತ್ನಿ ಅರ್ಜಿ ಪರಿಶೀಲನೆ ನಡೆಸಿದ ದೆಹಲಿ ಹೈಕೋರ್ಟ್,…
ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಹಿಳಾ ಮೀಸಲಾತಿ ಮಸೂದೆಯು ಭಾರತದ ಭವಿಷ್ಯಕ್ಕೆ ಹೊಸ ದಿಕ್ಕು ಮತ್ತು ಬಲವನ್ನು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಮಸೂದೆಯ ಕುರಿತು ಮಾತನಾಡಿದ ಅವರು, ಈ ಐತಿಹಾಸಿಕ ಹೆಜ್ಜೆಯು ದೇಶದ ಶಾಸನ ಪ್ರಕ್ರಿಯೆಯನ್ನು ಮತ್ತಷ್ಟು ಸೂಕ್ಷ್ಮ ಹಾಗೂ ಒಳಗೊಳ್ಳುವಂತೆ ಮಾಡುವ ಪ್ರಯತ್ನವಾಗಿದೆ ಎಂದು ಬಣ್ಣಿಸಿದರು. ರಾಷ್ಟ್ರ ನಿರ್ಮಾಣಕ್ಕೆ ಈ ಮಸೂದೆಗಳು ಸಹಕಾರಿ ಮೀಸಲಾತಿಗೆ ರಾಜಕೀಯ ಬಣ್ಣ ಕೊಡುವುದು ಬೇಡ ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಮುಕ್ತವಾಗಿ ಹೇಳುತ್ತಿದ್ದಾರೆ ವಿಕಸಿತ ಭಾರತದಲ್ಲಿ ಮಹಿಳಾ ಪಾತ್ರ ನಿರ್ಣಾಯಕವಾಗಿದೆ ಮಹಿಳಾ ಮೀಸಲಾತಿಗೆ ಎಲ್ಲರೂ ಒಪ್ಪಿಗೆ ನೀಡಬೇಕು ನಾವೆಲ್ಲರೂ ಒಗ್ಗಟ್ಟಾಗಿ ಮೀಸಲಾತಿಯನ್ನು ಬೆಂಬಲಿಸಬೇಕು ಎಂದು ಪ್ರಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದರು. ಮೀಸಲಾತಿ ವಿರೋಧಿಸುವವರು ರಾಜಕೀಯವಾಗಿ ಬೆಳೆಯಲ್ಲ ರಾಷ್ಟ್ರ ನಿರ್ಮಾಣಕ್ಕೆ ಈ ಮಸೂದಿಗಳು ಸಹಕಾರಿ ನಾವು ಯಾರು ಜವಾಬ್ದಾರರು ಎನ್ನುವುದನ್ನು ಲೆಕ್ಕಿಸದೆ ಈಗಾಗಲೇ ಮಹಿಳಾ ಮೀಸಲಾತಿ ವಿಳಂಬ ಮಾಡಿದ್ದೇವೆ. ಮೊದಲು ಶೇಕಡ…
ತುಮಕೂರು : ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಸಹ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ರೀತಿ ಪ್ರಾಣ ಹಾನಿ ಸಂಭವಿಸಿಲ್ಲ.
ಬೆಂಗಳೂರು : ಧಾರವಾಡದಲ್ಲಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳಿಗೆ ನಾಳೆ ಶಿಕ್ಷಪ್ರಮಾಣ ಪ್ರಕಟಿಸಲಾಗುತ್ತದೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಡ್ಜ್ ಸಂತೋಷ ಗಜಾನನ ಭಟ್ ತಿಳಿಸಿದರು. ವಿಚಾರಣೆ ಆರಂಭವಾದ ವೇಳೆ ಶಿಕ್ಷ ಪ್ರಮಾಣದ ಬಗ್ಗೆ ಸಿಬಿಐ ಪರವಾಗಿ ಎಎಸ್ಜಿ ವಾದ ಮಂಡಿಸಿದರು. ಹೆಚ್ಚುವರಿ ಜನರಲ್ ಸಾಲಿಟರ್ ಎಸ್ ವಿ ರಾಜು ಅವರು ವಾದ ಮಂಡಿಸಿದರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿ ಎಸ್ ವಿ ರಾಜು ವಾದ ಮಂಡಿಸಿದರು. ಈ ವೇಳೆ ಕೋರ್ಟ್ ಹಾಲ್ಗೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳು ಹಾಜರಾದರು ಸಿಬಿಐ ಪರ ಎ ಎಸ್…
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳು ಎಂದು ತೀರ್ಪು ಪ್ರಕಟಿಸಿದೆ. ಇಂದು ಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಆರೋಪಿಗಳಿಗೆ ಕಠಿಣವಾದ ಗಲ್ಲು ಶಿಕ್ಷೆ ವಿಧಿಸಿ ಎಂದು ಮನವಿ ಮಾಡಿದರು. ಇದೇ ವೇಳೆ A15 ಆರೋಪಿ ಶಾಸಕ ವಿನಯ್ ಕುಲಕರ್ಣಿ ನಾನು 27 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ನಾನು ಯಾರಿಗೂ ನೋವು ಮಾಡಿಲ್ಲ. ರಾಜಕೀಯ ಕಾರಣಕ್ಕೆ ನನ್ನ ಮೇಲೆ ಕೇಸ್ ಹಾಕಿದ್ದಾರೆ. ನನಗೆ ಮದುವೆ ವಯಸ್ಸಿನ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಒಬ್ಬ ಮಗನಿದ್ದಾನೆ ಪಾರ್ಲಿಮೆಂಟ್ ಎಲೆಕ್ಷನ್ ನಿಂತೆ. ನಾನು ಒಬ್ಬ ಕೃಷಿಕನಾಗಿದ್ದು ಮೂರುವರೆ ಸಾವಿರ ಹಸುಗಳಿವೆ. ಕ್ಷೇತ್ರದಲ್ಲಿ ಯಾರಿಗೂ ತೊಂದರೆ ಮಾಡಿಲ್ಲ. ರಾಜಕೀಯ ಕಾರಣಕ್ಕೆ ಕೆಸ್ ಹಾಕಿದ್ದಾರೆ ಎಂದು ವಿನಯ್ ಕುಲಕರ್ಣಿ ಇದೆ ವೇಳೆ ತಿಳಿಸಿದರು. ಇನ್ನು A4…
ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ 17 ಆರೋಪಿಗಳು ಎಂದು ತೀರ್ಪು ಪ್ರಕಟಿಸಿದೆ. ಇಂದು ಕೋರ್ಟ್ ಆರೋಪಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಲಿದ್ದು, ವಿಚಾರಣೆಯ ವೇಳೆ ಸಿಬಿಐ ಪರ ವಕೀಲರು ಆರೋಪಿಗಳಿಗೆ ಕಠಿಣವಾದ ಗಲ್ಲು ಶಿಕ್ಷೆ ವಿಧಿಸಿ ಎಂದು ಮನವಿ ಮಾಡಿದರು. ವಿಚಾರಣೆ ಆರಂಭವಾದ ವೇಳೆ ಶಿಕ್ಷ ಪ್ರಮಾಣದ ಬಗ್ಗೆ ಸಿಬಿಐ ಪರವಾಗಿ ಎಎಸ್ಜಿ ವಾದ ಮಂಡಿಸಿದರು. ಹೆಚ್ಚುವರಿ ಜನರಲ್ ಸಾಲಿಟರ್ ಎಸ್ ವಿ ರಾಜು ಅವರು ವಾದ ಮಂಡಿಸಿದರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿ ಎಸ್ ವಿ ರಾಜು ವಾದ ಮಂಡಿಸಿದರು. ಈ ವೇಳೆ ಕೋರ್ಟ್ ಹಾಲ್ಗೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಅಪರಾಧಿಗಳು ಹಾಜರಾದರು ಸಿಬಿಐ ಪರ ಎ ಎಸ್ ಜಿ ಎಸ್ ವಿ ರಾಜೀವ್ ವಾದ ಮಂಡನೆ ಆರಂಭಿಸಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಪರಾಧಿಗಳಿಗೆ ತೀವ್ರವಾದ…
ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿದ್ದು, ಒಟ್ಟು 11.86 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಇಬ್ಬರು ವಿದೇಶಿ ಮಹಿಳೆಯರು ಸೇರಿ ಹೊರರಾಜ್ಯದ ಐವರು ಸೇರಿದಂತೆ ಒಟ್ಟು 10 ಜನರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳಿಂದ 5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್ 21 ಕೆಜಿ ಗಾಂಜಾ, 19 ಗ್ರಾಂ ಎಕ್ಸ್ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಯಲಹಂಕ, ಡಿಜೆ ಹಳ್ಳಿ, ಬಾಣಸವಾಡಿ, ಕೋರಮಂಗಲ ಠಾಣೆ, ಬೊಮ್ಮನಹಳ್ಳಿ, ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಬೆಂಗಳೂರು, ಏ.16: ಪ್ರಕೃತಿ, ಪರಿಸರ ಸಂರಕ್ಷಣೆ ಹಾಗೂ ಹಸಿರು ಹೊದಿಕೆ ಹೆಚ್ಚಳದಲ್ಲಿ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಪಾತ್ರ ಹಿರಿದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಒಕ್ಕೂಟದ (ಎಫ್.ಕೆ.ಸಿಸಿಐ) ಆಯೋಜಿಸಿದ್ದ ಜಾಗತಿಕ ಸುಸ್ಥಿರ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಶೃಂಗಸಭೆ 2026ರ ಪೂರ್ವಭಾವಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ನಾವಿಂದು, ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯ ಪರಿಣಾಮಗಳ ಕಾಲಘಟ್ಟದಲ್ಲಿ ನಿಂತಿದ್ದು, ಈ ಸಂದರ್ಭದಲ್ಲಿ ಸುಸ್ಥಿರ ಅಭಿವೃದ್ಧಿ, ಹವಾಮಾನ ಚೇತರಿಕೆ ಮತ್ತು ಸಮಗ್ರ ಪ್ರಗತಿಯ ಕಾರ್ಯತಂತ್ರಕ್ಕೆ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಚಾಲಕಶಕ್ತಿಯಾಗಿದೆ ಎಂದರು. ಕರ್ನಾಟಕವು ಈ ಪಯಣದಲ್ಲಿ ವಿಶಿಷ್ಟ ಸ್ಥಾನದಲ್ಲಿದೆ. ಜಾಗತಿಕ ಜೀವವೈವಿಧ್ಯತೆಯ ಅದ್ಭುತ ತಾಣವಾದ ಪಶ್ಚಿಮ ಘಟ್ಟಗಳನ್ನು ಹೊಂದಿದ್ದು, ಹಲವು ಬಗೆಯ ವಿಶಿಷ್ಟ ಸಸ್ಯ ಸಂಕುಲ, ಪ್ರಾಣಿ ಸಂಕುಲ, ಪಕ್ಷಿ ಸಂಕುಲ ಹಾಗೂ ಕೀಟ ಸಂಕುಲಗಳ ತಾಣವಾದ ಈ ಸಮೃದ್ಧ ಕಾನನವನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ…














