Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬಿಜೆಪಿ ಶಾಸಕ ಭೈರತಿ ಬಸವರಾಜ್ ಗೆ ಬಂಧನದ ಭೀತಿ ಎದುರಾಗಿತ್ತು. ಈ ವೇಳೆ ಅವರು ನಿರೀಕ್ಷಣಾ ಜಾಮೀನು ಕೋರಿ ಕೋಕಾ ಅರ್ಜಿ ಸಲ್ಲಿಸಿದ್ದರು.ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಏಪ್ರಿಲ್ 15ರಂದು ತೀರ್ಪು ಪ್ರಕಟಿಸಲಾಗುತ್ತೆ ಎಂದು ಆದೇಶ ಹೊರಡಿಸಿದೆ. ಹೌದು ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿರುದ್ಧದ ಕೋಕಾ ಕೇಸ್ ಅರ್ಜಿ ವಿಚಾರಣೆ ನಡೆಯಿತು. ಎಪ್ರಿಲ್ 15 ರಂದು ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆ ಕೆಆರ್ ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜಗೆ ಬಿಗ್ ರಿಲೀಫ್ ಸಿಕ್ಕಿದ್ದು ವಾದ ಪ್ರತಿವಾದ ಅಲಿಸಿ ಸುಪ್ರೀಂ ಕೋರ್ಟ್ ಇದೀಗ ತೀರ್ಪು ಮುಂದೂಡಿದೆ. ಏಪ್ರಿಲ್ 15ರವರೆಗೂ ನಿರೀಕ್ಷಣಾ ಜಾಮೀನು ಆದೇಶ ಮುಂದುವರಿಯಲಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 5.15 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಸಿಸಿಬಿ ಆಂಟಿ ನಾರ್ಕೊಟಿಕ್ ಈ ಒಂದು ಕಾರ್ಯಾಚರಣೆ ನಡೆಸಿದ್ದು, ಮಾರತ್ತಹಳ್ಳಿ ಬಾಡಿಗೆ ಮನೆಯಲ್ಲಿ ವಿದೇಶಿ ಪ್ರಜೆಯನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ 5.15 ಕೋಟಿ ಮೌಲ್ಯದ ಎರಡುವರೆ ಕೆಜಿ MDMA ಹಾಗು 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಕ್ಕೆ ಪಡೆಯಲಾಗಿದೆ. ಹಿಂದೆ ಈ ಆರೋಪಿ ಕಾಡುಗೋಡಿ, ಹೆಣ್ಣೂರು ವ್ಯಾಪ್ತಿಯಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ. ಈ ಪ್ರಕರಣದಲ್ಲಿ ಬಂಧನವಾಗಿ ಬಿಡುಗಡೆಯಾಗಿದ್ದ. ಹೊರಬಂದ ಬಳಿಕ ಮತ್ತೆ ಅದೇ ಹಳೆಯ ಜಾಳಿ ಮುಂದುವರೆಸಿದ ವಶಕ್ಕೆ ಪಡೆದಿದ್ದಾರೆ.
ಗದಗ : ಗದಗದ ಲಕ್ಕುಂಡಿಯಲ್ಲಿ ನಿಧಿ ಸಿಕ್ಕ ಬೆನ್ನಲ್ಲೆ, ರಾಜ್ಯ ಸರ್ಕಾರ ಉತ್ಖನನಕ್ಕೆ ಮುಂದಾಗಿದ್ದು, ಕಳೆದ ನಾಲ್ಕು ದಿನಗಳಿಂದ ಉತ್ಖನನ ಕಾರ್ಯ ನಡೆದಿದೆ. ಈ ವೇಳೆ ಹಲವು ಪುರಾತನ ವಸ್ತುಗಳು ಪತ್ತೆಯಾಗಿವೆ. ಇದೀಗ ಲಕ್ಕುಂಡಿ ಗ್ರಾಮದಲ್ಲಿ ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ಈಶ್ವರ ದೇವಸ್ಥಾನ ಪತ್ತೆಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಶಿವಯ್ಯ ಹಾಗೂ ಶೇಖರಯ್ಯ ಚೌಕಿಮಠ ಎಂಬವರ ಕುಟುಂಬ ದೇವಸ್ಥಾನದೊಳಗೆ ಮನೆ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದೆ. ಈ ಮನೆಯಲ್ಲಿ ಸುಮಾರು 5-6 ಮಂದಿ ವಾಸ ಮಾಡುತ್ತಿದ್ದಾರೆ. ದೇವಸ್ಥಾನದ ಹೊರಭಾಗದಲ್ಲಿ ಮನೆಯಿದೆ. ಅದರೊಳಗೆ ಈ ಐತಿಹಾಸಿಕ ದೇವಾಲಯವಿದೆ. ಈ ದೇವಾಲಯದೊಳಗೆ ನಾಲ್ಕನೇ ಶತಮಾತನದ ಶಿವನ ಮೂರ್ತಿಯಿದೆ. ಈ ಮೂರ್ತಿಯನ್ನೇ ಕುಟುಂಬದವರು ಆರಾಧಿಸುತ್ತಾ ಬಂದಿದ್ದಾರೆ. ಸುಮಾರು 5 ತಲೆಮಾರಿನಿಂದ ಈ ಕುಟುಂಬ ಇಲ್ಲಿ ವಾಸಿಸುತ್ತಿದೆ.
ಬೆಂಗಳೂರು : ನನ್ನ ಅಣ್ಣನ ಹಣೆಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತಾರೆ. ಪಕ್ಷ ತಾಳ್ಮೆಯಿಂದ ಇರಿ ಎಂದು ಹೇಳಿದೆ. ಸೂಕ್ತ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಅಂದಿದ್ದಾರೆ. ಮೈಸೂರಿಗೆ ಕಾಂಗ್ರೆಸ್ ನಾಯಕ ರಾಹುಲ್ ಬಂದಿದ್ದಾಗ ಹೇಳಿದ್ದಾರೆ. ಪಕ್ಷದ ಆದೇಶಕ್ಕಾಗಿ ಡಿಕೆ ಶಿವಕುಮಾರ್ ಕಾಯುತ್ತಿದ್ದಾರೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷ ಹಾಗೂ ಶಾಸಕರು ಹಿತದೃಷ್ಟಿಯಿಂದ ಕಾಯುತ್ತಿದ್ದೇವೆ. ಅಧಿಕಾರ ಯಾರಿಗೂ ಅಷ್ಟು ಸುಲಭವಾಗಿ ಬರುವುದಿಲ್ಲ. ಕುರ್ಚಿಯನ್ನು ಯಾರು ಅಷ್ಟೊಂದು ಸುಲಭವಾಗಿ ಬಿಡಲ್ಲ. ಗ್ರಾಮ ಪಂಚಾಯತಿ ಅಧ್ಯಕ್ಷರೇ ಕುರ್ಚಿಯನ್ನು ಸುಲಭವಾಗಿ ಬಿಡಲ್ಲ. ಎಂದಮೇಲೆ ಸಿಎಂ ಕುರ್ಚಿ ಅಷ್ಟು ಸುಲಭವಾಗಿ ಬಿಡಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ ನೀಡಿದರು.
ಬೆಳಗಾವಿ : ಅಕ್ಕನ ಮೇಲೆ ಕಣ್ಣು ಹಾಕಿದ ದೇವಸ್ಥಾನದ ಪೂಜಾರಿಯನ್ನು ಅಪ್ರಾಪ್ತ ಬಾಲಕ ಒಬ್ಬ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನೆಡೆದಿದೆ. ರಾಜಾಪುರ ಗ್ರಾಮದ ಮಂಜುನಾಥ್ ಸುಭಾಷ್ ಎಣ್ಣಿ (23) ಭೀಕರವಾಗಿ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. 17 ವರ್ಷದ ಅಪ್ರಾಪ್ತ ಬಾಲಕನಿಂದ ಮಂಜುನಾಥ್ ಎಣ್ಣಿ ಕೊಲೆಯಾಗಿದೆ. ಹಲವು ವರ್ಷಗಳಿಂದ ಮಂಜುನಾಥ್ ಅಪ್ರಾಪ್ತೆಯ ಬೆನ್ನು ಬಿದ್ದಿದ್ದ. ಅಕ್ಕನ ತಂಟೆಗೆ ಬರದಂತೆ ಬಾಲಕ ಕೆಲವು ಬಾರಿ ಎಚ್ಚರಿಕೆ ಸಹ ನೀಡಿದ್ದ ಎನ್ನಲಾಗಿದೆ. ಆದರೂ ಪೂಜಾರಿ ಮಂಜುನಾಥ ಅಪ್ರಾಪ್ತಿ ತಂಟೆಗೆ ಹೋಗುತ್ತಿದ್ದ. ಅಕ್ಕನ ಮೇಲೆ ಕಣ್ಣು ಹಾಕಿದವನನ್ನು ಇದೀಗ ಬಾಲಕ ಭೀಕರವಾಗಿ ಕೊಲೆ ಮಾಡಿದ್ದಾನೆ. ಚೂನಮ್ಮದೇವಿ ದೇವಸ್ಥಾನದ ಪೂಜಾರಿಯಾಗಿದ್ದ ಮಂಜುನಾಥ್, ದೇವಸ್ಥಾನದಲ್ಲಿ ಯಾರು ಇಲ್ಲದನ್ನು ನೋಡಿ ಮಂಜುನಾಥನನ್ನು ಬಾಲಕ ಕೊಲೆ ಮಾಡಿದ್ದಾನೆ. ಪ್ರಕರಣ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ : ಮಹಿಳೆಯರಿಗೆ ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸದೇ ಬರುವಂತೆ ಸೂಚನೆ
ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಇನ್ಮುಂದೆ ಭೇಟಿ ಕೊಡುವಾಗ ಸಾಂಪ್ರದಾಯಿಕ ಕೊಡುಗೆಯಲ್ಲಿ ಬರಬೇಕು ಎಂದು ಉಡುಪಿ ಶ್ರೀ ಕೃಷ್ಣ ಮಠ ಇದೀಗ ವಸ್ತ್ರ ಸಂಹಿತೆ ಜಾರಿ ಮಾಡಿದೆ. ಹೌದು ಇನ್ಮುಂದೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರೋರು ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕು ಎಂದು ಕಟ್ಟುನಿಟ್ಟಿನ ವಸ್ತ್ರಸಂಹಿತೆ ಜಾರಿ ಮಾಡಲಾಗಿದೆ. ಶೀರೂರು ಮಠದ ನೂತನ ಪರ್ಯಾಯ ಸ್ವಾಮಿಗಳು ಈ ಸೂಚನೆ ಹೊರಡಿಸಿದ್ದಾರೆ. ಪುರುಷರು ಅಂಗಿ, ಬನಿಯನ್, ಬರ್ಮುಡಾ ಹಾಗೂ ಟೈಟ್ ವಸ್ತ್ರಗಳನ್ನು ಧರಿಸಿ ಪ್ರವೇಶಿಸುವಂತಿಲ್ಲ. ಇನ್ನೂ ಮಹಿಳೆಯರು ಶಾರ್ಟ್ಸ್, ಟೈಟ್ ಪ್ಯಾಂಟ್ ಧರಿಸಿಕೊಂಡು ಬರುವಂತಿಲ್ಲ. ಶ್ರೀಕೃಷ್ಣನ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರಬೇಕು. ಮಾಡರ್ನ್ ಡ್ರೆಸ್ ಹಾಕೊಂಡು ಬಂದ್ರೆ ದರ್ಶನಕ್ಕೆ ಅವಕಾಶವಿಲ್ಲ ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈಗಾಗಲೇ ಕೊಲ್ಲೂರು, ಧರ್ಮಸ್ಥಳ ಹಾಗೂ ಕಟೀಲು ಬಳಿಕ ಅದೇ ರೀತಿಯಲ್ಲಿ ಇದೀಗ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಸ್ತ್ರಸಂಹಿತೆ ಜಾರಿತರಲಾಗಿದೆ.
ಬೆಂಗಳೂರು : 112 ದಿನಗಳ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 12 ರಿಯಾಲಿಟಿ ಶೋಗೆ ತೆರೆ ಬಿದ್ದಿದೆ. ಈ ಒಂದು ಸೀಸನ್ 12ರ ವಿಜೇತರಾಗಿ ನಟರಾಜ್ ಅಲಿಯಾಸ್ ಗಿಲ್ಲಿ ಹೊರಹೊಮ್ಮಿದ್ದಾರೆ. ಇನ್ನು ರಕ್ಷಿತಾ ಶೆಟ್ಟಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಇದೀಗ ಮೂರನೇ ರನ್ನರ್ ತಪ್ಪಾಗಿ ಸ್ಥಾನ ಪಡೆದ ಕಾವ್ಯ ಶೈವ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಗಿಲ್ಲಿ ನಟ ಅವರಿಗೆ ಶುಭಾಶಯ ಕೋರಿ ಪೋಸ್ಟ್ ಹಂಚಿಕೊಂಡಿದ್ದಾರೆ. ಬಡವರ ಮಕ್ಕಳು ಬೆಳೀಬೇಕು ಕಣ್ರಯ್ಯ ಹೇ ಗಿಲ್ಲಿ ಕಂಗ್ರಾಜುಲೇಷನ್ಸ್ ಕಣೋ. You deserve it from ZERO to HERO now More to go ಆದಷ್ಟು ಬೇಗ Action Cut ಹೇಳೋ ಹಾಗಾಗ್ಲಿ ತುಂಬಾ ತುಂಬಾ ಒಳ್ಳೆಯದಾಗಲಿ ಎಂದು ಕಾವ್ಯಶೈವ ಅವರು ಗಿಲ್ಲಿ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
ವಿಜಯಪುರ : ಯುವಕರ ಗ್ಯಾಂಗ್ ಒಂದು ಓರ್ವನಿಗೆ ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ರಂಭಾಪುರ ಬಡಾವಣೆ ಬಳಿ ಈ ಒಂದು ಘಟನೆ ನಡೆದಿದ್ದು ಪೈಗಂಬರ್ ಎಂಬ ಯುವಕನ ಮೇಲೆ ಐದಾರು ಜನ ಯುವಕರ ಗ್ಯಾಂಗ್ ಹಲ್ಲೆ ಮಾಡಿದೆ. ಪೈಗಂಬರ್ ಮುಲ್ಲಾ ಕಲ್ಬುರ್ಗಿಯ ಶಹಬಾದ್ ನಲ್ಲಿ ನೆಲೆಸಿದ್ದ. ಹತ್ಯೆಯಾದ ರೌಡಿಶೀಟರ್ ಹೈದರ್ ನದಾಫ್ ನಿಕಟ ವರ್ತಿ ಎಂದು ತಿಳಿದು ಬಂದಿದೆ. ನದಾಫ್ ಹತ್ಯೆಯ ಬಳಿಕ ಪೈಗಂಬರ್ ಶಹಾಬಾದ್ ಗೆ ಬಂದು ನೆಲೆಸಿರುತ್ತಾನೆ. ವಿಜಯಪುರದ ಯುವಕರ ಗ್ಯಾಂಗ್ ಪೈಗಂಬರ ಮೇಲೆ ಹಲ್ಲೆ ಮಾಡಿದೆ. ಹಳೆ ವೈಷಮ್ಯ ಕಾರಣಕ್ಕಾಗಿ ಪೈಗಂಬರ್ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯ ವಿಡಿಯೋ ಆದರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿ : ಅಕ್ಕನ ಮೇಲೆ ಕಣ್ಣು ಹಾಕಿದ ದೇವಸ್ಥಾನದ ಪೂಜಾರಿಯನ್ನು ಅಪ್ರಾಪ್ತ ಬಾಲಕ ಒಬ್ಬ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಈ ಒಂದು ಭೀಕರ ಕೊಲೆ ನೆಡೆದಿದೆ. ರಾಜಾಪುರ ಗ್ರಾಮದ ಮಂಜುನಾಥ್ ಸುಭಾಷ್ ಎಣ್ಣಿ (23) ಭೀಕರವಾಗಿ ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. 17 ವರ್ಷದ ಅಪ್ರಾಪ್ತ ಬಾಲಕನಿಂದ ಮಂಜುನಾಥ್ ಎಣ್ಣಿ ಕೊಲೆಯಾಗಿದೆ. ಹಲವು ವರ್ಷಗಳಿಂದ ಮಂಜುನಾಥ್ ಅಪ್ರಾಪ್ತೆಯ ಬೆನ್ನು ಬಿದ್ದಿದ್ದ. ಅಕ್ಕನ ತಂಟೆಗೆ ಬರದಂತೆ ಬಾಲಕ ಕೆಲವು ಬಾರಿ ಎಚ್ಚರಿಕೆ ಸಹ ನೀಡಿದ್ದ ಎನ್ನಲಾಗಿದೆ. ಆದರೂ ಪೂಜಾರಿ ಮಂಜುನಾಥ ಅಪ್ರಾಪ್ತಿ ತಂಟೆಗೆ ಹೋಗುತ್ತಿದ್ದ. ಅಕ್ಕನ ಮೇಲೆ ಕಣ್ಣು ಹಾಕಿದವನನ್ನು ಇದೀಗ ಬಾಲಕ ಭೀಕರವಾಗಿ ಕೊಲೆ ಮಾಡಿದ್ದಾನೆ. ಚೂನಮ್ಮದೇವಿ ದೇವಸ್ಥಾನದ ಪೂಜಾರಿಯಾಗಿದ್ದ ಮಂಜುನಾಥ್, ದೇವಸ್ಥಾನದಲ್ಲಿ ಯಾರು ಇಲ್ಲದನ್ನು ನೋಡಿ ಮಂಜುನಾಥನನ್ನು ಬಾಲಕ ಕೊಲೆ ಮಾಡಿದ್ದಾನೆ. ಪ್ರಕರಣ ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು : ಮಹಿಳಾ ಅಧಿಕಾರಿಗಳಿಗೆ ಪುಂಡರು ಬೆದರಿಕೆ ಹಾಕಿರುವ ಘಟನೆಗಳು ಇತ್ತೀಚಿಗೆ ನಡೆದಿವೆ. ಆದರೆ ಇದೀಗ ಅಕ್ರಮ ಮರಳು ದಂಧೆಕೋರರು ಅಕ್ರಮ ಮರಳುಗಾರಿಕೆ ತಡೆಯದಂತೆ ನನ್ನ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ ಅಂತ ರಾಯಚೂರಿನ ದೇವದುರ್ಗ ಶಾಸಕಿ ಕರೆಮ್ಮ ಜಿ. ನಾಯಕ್ ಆಕ್ರೋಶ ಹೊರಹಾಕಿದ್ದಾರೆ. ಹೌದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನ ಭೇಟಿಯಾದ ಶಾಸಕಿ ಕರೆಮ್ಮ ಜಿ ನಾಯಕ್ ಅಕ್ರಮ ಮರಳು ದಂಧೆಕೋರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ರಾಯಚೂರು ಎಸ್.ಪಿ ಗೆ ದೂರು ನೀಡಿ ಬಳಿಕ ಮಾತನಾಡಿದ ಕರೆಮ್ಮ ನಾಯಕ್ ದೇವದುರ್ಗ ತಾಲೂಕಿನಲ್ಲಿ ಯಾವುದೇ ಟೆಂಡರ್ ಇಲ್ಲದೇ ಲಾರಿಗಳಲ್ಲಿ ಅಕ್ರಮ ಮರಳು ಸಾಗಣೆ ನಡೆದಿದೆ. ನಾನು ಟ್ರ್ಯಾಕ್ಟರ್ನಲ್ಲಿ ಸಾಗಿಸುವವರ ಪರ ಇದ್ದೇನೆ, ಲಾರಿಯವರು ಟ್ರ್ಯಾಕ್ಟರ್ನವರನ್ನ ಎತ್ತಿಕಟ್ಟುತ್ತಿದ್ದಾರೆ ಎಂದರು. ಲಾರಿ ಇಟ್ಟು ಮರಳುಗಾರಿಕೆ ಮಾಡುವ ಶ್ರೀನಿವಾಸ ನಾಯಕ್ ಇತರರು ಬೆದರಿಸಲು ಬಂದಿದ್ದರು. ಪೊಲೀಸ್ ಕ್ವಾಟ್ರಸ್ನಲ್ಲಿರೋ ನನ್ನ ಮನೆಗೆ ಬಂದು ಬೆದರಿಸುತ್ತಾರೆ. ಕಾನೂನು ಸುವ್ಯವಸ್ಥೆ ಎಲ್ಲಿದೆ? ಸರ್ಕಾರ ಕ್ರಮ ಯಾಕೆ…














