Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಲ್ಲಿ ಬೆಟ್ಟಿಂಗ್ ಚಟಕ್ಕೆ ಪತ್ನಿಯನ್ನೇ ಭೀಕರವಾಗಿ ಪ್ರತಿಯೊಬ್ಬ ಕೊಲೆ ಮಾಡಿರುವ ಘಟನೆ ವರದಿಯಾಗಿದೆ ಸೆಲ್ಫಿ ವಿಡಿಯೋ ಮಾಡಿ ಹೋಂ ಗಾರ್ಡ್ ಪತ್ನಿಯ ಬರ ಕೊಲೆ ನಡೆದಿದೆ. ಮಾದೇವಪುರ ಪುಷ್ಪಾಂಜಲಿ ಥಿಯೇಟರ್ ಬಳಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಹೋಂ ಗಾರ್ಡ್ ಆಗಿದ್ದ ಮಂಜುಳಾ (32) ಕೊಲೆಗೈದ ಪತಿ ಪ್ರದೀಪ್ ಚಾಕುವಿನಿಂದ ಇರಿದು ಪತ್ನಿ ಮಂಜುಳಾಳನ್ನು ಪ್ರದೀಪ್ ಕೊಲೆ ಮಾಡಿದ್ದಾನೆ. ಕೃತ್ಯಕ್ಕೂ ಮೊದಲು ಕೊಲೆ ಮಾಡುವುದಾಗಿ ಪ್ರದೀಪ್ ಸೆಲ್ಫಿ ವಿಡಿಯೋ ಮಾಡಿದ್ದಾನೆ ಮಾದೇವಪುರದಲ್ಲಿ ನಿನ್ನೆ ರಾತ್ರಿ 9:00 ವೇಳೆ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ಮಂಜುಳಾ ಮಹದೇವಪುರ ಠಾಣೆಯಲ್ಲಿ ಹೋಂ ಗಾರ್ಡ್ ಆಗಿದ್ದರು. ಪ್ರದೀಪ್ ಚಟದಿಂದ ಹೆಂಡತಿ ಮತ್ತು ಮಕ್ಕಳು ಬೀದಿಗೆ ಬಂದರು ನಾನು ಸಾಯ್ತಿನಿ ನನ್ನ ಹೆಂಡತಿಯು ಸಾಯುತ್ತಾಳೆ ಎಂದು ವಿಡಿಯೋ ಮಾಡಿದ್ದಾನೆ. ಅತ್ತೆ ಹಾಗೂ ನಾದಿನಿಂದ ನನ್ನ ಪತ್ನಿ ಮಂಜುಳಾ ಹಾಳಾದಳು ಎಂದು ವಿಡಿಯೋ ಮಾಡಿಟ್ಟು ಪತ್ನಿ ಹತ್ಯೆ ಮಾಡಿ ಪ್ರದೀಪ್ ಎಸ್ಕೇಪ್ ಆಗಿದ್ದಾನೆ.…
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ನಡುಗಿಸಿತ್ತು. ಈ ಘಟನೆಯ ಬೆನ್ನಲ್ಲೇ ಇದೀಗ ಬಳ್ಳಾರಿಯಲ್ಲೂ ಅದೇ ಮಾದರಿಯ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಗೆ ಅಶ್ಲೀಲ ಸಂದೇಶ (ಮೆಸೇಜ್) ಕಳುಹಿಸಿ ಕಿರುಕುಳ ನೀಡುತ್ತಿದ್ದ ಯುವಕನೊಬ್ಬನನ್ನು ಮಹಿಳೆ, ಆಕೆಯ ಪತಿ ಹಾಗೂ ಸಹೋದರ ಸೇರಿ ಅತ್ಯಂತ ಕ್ರೂರವಾಗಿ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಶವವನ್ನು ಸುಟ್ಟು ಹಾಕಿರುವ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಹತ್ಯೆಯಾದ ದುರ್ದೈವಿಯನ್ನು ಬಸವನಗೌಡ ಎಂದು ಗುರುತಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೃತನ ಸಂಬಂಧಿಕಳಾದ ಶ್ವೇತಾ, ಆಕೆಯ ಪತಿ ದೊಡ್ಡ ಬಸವನಗೌಡ ಮತ್ತು ಶ್ವೇತಾಳ ಸಹೋದರ ವಿಜಯ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 7ರಂದು ರಾತ್ರಿ ಈ ಭೀಕರ ಕೊಲೆ ನಡೆದಿದ್ದು, ಸದ್ಯ ಆರೋಪಿಗಳು ಕಂಬಿ ಎಣಿಸುತ್ತಿದ್ದಾರೆ. ಪರಿಚಯವೇ ಮುಳುವಾಯಿತು: ಪೊಲೀಸ್ ತನಿಖೆಯ ಪ್ರಕಾರ, ಮೃತ ಬಸವನಗೌಡನಿಗೆ ಎರಡು ವರ್ಷಗಳ ಹಿಂದೆ ಮದುವೆಯೊಂದರಲ್ಲಿ ಶ್ವೇತಾಳ ಪರಿಚಯವಾಗಿತ್ತು. ಶ್ವೇತಾ ಸಂಬಂಧದಲ್ಲಿ ಬಸವನಗೌಡನಿಗೆ ಅತ್ತಿಗೆಯಾಗಬೇಕಿತ್ತು. ಆದರೂ…
ನವದೆಹಲಿ: ಜಾಗತಿಕ ರಾಜಕಾರಣದಲ್ಲಿ ದಶಕಗಳಿಂದಲೂ ತೀವ್ರ ಕುತೂಹಲ ಮತ್ತು ಆತಂಕಕ್ಕೆ ಕಾರಣವಾಗಿದ್ದ ಅಮೆರಿಕ ಹಾಗೂ ಇರಾನ್ ನಡುವಿನ ಉದ್ವಿಗ್ನತೆಗೆ ಕೊನೆಗೂ ತೆರೆ ಬಿದ್ದಿದೆ. ಉಭಯ ದೇಶಗಳ ನಡುವಿನ ಸುದೀರ್ಘ ಸಂಘರ್ಷ ಮತ್ತು ಯುದ್ಧದ ಪರಿಸ್ಥಿತಿ ಈಗ ಅಧಿಕೃತವಾಗಿ ಅಂತ್ಯಗೊಂಡಿದ್ದು, ಜಾಗತಿಕ ಮಟ್ಟದಲ್ಲಿ ಶಾಂತಿಯ ಹೊಸ ಯುಗ ಆರಂಭವಾಗಿದೆ. ಎರಡೂ ರಾಷ್ಟ್ರಗಳು ಪರಸ್ಪರ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲು ಸಮ್ಮತಿಸಿದ್ದು, ಈ ಮೂಲಕ ಹತ್ತಾರು ವರ್ಷಗಳ ಹಗೆತನಕ್ಕೆ ರಾಜತಾಂತ್ರಿಕ ಮಾತುಕತೆಗಳ ಮೂಲಕ ಯಶಸ್ವಿ ಮುಕ್ತಿ ಹಾಡಲಾಗಿದೆ. ಈ ಮಹತ್ವದ ಬೆಳವಣಿಗೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮದೇ ಆದ ‘ಟ್ರೂತ್ ಸೋಶಿಯಲ್’ (Truth Social) ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಇಡೀ ವಿಶ್ವಕ್ಕೆ ಅಧಿಕೃತವಾಗಿ ಪ್ರಕಟಿಸಿದ್ದಾರೆ. “ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದವು ಈಗ ಸಂಪೂರ್ಣವಾಗಿ ಯಶಸ್ವಿಯಾಗಿದೆ. ಈ ನಿಟ್ಟಿನಲ್ಲಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆಗಳು!” ಎಂದು ಟ್ವೀಟ್ ಮಾಡುವ ಮೂಲಕ ಟ್ರಂಪ್ ಜಾಗತಿಕ ಮಟ್ಟದ ಬಿಕ್ಕಟ್ಟೊಂದನ್ನು ಯಶಸ್ವಿಯಾಗಿ ಪರಿಹರಿಸಿರುವ ಸಂತಸವನ್ನು ಹಂಚಿಕೊಂಡಿದ್ದಾರೆ. ವಿಶ್ವದ ಪ್ರಮುಖ…
ನವದೆಹಲಿ : ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಇದೀಗ ಕೊನೆಗೂ ಅಂತ್ಯವಾಗಿದ್ದು ಉಭಯ ದೇಶಗಳು ಪರಸ್ಪರ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿದ್ದು, ಅಮೆರಿಕ ಹಾಗೂ ವಿರಾ ನಡುವಿನ ಸಂಧನ ಮಾತುಕತೆ ಕೊನೆಗೂ ಯಶಸ್ವಿಯಾಗಿದೆ. ಈ ಬಗ್ಗೆ ಡೊನಾಲ್ಡ್ ಟ್ರಂಪ್ ಟ್ರೂತ್ ನಲ್ಲಿ ಹಂಚಿಕೊಂಡಿದ್ದು, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ಹಾರ್ಮುಜ್ ಜಲಸಂಧಿಯನ್ನು ಟೋಲ್ ಫ್ರೀಯಾಗಿ ತೆರೆಯಲು ನಾನು ಇಲ್ಲಿ ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ ಮತ್ತು ಅದೇ ಸಮಯದಲ್ಲಿ, ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ ಎಂದು ಟ್ರಂಪ್ ತಿಳಿಸಿದ್ದಾರೆ. https://twitter.com/ANI/status/2066290652363841723?t=durs6hyqJQe7I6TE3-1m-g&s=19
BREAKING : ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಅಂತ್ಯ : ಜೂ.19ರಂದು ಜಿನೇವಾದಲ್ಲಿ ಪರಸ್ಪರ ಶಾಂತಿ ಒಪ್ಪಂದಕ್ಕೆ ಸಹಿ!
ನವದೆಹಲಿ: ಕಳೆದ ಸುಮಾರು ಮೂರೂವರೆ ತಿಂಗಳುಗಳಿಂದ (110 ದಿನಗಳು) ಇಡೀ ವಿಶ್ವವನ್ನೇ ಆತಂಕಕ್ಕೆ ತಳ್ಳಿದ್ದ ಅಮೆರಿಕ ಮತ್ತು ಇರಾನ್ ನಡುವಿನ ಭೀಕರ ಯುದ್ಧಕ್ಕೆ ಕೊನೆಗೂ ತೆರೆ ಬಿದ್ದಿದೆ. ಉಭಯ ದೇಶಗಳು ಪರಸ್ಪರ ಮಾತುಕತೆಯ ಮೂಲಕ ಯುದ್ಧವನ್ನು ಅಂತ್ಯಗೊಳಿಸಲು ಸಮ್ಮತಿಸಿದ್ದು, ಜಾಗತಿಕ ಮಟ್ಟದಲ್ಲಿ ಶಾಂತಿ ಸ್ಥಾಪನೆಯತ್ತ ಮಹತ್ವದ ಹೆಜ್ಜೆ ಇಟ್ಟಿವೆ. 110 ದಿನಗಳ ಭೀಕರ ಸಮರಕ್ಕೆ ಬಿದ್ದ ತೆರೆ ಕಳೆದ 110 ದಿನಗಳಿಂದ ಅಮೆರಿಕ ಮತ್ತು ಇರಾನ್ ನಡುವೆ ಸರಣಿ ಕ್ಷಿಪಣಿ ದಾಳಿಗಳು, ವಾಯುದಾಳಿಗಳು ಹಾಗೂ ತೀವ್ರ ಪ್ರಮಾಣದ ಸೈನಿಕ ಸಂಘರ್ಷಗಳು ನಡೆಯುತ್ತಿದ್ದವು. ಈ ಯುದ್ಧದಿಂದಾಗಿ ಉಭಯ ದೇಶಗಳಿಗೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾಗೂ ಜೀವಹಾನಿಯಾಗಿತ್ತು. ಕೇವಲ ಎರಡು ದೇಶಗಳಷ್ಟೇ ಅಲ್ಲದೆ, ಇಡೀ ಮಧ್ಯಪ್ರಾಚ್ಯ (Middle East) ಪ್ರದೇಶದಲ್ಲಿ ಯುದ್ಧದ ಕಾರ್ಮೋಡ ಕವಿದು, ಜಾಗತಿಕ ತೈಲ ಮಾರುಕಟ್ಟೆ ಹಾಗೂ ಜಾಗತಿಕ ಆರ್ಥಿಕತೆಯ ಮೇಲೆ ಇದು ತೀವ್ರ ಪರಿಣಾಮ ಬೀರಿತ್ತು. ಆದರೆ ಈಗ ಎರಡೂ ದೇಶಗಳು ರಾಜತಾಂತ್ರಿಕ ಹಾದಿ ಹಿಡಿದಿರುವುದು ಜಗತ್ತಿಗೆ ನಿರಾಳತೆ ತಂದಿದೆ.…
ಶಿವಮೊಗ್ಗ: ಆಟವಾಡುತ್ತಾ, ಕಲಿಯುತ್ತಾ ಹೆತ್ತವರ ಕಣ್ಣೆದುರೇ ಹಸನ್ಮುಖಿಯಾಗಿ ಇರಬೇಕಾಗಿದ್ದ ಆರು ವರ್ಷದ ಪುಟಾಣಿ ಬಾಲಕನೊಬ್ಬ, ಶಾಲೆ ಮುಗಿಯುವ ಹೊತ್ತಿಗೆ ಶಾಲಾ ಆವರಣದಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ಸಂಭವಿಸಿದೆ. ಕೇವಲ ಒಂದನೇ ತರಗತಿಯಲ್ಲಿ ಓದುತ್ತಿದ್ದ ಈ ಪುಟ್ಟ ಕಂದಮ್ಮನಿಗೆ ಹೃದಯಾಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಈ ಅನಿರೀಕ್ಷಿತ ದುರಂತ ಇಡೀ ಗ್ರಾಮವನ್ನೇ ಕಣ್ಣೀರಿನ ಕಡಲಲ್ಲಿ ಮುಳುಗಿಸಿದೆ. ಆವರಣದಲ್ಲೇ ಕುಸಿದು ಬಿದ್ದ ಪುಟಾಣಿ ತ್ರಿಲೋಕ್ ಜಿಲ್ಲೆಯ ಕರೂರು ಹೋಬಳಿಯ ಹಾಳಸಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ದೈವಿ ಘಟನೆ ನಡೆದಿದೆ. ಕೊಡನವಳ್ಳಿ ಗ್ರಾಮದ ನಿವಾಸಿಗಳಾದ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪ್ರೀತಿಯ ಪುತ್ರ ತ್ರಿಲೋಕ್ ಜೈನ್ (6) ಮೃತಪಟ್ಟ ದುರ್ದೈವಿ ಬಾಲಕನಾಗಿದ್ದಾನೆ. ಶನಿವಾರ ಎಂದಿನಂತೆ ಉತ್ಸಾಹದಿಂದಲೇ ಶಾಲೆಗೆ ಬಂದಿದ್ದ ತ್ರಿಲೋಕ್, ದಿನವಿಡೀ ಸಹಪಾಠಿಗಳೊಂದಿಗೆ ಸಕ್ರಿಯನಾಗಿದ್ದನು. ಆದರೆ ಮಧ್ಯಾಹ್ನ ಶಾಲಾ ಅವಧಿ ಮುಗಿಯುವ ಕೆಲವೇ ನಿಮಿಷಗಳ ಮೊದಲು, ಶಾಲಾ ಆವರಣದಲ್ಲಿ ಗೆಳೆಯರೊಂದಿಗೆ ಇರುವಾಗ ಏಕಾಏಕಿ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಮ್ಮೆ ಮಹಿಳಾ ಸುರಕ್ಷತೆಯ ಪ್ರಶ್ನೆ ಮುನ್ನೆಲೆಗೆ ಬಂದಿದೆ. ಸಹೋದರಿಯ ಮನೆಗೆ ಹೋಗಲು ಓಲಾ ಕ್ಯಾಬ್ ಬುಕ್ ಮಾಡಿದ್ದ 27 ವರ್ಷದ ಯುವತಿಯನ್ನು ಚಾಲಕನೊಬ್ಬ ಟ್ರಾಫಿಕ್ ಜಾಮ್ ನೆಪದಲ್ಲಿ ಮಧ್ಯರಾತ್ರಿ ಬೇರೆ ಬೇರೆ ಕಡೆ ಸುತ್ತಾಡಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿರುವ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಓಲಾ ಕ್ಯಾಬ್ ಚಾಲಕನ ವಿರುದ್ಧ ಎಫ್ಐಆರ್ (FIR) ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿ ಚಾಲಕನ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಟ್ರಾಫಿಕ್ ನೆಪದಲ್ಲಿ ಹಾದಿ ತಪ್ಪಿಸಿದ ಚಾಲಕ ಪೊಲೀಸ್ ಮೂಲಗಳ ಪ್ರಕಾರ, ಜೂನ್ 9ರ ಮಂಗಳವಾರ ರಾತ್ರಿ ಸುಮಾರು 12.37ರ ಸುಮಾರಿಗೆ ಎ. ನಾರಾಯಣಪುರ ನಿವಾಸಿಯಾದ ಯುವತಿಯು ಆದೂರಿನಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗಲು ಓಲಾ ಕ್ಯಾಬ್ ಬುಕ್ ಮಾಡಿದ್ದಳು. ಆದರೆ, ಕಾರು ಹತ್ತಿದ ಬಳಿಕ…
ಬೆಂಗಳೂರು : ಈಗಾಗಲೇ ರಹಸ್ಯವಾಗಿ ಮದುವೆಯಾಗಿದ್ದರೂ ಪಾಲಕರ ಒತ್ತಾಯದ ಮೇರೆಗೆ ಮತ್ತೊಂದು ವಿವಾಹಕ್ಕೆ ಮುಂದಾಗಿದ್ದ ಪತ್ನಿಯನ್ನು ಪತಿಯೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಭವಾನಿ (22) ಹತ್ಯೆಗೀಡಾದವಳು. ನಗರದ ತಿಗಳರಪಾಳ್ಯದಲ್ಲಿ ಘಟನೆ ನಡೆದಿದೆ. ಭವಾನಿ ತಂದೆ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಚಂದ್ರಶೇಖರ್ ಅಲಿಯಾಸ್ ಚಂದನ್ನನ್ನು ಪೊಲೀಸರು ಬಂಧಿಸಿದ್ದಾರೆ. ಭವಾನಿ ಎರಡು ವರ್ಷದಿಂದ ಮನೆ ಸಮೀಪದ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದಳು. ಚಂದನ್ ಆಟೋದಲ್ಲಿ ಭವಾನಿ, ಮನೆಯಿಂದ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗುತ್ತಿದ್ದಳು. ಈ ವೇಳೆ ಇಬ್ಬರ ಪರಿಚಯವಾಗಿ, ಬಳಿಕ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಗೌಪ್ಯ ವಿವಾಹ : ಕೆಲ ತಿಂಗಳ ಹಿಂದೆಯಷ್ಟೇ ದೇವಸ್ಥಾನ ದಲ್ಲಿ ಚಂದನ್ ಮತ್ತು ಭವಾನಿ ಮದುವೆಯಾಗಿದ್ದರು. ಆದರೆ, ಪ್ರತ್ಯೇಕವಾಗಿ ವಾಸವಾಗಿದ್ದುಕೊಂಡು ಪಾಲಕರಿಗೆ ವಿಷಯ ತಿಳಿಸದೆ ಎಂದಿನಂತೆ ಜೀವನ ನಡೆಸುತ್ತಿದ್ದರು. ಭವಾನಿ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದಾಳೆ ಎಂಬ ವಿಚಾರ ತಿಳಿದು ಆಕೆಯ ಮನೆಯವರು, ಬೇರೆ ಮದುವೆಗೆ ಸಿದ್ಧತೆ ನಡೆಸಿದ್ದರು. ಪಾಲಕರ ಮನವಿಗೆ ಭವಾನಿ…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ನ 14 ಜನ ಶಾಸಕರಿಗೆ ಕರೆ ಮಾಡಿ ಸೆಳೆಯುವ ಪ್ರಯತ್ನ ಮಾಡಿದ್ದಾರೆ ಎಂದು ಶಾಸಕ ಎಚ್.ಸಿ.ಬಾಕೃಷ್ಣ ಆರೋಪಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ಸಿಗೆ ಮತಗಳ ಕೊರತೆ ಇಲ್ಲ. ಇಬ್ಬರು ಬಿಜೆಪಿ ಉಚ್ಚಾಟಿತ ಶಾಸಕರಿದ್ದಾರೆ. ಎರಡನೇ ಪ್ರಾಶಸ್ತ್ರ ಮತಗಳಿಂದ ಕಾಂಗ್ರೆಸ್ ಐದನೇ ಅಭ್ಯರ್ಥಿಯೂ ಗೆಲ್ಲಲಿದ್ದಾರೆ. ಇದೆಲ್ಲ ಗೊತ್ತಿದ್ದೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಡಿ.ಕೆ.ಶಿವಕುಮಾರ್ ಕಾಟ ಕೊಡಬೇಕೆಂದು ಕುಮಾರಸ್ವಾಮಿ ಅಭ್ಯರ್ಥಿ ಹಾಕಿದ್ದಾರೆ. ಈ ಹಿಂದೆ ಜೆಡಿಎಸ್ನಲ್ಲಿದ್ದ ಹಾಲಿ ಶಾಸಕರು ಮತ್ತು ಪಕ್ಷೇತರರು ಸೇರಿ 14 ಶಾಸಕರಿಗೆ ಕರೆ ಮಾಡಿ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರ ಎಂದರು.
ನಾಗ್ಪುರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ದೇಶದ ಇಂಧನ ವಲಯದಲ್ಲಿ ಮತ್ತೊಂದು ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿದ್ದಾರೆ. ವಾಹನಗಳಲ್ಲಿ ಶೇಕಡಾ 100 ರಷ್ಟು ಎಥೆನಾಲ್ ಬಳಸಲು ಅನುಮತಿ ನೀಡುವ ಪ್ರಮುಖ ಕಡತಕ್ಕೆ ತಾವು ಸಹಿ ಹಾಕಿರುವುದಾಗಿ ಅವರು ಶನಿವಾರ ನಾಗ್ಪುರದಲ್ಲಿ ಪ್ರಕಟಿಸಿದ್ದಾರೆ. ಈ ನಿರ್ಧಾರವು ದೇಶದ ಇಂಧನ ಸ್ವಾವಲಂಬನೆಗೆ ದೊಡ್ಡ ಬಲ ತುಂಬಲಿದೆ ಎಂದು ನಿರೀಕ್ಷಿಸಲಾಗಿದೆ. ನಾಗ್ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವರು, “ಹಿಂದೆ ನಾನು ಎಥೆನಾಲ್ ಬಳಕೆಯ ಬಗ್ಗೆ ಮತ್ತು ಪೆಟ್ರೋಲ್ಗೆ ಇದು ಪರ್ಯಾಯವಾಗುವ ಬಗ್ಗೆ ಮಾತನಾಡಿದಾಗ ಹಲವರು ನನ್ನನ್ನು ನೋಡಿ ನಗುತ್ತಿದ್ದರು. ನನ್ನ ಕೆಲವು ಸ್ನೇಹಿತರೇ ಈ ಆಲೋಚನೆಯನ್ನು ತಮಾಷೆ ಮಾಡಿದ್ದರು ಮತ್ತು ಟೀಕಿಸಿದ್ದರು. ಆದರೆ ಇಂದು ಎಥೆನಾಲ್ ದೇಶದ ಇಂಧನ ಮಾರುಕಟ್ಟೆಯಲ್ಲಿ ಪೆಟ್ರೋಲ್ಗೆ ಅತ್ಯುತ್ತಮ ಪರ್ಯಾಯವಾಗಿ ಹೊರಹೊಮ್ಮಿದೆ” ಎಂದು ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು. ತಮ್ಮ ಐತಿಹಾಸಿಕ ನಿರ್ಧಾರದ ಬಗ್ಗೆ ಮಾಹಿತಿ ನೀಡಿದ ಗಡ್ಕರಿ, “ಕಳೆದ ರಾತ್ರಿ 8 ಗಂಟೆಗೆ, ನಾನು…














