Author: kannadanewsnow05

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ತಡರಾತ್ರಿ ಭಾರತ ಪಾಕಿಸ್ತಾನ ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಈ ಒಂದು ಕ್ಷಿಪಣಿ ದಾಳಿಯಿಂದ 100ಕ್ಕೂ ಅಧಿಕ ಉಗ್ರರು ಸಾವನ್ನಪ್ಪಿದ್ದಾರೆ. ಇದೀಗ ಭಾರತ ಸಮರಾಭ್ಯಾಸ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಇದೀಗ ಬ್ಲಾಕ್ ಔಟ್ ಅಣುಕು ಪ್ರದರ್ಶನ ನಡೆಸಿದೆ. ಹೌದು ಪಾಕಿಸ್ತಾನ ವಿರುದ್ಧ ಭಾರತ ಸಮರಾಭ್ಯಾಸ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬ್ಲಾಕ್ ಔಟ್ ಅಣುಕು ಪ್ರದರ್ಶನ ನಡೆಸಿದೆ. ಬ್ಲ್ಯಾಕ್ ಔಟ್ ಮಾಡಿ ಎಲ್ಲಾ ಕಡೆಗೂ ಏಕ ಕಾಲದಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ಬ್ಲ್ಯಾಕ್ ಔಟ್ ಅಣುಕು ಪ್ರದರ್ಶನ ಮಾಡಲಾಯಿತು. ದೆಹಲಿ, ಬಿಹಾರ್ ಹಾಗು ಉತ್ತರಪ್ರದೇಶದಲ್ಲೂ ಬ್ಲಾಕ್ ಔಟ್ ಅಣುಕು ಪ್ರದರ್ಶನ ಮಾಡಲಾಗಿದ್ದು, ಬೆಂಗಳೂರಿನ ಹಲಸೂರಿನ ಮಾತ್ರ ಬ್ಲಾಕ್ ಔಟ್ ಮಾಡಲಾಗಿದೆ. ಹಲಸೂರಲ್ಲಿ ಬ್ಲಾಕ್ ಔಟ್ ಗೆ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದರ ಹಿನ್ನೆಲೆ ಅಲ್ಲಿ ಮಾತ್ರ ಬ್ಲ್ಯಾಕ್ ಔಟ್ ಮಾಡಲಾಗಿದೆ. ಸಾರ್ವಜನಿಕರಿಗೆ ತೊಂದರೆ ಕಾರಣಕ್ಕೆ ಹಲಸೂರಲ್ಲಿ ಮಾತ್ರ…

Read More

ನವದೆಹಲಿ : ಮಧ್ಯರಾತ್ರಿ ಭಾರತೀಯ ಸೈನಿಕರು ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದಾರೆ. ಈ ಒಂದು ಕ್ಷಿಪಣಿ ದಾಳಿಗೆ 100ಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದಾರೆ. ಇನ್ನು ಭಾರತೀಯ ಸೈನಿಕರ ಈ ಒಂದು ಕಾರ್ಯಕ್ಕೆ ಭಾರತ ದೇಶದಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತಪಡಿಸಲಾಗುತ್ತಿದೆ. ಇನ್ನು ಪಾಕಿಸ್ತಾನದ ಉಗ್ರರ ಕ್ಯಾಂಪ್ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ್ದರ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಶರೀಫ್ ಪಾಕಿಸ್ತಾನ ಸೇನೆಗೆ ಪ್ರತಿ ದಾಳಿ ನಡೆಸಲು ಪರಮಾಧಿಕಾರ ನೀಡಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸೈನಿಕರಿಗೆ ಯಾವ ರೀತಿ ಸ್ವತಂತ್ರ ನೀಡಿದ್ದರೂ ಅದೇ ರೀತಿ ಪಾಕಿಸ್ತಾನದ ಪ್ರಧಾನಿ ಪಾರ್ಕ್ ಸೈನಿಕರಿಗೆ ಫ್ರೀ ಹ್ಯಾಂಡ್ ನೀಡಿದ್ದಾರೆ. ಈ ವಿಚಾರವಾಗಿ, ಭಾರತದ ಮೇಲೆ ಪ್ರತಿ ದಾಳಿ ನಡೆಸಿದರೆ ಆಪರೇಷನ್ ಸಿಂಧೂರ್ ವಿಸ್ತರಣೆ ಮಾಡಲಾಗುತ್ತದೆ.ಒಂದು ವೇಳೆ ಪ್ರತಿ ದಾಳಿ ಏನಾದರು ಮಾಡಿದ್ರೆ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಮತ್ತೆ ದಾಳಿ ನಡೆಸಲಾಗುತ್ತದೆ ಎಂದು ಪಾಕಿಸ್ತಾನಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್…

Read More

ಇಸ್ಲಾಮಾಬಾದ್ : ತಡರಾತ್ರಿ ಪಾಕಿಸ್ತಾನದ ಉಗ್ರರ ಕ್ಯಾಂಪ್ ಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಈ ಒಂದು ಕ್ಷಿಪಣಿ ದಾಳಿಗೆ ಸುಮಾರು 100ಕ್ಕೂ ಹೆಚ್ಚು ಉಗ್ರರು ಸಾವನಪ್ಪಿದ್ದಾರೆ. ಇದೀಗ ಉಗ್ರರ ಶವಗಳನ್ನು ಪಾಕಿಸ್ತಾನಿಯರು ಟ್ರ್ಯಾಕ್ಟರ್ ನಲ್ಲಿ ಸಾಗಿಸುತ್ತಿರುವ ಫೋಟೋ ವೈರಲ್ ಆಗಿದೆ. ಹೌದು ಭಾರತ ಸೇನೆಯ ಆಪರೇಷನ್‌ ಸಿಂಧೂರಕ್ಕೆ ತತ್ತರಿಸಿರುವ ಪಾಕ್‌, ಉಗ್ರರ ಶವಗಳಿಗೆ ಧ್ವಜ ಹೊದಿಸಿ ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ವೀಡಿಯೋ ಕ್ಲಿಪ್‌ನಲ್ಲಿ, ಭಯೋತ್ಪಾದಕರ ಶವಗಳಿಗೆ ಪಾಕ್‌ ಧ್ವಜ ಹೊದಿಸಿ ಗೌರವ ಸೂಚಿಸಲಾಗಿದೆ. ಈ ಶವಗಳನ್ನು ಬಹಾವಲ್ಪುರದ ಅಂತ್ಯಕ್ರಿಯೆಗೆ ಕೊಂಡೊಯ್ಯಲಾಗುತ್ತಿತ್ತು. ಉಗ್ರರ ಶವಗಳ ಅಂತ್ಯಕ್ರಿಯೆಯಲ್ಲಿ ಪಾಕ್‌ ಸೇನೆಯ ಅಧಿಕಾರಿಗಳು ಭಾಗವಹಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ನಿಷೇಧಿತ ಜೈಶ್ -ಎ-ಮೊಹಮ್ಮದ್ ಭಯೋತ್ಪಾದಕ ಗುಂಪುಗಳ ನೆಲೆಯಿರುವ ಬಹವಾಲ್‍ಪುರದಲ್ಲಿ ಮರ್ಕಜ್ ಸುಭಾನ್ ಅಲ್ಲಾ ಮಸೀದಿ, ತೆಹ್ರಾ ಕಲಾನ್‍ನಲ್ಲಿನ ಸರ್ಜಾಲ್, ಕೋಟಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್‍ನ ಸೈಯನ್ನಾ ಬಿಲಾಲ್ ಕ್ಯಾಂಪ್‍ಗಳ ಮೇಲೆ ಭಾರತ…

Read More

ಬೆಂಗಳೂರು : ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆಯು ದಾಳಿ ನಡೆಸಿ, ಉಗ್ರರ ಹುಟ್ಟಡಗಿಸಿದೆ. ಭಾರತೀಯ ಸೇನೆಯ ಈ ದಿಟ್ಟ ಆಪರೇಷನ್ ಸಿಂಧೂರ ದಾಳಿಯ ಬಗ್ಗೆ ಇಡೀ ದೇಶವೆ ಹೆಮ್ಮೆ ಪಡುತ್ತಿದೆ. ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ. ಇದೀಗ ಕನ್ನಡ ಚಿತ್ರರಂಗದ ಕೆಲ ಗಣ್ಯರು ಸಹ ಸೇನೆಯ ಈ ದಿಟ್ಟ ಉತ್ತರವನ್ನು ಮನಸಾರೆ ಕೊಂಡಾಡಿದ್ದಾರೆ. ನಟ ಪ್ರೇಮ್ ಸಹ ಈ ಬಗ್ಗೆ ಮಾತನಾಡಿದ್ದು, ಸೇನೆಗೆ ಅಭಿನಂದನೆ ಸಲ್ಲಿಸಿರುವ ಜೊತೆಗೆ ಪಾಕಿಸ್ತಾನವು ಮರಳಿ ಭಾರತದ ಮೇಲೆ ಆಕ್ರಮಣ ಮಾಡುವ ಉದ್ಧಟತನ ಪ್ರದರ್ಶಿಸಬಾರದು ಎಂದಿದ್ದಾರೆ. ಹೆಂಡತಿ ಮಕ್ಕಳೊಂದಿಗೆ ಕಾಲ ಕಳೆದು ಎಂಜಾಯ್ ಮಾಡಲು ಪ್ರವಾಸಕ್ಕೆ ಹೋದಾಗ ನಿನ್ನ ಧರ್ಮ ಯಾವುದು ಎಂದು ಹೇಳಿ ಕೊಲೆ ಮಾಡುತ್ತಾರೆ ಅಂದರೆ ಇದಕ್ಕಿಂತ ದೊಡ್ಡದಾದ ಕ್ರೈಂ ಜಗತ್ತಿನಲ್ಲಿ ಯಾವುದು ಇಲ್ಲ. ಪಾಕಿಸ್ತಾನ ಅಷ್ಟೇ ಅಲ್ಲ ಪ್ರಪಂಚದ ಯಾವುದೇ ದೇಶ ಭಾರತದ ಮೇಲೆ ಯುದ್ಧ ಮಾಡಲಿ…

Read More

ಬೆಂಗಳೂರು : ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇತ್ತೀಚಿಗೆ ಅವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎಫ್ಐಆರ್ ರದ್ದು ಪಡಿಸುವಂತೆ ಹೈಕೋರ್ಟಿಗೆ ಶಾಸಕ ಹರೀಶ್ ಪೂಂಜಾ ಅರ್ಜಿ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಪ್ರಸ್ತಾಪಿಸಿದರು. ಇದಕ್ಕೆ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಆ ವ್ಯಾಪ್ತಿ ಇಲ್ಲ. ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಆದೇಶವಾದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.

Read More

ನವದೆಹಲಿ : ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ರಾಜ್ಯದ ಧಾರವಾಡ ಐಐಟಿ ಹಾಗೂ ಆಂಧ್ರಪ್ರದೇಶ ತಿರುಪತಿ ಐಐಟಿ, ಛತ್ತೀಸ್‌ಗಢದ ಭಿಲಾಯಿ ಐಐಟಿ, ಜಮ್ಮು-ಕಾಶ್ಮೀರದ ಜಮ್ಮು ಐಐಟಿ ಮತ್ತು ಕೇರಳದ ಪಾಲಕ್ಕಾಡ್‌ಗಳಲ್ಲಿ ಸ್ಥಾಪಿಸಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಗಳ (ಐಐಟಿ) ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಅನುಮೋದನೆ ನೀಡಿತು ಎಂದಿದ್ದಾರೆ. ಧಾರವಾಡ ಐಐಟಿ ಸೇರಿದಂತೆ ಐದು ಐಐಟಿಗಳ ಶೈಕ್ಷಣಿಕ ಮತ್ತು ಮೂಲಸೌಕರ್ಯ ಸಾಮರ್ಥ್ಯ ವಿಸ್ತರಣೆಗೆ ಒಪ್ಪಿಗೆ ನೀಡಿದೆ. ಇದರಿಂದ 6500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅವಕಾಶ ದೊರೆಯಲಿದೆ. ಹೊಸ ಸಂಶೋಧನಾ ಪಾರ್ಕ್‌ಗಳು ಮತ್ತು 130 ಅಧ್ಯಾಪಕರ ಹುದ್ದೆಗಳ ಸೃಷ್ಟಿಯೂ ಈ ಯೋಜನೆಯ…

Read More

ನವದೆಹಲಿ : ಪೆಹಲ್ಗಾಮ್​ ಉಗ್ರರ ದಾಳಿಯ ಪ್ರತಿಕಾರಕ್ಕೆ ತಡರಾತ್ರಿ ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳ ಮೇಲೆ ದಾಳಿ ಎಲ್ಲಾ ಉಡೀಸ್ ಮಾಡುವಲ್ಲಿ ಯಶಸ್ವಿಯಾಗಿದೆ. ಈ ಆಪರೇಷನ್ ಸಿಂಧೂರ್ ​​ ಬೆನ್ನಲ್ಲೇ ಪಾಕಿಸ್ತಾನ ಬೆದರಿದೆ. ಇದಕ್ಕೆ ಪೂಕರವೆಂಬಂತೆ ಭಾರತ ದಾಳಿ ನಿಲ್ಲಿಸಿದರೆ ಉದ್ವಿಗ್ನತೆ ಶಮನಕ್ಕೆ ಸಿದ್ಧ ಎಂದು ಪಾಕ್ ರಕ್ಷಣಾ ಸಚಿವ ಖವಾಜಾ ಅಸಿಫ್ ಶಾಂತಿ ಪಠಣ ಮಾಡಿದ್ದಾರೆ. ಉಗ್ರದ ನೆಲೆ ಗುರಿಯಾಗಿಸಿ ಏರ್​ಸ್ಟ್ರೈಕ್​ ಮಾಡಿದ ನಂತರ ಪಾಕಿಸ್ತಾನ ರಕ್ಷಣಾ ಸಚಿವ ಅಸಿಫ್​ ಪ್ರತಿಕ್ರಿಯಿಸಿದ್ದು, ಭಾರತ ದಾಳಿ ಮಾಡಿದರೆ ಮಾತ್ರ ಪಾಕಿಸ್ತಾನ ಪ್ರತಿಕ್ರಿಯಿಸುತ್ತದೆ. ಕಳೆದ ಹದಿನೈದು ದಿನಗಳಿಂದ ನಾವು ಭಾರತದ ವಿರುದ್ಧ ಯಾವುದೇ ಬಗೆಯ ಕ್ರಮಕೈಗೊಳ್ಳುವಿದಲ್ಲ ಎಂದು ಹೇಳುತ್ತಿದ್ದೇವೆ. ಆದರೆ ನಮ್ಮ ಮೇಲೆ ದಾಳಿ ನಡೆದರೆ, ನಾವು ಪ್ರತಿದಾಳಿ ಮಾಡುತ್ತೇವೆ. ಇನ್ನು ಒಂದು ವೇಳೆ ಭಾರತ ಹಿಂದೆ ಸರಿದರೆ ನಾವು ಸಹ ಖಂಡಿತವಾಗಿಯೂ ಈ ಉದ್ವಿಗ್ಬತೆಯನ್ನು ಶಮನಗೊಳಿಸುತ್ತೇವೆ ಎಂದಿದ್ದಾರೆ. ಇನ್ನು ಉಗ್ರರ ಮೇಲೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಏರ್ ಸ್ಟ್ರೈಕ್…

Read More

ಬೆಂಗಳೂರು : ಪಹಲ್ಗಾಮ್ ಉಗ್ರರ ದಾಳಿಯ ಪ್ರತಿಕಾರವಾಗಿ ಇದೀಗ ಪಾಕಿಸ್ತಾನ್ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇದರ ಬೆನ್ನಲ್ಲೆ ಇದೀಗ ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತ ಎರಡು ನಿಮಿಷಗಳ ಕಾಲ ಸುಧೀರ್ಘವಾಗಿ ಯುದ್ಧದ ಸೈರನ್ ಮೊಳಗಿದೆ. ಹೌದು ಮಧ್ಯಾಹ್ನ 3:58 ರಿಂದ ಸಂಜೆ 4ರ ವರೆಗೆ ಸೈರನ್ ಮೊಳಗಿತು. ಸುಮಾರು ಎರಡು ನಿಮಿಷಗಳ ಕಾಲ ಸೈರನ್ ಮೊಳಗಿದೆ. ಬೆಂಗಳೂರಿನ ಸುಮಾರು 35 ಸ್ಥಳಗಳಲ್ಲಿ ಎರಡು ನಿಮಿಷಗಳ ಕಾಲ ಸೈರನ್ ಮೊಳಗಿತು. ಇನ್ನು ಹಲಸೂರಿನಲ್ಲಿರುವ ಅಗ್ನಿಶಾಮಕ ಇಲಾಖೆಯ ಡಿಜಿಪಿ ಕಚೇರಿಯಲ್ಲಿ ಕೂಡ ಮಾಕ್ ಡ್ರಿಲ್ ಪ್ರಯುಕ್ತ ಸೈರನ್ ಮೊಳಗಿದೆ. ಈ ವೇಳೆ ಸಾರ್ವಜನಿಕರು ಸಹ ಸೈರನ್ ಮೊಳಗುವುದನ್ನು ಅಗ್ನಿಶಾಮಕ ಇಲಾಖೆಯ ಮುಂದೆ ನಿಂತು ಕುತೂಹಲದಿಂದ ವೀಕ್ಷಿಸಿದರು. ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿದಂತೆ 35 ಸ್ಥಳಗಳಲ್ಲಿ…

Read More

ನವದೆಹಲಿ : ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತಿಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. ಇವನು ಕ್ಷಿಪಣಿ ದಾಳಿಯಲ್ಲಿ ಸುಮಾರು ನೂರಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದರೆ. ಹೀಗಾಗಿ ನಾಳೆ ಧರ್ಮ ಶಾಲಾದಲ್ಲಿ ಐಪಿಎಲ್ ಪಂದ್ಯ ನಡೆಯುವುದು ಅನುಮಾನ ಎನ್ನಲಾಗುತ್ತಿದ್ದು, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಐಪಿಎಲ್ ಪಂದ್ಯ ಸ್ಥಳಾಂತರ ಆಗಬಹುದು ಎನ್ನಲಾಗಿದೆ. ಹೌದು ನಾಳೆ ದೆಹಲಿ ಮತ್ತು ಪಂಜಾಬ್ ನಡುವೆ ಐಪಿಎಲ್ ಪಂದ್ಯ ನಡೆಯಲಿದೆ. ಪಂಜಾಬ್ ನ ಧರ್ಮಶಾಲಾದಲ್ಲಿ ಈ ಒಂದು ಐಪಿಎಲ್ ಪಂದ್ಯ ನಡೆಯಲಿದ್ದು ಪಂದ್ಯ ನಡೆಸುವ ಕುರಿತಂತೆ ಬಿಸಿಸಿಐ ನಿರಂತರವಾಗಿ ಕೇಂದ್ರ ಸರ್ಕಾರದ ಜೊತೆಗೆ ಸಂಪರ್ಕದಲ್ಲಿದೆ. ಬಹುತೇಕ ನಾಳೆ ಧರ್ಮಶಾಲಾದಲ್ಲಿ ನಡೆಯಬೇಕಿರುವ ದೆಹಲಿ ಮತ್ತು ಪಂಜಾಬ್ ನಡುವಿನ ಐಪಿಎಲ್ ಪಂದ್ಯ ಸ್ಥಳಾಂತರ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Read More

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿd ಅವರು, ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ, ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ಧ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ. ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ಪರಾಕ್ರಮ ಮೆರೆದಿದ್ದಾರೆ.ರಾಷ್ಟ್ರೀಯ ಭದ್ರತೆ ವಿಷಯಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ.…

Read More