Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಎಂ.ಜಿ. ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಇಂದು ಬೆಳಗಿನಜಾವ ಐಷಾರಾಮಿ ಲಾಂಬೊರ್ಗಿನಿ ಕಾರು ಡ್ರಿಫ್ಟಿಂಗ್ ಮಾಡಿ ಅಪಾಯಕಾರಿ ಚಾಲನೆ ಮಾಡಿದ್ದು, ಈ ಸಂಬಂಧ ಅಪರಿಚಿತ ಕಾರು ಚಾಲಕನ ವಿರುದ್ಧ ಕಬ್ಬನ್ ಪಾರ್ಕ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗಿನಜಾವ 2 ಗಂಟೆ ಸುಮಾರಿಗೆ ಲಾಂಬೊರ್ಗಿನಿ ಕಾರು ಅನಿಲ್ ಕುಂಬ್ಳೆ ವೃತ್ತದ ಬಳಿ ಬಂದಿತ್ತು. ಈ ವೇಳೆ ಕಾರು ಡ್ರಿಫ್ಟಿಂಗ್ ಮಾಡಿದೆ. ಇದನ್ನು ಕಂಡು ಸ್ಥಳೀಯರು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಮಾಹಿತಿ ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ಪರಿಶೀಲನೆ ವೇಳೆ KA-05 NR 0009 ನಂಬರ್ನ ಲ್ಯಾಂಬೋರ್ಗಿನಿ ಕಾರು ಎಂಬುದು ಗೊತ್ತಾಗಿದೆ. ಕಾರಿನ ಮಾಲೀಕರನ್ನು ಪತ್ತೆ ಮಾಡಲಾಗುತ್ತಿದ್ದು, ಅಜಾಗರೂಕತೆ ಹಾಗೂ ಅಪಾಯಕಾರಿ ಚಾಲನೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. https://twitter.com/sirajnoorani/status/2035277053017350633?t=D54v3iU_Uzp3UFpX8vLPlA&s=19
ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ತೋರಿದ ಬೆನ್ನಲ್ಲೇ ಆರ್ಸಿಬಿ ಫ್ರಾಂಚೈಸಿ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದೆ. ಮಾ.28ರಂದು ಆರ್ಸಿಬಿ ಹಾಗೂ ಎಸ್ಆರ್ಹೆಚ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಇದೇ ವೇಳೆ ಕ್ರೀಡಾಂಗಣದ ಗರಿಷ್ಠ ಆಸನದ ಸಾಮರ್ಥ್ಯ 35 ಸಾವಿರವಿದ್ದರೂ 28 ಸಾವಿರ ಟಿಕೆಟ್ಗಳನ್ನು ಮಾತ್ರ ಮಾರಾಟಕ್ಕೆ ಸೀಮಿತಗೊಳಿಸಲಾಗಿದೆ. ಟಿಕೆಟ್ಗಳು ಪಂದ್ಯದ ಮೂರು ದಿನಗಳ ಮುಂಚೆ ಮಾತ್ರ ಲಭ್ಯವಿ ಇರಲಿವೆ. ಜನದಟ್ಟಣೆ ನಿಯಂತ್ರಿಸಲು ಮೊದಲ ಬಾರಿಗೆ ಕೃತಕ ಬುದ್ದಿ ಮತ್ತೆ (AI) ಹಾಗೂ ಡಿಜಿಟಲ್ ಕ್ಯಾಮರಾಗಳು ಬಳಕೆಯಾಗುತ್ತಿವೆ. ಕ್ರೀಡಾಂಗಣಕ್ಕೆ ಆಗಮಿಸುವ ಕ್ರೀಡಾಭಿಮಾನಿಗಳ ನೂಕುನುಗ್ಗಲು ನಿಯಂತ್ರಿಸಲು ಎಐ ಬಳಸಲಾಗುತ್ತಿದೆ. ಸ್ಟೇಡಿಯಂನ ಯಾವುದೇ ಪ್ರವೇಶದ್ವಾರಗಳಲ್ಲಿ ಜನದಟ್ಟಣೆ ಕಂಡುಬಂದರೆ ಹೋಲ್ಡಿಂಗ್ ಪ್ರದೇಶಗಳನ್ನು ತಕ್ಷಣ ಮುಚ್ಚಿ ಜನರನ್ನು ಸುರಕ್ಷಿತವಾಗಿ ಆಸನಗಳಿಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಆರ್ಸಿಬಿ ಪಂದ್ಯಕ್ಕೆ ಟಿಕೆಟ್ ಖರೀದಿ ಕುರಿತಂತೆ ಶೀಘ್ರದಲ್ಲಿ ಮಾರಾಟ ದಿನಾಂಕ ಘೋಷಿಸಲಿದೆ. ಕಾಲ್ತುಳಿತದ ಬಳಿಕ ಸುರಕ್ಷತೆಗೆ ಹೆಚ್ಚು ಒತ್ತು ನೀಡಲಾಗಿದ್ದು, ಅಭಿಮಾನಿಗಳ…
ಬೆಂಗಳೂರು : ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ, ಈಗಾಗಲೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಜಟಾಪಟಿ ನಡೆಯುತ್ತಿದ್ದು, ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಇಂದು ಸಂಜೆ ಅಥವಾ ನಾಳೆ ಟಿಕೆಟ್ ಘೋಷಣೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, ಶನಿವಾರ ಸಂಜೆ ಅಥವಾ ಭಾನುವಾರ ಬೆಳಗ್ಗೆಯೊಳಗೆ ಟಿಕೆಟ್ ಘೋಷಣೆ ಆಗಲಿದೆ. ಈ ಕುರಿತಾಗಿ ಪ್ರಮುಖರ ಸಭೆಯಲ್ಲಿ ವ್ಯಾಪಕವಾಗಿ ಚರ್ಚೆ ಮಾಡಲಾಗಿದೆ. ಯಾವುದೇ ಒಬ್ಬ ಕಾರ್ಯಕರ್ತರ ಅಪಸ್ವರ ಇದ್ರೂ ಕೂಡ ಪರಿಗಣನೆಗೆ ತೆಗೆದುಕೊಂಡಿದ್ದೇವೆ ಎರಡು ಕ್ಷೇತ್ರಗಳ ಬಗ್ಗೆ ಶುಕ್ರವಾರ ತಡ ತಡರಾತ್ರಿಯವರೆಗೆ ಟಿಕೆಟ್ ವಿಚಾರವಾಗಿ ಚರ್ಚೆ ಮಾಡಿದ್ದೇವೆ. ಬಹುತೇಕ ಟಿಕೆಟ್ ಘೋಷಣೆ ಸಂಜೆ ಅಥವಾ ಭಾನುವಾರ ಬೆಳಗ್ಗೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ದಾವಣಗೆರೆ ದಕ್ಷಿಣದಲ್ಲಿ ಸಮರ್ಥ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಆದರೆ ಇನ್ನೂ ಭಿಫಾರಂ ನೀಡಲಾಗಿಲ್ಲ. ಪಕ್ಷದಿಂದ ಟಿಕೆಟ್ ಘೋಷಣೆಗೂ ಮುನ್ನವೇ…
ಬೆಂಗಳೂರು : ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದುಬಾರಿ ವಿರೋಧಿಸಿ ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಒತ್ತಾಯಿಸಿ ಇಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರಿನ ಅತ್ತಿಬೆಲೆಯಲ್ಲಿ ಕೇಂದ್ರ ರಾಜ್ಯ ಸರ್ಕಾರವನ್ನು ಎಚ್ಚರಿಸುವ ಸಲುವಾಗಿ ಹೆದ್ದಾರಿ ತಡೆ ಮಾಡಿದ್ದು ಅತ್ತಿಬೆಲೆ ಗಡಿಯಲ್ಲಿ ಹೊಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪ್ರತಿಭಟನೆ ನಡೆಸಿದರು. ಇರಾನ್ ಇಸ್ರೇಲ್ ಅಮೆರಿಕ ಯುದ್ಧದಿಂದ ಸಿಲಿಂಡರ್ ಕೊರತೆ ಉಂಟಾಗಿದೆ. ವಾಣಿಜ್ಯ ಸಿಲಿಂಡರ್ ದುಬಾರಿಯಾಗಿದೆ. ಪೆಟ್ರೋಲ್ ಡೀಸೆಲ್ ಅಭಾವ ಉಂಟಾಗಿದೆ. ಇದರಿಂದ ಜನರ ಮೇಲೆ ಪರಿಣಾಮ ಬೀರುತ್ತಿದೆ. ಇದನ್ನು ನಿಭಾಯಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗೆ ಮುಂದುವರೆದರೆ ಕರ್ನಾಟಕ ಬಂಧಗೆ ಕರೆ ನೀಡುವ ಎಚ್ಚರಿಕೆ ನೀಡಿದರು. ಈ ವೇಳೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನ ವಶಕ್ಕೆ ಪಡೆದರು.
ದಾವಣಗೆರೆ : ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗೋವಿನಕೋವಿ ಗ್ರಾಮದ ಬಳಿ ತುಂಗಭದ್ರಾ ನದಿಯಲ್ಲಿ ಮುಳುಗಿ ಯುವಕ ಸಾವನ್ನಪ್ಪಿದ್ದಾನೆ. ಕಡದಕಟ್ಟೆ ಗ್ರಾಮದ ನಿವಾಸಿ ಕಾರ್ತಿಕ್ (23) ಮೃತ ದುರದೇವಿ ಎಂದು ತಿಳಿದುಬಂದಿದೆ. ಯುಗಾದಿ ಬಳಿಕ ಪುಣ್ಯ ಕ್ಷೇತ್ರದಲ್ಲಿ ಕಾರ್ತಿಕ್ ಜಾತ್ರೆಗೆ ಹೋಗಿದ್ದ. ಗೋವಿನಕೋವಿ ಗ್ರಾಮದ ಬಳಿ ಇರುವ ಗೆಡ್ಡೆ ರಾಮೇಶ್ವರ ಪುಣ್ಯಕ್ಷೇತ್ರಕ್ಕೆ ಹೋಗಿದ್ದ ಈ ವೇಳೆ ನದಿಯಲ್ಲಿ ಸ್ನಾನಕ್ಕೆ ಎಂದು ಇಳಿದಾಗ ನೀರಿನಲ್ಲಿ ಮುಳುಗಿ ಕಾರ್ತಿಕ್ ಸಾವನಪ್ಪಿದ್ದಾನೆ. ನದಿಯಿಂದ ಕಾರ್ತಿಕ್ ಮೃತದೇಹವನ್ನ ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಒಂದು ಪಾರ್ಟಿಯಾಗಿದೆ 9 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಹತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ಶೇಖರಪ್ಪ (59) ಎಂಬವರು ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ಇರಾನ್ ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಇದರ ಪರಿಣಾಮ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಮೇಲು ಬೀರಿದೆ. ಇದೀಗ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಾರಿಗೆ ನಿಗಮಗಳಿಂದ ಬಲ್ಕ್ ನಲ್ಲಿ ಡೀಸೆಲ್ ಖರೀದಿ ಮಾಡುತ್ತಿದ್ದೇವೆ. ಆದರೆ ಟಿಕೆಟ್ ದರ ಜಾಸ್ತಿ ಮಾಡುವುದಿಲ್ಲ ಯುದ್ಧದ ಪರಿಣಾಮದಿಂದ ಬಲ್ಕ್ ನಲ್ಲಿ ಡೀಸೆಲ್ ದರ ಏರಿಕೆಯಾಗಿದೆ. ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದು ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬೆಳಗಾವಿಯಲ್ಲಿ ವೃದ್ಧ ಉದ್ಯಮಿಗೆ 15 ಕೋಟಿ ಸೈಬರ್ ವಂಚನೆ ಎಸಗಲಾಗಿದೆ. ಹಿರಿಯ ನಾಗರಿಕರನ್ನೇ ಟಾರ್ಗೆಟ್ ಮಾಡಿ ಸೈಬರ್ ವಂಚಕರು ವಂಚನೆ ಎಸಿಗುತ್ತಿದ್ದಾರೆ. ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಇದೀಗ ವೃದ್ಧ ಉದ್ಯಮಿ ಕೋಟ್ಯಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ. ವೃದ್ಧ ಉದ್ಯಮಿಗೆ ವಿಡಿಯೋ ಕಾಲ್ ಮಾಡಿ ಸೈಬರ್ ವಂಚಕರು ಬೆದರಿಸಿದ್ದಾರೆ. ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಲಿಸ್ಟ್ ನಲ್ಲಿ ಇದೆ ನೀವು ಮನೆ ಲಾಂಡ್ರಿಂಗ್ ಮಾಡುತ್ತಿದ್ದೀರಿ ಎಂದು ವೃದ್ಧ ಉದ್ಯಮಿಗೆ ಬೆದರಿಕೆ ಹಾಕಿದ್ದಾರೆ. ಬೇರೆ ಖಾತೆಗೆ ಹಣ ವರ್ಗಾಯಿಸಿ ಎಂದು ಅಕೌಂಟ್ ನಂಬರ್ ಕೊಟ್ಟಿದ್ದಾರೆ. ತನಿಖೆ ಮುಗಿದ ಬಳಿಕ ನಿಮ್ಮ ಹಣ ನಿಮಗೆ ವಾಪಸ್ ಕೊಡುತ್ತೇವೆ ಎಂದು ನಂಬಿಸಿದ್ದಾರೆ. ಈ ವೇಳೆ ಹಂತ ಹಂತವಾಗಿ 15 ಕೋಟಿ ಹಣ ಸೈಬರ್ ವಂಚಕರು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಬಳಿಕ ಸಂಪರ್ಕಕ್ಕೆ ಸಿಗದೇ ಇದ್ದಾಗ ಅನುಮಾನಗೊಂಡು ವೃದ್ಧ ಉದ್ಯಮಿ ಬೆಳಗಾವಿ ನಗರದ ಸೆನ್ ಠಾಣೆಗೆ ದೂರು ನೀಡಿದ್ದಾರೆ. ಮಾರ್ಚ್ 18ರಂದು ಈ ಒಂದು ಘಟನೆ ನಡೆದಿದ್ದು,…
ಬೆಂಗಳೂರು : 2026 ಐಪಿಎಲ್ ಹಬ್ಬಕ್ಕೆ ಇದೀಗ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಂದು ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಆರ್ಸಿಬಿ ಹಾಗೂ ಹೈದರಾಬಾದ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಕಳೆದ ವರ್ಷ ಕಾಲ್ತುಳಿತ ಘಟನೆ ಸಂಭವಿಸಿದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇದುವರೆಗೂ ಯಾವುದೇ ಪಂದ್ಯ ನಡೆಸಿಲ್ಲ. ಆ ಒಂದು ಘಟನೆ ಆದ ಬಳಿಕ ಫ್ರಾಂಚೈಸಿ ಎಚ್ಚೆತ್ತುಕೊಂಡಿದ್ದು, 35,000 ಸೀಟ್ ಸಾಮರ್ಥವಿದ್ದರೂ ಬಫರ್ ಜೋನ್ ನಿಗದಿ ಮಾಡಲಾಗಿದೆ. ಜನದಟ್ಟಣೆ ಪತ್ತೆಗೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಳಕೆ ಮಾಡಲಾಗುತ್ತಿದೆ. ಜನದಟ್ಟಣೆ ಕಂಡ ಕೂಡಲೇ ಬೋರ್ಡಿಂಗ್ ಪ್ರದೇಶ ಬಂದ್ ಮಾಡಲಾಗುತ್ತದೆ. ತುರ್ತು ಚಿಕಿತ್ಸೆಗೆ ಸ್ಟೇಡಿಯಂ ಬಳಿ 8 ಆಂಬುಲೆನ್ಸ್ ಲಭ್ಯವಿರುತ್ತದೆ. 25,000 ಜನರಿಗೆ ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ಆಂಬುಲೆನ್ಸ್ ಇರಲಿದೆ. 35 ಸೀಟ್ ಸಾಮರ್ಥ್ಯ ಇದ್ದರೂ ಕೂಡ 28,000 ಪ್ರೇಕ್ಷಕರಿಗೆ ಮಾತ್ರ ಅವಕಾಶ ಇರಲಿದೆ.
ದಾವಣಗೆರೆ : ಇಂದು ದೇಶದಾದ್ಯಂತ ರಂಜಾನ್ ಹಬ್ಬ ಆಚರಣೆ ಮಾಡುತ್ತಿದ್ದು ಆದರೆ ದಾವಣಗೆರೆಯಲ್ಲಿ ರಂಜಾನ್ ಹಿನ್ನೆಲೆಯಲ್ಲಿ ನಮಾಜ್ ಮಾಡುವ ಸಂದರ್ಭದಲ್ಲಿ ಏಕಾಏಕಿ ಹೆಜ್ಜೆನು ದಾಳಿ ನಡೆಸಿವೆ. ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೆನೂ ದಾಳಿ ಮಾಡಿದ್ದು, ಘಟನೆಯಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ನಮಾಜ್ ಮಾಡುವ ವೇಳೆ ಯುವಕರು ಹೆಜ್ಜೆನುಗೂಡಿಗೆ ಕಲ್ಲು ಎಸೆದಿದ್ದಾರೆ. ತಕ್ಷಣ ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.














