Subscribe to Updates
Get the latest creative news from FooBar about art, design and business.
Author: kannadanewsnow05
BIG NEWS : ತಿನ್ನುವ ಬ್ರೆಡ್ ನಲ್ಲಿ 65 ಲಕ್ಷ ಮೌಲ್ಯದ ಡ್ರಗ್ ಸಾಗಾಟ : ಬೆಂಗಳೂರಲ್ಲಿ ನೈಜೀರಿಯಾ ಮೂಲದ ಮಹಿಳೆ ಅರೆಸ್ಟ್
ಬೆಂಗಳೂರು : ಹೊಸ ವರ್ಷ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಡ್ರಗ್ಸ್ ಪೆಡ್ಲರ್ಸ್ ವಿರುದ್ಧ ಸಮರ ಸಾರಿದ್ದಾರೆ. ಬ್ರೆಡ್ ಪ್ಯಾಕೆಟ್ನಲ್ಲಿ ಡ್ರಗ್ಸ್ ಅವಿತಿಟ್ಟು ಮುಂಬೈನಿಂದ ಬೆಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಯುವತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, 1.20 ಕೋಟಿ ರೂ ಮೌಲ್ಯದ ಕೊಕೇನ್ ವಶಕ್ಕೆ ಪಡೆದಿದ್ದಾರೆ. ನೈಜೀರಿಯಾ ಮೂಲದ ಒಲಾಜಿಡೆ ಎಸ್ತಾರ್ ಬಂಧಿತ ವಿದೇಶಿ ಪ್ರಜೆ. ಈಕೆಯಿಂದ 1.20 ಕೋಟಿ ಮೌಲ್ಯದ 121 ಗ್ರಾಂ ಕೊಕೇನ್ ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಆರೋಪಿತೆಯ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಕೊಂಡು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ. ಬಂಧಿತ ಆರೋಪಿ ಮುಂಬೈಯಿಂದ ಬೆಂಗಳೂರಿಗೆ ಖಾಸಗಿ ಬಸ್ನಲ್ಲಿ ಕೊಕೇನ್ ಸಾಗಾಟ ಮಾಡುತ್ತಿದ್ದಳು. ಈ ವೇಳೆ ಸಿಸಿಬಿ ಪೊಲೀಸರು ದಾಳಿ ನಡೆಸಿ, 65 ಲಕ್ಷ ರೂ. ಮೌಲ್ಯದ 120 ಗ್ರಾಂ ಕೊಕೇನ್ ವಶಕ್ಕೆ ಪಡೆದಿದ್ದಾರೆ. ಯಾರಿಗೂ ಅನುಮಾನ ಬಾರದಂತೆ ಬ್ರೆಡ್ನ ಒಳಭಾಗದ ಪೀಸ್ ಕಟ್ ಮಾಡಿ, ಅದರೊಳಗೆ ಕೊಕೇಕ್ ಇಟ್ಟು…
BREAKING : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಗುಡ್ ನ್ಯೂಸ್ : ‘ಋತುಚಕ್ರ’ ರಜೆ ನೀಡಲು ಇಲಾಖೆ ಗ್ರೀನ್ ಸಿಗ್ನಲ್
ಬೆಂಗಳೂರು : ರಾಜ್ಯದ ಸಾರಿಗೆ ನಿಗಮದ ಮಹಿಳಾ ನೌಕರರಿಗೆ ಇದೀಗ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಋತುಚಕ್ರ ರಜೆ ನೀಡಲು ಸಾರಿಗೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಹೌದು ಈ ಬಗ್ಗೆ ಕೆ ಎಸ್ ಆರ್ ಟಿ ಸಿ ಎಂಡಿ ಅಕ್ರಂಪಾಶ ಆದೇಶ ಹೊರಡಿಸಿದ್ದಾರೆ. ಜನವರಿ 1 ರಿಂದ ಮಹಿಳಾ ಡ್ರೈವರ್, ಕಂಡಕ್ಟರ್ ಹಾಗು ಮಹಿಳಾ ಸಿಬ್ಬಂದಿಗಳು ಋತುಚಕ್ರ ರಜೆಯನ್ನು ಪಡೆಯಬಹುದಾಗಿದೆ. ಸರ್ಕಾರಿ ಮಹಿಳೆಯರಿಗೆ ಋತುಚಕ್ರ ರಜೆ ನೀಡುವ ಕುರಿತು ಈಗಾಗಲೇ ಹಲವು ಬಾರಿ ಚರ್ಚೆಯಾಗಿದ್ದು ಇದೀಗ ಸಾರಿಗೆ ಇಲಾಖೆ ಮಹಿಳಾ ನೌಕರರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮನೋಸ್ಥ್ಯರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ. ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ…
ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಇದೀಗ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಈಗಾಗಲೇ CID ಪೊಲೀಸರು 3 ವಿಶೇಷ ತಂಡ ರಚನೆ ಮಾಡಿ ಬಲೆ ಬೀಸಿದ್ದಾರೆ. ಇದರ ಮಧ್ಯ ಬೆರತಿ ಬಸವರಾಜ್ ಅವರು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಭೈರತಿ ಬಸವರಾಜ್ ಇದೀಗ ಅರೆಸ್ಟ್ ಆಗುವ ಸಾಧ್ಯತೆ ಇದೆ.
ಬೆಂಗಳೂರು : ಬೆಂಗಳೂರಲ್ಲಿ ವಿಚಾರಣೆಗೆ ಎಂದು ಬಂದಿದ್ದ ರೌಡಿಶೀಟರ್ ಗೆ ಕೋರ್ಟ್ ಅವರಣದಲ್ಲೇ ಲಾಂಗ್ ತೋರಿಸಿ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ನಡೆದಿದೆ. ರೌಡಿಶೀಟರ್ ಜಾಲಮಂಗಲ ಅಭಿ ಎಂಬಾತನಿಂದ ಬೆದರಿಕೆ ಹಾಕಲಗಿದ್ದು, ಹಾರೋಹಳ್ಳಿ ಮೂಲದ ಉದಯ್ ಗೆ ರೌಡಿಶೀಟರ್ ಬೆದರಿಕೆ ಹಾಕಿದ್ದಾನೆ. ಅಭಿ ಹಾಗು ಅಭಿಷೇಕ್ ಎಂಬುವವರ ಬಂಧನವಾಗಿದ್ದು, ಕಾರು ಜಪ್ತಿ ಮಾಡಿಕೊಳ್ಳಲಾಗಿದೆ. ರಾಮನಗರದ ಐಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇಂದು ಪತ್ನಿ ವಿಜಯಲಕ್ಷ್ಮಿ ಹಾಗು ಸಹೋದರ ದಿನಕರ ತೂಗುದೀಪ ಜೈಲಿಗೆ ಭೇಟಿ ನೀಡಿದರು. ಹೌದು ಜೈಲಿಗೆ ಇಂದು ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ತೂಗುದೀಪ್ ನಟ ದರ್ಶನ್ ಅವರನ್ನು ಭೇಟಿಯಾದರು, ಈ ವೇಳೆ ಹೊರಗಡೆ ನಡೆಯುತ್ತಿರುವ ಸ್ಟಾರ್ ವಾರ್ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಗೆ ಮಾಹಿತಿ ನೀಡಿದ್ದಾರೆ. ಅಲ್ಲದೆ ಡೆವಿಲ್ ಸಿನಿಮಾದ ಬಗ್ಗೆ ಕೂಡ ದರ್ಶನ್ಗೆ ವಿಜಯಲಕ್ಷ್ಮಿ ಮಾಹಿತಿ ನೀಡಿದ್ದಾರೆ ಸುಮಾರು ಅರ್ಧ ಗಂಟೆ ಬದಿಯ ಜೊತೆ ವಿಜಯಲಕ್ಷ್ಮಿ ಚರ್ಚಿಸಿ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ವಿಜಯಲಕ್ಷ್ಮಿ ಮಧ್ಯ ವಾರ್! ಕಿಚ್ಚ ಸುದೀಪ್ ಮತ್ತು ವಿಜಯಲಕ್ಷ್ಮೀ ನಡುವಿನ ವಿವಾದ ತಾರಕಕ್ಕೇರಿದೆ. ದರ್ಶನ್ ಅಭಿಮಾನಿಗಳನ್ನು ಗುರಿಯಾಗಿಸಿ ಸುದೀಪ್ ಹೇಳಿಕೆ ನೀಡಿದ್ದಾರೆಂದು ಭಾವಿಸಿದ ವಿಜಯಲಕ್ಷ್ಮೀ ತಿರುಗೇಟು ನೀಡಿದ್ದರು. ದರ್ಶನ್ ಜೈಲಿನಲ್ಲಿರುವಾಗ ಅವರ ಪರ ವಿಜಯಲಕ್ಷ್ಮೀ ಧ್ವನಿ ಎತ್ತಿದ್ದಾರೆ. ದರ್ಶನ್ ಜೈಲಿನಲ್ಲಿರೋ ಈ ಸಂದರ್ಭದಲ್ಲಿ ಅವರು…
ಬೆಂಗಳೂರು : ರಾಜ್ಯದಲ್ಲಿ ಸೈಬರ್ ವಂಚಕರ ಕಾಟಕ್ಕೆ ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮ ಕೈಗೊಂಡರು ಸಹ ಸೈಬರ್ ವಂಚಕರ ಹಾವಳಿ ಮುಂದುವರೆದಿದೆ. ಇದಿಗ ಸೈಬರ್ ಕಳ್ಳರು ಸಲೀಂ ಅಹಮದ್ ವಾಟ್ಸಪ್ ಹ್ಯಾಕ್ ಮಾಡಿದ್ದಾರೆ. ಹೌದು ಸರ್ಕಾರಿ ಮುಖ್ಯ ಸಚೇತಕ ಹಾಗೂ ಎಂಎಲ್ಸಿ ಆಗಿರುವಂತಹ ಸಲಿ ಮಹಮ್ಮದ್ ಅವರ ವಾಟ್ಸಪ್ ಹ್ಯಾಗಿದ್ದು ಬೆಳಿಗ್ಗೆ ಕೋರಿಯರ್ ಹೆಸರಿನಲ್ಲಿ ಖದೀಮರು ಕರೆ ಮಾಡಿದ್ದಾರೆ ವಾಟ್ಸಪ್ ಹ್ಯಾಕ್ ಆಗುತ್ತಿದ್ದಂತೆ ಸಲೀಂ ಅಹಮದ್ ಅವರು ಎಚ್ಚೆತ್ತುಕೊಂಡಿದ್ದಾರೆ. ತಕ್ಷಣ ಪೊಲೀಸ್ ಠಾಣೆಗೆ ಸಲಿಂ ಅಹ್ಮದ್ ದೂರು ನೀಡಿದ್ದಾರೆ. ವಾಟ್ಸಪ್ ಹ್ಯಾಕ್ ಆಗಿರುವ ಕುರಿತು ಸಲೀಂ ಅಹ್ಮದ್ ಪೋಸ್ಟ್ ಸಹ ಮಾಡಿದ್ದಾರೆ.
ಹಾಸನ : ಹಾಸನದಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದ್ದು, ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ನಿವೃತ್ತ ಯೋಧ ತಲೆಗೆ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಹೋಬಳಿ ಘಟ್ಟದಹಳ್ಳಿ ಗ್ರಾಮದಲ್ಲಿ ನಡೆದಿದೆ.ಜಿ.ಕೆ.ಕಲ್ಲೇಶ್ (60) ಆತ್ಮಹತ್ಯೆಗೆ ಶರಣಾದ ನಿವೃತ್ತ ಯೋಧ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ಸಕಲೇಶಪುರ ಪೊಲೀಸ್ ಠಾಣೆಗೆ ಕರೆ ಮಾಡಿದ್ದ ಕಲ್ಲೇಶ್ ಅವರು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದರು. ಕೂಡಲೇ ಹಳೇಬೀಡು ಪೊಲೀಸರಿಗೆ ಸಕಲೇಶಪುರ ಪೊಲೀಸರು ಮಾಹಿತಿ ನೀಡಿದ್ದು, ಘಟ್ಟದಹಳ್ಳಿ ಗ್ರಾಮಕ್ಕೆ ಪೊಲೀಸರು ತೆರಳಿದ್ದಾರೆ. ಅಷ್ಟರಲ್ಲಿ ಮನೆಯಲ್ಲಿಯೇ ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಜಿ.ಕೆ.ಕಲ್ಲೇಶ್ ಎರಡು ವಿವಾಹವಾಗಿದ್ದರು. ಕೆಲಸದಿಂದ ನಿವೃತ್ತಿಯಾಗಿ ಬರುವಾಗಲೇ ಪಿಸ್ತೂಲ್ ಮಂಜೂರಾತಿ ಮಾಡಿಸಿಕೊಂಡು ಬಂದಿದ್ದರು. ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಘಟನೆಗೂ ಎರಡು ದಿನ ಮೊದಲು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ನಿ ಬಳಿ ಹೇಳುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು…
ಕೊಡಗು : ಕೊಡಗು ಜಿಲ್ಲೆಯ ಯಲ್ಲಿ ಅರಣ್ಯ ಸಿಬ್ಬಂದಿಯಿಂದಲೇ ಮರಗಳ್ಳತನ ನಡೆದಿದ್ದು, ಕೊಡಗಿನ ಎಡೆವಾರೆ ಮೀಸಲು ಅರಣ್ಯದಲ್ಲಿ 27 ತೇಗದ ಮರಗಳ ಕಳ್ಳತನ ಮಾಡಿದ್ದಾರೆ. RRT ಸಿಬ್ಬಂದಿ ವಿನೋದ್ ಎಂಬಾತನಿಂದ ಮರಗಳ್ಳತನ ನಡೆದಿದೆ. ಸೋಮವಾರಪೇಟೆ ತಾಲೂಕಿನ ಕಾಜೂರು ಬಳಿ ಮರಗಳ್ಳತನ ನಡೆದಿದೆ. ಕತ್ತರಿಸಿದ್ದ 7 ತೇಗದ ಮರ, 1 ಪಿಕಪ್ ವಾಹನ ವಶಕ್ಕೆ ಪಡೆದಿದ್ದಾರೆ. ಈ ಗ್ಯಾಂಗ್ ಮೀಸಲು ಅರಣ್ಯದಲ್ಲಿ 7 ತೇಗದ ಮರ ಕಡಿದು ಉರುಳಿಸಿದ್ದರು. ಗಸ್ತು ಸಂದರ್ಭದಲ್ಲಿ ಅರಣ್ಯ ಸಿಬ್ಬಂದಿಗೆ ಮರಗಳ್ಳತನ ಕಾಣಿಸಿದೆ. ಮರಗಳ್ಳರಿಗಾಗಿ ಕಳೆದ 4 ದಿನಗಳಗಿಂದ ಅರಣ್ಯ ಸಿಬ್ಬಂದಿ ಕಾದು ಕುಳಿತಿತ್ತು. ಡಿಸೆಂಬರ್ 12 ರಂದು ಮಧ್ಯರಾತ್ರಿ ಅರಣ್ಯಕ್ಕೆ ಮರಗಳ್ಳರು ಬಂದಿದ್ದಾರೆ. ಮರಗಳ್ಳರನ್ನು ಹಿಡಿಯುವ ಸಂದರ್ಭದಲ್ಲಿ ಘರ್ದಾಣೆಯಾಗಿತ್ತು. ಗಾಳಿಯಲ್ಲೋ ಅಧಿಕಾರಿ ಚಂದ್ರಶೇಖರ 2 ಸುಟ್ಟು ಗುಂಡು ಹಾರಿಸಿದ್ದರು. ಲೋಡರ್ ಸಂತೋಷ್ ಎಂಬತನನ್ನ ಅರೆಸ್ಟ್ ಮಾಡಿದ್ದು ನಾಲ್ವರು ಪರಾರಿಯಾಗಿದ್ದಾರೆ. ಬಂಧಿತ ಸಂತೋಷನನ್ನ ವಿಚಾರಣೆ ವೇಳೆ ವಿನೋದ್ ಪಾತ್ರ ಬಯಲಾಗಿದೆ. ಮರಗಳ್ಳರಿಗಾಗಿ RRT ಸಿಬ್ಬಂದಿ ವಿನೋದ್ ಸಹಕಾರ ನೀಡುತ್ತಿದ್ದ.…
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆಯನ್ನು ಜನೆವರಿ 5ಕ್ಕೆ ಮುಂದೂಡಿತು. ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಮುಡಾದಿಂದ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಸಿದಂತೆ ತನಿಖೆ ಕೈಕೊಂಡಿರುವ ಲೋಕಾಯುಕ್ತ ಪೊಲೀಸರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೇಸ್ ಡೈರಿ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸುವ ಮೂಲಕ ಕ್ಲೀನ್ ಚಿಟ್ ನೀಡಿತ್ತು. ಇದನ್ನು ಪ್ರಶ್ನಿಸಿ ದೂರುದಾದ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿಇದ್ದ ಕೋರ್ಟ್, ಲೋಕಾಯುಕ್ತ ಪೊಲೀಸರಿಗೆ ಕೇಸ್ ಡೈರಿ ಸಲ್ಲಿಸುವಂತೆ ಸೂಚಿಸಿತ್ತು. ಅಲ್ಲದೇ ಬಿ ರಿಪೋರ್ಟ್ ಬಗ್ಗೆ ವಾದಗಳಿದ್ದರೆ ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣಗೂ ನೋಟಿಸ್ ನೀಡಿತ್ತು.
ಚಿತ್ರದುರ್ಗ : ಕೌಟುಂಬಿಕ ಕಲಹ ಹಿನ್ನೆಲೆ 2 ತಿಂಗಳ ಗರ್ಭಿಣಿ ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪ (25) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಕಾಟಿಹಳ್ಳಿ ಗ್ರಾಮದ ಹರೀಶ್ ನಗರದ ಖಾಸಗಿ ಗಾರ್ಮೆಂಟ್ಸ್ ಕಾರ್ಮಿಕನಾಗಿದ್ದ. ಈ ವೇಳೆ ಈ ಗಾರ್ಮೆಂಟ್ಸ್ಗೆ ತೆರಳ್ತಿದ್ದ ಪುಷ್ಪ ಹಾಗೂ ಹರೀಶ್ ಮಧ್ಯೆ ಪ್ರೇಮಾಂಕುರವಾಗಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದ್ರೆ ಅನ್ಯಜಾತಿ ಎಂಬ ಕಾರಣಕ್ಕೆ ಹರೀಶ್ ಹಾಗೂ ಪುಷ್ಪ ಪೋಷಕರ ಮಧ್ಯೆ ತಾರತಮ್ಯ ಭಾವವಿದ್ದು, ಹರೀಶ್ ಮನೆಗೆ ಪುಷ್ಪ ಪೋಷಕರಿಗೆ ಎಂಟ್ರಿ ಇರಲಿಲ್ಲ. ಆದರೂ ಎದೆಗುಂದದೇ ಪತಿಯೇ ಪರದೈವ ಎಂದು ನಂಬಿ ಸತತ ಎರಡು ವರ್ಷಗಳಿಂದ ಅನ್ಯೋನ್ಯವಾಗಿದ್ದ ಪುಷ್ಪ ಹಾಗೂ ಹರೀಶ್ಗೆ ಒಂದೂವರೆ ವರ್ಷದ ಒಂದು ಮದ್ದಾದ ಗಂಡು ಮಗುವಿದೆ. ಈ ಮದ್ಯೆ, ಸಣ್ಣಪುಟ್ಟ ವಿಚಾರಕ್ಕೆ ಪದೇ ಪದೇ ಕೌಟಂಬಿಕ ಕಲಹ ಶುರುವಾಗಿದ್ದು, ಪರಸ್ಪರ ವಿಚ್ಛೇದನ ಪಡೆಯುವ ಮಟ್ಟಕ್ಕೆ ತಿರುಗಿತ್ತು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆಯಷ್ಟೇ ದಂಪತಿ ಪೊಲೀಸ್…














