Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ತಡರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಇಲ್ಲಿನ ಜಗತ್‌ಪುರ (ಜಕತಪುರ) ಕೈಗಾರಿಕಾ ಪ್ರದೇಶದಲ್ಲಿರುವ ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಜೀವವಾಗಿ ದಹನಗೊಂಡಿದ್ದಾರೆ. ಘಟನೆಯಲ್ಲಿ ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದು, ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿ: ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರ್ಖಾನೆಯಲ್ಲಿ ಎಂದಿನಂತೆ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಹಠಾತ್ತನೆ ಕಿಡಿ ಹೊತ್ತಿಕೊಂಡಿದೆ. ಪಟಾಕಿ ತಯಾರಿಕೆಗೆ ಬಳಸುವ ಸ್ಫೋಟಕ ರಾಸಾಯನಿಕಗಳು ಕಾರ್ಖಾನೆಯಲ್ಲಿದ್ದಿದ್ದರಿಂದ, ಬೆಂಕಿ ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿತು. ಸಿಲಿಂಡರ್‌ಗಳು ಮತ್ತು ಪಟಾಕಿಗಳು ದೊಡ್ಡ ಶಬ್ದದೊಂದಿಗೆ ಸರಣಿ ಸ್ಫೋಟಗೊಳ್ಳಲು ಪ್ರಾರಂಭಿಸಿದವು. ಇದರಿಂದಾಗಿ ಕಾರ್ಖಾನೆಯ ಒಳಗಿದ್ದ ಕಾರ್ಮಿಕರಿಗೆ ಹೊರಬರಲು ದಾರಿಯೇ ಇಲ್ಲದಂತಾಯಿತು. ಮೂವರ ಸಾವು, ಹಲವರ ಸ್ಥಿತಿ ಗಂಭೀರ: ಈ ದುರದೃಷ್ಟಕರ ಘಟನೆಯಲ್ಲಿ ಕಾರ್ಖಾನೆಯ ಒಳಗಡೆ ಸಿಲುಕಿದ್ದ ಮೂವರು ಕಾರ್ಮಿಕರು ತೀವ್ರವಾದ ಬೆಂಕಿಯ ಜ್ವಾಲೆಗೆ ಸಿಲುಕಿ ಸಜೀವವಾಗಿ ದಹನಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಹಲವು ಕಾರ್ಮಿಕರನ್ನು…

Read More

ಮಂಗಳೂರಿನಲ್ಲಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 2.77 ಕೋಟಿ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇದೀಗ ದೊಡ್ಡ ರಾಜಕೀಯ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಿಯಾಗಿರುವ ಮಂಗಳೂರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಜಾಮ್‌ನನ್ನು ಪಕ್ಷದ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ಈ ಕಠಿಣ ಕ್ರಮ ಕೈಗೊಂಡಿದ್ದು, ನಿಜಾಮ್‌ಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಕೊಕ್ ನೀಡಿದೆ. ಈ ಇಡೀ ಹಗರಣದ ಬೇರುಗಳು ಆರಂಭವಾಗುವುದು ಬ್ಲಾಕ್‌ಮೇಲ್ ತಂತ್ರದಿಂದ. ಮೊದಲಿಗೆ ಜಿತೇಶ್ ಎಂಬಾತ ಉದ್ಯಮಿಯ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಲು ಆರಂಭಿಸಿದ್ದ. “ನೀನು ಕೇಳಿದಷ್ಟು ಹಣ ನೀಡದಿದ್ದರೆ ಈ ವಿಡಿಯೋಗಳನ್ನು ನಿನ್ನ ಪತ್ನಿಗೆ ತೋರಿಸುತ್ತೇನೆ” ಎಂದು ಹೆದರಿಸಿ, ಆರಂಭದಲ್ಲಿ 35 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಎನ್ನಲಾಗಿದೆ. ಸಮಾಜದಲ್ಲಿ ತನ್ನ ಮರ್ಯಾದೆ ಎಲ್ಲಿ ಹರಾಜಾಗುತ್ತದೆಯೋ ಎಂಬ ಭಯದಿಂದ ಉದ್ಯಮಿ ಜಿತೇಶ್ ಕೇಳಿದ ಹಣವನ್ನು ನೀಡಿದ್ದಾರೆ. ಆದರೆ, ಜಿತೇಶ್‌ನ ಹಣದ ದಾಹ ಅಷ್ಟಕ್ಕೇ ನಿಲ್ಲಲಿಲ್ಲ. ಆತ ಮತ್ತೆ ಮತ್ತೆ ಹಣಕ್ಕಾಗಿ ಪೀಡಿಸಲು…

Read More

ಬೆಂಗಳೂರು : ಬಳ್ಳಾರಿ ಜಿಲ್ಲೆಯ ಸಂಡೂರು ಸಂಸ್ಥಾನದ ರಾಜವಂಶಸ್ಥ ಹಾಗೂ ಮಾಜಿ ಸಚಿವ ದಿವಂಗತ ಎಮ್. ವೈ. ಘೋರ್ಪಡೆ ಅವರ ಪುತ್ರ ಕಾರ್ತಿಕೇಯ ಘೋರ್ಪಡೆ (63) ಅವರು ಇಂದು ಮುಂಜಾನೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 6 ಗಂಟೆಯ ವೇಳೆಗೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ರಾಜಮನೆತನದ ಪ್ರಮುಖರ ಅಗಲಿಕೆಗೆ ಸಂಡೂರು ಹಾಗೂ ಬಳ್ಳಾರಿ ಜಿಲ್ಲೆಯಾದ್ಯಂತ ತೀವ್ರ ಕಂಬನಿ ವ್ಯಕ್ತವಾಗಿದೆ. ರಾಜವಂಶದ ಹಿನ್ನೆಲೆ ಮತ್ತು ಪರಂಪರೆ: ಮೃತ ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ಅತ್ಯಂತ ಗೌರವಾನ್ವಿತ ರಾಜಮನೆತನಕ್ಕೆ ಸೇರಿದವರಾಗಿದ್ದಾರೆ. ಇವರ ತಂದೆ ಎಮ್. ವೈ. ಘೋರ್ಪಡೆ ಅವರು ಕರ್ನಾಟಕ ರಾಜಕಾರಣದಲ್ಲಿ ಧೀಮಂತ ನಾಯಕರಾಗಿ, ರಾಜ್ಯದ ಹಣಕಾಸು ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಸುದೀರ್ಘ ಸೇವೆ ಸಲ್ಲಿಸಿದವರು. ತಂದೆಯವರಂತೆಯೇ ಕಾರ್ತಿಕೇಯ ಘೋರ್ಪಡೆ ಅವರು ಕೂಡ ಸಂಡೂರು ಭಾಗದಲ್ಲಿ ಅತ್ಯಂತ ಸರಳ ಸಜ್ಜನಿಕೆಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ರಾಜವಂಶದ ಸಾಂಸ್ಕೃತಿಕ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದಾ ಮುನ್ನೆಲೆಯಲ್ಲಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ನಡುವಿನ ರಾಜಕೀಯ ವಾಕ್ಸಮರ ಈಗ ಮತ್ತೊಂದು ರೋಚಕ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಅವರು ಹಿರಿಯ ನಾಯಕರನ್ನು ಭೇಟಿಯಾಗಿ ಸಲಹೆ ಪಡೆಯುತ್ತಿರುವ ನಡೆಗೆ ಹೆಚ್.ಡಿ. ಕುಮಾರಸ್ವಾಮಿ ಅವರು ತೀಕ್ಷ್ಣ ಹಾಗೂ ವ್ಯಂಗ್ಯಭರಿತ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ಪಕ್ಷಾತೀತವಾಗಿ ಎಲ್ಲ ಪ್ರಮುಖ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ಹಿರಿಯ ನಾಯಕರ ಮನೆಗೆ ಖುದ್ದಾಗಿ ತೆರಳಿ, ಸರ್ಕಾರದ ಸುಗಮ ಆಡಳಿತಕ್ಕಾಗಿ “ನನಗೆ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿ” ಎಂದು ಮನವಿ ಮಾಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅವಕಾಶ ನೀಡಿದರೆ ಅವರನ್ನೂ ಭೇಟಿಯಾಗಿ ಚರ್ಚಿಸಲು ಸಿದ್ಧ ಎಂದು ಡಿಕೆಶಿ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಅವರ ಈ ‘ಸೌಜನ್ಯದ ನಡೆ’ಗೆ ಹೆಚ್.ಡಿ. ಕುಮಾರಸ್ವಾಮಿ…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಸರಣಿ ಎಂಬಂತೆ ಸ್ಫೋಟಕ ವಸ್ತುಗಳು ಪತ್ತೆಯಾಗುತ್ತಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯ ಮಾರ್ಗದಲ್ಲಿ ಸ್ಫೋಟಕ ಪತ್ತೆಯಾಗಿದ್ದ ಘಟನೆಯ ಬೆನ್ನಲ್ಲೇ, ಇದೀಗ ನಗರದ ಹೊರವಲಯದಲ್ಲಿ ಮತ್ತೊಮ್ಮೆ ಭಾರಿ ಪ್ರಮಾಣದ ಜಿಲೇಟಿನ್ ಕಡ್ಡಿ ಹಾಗೂ ಡಿಟೋನೇಟರ್‌ಗಳು ಸಿಕ್ಕಿಬಿದ್ದಿರುವುದು ಭದ್ರತಾ ವಿಭಾಗವನ್ನು ಜಾಗೃತಗೊಳಿಸಿದೆ. ಅವಲಹಳ್ಳಿ ಸಮೀಪ ಸಾರ್ವಜನಿಕರ ದೂರು, ಪೊಲೀಸರ ದಾಳಿ ಬೆಂಗಳೂರಿನ ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡು ಅಗ್ರಹಾರದ ಬಳಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ವಸ್ತುಗಳನ್ನು ಸಂಗ್ರಹಿಸಿಡಲಾಗಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತಂಡ ಸ್ಥಳಕ್ಕೆ ಧಾವಿಸಿ ಜಂಟಿ ಕಾರ್ಯಾಚರಣೆ ನಡೆಸಿದೆ. 50 ಡಿಟೋನೇಟರ್, 225 ಜಿಲೇಟಿನ್ ಕಡ್ಡಿಗಳು ವಶಕ್ಕೆ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ತಪಾಸಣೆ ನಡೆಸಿದಾಗ ಭಾರಿ ಪ್ರಮಾಣದ ಸ್ಫೋಟಕ…

Read More

ಬೆಳಗಾವಿ: ಸಾರ್ವಜನಿಕರಿಗೆ ಕೋಟ್ಯಂತರ ರೂಪಾಯಿ ಹಣ ವಂಚಿಸಿದ ಆರೋಪದ ಮೇಲೆ ಈಗಾಗಲೇ ಜೈಲು ಪಾಲಾಗಿರುವ ಬೆಳಗಾವಿಯ ‘ಶಿವಂ ಅಸೋಸಿಯೇಟ್ಸ್’ ಮಾಲೀಕ ಶಿವಾನಂದ ನೀಲಣ್ಣವರ್ ಪ್ರಕರಣ, ಇದೀಗ ಸ್ಯಾಂಡಲ್‌ವುಡ್‌ ಅಂಗಳಕ್ಕೆ ಲಗ್ಗೆ ಇಟ್ಟಿದೆ. ಆರೋಪಿ ಶಿವಾನಂದ ತನ್ನ ಸಂಸ್ಥೆಯ ಪ್ರಚಾರಕ್ಕಾಗಿ ಹೂಡಿಕೆದಾರರ ಕಷ್ಟದ ಹಣವನ್ನು ಬಳಸಿ ಸ್ಟಾರ್ ನಟ-ನಟಿಯರನ್ನು ಕರೆಸಿ ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದೇ ಈಗ ಚಿತ್ರರಂಗದ ಗಣ್ಯರಿಗೆ ತಲೆನೋವಾಗಿ ಪರಿಣಮಿಸಿದೆ. ಈ ಅಕ್ರಮ ಹಣದ ವಹಿವಾಟಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸ್ಯಾಂಡಲ್‌ವುಡ್ ತಾರೆಯರಿಗೆ ನೋಟಿಸ್ ನೀಡಲು ಸಜ್ಜಾಗಿದ್ದಾರೆ. ‘ಬೆಳಗಾವಿ ಹಬ್ಬ’ದ ಹೆಸರಲ್ಲಿ ಅದ್ದೂರಿ ಕಾರ್ಯಕ್ರಮ: ಕಳೆದ ವರ್ಷ ಡಿಸೆಂಬರ್ 27 ರಂದು ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣವರ್ ನೇತೃತ್ವದಲ್ಲಿ ‘ಬೆಳಗಾವಿ ಹಬ್ಬ’ ಎಂಬ ಅದ್ದೂರಿ ಉತ್ಸವವನ್ನು ಆಯೋಜಿಸಲಾಗಿತ್ತು. ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ಹಾಗೂ ಸಿನಿಮಾ ನಟ ಎಂದು ಹೇಳಿಕೊಳ್ಳುವ ಅಭಿಲಾಷ್ ನೇತೃತ್ವದಲ್ಲಿ ಈ ಇಡೀ ಕಾರ್ಯಕ್ರಮ ನಡೆದಿತ್ತು. ಸಾರ್ವಜನಿಕರನ್ನು ಸೆಳೆಯಲು ಹಾಗೂ ತಾನೊಬ್ಬ ದೊಡ್ಡ ಉದ್ಯಮಿ ಎಂದು ಬಿಂಬಿಸಿಕೊಳ್ಳಲು ಆರೋಪಿ ಶಿವಾನಂದ ಈ…

Read More

ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಶವವನ್ನು ಸುಟ್ಟುಹಾಕಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಐದನೇ ವಾರ್ಡ್ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಹೌದು ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ದುಷ್ಕರ್ಮಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ಸಂಗಪ್ಪ ಎಂಬುವವರ ಮೂರನೇ ಮಹಡಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕನಕಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ, ಈ ಒಂದು ಅಪರಿಚಿತ ಮಹಿಳೆ ಶವ ಕುರಿತು ಏಕೆ ಯಾರು ಹೀಗೆಯನ್ನು ಕೊಲೆ ಮಾಡಲು ಕಾರಣವೇನು ಎನ್ನುವುದರ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಗ್ಯಾಂಗ್ ರೇಪ್ ಆಗಿರುವ ಶಂಕೆ ವ್ಯಕ್ತವಾಗಿದ್ದು, 10 ಯುವಕರು ಇದೀಗ ಅರೆಸ್ಟ್ ಆಗಿದ್ದಾರೆ. ಜೂನ್ 3 ರಂದು ಈ ಒಂದು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕಿಡಿಗೇಡಿಗಳು ವಿಡಿಯೋ ಹರಿಬಿಟ್ಟಿದ್ದಾರೆ. ವಿಡಿಯೋ ಹರಿಬಿಟ್ಟವರನ್ನು ಚೆನ್ನಗಿರಿಯ ಬಸವಪಟ್ಟಣ ಪೊಲೀಸ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಘಟನಾ ಸ್ಥಳಕ್ಕೆ ಎಸ್ಪಿ ಎಚ್‌ಟಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ನಡೆಸಿರುವ ಪೊಲೀಸರು ವೈದ್ಯಕೀಯ ವರದಿ ಬಂದ ಬಳಿಕ ಗ್ಯಾಂಗ್ ರೇಪ್ ಬಗ್ಗೆ ಸತ್ಯಾ ಸತ್ಯತೆ ತಿಳಿದು ಬರಲಿದೆ.

Read More

ಬೆಂಗಳೂರು : ಈಗ ಒಳ್ಳೆಯ ಆಡಳಿತ ಕೊಟ್ಟರೆ ಮುಂದೆ ಪಕ್ಷಕ್ಕೆ ಅನುಕೂಲ ಆಗಲಿದೆ. 2028 ರ ಚುನಾವಣೆಗೆ ಈಗಿನ ಒಳ್ಳೆಯ ಆಡಳಿತ ಅನುಕೂಲ ಆಗಲಿದೆ ಅಕಸ್ಮಾತ್ ಒಳ್ಳೆಯ ಆಡಳಿತ ಕೊಡಲಿಲ್ಲ ಅಂದರೆ ರಾಜಕಾರಣಿಗಳ ಭವಿಷ್ಯ ಜನರ ಕೈಯಲ್ಲಿ ಇರುತ್ತದೆ ಎಂದು ಕೆ.ಎನ್ ರಾಜಣ್ಣ ಸಿಎಂ ಡಿಕೆ ಶಿವಕುಮಾರ್ ಗೆ ಸಲಹೆ ಕೊಟ್ಟಿದ್ದರೆ. ಖಾತೆ ಕ್ಯಾತೆಯ ಬಗ್ಗೆ ಮಾರಿ ಸಚಿವ ಕೆ ಎನ್ ರಾಜಣ್ಣ ಕೆಂಡಮಂಡಲವಾಗಿದ್ದು, BDA BMRDA ಇಲ್ಲಾಂದ್ರೆ ಖಾತೆ ಬೇಡ ಅಧಿಕಾರ ವಹಿಸಿಕೊಳ್ಳಲ್ಲ ಅಂತ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಯಾರಿಗೆ ಯಾವ ಕಾಯಿಲೆ ಇದೆಯೋ ಅದಕ್ಕೆ ಏನೇನು ಔಷಧಿಗಳು ಬರುತ್ತವೆಯೋ ನೋಡೋಣ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಡಿಕೆ ಶಿವಕುಮಾರ್ ಗೆ ಸಾಕಷ್ಟು ಸವಾಲಿದೆ ಎನ್ನುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಅವರು ಜಿಬಿಎ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುತ್ತದೆ ಅನುದಾನ ವಿಷಯದಲ್ಲಿ ರಾಜ್ಯಕ್ಕೆ ಮೊದಲಿನಿಂದಲೂ ಅನ್ಯಾಯ ಆಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ಮಾಡಲೇಬೇಕು. ಸ್ಥಳೀಯ ಸಂಸ್ಥೆ ಚುನಾವಣೆ…

Read More

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಪ್ರಸಿದ್ಧ ಉಕ್ಕು ಕಾರ್ಖಾನೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕರಗಿದ ಉಕ್ಕು ಮೈಮೇಲೆ ಬಿದ್ದ ಪರಿಣಾಮ ಎಂಟು ಜನ ಕಾರ್ಮಿಕರು ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯ ಆವರಣದಲ್ಲಿ ಎಂದಿನಂತೆ ಕೆಲಸ ನಡೆಯುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ಇಡೀ ಕೈಗಾರಿಕಾ ಪ್ರದೇಶದಲ್ಲಿ ಪ್ರಸ್ತುತ ಶೋಕದ ವಾತಾವರಣ ನಿರ್ಮಾಣವಾಗಿದೆ. ಕಾರ್ಖಾನೆಯಲ್ಲಿ ಕರಗಿದ ದ್ರವರೂಪದ ಉಕ್ಕನ್ನು ಸಾಗಿಸುತ್ತಿದ್ದ ಬೃಹತ್ ಕ್ರೇನ್‌ನಲ್ಲಿ ದಿಢೀರನೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕ್ರೇನ್‌ನಿಂದ ನಿಯಂತ್ರಣ ತಪ್ಪಿ ಭಾರಿ ಪ್ರಮಾಣದ ಬಿಸಿ ಲೋಹವು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಏಕಾಏಕಿ ಬಿದ್ದಿದೆ. ಇದರ ತೀವ್ರತೆಗೆ ಎಂಟು ಜನ ಕಾರ್ಮಿಕರು ಕ್ಷಣಾರ್ಧದಲ್ಲಿ ಬೂದಿಯಾಗಿದ್ದು, ಘಟನೆಯ ಭೀಕರತೆ ಎಲ್ಲರನ್ನು ನಡುಗಿಸುವಂತಿದೆ. ಹಲವರ ಸ್ಥಿತಿ ಗಂಭೀರ: ಹೆಚ್ಚಾಗುವ ಸಾಧ್ಯತೆ ಇರುವ ಸಾವಿನ ಸಂಖ್ಯೆ ಈ ದುರಂತದಲ್ಲಿ ಕೇವಲ ಸಾವು ಮಾತ್ರವಲ್ಲದೆ, ಹಲವು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ತಕ್ಷಣವೇ ಎಚ್ಚೆತ್ತ ಸಹೋದ್ಯೋಗಿಗಳು ಮತ್ತು…

Read More