Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಜನ ಹೈರಾಣಾಗಿದ್ದಾರೆ. ಇನ್ನು ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದೆ. ಇದೀಗ ರಾಜಧಾನಿ ಬೆಂಗಳೂರಲ್ಲಿ ಇಂದು ಸಂಜೆ ಧಾರಾಕಾರವಾಗಿ ಮಳೆ ಸುರಿಯಿತು. ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರಿ ಮಳೆ ಸುರಿಯುತ್ತಿದೆ. ಈ ವೇಳೆ ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಟ ನಡೆಸಿದ ಘಟನೆ ನಡೆಯಿತು. ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಹಳದಿ ಅಲರ್ಟ್ (Yellow Alert): ಇಂದು (ಏಪ್ರಿಲ್ 29, 2026) ರಾಜ್ಯದ ಸುಮಾರು 25 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಇದರಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಸೇರಿವೆ. ಉತ್ತರ ಕರ್ನಾಟಕ: ಬೆಳಗಾವಿ, ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ (Hailstorm) ಆಗುವ ಸಾಧ್ಯತೆಯಿದೆ. ಇಲ್ಲಿ ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ಇರಲಿದೆ ಎಂದು ಅಂದಾಜಿಸಲಾಗಿದೆ.…
ಮೈಸೂರು : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ದಂಪತಿ ತೆರಳುತ್ತಿದ್ದ ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಪತ್ನಿ ಸಾವನ್ನಪ್ಪಿದ್ದು ಪತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ಫ್ಲೈ ಓವರ್ ಬಳಿ ಅಪಘಾತ ಸಂಭವಿಸಿದೆ. ಪತ್ನಿ ರಾಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ನಾಗೇಂದ್ರಗೆ ಗಂಭೀರವಾದ ಗಾಯಗಳಾಗಿವೆ. ಮದುವೆ ಕಾರ್ಯಕ್ರಮ ಮುಗಿಸಿ ಮೈಸೂರಿಗೆ ದಂಪತಿಗಳು ತೆರಳುತ್ತಿದ್ದರು.ಈ ವೇಳೆ ವೇಗವಾಗಿ ಬಂದಂತಹ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಯಚೂರು : ತಮ್ಮ ತಂದೆಯವರನ್ನು ಹೈಕಮಾಂಡ್ ಸಿಎಂ ಸ್ಥಾನದಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬರುವುದು ಸಹಜ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ರಾಯಚೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಹುಟ್ಟುಹಬ್ಬಕ್ಕೆ ಹೈಕಮಾಂಡ್ನಿಂದ ಗುಡ್ ನ್ಯೂಸ್ ಸಿಗಲಿದೆ ಎಂಬ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು. ಮೇ 15 ರೊಳಗೆ ಸಿಎಂ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ವಿಚಾರವಾಗಿ ನವೆಂಬರ್ನಿಂದಲೂ ಹೇಳುತ್ತಿದ್ದಾರೆ. ನಾನೂ ಅದಕ್ಕೆಲ್ಲ ಉತ್ತರ ಕೊಟ್ಟುಕೊಂಡು ಬರುತ್ತಿದ್ದೇನೆ. ಈ ವಿಚಾರದಲ್ಲಿ ಏನು ಹೇಳಬೇಕೋ ಈಗಾಗಲೇ ಎಲ್ಲಾ ಹೇಳಿ ಆಗಿದೆ. ನಾನು ಈ ವಿಷಯವಾಗಿ ಏನು ಮಾತನಾಡುವುದಿಲ್ಲ. ಏನೇ ಇದ್ದರೂ ಸಿಎಂ ಹಾಗೂ ಹೈಕಮಾಂಡ್ನ್ನೇ ಕೇಳಬೇಕು. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಯ ಮುಖ್ಯಾಂಶಗಳು: ದಲಿತ ಸಿಎಂ ವಿಚಾರ: ಒಂದು ವೇಳೆ ಹೈಕಮಾಂಡ್ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಆ ಸ್ಥಾನಕ್ಕೆ…
ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. * ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ₹1,635 ಕೋಟಿ ವೆಚ್ಚದಲ್ಲಿ 3,662 ಕಾಮಗಾರಿಗಳಿಗೆ ಅನುಮೋದನೆ * 1,650 ಸಮುದಾಯ ಭವನ / ವಾಲ್ಮೀಕಿ ಭವನ/ ಶಾದಿ ಮಹಲ್ಗಳ ನಿರ್ಮಾಣಕ್ಕಾಗಿ ₹822 ಕೋಟಿ ಮಂಜೂರು ; ₹732 ಕೋಟಿ ವ್ಯಯ https://twitter.com/siddaramaiah/status/2049439976819999070?t=CZDwXdmgvspPCHSQTWaCvg&s=19 * ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ ₹249 ಕೋಟಿ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ ₹637 ಕೋಟಿ ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು ₹421 ಕೋಟಿ ವಿತರಣೆ * 26,821 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ / ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿಗೆ ತರಬೇತಿ ನೀಡಲು ₹841 ಕೋಟಿ ವೆಚ್ಚ https://twitter.com/siddaramaiah/status/2049435196844572902?t=g_51JfL-pJ30bjFeySZHXA&s=19 * ಪ.ಜಾತಿ, ಪ.ಪಂಗಡದ ಜನರು ಹೆಚ್ಚಿನ…
ಕೊಪ್ಪಳ : ಕೊಪ್ಪಳದಲ್ಲಿ ಆರ್ಟಿಓ ಕಚೇರಿ ಸಿಬ್ಬಂದಿ ಒಬ್ಬ 21000 ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ವರದಿಯಾಗಿದೆ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ SDA ರಂಜಿತ್ ಬಿದ್ದಿದ್ದಾನೆ. ಶೋರೂಮ್ ಟ್ರೇಡ್ ಲೈಸೆನ್ಸ್ ನೀಡಲು ರಂಜಿತ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ. 21000 ಲಂಚ ಪಡೆಯುವಾಗ SDA ರಂಜಿತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ನಯಿಮ್ ಎಂಬುವವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶೋರೂಮ್ ಓಪನ್ ಮಾಡುವುದಕ್ಕೆ ನಯಿಮ್ ಅರ್ಜಿ ಸಲ್ಲಿಸಿದ್ದ. ಕುಷ್ಟಗಿ, ಕಾರಟಗಿ ಮತ್ತು ಹುಲಿಗಿಯಲ್ಲಿ ಶೋರೂಮ್ ಪರವಾಗಿ ಅರ್ಜಿ ಸಲ್ಲಿಸಿದ್ದ. ರಾಯಚೂರು ಲೋಕಾಯುಕ್ತ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.
ಉಡುಪಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಉಡುಪಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಗೆ ಹಿಂದಿನಿಂದ ಪ್ರವಾಸಿಗರಿದ್ದ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಬೀಚ್ ಬಳಿ ಈ ಒಂದು ಹಬ್ಬದ ಸಂಭವಿಸಿದ್ದು ಪೆಟ್ರೋಲ್ ಟ್ಯಾಂಕರ್ ಗೆ ಪ್ರವಾಸಿಗರಿದ್ದ ಬಸ್ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಕಾರು ಬಿದ್ದ ಪರಿಣಾಮ ಕಾರಿನಲ್ಲಿದ್ದ ತಾಯಿ ಹಾಗು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಮಲ್ಲನಘಟ್ಟ ಬಳಿ ನಡೆದಿದೆ. ಪ್ರಿಯಾಂಕಾ (30) ಹಾಗು ಒಂದೂವರೆ ವರ್ಷದ ಮಗು ವೈಭವ್ ಸಾವನ್ನಪ್ಪಿದ್ದರೆ.ಮೃತರು ದೇವನಹಳ್ಳಿ ನಿವಾಸಿಯಾಗಿದ್ದು, ಧರ್ಮಸ್ಥಳಕ್ಕೆ ಹೋಗಿ ಹಿಂದಿರುಗುವಾಗ ಈ ಅಪಘಾತ ಸಂಭವಿಸಿದೆ. ಗಾಯಳುಗಳಿಗೆ ಚನ್ನರಾಯಪಟ್ಟಣ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸ್ಯಾಂಡಲ್ವುಡ್ ಖ್ಯಾತ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಸಿಹಿ ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ವುಡ್ನ ಜನಪ್ರಿಯ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ದಂಪತಿ ತಮ್ಮ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡುತ್ತಿರುವುದು ಅವರ ಅಭಿಮಾನಿಗಳಲ್ಲಿ ಸಂಭ್ರಮ ತಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿಯನ್ನು ಹಂಚಿಕೊಂಡಿರುವ ದಂಪತಿಗೆ ಎಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿಯುತ್ತಿದೆ. ‘ಬಡವ ರಾಸ್ಕಲ್’ ಮೂಲಕ ಮನೆಮಾತಾಗಿರುವ ಧನಂಜಯ್ ಅವರು ವೈಯಕ್ತಿಕ ಜೀವನದ ಈ ಸುಂದರ ಕ್ಷಣವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವುದು ವಿಶೇಷ.
ರಾಯಚೂರು : ಅಣ್ಣ-ತಮ್ಮಂದಿರ ನಡುವಿನ ಆಸ್ತಿ ವಿವಾದದಲ್ಲಿ ತಮ್ಮನೇ ಅಣ್ಣನ ಮಗನನ್ನು ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದಲ್ಲಿ ಇಂದು ನಡೆದಿದೆ. ಪಿತ್ರಾರ್ಜಿತವಾಗಿ ಹೊಂದಿದ್ದ 4 ಎಕರೆ ಜಮೀನನ್ನು ಹಂಚಿಕೆ ಮಾಡುವ ವಿಚಾರದಲ್ಲಿ ಸಿದ್ದಪ್ಪ ಮತ್ತು ಬಸವರಾಜ್ ಅಣ್ಣತಮ್ಮಂದಿರ ನಡುವೆ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ, ಸಿದ್ದಪ್ಪ ಮನೆಯಲ್ಲಿಲ್ಲದ ವೇಳೆ ತಮ್ಮ ಬಸವರಾಜ್ ಮನೆಗೆ ಬಂದು ಅತ್ತಿಗೆ ಅಮೃತಾ ಅವರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ತಾಯಿಯನ್ನು ರಕ್ಷಿಸಲು ಮುಂದಾದ ಮಗ ನಾಗರಾಜ್ (12) ಮೇಲೆ ಕೂಡ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಲ್ಲೆಯಿಂದಾಗಿ ಅಮೃತಾಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಿಂಧನೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯದ ಜೊತೆಗೆ ಮಗನನ್ನು ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಯ ನಂತರ ಆರೋಪಿ ಬಸವರಾಜ್ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…
BIG NEWS : ಶಿವಮೊಗ್ಗದಲ್ಲಿ NSUI ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ : ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ!
ಶಿವಮೊಗ್ಗ: ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಕಿವಿಗೊಡದ ಕುಲಪತಿಗಳ ಧೋರಣೆ ಖಂಡಿಸಿ ಎನ್ಎಸ್ಯುಐ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ನಡೆಸಿದ ಹೋರಾಟ ಹಿಂಸಾರೂಪಕ್ಕೆ ತಿರುಗಿದೆ. ಕಚೇರಿಯ ಮುಂಭಾಗದ ವಸ್ತುಗಳನ್ನು ಪುಡಿ ಮಾಡಿ ಆಕ್ರೋಶ ಹೊರಹಾಕಲಾಗಿದ್ದು, ವಿವಿ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೌದು ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸಮಸ್ಯೆಗೆ ಸ್ಪಂದಿಸದ ಕುಲಪತಿಗಳ ವಿರುದ್ಧ ಎನ್ಎಸ್ಯುಐ ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕುಲಪತಿಗಳ ಕಚೇರಿ ಆವರಣದಲ್ಲಿದ್ದ ಕುರ್ಚಿ, ಪಾಟ್ ಎಲ್ಲವನ್ನೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪುಡಿ ಪುಡಿ ಮಾಡಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸದ ವಿಸಿಗೆ ಧಿಕ್ಕಾರ ಕೂಗಿ, ಕಚೇರಿಯ ಬೋರ್ಡ್ಗೆ ಕಪ್ಪು ಮಸಿ ಬಳಿದಿದ್ದಾರೆ. 5 ತಿಂಗಳ ಹಿಂದೆ ನಡೆದ ಪರೀಕ್ಷೆಯ ಫಲಿತಾಂಶ ಇನ್ನೂ ಪ್ರಕಟಿಸಿಲ್ಲ. 1, 3 ಹಾಗೂ 5 ನೇ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿಲ್ಲ. ಕಳೆದ 3 ವರ್ಷಗಳಿಂದ ಯಾವುದೇ ಅಂಕಪಟ್ಟಿ ವಿತರಿಸಿಲ್ಲ. ಪಾಸಿಂಗ್ ಸರ್ಟಿಫಿಕೇಟ್ ಹಾಗೂ ಪದವಿ ಪ್ರಮಾಣ ಪತ್ರ…














