Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ನಡೆದ ಆರ್ಸಿಬಿ ಮತ್ತು ಸಿಎಸ್ಕೆ ಪಂದ್ಯಕ್ಕೂ ಮುನ್ನ ಟಿಕೆಟ್ ಬ್ಲಾಕ್ ನಲ್ಲಿ ಮಾರಾಟ ಮಾಡಲಾಗುತ್ತಿತ್ತು. ಬ್ಲಾಕ್ ನಲ್ಲಿ ಟಿಕೆಟ್ ಮಾರಾಟ ಮಾಡುತ್ತಿದ್ದ 7 ಜನರ ವಿರುದ್ಧ ಇದೀಗ ಕೇಸ್ ದಾಖಲಿಸಲಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೋಲಿಸರು 7 ಆರೋಪಿಗಳ ವಿರುದ್ಧ FIR ದಾಖಲಿಸಿದ್ದಾರೆ. ಜಗದೀಶ್, ಸತ್ಯನಾರಾಯಣ, ಹರ್ಷ, ವಿನಯ್, ಶಾಹಿದ್, ಲಿಖಿತ್ ಹಾಗೂ ಪುನೀತ್ ಎಂಬುವರ ವಿರುದ್ಧ ಪೊಲೀಸರು FIR ದಾಖಲು ಮಾಡಿಕೊಂಡಿದ್ದಾರೆ. ಸ್ಟೇಡಿಯಂ ಬಳಿ ಹೆಚ್ಚಿನ ಹಣಕ್ಕೆ ಟಿಕೆಟ್ ಮಾರಾಟ ಮಾಡುತ್ತಿದ್ದರು. ಸಿಸಿಬಿ ಪೊಲೀಸರಿಂದ ಮಾನಿಟರ್ ಮಾಡಲಾಗಿತ್ತು. ಮಾನಿಟರ್ ವೇಳೆ ರೆಡ್ ಹ್ಯಾಂಡ್ ಆಗಿ ಆರೋಪಿಗಳು ಸಿಗಿಬಿದ್ದಿದ್ದಾರೆ. ಬ್ಲಾಕ್ ನಲ್ಲಿ ಟಿಕೆಟ್ ಮಾರಾಟಕ್ಕೆ ಈ ಒಂದು ಗುಂಪು ಯತ್ನಿಸುತ್ತಿತ್ತು. ಸದ್ಯ ಆರೋಪಿಗಳ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಮೂರು FIR ದಾಖಲಾಗಿದೆ.
ಉಡುಪಿ : ರಾಜ್ಯಾದ್ಯಂತ ಗ್ಯಾಸ್ ಸಿಲಿಂಡರ್ ಸಮಸ್ಯೆ ಎದುರಾಗಿದ್ದು ಜನರು ಹಾಗೂ ಆಟೋ ಚಾಲಕರು ಸಿಲಿಂಡರ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗ್ಯಾಸ್ ಸಿಲಿಂಡರ್ otp ಇಂದ ಒಂದು ವೃದ್ಧನ ಜೀವ ಇದೀಗ ಬದುಕಿಸಿದೆ. ಬಾವಿಗೆ ಬಿದ್ದಂತಹ ವೃದ್ಧನನ್ನ ಗ್ಯಾಸ್ ಎಜೇನ್ಸಿ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ. ಉಡುಪಿ ನಗರದ ಕೊಡವುರು ವಾರ್ಡ್ನಲ್ಲಿ ಒಂದು ಘಟನೆ ನಡೆದಿದೆ. ಕೊಡವು ರು ವಾರ್ಡ್ ಕಂಬ್ಳಕಟ್ಟದಲ್ಲಿ ಈ ಒಂದು ಅಪರೂಪದ ಘಟನೆ ನಡೆದಿದೆ. ಹೌದು ಗ್ಯಾಸ್ ಏಜೆನ್ಸಿಯ ಸಿಬ್ಬಂದಿ ಶ್ರೀನಿವಾಸ್ ಆಚಾರ ಎನ್ನುವವರ ಜೀವವನ್ನು ಉಳಿಸಿದ್ದಾರೆ. 15 ರಿಂದ 20 ಅಡಿ ಬಾವಿಯಲ್ಲಿ ಶ್ರೀನಿವಾಸ್ ಆಚಾರಿ ಅವರು ಬಿದ್ದಿರುತ್ತಾರೆ. ಸಿಂಗಲ್ ಸಿಲಿಂಡರ್ ಹೊಂದಿರುವಂತಹ ಶ್ರೀನಿವಾಸ್ ಆಚಾರ್ಯ ಅವರು ನಿರ್ಜನ ಪ್ರದೇಶದ ಮನೆಯಲ್ಲಿ ವಾಸಿಸುತ್ತಾರೆ. ಬಾವಿಗೆ ಹಾಕಿದಂತಹ ಪಂಪ್ ನಲ್ಲಿ ಇರುವ ಕಸ ಕ್ಲೀನಿಂಗ್ ಮಾಡುವ ಪ್ರಯತ್ನ ಮಾಡುತ್ತಾರೆ. ಈ ವೇಳೆ ಬಾವಿಯಲ್ಲಿ ಬೀಳುತ್ತಾರೆ. ಮನೇಲಿ ಒಬ್ಬರೇ ಇರುವುದರಿಂದ ಯಾರೂ ಕೂಡ ಇರುವುದಿಲ್ಲ. ಎಷ್ಟೇ ಕೂಗಿದರು ಸುತ್ತಲೂ…
ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. 16 ಕ್ಕೂ ಅಧಿಕ ಜಿಲ್ಲೆಗಳಿಗೆ ಏಪ್ರಿಲ್ 6 ರಿಂದ 9 ರವರೆಗೂ ವಿವಿಧ ದಿನಗಳಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಏಪ್ರಿಲ್ 8ವರೆಗೂ ರಾಜ್ಯದಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆದೆ. ದಕ್ಷಿಣ ಒಳನಾಡು, ಮಲೆನಾಡು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 8ರ ತನಕ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು, ಬೆಳಗಾವಿ, ಧಾರವಾಡ, ಗದಗ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ ಗೂಡಾಗಿರಿ ನಡೆದಿದೆ. ಕನ್ನಡಿಗರನ್ನು ಹಿಂಬಾಲಿಸಿಕೊಂಡು ಬಂದು, ತಮಿಳು ಗೂಂಡಾಗಳು ಅತ್ತಿಬೆಲೆ ಟೋಲ್ ಬಳಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆ ಸಮೀಪ ಈ ಒಂದು ಘಟನೆ ನಡೆದಿದೆ. ಮಹಿಳೆಯರು ಮಕ್ಕಳ ಎದುರೇ ತಮಿಳುನಾಡಿನ ಗೂಂಡಾಗಳಿಂದ ಕನ್ನಡಿಗರ ಮೇಲೆ ಹಲ್ಲೆ ನಡೆದಿದೆ. ಟೆಂಪೋ ಟ್ರಾವೆಲರ್ ನಲ್ಲಿ ಇದ್ದವರ ಮೇಲೆ ದೊಣ್ಣೆ ಮತ್ತು ಮಾರಕಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ತಮಿಳು ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಟಿಟಿ ವಾಹನದ ಚಾಲಕ ರಾಮಕೃಷ್ಣ ಮೇಲೆ ತಮಿಳು ಗೂಂಡಾಗಳು ಹಲ್ಲೆ ಮಾಡಿದ್ದಾರೆ. ವೈಟ್ಫೀಲ್ಡ್ ನಿಂದ ತಮಿಳುನಾಡಿನ ಕೃಷ್ಣಗಿರಿಗೆ ಚಾಲಕ ಬಾಡಿಗೆಗೆ ಹೋಗಿದ್ದ. ಈ ವೇಳೆ ವಾಹನದಲ್ಲಿ ಇದ್ದಂತಹ ಕನ್ನಡಿಗರ ಜೊತೆಗೆ ಸ್ಥಳೀಯ ತಮಿಳು ಗೂಂಡಾಗಳು ಕಿರಿಕ್ ಮಾಡಿದ್ದಾರೆ. ಟಿಟಿ ವಾಹನದಲ್ಲಿದ್ದ ಕನ್ನಡಿಗರು ಕೃಷ್ಣಗಿರಿ ಸ್ಥಳೀಯರ ನಡುವೆ ಕಿರಿಕ್ ಆಗಿದೆ. ಈ ವೇಳೆ ತಕ್ಷಣ ಅಲ್ಲಿಂದ ತಪ್ಪಿಸಿಕೊಂಡು ಟಿಟಿ ವಾಹನದಲ್ಲಿ…
ಬೆಂಗಳೂರು : ಎಸ್ ಎಸ್ ಎಲ್ ಸಿ ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ತೃತೀಯ ಭಾಷೆ ಹಿಂದಿಗೆ ಅಂಕ ಕಟ್ ಮಾಡಿದಕ್ಕೆ ರಾಜ್ಯಪಾಲರು ಅಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ನಡೆ ಖಂಡಿಸಿ ಕನ್ನಡ ರಕ್ಷಣಾ ವೇದಿಕೆ ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯಪಾಲರೇ ಕರ್ನಾಟಕ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು. ರಾಜ್ಯಪಾಲರಿಂದ ಆಕ್ಷೇಪಣೆ ಪತ್ರ ಬಂದಿದ್ದು, ರಾಜ್ಯಪಾಲರ ನಡೆ ಖಂಡಿಸಿ ಪ್ರತಿಭಟನೆ ನಡೆಸಿದರು. ತೃತೀಯ ಭಾಷೆಯ ಅಂಕ ಕೈಬಿಟ್ಟಿದ್ದಕ್ಕೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. ಇದನ್ನು ಖಂಡಿಸಿ ಇಂದು ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 7 ಅಂದರೆ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಪ್ರಕಟ ಆಗುವ ಫಲಿತಾಂಶವನ್ನು ನೋಡುವುದು ಹೇಗೆ ಎಂಬ ಗೊಂದಲಗಳು ವಿದ್ಯಾರ್ಥಿಗಳಿಗೆ ಇರಬಹುದು. ಅದಕ್ಕೆ ಭಯಬೇಡ, ಇಲ್ಲಿ ನೀಡಿರುವ ಲಿಂಕ್ಗಳನ್ನು ಓಪನ್ ಮಾಡಿ ನೋಡಿದ್ರೆ ಸಾಕು. karresults.nic.in ಮತ್ತು kseab.karnataka.gov.in ಅನ್ನು ಶಿಕ್ಷಣ ಇಲಾಖೆ ನೀಡಿದೆ. ಒಂದು ವೇಳೆ ಈ ಲಿಂಕ್ಗಳಲ್ಲಿ ದೋಷ ಬಂದರೆ, ಇನ್ನು ಆಯ್ಕೆಯನ್ನು ಕೂಡ ನೀಡಲಾಗಿದೆ. PUC ಫಲಿತಾಂಶಗಳನ್ನು ಡಿಜಿಲಾಕರ್ ವೆಬ್ಸೈಟ್ – digilocker.gov.in ನಲ್ಲಿಯೂ ಪರಿಶೀಲಿಸಲು ಅವಕಾಶವನ್ನು ನೀಡಲಾಗಿದೆ. ಇನ್ನು ಪಿಯುಸಿ…
ಮೈಸೂರು : ಪಂಚ ರಾಜ್ಯಗಳ ಚುನಾವಣೆ ಹಾಗೂ ಕರ್ನಾಟಕ ಉಪ ಚುನಾವಣೆ ಗದ್ದಲದಲ್ಲಿ ರಾಜ್ಯದ ನಾಯಕತ್ವ ಬದಲಾವಣೆ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ, ಇದೀಗ ಗೃಹ ಸಚಿವ ಜಿ ಪರಮೇಶ್ವರ್ ನಾಯಕತ್ವ ಬದಲಾವಣೆ ವಿಚಾರವಾಗಿ ಸ್ಫೋಟಕವಾದ ಹೇಳಿಕೆ ನೀಡಿದ್ದು, ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ. ಇದಕ್ಕೆ ಹೈ ಕಮಾಂಡ್ ಸ್ಪಷ್ಟನೆ ಬೇಕಿಲ್ಲ ಎಂದು ತಿಳಿಸಿದ್ದಾರೆ. ಮೈಸೂರಲ್ಲಿ ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಪಕ್ಷದ ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028ರ ವರೆಗೆ ಇದೆ. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್ ಹೇಳಿದರು. 2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು. ಈ ಬಾರಿಯೂ ಪೂರ್ಣಾವಧಿ ಮುಗಿಸಬೇಕು…
ಬೆಂಗಳೂರು : ಬೆಂಗಳೂರು ಏರ್ಪೋರ್ಟ್ ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದು ಕೋರಿದ್ದ ಆರೋಪಿ ಮೊಹಮ್ಮದ್ ಅಫಾನ್ ಅಹಮದ್ ಅರ್ಜಿಯನ್ನು ಹೈಕೋರ್ಟ್ ಇದೀಗ ವಜಾಗೊಳಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಈ ಆದೇಶ ಹೊರಡಿಸಿದೆ. ಶೋಧನೆಯ ನೆಪದಲ್ಲಿ ಅಸಭ್ಯವಾಗಿ ಸ್ಪರ್ಶಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪುರುಷರ ಶೌಚಾಲಯಕ್ಕೆ ಕರೆದೊಯ್ದು ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ದಕ್ಷಿಣ ಕೊರಿಯಾ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಳು. ದಕ್ಷಿಣ ಕೊರಿಯಾ ಗೆ ತೆರಳಲು ಇಮ್ಮಿಗ್ರೇಶನ್ ತಪಾಸಣೆ ಮುಗಿದ ಬಳಿಕ ಆರೋಪಿ ಈ ಕೃತ್ಯ ಎಸಗಿದ್ದಾನೆ. ಈ ಬಗ್ಗೆ ಹೈಕೋರ್ಟ್ ಗರಂ ಆಗಿದೆ. ಮಹಿಳೆಯೊಂದಿಗೆ ಹೀಗೆ ನಡೆದುಕೊಂಡವನನ್ನು ಹಾಗೆ ಬಿಟ್ಟುಬಿಡಬೇಕ? ವಿದೇಶಿ ಮಹಿಳೆ ದೂರಿನಲ್ಲಿ ಈತನ ಕೃತ್ಯವನ್ನು ವಿವರಿಸಿದ್ದಾರೆ. ಪ್ರಕರಣ ರದ್ದು ಸಾಧ್ಯವಿಲ್ಲ ಎಂದು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
BREAKING : ನಾಳೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka PUC Result
ಬೆಂಗಳೂರು : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 7 ಅಂದರೆ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಏಪ್ರಿಲ್ 7, 2026 ರಂದು ಅಂದರೆ ನಾಳೆ ಫಲಿತಾಂಶಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಣೆಯ ಕುರಿತು ಇಲಾಖೆಯು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ.ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 7 ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ. ಇನ್ನು ಪ್ರಕಟ…
ನವದೆಹಲಿ : ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನಿನ ಇಂಧನ ಸೌಲಭ್ಯಗಳ ಮೇಲೆ ದಾಳಿ ಮಾಡಲಾಗುವುದು ಎಂಬ ಡೊನಾಲ್ಡ್ ಟ್ರಂಪ್ ಅವರ ಎಚ್ಚರಿಕೆ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ. 1.4 ರಷ್ಟು ಏರಿಕೆಯಾಗಿ 110.60 ಡಾಲರ್ಗೆ (10,287 ರೂಪಾಯಿ) ಏರಿಕೆ ಕಂಡಿದ್ದರೆ, ಅಮೆರಿಕದ ಕಚ್ಚಾ ತೈಲದ ಬೆಲೆ ಶೇ. 1.8 ರಷ್ಟು ಏರಿಕೆಯಾಗಿ 113.60 (10,568 ರೂಪಾಯಿ) ಡಾಲರ್ಗೆ (US Dollar) ತಲುಪಿದೆ. ಇರಾನಿನ ಶತ್ರು ರಾಷ್ಟ್ರಗಳಿಗೆ ತೈಲ ಪೂರೈಕೆ ಮಾರ್ಗ ಬಂದ್ ಮಾಡಿರುವುದರಿಂದ ಜಾಗತಿಕ ಇಂಧನ ಪೂರೈಕೆ ಮೇಲೆ ಸಾಕಷ್ಟು ಪರಿಣಾಮ ಬೀರಿದೆ.














