Author: kannadanewsnow05

ಮೈಸೂರು : ಭೂ ವ್ಯಾಜ್ಯ ಸಂಬಂಧ ಮೈಸೂರು ಜಿಲ್ಲಾಧಿಕಾರಿಗಳ ಬಂಧನಕ್ಕೆ ಕೋರ್ಟ್ ವಾರಂಟ್​ ಜಾರಿ ಮಾಡಿ ಆದೇಶಿಸಿದೆ. ಹೌದು ಭೂ ವ್ಯಾಜ್ಯದ ಸಂಬಂಧ ಮೈಸೂರಿನ 1ನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ. ಪ್ರಕರಣ ಹಿನ್ನೆಲೆ? ನಗರದ ಕುಂಬಾರ ಕೊಪ್ಪಲಿನ ಸೀತಾರಾಮೇಗೌಡ ಅವರಿಗೆ ಸೇರಿದ್ದ ಹೆಬ್ಬಾಳು ಗ್ರಾಮದ ಸರ್ವೇ ನಂ.155, 159/1 ವ್ಯಾಪ್ತಿಯಲ್ಲಿ ಐದು ಎಕರೆ ಪ್ರದೇಶವನ್ನು 1980 ಸಮಯದಲ್ಲಿ ನಗರ ಭೂ ಮಿತಿ ಕಾಯಿದೆಯಡಿ ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಸೀತಾರಾಮೇಗೌಡ ಅವರ ಮಗ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ಮೈಸೂರಿನ ಒಂದನೇ ಅಪರ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್​ನಲ್ಲಿ ಅರ್ಜಿದಾರರ ಪರವಾಗಿ ಆದೇಶ ಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತವು ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಲಯದ ಮೊರೆ ಹೋಗಿತ್ತು. ಹಿರಿಯ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಿ, ಕೆಳ ನ್ಯಾಯಾಲಯದ…

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಕೇಸ್ ಗೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಆರೋಪಿ ಸಮೀರ್ ನೀಚ ಕೃತ್ಯ ಇದೀಗ ಬಯಲಾಗಿದೆ. ಸಮೀರ್ ಮುಲ್ಲಾ ಮೊಬೈಲ್ ನಲ್ಲಿ ಹಿಂದೂ ಯುವತಿಯರ ಫೋಟೋಗಳು, ಗರ್ಭ ನಿರೋಧಕ ಮಾತ್ರೆಗಳ ಫೋಟೋ, ಸ್ಕಾನಿಂಗ್ ರಿಪೋರ್ಟ್ ಕೂಡ ಪತ್ತೆಯಾಗಿದೆ. ಹುಬ್ಬಳ್ಳಿ ನಗರದ ವಿಜಯನಗರ ನಿವಾಸಿಯಾಗಿರುವ ಸಮೀರ್ ಮತ್ತು ಹಿಂದೂ ಯುವತಿ ಜಿಮ್‌ನಲ್ಲಿ ಪರಿಚಯವಾಗಿತ್ತು. ಬಳಿಕ ಸಮೀರ್ ಯುವತಿಯೊಂದಿಗೆ ಸಲುಗೆ ಬೆಳೆಸಿದ್ದಾನೆ. ಬಳಿಕ ಯುವತಿಯನ್ನು ಮನೆಗೆ ಕರೆಯಿಸಿಕೊಂಡು ಜ್ಯೂಸ್​​ನಲ್ಲಿ ಮತ್ತು ಬರುವ ಔಷಧಿ ಬೆರೆಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ. ಕೆಲ ದಿನ ನಂತರ ಯುವತಿ ಜೊತೆ ಖಾಸಗಿಯಾಗಿ ಕಳೆದ ಕ್ಷಣಗಳಿದ್ದ ವಿಡಿಯೋ ತೋರಿಸಿ ಬೆದರಿಕೆ ಹಾಕಿದ್ದು, ಅನೇಕ ಬಾರಿ ಲೈಂಗಿಕ ಕಿರುಕುಳ ನೀಡಿದ್ದಾನಂತೆ. ಆದರೂ ಇದೆಲ್ಲವನ್ನು ಯುವತಿ ಮನೆಯವರಿಗೆ ಹೇಳಿರಲಿಲ್ಲ. ಆದ್ರೆ ನಿನ್ನೆ (ಏಪ್ರಿಲ್ 02) ಸಂಜೆ ಈ ವಿಚಾರ…

Read More

ಬೆಂಗಳೂರು : ಇಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ಒಂದರಲ್ಲಿ ಕುಸಿದು ಬಿದ್ದು ಅಸ್ವಸ್ಥರಾದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ, ಏಕಾಏಕಿ ಕುಸಿದುಬಿದ್ದಿದ್ದಾರೆ. ಅಸ್ವಸ್ಥರಾಗಿದ್ದ ಸಂತೋಷ ಹೆಗಡೆಯವರನ್ನು ಸ್ವತ ಸ್ಪೀಕರ್ ಯುಟಿ ಖಾದರ್ ಕಾರಿನಲ್ಲಿ ಸ್ಪೀಕರ್ ಅವರು ಜೊತೆಯಲ್ಲಿ ಹೋದರು. ಸದ್ಯ ಮಣಿಪಾಲ ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Read More

ಬೆಂಗಳೂರು : ಬಹುನಿರೀಕ್ಷಿತ ಕಾಗದ ರಹಿತ ವಿಧಾನಮಂಡಲ ಅಧಿವೇಶನ ನಡೆಸುವಾಗಿನ ಇ-ವಿಧಾನ ಯೋಜನೆಯ ಜಾರಿಗೆ ಮೂಹೂರ್ತ ಕೂಡಿ ಬಂದಿದೆ. ದಶಕದಿಂದ ಘೋಷಣೆಯಾಗಿ ಉಳಿದುಕೊಂಡಿದ್ದ ಇ-ವಿಧಾನ ಯೋಜನೆ ಇದೀಗ ಅನುಷ್ಠಾನದ ಘಟ್ಟಕ್ಕೆ ಬಂದಿದೆ. ಕರ್ನಾಟಕ ವಿಧಾನಸಭೆಯನ್ನು ಸಂಪೂರ್ಣವಾಗಿ ಕಾಗದ ರಹಿತ (Paperless) ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಮುಂಬರುವ ಅಧಿವೇಶನದಿಂದಲೇ ಅತ್ಯಾಧುನಿಕ ‘ಇ-ವಿಧಾನ’ ಯೋಜನೆಯನ್ನು ಜಾರಿಗೆ ತರಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ. ಈ ಯೋಜನೆಯಿಂದ ಶಾಸಕರಿಗೆ ಕಲಾಪದ ಮಾಹಿತಿ ತಕ್ಷಣವೇ ಡಿಜಿಟಲ್ ರೂಪದಲ್ಲಿ ಲಭ್ಯವಾಗಲಿದ್ದು, ಪರಿಸರ ಸ್ನೇಹಿ ಆಡಳಿತಕ್ಕೆ ಇದು ಮಾದರಿಯಾಗಲಿದೆ. ಬಹುನಿರೀಕ್ಷಿತ ಕಾಗದ ರಹಿತ ಕಲಾಪಕ್ಕೆ ಅನುವು ಮಾಡುವ ಇ-ವಿಧಾನ ಯೋಜನೆ ಕಾರ್ಯರೂಪಕ್ಕೆ ಬರಲಿದೆ. ಈ ಬಗ್ಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್​​ ಘೋಷಣೆ ಮಾಡಿದ್ದು, ಮುಂದಿನ ಅಧಿವೇಶನವನ್ನು ಕಾಗದ ರಹಿತ ನಡೆಸಲು ಮುಂದಾಗಿದೆ. ಸುಮಾರು 10 ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಐಟಿ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ವಿಧಾನಮಂಡಲ ಕಲಾಪ…

Read More

ಚಿಕ್ಕಬಳ್ಳಾಪುರ : ಮುಂದೆ ಹೋಗುತ್ತಿದ್ದ ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಶೆಟ್ಟಿಗೆರೆ ಕ್ರಾಸ್ ಬಳಿ ಇಂದು ನಡೆದಿದೆ. ರಕ್ಷಿತಾ ರೆಡ್ಡಿ (23), ಪವನ್ ರೆಡ್ಡಿ (30) ಮೃತಪಟ್ಟವರು. ರಾಜಶೇಖರ್ ರೆಡ್ಡಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ರಕ್ಷಿತಾ ರೆಡ್ಡಿ (23) ಮತ್ತು ರಾಜಶೇಖರ್ ರೆಡ್ಡಿ ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ಅಪಘಾತದಲ್ಲಿ ಪತ್ನಿ ಕೊನೆಯುಸಿರೆಳೆದಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿರುವ ರಾಜಶೇಖರ್ ರೆಡ್ಡಿ, ನವೆಂಬರ್ ತಿಂಗಳಲ್ಲಿ ರಕ್ಷಿತಾ ರೆಡ್ಡಿಯನ್ನ ಮದುವೆಯಾಗಿದ್ದರು. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸ್ನೇಹಿತ ಪವನ್ ರೆಡ್ಡಿ ಜೊತೆ ದಂಪತಿ ಹಿಂದೂಪುರದ ಅವಳಗಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಯುವತಿ ಆರೋಪಿ ಸಮೀರ್ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದು, ಸಮೀರ್ ತನ್ನ ಮನೆಗೆ ಕರೆಸಿ ಮತ್ತು ಬರೋ ಜ್ಯೂಸ್ ಕೊಟ್ಟು ರೇಪ್ ಮಾಡಿದ್ದಾನೆ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಯುವತಿ ಸಮೀರ್ ಸಹೋದರಿ ತೈಸಿಮ್ ಮುಲ್ಲಾ ನನ್ನ ಸ್ನೇಹಿತೆ ಆಕೆಯಿಂದ ನನಗೆ ಸಮೀರ್ ಪರಿಚಯ ಆಗಿತ್ತು. ಆತ ಚೆನ್ನಾಗಿ ಜಿಮ್ ಮಾಡಿಸ್ತಾನೆ ಅಂತ ಹೇಳಿದ್ದಳು ಬರ್ತಡೇ ಪಾರ್ಟಿ, ವೀಕೆಂಡ್ ಪಾರ್ಟಿಗೆ ಗೆ ಹೋಗಿದ್ವಿ, ನಮ್ಮ ಬರ್ತ್ಡೇ ಪಾರ್ಟಿಗೆ ಸಮೀರ್ ಸಹ ಬಂದಿದ್ದ ಇದಾದ ಮೇಲೆ ಸಮೀರ್ ನನಗೆ ಆತ್ಮೀಯನಾದ. ಒಂದು ದಿನ ಸಮೀರ್ ತನ್ನ ಮನೆಗೆ ಕರೆದೋಯ್ದಿದ್ದ. ಮತ್ತು ಬರುವ ಜ್ಯೂಸ್ ಕೊಟ್ಟು ನನ್ನ ಮೇಲೆ ರೇಪ್ ಮಾಡಿದ್ದಾನೆ. ನನ್ನ ಮೇಲೆ ಅತ್ಯಾಚಾರ ಮಾಡಿ ವಿಡಿಯೋ ಮಾಡಿದ್ದಾನೆ. ವಿಡಿಯೋ ತೋರಿಸಿದ ಮೇಲೆ ನಂಗೆ ಗೊತ್ತಾಯಿತು. ಆಮೇಲೆ ವಿಡಿಯೋ ಇಟ್ಟುಕೊಂಡು ಬ್ಲಾಕ್…

Read More

ಹೃದಯಾಘಾತ (Heart Attack) ಎಂಬುದು ಇದ್ದಕ್ಕಿದ್ದಂತೆ ಸಂಭವಿಸುವ ಘಟನೆಯಂತೆ ಕಂಡರೂ, ವಾಸ್ತವದಲ್ಲಿ ದೇಹವು ಅದರ ಮುನ್ಸೂಚನೆಗಳನ್ನು ಕೆಲವು ದಿನಗಳ ಅಥವಾ ವಾರಗಳ ಮೊದಲೇ ನೀಡಲು ಪ್ರಾರಂಭಿಸುತ್ತದೆ. ಈ ಲಕ್ಷಣಗಳನ್ನು ಸರಿಯಾದ ಸಮಯದಲ್ಲಿ ಗುರುತಿಸುವುದರಿಂದ ಜೀವ ಉಳಿಸಬಹುದು. ಹೃದಯಾಘಾತ ಸಂಭವಿಸುವ ಸುಮಾರು 1 ವಾರ ಅಥವಾ ಅದಕ್ಕಿಂತ ಮೊದಲು ಕಾಣಿಸಿಕೊಳ್ಳಬಹುದಾದ ಪ್ರಮುಖ ಲಕ್ಷಣಗಳು ಇಲ್ಲಿವೆ: 1. ಅತಿಯಾದ ಸುಸ್ತು ಮತ್ತು ದಣಿವು (Unusual Fatigue) ಯಾವುದೇ ದೈಹಿಕ ಕೆಲಸ ಮಾಡದಿದ್ದರೂ ವಿಪರೀತ ಸುಸ್ತು ಎನಿಸುವುದು ಹೃದಯಾಘಾತದ ಮೊದಲ ಮುನ್ಸೂಚನೆಗಳಲ್ಲಿ ಒಂದು. ರಕ್ತವನ್ನು ಪಂಪ್ ಮಾಡಲು ಹೃದಯವು ಹೆಚ್ಚು ಶ್ರಮ ಪಡಬೇಕಾದಾಗ ಈ ಸುಸ್ತು ಉಂಟಾಗುತ್ತದೆ. ಮಹಿಳೆಯರಲ್ಲಿ ಈ ಲಕ್ಷಣ ಹೆಚ್ಚಾಗಿ ಕಂಡುಬರುತ್ತದೆ. 2. ಎದೆಯಲ್ಲಿ ಅಸ್ವಸ್ಥತೆ ಅಥವಾ ಲಘು ನೋವು (Chest Discomfort) ಎದೆಯ ಮಧ್ಯಭಾಗದಲ್ಲಿ ಒತ್ತಡ, ಬಿಗಿತ ಅಥವಾ ಲಘುವಾದ ಉರಿ ಕಾಣಿಸಿಕೊಳ್ಳಬಹುದು. ಇದು ಬಂದು ಹೋಗುತ್ತಿರಬಹುದು. ಇದನ್ನು ಅನೇಕರು ‘ಗ್ಯಾಸ್ಟ್ರಿಕ್’ ಎಂದು ನಿರ್ಲಕ್ಷಿಸುತ್ತಾರೆ, ಆದರೆ ಇದು ಹೃದಯಕ್ಕೆ ರಕ್ತ ಸಂಚಾರ…

Read More

ಮಂಡ್ಯ : ಕುಟುಂಬ ರಾಜಕಾರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಟಿ ಎಸ್ ಛತ್ರ ಗ್ರಾಮದಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಮೊದಲ ಮಗನನ್ನು ಬಳಸಲ ನೋಡಿದರು. ಅವರ ಅಕಾಲಿಕ ಮರಣದಿಂದ ಎರಡನೇ ಮಗನನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ಕರೆದಂದು ವಸೂಲಿ ಮಾಡುತ್ತಿದ್ದಾರೆ.ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟು ಜನ ಅಧಿಕಾರ ಪಡೆದಿದ್ದಾರೆ? ಸಹೋದರನನ್ನು ಕೆಎಂಎಫ್ ಅಧ್ಯಕ್ಷ ನನ್ನಾಗಿ ಮಾಡಲು ಮುಂದಾಗಲಿಲ್ಲವೇ? ಎರಡು ಮೂರು ಜನ ಶಾಸಕರು ಇರುವ ಕುಟುಂಬ ಸಾಕಷ್ಟಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ದೇವೇಗೌಡರು ವಸೂಲಿ ಮಾಡಲು ನಮ್ಮನ್ನು ರಾಜಕೀಯಕ್ಕೆ ತರಲಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಾವು ರಾಜಕೀಯಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ತಿಳಿಸಿದರು.

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಮತ್ತೆ ಚಿರತೆ ಉಪಟಳ ಶುರುವಾಗಿದ್ದು, ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಭಕ್ತರಿಗೆ ಚಿರತೆ ಪ್ರತ್ಯಕ್ಷವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಆರನೇ ತಿರುವಿನಲ್ಲಿ ಭಕ್ತರಿಗೆ ಚಿರತೆ ಒಂದು ಪ್ರತ್ಯಕ್ಷವಾಗಿದೆ. ಭಕ್ತರು ತಮ್ಮ ಮೊಬೈಲ್ ಗಳಲ್ಲಿ ಚಿರತೆಯ ಫೋಟೋಗಳನ್ನು ಸೆರೆ ಹಿಡಿದಿದ್ದಾರೆ. ಶಿವರಾತ್ರಿ ಜಾತ್ರೆಯ ವೇಳೆ ಓರ್ವ ಭಕ್ತನನ್ನು ಚಿರತೆ ಕೊಂದಿತ್ತು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ ಸೃಷ್ಟಿಯಾಗಿದೆ.

Read More

ಮಂಡ್ಯ : ನಿನ್ನೆ ಸಂಜೆ ಮಂಡ್ಯದಲ್ಲಿ ನಡೆದಿದ್ದ ಶೋಭಾಯಾತ್ರೆಯಲ್ಲಿ ಅನುಮತಿ ಪಡೆಯದೇ ಡಿಜೆ ಬಳಸಿದಕ್ಕೆ VHP, ಬಜರಂಗದಳ, ದುರ್ಗಾವಾಹಿನಿ, ಶ್ರೀರಾಮಾಂಜನೇಯ ಸಮಿತಿ ಆಯೋಜಿಸಿದ್ದ ಶೋಭಾಯಾತ್ರೆ. ಶೋಭಾಯಾತ್ರೆ ಆಯೋಜಕರು, ಡಿಜೆ ವಾಹನದ ಮಾಲೀಕ, ಚಾಲಕ, ಜನರೇಟರ್ ವಾಹನದ ಮಾಲೀಕ, ಚಾಲಕ, ಡಿಜೆ ಟೆಕ್ನಿಷಿಯನ್ ಸೇರಿ 12 ಮಂದಿ ವಿರುದ್ಧ FIR ದಾಖಲಾಗಿದೆ. ಮಂಡ್ಯದ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊಕದ್ದಮೆ ದಾಖಲಾಗಿದೆ.PSI ಸುನಿಲ್ ದೂರು ಆಧರಿಸಿ FIR ದಾಖಲು ಆಗಿದೆ. ಹಿಂದೂ ಮುಖಂಡರಾದ ಕೆ.ಎಸ್.ರವಿ, ಚಿಕ್ಕಬಳ್ಳಿ ಬಾಲು, ಶ್ರೀನಿವಾಸ, ವಿನೋಬಾ, ಬಸವರಾಜುರವರ ವಿರುದ್ಧ FIR ದಾಖಲಾಗಿದೆ. ಸಾರ್ವಜನಿಕರ ಶಾಂತಿ, ನೆಮ್ಮದಿಗೆ ಭಂಗ ಉಂಟು ಮಾಡಿ, ರಸ್ತೆಯಲ್ಲಿ ಸಾರ್ವಜನಿಕರಿಗೆ ಅಪಾಯ ಉಂಟು ಮಾಡುವ, ಉಪದ್ರವ ಉಂಟು ಮಾಡುವ ರೀತಿಯಲ್ಲಿ ಕಾನೂನು ಉಲ್ಲಂಘನೆ ಆರೋಪ ಹಿನ್ನೆಲೆ, ಕಲಂ 285, 292, 125, BNS 36, 109 ಕೆಪಿ ಆಕ್ಟ್, 188 ಐಎಂವಿ ಆಕ್ಟ್ ಅಡಿ ಪ್ರಕರಣ ದಾಖಲು.

Read More