Author: kannadanewsnow05

ಪಂಜಾಬ್ : ದೇಶದಲ್ಲಿ ಮತ್ತೊಂದು ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಕ್ಲಾಸ್ ರೂಮ್ ಗೆ ನುಗ್ಗಿ ಒಬ್ಬ ವಿದ್ಯಾರ್ಥಿನಿ ಮೇಲೆ ವಿದ್ಯಾರ್ಥಿ ಗುಂಡಿನ ದಾಳಿ ಮಾಡಿರುವ ಘಟನೆ ಪಂಜಾಬ್ ನ ತರನ್ ತರಾನ್ ಜಿಲ್ಲೆಯ ಶಾಲೆಯಲ್ಲಿ ಈ ಒಂದು ಭೀಕರ ಘಟನೆ ನಡೆದಿದೆ. ಹೌದು ಶಾಲೆಯಲ್ಲಿ ವಿದ್ಯಾರ್ಥಿನಿ ಬೆಂಚ್ ಮೇಲೆ ಕುಳಿತಿದ್ದಾಗ ಆಕೆಯ ಸಹಪಾಠಿ ಏಕಾಏಕಿ ಬಂದು ವಿದ್ಯಾರ್ಥಿನಿ ತಲೆಗೆ ಗುಂಡಿಕ್ಕಿ ಕೊಲ್ಲುತ್ತಾನೆ ಬಳಿಕ ವಿದ್ಯಾರ್ಥಿ ತಾನು ಸಹ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ ಅಲ್ಲೇ ಇದ್ದಂತ ವಿದ್ಯಾರ್ಥಿಗಳೆಲು ಒಮ್ಮೆಲೇ ಭಯಭೀತರಾಗಿ ತರಗತಿಯಿಂದ ಓಡಿ ಹೋಗುತ್ತಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಗಾಜಾ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿ ಅರೆಸ್ಟ್ ಆಗಿದ್ದಾನೆ ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ ಬಿ ಉಮೇಶ್ (35) ಎನ್ನುವ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ 15 ಲಕ್ಷ ಮೌಲ್ಯದ 30 ಕೆಜಿ 720 ಗ್ರಾಂ ಗಾಂಜಾ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಉಮೇಶ್ ಕಾಜ ಬೆಳೆಯುತ್ತಿದ್ದ ಬೆಂಗಳೂರಲ್ಲಿ ಮಾರಾಟ ಮಾಡಲು ಬಂದಾಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಮಾರಸ್ವಾಮಿ ಲೇಔಟ್ ನ ಕೆಲವು ಸ್ಥಳಗಳಲ್ಲಿ ಗಾಂಜ ಮಾರಾಟ ಮಾಡಿದ್ದಾನೆ. ಖಾಸಗಿ ಕಾಲೇಜು ಹಿಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ. ಜಮೀನಿನಲ್ಲಿ ಗಾಂಜಾ ಗಿಡ ಬೆಳೆದು ಆರೋಪಿ ಮಾರಾಟ ಮಾಡುತ್ತಿದ್ದ

Read More

ಬೆಂಗಳೂರು : ಬೆಂಗಳೂರು ಪೊಲೀಸರು ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮಾದಕ ವಸ್ತು ಮಾರಾಟ ಮಾಡುತ್ತಿದ್ದ 24 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರು ನಗರ ಮತ್ತು ಸಿಸಿಬಿ ಪೊಲೀಸರಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಬಂಧಿತರಿಂದ 2.8 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. 1 ಕೆಜಿ ಹೈಡ್ರೋಗಾಂಜಾ, 76 ಕೆಜಿ ಗಾಂಜಾ ಮತ್ತು 1 ಕೆಜಿ ಚರಸ್, 121 ಗ್ರಾಂ MDMA ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿಗಳು ಐಟಿ ಉದ್ಯೋಗಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಕುಮಾರಸ್ವಾಮಿ ಲೇಔಟ್, ಹೆಬ್ಬಾಳ, ಬಸವನಗುಡಿ, ಚಾಮರಾಜಪೇಟೆ ಜೆಸಿ ನಗರ,ಗೋವಿಂದರಾಜ ನಗರ ವ್ಯಾಪ್ತಿಯಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಕರೋನ ವೇಳೆ ಟ್ರಾವೆಲ್ಸ್ ನಷ್ಟ ಆಗಿದ್ದಕ್ಕೆ ವ್ಯಕ್ತಿ ಒಬ್ಬ ಕಳ್ಳತನಕ್ಕೆ ಇಳಿದಿದ್ದಾನೆ ಸದ್ಯ ಬೆಂಗಳೂರಿನ ಭಯಪನ ಹಳೆ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ ಸಿನಿಮಾ ಸ್ಟೈಲ್ ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಯನ್ನು ದಾವಣಗೆರೆ ಭಾಗದಲ್ಲಿ ಟ್ರಾವೆಲ್ಸ್ ನಡೆಸುತ್ತಿದ್ದ ರಾಜ ಎಂದು ತಿಳಿದುಬಂದಿದೆ. ಕರೋನ ವೇಳೆ ಟ್ರಾವೆಲ್ಸ್ ಲಾಸ್ ಆಗಿ ಜೀವನಕ್ಕೆ ಕಷ್ಟ ಆಗುತ್ತಿತ್ತು ಹಾಗಾಗಿ ಆತ ಮಾಸ್ಕ ಧರಿಸಿ ಕಳ್ಳತನ ಮಾಡುತ್ತಿದ್ದ ಆರೋಪಿ ಬಳಿ ಇದ್ದ 1.84 ಕೋಟಿ ಮೌಲ್ಯದ 1.25 ಕೆಜಿ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯ ವಿರುದ್ಧ ಇದುವರೆಗೂ 18 ಕಳ್ಳತನ ಪ್ರಕರಣ ದಾಖಲಾಗಿದೆ. ಬೆಂಗಳೂರಿನಲ್ಲೂ ಕೂಡ ನಾಲ್ಕು ಪ್ರಕರಣ ದಾಖಲಾಗಿದ್ದು ಬೆಳಕಿಗೆ ಬಂದಿದೆ. ಸದ್ಯ ಭಯಪನಹಳ್ಳಿ ಪೊಲೀಸ್ರಿಂದ ತನಿಖೆ ಮುಂದುವರೆದಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಒಬ್ಬ ವ್ಯಕ್ತಿ ವೈದ್ಯ ಲೋಕಕ್ಕೆ ಸವಾಲಾಗಿದ್ದಾನೆ. ಮೇಕೆಯಂತೆ ಬರೀ ಸೊಪ್ಪು ತಿಂದು ಗುಡ್ಡದಲ್ಲಿ ಬದುಕುತ್ತಿದ್ದಾನೆ. ನಿತ್ಯವೂ ಈತನಿಗೆ ಗಿಡಗಳ ಹಸಿ ಸೊಪ್ಪೆ ಆಹಾರವಾಗಿದೆ. ಬುಡನ್ ಖಾನ್ ಹೊಸಮನಿ ಎಂಬ ಈ ಯುವಕ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ನಿವಾಸಿಯಾಗಿದ್ದಾನೆ. ಗ್ರಾಮದ ಹೊರವಲಯದ ಹೆಗ್ಗೊಳ್ಳ ಗುಡ್ಡದಲ್ಲಿ ಬರೀ ಹಸಿ ಸೊಪ್ಪು ಎಲೆ ತಿಂದು ಕಳೆದ ಹತ್ತು ವರ್ಷಗಳಿಂದ ಬದುಕುತ್ತಿದ್ದಾನೆ. ಸಾಮಾನ್ಯ ಮನುಷ್ಯರಂತೆ ಸೇವಿಸುವ ಊಟ, ತಿಂಡಿ ಎಲ್ಲ ಬಿಟ್ಟು ಗಿಡದ ತಪ್ಪಲು ಹಸಿ ಸೊಪ್ಪು ಸೇವಿಸಿ ಬದುಕುತ್ತಿದ್ದಾನೆ. ನನಗೆ ಇಲ್ಲಿಯವರೆಗೆ ಯಾವುದೇ ಕಾಯಿಲೆ ಬಂದಿಲ್ಲ ಎಂದು ಹೇಳಿಕೆ ಕೊಟ್ಟಿದ್ದಾನೆ. ನಾನು ಕಾಡಿನಲ್ಲಿ ಇದ್ದಾಗ ಕೋತಿ ಯಾವ ರೀತಿ ಸೊಪ್ಪು ಎಲೆ ತಿನ್ನುತ್ತೋ ಅದನ್ನು ನೋಡಿ ನಾನು ತಿನ್ನಲು ಕಲಿತೆ. ನನಗೆ ಆಗ ಅದು ಬಹಳ ರುಚಿ ಎನಿಸಿತು. ಹಾಗಾಗಿ ನಾನು ಊಟ ತಿಂಡಿ ಎಲ್ಲವನ್ನು ಬಿಟ್ಟು ಎಲೆ, ಸೊಪ್ಪು ತಿಂದು ಒಬ್ಬನೇ ಜೀವಿಸುತ್ತಿದ್ದೇನೆ. ಇಲ್ಲಿ 150ಕ್ಕೂ ಹೆಚ್ಚು ಮರ…

Read More

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ಪೋರ್ಟ್ ನ ರನ್ ವೇ ನಲ್ಲಿ ಏಕಾಏಕಿ ಬೃಹತ್ ಬಲೂನ್ ಹಾರಿ ಬಂದಿದೆ. ವಿಮಾನ ಟೇಕ್ ಅಪ್ ಮತ್ತು ಲ್ಯಾಂಡಿಂಗ್ ಪ್ರದೇಶಕ್ಕೆ ಬೃಹತ್ ಬಲೂನ್ ಹಾರಿ ಬಂದಿದೆ. ಬಿ ಸಿ ಡಿ ಕನ್ಸ್ಟ್ರಕ್ಷನ್ ಎಂಬ ಕಂಪನಿ ಗೆ ಈ ಬೃಹತ್ ಬಲೂನ್ ಸೇರಿದ್ದು ರನ್ ವೇ ನಲ್ಲಿ ವಿಮಾನಗಳ ಹಾರಾಟವಿಲ್ಲದ ಕಾರಣ ಭಾರಿ ಅನಾಹುತ ತಪ್ಪಿದೆ. ಫೆಬ್ರವರಿ 5 ರಂದು ನಡೆದಿರುವ ಘಟನೆ ತಡವಾಗಿ ಬಳಕೆಗೆ ಬಂದಿದೆ. ದಾರ ಕಟ್ ಆಗಿ ರನ್ ವೇ ಕಡೆಗೆ ಬಲೂನ್ ಹಾರಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಬಿ ಸಿ ಡಿ ಕನ್ಸ್ಟ್ರಕ್ಷನ್ ವಿರುದ್ಧ ಏರ್ಪೋರ್ಟ್ ಭದ್ರತಾ ಸಿಬ್ಬಂದಿ ದೂರು ನೀಡಿದ್ದು ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ತಾನೇ ಸರ ಕಳ್ಳತನ ನಡೆದಿದ್ದು ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋದಾಗ ಕುಸಿದು ಬಿದ್ದು ಮಹಿಳೆ ಒಬ್ಬರು ಸಾವನ್ನಪ್ಪಿದ್ದ ಘಟನೆ ನಡೆದಿದೆ. ಅದರ ಬೆನ್ನಲ್ಲೆ ಇದೀಗ ವಿಜಯಪುರ ಜಿಲ್ಲೆಯಲ್ಲಿ ಹಾಡಹಗಲೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಹಿಳೆಯರ ಚಿನ್ನದ ಕದ್ದು ಪರಾರಿ ಆಗಿದ್ದಾರೆ. ಹೌದು ವಿಜಯಪುರ ಜಿಲ್ಲೆಯಲ್ಲಿ ಕಳ್ಳರ ಹಾವಳಿ ಮತ್ತೆ ಮುಂದುವರೆದಿದೆ. ಬಸ್ ನಿಲ್ದಾಣದಲ್ಲಿ ಇದ್ದಂತಹ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಆಲಮೇಲದಲ್ಲಿ ಪ್ರತ್ಯೇಕ ಘಟನೆಗಳು ನಡೆದಿವೆ. ಬಸ್ ಏರುವಾಗ ಮಹಿಳೆಯರ ಚಿನ್ನದ ಸರ ಕಿತ್ತುಕೊಂಡು ಸರಗಳ್ಳರು ರಪರಾರಿಯಾಗಿದ್ದಾರೆ. ಬೈಕ್ ನಲ್ಲಿ ಬಂದಂತಹ ದುಷ್ಕರ್ಮಿಗಳು ಹಾಡಹಗಲೇ ಚಿನ್ನ ಸರ ಕಿತ್ತುಕೊಂಡು ಪರಾಗಿದ್ದಾರೆ. ಇಂಡಿಷ ಹಾರ ಹಾಗು ಅಲ್ಮೆಲ್ ಪೋಲಿಸ್ ಅಣ್ಣ ವ್ಯಾಪ್ತಿಯಲ್ಲಿ ಈ ಘಟನೆಗಳು ನಡೆದಿದೆ.

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್‌ಸಿಬಿ ಮ್ಯಾಚ್ ನಡೆಸುವ ವಿಚಾರವಾಗಿ ಇಂದು ಕೆ ಎಸ್ ಇ ಎ ಹಾಗೂ ಆರ್‌ಸಿಬಿ ನಿಯೋಗ ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತು. KSCA ಅಧ್ಯಕ್ಷ ವೆಂಕಟೇಶ್ ಪ್ರಸಾದ ಹಾಗೂ RCB ಯ ರಾಜೇಶ್ ಮೆನನ್ ಭೇಟಿ ಮಾಡಿ ಚರ್ಚಿಸಿದರು. ಇನ್ನು ಇದೇ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿದ್ದು ನ್ಯಾ.ಕುನ್ಹಾ ವರದಿಯ ಶಿಫಾರಸು ಪಾಲಿಸಬೇಕು ಅಂತ ಹೇಳಿದ್ದೇವೆ. ಈ ಕುರಿತು ಸಮಿತಿ ಸಹ ರಚನೆಯಾಗಿತ್ತು. ಸಮಿತಿಯು ಕೂಡ ಒಂದಷ್ಟು ಶಿಫಾರಸು ಮಾಡಿದೆ. ಐಪಿಎಲ್ ಕೂಡ ಬರುತಿದೆ ಬುಧವಾರ ನಾನು ಮತ್ತೆ ಸಭೆ ಕರೆದಿದ್ದೇನೆ ಎಂದರು. ಸರ್ಕಾರದಿಂದ ಏನು ಸೂಚನೆ ಕೊಡಬೇಕು ಆ ಕುರಿತು ಪರಿಶೀಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ ಕೂಡ ಈ ವಿಚಾರವಾಗಿ ಚರ್ಚೆ ಮಾಡಬೇಕಾಗಿದೆ. ಬೆಂಗಳೂರಿನಲ್ಲಿ ಆರ್‌ಸಿಬಿ ಮ್ಯಾಚ್ ಆಗಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ. ಹಾಗಾಗಿ ಎಲ್ಲವನ್ನು ನೋಡಿ ಒಂದು…

Read More

ಬೆಳಗಾವಿ : ಮಹಿಳಾ ಅಧಿಕಾರಿಯ ಮನೆಯಲ್ಲಿ ಕ್ಯಾಮೆರಾ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊರ್ವ ಸರ್ಕಾರಿ ಅಧಿಕಾರಿಯಿಂದ ಖತರ್ನಾಕ್ ಸ್ಕೆಚ್ ಹಾಕಲಾಗಿತ್ತು. ವೃತ್ತಿ ವೈಷಮ್ಯ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಯ ತೇಜೋವಧೆಗೆ ಈ ಒಂದು ಕ್ಯಾಮೆರಾ ಫಿಕ್ಸ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೀಗ ಮಾಳ ಮಾರುತಿ ಪೊಲೀಸರಿಂದ ಟಿ.ವಿನೋದ ಎಂಬಾತನನ್ನು ಬಂಧಿಸಲಾಗಿದೆ. ಮಹಿಳಾ ಅಧಿಕಾರಿಯ ವಿರುದ್ಧ ಸೇಡು ತೀರಿಸಿಕೊಳ್ಳಲು ಮತ್ತೋರ್ವ ಅಧಿಕಾರಿ ಅಡ್ಡದಾರಿ ಹಿಡಿದಿದ್ದಾನೆ. ಖಾಸಗಿ ವಿಡಿಯೋ ದುರ್ಬಳಕೆ ಮಾಡಿಕೊಳ್ಳಲು ಸ್ಕೆಚ್ ಹಾಕಿದ್ದಾನೆ. ಟಿ ವಿನೋದ್ ಎಂಬಾತನನ್ನು ಮಹಿಳಾ ಅಧಿಕಾರಿ ವರ್ಗಾವಣೆ ಮಾಡಿದ್ದರು. ಹಾಗಾಗಿ ಆತ ಸೇಡು ತೀರಿಸಿಕೊಳ್ಳಲು ಈ ರೀತಿ ಅಡ್ಡದಾರಿ ಹಿಡಿದಿದ್ದಾನೆ. ಪೊಲೀಸರಿಂದ ವಿನೋದ್ ಮೊಬೈಲ್ ಪರಿಶೀಲನೆ ಆಗಿದ್ದು ಮಹಿಳಾ ಅಧಿಕಾರಿ ವಿರುದ್ಧ ನಕಲಿ ಪತ್ರಕರ್ತರನ್ನು ಛೂ ಬಿಟ್ಟಿದ್ದಾನೆ. ಮಹಿಳಾ ಅಧಿಕಾರಿಗೆ ಹೆದರಿಸಿ ಹಣ ಲಪಟಾಯಿಸಲು ಪ್ಲಾನ್ ಮಾಡಿದ್ದಾರೆ. ಬಂದಲ್ಲಿ ಇಬ್ಬರಿಗೂ ಪಾಲು ಎಂದು ನಿರ್ಧಾರವಾಗಿತ್ತಂತೆ. ನಕಲಿ ಪತ್ರಕರ್ತರು ಹಾಗೂ ವಿನೋದನೀಗೆ ಪಾಲು ಇತ್ತು ಮಹಿಳಾಧಿಕಾರಿ ಖಾಸಗಿ ದೃಶ್ಯವನ್ನು ಸಂಗ್ರಹಿಸಿ ಬ್ಲಾಕ್…

Read More

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ RCB ಮ್ಯಾಚ್ ನಡೆಸುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಕೆ ಎಸ್ ಎಸ್ ಸಿ ಎ ನಿಯೋಗ ಮತ್ತು ಆರ್‌ಸಿಬಿ ನಿಯೋಗ ಭೇಟಿ ಮಾಡಿದೆ. ಕೆಎಸ್‌ಸಿ ಅಧ್ಯಕ್ಷ ವೆಂಕಟೇಶ ಪ್ರಸಾದ್ ಆರ್ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ಮ್ಯಾಚ್ ನಡೆಸುವ ವಿಚಾರವಾಗಿ ಚರ್ಚಿಸಿದ್ದಾರೆ. ಇದೆ 12 rNdu ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತೆ. ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

Read More