Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಪ್ರವಾಸಿಗರಿದ್ದ ಟ್ಯಾಕ್ಸಿಯೊಂದು ಚಾಲಕನ ನಿಯಂತ್ರಣ ತಪ್ಪಿ ಸುಮಾರು 500 ಮೀಟರ್ (ಅರ್ಧ ಕಿಲೋಮೀಟರ್) ಆಳದ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಈ ಭೀಕರ ದುರಂತದಲ್ಲಿ ಬೆಂಗಳೂರು ಮೂಲದ ಎರಡು ಕುಟುಂಬಗಳ ಸದಸ್ಯರು ಹಾಗೂ ಸ್ಥಳೀಯ ಚಾಲಕ ಸೇರಿದಂತೆ ಒಟ್ಟು ಎಂಟು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟ್ಯಾಕ್ಸಿ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಪಾಂಗಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪ್ರವಾಸಿಗರು ಸಂಚರಿಸುತ್ತಿದ್ದ ಟ್ಯಾಕ್ಸಿ ವಾಹನವು ಬೈರಾಗಢ್ ಪಾಂಗಿ ಸಚ್ ಪಾಸ್ ರಸ್ತೆಯ ಕಲ್ವಾನ್ ಎಂಬ ಸ್ಥಳದ ಬಳಿ ತಲುಪಿದಾಗ, ಚಾಲಕನ ನಿಯಂತ್ರಣ ಕೈತಪ್ಪಿದೆ. ಪರಿಣಾಮವಾಗಿ ವಾಹನವು ನೇರವಾಗಿ ಕಡಿದಾದ ಆಳವಾದ ಕಂದಕಕ್ಕೆ ಉರುಳಿ ಬಿದ್ದಿದೆ. ವಾಹನವು ಭಾರೀ ಎತ್ತರದಿಂದ ಕೆಳಗೆ ಬಿದ್ದಿರುವುದರಿಂದ ಅದರಲ್ಲಿದ್ದ ಯಾರೊಬ್ಬರೂ ಬದುಕುಳಿಯುವ ಸಾಧ್ಯತೆಗಳಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮೃತರ ಹಿನ್ನೆಲೆ ಮತ್ತು ವಿವರಗಳು ಮೃತಪಟ್ಟ ದುರ್ದೈವಿಗಳಲ್ಲಿ ಬೆಂಗಳೂರಿನ ಕಾಡುಗೋಡಿ ನಿವಾಸಿಗಳಾದ ಅರವಿಂದ್ ಚಂದ್ರಶೇಖರ್, ಅವರ…

Read More

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಇಂಧನ ಭದ್ರತೆಯನ್ನು ಕಾಯ್ದುಕೊಳ್ಳಲು ವಿಧಿಸಲಾಗಿದ್ದ ವಿಂಡ್‌ಫಾಲ್‌ (ಆಕಸ್ಮಿಕ ಲಾಭ) ತೆರಿಗೆಯನ್ನು ಕೇಂದ್ರ ಸರ್ಕಾರವು ಗಣನೀಯವಾಗಿ ಕಡಿತಗೊಳಿಸಿದೆ. ಪರಿಷ್ಕೃತ ದರಗಳು ಜೂನ್ 1 ರಿಂದಲೇ ಜಾರಿಗೆ ಬರಲಿವೆ ಎಂದು ಕೇಂದ್ರ ಹಣಕಾಸು ಸಚಿವಾಲಯವು ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಪೆಟ್ರೋಲ್ ರಫ್ತು ಸುಂಕ ಅರ್ಧದಷ್ಟು ಕಡಿತ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಉಂಟಾಗಿರುವ ಬದಲಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಹೊಸ ಆದೇಶದನ್ವಯ, ಪೆಟ್ರೋಲ್ ರಫ್ತು ಮೇಲಿನ ಆಕಸ್ಮಿಕ ಲಾಭದ ತೆರಿಗೆಯನ್ನು ಅರ್ಧದಷ್ಟು ಕಡಿತಗೊಳಿಸಲಾಗಿದೆ. ಈ ಹಿಂದೆ ಇದ್ದ ದರವನ್ನು ಪ್ರತಿ ಲೀಟರ್‌ಗೆ 1.5 ರೂಪಾಯಿಗೆ ಇಳಿಕೆ ಮಾಡುವ ಮೂಲಕ ರಫ್ತುದಾರರಿಗೆ ಕೇಂದ್ರ ಸರ್ಕಾರ ಭಾರಿ ರಿಲೀಫ್ ನೀಡಿದೆ. ಡೀಸೆಲ್ ಮತ್ತು ವಿಮಾನ ಇಂಧನ ಸುಂಕವೂ ಇಳಿಕೆ ಪೆಟ್ರೋಲ್ ಮಾತ್ರವಲ್ಲದೆ ಡೀಸೆಲ್ ಮತ್ತು ವಿಮಾನ ಇಂಧನ (ATF) ಮೇಲಿನ ರಫ್ತು ಸುಂಕವನ್ನೂ ಸಹ ಕಡಿತಗೊಳಿಸಲಾಗಿದೆ. ಡೀಸೆಲ್…

Read More

ನವದೆಹಲಿ: ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸರ್ಕಾರಿ ನೌಕರನೊಬ್ಬನನ್ನು ಅಪರಾಧಿ ಎಂದು ಸಾಬೀತುಪಡಿಸಲು ಆತನೇ ನೇರವಾಗಿ ಲಂಚದ ಹಣವನ್ನು ಕೈಯಾರೆ ಸ್ವೀಕರಿಸಿರಬೇಕು ಎಂಬ ನಿಯಮವೇನೂ ಇಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಧಿಕಾರಿಯ ಪರವಾಗಿ ಮಧ್ಯವರ್ತಿಗಳು ಅಥವಾ ಇನ್ಯಾರೇ ಲಂಚ ಪಡೆದಿದ್ದರೂ, ಅದಕ್ಕೆ ಸಂಬಂಧಪಟ್ಟ ಸರ್ಕಾರಿ ನೌಕರನನ್ನೇ ನೇರ ಹೊಣೆಗಾರನನ್ನಾಗಿ ಮಾಡಬಹುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಹೈಕೋರ್ಟ್ ಆದೇಶ ವಜಾ: ಈ ಪ್ರಮುಖ ತೀರ್ಪಿನ ಮೂಲಕ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪೊಲೀಸ್‌ ಠಾಣೆಯ ಪಿಎಸ್‌ಐ ಕೆ. ರಂಗಯ್ಯ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್, ಪಿಎಸ್‌ಐ ರಂಗಯ್ಯ ಅವರು ನೇರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿಲ್ಲ ಅಥವಾ ಹಣವನ್ನು ವೈಯಕ್ತಿಕವಾಗಿ ಪಡೆದುಕೊಂಡಿಲ್ಲ ಎಂಬ ಕಾರಣ ನೀಡಿ 2023ರ ಜೂನ್‌ನಲ್ಲಿ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆ‌ರ್ ಅನ್ನು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್…

Read More

ಮುಂಬೈ: ತಮ್ಮ ಸುಮಧುರ ಕಂಠದಿಂದ ದಶಕಗಳ ಕಾಲ ಭಾರತೀಯ ಚಿತ್ರರಂಗವನ್ನು ಆಳಿದ್ದ ಹಿರಿಯ ಬಹುಭಾಷಾ ಗಾಯಕಿ ಸುಮನ್ ಕಲ್ಯಾಣಪುರ (89) ಅವರು ಭಾನುವಾರ ಸಂಜೆ ಮುಂಬೈನಲ್ಲಿ ನಿಧನರಾದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಬೈನ ಲೋಖಂಡ್ವಾಲಾದಲ್ಲಿರುವ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದರು. ಅವರ ನಿಧನಕ್ಕೆ ಸಂಗೀತ ಲೋಕದ ಗಣ್ಯರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ. ಧ್ವನಿಯಲ್ಲಿದ್ದ ಲತಾ ಮಂಗೇಷ್ಕರ್ ಸಾಮ್ಯತೆ 1960 ಮತ್ತು 70ರ ದಶಕಗಳಲ್ಲಿ ಸುಮನ್ ಕಲ್ಯಾಣಪುರ ಅವರು ದೇಶಾದ್ಯಂತ ಅಪಾರ ಜನಪ್ರಿಯತೆ ಗಳಿಸಿದ್ದರು. ವಿಶೇಷವೆಂದರೆ, ಇವರ ಕಂಠಸಿರಿ ಮತ್ತು ಹಾಡುವ ಶೈಲಿ ಖ್ಯಾತ ಗಾಯಕಿ ಲತಾ ಮಂಗೇಷ್ಕರ್ ಅವರ ಧ್ವನಿಗೆ ಅತ್ಯಂತ ಹತ್ತಿರವಾಗಿತ್ತು. ಈ ಸಾಮ್ಯತೆಯಿಂದಾಗಿಯೇ ಅವರು ಅಂದಿನ ದಿನಗಳಲ್ಲಿ ತಾವೂ ಒಬ್ಬ ಶ್ರೇಷ್ಠ ಗಾಯಕಿ ಎಂಬುದನ್ನು ಸಾಬೀತುಪಡಿಸಿ, ತಮ್ಮದೇ ಆದ ವಿಶಿಷ್ಟ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದರು. 11 ಭಾಷೆಗಳು, 740ಕ್ಕೂ ಹೆಚ್ಚು ಸಿನಿಮಾಗಳು ಸುಮನ್ ಕಲ್ಯಾಣಪುರ ಅವರು ಕೇವಲ ಒಂದು ಭಾಷೆಗೆ ಸೀಮಿತವಾಗದೆ, ಭಾರತೀಯ ಸಂಗೀತ ಲೋಕಕ್ಕೆ…

Read More

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ ಇತಿಹಾಸದಲ್ಲಿ ಮತ್ತೊಂದು ಸುವರ್ಣ ಅಧ್ಯಾಯ ಬರೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2026ರ ರೋಮಾಂಚಕ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ‘ಈ ಸಲ ಕಪ್ ನಮ್ದೇ’ ಎಂಬ ಘೋಷಣೆ ಸತತ ಎರಡನೇ ವರ್ಷವೂ ನಿಜವಾದಂತಾಗಿದೆ. ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನೆರೆದಿದ್ದ ಲಕ್ಷಾಂತರ ಕ್ರಿಕೆಟ್ ಪ್ರೇಮಿಗಳ ಸಮ್ಮುಖದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದರು. ಬಲಿಷ್ಠ ಗುಜರಾತ್ ತಂಡವನ್ನು ಅವರದೇ ತವರು ಮೈದಾನದಲ್ಲಿ ಧೂಳೀಪಟ ಮಾಡಿದ ಬೆಂಗಳೂರು ಹುಡುಗರು, ಟ್ರೋಫಿಯನ್ನು ಎತ್ತಿ ಹಿಡಿಯುತ್ತಿದ್ದಂತೆ ಇತ್ತ ಇಡೀ ಕರ್ನಾಟಕದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಯಿತು. ಪಂದ್ಯ ಮುಗಿಯುತ್ತಿದ್ದಂತೆ ಇತ್ತ ಕರ್ನಾಟಕದಾದ್ಯಂತ ಆರ್ಸಿಬಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.…

Read More

ತುಮಕೂರು : ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿಯ ದೇವರಮರಡಿ ಕೆರೆಯಲ್ಲಿ ಒಂದು ದುರ್ಘಟನೆ ನಡೆದಿದೆ. ಮಜುರೆ ಗಿಲ್ಯನಾಯಕನ ತಂಡ ನಿವಾಸಿ ಗೌತಮ್ ಮೃತ ದುರ್ದೈವಿ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಸಹೋದರ ಹಾಗೂ ಗೆಳೆಯರ ಜೊತೆಗೆ ಗೌತಮ್ ಕೆರೆ ತೆರಳಿದ್ದ ಈ ವೇಳೆ ಆಟವಾಡುತ್ತಾ ಕೆರೆಯಲ್ಲಿ ತೇಲುತ್ತಿದ್ದ ತೆಪ್ಪ ಹತ್ತಿದ್ದಾನೆ. ತೇಲುತ್ತಿದ್ದ ತೆಪ್ಪದ ಮೇಲೆ ಸಂಭ್ರಮಿಸುವಾಗ ಏಕಾಏಕಿ ತೆಪ್ಪಗೆ ಮಗುಚಿದೆ. ಈ ವೇಳೆ ಗೌತಮ್ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

Read More

ಬೆಂಗಳೂರು: ಐಪಿಎಲ್ 2026ರ ಮಹಾ ಸಂಗ್ರಾಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆಯಲಿರುವ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಮಹತ್ವದ ಪಂದ್ಯದ ಹಿನ್ನೆಲೆಯಲ್ಲಿ ಇಡೀ ದೇಶಾದ್ಯಂತ ಕ್ರಿಕೆಟ್ ಜ್ವರ ಏರಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆರ್‌ಸಿಬಿ ಅಭಿಮಾನಿಗಳ ಸಂಭ್ರಮ ಮತ್ತು ಕ್ರೇಜ್ ಮುಗಿಲು ಮುಟ್ಟಿದೆ. ಜರ್ಸಿ ಬಿಟ್ಟು ಬ್ಲೌಸ್ ವಿನ್ಯಾಸದ ಮೂಲಕ ಮಿಂಚಿದ ಮಾಡೆಲ್ ಸಾಮಾನ್ಯವಾಗಿ ಕ್ರಿಕೆಟ್ ಪಂದ್ಯಗಳಿದ್ದಾಗ ಅಭಿಮಾನಿಗಳು ತಮ್ಮ ನೆಚ್ಚಿನ ತಂಡದ ಜರ್ಸಿ ತೊಟ್ಟು ಬೆಂಬಲ ಸೂಚಿಸುವುದು ಮಾಮೂಲಿ. ಆದರೆ, ಬೆಂಗಳೂರಿನ ಖ್ಯಾತ ಡಿಸೈನರ್ ಹಾಗೂ ಮಾಡೆಲ್ ಆಗಿರುವ ಅಂಜಲಿ ಅವರು ಅತ್ಯಂತ ವಿಭಿನ್ನವಾಗಿ ತಮ್ಮ ಅಭಿಮಾನವನ್ನು ತೋರ್ಪಡಿಸಿದ್ದಾರೆ. ಆರ್‌ಸಿಬಿ ಮೇಲಿನ ಅಪ್ಪಟ ಪ್ರೀತಿಯಿಂದ ತಾವೇ ಸ್ವತಃ ವಿಶೇಷವಾದ ಬ್ಲೌಸ್ ಒಂದನ್ನು ವಿನ್ಯಾಸಗೊಳಿಸಿ, ಅದನ್ನು ಧರಿಸುವ ಮೂಲಕ ಸಾಮಾಜಿಕ ಜಾಲತಾಣ ಹಾಗೂ ಸಾರ್ವಜನಿಕರಲ್ಲಿ ಭಾರೀ ಗಮನ ಸೆಳೆದಿದ್ದಾರೆ. ಬ್ಲೌಸ್ ಮೇಲಿದೆ ಆರ್‌ಸಿಬಿ ಲೋಗೋ ಹಾಗೂ…

Read More

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ರೋಚಕ ಘಟ್ಟಕ್ಕೆ ವೇದಿಕೆ ಸಿದ್ಧವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಗುಜರಾತ್ ಟೈಟನ್ಸ್ (GT) ನಡುವಿನ ಬಹುನಿರೀಕ್ಷಿತ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಆರ್‍ಸಿಬಿ ಪ್ರಶಸ್ತಿ ಗೆಲ್ಲಲಿ ಎಂದು ಸಿಲಿಕಾನ್ ಸಿಟಿಯಲ್ಲಿ ಸಂಭ್ರಮಾಚರಣೆ ಮಾಡಲು ಕಾದು ಕುಳಿತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಬೆಂಗಳೂರು ನಗರ ಪೊಲೀಸರು ದಿಢೀರ್ ಶಾಕ್ ನೀಡಿದ್ದಾರೆ. ಪಂದ್ಯದ ಬಳಿಕ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದಾರೆ. ಪ್ರಮುಖ ಫ್ಲೈಓವರ್‌ಗಳು ಕ್ಲೋಸ್ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರಿನ ಪ್ರಮುಖ ಫ್ಲೈಓವರ್‌ಗಳನ್ನು ಇಂದು ರಾತ್ರಿ ಬಂದ್ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಇಂದು (ಮೇ 31) ರಾತ್ರಿ 11 ಗಂಟೆಯಿಂದ ನಾಳೆ ಮುಂಜಾನೆ 5 ಗಂಟೆಯವರೆಗೆ ನಗರದ ಪ್ರಮುಖ ಮೇಲ್ಸೇತುವೆಗಳಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಂದ್ಯ ಮುಗಿದ ಬಳಿಕ ಅಭಿಮಾನಿಗಳು ಫ್ಲೈಓವರ್‌ಗಳ ಮೇಲೆ ಜಮಾಯಿಸಿ ಸಂಭ್ರಮಾಚರಣೆ ಮಾಡುವುದು, ಬೈಕ್ ರೇಸಿಂಗ್ ಅಥವಾ ಅತಿ…

Read More

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಕಂಟೇನರ್ ಮತ್ತು ಆಟೋ ನಡುವೆ ನಡೆದ ಭೀಕರ ಡಿಕ್ಕಿಗೆ ಆರು ಜನ ದಿನಗೂಲಿ ಕಾರ್ಮಿಕರು ಸ್ಥಳದಲ್ಲೇ ಜೀವ ಕಳೆದುಕೊಂಡಿದ್ದಾರೆ. ಬಾಗೇಪಲ್ಲಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44ರ (NH 44) ಗಂಗೋತ್ರಿ ಪೆಟ್ರೋಲ್ ಬಂಕ್ ಬಳಿ ಈ ಕರುಣಾಜನಕ ಹಾಗೂ ಹೃದಯವಿದ್ರಾವಕ ಘಟನೆ ಸಂಭವಿಸಿದೆ. ದುಡಿದು ಮನೆಗೆ ಮರಳುವಾಗ ಜವರಾಯನ ಅಟ್ಟಹಾಸ ಮೃತಪಟ್ಟವರೆಲ್ಲರೂ ತುತ್ತು ಅನ್ನಕ್ಕಾಗಿ ದಿನವಿಡೀ ಕಷ್ಟಪಟ್ಟು ದುಡಿಯುತ್ತಿದ್ದ ಬಡ ದಿನಗೂಲಿ ಕಾರ್ಮಿಕರಾಗಿದ್ದಾರೆ ಎನ್ನಲಾಗಿದೆ. ಎಂದಿನಂತೆ ಬೆಳಗ್ಗೆಯಿಂದ ಸಂಜೆಯವರೆಗೆ ತೀವ್ರ ಶ್ರಮವಹಿಸಿ ಕೆಲಸ ಮುಗಿಸಿದ್ದ ಕಾರ್ಮಿಕರು, ಆಟೋರಿಕ್ಷಾದಲ್ಲಿ ತಮ್ಮ ತಮ್ಮ ಮನೆಗಳಿಗೆ ವಾಪಸ್ ಮರಳುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅತಿ ವೇಗವಾಗಿ ಬಂದ ಕಂಟೇನರ್ ವಾಹನವು ಆಟೋಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸ ಎಷ್ಟಿತ್ತೆಂದರೆ ಆಟೋ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಒಳಗಿದ್ದವರು ಹೊರಬರಲಾಗದೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು: ತನಿಖೆ ಪ್ರಗತಿಯಲ್ಲಿ ಭೀಕರ ಅಪಘಾತದ…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಯುವತಿ ಪುಷ್ಪಲತಾ ಎಂಬಾಕೆಯ ಬರ್ಬರ ಕೊಲೆ ಪ್ರಕರಣವನ್ನು ಜಿಲ್ಲಾ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿದ್ದಾರೆ. ದರೋಡೆಕೋರರು ನುಗ್ಗಿ ಕೊಲೆ ಮಾಡಿದ್ದಾರೆ ಎಂದು ನಂಬಿಸಲು ಯತ್ನಿಸಿದ್ದ ನಾಟಕವನ್ನು ಬಯಲು ಮಾಡಿರುವ ಪೊಲೀಸರು, ಹಣಕ್ಕಾಗಿ ಸ್ವಂತ ನಾದಿನಿ ಹಾಗೂ ಆಕೆಯ ಸೋದರ ಸಂಬಂಧಿಯೇ ಸೇರಿ ಈ ಕೃತ್ಯ ಎಸಗಿರುವುದನ್ನು ಪತ್ತೆಹಚ್ಚಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕೃತ್ಯದ ಹಿನ್ನೆಲೆ ಮತ್ತು ದರೋಡೆ ನಾಟಕ ಮೇ 28ರ ರಾತ್ರಿ ಚಿಕ್ಕಬಳ್ಳಾಪುರ ನಗರದ ಕಂದವಾರ ಬಾಗಿಲು ಬಳಿಯ ಬಾಪೂಜಿ ನಗರದಲ್ಲಿ ಮೇಸ್ತ್ರಿ ನರಸಿಂಹಮೂರ್ತಿ ಎಂಬುವರ ಸೊಸೆ ಪುಷ್ಪಲತಾ (22) ಅವರ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಹಂತಕರು ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಮತ್ತು ಕಿವಿಯೋಲೆಯನ್ನು ದೋಚಿ ಪರಾರಿಯಾಗಿದ್ದರು. ಅಲ್ಲದೆ, ಪುಷ್ಪಲತಾ ಪಕ್ಕದಲ್ಲೇ ಮಲಗಿದ್ದ ನಾದಿನಿ ಭವ್ಯಾಳ ಬಾಯಿಗೆ ಬಟ್ಟೆ ತುರುಕಿ, ಮುಖಕ್ಕೆ ಸ್ಪ್ರೇ ಹೊಡೆದು ದರೋಡೆಕೋರರು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲಾಗಿತ್ತು. ಅಸ್ವಸ್ಥಗೊಂಡಂತೆ ನಟಿಸಿದ್ದ ಭವ್ಯಾಳನ್ನು ಆಸ್ಪತ್ರೆಗೆ…

Read More