Subscribe to Updates
Get the latest creative news from FooBar about art, design and business.
Author: kannadanewsnow05
ನವದೆಹಲಿ : ಖ್ಯಾತ ಒಡಿಸ್ಸಿ ನೃತ್ಯ ಗಾತಿ ಮಧುಮಿತ ರಾವತ್ (59) ನವ ದೆಹಲಿಯಲ್ಲಿ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ಮಧುಮಿತ ರಾವತ್ ನಿಧನರಾಗಿದ್ದಾರೆ. ಹಲವು ಪ್ರತಿಷ್ಠಿತ ಪ್ರಶಸ್ತಿಗಳಿಗೆ ಮಧುಮಿತ ರಾವತ್ ಭಾಜನರಾಗಿದ್ದರು. ಮಧುಮಿತಾ ರಾವತ್ ಅವರು ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರವಾದ ಒಡಿಸ್ಸಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸಿದ ಹಿರಿಯ ಕಲಾವಿದೆ. ಇವರು ಕೇವಲ ನೃತ್ಯಗಾರ್ತಿಯಾಗಿರದೆ, ಒಬ್ಬ ಸಮರ್ಥ ಗುರು ಮತ್ತು ಸಂಶೋಧಕಿಯಾಗಿಯೂ ಗುರುತಿಸಿಕೊಂಡಿದ್ದರು. ನೃತ್ಯ ಪರಂಪರೆ: ಅವರು ಖ್ಯಾತ ಗುರು ಕೇಲುಚರಣ್ ಮಹಾಪಾತ್ರ ಅವರ ಶಿಷ್ಯೆಯಾಗಿ ಒಡಿಸ್ಸಿಯ ಸೂಕ್ಷ್ಮತೆಗಳನ್ನು ಕರಗತ ಮಾಡಿಕೊಂಡಿದ್ದರು. ಸಾಧನೆ: ದೇಶ-ವಿದೇಶಗಳ ಪ್ರತಿಷ್ಠಿತ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿರುವ ಇವರು, ‘ಮಯಾಧರ್ ರಾವತ್ ಸ್ಕೂಲ್ ಆಫ್ ಒಡಿಸ್ಸಿ ಡ್ಯಾನ್ಸ್’ ಮೂಲಕ ನೂರಾರು ಶಿಷ್ಯರನ್ನು ಬೆಳೆಸಿದ್ದಾರೆ. ಪ್ರಶಸ್ತಿ-ಗೌರವ: ಕಲಾಕ್ಷೇತ್ರಕ್ಕೆ ಅವರು ನೀಡಿದ ಅನನ್ಯ ಕೊಡುಗೆಗಾಗಿ ಅವರಿಗೆ ಅನೇಕ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಗೌರವಗಳು ಲಭಿಸಿವೆ. ವಿಶೇಷತೆ: ಒಡಿಸ್ಸಿ ನೃತ್ಯಕ್ಕೆ ಹೊಸ ಆಯಾಮ ನೀಡಿದ ಅವರು,…
ಮಂಗಳೂರು : ಮೂಡಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಅವರ ಆಡಿಯೋ ಮತ್ತು ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಇನ್ಸ್ಪೆಕ್ಟರ್ ವರ್ತನೆಯಲ್ಲಿ ಲೋಪವಿರುವುದು ನಿಜವಾದರೂ, ಅವರ ವಿರುದ್ಧದ ಕೆಲವು ದೂರುಗಳು ಪೂರ್ವಗ್ರಹ ಪೀಡಿತ ಮತ್ತು ಸುಳ್ಳು ಎಂದು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇಬ್ಬರು ಮಹಿಳೆಯರ ಆರೋಪ ಸುಳ್ಳು ಎಂದು ಪೊಲೀಸ್ ವರದಿಯಲ್ಲಿ ತಿಳಿದು ಬಂದಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಮತ್ತು ಪ್ರೇರಿತ ಎಂದು ಸಾಬೀತು ಆಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದರು. ಇದೇ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ನೀಡಿದ್ದ ಕಿರುಕುಳದ ದೂರುಗಳ ಬಗ್ಗೆ ಪ್ರಸ್ತಾಪಿಸಿರುವ ಸುಧೀರ್ ಕುಮಾರ್ ರೆಡ್ಡಿ, ತನಿಖೆಯಲ್ಲಿ ಈ ದೂರುಗಳು ಸುಳ್ಳು ಮತ್ತು ದುರುದ್ದೇಶಪೂರಿತ ಎಂಬುದು ಸಾಬೀತಾಗಿದೆ. ಆಡಿಯೋ/ವಿಡಿಯೋದಲ್ಲಿರುವ ಮಹಿಳೆಯರು ತಾವು ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ. ವಿಡಿಯೋ…
ಬಾಗಲಕೋಟೆ : ಟ್ರೆಡಿಂಗ್ ಹೆಸರಿನಲ್ಲಿ ವಂಚಿಸುತ್ತಿದ್ದ ಆರೋಪಿಯನ್ನು ಇದೀಗ ಬಾಗಲಕೋಟೆ ಸೆನ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಪ್ರಜ್ವಲ್ (25) ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ಬಂದಿತ ಆರ್ ಪಿ ಬಳಿ ಇದ್ದ ಒಂದು ಮೊಬೈಲ್ ಒಂದು ಡೆಬಿಟ್ ಕಾರ್ಡ್ ಜಪ್ತಿ ಮಾಡಿಕೊಂಡಿದ್ದಾರೆ. ಉಜ್ಜೀವನ್ ಸ್ಮಾಲ್ ಫೈನಾನ್ಸ್ ಖಾತೆಯ ಮೂಲಕ 1.20 ಕೋಟಿ ಪಂಜನೆಯಾಗಿದ್ದಾನೆ. ತನಿಖೆಯ ವೇಳೆ ಬಾಗಲಕೋಟೆ ಜಿಲ್ಲೆಯ ಒಟ್ಟು 1296 ಮ್ಯೂಲ್ ಅಕೌಂಟ್ ಗಳು ಇರುವುದು ಪತ್ತೆಯಾಗಿದೆ. ಸದ್ಯ ಸೆನ್ ಠಾಣೆ ಪೊಲೀಸರು ಆತನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಸ್ತಕ್ಷೇಪದ ಬಗ್ಗೆ ಹೈಕೋರ್ಟ್ ಅಸಮಾಧಾನ ಹೊರಹಾಕಿತ್ತು. ಇದೀಗ ಅದರ ಬೆನ್ನಲ್ಲೇ ಹೈಕೋರ್ಟ್ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಅಥವಾ ಸ್ಥಳ ನಿಯುಕ್ತಿ ವಿಚಾರಗಳು ಇಲಾಖಾ ಹಂತದಲ್ಲೇ ಮುಗಿಯಬೇಕು ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಬೆಸ್ಕಾಂ ಸಹಾಯಕ ಎಂಜಿನಿಯರ್ ಒಬ್ಬರ ಮೇಲ್ಮನವಿ ವಿಚಾರಣೆ ವೇಳೆ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಉದ್ಯಮಗಳ ಅಧಿಕಾರಿಗಳ ವರ್ಗಾವಣೆ ಹಾಗೂ ಸ್ಥಳ ನಿಯುಕ್ತಿ ವಿಚಾರಗಳು ಸಂಬಂಧಪಟ್ಟ ಆಡಳಿತ ಇಲಾಖೆಯ ಹಂತದಲ್ಲೇ ಮುಗಿಯಬೇಕು ಎಂದು ಸ್ಪಷ್ಟಪಡಿಸಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ವೈಟ್ಫೀಲ್ಡ್ ವಿಭಾಗದ ಸಹಾಯಕ ಎಂಜಿನಿಯರ್ ಎಸ್.ಚೇತನ್ ಎಂಬಾತ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಅಭಿಪ್ರಾಯ ನೀಡಿತು.ಸರ್ಕಾರಿ ಅಧಿಕಾರಿಗಳು ಮತ್ತು ಸರ್ಕಾರಿ ಉದ್ಯಮದಲ್ಲಿ ಕೆಲಸ ಮಾಡುವ ಅಧಿಕಾರಿಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿ ಸಂಬಂಧಪಟ್ಟ ಆಡಳಿತ ಇಲಾಖೆ ನಿರ್ವಹಿಸಬೇಕು ಎಂದು…
ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಭಾರಿ ಅನಾಹುತ ಒಂದು ತಪ್ಪಿದ್ದು , ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಎಂಟು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೋಡಾಳ ಗ್ರಾಮದ ಬಳಿ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕೆಕೆಆರ್ಟಿಸಿ ಬಸ್ ಪಲ್ಟಿ ಆಗಿದೆ. ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಕೊಪ್ಪಳ ಜಿಲ್ಲೆಯ ಕುಕನೂರಿನಿಂದ ಈ ಒಂದು ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದ್ದು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ವಾಣಿಜ್ಯ ಮತ್ತು ಗೃಹಬಳಕೆಯ ಸಿಲಿಂಡರ್ಗಳ ತೀವ್ರ ಕೊರತೆ ಉಂಟಾಗಿರುವ ಬೆನ್ನಲ್ಲೇ, ಖದೀಮರು ಇದನ್ನೇ ಲಾಭ ಮಾಡಿಕೊಳ್ಳುತ್ತಿದ್ದಾರೆ. ಯುಗಾದಿ ಹಬ್ಬದ ಹಿನ್ನೆಲೆ ಮನೆಯ ಮುಂದೆ ಅಥವಾ ಕಾಂಪೌಂಡ್ ಒಳಗೆ ಇಟ್ಟಿದ್ದ ಸಿಲಿಂಡರ್ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡಲಾಗುತ್ತಿದೆ. ಈಗಾಗಲೇ ನಗರದ ಕಲ್ಯಾಣ ನಗರ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ವರದಿಯಾಗಿದ್ದು, ಹಬ್ಬದ ಸಂಭ್ರಮದಲ್ಲಿದ್ದ ಸಾರ್ವಜನಿಕರು ಕಂಗಾಲಾಗಿದ್ದಾರೆ. ಈ ಕುರಿತು ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೀಗ ಸಿಲಿಂಡರ್ ಅಭಾವ ಬೆನ್ನೆಲೆ ಬೆಂಗಳೂರಿನಲ್ಲಿ ಸಿಲಿಂಡರ್ ಕಳ್ಳತನ ನಡೆದಿದೆ. ಯುಗಾದಿ ಹಬ್ಬದ ದಿನವೇ ಸಿಲಿಂಡರಿಗಳನ್ನು ಕಳ್ಳತನ ಮಾಡಲಾಗಿದೆ ಗ್ರಹ ಬಳಕೆಯ ಎಲ್ಲೆರಡು ಸಿಲಿಂಡರ್ ಗಳನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. ವಿಶ್ವಪ್ರಿಯ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಗಳನ್ನು ಕಳ್ಳರು ಕದ್ದು ವೈದಿದ್ದಾರೆ. ಬೆಂಗಳೂರಿನ ಬೇಗೂರು ಬಳಿಯ ಅಪಾರ್ಟ್ಮೆಂಟ್ ನಲ್ಲಿ ಬೈಕ್ ನಲ್ಲಿ ಬಂದು ಹೆಲ್ಮೆಟ್ ಹಾಕಿಕೊಂಡು ಸಿಲಿಂಡರ್ ಸ್ಕೂಟಿ ಮೇಲೆ ಇಟ್ಟುಕೊಂಡು ಎಸ್ಕೇಪ್ ಆಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಯುಗಾದಿ…
ಬೆಳಗಾವಿ : ಪ್ರಪಂಚದಲ್ಲಿ ಕೆಟ್ಟ ಮಕ್ಕಳು ಇರುತ್ತಾರೆ ಹೊರತು ಕೆಟ್ಟ ತಂದೆ ತಾಯಿ ಇರಲ್ಲ ಅಂತ ಹಿಂದೆ ಹಿರಿಯರು ಹೇಳಿರುವ ಮಾತಿದೆ. ಆದರೆ ಆ ಒಂದು ಮಾತಿಗೆ ವಿರುದ್ಧವಾಗಿ ಈಗ ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹೆಣ್ಣು ಮಗು ಹುಟ್ಟಿದೆ ಅಂತ 15 ದಿನದ ಹಸುಗೂಸನ್ನೆ, ಭೀಕರವಾಗಿ ಕೊಲೆ ಮಾಡಿದ ಪಾಪಿ ತಂದೆಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಬೆಳಗಾವಿ ತಾಲ್ಲೂಕಿನ ಉಕ್ಕಡ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹದಿನೈದು ದಿನದ ನವಜಾತ ಶಿಶು ಪ್ರಿಯಾಂಕಾ(15 ದಿನ) ಕೊಲೆಯಾದ ದುರ್ದೈವಿ. ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದ ಭೀಮರಾಯ ಚಿಪ್ಪಾಡಿ ಕೊಲೆ ಮಾಡಿರುವ ಪಾಪಿ ತಂದೆ. ಸ್ವಂತ ತಂದೆಯಿಂದಲೇ ಮಗುವಿನ ಹತ್ಯೆ ನಡೆದಿರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ. ನನ್ನ ಗಂಡನೇ ಮಗುವಿಗೆ ವಿಷ ನೀಡಿ ಕೊಲೆ ಮಾಡಿದ್ದಾರೆ ಎಂದು ಹೆಂಡತಿ ಶೀಲಾ ಚಿಪ್ಪಾಡಿ ಕಾಕತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಭೀಮರಾಯನನ್ನು…
ತುಮಕೂರು : ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮೇಲಾಧಿಕಾರಿ ಜಂಟಿ ನಿರ್ದೇಶಕರ ಕಿರುಕುಳದಿಂದ ಬೇಸತ್ತು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾರಿ ವಿವಾದ ಎಬ್ಬಿಸಿದೆ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ. ಮೃತ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ. ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಾವಿಗೆ…
ಯಾದಗಿರಿ : ಆತ ಕರ್ತವ್ಯ ಲೋಕದ ಹಿನ್ನೆಲೆಯಲ್ಲಿ ವಜಾಗೊಂಡಿದ್ದ. ಬಳಿಕ ಊರಿಗೆ ತೆರಳಲು ವಾಹನ ಸಿಗದಿದ್ದಕ್ಕೆ KKRTC ಬಸ್ ಅನ್ನೆ ಕದ್ದೋಯ್ದಿದ್ದಾನೆ ಹೌದು ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ವಜಾಗೋಂಡ ಚಾಲಕನಿಂದಲೇ ಕೆಕೆಆರ್ಟಿಸಿ ಬಸ್ ಕಳ್ಳತನ ನಡೆದಿದೆ ಮಾರ್ಚ್ 19 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೈದಾಪುರ ನಿಲ್ದಾಣದಲ್ಲಿ ನಿಲ್ಲಿಸಿದ ಬಸ್ ಅನ್ನು ಮಹಿಪಾಲರೆಡ್ಡಿ ಎಂಬ ವಜಾಗೋಂಡ ನೌಕರ ಕದ್ದು ಒಯ್ದಿದ್ದಾನೆ. ಕೆಕೆಆರ್ಟಿಸಿಯ ಚಾಲಕ ಕಮ್ ನಿರ್ವಾಹಕನಾಗಿದ್ದ ಮಹಿಪಾಲರೆಡ್ಡಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಆತನನ್ನು ವಜಾ ಮಾಡಲಾಗಿತ್ತು. ವಜಾಗೊಂಡ ಚಾಲಕ ಮಹಿಪಾಲ ರೆಡ್ಡಿ ಇಂದಲೇ ಇದೀಗ ಬಸ್ ಕಳ್ಳತನ ನಡೆದಿದೆ. ಸ್ವಗ್ರಾಮ ರಾಜನಹಳ್ಳಿಗೆ ಹೋಗಲು ಯಾವುದೇ ವಾಹನ ಸಿಕ್ಕಿರಲಿಲ್ಲ. ಬಸ್ ಕಳ್ಳತನ ಮಾಡಿ ಗ್ರಾಮದ ದೇವಸ್ಥಾನದ ಬಳಿ ನಿಲ್ಲಿಸಿದ್ದಾನೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ಮಹಿಪಾಲ ರೆಡ್ಡಿ ವಿರುದ್ಧ ಕೆಎಸ್ ದಾಖಲಾಗಿದೆ. ಕಳ್ಳತನವಾಗಿದ್ದ ಕೆಕೆಆರ್ಟಿಸಿ ಬಸ್ ಅನ್ನು ಪೊಲೀಸರು ವಾಪಸ್ ತಂದಿದ್ದಾರೆ.
ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ ಬಿಜೆಪಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಇನ್ನು ಅಭ್ಯರ್ಥಿಗಳ ಹೆಸರು ಘೋಷಣೆಯಲ್ಲಿ ಗೊಂದಲದಲ್ಲಿ ಇದೆ ಆದರೆ ಟಿಕೆಟ್ ಘೋಷಣೆ ಮೊದಲೇ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಇಂದು ಸಚಿವ ಮಲ್ಲಿಕಾರ್ಜುನ ಪುತ್ರ ಸಮರ್ಥ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಮುನ್ನ ನಿಟ್ಟುವಳ್ಳಿ ದುರ್ಗಾಂಬಿಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದರು. ಕಾಂಗ್ರೆಸ್ ನಲ್ಲಿ ಟಿಕೆಟ್ ಫೈನಲ್ ಆಗಿಲ್ಲ ಆದರೂ ತಾಯಿ ಡಾ. ಪ್ರಭಾ ಮಲ್ಲಿಕಾರ್ಜುನ್ ಜೊತೆಗೆ ಸಮರ್ಥ ನಾಮಪತ್ರ ಸಲ್ಲಿಸಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಸಮರ್ಥ ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಕೆಪಿಸಿಸಿ ವಕ್ತಾರ ಡಿ ಬಸವರಾಜ್, ಸಲೀಂ ಅಹಮದ್ ಹಾಗೂ ಗೋಣೆಪ್ಪ ಸಾಥ್ ಕೊಟ್ಟಿದ್ದರು. ಟಿಕೆಟ್ ಘೋಷಣೆ ಆಗದೆ…













