Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, ಇದೀಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಒಟ್ಟು 221 ಶಾಸಕರು ಯಶಸ್ವಿಯಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಇನ್ನೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಒಬ್ಬರು ಮಾತ್ರ ಬಾಕಿಯಿದ್ದು, ಅವರು ಸಹ ಬಂದು ಮತ ಚಲಾಯಿಸಲಿದ್ದಾರೆ. ಕಾಂಗ್ರೆಸ್ ಪರ ವೋಟ್ ಹಾಕಿದ ಸೋಮಶೇಖರ್, ಹೆಬ್ಬಾರ್ ಈ ಬಾರಿಯ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಬಿಜೆಪಿ ಉಚ್ಚಾಟಿತ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಇಂದು ತಮ್ಮ ಮತ ಚಲಾಯಿಸಿದರು. ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವೇಕೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ್ದೇವೆ ಎಂಬುದನ್ನು ಬಹಿರಂಗಪಡಿಸಿದರು. ಇಬ್ಬರು ನಾಯಕರು ಒಟ್ಟಾಗಿಯೇ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದು ವಿಶೇಷವಾಗಿತ್ತು. ಸೌಜನ್ಯಕ್ಕೂ ಸಂಪರ್ಕಿಸದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್,…

Read More

ಬೆಂಗಳೂರು: ರಾಜ್ಯದಲ್ಲಿ ದಿನೇದಿನೆ ಹೆಚ್ಚಾಗುತ್ತಿರುವ ಹೋಂಸ್ಟೇಗಳ ಸ್ಥಾಪನೆ, ನಿರ್ವಹಣೆ ಹಾಗೂ ಅವುಗಳ ಮೇಲ್ವಿಚಾರಣೆಯನ್ನು ನಿಯಂತ್ರಿಸಲು ಒಂದು ಸಮಗ್ರ ನೀತಿ ಮತ್ತು ಬಲಿಷ್ಠ ಶಾಸನಬದ್ಧ ಚೌಕಟ್ಟನ್ನು ರೂಪಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ಈ ಕುರಿತು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನ್ಯಾಯಾಲಯ ಸೂಚಿಸಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟಾ ಗ್ರಾಮದ ಹೋಂಸ್ಟೇಯೊಂದರ ನೋಂದಣಿಯನ್ನು ರದ್ದುಪಡಿಸಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಅದರ ಮಾಲೀಕರಾದ ಪಿ.ಎ. ಪೊನ್ನಪ್ಪ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಇತ್ತೀಚಿನ ದಿನಗಳಲ್ಲಿ ಪ್ರವಾಸೋದ್ಯಮ ವಲಯದಲ್ಲಿ ಹೋಂಸ್ಟೇಗಳ ಪ್ರಾಮುಖ್ಯತೆ ಗಣನೀಯವಾಗಿ ಹೆಚ್ಚುತ್ತಿದೆ. ಆದರೆ, ಇದೇ ಅವಧಿಯಲ್ಲಿ ಅವುಗಳ ವಿರುದ್ಧ ಸಾರ್ವಜನಿಕ ದೂರುಗಳು ಮತ್ತು ಕಾನೂನುಬಾಹಿರ ಚಟುವಟಿಕೆಗಳ ಪ್ರಕರಣಗಳೂ ಸಹ ಹೆಚ್ಚಾಗುತ್ತಿವೆ ಎಂದು ನ್ಯಾಯಪೀಠ ಆತಂಕ…

Read More

ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಇಂದು ನಡೆದ ವಿಧಾನ ಪರಿಷತ್ ಚುನಾವಣೆಯು ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಕಾಂಗ್ರೆಸ್‌ನ 5, ಬಿಜೆಪಿಯ 2 ಹಾಗೂ ಜೆಡಿಎಸ್‌ನ ಒಬ್ಬರು ಅಭ್ಯರ್ಥಿಗಳು ಕಣದಲ್ಲಿದ್ದು, ಒಟ್ಟು 200ಕ್ಕೂ ಹೆಚ್ಚು ಶಾಸಕರು ಈಗಾಗಲೇ ತಮ್ಮ ಹಕ್ಕು ಚಲಾಯಿಸಿದ್ದಾರೆ. ಆದರೆ, ಈ ಮತದಾನದ ಪ್ರಕ್ರಿಯೆಯ ನಡುವೆಯೇ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪಗಳು ಮತ್ತು ಕಾನೂನು ಹೋರಾಟಗಳು ಚುನಾವಣಾ ಕಣದ ಕಾವು ಹೆಚ್ಚಿಸಿವೆ. ಮತದಾನದ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಮೂವರು ಪ್ರಮುಖ ಶಾಸಕರು ಬಹಿರಂಗ ಬೆಂಬಲ ಘೋಷಿಸಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದೆ. ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್, ಹಾಗೂ ಜೆಡಿಎಸ್‌ನ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರು “ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸುತ್ತೇವೆ” ಎಂದು ಪ್ರಕಟಿಸಿ, ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ಹಾಕಿದ್ದಾರೆ. ಈ ಕ್ರಾಸ್ ವೋಟಿಂಗ್ ನಡೆ ಪ್ರತಿಪಕ್ಷಗಳ ಮೈತ್ರಿಗೆ ಭಾರಿ ಮುಖಭಂಗ ಉಂಟುಮಾಡಿದೆ. ಇದೇ ಹೊತ್ತಿನಲ್ಲಿ ಬಿಜೆಪಿಯ ಮತ್ತೊಬ್ಬ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮುಂದುವರಿದಿದ್ದು, ರೇಣುಕಾ ಸ್ವಾಮಿ ಅವರ ತಾಯಿ ಪಾಟಿಸವಾಲಿಗೆ (Cross-examination) ಅವಕಾಶ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯು ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಜೂನ್ 18ರಂದು (ಇಂದು) ವಿಚಾರಣೆಗೆ ಬಂದಿತ್ತು. ಪ್ರಾಸಿಕ್ಯೂಷನ್ ಪರವಾಗಿ ಈ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಆರಂಭವಾಗುತ್ತಿದ್ದಂತೆ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ಪರ ವಕೀಲರಾದ ಸುನಿಲ್ ಅವರು ನ್ಯಾಯಾಲಯಕ್ಕೆ ಹಾಜರಾಗಿ, ವಾದ ಮಂಡಿಸಲು ತಮಗೆ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿಕೊಂಡರು. ಆದರೆ ಇದೇ ಸಂದರ್ಭದಲ್ಲಿ ಅವರು ನ್ಯಾಯಪೀಠದ ಮುಂದೆ ಒಂದು ಪ್ರಮುಖ ಮತ್ತು ಅಚ್ಚರಿಯ ವಿಷಯವನ್ನು ಹಂಚಿಕೊಂಡರು. ನಟ ದರ್ಶನ್ ಪರ ವಕೀಲ ಸುನಿಲ್ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿ, “ನಾನು ಕೆಳ ನ್ಯಾಯಾಲಯದಲ್ಲಿ (ವಿಚಾರಣಾ ಕೋರ್ಟ್) ದರ್ಶನ್ ಪರವಾಗಿ ಹಾಜರಾಗುತ್ತಿದ್ದೇನೆ ನಿಜ. ಆದರೆ, ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಈ ನಿರ್ದಿಷ್ಟ ಅರ್ಜಿಯ ಕೇಸ್‌ನಿಂದ ನಾನು ನಿವೃತ್ತಿ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ ಚುನಾವಣೆ ಮತದಾನ ಪ್ರಕ್ರಿಯೆ ಬೆಂಗಳೂರಿನ ವಿಧಾನಸೌಧದಲ್ಲಿ ಬಿರುಸಿನಿಂದ ಸಾಗುತ್ತಿದೆ. ಇಂದು ಬೆಳಗ್ಗಿನಿಂದಲೇ ಶಾಸಕರು ಸರತಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಹಕ್ಕು ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಯವರೆಗಿನ ಮಾಹಿತಿ ಪ್ರಕಾರ, ಒಟ್ಟು 185 ಶಾಸಕರು ಈಗಾಗಲೇ ತಮ್ಮ ಮತವನ್ನು ಚಲಾಯಿಸಿದ್ದು, ಮತದಾನ ಪ್ರಕ್ರಿಯೆ ಸುಸೂತ್ರವಾಗಿ ಮುನ್ನಡೆಯುತ್ತಿದೆ. ಆದರೆ, ಇದೇ ಹೊತ್ತಿನಲ್ಲಿ ಆಡಳಿತರೂಢ ಕಾಂಗ್ರೆಸ್ ಪಾಳಯದಲ್ಲಿ ದಿಢೀರ್ ರಾಜಕೀಯ ತಂತ್ರಗಾರಿಕೆ ಬದಲಾವಣೆಯಾಗಿದೆ. ಚುನಾವಣೆಗೆ ಮುನ್ನ ನಡೆದ ‘ಮಾಕ್ ವೋಟಿಂಗ್’ (ಅಣಕು ಮತದಾನ) ವೇಳೆ ಕಾಂಗ್ರೆಸ್ ಶಾಸಕರಿಂದ ಗಂಭೀರ ಲೋಪದೋಷಗಳು ಕಂಡುಬಂದಿವೆ. ಮೊದಲ ಸುತ್ತಿನ ಅಣಕು ಮತದಾನದಲ್ಲಿ 15 ಮತಗಳು ಹಾಗೂ ಎರಡನೇ ಸುತ್ತಿನಲ್ಲಿ 4 ಮತಗಳು ಸೇರಿದಂತೆ ಒಟ್ಟು 19 ಮತಗಳು ತಾಂತ್ರಿಕ ಕಾರಣಗಳಿಂದಾಗಿ ‘ಲ್ಯಾಪ್ಸ್’ (ತಿರಸ್ಕೃತ) ಆಗಿರುವುದು ನಾಯಕರ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯ ನಾಯಕರು, ತಮ್ಮ ಅಭ್ಯರ್ಥಿಗಳ ಗೆಲುವನ್ನು ಖಚಿತಪಡಿಸಿಕೊಳ್ಳಲು ತಕ್ಷಣವೇ ಹೊಸ…

Read More

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದು, ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಒಟ್ಟು 185 ಶಾಸಕರು ಯಶಸ್ವಿಯಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಕಾಂಗ್ರೆಸ್ ಪರ ವೋಟ್ ಹಾಕಿದ ಸೋಮಶೇಖರ್, ಹೆಬ್ಬಾರ್ ಈ ಬಾರಿಯ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಬಿಜೆಪಿ ಉಚ್ಚಾಟಿತ ಶಾಸಕರಾದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರು ಇಂದು ತಮ್ಮ ಮತ ಚಲಾಯಿಸಿದರು. ಮತದಾನದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವೇಕೆ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ್ದೇವೆ ಎಂಬುದನ್ನು ಬಹಿರಂಗಪಡಿಸಿದರು. ಇಬ್ಬರು ನಾಯಕರು ಒಟ್ಟಾಗಿಯೇ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದು ವಿಶೇಷವಾಗಿತ್ತು. ಸೌಜನ್ಯಕ್ಕೂ ಸಂಪರ್ಕಿಸದ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡ ಶಾಸಕ ಎಸ್.ಟಿ. ಸೋಮಶೇಖರ್ ಮತ್ತು…

Read More

ಚೆನ್ನೈ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಬೆನ್ನಲ್ಲೇ, ತಮಿಳುನಾಡಿನಲ್ಲಿ ಮತ್ತೊಂದು ಧೃತಿಗೆಡಿಸುವ ಘಟನೆ ಸಂಭವಿಸಿದೆ. ಪರೀಕ್ಷಾ ಅಕ್ರಮಗಳಿಂದ ಮಾನಸಿಕವಾಗಿ ನೊಂದಿದ್ದ 19 ವರ್ಷದ ವೈದ್ಯಕೀಯ ಶಿಕ್ಷಣ ಆಕಾಂಕ್ಷಿಯೊಬ್ಬರು ಇಂದು ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ದೇಶದ ವಿವಿಧೆಡೆ ಹಲವು ವಿದ್ಯಾರ್ಥಿಗಳು ಈ ಹಿನ್ನೆಲೆಯಲ್ಲಿ ಪ್ರಾಣ ಕಳೆದುಕೊಂಡಿದ್ದು, ಇದೀಗ ಆ ಸಾಲಿಗೆ ಮತ್ತೊಂದು ಜೀವ ಸೇರ್ಪಡೆಯಾಗಿದೆ. ಎರಡು ಬಾರಿ ಪರೀಕ್ಷೆ ಬರೆದಿದ್ದ ಅನುಕೀರ್ತನಾ ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅನುಕೀರ್ತನಾ (19) ಎಂದು ಗುರುತಿಸಲಾಗಿದೆ. ವೈದ್ಯೆಯಾಗಬೇಕೆಂಬ ಕನಸು ಹೊತ್ತಿದ್ದ ಈಕೆ ಈಗಾಗಲೇ ಎರಡು ಬಾರಿ ನೀಟ್ ಪರೀಕ್ಷೆಯನ್ನು ಎದುರಿಸಿದ್ದಳು. ಆದಾಗ್ಯೂ, ಉತ್ತಮ ಅಂಕಗಳಿಗಾಗಿ ಶ್ರಮಿಸುತ್ತಿದ್ದ ಆಕೆ ಮೂರನೇ ಬಾರಿಗೆ ಪರೀಕ್ಷೆ ಬರೆಯಲು ತೀವ್ರ ಸಿದ್ಧತೆ ನಡೆಸುತ್ತಿದ್ದಳು ಎನ್ನಲಾಗಿದೆ. ಆದರೆ ಇತ್ತೀಚೆಗೆ ಕೇಳಿಬಂದ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಸುದ್ದಿಯಿಂದಾಗಿ ಆಕೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಕುಟುಂಬದ…

Read More

ಬೆಂಗಳೂರು: ಕರ್ನಾಟಕ ರಾಜಕಾರಣದ ಕುತೂಹಲದ ಕೇಂದ್ರಬಿಂದುವಾಗಿರುವ ವಿಧಾನಪರಿಷತ್ ಚುನಾವಣೆ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಬಿರುಸಿನಿಂದ ಆರಂಭಗೊಂಡಿದೆ. ಆಡಳಿತರೂಢ ಕಾಂಗ್ರೆಸ್‌ನ ಐದು, ಪ್ರತಿಪಕ್ಷ ಬಿಜೆಪಿಯ ಇಬ್ಬರು ಹಾಗೂ ಜೆಡಿಎಸ್‌ನ ಒಬ್ಬರು ಅಭ್ಯರ್ಥಿಗಳು ಸೇರಿದಂತೆ ಒಟ್ಟು 8 ಅಭ್ಯರ್ಥಿಗಳು ಕಣದಲ್ಲಿದ್ದು, ಅಖಾಡ ತೀವ್ರ ರಂಗು ಪಡೆದುಕೊಂಡಿದೆ. ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯುತ್ತಿರುವ ಈ ಚುನಾವಣೆಯಲ್ಲಿ ಶಾಸಕರು ಅತ್ಯಂತ ಉತ್ಸಾಹದಿಂದ ಬಂದು ಮತ ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಆರಂಭಿಕ ಗಂಟೆಗಳಲ್ಲಿಯೇ ಜನಪ್ರತಿನಿಧಿಗಳು ಸರದಿಯಲ್ಲಿ ನಿಂತು ಹಕ್ಕು ಚಲಾಯಿಸಿದರು. ಬೆಳಿಗ್ಗೆ 11 ಗಂಟೆಯ ವೇಳೆಗೆ ಶೇಕಡಾ 34% ರಷ್ಟು ಮತದಾನ ದಾಖಲಾಗಿದ್ದು, ಒಟ್ಟು 77 ಶಾಸಕರು ತಮ್ಮ ಮತವನ್ನು ಚಲಾಯಿಸಿದ್ದಾರೆ. ಮತದಾನದ ಪ್ರಕ್ರಿಯೆಯು ಯಾವುದೇ ಅಡೆತಡೆಯಿಲ್ಲದೆ ಶಾಂತಿಯುತವಾಗಿ ಸಾಗುತ್ತಿದ್ದು, ರಾಜಕೀಯ ಪಕ್ಷಗಳ ಮುಖಂಡರು ವಿಧಾನಸೌಧದ ಕಾರಿಡಾರ್‌ಗಳಲ್ಲಿ ಬಿಡುವಿಲ್ಲದ ಚರ್ಚೆಗಳಲ್ಲಿ ತೊಡಗಿದ್ದಾರೆ. ಬಿಜೆಪಿಗೆ ಶಾಕ್ ಕೊಟ್ಟ ಬಂಡಾಯ ಶಾಸಕರು ಈ ಬಾರಿಯ ಚುನಾವಣೆಯ ಅತ್ಯಂತ ಪ್ರಮುಖ ಬೆಳವಣಿಗೆಯೆಂದರೆ, ಬಿಜೆಪಿಯಿಂದ ಬಂಡಾಯ ಎದ್ದು ಉಚ್ಚಾಟನೆಗೆ ಒಳಗಾಗಿದ್ದ…

Read More

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಎ1 ಆರೋಪಿ ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ ‘ರಾಜಾತಿಥ್ಯ’ ಸಿಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪಕ್ಕೆ ಸಂಬಂಧಿಸಿದಂತೆ ಈಗ ಹೊಸದೊಂದು ಕಾನೂನು ಸಮರ ಆರಂಭವಾಗಿದ್ದು, ಸುಳ್ಳು ವದಂತಿ ಹಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಸಂಧ್ಯಾ ನಾಗರಾಜ್‌ ಎಂಬುವವರ ವಿರುದ್ಧ ಪವಿತ್ರಾಗೌಡ ಜೈಲಿನಿಂದಲೇ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಖಾಸಗಿ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ಸಂಧ್ಯಾ ನಾಗರಾಜ್‌, ಜೈಲಿನಲ್ಲಿ ಪವಿತ್ರಾಗೌಡ ಅವರಿಗೆ ಅಧಿಕಾರಿಗಳು ವಿಶೇಷ ಸಹಕಾರ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. “ಪವಿತ್ರಾಗೌಡ ಅವರಿಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿದೆ, ಪ್ರತಿದಿನ ಹೊರಗಿನಿಂದ ಬಾಕ್ಸ್‌ನಲ್ಲಿ ಊಟ ತಂದುಕೊಡಲಾಗುತ್ತಿದೆ” ಎಂದು ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಭೇಟಿಯಾಗಿದ್ದಾಗಿ ಹೇಳಿದ್ದ ಸಂಧ್ಯಾ ನಾಗರಾಜ್ ಹಿಂದೆ ಯಾವುದೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದ ಸಂಧ್ಯಾ ನಾಗರಾಜ್‌, ತಾವು ಕಾರಾಗೃಹದಲ್ಲಿದ್ದಾಗ ಪವಿತ್ರಾಗೌಡ ಅವರನ್ನು ಭೇಟಿಯಾಗಿದ್ದಾಗಿ ಹಕ್ಕು ಸಾಧಿಸಿದ್ದರು.…

Read More

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು ಇದೀಗ, ಕೊನೆಯ ಕ್ಷಣದಲ್ಲಿ ತಂತ್ರಗಾರಿಕೆ ಬದಲಿಸಿದ ಬಿಜೆಪಿ, ಇಬ್ಬರು ಅಭ್ಯರ್ಥಿಗಳಿಗೆ ತಲಾ 30 ಮತಗಳ ಚಲಾವಣೆ ಆಗಿರುವುದರಿಂದ ಜೆಡಿಎಸ್ ಗೆ ಬಿಗ್ ಶಾಕ್ ಎದುರಾಗಿದೆ. ಜೆಡಿಎಸ್ ಗೆ ಹೆಚ್ಚುವರಿಯಾಗಿ ಎರಡು ಮತಗಳನ್ನು ಮಾತ್ರ ಬಿಜೆಪಿ ಬಿಟ್ಟು ಕೊಟ್ಟಿದೆ. ಬಿಜೆಪಿಯ ಎರಡನೇ ಪ್ರಶಾಸ್ತ್ಯದ ಮತಗಳು ಜೆಡಿಎಸ್ ಗೆ ಹೋಗಿದೆ. ಅಡ್ಡ ಮತದಾನದ ಭೀತಿಯಿಂದ ಬಿಜೆಪಿ ಕೊನೆಯಲ್ಲಿ ತಂತ್ರ ರೂಪಿಸಿ ಜೆಡಿಎಸ್ ಗೆ ಕೇವಲ ಎರಡು ಮತ ಬಿಟ್ಟು ಕೊಟ್ಟಿದೆ. ಹಿತ ಜೆಡಿಎಸ್ ಗು ಕೂಡ ಒಂದು ನಿರೀಕ್ಷೆ ಇತ್ತು, ಈ ಬಾರಿ ಹೇಗಾದರೂ ಮಾಡಿ ಒಂದು ಸ್ಥಾನವನ್ನು ಆದರೂ ಗೆಲ್ಲಿಸಲು ಹಠ ತೊಟ್ಟಿತ್ತು. ಆದರೆ ಇದೀಗ ಬಿಜೆಪಿ ಜೆಡಿಎಸ್ ಗೆ ಶಾಕ್ ನೀಡಿದೆ.

Read More