Author: kannadanewsnow05

ಕಲಬುರ್ಗಿ : ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಂದಿನಿ (16) ಮತ್ತು ಸಂಜನಾ (17) ಎಂಬ ಇಬ್ಬರು ಬಾಲಕಿಯರ ಶವಗಳು ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿವೆ. ಅಘಾತ ವಿಷಯ ಏನೆಂದರೆ, ಇಬ್ಬರ ಕೈಗಳನ್ನು ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಶವಗಳು ಕಂಡುಬಂದಿರುವುದು ಪ್ರಕರಣಕ್ಕೆ ಗಂಭೀರ ತಿರುವು ನೀಡಿದೆ. ಇಬ್ಬರೂ ಅಣ್ಣ-ತಮ್ಮಂದಿರ ಮಕ್ಕಳಾಗಿದ್ದು, ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗುತ್ತಿವೆ. ಈ ಸಂಬಂಧ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಹಳೆ ವೈಷಮ್ಯ ಹಿನ್ನೆಲೆ ಊರ ಜಾತ್ರೆಯ ವೇಳೆ ಅಟ್ಟಾಡಿಸಿ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹನುಮಂತಯ್ಯನಪಾಳ್ಯದಲ್ಲಿ ಈ ಒಂದು ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮಾಂಜಿನಪ್ಪ (45) ಎಂದು ತಿಳಿದುಬಂದಿದೆ. ಕೊಲೆಗೈದ ಬಳಿಕ ಬೈಕ್ ಸಮೇತ ಗುಡ್ಡದ ಬಳಿ ಆರೋಪಿಗಳು ರಾಮಾಂಜಿನಪ್ಪ ಶವ ಎಸೆದು ಪರಾರಿಯಾಗಿದ್ದಾರೆ. ರಸ್ತೆ ಬದಿ ಬಿದ್ದಿದ್ದ ಬೈಕ್ ಪರಿಶೀಲನೆ ಮಾಡಿದಾಗ ಶವ ಪತ್ತೆಯಾಗಿದೆ. ಘಟನೆ ಕುರಿತಂತೆ ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Read More

ಬಿಹಾರ್ : ಬಿಹಾರದ ನೂತನ ಸಿಎಂ ಆಗಿ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ಬಿಹಾರ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಿ ಸಾಮ್ರಾಟ್ ಚೌದರಿ ಇದೀಗ ಆಯ್ಕೆ ಆಗಿದ್ದಾರೆ. ಬಿಹಾರದ ಮೊದಲ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಗೆ ಸಾಮ್ರಾಟ್ ಚೌದರಿ ಪಾತ್ರರಾಗಿದ್ದಾರೆ. ಸದ್ಯ ಅವರು ಬಿಹಾರ ರಾಜ್ಯದ ಹಾಲಿ ಉಪ ಮುಖ್ಯಮಂತ್ರಿ ಆಗಿದ್ದಾರೆ. ನಾಳೆ ಬಿಹಾರದ ನೂತನ ಸಿಎಂ ಪ್ರಮಾಣವಚನ ಸ್ವೀಕಾರ ಸಮಾರಂಭ ಚೌದ್ರಿ ಬಿಹಾರದ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು ಅದರ ಬೆನ್ನಲ್ಲೇ ಬಿಹಾರದ ನೂತನ ಮುಖ್ಯಮಂತ್ರಿ ಯಾಗಿ ಬಿಜೆಪಿಯ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ಯಾರಿದು ಸಾಮ್ರಾಟ ಚೌದರಿ? ಬಿಹಾರದಲ್ಲಿ ಬಿಜೆಪಿ ‘ಮೇಲ್ವರ್ಗ ಪರ’ ಎಂಬ ಆರೋಪಗಳನ್ನು ತೊಡೆದು ಹಾಕಲು ನೆರವಾಗುತ್ತಿರುವ ಒಬಿಸಿ ನಾಯಕ ಸಾಮ್ರಾಟ್ ಚೌಧರಿ, ಸುಮಾರು ಏಳು ವರ್ಷಗಳ ಹಿಂದೆ ಪಕ್ಷ ಸೇರ್ಪಡೆಯಾದ ಬಳಿಕ ತ್ವರಿತವಾಗಿ ಪ್ರಮುಖ ನಾಯಕರಾಗಿ ಬೆಳೆದವರು. ಸಾಮ್ರಾಟ್ ಅವರನ್ನು ಬಿಜೆಪಿ ಶಾಸಕಾಂಗ…

Read More

ಬಿಹಾರ್ : ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ಮಂಗಳವಾರ ರಾಜೀನಾಮೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಎರಡು ದಶಕಗಳ ಐತಿಹಾಸಿಕ ಯುಗ ಅಂತ್ಯಗೊಂಡಿದೆ. ಅದರ ಬೆನ್ನಲ್ಲೇ ಬಿಹಾರದ ನೂತನ ಮುಖ್ಯಮಂತ್ರಿ ಯಾಗಿ ಸಾಮ್ರಾಟ್ ಚೌದರಿ ಆಯ್ಕೆಯಾಗಿದ್ದಾರೆ. ನಿತೀಶ್ ಕುಮಾರ್ ಸುಮಾರು 20 ವರ್ಷಗಳಿಂದ ಬಿಹಾರದ ರಾಜಕೀಯ ಭೂದೃಶ್ಯದ ನಿರ್ಣಾಯಕ ವ್ಯಕ್ತಿಯಾಗಿದ್ದಾರೆ. ಜನತಾ ದಳ (ಯುನೈಟೆಡ್) (ಜೆಡಿಯು) ಮುಖ್ಯಸ್ಥರ ನಿರ್ಗಮನವನ್ನು ಹಲವಾರು ಕಾರಣಗಳಿಗಾಗಿ “ಪರಿಣಾಮಕಾರಿ ಬದಲಾವಣೆ” ಎಂದು ನೋಡಲಾಗುತ್ತದೆ. ಅವರ ನಿರ್ಗಮನವು ಮೈತ್ರಿಕೂಟದ ಪಾಲುದಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಬಿಹಾರದಲ್ಲಿ ತನ್ನ ಮೊದಲ ಮುಖ್ಯಮಂತ್ರಿಯನ್ನು ನೇಮಿಸಲು ದಾರಿ ಮಾಡಿಕೊಡುತ್ತದೆ, ಈ ಹಿಂದೆ ಅದು ಕಿರಿಯ ಪಾಲುದಾರ ಅಥವಾ ಒಕ್ಕೂಟದಲ್ಲಿ ಮಾತ್ರ ಸೇವೆ ಸಲ್ಲಿಸಿದ್ದ ರಾಜ್ಯವಾಗಿದೆ. ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನಂತರ ಅಧಿಕಾರ ವಹಿಸಿಕೊಳ್ಳಲಿದ್ದಾರೆ. https://twitter.com/NitishKumar/status/2043991163473146172?t=U3mQcEdW4RuN0zyPSi4oMQ&s=19

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, 14 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ದುರಂತ ಸಂಭವಿಸಿದೆ. ವೈಟ್ ಫೀಲ್ಡ್ ಬಳಿಯ ಇಮ್ಮಡಿ ಹಳ್ಳಿಯ ಮನೆಯಲ್ಲಿ ಮನೆಯಲ್ಲಿ ಈ ಒಂದು ಘಟನೆ ನಡೆದಿದೆ. ಕಾರುಣ್ಯ (14) ವರ್ಷದ ಮಗಳನ್ನು ಉಸಿರುಗಟ್ಟಿಸಿ ತಾಯಿ ಕೊಲೆ ಮಾಡಿದ್ದಾರೆ. ಬಳಿಕ ತಾಯಿ ಸುವರ್ಣ (40) ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ ಸುವರ್ಣ ಅವರ ಅತ್ತೆ ಮಾವ ಮನೆಯಲ್ಲಿ ಇದ್ದರು ಈ ವೇಳೆ ಕೋಣೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಈ ಒಂದು ಘಟನೆಗೆ ಏನು ಕಾರಣ ಎನ್ನುವುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ವಿಜಯಪುರ : ವಿಜಯಪುರದಲ್ಲಿ ಗೌರಘಟನೆ ಒಂದು ಸಂಭವಿಸಿದ್ದು ತಾನೇ ಹೆತ್ತ ಮಗನನ್ನು ನದಿಗೆ ತಳಿ ಕೊಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ನಾಗಠಾಣದಲ್ಲಿ ನಡೆದಿದೆ. ಇದಕ್ಕೆ ಕಾರಣ ಮಗ ತನ್ನ ಹೋಲಿಕೆ ಇಲ್ಲ ಎಂದು ತಿಳಿದು ನದಿಗೆ ತಳ್ಳಿ ಮಗನನ್ನು , ತಂದೆಯೇ ಕೊಲೆ ಮಾಡಿದ್ದಾನೆ. ಹೌದು ನಾಗಠಾಣದ ಸಿದ್ಧಾರ್ಥ ಮಲ್ಲಿಕಾರ್ಜುನ್ ಅರಕೇರಿ (6) ಕೊಲೆಯಾದ ಬಾಲಕನಾಗಿದ್ದು ಮಲ್ಲಿಕಾರ್ಜುನ ಅರಕೇರಿಗೆ ಗ್ರಾಮದ ಕೆಲ ಜನರು ನಿನ್ನ ಮಗ ಸಿದ್ದಾರ್ಥ ನೋಡಲು ನಿನಂತೆ ಇಲ್ಲ ಎಂದು ಚೇಡಿಸಿದ್ದರು. ನಿನ್ನ ಮಗನ ಹೋಲಿಕೆ ನಿನ್ನಂತಿಲ್ಲ ಎಂದು ನಿತ್ಯ ಸತಾಯಿಸುತ್ತಿದ್ದರು, ಇದರಿಂದ ರೋಸಿಹೋಗಿದ್ದ ಮಲ್ಲಿಕಾರ್ಜುನ ಅರಕೇರಿ ಹೆತ್ತ ಮಗನನ್ನು ನದಿಯಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾನೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆ ವಡೋಲಿ ಬಳಿ ಕೃಷ್ಣಾ ನದಿ ಬಳಿ ಕರೆದುಕೊಂಡು ಹೋಗಿ ಮಗುವನ್ನ ನದಿಗೆ ತಳ್ಳಿದ್ದಾನೆ. ಕಳೆದ ಮಾರ್ಚ್​ 16 ರಂದು ಮಗನನ್ನು ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿ ಹತ್ಯೆ ಮಾಡಿ ವಾಪಸ್​ ಊರಿಗೆ ಬಂದಿದ್ದ ಆರೋಪಿ ಮಲ್ಲಿಕಾರ್ಜುನ ಅರಕೇರಿ,…

Read More

ಇಸ್ಲಾಮಾಬಾದ್ : ಆಸ್ಪತ್ರೆಯಲ್ಲಿ ಬಳಕೆ ಮಾಡಿರುವ ಸಿರಿಂಜ್ ಅನ್ನು ಮತ್ತೆ ಮತ್ತೆ ಬಳಕೆ ಮಾಡಿದ ಪರಿಣಾಮ 331 ಮಕ್ಕಳಿಗೆ HIV ಸೋಂಕು ತಗುಲಿರುವ ಆಘಾತಕಾರಿ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಹೌದು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಅಸುರಕ್ಷಿತ ಇಂಜೆಕ್ಷನ್ ಪದ್ಧತಿಗಳು ಮುಂದುವರೆದಿವೆ. ಮಕ್ಕಳಲ್ಲಿ ಹೆಚ್‌ಐವಿ ಪ್ರಕರಣಗಳು ಹೆಚ್ಚಾದ ನಂತರ ಕಠಿಣ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಅಲ್ಲಿ ಮರುಬಳಕೆ ಮಾಡಲಾದ ಸಿರಿಂಜ್‌ಗಳು ಮತ್ತು ಕಲುಷಿತ ಬಾಟಲುಗಳು ನೂರಾರು ಮಕ್ಕಳನ್ನು ಸೋಂಕಿಗೆ ದೂಡಿವೆ ಎನ್ನಲಾಗಿದೆ. ಪ್ರಾಂತೀಯ ಸ್ಕ್ರೀನಿಂಗ್ ಕಾರ್ಯಕ್ರಮಗಳು, ಖಾಸಗಿ ಚಿಕಿತ್ಸಾಲಯಗಳು ಮತ್ತು ಸೋರಿಕೆಯಾದ ಪೊಲೀಸ್ ದಾಖಲೆಗಳ ಡೇಟಾವನ್ನು ಬಳಸಿಕೊಂಡು ತನಿಖಾ ವರದಿ ಮಾಡಲಾಗಿದೆ. 2024ರ ನವೆಂಬರ್‌ನಿಂದ 2025 ರ ಅಕ್ಟೋಬರ್‌ ನಡುವೆ ಟೌನ್ಸಾದಲ್ಲಿ ಹೆಚ್‌ಐವಿ ಪಾಸಿಟಿವ್ ಪರೀಕ್ಷೆಯಲ್ಲಿ 331 ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ.

Read More

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್‌ಜೈಂಟ್ಸ್ ತಂಡಗಳ ನಡುವೆ ನಾಳೆ ಐಪಿಎಲ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನ‌ ಮಾಡಲಾಗಿದೆ. ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳು: ​ಕ್ವೀನ್ಸ್ ರಸ್ತೆಯಲ್ಲಿ ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ವೃತ್ತದಿಂದ ಸಿಟಿಓ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ ​. ಇನ್ನು ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ಮತ್ತು ಕ್ವೀನ್ಸ್ ರಸ್ತೆಯಿಂದ ಅನಿಲ್ ಕುಂಬ್ಳೆ ಜಂಕ್ಷನ್‌ವರೆಗೆ ರಸ್ತೆಯ ಎರಡೂ ಕಡೆ. ಅದೇ ರೀತಿ ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆ, ​ಸೆಂಟ್ರಲ್ ಸ್ಟ್ರೀಟ್ ರಸ್ತೆ. ​ಕಬ್ಬನ್ ರಸ್ತೆಯಲ್ಲಿ ಸಿಟಿಒ ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಎರಡು ಬದಿಯಲ್ಲಿ, ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ…

Read More

ಬೆಂಗಳೂರು : ಜಿ ಡಿ ಪಿ ಮೇಲೆ ರಾಜ್ಯದ ಅಭಿವೃದ್ಧಿ ಲೆಕ್ಕ ಹೇಳುವುದಕ್ಕೆ ಆಗಲ್ಲ. ಕೇಂದ್ರದ ಜಿಡಿಪಿಗಿಂತ ರಾಜ್ಯದ ಜಿಡಿಪಿ ಉತ್ತಮ ಅಂತ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. ಕೇಂದ್ರದ ಜಿಡಿಪಿ ಗಿಂತ ರಾಜ್ಯದ ಜಿಡಿಪಿ ಉತ್ತಮ ಅಂತ ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಕೆಲವು ವಾಸ್ತವ ಅಂಶಗಳು ಇವೆ. ನಿಜಾಂಶ ಇದೆ ಅದು ನೋಡಬೇಕು ನಾನು ಎರಡು ಸಲ ಸಿಎಂ ಆಗಿದ್ದವನು. ನಾನು ಸತ್ಯ ಹೇಳುವುದಕ್ಕೆ ಹೊರಟರೆ ವೀರನ್ ಆಗಿಬಿಡುತ್ತೇನೆ ರಾಜ್ಯದಲ್ಲಿ ಉತ್ತಮ ಆಡಳಿತ ಕೊಡುವ ವ್ಯವಸ್ಥೆ ಬರಬೇಕು ಅದರ ಬಗ್ಗೆ ಪಕ್ಷದ ಕಾರ್ಯಕರ್ತರು ಗಮನ ಕೊಡಬೇಕು ಯಾರು ಸಿಎಂ ಆಗಬೇಕು ಅನ್ನೋದು ನಂತರ ನೋಡೋಣ ಎಂದು ಬೆಂಗಳೂರಲ್ಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಿನಲ್ಲಿ ಶಾಲೆ ಒಂದು ದೊಡ್ಡ ಎಡವಟ್ಟು ಮಾಡಿದೆ. ಬೆಂಗಳೂರಿನ ಪೊಲೀಸ್ ಪಬ್ಲಿಕ್ ಶಾಲೆ ಈ ಒಂದು ಎಡವಟ್ಟು ಮಾಡಿದ್ದು UKG ಇಂದ 7ನೇ ತರಗತಿ ವರೆಗಿನ ಸುಮಾರು 80ಕ್ಕೂ ಹೆಚ್ಚು ಮಕ್ಕಳನ್ನು ಫೇಲ್ ಮಾಡಿದೆ. ಹೌದು ಯುಕೆಜಿ ಇಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿರುವ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಸುಮಾರು 80ಕ್ಕೂ ಹೆಚ್ಚು ಮಕ್ಕಳನ್ನು ಫೇಲ್ ಮಾಡಿದೆ. ಸರ್ಕಾರದ ನಿಯಮದ ಪ್ರಕಾರ ಒಂದು ಹಂತದವರೆಗೆ ಮಕ್ಕಳನ್ನು ಫೇಲ್ ಮಾಡುವ ಹಾಗಿಲ್ಲ ಅಂತ ನಿಯಮವಿದೆ. ಆದರೆ ಈ ಒಂದು ಶಾಲೆ 80 ಮಕ್ಕಳನ್ನು ಮಾಡಿ ಎಡವಟ್ಟು ಮಾಡಿದೆ. ಪೋಷಕರು ಇದೀಗ ಶಾಲೆಯ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ವಿಚಾರವಾಗಿ ಶಾಲೆಯ ಹೆಡ್ ಮಾಸ್ಟರ್ ಅರ್ಚನಾ ಅವರು ಪ್ರತಿಕ್ರಿಯೆ ನೀಡಿದ್ದು ಇದು ಒಂದು ಸುಳ್ಳು ಸುದ್ದಿ, 46 ವಿದ್ಯಾರ್ಥಿಗಳಿಗೆ ಎಚ್ಚರಿಕೆ ಕೊಟ್ಟಿದ್ದು, 25 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಿ ಪಾಸ್ ಮಾಡುತ್ತೇವೆ. ಇದು ಒಂದು ರೀತಿಯಲ್ಲಿ ಎಚ್ಚರಿಕೆ…

Read More