Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್ಸೈಟ್ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ ಎಂಬ ಚರ್ಚೆಗಳು ಜೋರಾಗಿವೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತ್ಯೇಕ ಸಭೆಗಳನ್ನು ನಡೆಸಿದ ಬೆನ್ನಲ್ಲೇ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ರಾಜಕಾರಣದ ಮುಂದಿನ ಭವಿಷ್ಯದ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟ ಹಾಗೂ ಆಡಳಿತ ವೈಫಲ್ಯದಿಂದಾಗಿ ರಾಜ್ಯದಲ್ಲಿ ಶೀಘ್ರದಲ್ಲೇ ಮಧ್ಯಂತರ ಚುನಾವಣೆ ಎದುರಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಸರ್ಕಾರದ ವೈಫಲ್ಯ ಒಪ್ಪಿಕೊಂಡ ಹೈಕಮಾಂಡ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ಯುವಿಜಯೇಂದ್ರ, “ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ನಮಗೆ ಮುಖ್ಯವಲ್ಲ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜ್ಯವನ್ನು…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದಂತಿದೆ. ಕಾಂಗ್ರೆಸ್ ಹೈಕಮಾಂಡ್ನ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಬಲವಾದ ಸುದ್ದಿಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಜಟಾಪಟಿಗೆ ಹೈಕಮಾಂಡ್ ಸದ್ಯದಲ್ಲೇ ತೆರೆ ಎಳೆಯಲಿದೆ ಎನ್ನಲಾಗುತ್ತಿದೆ. ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿಗಳು ತಮ್ಮ ಆಪ್ತರು ಹಾಗೂ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಗುರುವಾರ) ಮುಂಜಾನೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸದಸ್ಯರಿಗಾಗಿ ವಿಶೇಷ ಉಪಹಾರಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಅವರು ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ. ಉಪಹಾರಕೂಟದ ಬೆನ್ನಲ್ಲೇ ಮುಖ್ಯಮಂತ್ರಿಗಳು ರಾಜಭವನಕ್ಕೆ ತೆರಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲು ಸಿಎಂ ಕಚೇರಿಯಿಂದ ಈಗಾಗಲೇ ಸಮಯಾವಕಾಶ ಕೋರಲಾಗಿದೆ. ಈ ಭೇಟಿಯ ವೇಳೆ…
ಮಂಡ್ಯ : ಮಂಡ್ಯದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾದ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 10 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದ ಬಳಿ ನಡೆದಿದೆ. ಹಟ್ನ ಗ್ರಾಮದ ತಾಯಮ್ಮ (60) ಮೃತಪಟ್ಟ ಮಹಿಳೆ. ದೇವರ ಕಾರ್ಯಕ್ಕೆ ನಾಗಮಂಗಲದ ಹೆಗಟಿ ಗ್ರಾಮಕ್ಕೆ ತೆರಳಿದ್ದ ಹಟ್ನ ಗ್ರಾಮದ ಜನರು. ವಾಪಸ್ಸು ಊರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ತಾಯಮ್ಮ ಸ್ಥಳದಲ್ಲೆ ಸಾವನ್ನಪ್ಪಿದ್ದು, ಅಪಘಾತದಲ್ಲಿ ಗಾಯಗೊಂಡಿರುವ 10 ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರ್ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸರಾಳು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರತೀಯ ಸನಾತನ ಧರ್ಮ ಮತ್ತು ಸಂಸ್ಕೃತಿಯಲ್ಲಿ ‘ಓಂ’ (ॐ) ಮತ್ತು ‘ಶ್ರೀ’ (ಶ್ರೀ) ಎಂಬ ಎರಡು ಅಕ್ಷರಗಳು ಅತ್ಯಂತ ಪವಿತ್ರ ಹಾಗೂ ಮೂಲಭೂತವಾದ ಚಿಹ್ನೆಗಳಾಗಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ಇವೆರಡೂ ಕೇವಲ ಅಕ್ಷರಗಳಲ್ಲ, ಬದಲಿಗೆ ಇಡೀ ಬ್ರಹ್ಮಾಂಡದ ಶಕ್ತಿ, ಸೃಷ್ಟಿ ಮತ್ತು ಮಂಗಲದ ಪ್ರತೀಕಗಳು. ಇವುಗಳ ಬಗ್ಗೆ ಕೂಲಂಕಷವಾದ ವಿವರಣೆ ಇಲ್ಲಿದೆ: ೧. ಓಂ (ॐ) – ಬ್ರಹ್ಮಾಂಡದ ಮೂಲ ಧ್ವನಿ ’ಓಂ’ ಅಥವಾ ‘ಓಂಕಾರ’ ಎಂಬುದು ಹಿಂದೂ ಧರ್ಮದ ಅತ್ಯಂತ ಪ್ರಮುಖ ಮತ್ತು ಪ್ರಥಮ ಪ್ರಣವ ಮಂತ್ರವಾಗಿದೆ. ಇದನ್ನು “ಬ್ರಹ್ಮ ಅಕ್ಷರ” ಎನ್ನಲಾಗುತ್ತದೆ. ಆಧಾರಗಳು (Scriptural Evidence) ಮಾಂಡೂಕ್ಯ ಉಪನಿಷತ್: ಈ ಇಡೀ ಉಪನಿಷತ್ತೇ ಓಂಕಾರದ ಮಹತ್ವವನ್ನು ವಿವರಿಸುತ್ತದೆ. “ಓಮಿತ್ಯೇತದಕ್ಷರಮಿದಂ ಸರ್ವಂ” ಎಂದರೆ,…
ಬೆಂಗಳೂರು: ಸಿಲಿಕಾನ್ ಸಿಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಗರ್ಭಿಣಿ ಮಹಿಳೆಯೊಬ್ಬರ ಖಾಸಗಿ ದೃಶ್ಯಗಳನ್ನು ಶೌಚಾಲಯದಲ್ಲಿ ರಹಸ್ಯವಾಗಿ ವಿಡಿಯೋ ಮಾಡಲು ಯತ್ನಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸರ್ಜಾಪುರ ರಸ್ತೆಯಲ್ಲಿರುವ ಪ್ರಮುಖ ಖಾಸಗಿ ಆಸ್ಪತ್ರೆಯಲ್ಲಿ ಈ ಕೃತ್ಯ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ, ವಿಶೇಷವಾಗಿ ಮಹಿಳೆಯರ ಸುರಕ್ಷತೆಯ ಕುರಿತು ತೀವ್ರ ಆತಂಕ ಮತ್ತು ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸದ್ಯ ಬೆಂಗಳೂರಿನ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರು ನೀಡಿರುವ 36 ವರ್ಷದ ಗರ್ಭಿಣಿ ಮಹಿಳೆಯು ಮೇ 21ರಂದು ವೈದ್ಯಕೀಯ ತಪಾಸಣೆಗಾಗಿ ಸರ್ಜಾಪುರ ರಸ್ತೆಯ ಈ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ಆಸ್ಪತ್ರೆಯ ಶೌಚಾಲಯವನ್ನು ಬಳಸುತ್ತಿ Newದ್ದಾಗ, ಆಸ್ಪತ್ರೆಯ ಸಿಬ್ಬಂದಿಯೊಬ್ಬ ಶೌಚಾಲಯದ ಸುತ್ತಮುತ್ತ ಅನುಮಾನಾಸ್ಪದವಾಗಿ ಓಡಾಡಿದ್ದಾನೆ. ಅಷ್ಟೇ ಅಲ್ಲದೆ, ತನ್ನ ಮೊಬೈಲ್ ಫೋನ್ ಬಳಸಿ ಶೌಚಾಲಯದ ಒಳಗಿನ ದೃಶ್ಯಗಳನ್ನು ರಹಸ್ಯವಾಗಿ ಚಿತ್ರೀಕರಿಸಲು ಯತ್ನಿಸುತ್ತಿರುವುದನ್ನು ಮಹಿಳೆ ತಕ್ಷಣವೇ ಗಮನಿಸಿದ್ದಾರೆ. ತಮ್ಮ ಖಾಸಗಿತನಕ್ಕೆ ಧಕ್ಕೆ ತಂದು, ವಿಡಿಯೋ ಚಿತ್ರೀಕರಿಸುತ್ತಿರುವುದನ್ನು ಅರಿತ ಮಹಿಳೆ ಧೈರ್ಯದಿಂದ…
ಮಂಡ್ಯ : ಹೆಂಡತಿಯ ಮುಂದೆ ಸ್ಟೇಟಸ್ ತೋರಿಸಲು ಹೋಗಿ ಪೊಲೀಸರ ಕೈಗೆ ತಗಲಾಕ್ಕೊಂಡ ಐನಾತಿ ಪತಿಯೊಬ್ಬ ಇದೀಗ ಪೋಲೀಸರ ಅಥಿತಿಯಾಗಿದ್ದಾನೆ. ಕಿರುಗಾವಲು ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣ ಸಂಬಂಧ ನಾಲ್ವರು ಸರಗಳ್ಳರ ಬಂಧನವಾಗಿದೆ. ಬಂಧಿತರನ್ನ ಮಳವಳ್ಳಿ ತಾಲ್ಲೂಕಿನ ತಳಗವಾದಿ ಗ್ರಾಮದ ಗುರು ಪ್ರಸಾದ್ @ಗುರು(36), ರೋಹಿತ್@ಗೆದ್ವಾ(20), ನಂಜೇಗೌಡ@ಕಾಶಿ(19), ಹಾಗೂ ಮಣಿಗೆರೆ ಗ್ರಾಮದ ಮಾದೇಶ@ಮಾದ(20) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಗುರು ಪ್ರಸಾದ್ @ಗುರು ಹೆಂಡತಿಯ ಬಳಿ ಶ್ರೀಮಂತಿಕೆ ತೋರಿಸಲು ಸರಗಳ್ಳತನ ಮಾಡ್ತಿದ್ದ ಐನಾತಿ. ಮಾರ್ಚ್ 30 ರಂದು ಕಿರುಗಾವಲು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಜಮೀನಿನ ಬಳಿ ತೆರಳುವ ಒಂಟಿ ಮಹಿಳೆಯರ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡ್ತಿದ್ದ ಖತರ್ನಾಕ್ ಗಳು. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದ ಎಸ್ಪಿ, ಎಎಸ್ಪಿ ತಿಮ್ಮಯ್ಯ, ಸಿಪಿಐ ಶ್ರೀಧರ್, ನೇತೃತ್ವದಲ್ಲಿ ಕಿರುಗಾವಲು ಪಿಎಸ್ಐ ರವಿಕುಮಾರ್, ಬೆಳಕವಾಡಿ ಪಿಎಸ್ಐ ಪ್ರಕಾಶ್, ಸಿಬ್ಬಂದಿಗಳಾದ ಸುನೀಲ್, ಸಿದ್ದಣ್ಣ,ಹರ್ಷ,ಜಯಂತ್,ಲೋಕೇಶ್ ಸೇರಿದಂತೆ ತಂಡ ರಚನೆಯಾಗಿತ್ತು. ಯಶಸ್ಸಿ ಕಾರ್ಯಾಚರಣೆ ಮೂಲಕ ಆರೋಪಿಗಳ ಬಂಧನವಾಗಿದೆ.…
ಬೆಂಗಳೂರು : ಮಹಿಳೆ ಎಂಬ ಕಾರಣ ಜಾಮೀನು ನೀಡಲು ಸಾಕಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪ್ರಿಯಕರನ ಜತೆ ಸಂಬಂಧ ಮುಂದುವರಿಸಲು ಅಡ್ಡಿ ಆಗಿದ್ದಕ್ಕೆ ಪತಿಯನ್ನು ಕೊಲೆ ಮಾಡಿಸಿದ ಆರೋಪ ಎದುರಿ ಸುತ್ತಿರುವ ಮಹಿಳೆಗೆ ಬೇಲ್ ಮಂಜೂರು ಮಾಡಲು ನಿರಾಕರಿಸಿದೆ. ಪತಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚಿತ್ರದುರ್ಗದ ನಿವಾಸಿ ಸುನಿತಾ ಎಂಬಾಕೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾ.ವಿ. ಶ್ರೀಷಾ ನಂದ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ. ಘಟನೆಯ ವಾಸ್ತವಾಂಶ ಪರಿಶೀಲಿಸಿದರೆ, ಮೊದಲ ಆರೋಪಿ ಮತ್ತು ಅರ್ಜಿದಾರ ಮಹಿಳೆ (ಎರಡನೇ ಆರೋಪಿ) ಅಕ್ರಮ ಸಂಬಂಧ ಹೊಂದಿದ್ದರು. ಮೊದಲನೇ ಆರೋಪಿಯು ಅರ್ಜಿದಾರೆಯನ್ನು ಪೋಷಣೆ ಮಾಡುವುದಾಗಿ ಭರವಸೆ ನೀಡಿದ್ದ. ಈ ಇಬ್ಬರು ಜೀವನ ಸಾಗಿಸಲು ಅಡ್ಡಿಯಾಗಿದ್ದಾರೆ ಎಂಬ ಕಾರಣಕ್ಕೆಅರ್ಜಿದಾರೆಯ ಪತಿಯನ್ನು ಕೊಲೆ ಮಾಡಲಾಗಿದೆ. ಪ್ರಕರಣದ ಮುಖ್ಯ ಸಾಕ್ಷಿದಾರರ ವಿಚಾರಣೆ ಬಾಕಿಯಿದೆ. ಹಾಗಾಗಿ, ಈ ಹಂತದಲ್ಲಿ ಆರೋ ಪಿಗೆ ಜಾಮೀನು ನೀಡಲಾಗದು ಎಂದು ಪೀಠ ಹೇಳಿದೆ. ಮಹಿಳೆ ಆಗಿರುವ ಕಾರಣ ಪರಿಗಣಿಸಿ ಜಾಮೀನು ಮಂ…
ಬೆಂಗಳೂರು : ಹೊಸಶೈಕ್ಷಣಿಕ ಸಾಲು (2026-27) ಆರಂಭವಾಗುತ್ತಿದ್ದು, ಜೂ.1ರಿಂದ ಎಲ್ಲಾ ಸರ್ಕಾರಿ ಶಾಲೆಗಳನ್ನು ಪುನರ್ ಆರಂಭಿಸಿ ಹಬ್ಬದ ರೀತಿಯಲ್ಲಿ ಮಕ್ಕಳನ್ನು ಸ್ವಾಗತಿಸಬೇಕೆಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕರೆ ನೀಡಿದ್ದಾರೆ. ನಗರದ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಇಲಾಖಾ ಅಧಿಕಾರಿಗಳು, ಎಲ್ಲಾ ಜಿಲ್ಲಾ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಶಾಲಾ ಶಿಕ್ಷಕರು, ಪ್ರಾಂಶುಪಾಲರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸದಸ್ಯರೊಂದಿಗೆ ಭಾನುವಾರ ವಿಡಿಯೋ ಕಾನ್ಸರೆನ್ ಮೂಲಕ ಮಾತನಾಡಿದ ಸಚಿವರು, ಇಲಾಖೆಯ ಸಾಧನೆ, ಮುಂಬರುವ ಯೋಜನೆಗಳ ಮಾಹಿತಿ ಜೊತೆಗೆ ಹೇಗಿರಬೇಕೆಂದು ತಿಳಿಸಿದರು. ಶಾಲಾ ಪ್ರಾರಂಭೋತ್ಸವಕ್ಕೆ ಮೇ 28, 29, 30 ಮತ್ತು 31ರಂದು ಶಾಲಾ ಆವರಣ ಸ್ವಚ್ಛತೆಗೊಳಿಸಿ, ಶಾಲೆಯ ಎಲ್ಲಾ ಕೊಠಡಿ, ಪೀಠೋಪಕರಣಗಳ ಸ್ಥಿತಿಗತಿ ಅವಲೋಕಿಸುವುದು ಸೇರಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಜೂ.1 ರಂದು ಶಾಲೆಗೆ ಬರುವ ಮಕ್ಕಳನ್ನು ತಳಿರು ತೋರಣ ಕಟ್ಟಿ, ಹಬ್ಬದ ವಾತಾವರಣದಲ್ಲಿ (ಮಕ್ಕಳ ಹಬ್ಬ) ಸ್ವಾಗತಿಸಬೇಕು. ಸ್ವಾಗತಿಸಬೇಕು. ಸಮ ಸಮುದಾಯದವರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ…
ಹಾಸನ, ಮೇ 26: ಮಾನವ-ಆನೆ ಸಂಘರ್ಷ ತಗ್ಗಿಸಲು 2000 ಹೆಕ್ಟೆರ್ ಪ್ರದೇಶದಲ್ಲಿ ಆನೆಧಾಮ ನಿರ್ಮಿಸಲು ಸರ್ಕಾರ ಯೋಜನೆ ರೂಪಿಸಿದ್ದು, 8-10 ದಿನಗಳಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಹಾಸನ ನಗರದ ಗೆಂಡೆಕಟ್ಟೆ ಅರಣ್ಯ ಅತಿಥಿಗೃಹದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನೂರಾರು ಆನೆಗಳು ಕಾಡಿನ ಹೊರಗೇ ಇದ್ದು, ಆನೆಗಳಿಂದ ಬೆಳೆ ಮತ್ತು ಜೀವಹಾನಿ ಆಗದಂತೆ ತಡೆಯಲು ಆನೆಧಾಮ ನಿರ್ಮಿಸಲಾಗುತ್ತಿದೆ ಎಂದರು. ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರು ಈ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದರು. ಹೊಸ ಮೃಗಾಲಯ ಪ್ರಸ್ತಾಪ ಇಲ್ಲ: ಹಾಸನದಲ್ಲಿ ಮೃಗಾಲಯ ಸ್ಥಾಪಿಸುವ ಸಂಬಂಧ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದು ಹೊಸ ಮೃಗಾಲಯ ಸ್ಥಾಪಿಸಲು ಕೇಂದ್ರದ ಅನುಮತಿ ಪಡೆಯಬೇಕಾಗುತ್ತದೆ. ಅನುದಾನವನ್ನೂ ನೀಡಬೇಕಾಗುತ್ತದೆ. ನಿರ್ವಹಣೆಯ ಸಮಸ್ಯೆಯೂ ಇದೆ ಎಂದರು. ರಾಜ್ಯದಲ್ಲಿ…
ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿ ಮಾಡಿರುವ ಕಾಕ್ರೋಚ್ ಜನತಾ ಪಾರ್ಟಿಯನ್ನು (ಸಿಜೆಪಿ) ಅಷ್ಟೊಂದು ಭಾವನಾತ್ಮಕವಾಗಿ ನೋಡಬೇಡಿ ಎಂದು ಸುಪ್ರೀಂಕೋರ್ಟ್ನ ಮುಖ್ಯ ನ್ಯಾ. ಸೂರ್ಯಕಾಂತ್ ಸೋಮವಾರ ಹೇಳಿದ್ದಾರೆ. ಸಿಜೆಐ ಹೇಳಿಕೆಯನ್ನು ವಾಣಿಜ್ಯ ಉದ್ದೇಶಗಳಿಗಾಗಿ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಸಿಜೆಪಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೋರಿ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇವುಗಳ ತುರ್ತು ವಿಚಾರಣೆಗೆ ನಿರಾಕರಿಸಿದ ಸಿಜೆಐ ಸೂರ್ಯಕಾಂತ್ ಅವರನ್ನೊಳಗೊಂಡ ಪೀಠ, ‘ಅರ್ಜಿದಾರರು ಸಿಜೆಪಿಯ ಅಷ್ಟೊಂದು ಭಾವನಾತ್ಮಕವಾಗಿ ನೋಡುವ ಅವಶ್ಯಕತೆ ಇಲ್ಲ. ಅರ್ಜಿಯ ತುರ್ತುವಿಚಾರಣೆಯ ಅನಿವಾರ್ಯತೆಯೂ ಇಲ್ಲ’ ಎಂದು ಹೇಳಿತು. ಇತ್ತೀಚೆಗೆ ನ್ಯಾ. ಸೂರ್ಯಕಾಂತ್ ‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳ ರೀತಿ ವರ್ತಿಸುತ್ತಿದ್ದಾರೆ’ ಎಂಬ ಹೇಳಿಕೆ ನೀಡಿದ್ದರು. ಇದು ಸಂಚಲನ ಸೃಷ್ಟಿಸಿದ ಬೆನ್ನಲ್ಲೇ, ತಾನು ನಕಲಿ ಪದವಿ ಪಡೆದು ಕಾನೂನು ವೃತ್ತಿ ಮಾಡುತ್ತಿರುವವರನ್ನು ಉಲ್ಲೇಖಿಸಿ ಆ ಮಾತು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದರು. ಅದರ ಹೊರತಾಗಿಯೂ ಅವರು ನೀಡಿದ್ದ ಹೇಳಿಕೆಯನ್ನೇ ಆಧರಿಸಿ ಆನ್ಲೈನ್ನಲ್ಲಿ ಕಾಕಿಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ಅಭಿಯಾನ ಆರಂಭವಾಗಿತ್ತು.…














