Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು : ಆಟವಾಡುವಾಗ ಕಾಫಿ ತೋಟದಲ್ಲಿ ಮಗು ನಾಪತ್ತೆಯಾಗಿತ್ತು. ಇದೀಗ 12 ಗಂಟೆಗಳ ಕಾರ್ಯಾಚರಣೆ ನಡೆಸಿ ಇದೀಗ ಪೊಲೀಸರು ಮಗುವನ್ನು ಪತ್ತೆಹಚ್ಚಿದ್ದಾರೆ. ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗುರು ಗ್ರಾಮದಲ್ಲಿ ನಿನ್ನೆ ಸಂಜೆ ಆಟವಾಡುವಾಗ ಒಂದುವರೆ ವರ್ಷದ ಮಗು ನಾಪತ್ತೆಯಾಗಿತ್ತು. ಮಧ್ಯಪ್ರದೇಶದ ಮೂಲದ ಗೋನು ಮತ್ತು ಸೋನು ದಂಪತಿಯ ಗಂಡು ಮಗು ನಾಪತ್ತೆಯಾಗಿತ್ತು. ಟಿ ಎಸ್ಸ್ಟೇಟ್ ನಲ್ಲಿ ಗುರು ಮತ್ತು ಸೋನು ದಂಪತಿ ಕೆಲಸಕ್ಕೆ ಬಂದಿದ್ದರು. ಮಗು ನಾಪತ್ತೆಯಾದ ಬಳಿಕ ಮೂಡಿಗೆರೆ ಸಿಪಿಐ ಬಾಳೂರು ಪಿಎಸ್ಐ ನೇತ್ರತ್ವದಲ್ಲಿ ಶೋಧ ಕಾರ್ಯ ನಡೆದಿದ್ದು ಮೂರು ಮಕ್ಕಳ ಜೊತೆಗೆ ಆಟವಾಡುತ್ತಿದ್ದಾಗ ಮಗು ತೋಟಕ್ಕೆ ಹೋಗಿದೆ. ಇಂದು ಬೆಳಗ್ಗೆ ತೋಟದಲ್ಲಿ ಪೊಲೀಸರು ಮಗುವನ್ನು ಪತ್ತೆ ಹಚ್ಚಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪಳ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಈಗಾಗಲೇ ಬಹುದೊಡ್ಡ ಸರ್ಕಸ್ ನಡೆದಿದ್ದು, ಇದರ ಮಧ್ಯ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ದೊಡ್ಡ ಅಪಾಯ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆದರೆ ಕರ್ನಾಟಕವನ್ನು 10 ಬಾರಿ ಮಾರಾಟ ಮಾಡುತ್ತಾರೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಒಂದು ಬಾರಿ ಕರ್ನಾಟಕವನ್ನು ಮಾರಾಟ ಮಾಡಿದ್ದಾರೆ. ಡಿಕೆ ಶಿವಕುಮಾರ್ 10 ಬಾರಿ ಕರ್ನಾಟಕ ಮಾರಾಟ ಮಾಡುತ್ತಾರೆ ಎಂದು ಶಾಸಕ ಬಸನಗೌಡ ಪಾಟೀಲ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದ ಬಳಿ ಇಂದು ಬೆಳಿಗ್ಗೆ ಸಾರಿಗೆ ಸಂಸ್ಥೆಯ ಬಸ್ಸೊಂದು ಭೀಕರ ಅಪಘಾತಕ್ಕೆ ಈಡಾಗಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಚಲಿಸುತ್ತಿದ್ದ ಬಸ್ಸಿನ ಆಕ್ಸೆಲ್ (Axle) ಕಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, 20ಕ್ಕೂ ಹೆಚ್ಚು ಜನರ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಘಟನೆಯ ವಿವರ: ದಾವಣಗೆರೆಯಿಂದ ಬಸವಪಟ್ಟಣದ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್, ಮರಬನಹಳ್ಳಿ ತಲುಪುತ್ತಿದ್ದಂತೆ ತಾಂತ್ರಿಕ ದೋಷದಿಂದಾಗಿ ಬಸ್ಸಿನ ಆಕ್ಸೆಲ್ ತುಂಡಾಗಿದೆ. ತಕ್ಷಣವೇ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಉರುಳಿದೆ. ಅಪಘಾತದ ತೀವ್ರತೆಗೆ ಬಸ್ ಸಂಪೂರ್ಣ ಜಖಂಗೊಂಡಿದ್ದು, ಒಳಗಿದ್ದ ಪ್ರಯಾಣಿಕರು ದಿಕ್ಕಾಪಾಲಾಗಿ ಬಿದ್ದಿದ್ದಾರೆ. ಘಟನಾ ಸ್ಥಳದಲ್ಲಿ ಕಿರುಚಾಟ ಮತ್ತು ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳ ರಕ್ಷಣೆಗೆ ಮುಂದಾಗಿದ್ದಾರೆ. ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ಕನಕಪುರದ ನವೋದಯ ಆಸ್ಪತ್ರೆಯ ವೈದ್ಯ ಚೇತನ್ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ 2 ದಿನಗಳ ಬಳಿಕ ಮಹದೇಶ್ವರ ಬಡಾವಣೆಯ ಮನೆಯಲ್ಲಿ ಅದೇ ಆಸ್ಪತ್ರೆಯ ನರ್ಸ್ ಒಬ್ಬರು ನೇಣಿಗೆ ಶರಣಾಗಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ ಮಹದೇಶ್ವರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಡಾ. ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ಕನಕಪುರದ ನವೋದಯ ಆಸ್ಪತ್ರೆಯ ವೈದ್ಯ ಡಾಕ್ಟರ್ ಚೇತನ್ ಟೆಂಕರ್ ಆತ್ಮಹತ್ಯೆಗೆ ಶರಣಾಗಿದ್ದರು. ವೈದ್ಯ ಚೇತನ್ ಆತ್ಮಹತ್ಯೆ ನರ್ಸ್ ಕೂಡ ನೇಣಿಗೆ ಶರಣಾಗಿದ್ದಾರೆ. ಘಟನೆ ಕುರಿತಂತೆ ಕನಕಪುರದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪ್ರಿಸನರ್ಸ್ ಟ್ರ್ಯಾಕಿಂಗ್ ಮೂವ್ಮೆಂಟ್ ಸಿಸ್ಟಂ ಪರಿಚಯಿಸಲಾಗಿದ್ದು, ಇನ್ನು ಮುಂದೆ ಪ್ರತಿ ಬ್ಯಾರಕ್ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ. ಈಗಾಗಲೇ ಜೈಲಿನಲ್ಲಿ ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾಗಳ ಮೂಲಕ ಕೈದಿಗಳು ಮತ್ತು ಅಧಿಕಾರಿ-ಸಿಬ್ಬಂದಿ ಮೇಲೆ ನಿಗಾವಹಿಸಲಾಗಿತ್ತು. ಇದೀಗ ಅದರೊಂದಿಗೆ ಕೈದಿಗಳ ಫೋನ್ ಕರೆ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ಟ್ರ್ಯಾಕಿಂಗ್, ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ಪದ್ಧತಿ ಸೇರಿ ಕಾರಾಗೃಹ ಬಂಧಿಗಳ ಚಲನವಲನಗಳ ಮೇಲೆ ಸಂಪೂರ್ಣ ನಿಗಾ ಇಡಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಸುಮಾರು 2.25 ಕೋಟಿ ರೂ. ವೆಚ್ಚವಾಗಿದೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜೈಲಿನ ಪ್ರತಿ ಬ್ಯಾರಕ್, ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕಾರ್ಖಾನೆಗಳು, ಬೇಕರಿ ಸೇರಿ ಎಲ್ಲೆಡೆ ಬಯೋಮೆಟ್ರಿಕ್ ವ್ಯವಸ್ಥೆ ಮಾಡಲಾಗಿದೆ. ಪ್ರಮುಖವಾಗಿ ಸಂದರ್ಶಕರ ಕೊಠಡಿಗೆ ಹೋಗುವಾಗ ಬಯೊಮೆಟ್ರಿಕ್ ಜೊತೆಗೆ ಟೋಕನ್ ಪಡೆಯಬೇಕು.…
ಬಳ್ಳಾರಿ : ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಸುಮನ್ ಪನ್ನೇಕರ್ ಅವರ ಗನ್ಮ್ಯಾನ್ ದೇವರಾಜ್ ಹಾಗೂ ಇತರ ಇಬ್ಬರನ್ನು ಅಕ್ರಮವಾಗಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಮೋಕಾ ಪೊಲೀಸರು ಬಂಧಿಸಿದ್ದಾರೆ. ಪಡಿತರ ಅಕ್ಕಿ ಸಾಗಣೆದಾರನೊಬ್ಬನಿಗೆ ಬೆದರಿಕೆ ಹಾಕಿ ಲಕ್ಷಾಂತರ ರೂಪಾಯಿ ಹಣ ಪಡೆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಯ ಹಿನ್ನೆಲೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಶರಬಯ್ಯ ಎಂಬಾತನ ಲಾರಿಗಳನ್ನು ತಡೆದ ಆರೋಪಿಗಳು ಈ ಕೃತ್ಯ ಎಸಗಿದ್ದಾರೆ. ಅಕ್ರಮವಾಗಿ ಅಕ್ಕಿ ತುಂಬಿದ ಎರಡು ಲಾರಿಗಳು ಬಳ್ಳಾರಿಯಿಂದ ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದವು. ಈ ವೇಳೆ ಮಾರ್ಗಮಧ್ಯೆ ಲಾರಿಗಳನ್ನು ಅಡ್ಡಗಟ್ಟಿದ ಗನ್ಮ್ಯಾನ್ ದೇವರಾಜ್ ಮತ್ತು ತಂಡ, ತಾವು ‘ಎಸ್ಪಿ ಸ್ಕ್ವಾಡ್’ (SP Squad) ನಿಂದ ಬಂದಿರುವುದಾಗಿ ನಂಬಿಸಿದ್ದರು. ಲಕ್ಷಾಂತರ ರೂಪಾಯಿ ವಸೂಲಿ ಅಕ್ರಮ ಅಕ್ಕಿ ಸಾಗಾಟದ ಪ್ರಕರಣ ದಾಖಲಿಸದಂತೆ ಇರಲು ಆರೋಪಿಗಳು ಮೊದಲು 5 ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸುದೀರ್ಘ ಚೌಕಾಶಿ ನಡೆಸಿದ ನಂತರ, ಅಂತಿಮವಾಗಿ 3 ಲಕ್ಷ…
ಮಡಿಕೇರಿ: ಚಾಲನೆ ಮಾಡುತ್ತಿದ್ದ ಸಂದರ್ಭದಲ್ಲಿಯೇ ಬಸ್ ಚಾಲಕನಿಗೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಡಿಕೇರಿ ತಾಲೂಕಿನ ತಾಳತ್ಮನೆ ಬಳಿ ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಪ್ರಯಾಣಿಕರೆಲ್ಲರೂ ಯಾವುದೇ ಅಪಾಯವಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವಿವರ: ಮಡಿಕೇರಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ಚಾಲಕನಿಗೆ ತಾಳತ್ಮನೆ ತಿರುವಿನ ಬಳಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆಯ ಬದಿಯಲ್ಲಿದ್ದ ದಿಣ್ಣೆಗೆ ಡಿಕ್ಕಿ ಹೊಡೆದು ನಿಂತಿದೆ. ಘಟನೆಯ ತೀವ್ರತೆಗೆ ಚಾಲಕ ಬಸ್ಸಿನ ಸೀಟಿನ ಮೇಲೆಯೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ. ಪಾರಾದ ಪ್ರಯಾಣಿಕರು: ಅಪಘಾತ ಸಂಭವಿಸಿದ ವೇಳೆ ಬಸ್ಸಿನಲ್ಲಿ ಹಲವಾರು ಪ್ರಯಾಣಿಕರಿದ್ದರು. ಬಸ್ ವೇಗವಾಗಿ ಚಲಿಸುತ್ತಿದ್ದರೂ, ರಸ್ತೆ ಪಕ್ಕದ ದಿಣ್ಣೆಗೆ ಗುದ್ದಿ ನಿಂತಿದ್ದರಿಂದ ದೊಡ್ಡ ಮಟ್ಟದ ಅನಾಹುತವೊಂದು ತಪ್ಪಿದಂತಾಗಿದೆ. ಘಟನೆಯಿಂದ ಗಾಬರಿಗೊಂಡ ಪ್ರಯಾಣಿಕರು ತಕ್ಷಣವೇ ಬಸ್ಸಿನಿಂದ ಕೆಳಗಿಳಿದಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ: ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ…
ಬೆಂಗಳೂರು : ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮತಪತ್ರ ತಿದ್ದಿರುವುದಾಗಿ ಆರೋಪಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ಅವರು, 2023ರ ಚುನಾವಣೆ ಮತ ಎಣಿಕೆಯ ವೇಳೆ ಜೆಡಿಎಸ್ ಕಾಂಗ್ರೆಸ್, ಬಿಜೆಪಿ, ಪಕ್ಷೇತರರ ಅಭ್ಯರ್ಥಿಗಳ ಕೌಂಟಿಂಗ್ ಏಜೆಂಟ್ ಇದ್ದರು. ಪಾರದರ್ಶಕವಾಗಿ ಮತ ಎಣಿಕೆ ಆಗಿತ್ತು. ಮತ ಎಣಿಕೆ ಬಳಿಕ ರಾಜೇಗೌಡ ಗೆದ್ದರು ಎಂದು ಘೋಷಣೆ ಮಾಡಿದ್ದರು. ವ್ಯಾಲಿಡ್ ಯಾವುದು ಇನ್ವ್ಯಾಲಿಡ್ ಯಾವುದು ಎಂದು ಎಲ್ಲರಿಗೂ ತೋರಿಸಿದ್ದರು. ಆಮೇಲೆ ನನ್ನ ವಿರುದ್ಧ ಎಲೆಕ್ಷನ್ ಫಿಟಿಶನ್ ಹಾಕಿ, ಅನೇಕ ಆರೋಪ ಮಾಡಿದರು. ಈ ಹಿನ್ನೆಲೆ ಮರು ಎಣಿಕೆಗೆ ಉಚ್ಚ ನ್ಯಾಯಾಲಯ ಆದೇಶ ಮಾಡಿತ್ತು ಎಂದು ವಿವರಿಸಿದರು.
ಬೆಂಗಳೂರು : ನಿರ್ದೇಶಕ ಹಾಗು ನಟ ಪ್ರೇಮ್ ಅವರ ಕೆಡಿ ಚಿತ್ರದ ‘ಸರ್ಸೆ ಸರ್ಸೆ ನಿನ್ನ ಸೆರಗ ಸರ್ಸೆ’ ಹಾಡಿನ ವಿವಾದಕ್ಕೆ ಸಂಬಂಧಪಟ್ಟಂತೆ ಇದೀಗ ನಟಿ ನೋರಾ ಫತೆಹಿ ಕ್ಷಮೆಯಾಚನೆ ಮಾಡಿದ್ದಾರೆ. ರಾಷ್ಟೀಯ ಮಹಿಳಾ ಆಯೋಗದ ಮುಂದೆ ಹಾಜರಾಗಿದ್ದ ನೋರಾ ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶ ನನಗಿರಲಿಲ್ಲ. ಒಬ್ಬ ಕಲಾವಿದೆಯಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಸಮಾಜಕ್ಕೆ ಒಳ್ಳೆಯದನ್ನು ಮಾಡುವ ಮೂಲಕ ತಪ್ಪನ್ನು ತಿದ್ದಿಕೊಳ್ತೇನೆ. ಅನಾಥ ಹೆಣ್ಮಕ್ಳ ಶಿಕ್ಷಣಕ್ಕೆ ಧನಸಹಾಯ ಮಾಡಲು ನೋರಾ ನಿರ್ಧಾರ ಮಾಡಿದ್ದಾರೆ. ಹಾಡಿನ ಸಾಹಿತ್ಯವು ಮಹಿಳೆಯರ ಘನತೆಗೆ ಕುಂದು ತರುವಂತಿದೆ ಎಂದು ಆರೋಪಿಸಿ ಮಹಿಳಾ ಪರ ಸಂಘಟನೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಆಯೋಗವು ನೋರಾ ಅವರಿಗೆ ನೋಟಿಸ್ ನೀಡಿತ್ತು. ವಿಚಾರಣೆಯ ವೇಳೆ ಮಾತನಾಡಿದ ನೋರಾ, “ಯಾರ ಮನಸ್ಸಿಗೂ ನೋವುಂಟು ಮಾಡುವ ಅಥವಾ ಯಾವುದೇ ವರ್ಗದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ನನಗಿರಲಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಒಬ್ಬ ಕಲಾವಿದೆಯಾಗಿ ಸಮಾಜದಲ್ಲಿ ತನ್ನ…














