Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ RCB ಮ್ಯಾಚ್ ನಡೆಸುವ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಕೆ ಎಸ್ ಎಸ್ ಸಿ ಎ ನಿಯೋಗ ಮತ್ತು ಆರ್ಸಿಬಿ ನಿಯೋಗ ಭೇಟಿ ಮಾಡಿದೆ. ಕೆಎಸ್ಸಿ ಅಧ್ಯಕ್ಷ ವೆಂಕಟೇಶ ಪ್ರಸಾದ್ ಆರ್ಸಿಬಿಯ ರಾಜೇಶ್ ಮೆನನ್ ನೇತೃತ್ವದ ನಿಯೋಗ ಇಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಆರ್ ಸಿ ಬಿ ಮ್ಯಾಚ್ ನಡೆಸುವ ವಿಚಾರವಾಗಿ ಚರ್ಚಿಸಿದ್ದಾರೆ. ಇದೆ 12 rNdu ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತೆ. ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಗೃಹ ಸಚಿವರು ಭರವಸೆ ನೀಡಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕೆ 3ನೇ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಫೆ.10ರಂದು ಬೆಳಗ್ಗೆ 8 ಗಂಟೆವರೆಗೆ ದಿನಾಂಕ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಸೀಟು ಹಂಚಿಕೆಯಾದವರು ಫೆ.12ರಿಂದ 13ರವರೆಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬೇಕು. ಫೆ.14ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು. ಹೆಚ್ಚಿನ ವಿವರಗಳಿಗೆ ಮೇಲಿಂದ ಮೇಲೆ ಕೆಇಎ ವೆಬ್ಸೈಟ್ ನೋಡಬೇಕು ಎಂದು ಅವರು ಸಲಹೆ ನೀಡಿದ್ದಾರೆ. ತಾತ್ಕಾಲಿಕ ಸೀಟು ಹಂಚಿಕೆಯನ್ನು ಫೆ.10ರಂದು ಸಂಜೆ 5 ಗಂಟೆ ಹಾಗೂ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಫೆ.11ರಂದು ಮಧ್ಯಾಹ್ನ 1 ಗಂಟೆ ನಂತರ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಪಾಪಿ ಮಗಳೋಬ್ಬಳು ಪ್ರಿಯಕರಣಿಗೆ ತನ್ನ ತಾಯಿ ಹಾಗೂ ಸಂಬಂಧಿಕರ ಖಾಸಗಿ ಫೋಟೋ ಕಳುಹಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಹಿನ್ನೆಲೆ ತಾಯಿ ಮಗಳು ಮತ್ತು ಆಕೆ ಪ್ರಿಯಕರನ ವಿರುದ್ಧ ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ವಿದ್ಯಾಭ್ಯಾಸಕ್ಕೆ ಎಂದು ಯುವತಿ ಪೋಷಕರ ಬಳಿ ಮೊಬೈಲ್ ಪಡೆದಿದ್ದಳು. ತಿಂಗಳ ಹಿಂದೆ ಯುವಕನ ಜೊತೆ ಮಾತನಾಡಿ ಯುವತಿ ಸಿಕ್ಕಿಬಿದ್ದಿದ್ದಾಳೆ. ಆದರೆ ಮೊಬೈಲ್ ಮತ್ತು ಪಾಸ್ವರ್ಡ್ ನೀಡಿದ 23 ವರ್ಷದ ಮಗಳು, ಇತ್ತೀಚಿಗೆ ತಂದೆಗೆ ವಿಷಯ ತಿಳಿಸಿ ತಾಯಿ ಪಾಸ್ವರ್ಡ್ ಪಡೆದಿದ್ದಳು. ಮೊಬೈಲ್ ಪರಿಶೀಲನೆ ಮಾಡಿದಾಗ ಮಗಳ ಈ ಒಂದು ಕೃತ್ಯ ಬೆಳಕಿಗೆ ಬಂದಿದೆ. ತಾಯಿ ಮತ್ತು ಆಂಟಿ ಮಲಗಿದ್ದಾಗ ಖಾಸಗಿ ಫೋಟೋ ತೆಗೆದು ಮಗಳು ಪ್ರಿಯಕರನಿಗೆ ಕಳುಹಿಸಿದ್ದಾಳೆ. ಈ ಕುರಿತು ಪ್ರಶ್ನೆ ಮಾಡಿದಾಗ ಆತನನ್ನೇ ಮದುವೆಯಾಗುವುದಾಗಿ ಮಗಳು ಹಠಕ್ಕೆ ಬಿದ್ದಿದ್ದಾಳೆ. ಮಗಳಿಗೆ ಬುದ್ಧಿ ಹೇಳಿ ತಾಯಿ ಫೋಟೋಗಳನ್ನು…
ಬೆಂಗಳೂರು : ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಒಬ್ಬರು ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಕುಸಿದು ಬಿದ್ದು ಜ್ಯೋತಿ (45) ಸಾವನ್ನಪ್ಪಿದ್ದರೆ. ಮಾದನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೊಪ್ಪಳ : ಶಾಲಾ ಕಟ್ಟಡ ನಿರ್ಮಾಣಕ್ಕೆ ಜಮೀನು ನೀಡಿದರೆ ವೈಯಕ್ತಿಕವಾಗಿ ಒಂದು ಲಕ್ಷ ರೂಪಾಯಿ ನೀಡುತ್ತೇನೆ ಎಂದು ಗ್ರಾಮಸ್ಥರಿಗೆ ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೀಗೆ ಒಂದು ಆಫರ್ ನೀಡಿದ್ದಾರೆ. ಪ್ರತೀ ಎಕರೆಗೆ ರೂ. 1 ಲಕ್ಷ ನೀಡುವುದಾಗಿ ಬಸವರಾಜ ರಾಯರೆಡ್ಡಿ ಆಫರ್ ನೀಡಿದ್ದಾರೆ. ಶಾಲಾ ಕಟ್ಟಡ ನಿರ್ಮಾಣಕ್ಕೆ ಜಮೀನು ನೀಡಬೇಕು ಎಂದು ಬಸವರಾಜ್ ರೆಡ್ಡಿ ಮನವಿ ಮಾಡಿದ್ದು, ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಲಿಗುಡ್ಡ ಗ್ರಾಮಸ್ಥರಿಗೆ ಮನವಿ ಮಾಡಿದ್ದಾರೆ. ಕುಕನೂರ ತಾಲೂಕಿನ ನೆಲಜೇರಿ ಸೋಂಪುರದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ಪ್ರೌಢಶಾಲಾ ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಎರಡು ಕೋಟಿ ರೂಪಾಯಿ ಮಂಜೂರಾಗಿದೆ. ಆದರೆ ಜಮೀನು ಲಭ್ಯವಿರದ ಕಾರಣ ಕಟ್ಟಡ ಪ್ರಾರಂಭ ಮಾಡಲು ಆಗುತ್ತಿಲ್ಲ. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗ್ರಾಮಸ್ಥರು ಜಮೀನು ನೀಡಬೇಕು ಸರಕಾರ ಪ್ರತ್ಯೇಕವಾಗಿ ಅಂದಾಜು ಆರರಿಂದ ಏಳು ಲಕ್ಷ ರೂಪಾಯಿ ನೀಡುತ್ತದೆ. ನಾನು ಕೂಡ ವಯಕ್ತಿಕವಾಗಿ ಒಂದು ಲಕ್ಷ ನೀಡುತ್ತೇನೆ. ಕೂಡಲೇ ಗ್ರಾಮಸ್ಥರು ಜಮೀನು ನೀಡಬೇಕು…
ಮಂಡ್ಯ : ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಈ ಒಂದು ಘಟನೆ ನಡೆದಿದ್ದು ನೇಣು ಬಿಗಿದುಕೊಂಡು ಶಂಕುತಲಾದೇವಿ (46) ಪ್ರಿಯಾಂಕ (19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಿಯಾಂಕಾಳ ಮದುವೆಗೆ ಕುಟುಂಬದ ಸದಸ್ಯರು ಸಿದ್ಧತೆ ನಡೆಸಿದರು ಮದುವೆ ಸಿದ್ಧತೆ ನಡುವೆ ತಾಯಿ ಮತ್ತು ಮಗಳು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ವಿರೋಧಿಸಿ ಇಂದು ಬೆಂಗಳೂರಿನ ಅರವಿ ರೋಡ್ ಮೆಟ್ರೋಲ್ ನಿಲ್ದಾಣದ ಬಳಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾಲಿ ಟ್ರಂಕ್ ಸರ್ಕಾರ ಎಂದು ವಿನೂತನ ಪ್ರತಿಭಟನೆ ಮಾಡಿದರು. ಹೌದು ಖಾಲಿ ಟ್ರಂಕ್ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ ಖಾಲಿ ಸರ್ಕಾರ ಎಂದು ಟ್ರಂಕ್ ಮೇಲೆ ಪೋಸ್ಟರ್ ಅಂಟಿಸಿದ್ದಾರೆ ಖಾಲಿ ಟ್ರಂಕ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಫೋಟೋ ಹಾಕಿ ಪ್ರದರ್ಶಿಸಿದರು. ಬೆಂಗಳೂರಿನ ಆರ್ ವಿ ರೋಡ್ ಮೆಟ್ರೋನ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇನ್ನು ಆರ್ ವಿ ರೋಡ್ ಮೆಟ್ರೋ ನಿಲ್ದಾಣದ ಬಳಿ ಹೈಡ್ರಾಮಾ ನಡೆಸಿದ್ದು ತೇಜಸ್ವಿ ಸೂರ್ಯನನ್ನು ವಶಕ್ಕೆ ಪಡೆದು ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಪೊಲೀಸರ ಜೊತೆಗೆ ಸಂಸದ ತೇಜಸ್ವಿ ಸೂರ್ಯ ವಾಗ್ವಾದ ನಡೆಸಿದ್ದಾರೆ. ಏಕೆಂದರೆ ಆರ್ ವಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆಗೆ ಅನುಮತಿಯನ್ನು ನಿರಾಕರಿಸಿ ಸಂಸದ ತೇಜಸ್ವಿ ಸೂರ್ಯಗೆ…
ಮೈಸೂರು : ಕಾರ್ ರೇಸ್ ನಲ್ಲಿ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿ ಆಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹುಳಿಮಾವು ಎಂಬಲ್ಲಿ ನಡೆದಿದೆ. ಹುಳಿಮಾವು ಸಮೀಪದ ಫಿಲ್ಮಿ ಸಿಟಿ ಬಳಿ ಆಯೋಜಿಸಿದ ಕಾರು ರೇಸ್ ನಲ್ಲಿ ನಿಯಂತ್ರಣ ಕಳೆದುಕೊಂಡು ಕಾರು ಪಲ್ಟಿಯಾಗಿದೆ. ಖಾಸಗಿ ಸಂಸ್ಥೆಯೊಂದು ಕಾರು ರೇಸ್ ಆಯೋಜನೆ ಮಾಡಿತ್ತು. ರೇಸ್ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಪ್ರಜ್ವಲ್ ಕೈಗೆ ಗಂಭೀರವಾದ ಗಾಯವಾಗಿದೆ. ಇನ್ನು ಘಟನೆ ಕುರಿತು ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
ಬೀದರ್ : ನಿನ್ನೆ ರಾತ್ರಿ ಬೀದರ್ ನಲ್ಲಿ ಭೀಕರ ಅಪಘಾತವಾಗಿದ್ದು, ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮಗ ಗಂಭೀರ ಗಾಯಗೊಂಡ ದಾರುಣ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಹಳ್ಳಿಖೇಡ್(ಬಿ) ಪಟ್ಟಣದ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ವೆಂಕಟ್ ರಾಮರಾವ (40), ಅವರ ಪತ್ನಿ ಶಿಲ್ಪಾ (35) ಹಾಗೂ ಮಗಳು ರಕ್ಷಿತಾ (11) ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಗ ರತ್ನಜೀತ (15) ನಿಗೆ ಗಂಭೀರ ಗಾಯಗಳಾಗಿವೆ. ಆತನಿಗೆ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಆಂಧ್ರಪ್ರದೇಶ : ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿ ಕಲಬೆರಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಲಬೆರಕೆ ಬಗ್ಗೆ ಮಾಹಿತಿ ಇದ್ದರೂ ಕೂಡ ಟಿಟಿಡಿ ಯಿಂದ ತುಪ್ಪ ಖರೀದಿಸಲಾಗುತ್ತಿತ್ತು ಎಂದು ಸಿಬಿಐ ಸಲ್ಲಿಸಿದ ವರದಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹೌದು ಕಳೆದ 2019 ರಿಂದ 2024 ರ ಅವಧಿಯಲ್ಲಿ ಕಲಬೆರಕೆ ತುಪ್ಪ ಬಳಕೆ ಆಗಿರುವುದು ಇದೀಗ ಪತ್ತೆಯಾಗಿದೆ. ರಾಸಾಯನಿಕಯುಕ್ತ ಬಳಕೆಯಾಗಿರುವುದು ಲ್ಯಾಬ್ ಪರೀಕ್ಷೆಯಲ್ಲಿ ಬಯಲಾಗಿದೆ. ಮೈಸೂರಿನ CFTRI (ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ) ಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಕಲಬೆರಕೆ ತುಪ್ಪ ಬಳಸಿರುವುದು ದೃಢಪಟ್ಟಿತ್ತು. ತುಪ್ಪದಲ್ಲಿ ಬೀಟ ಸೆಟೊಸ್ಟೆರಲ್ ಎಂಬ ಕೆಮಿಕಲ್ ಅಂಶ ಇರುವುದು ಪತ್ತೆಯಾಗಿದೆ.














