Author: kannadanewsnow05

ಬೆಳಗಾವಿ : ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ವಿಧಾನಸಭೆಯಲ್ಲಿ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಮಂಡನೆ ಮಾಡಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಜಿ. ಪರಮೇಶ್ವರ್, ‘ದ್ವೇಷ ಅಪರಾಧಗಳು ಮತ್ತು ದ್ವೇಷ (ಹೋರಾಟ, ತಡೆಯುವಿಕೆ) ವಿಧೇಯಕ- 2025’ ಮಂಡಿಸಿದರು. ರಾಜ್ಯದಲ್ಲಿ ದ್ವೇಷ ಭಾಷಣಕ್ಕೆ ಅಂಕುಶ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ದ್ವೇಷ ಭಾಷಣ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ, ಕೋಮುಗಲಭೆ, ಕಾನೂಜು ಸುವ್ಯವಸ್ಥೆ ಹದಗೆಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಈ ವಿಧೇಯಕ ತಂದಿದೆ. ದ್ವೇಷ ಭಾಷಣ ಎಂದರೇನು? ಯಾವುದೇ ವ್ಯಕ್ತಿ ಪೂರ್ವಕಲ್ಪಿತ ಹಿತಾಸಕ್ತಿಯನ್ನು ಸಾಧಿಸುವ ಉದ್ದೇಶದಿಂದ ಬದುಕಿರುವ ವ್ಯಕ್ತಿ ಅಥವಾ ಮೃತ ವ್ಯಕ್ತಿಗಳ ವರ್ಗ ಅಥವಾ ಗುಂಪು ಅಥವಾ ಸಮುದಾಯದ ವಿರುದ್ಧ ಹಾನಿ, ಅಸಾಮರಸ್ಯ ಅಥವಾ ವೈರತ್ವ ಅಥವಾ ದ್ವೇಷದ, ಕೆಡುಕಿನ ಭಾವನೆ ಮೂಡಿಸುವ ಉದ್ದೇಶದೊಂದಿಗೆ ಸಾರ್ವಜನಿಕ ನೋಟದಲ್ಲಿ ಮೌಖಿಕವಾಗಿ, ಲಿಖಿತ ರೂಪದ ಪದದಲ್ಲಿ ಅಥವಾ ಸಂಕೇತಗಳ ಮೂಲಕ…

Read More

ಬೆಳಗಾವಿ : ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಲಿಂಗಾಯತ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ನಗರದ ಸಂಗೊಳ್ಳಿ‌ ರಾಯಣ್ಣ ವೃತ್ತದಲ್ಲಿ ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಮತ್ತು ರಾಜ್ಯ ಸರ್ಕಾರದ ವಿರುದ್ಧ ಪಂಚಮಸಾಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ಮಾಡುತ್ತಿದ್ದ ವೇಳೆ ಕಳೆದ ವರ್ಷ ಡಿಸೆಂಬರ್​ 10 ರಂದು ನಡೆದಿದ್ದ ಲಾಠಿಚಾರ್ಜ್ ಘಟನೆ ಖಂಡಿಸಿ ಲಿಂಗಾಯತ ಪಂಚಮಸಾಲಿ ದೌರ್ಜನ್ಯ ದಿನಾಚರಣೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ನಗರದ ಗಾಂಧಿ ಭವನದಿಂದ ಸುವರ್ಣ ವಿಧಾನಸೌಧವರೆಗೆ ಮೌನ ಪ್ರತಿಭಟನಾ ರ‍್ಯಾಲಿ ಉದ್ದೇಶಿಸಲಾಗಿತ್ತು. ಈ ವೇಳೆ ಕೂಡಲಸಂಗಮ ಪಂಚಮಸಾಲಿ‌ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಸಿ‌.ಸಿ‌‌. ಪಾಟೀಲ್, ಅರವಿಂದ ಬೆಲ್ಲದ, ಸಿದ್ದು ಸವದಿ, ಮಾಜಿ ಶಾಸಕ ಡಾ‌. ವಿಶ್ವನಾಥ ಪಾಟೀಲ ಸೇರಿ ಅನೇಕರು ಭಾಗಿಯಾಗಿದ್ದರು.

Read More

ಹಾವೇರಿ : ಹಾವೇರಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಜಗದೀಶ್ ಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿದೆ. ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತಿಕರಿಸದ ಶಾಲೆಯ ಶಿಕ್ಷಕನಿಗೆ ಥಳಿಸಿದ್ದಾರೆ.ಅಲ್ಲದೇ ಚಪ್ಪಲಿ ಹಾರ ಹಾಕಿ ಶಿಕ್ಷಕನನ್ನು ಸವಣೂರು ಠಾಣೆಗೆ ವಿದ್ಯಾರ್ಥಿನಿಯರ ಪೋಷಕರು ಕರೆತಂದಿದ್ದಾರೆ. ಧರ್ಮದೇಟು ನೀಡಿ ಜಗದೀಶ್ ನನ್ನು ಪೊಲೀಸರಿಗೆ ಪೋಷಕರು ಒಪ್ಪಿಸಿದ್ದಾರೆ

Read More

ಬೆಳಗಾವಿ : ಭೂಸ್ವಾಧೀನ ಕಾಯ್ದೆ ತಿದ್ದುಪಡಿ ಮಾಡುವಂತೆ ಇಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಂಭಾಗ ರೈತರು ಶ್ರವಣ ಸೋದ ಮುತ್ತಿಗೆ ಹಾಕಲು ಯತ್ನಿಸಿದರು. ವಿವಿಧ ಬೇಡಿಕೆ ಈಡೇರಿಕೆಗೆ ಬೆಳಗಾವಿಯ ಸುವರ್ಣ ಸೌಧದ ಬಳಿ ರೈತರು ಸಿಡಿದೆದ್ದಿದ್ದಾರೆ. ಸರ್ಕಾರದ ವಿರುದ್ಧ ರೈತರು ಸಮರ ಸಾರಿದ್ದಾರೆ.ಇದೇ ಸಂದರ್ಭದಲ್ಲಿ ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ಸಚಿವ ಆರ್ ಬಿ ತಿಮ್ಮಾಪುರ್ ಕಾರಿಗೆ ರೈತರು ಹಾಕಿದ ಘಟನೆ ಕೂಡ ನಡೆಯಿತು. ಬೆಳಗಾವಿಯ ಸುವರ್ಣ ಗಾರ್ಡನ್ ದಿಂದ ಸುವರ್ಣ ಸೌಧ ಮತ್ತಿಗಿದೆ ರೈತರು ಯತ್ನಿಸಿದ್ದಾರೆ ಪೊಲೀಸರು ಹಾಗೂ ರೈತರ ನಡುವೆ ತಳ್ಳಾಟ ನೂಕಾಟ ನೆಡೆದಿದೆ. ಆದರೆ ಪೊಲೀಸರು ಅವರನ್ನು ಮಾರ್ಗ ಮಧ್ಯೆ ತಡೆದಿದ್ದಾರೆ. ಅಧಿವೇಶನ ಆರಂಭವಾದ ದಿನದಿಂದ ಬಿಜೆಪಿ ನಾಯಕರು ರೈತರ ಜೊತೆಗೆ ಹೋರಾಟಕ್ಕೆ ಮುಂದಾಗಿದ್ದರು. ಪೊಲೀಸರು ಬಿಜೆಪಿ ನಾಯಕರನ್ನು ವಶಕ್ಕೆ ಪಡೆದುಕೊಂಡಿದ್ದ ಘಟನೆ ನಡೆದಿತ್ತು.

Read More

ದಾವಣಗೆರೆ : ದಾವಣಗೆರೆಯಲ್ಲಿ ಕಳ್ಳತನ ಮಾಡಿದ ಚಿನ್ನಾಭರಣ ಮಧ್ಯಪ್ರದೇಶದಲ್ಲಿ ಜಪ್ತಿ ಮಾಡಿಕೊಳ್ಳಲಾಗಿದೆ. ಮಧ್ಯಪ್ರದೇಶದ ಕುಖ್ಯಾತ ಬ್ಯಾಂಡ್ ಬಜಾ ಗ್ಯಾಂಗ್ ಸದಸ್ಯರಿಂದ ಈ ಒಂದು ಚಿನ್ನಾಭರಣ ಕಳ್ಳತನ ನಡೆದಿತ್ತು ದಾವಣಗೆರೆ ಗ್ರಾಮಾಂತರ ವಿಭಾಗದ ಪೊಲೀಸರು ಇದೀಗ ಮಧ್ಯಪ್ರದೇಶದಲ್ಲಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ ಸುಮಾರು 51.49 ಲಕ್ಷ ಚಿನ್ನಾಭರಣ ಜಪ್ತಿ ಮಾಡಿಕೊಳಲಾಗಿದೆ. ಪ್ರತಿಷ್ಠಿತ ಮದುವೆ ಸಮಾರಂಭಗಳಲ್ಲಿ ಗಮನ ಬೇರೆ ಸೆಳೆದು ಕಳ್ಳತನ ಮಾಡುತ್ತಿದ್ದರು. ನವಂಬರ್ 14 ರಂದು ಅಪೂರ್ವ ರೆಸಾರ್ಟ್ ನಲ್ಲಿ ಈ ಗ್ಯಾಂಗ್ ಕಳ್ಳತನ ಮಾಡಿತು. ಮದುವೆ ಸಮಾರಂಭದಲ್ಲಿ ಬಾಲಕಿ ನೃತ್ಯ ಮಾಡುತ್ತಿದ್ದ ವೇಳೆ ಕಳ್ಳತನ ಮಾಡಿದ್ದರು. ಚಿನ್ನಾಭರಣವಿದ್ದ ಬ್ಯಾಂಕ್ ಕೆಳಗೆ ಚಪ್ಪಾಳೆ ತಟ್ಟುವಷ್ಟರಲ್ಲಿ ಕಳ್ಳತನ ಮಾಡಿದ್ದರು 535 ಗ್ರಾಂ ಆಭರಣವಿದ್ದ ಬ್ಯಾಂಕ್ ಎಗರಿಸಲಾಗಿತ್ತು ಬ್ಯಾಗ್ ಎಗರಿಸಿ ಕರಣ ವರ್ಮ ಮತ್ತು ವಿನೀತ್ ಸಿಸೋಡಿಯ ಮಧ್ಯಪ್ರದೇಶಕ್ಕೆ ಪರಾರಿಯಾಗಿದ್ದರು. ಮಧ್ಯಪ್ರದೇಶಕ್ಕೆ ತೆರಳಿ ಕಳ್ಳರಿಗಾಗಿ ಶೋಧ ನಡೆಸಿದರು. ನಗರದಲ್ಲಿ ವೇಷ ಬದಲಿಸಿ ದಾವಣಗೆರೆ ಪೊಲೀಸ್ರು ಶೋಧ ನೆಡೆಸಿದ್ದಾರೆ. ಮಧ್ಯವರ್ತಿಗೆ ಚಿನ್ನಾಭರಣ ಬಗ್ಗೆ ಕಳ್ಳರು ಮಾಹಿತಿ ನೀಡಿದ್ದರು.…

Read More

ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ಒಂದು ನಡೆದಿದ್ದು,ಗುಂಡ್ಲುಪೇಟೆ ತಾಲೂಕಿನ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳು ಗರ್ಭಿಣಿಯಾಗಿರುವ ಮತ್ತೊಂದು ಶಾಕಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿಯು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ತೆರಳಿದ್ದಾಗ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ. 15 ವರ್ಷ 3 ತಿಂಗಳ ಬಾಲಕಿ ಗರ್ಭಿಣಿ ಆಗಿದ್ದು, ಈ ಸಂಬಂಧ ಯುವಕನೊಬ್ಬನ ವಿರುದ್ಧ ಗುಂಡ್ಲುಪೇಟೆ ಪೊಲೀಸ್​ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದೂರು ಕೂಡ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2025ರ ಆಗಸ್ಟ್​ನಲ್ಲಿ ತಾನೇ ಬಲವಂತದಿಂದ ಯುವಕನ ಜೊತೆ ದೈಹಿಕ ಸಂಪರ್ಕ ಬೆಳೆಸಿದೆ. ಅದಾದ ಬಳಿಕ, ಕಳೆದ ಮೂರು ತಿಂಗಳಿನಿಂದ ತನಗೆ ಋತುಸ್ರಾವ ಆಗದ ಹಿನ್ನೆಲೆ ಪಾಲಕರು ಆಸ್ಪತ್ರೆಗೆ ಕರೆತಂದಾ

Read More

ಚಾಮರಾಜನಗರ : ಇಂದು ಬೆಳಿಗ್ಗೆ ತಾನೇ ಹಾವೇರಿಯಲ್ಲಿ ಉಳುಮೆ ಮಾಡುವಾಗ ರೂಟರ್ ಯಂತ್ರಕ್ಕೆ ಸಿಲುಕಿ ರೈತ ಸಮಾನಪಿದ್ದ ಘಟನೆ ನಡೆದಿತ್ತು. ಇದೀಗ ರಾಗಿ ಯಂತ್ರಕ್ಕೆ ಸಿಲುಕಿ ವೃದ್ಧೆಯೊಬ್ಬರ ಎಡಗೈ ಸಂಪೂರ್ಣವಾಗಿ ತುಂಡಾದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಸಮೀಪ ಜರುಗಿದೆ. ಮುಡಿಗುಂಡ ಗ್ರಾಮದ ನಾಗಮ್ಮ ಕೈ ಕಳೆದುಕೊಂಡ ವೃದ್ಧೆ. ಕೆಲಸ ನಿರ್ವಹಿಸುತ್ತಿದ್ದಾಗ ರಾಗಿ ಯಂತ್ರಕ್ಕೆ ಕೈ ಸಿಲುಕಿ ಈ ಅವಘಡ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ತುಂಡಾದ ಕೈ ಸಮೇತ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ವೃದ್ಧೆಯನ್ನು ತಕ್ಷಣ ಕರೆತರಲಾಗಿದ್ದು, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಸಿಮ್ಸ್​ಗೆ ದಾಖಲಿಸಲಾಗಿದೆ. ಘಟನೆ ಬೆಚ್ಚಿ ಬೀಳಿಸುವಂತಿದ್ದು, ತುಂಡಾದ ಕೈ ಮರುಜೋಡಣೆ ಮಾಡಲು ಕಷ್ಟ ಸಾಧ್ಯ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Read More

ದಕ್ಷಿಣಕನ್ನಡ : ಧರ್ಮಸ್ಥಳ ವಿರುದ್ಧ ಷಡ್ಯಂತರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ 21ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟಿಗೆ ಎಸ್ಐಟಿ ಅಧಿಕಾರಿಗಳು ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿವೆ. ಇಂದು ಬೆಳತಂಗಡಿ ಕೋರ್ಟ್ ನಲ್ಲಿ ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ ಪ್ರಾಥಮಿಕ ವರದಿಯ ಕುರಿತು ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಜಡ್ಜ್ ವಿಜಯೇಂದ್ರ ಡಿಸೆಂಬರ್ 26 ಕ್ಕೆ ಆದೇಶ ಕಯ್ದಿರಿಸಿದರು. ಕೋರ್ಟ್ ಸಲ್ಲಿಸಿರುವ ತನಿಖಾ ವರದಿಯಲ್ಲಿ ಕ್ರಮಕ್ಕೆ ಮನವಿ ಸಲ್ಲಿಸಲಾಗಿದೆ. ಎಸ್ಐಟಿ ವರದಿ ಆಧಾರದಲ್ಲಿ ಕ್ರಮಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಲಾಗಿದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟಿಗೆ ಎಸ್ಐಟಿ ವರದಿ ಸಲ್ಲಿಸಿದ್ದು, ಎಸ್ಐಟಿ ವರದಿಯನ್ನು ಸ್ವೀಕರಿಸಿ ಬೆಳತಂಗಡಿ ಕೋರ್ಟ್ ವಾದ ಆಲಿಸಿತು. ಎಸ್ಐಟಿ ಪರ ವಕೀಲ ದಿವ್ಯರಾಜ ಹೆಗಡೆ ವಾದ ಮಂಡಿಸಿದರು. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಾಕಷ್ಟು ಸಾಕ್ಷಿ ಆಧಾರಗಳಿವೆ. ಹೀಗಾಗಿ ಆರೋಪಿಗಳು ವಿರುದ್ಧ ಕ್ರಮ ಕೈಗೊಳಲು ನಿರ್ದೇಶನ ನೀಡಿ, ಚಿನ್ನಯ್ಯ ಜೊತೆಗೆ ಷಡ್ಯಂತರದಲ್ಲಿ ಉಳಿದ ಐವರು ಸಹ ಭಾಗಿಯಾಗಿದ್ದಾರೆ.…

Read More

ದಕ್ಷಿಣಕನ್ನಡ : ಕೊರೊನ ನಂತರ ರಾಜ್ಯದಲ್ಲಿ ಹಲವು ಅಪಾಯಕಾರಿ ವೈರಸ್ ಗಳು ಬಂದು ಹೋಗಿವೆ. ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕನ್ ಪಾಕ್ಸ್ ವೈರಸ್ ಹರಡಿದ್ದು ದಕ್ಷಿಣ ಕನ್ನಡದ ಒಂದೇ ಶಾಲೆಯಲ್ಲಿ ಒಟ್ಟು 17 ಮಕ್ಕಳಲ್ಲಿ ಚಿಕನ್ ಪಾಕ್ಸ್ ವೈರಸ್ ಪತ್ತೆಯಾಗಿದೆ. ಚಿಕನ್ ಪಾಕ್ಸ್ ಮಕ್ಕಳಲ್ಲಿ, ಯಾವುದೇ ತೊಂದರೆ ಇಲ್ಲದೇ ಸಂಪೂರ್ಣವಾಗಿ ಗುಣವಾಗುತ್ತದೆ. ಒಮ್ಮೆ ಚಿಕನ್ ಪಾಕ್ಸ್​ನಿಂದ ಬಳಲಿದ ವ್ಯಕ್ತಿ ಜೀವಿತಾವಧಿಯವರೆಗೂ ಅದರ ವಿರುದ್ಧ ರೋಗ ನಿರೋಧಕ ಶಕ್ತಿ ಹೊಂದುತ್ತಾನೆ. ಇದರಿಂದ ಒಮ್ಮೆ ಚಿಕನ್ ಪಾಕ್ಸ್ ಬಂದವರಿಗೆ ಜೀವಿತಾವಧಿಯಲ್ಲಿ ಮತ್ತೊಮ್ಮೆ ಯಾವತ್ತೂ ಬರುವುದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್‌.ಆರ್.ತಿಮ್ಮಯ್ಯ ತಿಳಿಸಿದರು. ಶಾಲಾ ಮಕ್ಕಳಲ್ಲಿ ಚಿಕನ್ ಪಾಕ್ಸ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಭೀತಿ ಬೇಡ ಮುನ್ನೆಚ್ಚರಿಕೆ ಇರಲಿ. ಇದೊಂದು ಸಾಂಕ್ರಾಮಿಕ ಖಾಯಿಲೆಯಾದ್ದರಿಂದ ಯಾವುದೇ ಕಾರಣಕ್ಕೆ ಒಬ್ಬನಿಂದ ಮತ್ತೊಬ್ಬನಿಗೆ ಹರಡದಂತೆ ಜಾಗ್ರತೆ ವಹಿಸುವುದು ಅಗತ್ಯ. ಒಂದು ಬಾರಿ ಚಿಕನ್ ಪಾಕ್ಸ್ ಕಾಣಿಸಿಕೊಂಡರೆ ಗುಣಮುಖರಾಗಲು ಸುಮಾರು 2 ವಾರಗಳ ಸಮಯ ಬೇಕಾಗುತ್ತದೆ ಎಂದರು.

Read More

ಬೆಳಗಾವಿ : ಎಪಿಎಲ್ ಕಾರ್ಡ್‌ಗೆ ಮೊದಲು 15‌‌ ಕೆಜಿ ಅಕ್ಕಿ ಕೊಡಲಾಗುತ್ತಿತ್ತು. ಆದರೆ, ಅವರು ತೆಗೆದುಕೊಳ್ಳುತ್ತಿರಲಿಲ್ಲ. ಹೀಗಾಗಿ ಅದನ್ನು ನಿಲ್ಲಿಸಿದ್ದೆವು‌. ಬೇಡಿಕೆ ಬಂದರೆ APL ಪಡಿತರ ಚೀಟಿದಾರರಿಗೂ ಅಕ್ಕಿ‌ ಕೊಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹೊಸ ಬಿಪಿಎಲ್ ಕಾರ್ಡ್ ಕಳೆದ ತಿಂಗಳು 30 ರಿಂದ ಅರ್ಜಿ ಹಾಕಲು ಅವಕಾಶ ಕೊಟ್ಟಿದ್ದೇವೆ. ಸಂಬಂಧಿಸಿದ ತಹಶೀಲ್ದಾರ್ ಅವರಿಗೆ ಅರ್ಜಿ ಹಾಕಿದರೆ ಅರ್ಹರಿಗೆ ಹೊಸ ಕಾರ್ಡ್ ಕೊಡಲು ತೀರ್ಮಾನಿಸಿದ್ದೇವೆ. ಈಗಾಗಲೇ 10 ಲಕ್ಷ ಅನರ್ಹರನ್ನು ಎಪಿಎಲ್‌ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಅಭಿವೃದ್ಧಿ ಕಾರ್ಯಗಳಿಗೂ ಕೂಡ ಸರ್ಕಾರದ ಬಳಿ ಯಾವುದೇ ಹಣದ ಕೊರತೆ ಇಲ್ಲ ಅರ್ಹರಿಗೆ ಹೊಸ ಬಿಪಿಎಲ್ ಕಾರ್ಡ್ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್ ಗೆ ಶಿಫ್ಟ್ ಮಾಡುತ್ತಿದ್ದೇವೆ ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪ…

Read More