Author: kannadanewsnow05

ಬಳ್ಳಾರಿ : ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮುಂದೆ ಅಡ್ಡಲಾಗಿ ಬ್ಯಾನರ್ ಕಟ್ಟಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಗಲಾಟೆ ನಡೆದು, ಈ ವೇಳೆ ಫೈರಿಂಗ್ ಆಗಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನಪ್ಪಿದ್ದಾರೆ ಇದೀಗ ಈ ಒಂದು ಘಟನೆಗೆ ಸಂಬಂಧಪಟ್ಟಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ, ಶಾಸಕ ಜನಾರ್ಧನ್ ರೆಡ್ಡಿ ಖಾಸಗಿ ಗನ್ ಮ್ಯಾನ್ಗಳ 3 ಗನ್ ಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸೀಜ್ ಮಾಡಿದ ಗನ್ ಗಳನ್ನು ಪೊಲೀಸರು ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ. ಜನಾರ್ಧನ ರೆಡ್ಡಿಯ ಖಾಸಗಿ ಗನ್ ಮ್ಯಾನ್ ಗಳ ಗನ್ ಪರಿಶೀಲನೆ ಮಾಡಲಾಗುತ್ತಿದೆ. ಜನಾರ್ಧನ ರೆಡ್ಡಿ ಗನ್ ಮ್ಯಾನ್ ಗಳ ಗನ್ ನಿಂದ ಬುಲೆಟ್ ಬಳಕೆ ಆಗದಿರುವುದು ಪತ್ತೆಯಾಗಿದ್ದು, ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.

Read More

ಬಳ್ಳಾರಿ : ಬಳ್ಳಾರಿಯಲಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಘರ್ಷಣೆಯಾಗಿ ಫೈರಿಂಗ್ ಆಗಿರುವ ವಿಚಾರವಾಗಿ ಬಳ್ಳಾರಿಯಲಿ ಮಾಜಿ ಸಚಿವ ಶ್ರೀರಾಮುಲು ಸುದ್ದಿಗೋಷ್ಠಿ ನಡೆಸಿದರು. ಗಲಾಟೆಯ ಸಂದರ್ಭದಲ್ಲಿ ಭರತ ರೆಡ್ಡಿ ಆಟೋಗಳಲ್ಲಿ ಪೆಟ್ರೋಲ್ ಬಾಂಬ್ ತಂದಿದ್ದರು ಎಂದು ಗಂಭೀರವಾಗಿ ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾರ ಬುಲೆಟ್ನಿಂದ ಸಾವು ಆಗಿದೆ ಅನ್ನೋದನ್ನ ಸ್ಪಷ್ಟಪಡಿಸಿ. ಈ ಬಗ್ಗೆ ಸಂಪೂರ್ಣ ತನಿಖೆ ಆಗಬೇಕು ಪೊಲೀಸ್ ಅಧಿಕಾರಿಗಳಿಗೆ ನಾನು ಮಾಡಿಕೊಳ್ಳುತ್ತೇನೆ ನಮ್ಮಿಂದ ಏನಾದರೂ ತಪ್ಪಾಗಿದ್ದರೆ ಕ್ರಮ ತೆಗೆದುಕೊಳ್ಳಲಿ ಯಾರೇ ತಪ್ಪು ಮಾಡಿದರು ಕೂಡ ಕ್ರಮ ಆಗಲಿ ಎಂದು ತಿಳಿಸಿದರು. ಬಳ್ಳಾರಿ ಸುಟ್ಟು ಭಸ್ಮ ಮಾಡುತ್ತೇನೆ ಎಂದು ಭರತ್ ರೆಡ್ಡಿ ಹೇಳುತ್ತಾರೆ ಗಲಾಟೆಯ ಸಂದರ್ಭದಲ್ಲಿ ಪೆಟ್ರೋಲ್ ಬಾಂಬ್ ಸಹ ತಂದಿದ್ದರು ಶಾಸಕ ಜನಾರ್ಧನ ರೆಡ್ಡಿ ಮನೆ ಸುಡುತ್ತಿದೆ ಅಂತ ಹೇಳುತ್ತಾರೆ ವಾಲ್ಮೀಕಿ ಪುತ್ತಳಿ ಅನಾವರಣಕ್ಕೆ ಬಿಡುತ್ತಿಲ್ಲ ಎಂದು ಹೇಳುತ್ತಾರೆ. ಪುತ್ತಳಿ ಅನಾವರಣಕ್ಕೆ ಬರುತ್ತೇವೆ ಇದರಲ್ಲಿ ರಾಜಕೀಯ ಏಕೆ? ಬಳ್ಳಾರಿ ಶಾಂತಿಯುತವಾಗಿದೆ ಅದನ್ನು ಹಾಳು ಮಾಡಬೇಡಿ ಎಂದು ಶ್ರೀರಾಮುಲು ತಿಳಿಸಿದರು.

Read More

ಶ್ರೀ ಗುರು ರಾಯರು ‘ಇಂದು ಎನಗೆ ಗೋವಿಂದ’ ಕೀರ್ತನೆಯಿಂದ ಕೃಷ್ಣನನ್ನು ಸ್ತುತಿಸಿ, ಉಡುಪಿಯಲ್ಲಿದ್ದುಕೊಂಡು ಅನೇಕ ಗ್ರಂಥಗಳನ್ನು ರಚಿಸಿ ಕೃಷ್ಣನಿಗೆ ಸಮರ್ಪಿಸುತ್ತಿರುವುದು. ।।ಶ್ರೀ ಗುರು ರಾಘವೇಂದ್ರಾಯ ನಮಃ।| ಯಥಾ ನದ್ಯಃ ಸಂದ್ಯಮಾನಾ ಸಮುದ್ರೇ ಅಸ್ತಂ ಗಚ್ಛಂತಿ ನಾಮರೂಪೇ ವಿಹಾಯ; ತಥಾ ವಿದ್ವಾನ್ ನಾಮರೂಪಾತ್ ವಿಮುಕ್ತಃ ಪರಾತ್ಪರಂ ಪುರುಷಮುಪೈತಿ ದಿವ್ಯಂ; ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ…

Read More

ಬೆಂಗಳೂರು : ಬಜೆಟ್ ಪೂರ್ವಭಾವಿ ಸಭೆ ವಿಳಂಬ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ಫೆಬ್ರವರಿ ತಿಂಗಳಿನಲ್ಲಿ ಬಜೆಟ್ ಬಗ್ಗೆ ತಯಾರಿ ನಡೆಯುತ್ತದೆ ಬರುವ ಮಾರ್ಚ್ ನಲ್ಲಿ ಬಜೆಟ್ ಮಂಡನೆ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದರು. ದಲಿತ ಸಿಎಮ್ ಬಗ್ಗೆ ಡಾ. ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಪರಮೇಶ್ವರ್ ಅವರು ಸಹ ಸೀನಿಯರ್. ಅವರು ದಲಿತ ನಾಯಕರು. ನಾನು ಸಹ ಸಿಎಂ ಆಗಬಹುದು ಅಂತ ಪರಮೇಶ್ವರ್ ಹೇಳಿದ್ದಾರೆ. ನಾಯಕತ ವಿಚಾರ ಸ್ಥಳೀಯ ಚುನಾವಣೆಯ ಮೇಲೆ ಪ್ರಭಾವವಿರಲ್ಲ. ಈಗಲೇ ಏನು ಹೇಳಲು ಆಗಲ್ಲ ಆದ ಮೇಲೆ ಹೇಳಬಹುದು ಗೊಂದಲ ಬಗೆಹರಿಸಬೇಕು ಅಂತ ನಾಯಕರಿಗೆ ಹೇಳಿದ್ದೇವೆ. ಬೆಂಗಳೂರು ಸಭೆ ದೆಹಲಿಯಲ್ಲಿ ಆಯ್ತು ಎರಡು ಸಭೆಗಳು ಅಲ್ಲಿ ಆಯ್ತು ಅದಕ್ಕೆ ಸುರ್ಜೆವಾಲಾ ಬಂದಿಲ್ಲ ಎಂದು ತಿಳಿಸಿದರು ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಪಟ್ಟಂತೆ ಘರ್ಷಣೆಯಾಗಿ ಫೈರಿಂಗ್ ನಡೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ವಿಚಾರವಾಗಿ ಮನೆಯ ಮುಂದೆ ಪೋಸ್ಟರ್ ಕಟ್ಟಿದಕ್ಕೆ ಗಲಾಟೆ…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಜೋರಾಗಿತ್ತು. ಒಂದು ಕಡೆ ದರ್ಶನ್ ಅಭಿಮಾನಿಗಳು ಮತ್ತೊಂದು ಕಡೆ ನಟ ಕಿಚ್ಚ ಸುದೀಪ್ ಅಭಿಮಾನಿಗಳ ನಡುವೆ ಸ್ಟಾರ್ ವಾರ್ ಸಾಮಾಜಿಕ ಜಾಲತಾಣದಲ್ಲಿ ಜೋರಾಗಿತ್ತು. ಕೆಲವು ಕಿಡಿಗೇಡಿಗಳು ಇನ್ನೊಂದು ಹೆಜ್ಜೆ ಮುಂದೆ ಹೋಗಿ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿರುವ ಘಟನೆ ನಡೆದಿತ್ತು. ಈ ಒಂದು ಘಟನೆಗೆ ಸಂಬಂಧಿಸಿದಂತೆ ಸ್ಕ್ರೀನ್ ಶಾಟ್ ಗಳ ಸಮೇತ ಬೆಂಗಳೂರು ಕಮಿಷನರ್ ಅವರನ್ನು ಭೇಟಿಯಾಗಿ ವಿಜಯಲಕ್ಷ್ಮಿ ದೂರು ಸಲ್ಲಿಸಿದ್ದರು. ಬಳಿಕ ಸಿಸಿಬಿ ಕ್ರೈಮ್ ಠಾಣೆಗೂ ಕೂಡ ಅವರು ದೂರು ನೀಡಿದ್ದರು. ಇದೀಗ ಸಿಸಿಬಿ ಕ್ರೈಂ ಠಾಣೆ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಭೀಕರ ಮರ್ಡರ್ ಆಗಿದ್ದು, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ಮಾದಾವರದ ಮೈದಾನದಲ್ಲಿ ಯುವಕನ ಶವ ಪತ್ತೆಯಾಗಿದೆ. ಮಾದಾವರದ ಮೈದಾನದಲ್ಲಿ ಸುಟ್ಟ ಸ್ಥಿತಿಯಲ್ಲಿ ಸುಮಾರು 30 ವರ್ಷದ ಯುವಕನ ಶವ ಪತ್ತೆಯಾಗಿದೆ. ಸ್ಥಳೀಯರು ತಕ್ಷಣ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು : ಅಪ್ರಾಪ್ತೆಗೆ ಬೆದರಿಕೆ ಹಾಕಿ ಅತ್ಯಾಚಾರವೆಸಗಿ ಗರ್ಭಿಣಿಯನ್ನಾಗಿಸಿದ್ದ ಅಪರಾಧಿಗೆ ಪೋಕ್ಸೊ ವಿಶೇಷ ನ್ಯಾಯಾಲಯ ವಿಧಿಸಿದ್ದ 10 ವರ್ಷಗಳ ಶಿಕ್ಷೆಯನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಲ್ಮನವಿದಾರ ಸಂತ್ರಸ್ತೆಗೆ ಅತ್ಯಾಚಾರವೆಸಗಿರುವ ಆರೋಪ ಸಂಬಂಧ ಸಾಕ್ಷ್ಯಾಧಾರಗಳು ಸಾಬೀತುಪಡಿಸಿವೆ. ಅಲ್ಲದೆ, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಲ್ಲಿಸಿರುವ ಸಾಕ್ಷ್ಯಾಧಾರಗಳು ಪರಿಶೀಲಿಸಿದರೆ ಸಂತ್ರಸ್ತೆಯು ಅಪ್ರಾಪ್ತೆಯಾಗಿದ್ದಾರೆ ಎಂಬ ಅಂಶ ಗೊತ್ತಾಗಲಿದೆ. ಜತೆಗೆ, ಸಂತ್ರಸ್ತೆ ನೀಡಿರುವ ಹೇಳಿಕೆಗಳು ವಿಶ್ವಾಸಾರ್ಹ ಮತ್ತು ನಂಬಲಾರ್ಹವಾಗಿದೆ. ಪ್ರಕರಣ ಸಂಬಂಧ ಶಿಕ್ಷೆಗೆ ಗುರಿಯಾಗಿರುವ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ಬಸವರಾಜು ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಪ್ರಕರಣದ ಹಿನ್ನೆಲೆ? ಕೋಲಾರ ಮೂಲದ 8ನೇ ತರಗತಿ ಅಧ್ಯಯನ ಮಾಡುತ್ತಿದ್ದ ಸುಮಾರು 13 ವರ್ಷದ ವಯಸ್ಸಿನ ಬಾಲಕಿ ಶಾಲೆಗೆ ಹೋಗುವ ಸಂದರ್ಭದಲ್ಲಿ ಅಪರಾಧಿ ಹಿಂಬಾಲಿಸಿಕೊಂಡು ಅವಳೊಂದಿಗೆ ಮಾತನಾಡುವುದಕ್ಕೆ ಮುಂದಾಗುತ್ತಿದ್ದ. ಒಮ್ಮೆ ಶಾಲೆಯಿಂದ ಮನೆಗೆ ಹಿಂದಿರುಗುವಾಗ ಅಪರಾಧಿಯು ಸಂತ್ರಸ್ತೆಯ ಬಳಿ ಪ್ರೀತಿಸುತ್ತಿರುವುದಾಗಿ ಹೇಳಿ ತನ್ನೊಂದಿಗೆ ಸಹಕರಿಸದಿದ್ದಲ್ಲಿ ಸಂತ್ರಸ್ತೆ ಮತ್ತವರ ಪೋಷಕರನ್ನು ಕೊಲೆ ಮಾಡುವುದಾಗಿ ಬೆದರಿಕೆ…

Read More

ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್ ನಡೆದಿದೆ. ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವನ್ನಪ್ಪಿದ್ದಾರೆ. ಇನ್ನು ಈ ಒಂದು ಘಟನೆಯ ಕುರಿತಂತೆ ರಾಜ್ಯ ಡಿಜಿ ಐಜಿಪಿ ಎಂ.ಎ ಸಲೀಂ ಅವರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾದ ಮಾಹಿತಿ ಪಡೆದುಕೊಂಡಿದ್ದಾರೆ. ಘಟನೆ ಯಾಕೆ ಹೇಗೆ ಆಯ್ತು? ಕಾರಣಕರ್ತರು ಯಾರು? ಎಂಬುದರ ಕುರಿತು ಮಾಹಿತಿ ಪಡೆದಿದ್ದಾರೆ. ಈ ವೇಳೆ ಸಲೀಂ ಅವರಿಗೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ? ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಎದುರು ಗಲಾಟೆಯಾಗಿ ಫೈರಿಂಗ್ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಬಳ್ಳಾರಿ ಹುಸೇನ್ ನಗರದ ರಾಜಶೇಖರ್(28) ಎಂದು ಗುರುತಿಸಲಾಗಿದೆ. ಗಂಗಾವತಿ ಶಾಸಕ…

Read More

ಧಾರವಾಡ : ಧಾರವಾಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ಸಿಲಿಂಡರ್ ಸ್ಫೋಟಗೊಂಡು ಆರು ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಗರದ ಕೋಳಿಕೆರೆ ಬಡಾವಣೆಯಲ್ಲಿ ಈ ಒಂದು ಬೆಂಕಿ ಅವಘಡ ಸಂಭವಿಸಿದೆ. ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ನಾಲ್ವರು ಮಕ್ಕಳು ಸೇರಿ ಆರು ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ನೀಡಲಾಗುತ್ತಿದೆ. ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯಲ್ಲಿ ಕೈದಿಗಳು ಸಿಗರೇಟ್ ಮದ್ಯ ಸೇವನೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಲ್ವರು ವಿಚಾರಣಾ ಕೈದಿಗಳ ವಿರುದ್ಧ FIR ದಾಖಲಾಗಿದೆ. ಆಕಾಶ್, ರಾಕೇಶ್, ಪ್ರಜ್ವಲ್ ಹಾಗೂ ಮುನಿಕೃಷ್ಣ ವಿರುದ್ಧ FIR ದಾಖಲಾಗಿದೆ. ಜೈಲಿನಲ್ಲಿ ಈ ನಾಲ್ವರು ಇಸ್ಪೀಟ್ ಆಡುತ್ತಾ ಸಿಗರೇಟ್ ಸಿಗುತ್ತಾ? ಮಧ್ಯ ಸೇವಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು ಈ ಹಿನ್ನೆಲೆ ನಾಲ್ವರ ವಿರುದ್ಧ fir ದಾಖಲಾಗಿದೆ. ಹೌದು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ಮದ್ಯ ಸಿಗರೇಟ್ ಹಾಗೂ ಡ್ರಗ್ಸ್ ಪೂರೈಕೆ ಆಗುತ್ತಿತ್ತು. ಅಷ್ಟೇ ಅಲ್ಲದೆ ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೈದಿಗಳಿಗೆ ಡ್ರಗ್ಸ್ ಸಿಗರೇಟ್ ಹಾಗೂ ಮದ್ಯ ಪೂರಕ ಆಗುತ್ತಿತ್ತು.ಆದರೆ ಬೆನ್ನಲ್ಲೇ ಕಲಬುರ್ಗಿ ಕೇಂದ್ರ ಕಾರಾಗೃಹದಲ್ಲು ಕೂಡ ಇದೀಗ ಕೈದಿಗಳು ಸಿಗರೇಟ್ ಸೇದುತ್ತಾ ಇಸ್ಪೀಟ್ ಆಡುತ್ತಿರುವ ದೃಶ್ಯ ವೈರಲಾಗಿದೆ. ನಗರದ ಕೇಂದ್ರ ಕಾರಾಗೃಹದಲ್ಲಿ ನಡೆಯುತ್ತಿರುವ ಅಕ್ರಮಗಳು ಒಂದೊಂದಾಗಿ ಬಯಲಾಗುತ್ತಿದ್ದು, ಇದೀಗ ಕೈದಿಗಳ ಹೈಫೈ ಜೀವನ ಶೈಲಿಯ ಮತ್ತೊಂದು…

Read More