Subscribe to Updates
Get the latest creative news from FooBar about art, design and business.
Author: kannadanewsnow05
ರಾಯಚೂರು : ಪ್ರೀತಿಯ ವಿಚಾರಕ್ಕೆ ಸಂಬಂಧಪಟ್ಟಂತೆ ಅಪ್ರಾಪ್ತ ಬಾಲಕಿಯನ್ನು ಕಿಡ್ನಾಪ್ ಮಾಡಲು ಮುಂಡದಾಗ ತಡೆಯಲು ವ್ಯಕ್ತಿಯೊಬ್ಬ ಬಂದಿದ್ದಾನೆ. ಈ ವೇಳೆ ಆತನನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಯಾಪಲ್ ದಿನ್ನಿ ಗ್ರಾಮದಲ್ಲಿ ನಡೆದಿದೆ. ಯಾಪಲದಿನ್ನಿ ಗ್ರಾಮದ ಈಶಪ್ಪ (30) ಕೊಲೆಯಾದ ದುರ್ದೈವಿ. ಘಟನೆ ನಡೆದ ರಾತ್ರಿ ಈಶಪ್ಪ ತಮ್ಮ ಮನೆಯ ಮಾಳಿಗೆಯ ಮೇಲೆ ಮಲಗಿದ್ದರು. ಈ ವೇಳೆ ಅನ್ಯ ಧರ್ಮದ ಯುವಕ ಅಸ್ಲಂ ಮತ್ತು ಆತನ ಸ್ನೇಹಿತರು ಸೇರಿ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿರುವುದನ್ನು ಈಶಪ್ಪ ಗಮನಿಸಿದ್ದಾರೆ. ನಡುರಾತ್ರಿ ನಡೆದ ಘೋರ ಕೃತ್ಯ ಘಟನೆ ನಡೆದ ರಾತ್ರಿ ಈಶಪ್ಪ ಅವರು ಎಂದಿನಂತೆ ತಮ್ಮ ಮನೆಯ ಮಾಳಿಗೆಯ ಮೇಲೆ ನಿದ್ದೆ ಮಾಡುತ್ತಿದ್ದರು. ಈ ವೇಳೆ ಅನ್ಯ ಧರ್ಮದ ಯುವಕ ಅಸ್ಲಂ ಮತ್ತು ಆತನ ಸ್ನೇಹಿತರ ತಂಡವೊಂದು 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಅಪಹರಿಸಲು ಯತ್ನಿಸುತ್ತಿತ್ತು. ನಿದ್ದೆಯಲ್ಲಿದ್ದ ಈಶಪ್ಪ ಅವರು ಕೆಳಗಿನ ಗಲಾಟೆ ಕೇಳಿ ಎಚ್ಚರಗೊಂಡು ನೋಡಿದಾಗ, ಬಾಲಕಿಯನ್ನು…
BREAKING : ADMK ಜೊತೆ ಮೈತ್ರಿ ತಿರಸ್ಕರಿಸಿದ ವಿಜಯ್ : ಕಾಂಗ್ರೆಸ್, ಎಡಪಕ್ಷಗಳ ಜೊತೆ ಸರ್ಕಾರ ರಚನೆ ಬಹುತೇಕ ಫಿಕ್ಸ್?!
ತಮಿಳುನಾಡು : ತಮಿಳುನಾಡಲ್ಲಿ 234 ಕ್ಷೇತ್ರಗಳಲ್ಲಿ 108 ಪೈಕಿ ಗೆದ್ದಿರುವ ದಳಪತಿ ನಟ ವಿಜಯ್ ನೇತೃತ್ವದ TVK ಪಕ್ಷವು, ಇದೀಗ ತಮಿಳುನಾಡಲ್ಲಿ ಮೊದಲ ಬಾರಿ ಸರ್ಕಾರ ರಚನೆಗೆ ಮುಂದಾಗಿದೆ. ಹಾಗಾಗಿ ಈಗಾಗಲೇ ADMK ಜೊತೆ ಮೈತ್ರಿ ತಿರಸ್ಕರಿಸಿರುವ ವಿಜಯ್ ಕಾಂಗ್ರೆಸ್ ಹಾಗು ಎಡಪಕ್ಷಗಳ ಜೊತೆ ಕೈ ಜೋಡಿಸಿ ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕಾಂಗ್ರೆಸ್ VCK, CPI, CPI(M), IUML ಪಕ್ಷಗಳು ಇದ್ದು, ವಿಜಯ್ ಮೈತ್ರಿ ಆಯ್ಕೆ ಓಪನ್ ಇಟ್ಕೊಂಡಿದ್ದಾರೆ. ಹಾಗಾಗಿ ಯಾವುದೇ ಕ್ಷಣದಲ್ಲಿ ಮೈತ್ರಿಗೆ ಅಹ್ವಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ADMK ಮೈತ್ರಿ ತಿರಸ್ಕರಿಸಿದ ವಿಜಯ್ ಬಹುಮತಕ್ಕೆ ಕೆಲವೇ ಸ್ಥಾನಗಳ ಅಂತರವಿರುವ ಹಿನ್ನೆಲೆಯಲ್ಲಿ, ಪ್ರಮುಖ ಪ್ರತಿಪಕ್ಷವಾದ ADMK ವಿಜಯ್ ಅವರೊಂದಿಗೆ ಕೈಜೋಡಿಸಲು ಮುಂದಾಗಿತ್ತು. ಆದರೆ, ತನ್ನ ಸಿದ್ಧಾಂತ ಮತ್ತು ಪಕ್ಷದ ಸ್ವತಂತ್ರ ಅಸ್ತಿತ್ವಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ವಿಜಯ್ ಅವರು ADMK ಜೊತೆಗಿನ ಮೈತ್ರಿಯನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ. ಭ್ರಷ್ಟಾಚಾರ ಮುಕ್ತ ಮತ್ತು ಪಾರದರ್ಶಕ ಆಡಳಿತದ ಭರವಸೆ…
ಬೆಂಗಳೂರು : ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆಯಲ್ಲಿ ವೋಟ್ ಚೋರಿ ಅಲ್ಲ. ಇದು ವೋಟ್ ಡಕಾಯಿತಿ ಆಗಿದೆ. ಅಂಚೆ ಮತ ಪತ್ರವನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಕೋರ್ಟ್ ಆದೇಶದಂತೆ ಪೋಸ್ಟಲ್ ಬ್ಯಾಲೆಟ್ ಮರು ಎಣಿಕೆ ಆಯಿತು. 2023ರ ಚುನಾವಣೆಯಲ್ಲಿ 201 ಮತಗಳ ಅಂತರದಿಂದ ರಾಜೇಗೌಡ ಅವರು ಗೆದ್ದಿದ್ದರು. ಅವರಿಗೆ 59,171 ಮತಗಳು ಬಂದಿದ್ದವು. ಬಿಜೆಪಿಯ ಜೀವರಾಜ್ಗೆ 58,970 ಮತಗಳು ಬಂದಿದ್ದವು. ರಾಜೇಗೌಡರಿಗೆ ಇವಿಎಂನಿಂದ ಬಂದ ಮತಗಳು 58,602. ಪೋಸ್ಟಲ್ನಿಂದ ಬಂದಿದ್ದು 569. ಜೀವರಾಜ್ಗೆ ಇವಿಎಂನಿಂದ 58,278 ಮತಗಳು ಬಂದಿದ್ದವು. ಅವರಿಗೆ ಪೋಸ್ಟಲ್ನಿಂದ ಬಂದ ಮತ 692. ಒಟ್ಟಾರೆಯಾಗಿ 201 ಮತಗಳಿಂದ ರಾಜೇಗೌಡ ಅವರು ಗೆದ್ದಿದ್ದರು. ಇವೆಲ್ಲವೂ ಸಿಂಧು ಮತಗಳೆಂದು ರಿಟರ್ನಿಂಗ್ ಅಧಿಕಾರಿಗಳು, ಚುನಾವಣಾ ಏಜೆಂಟ್ಗಳು ಸಹಿ ಹಾಕಿ ಘೋಷಿಸಿದ್ದರು ಎಂದು ತಿಳಿಸಿದರು. ಘೋಷಣೆ ಆದ ಮೇಲೆ ಜೀವರಾಜ್ ಅವರು ಮಾಲ್ ಪ್ರಾಕ್ಟೀಸ್ ಆಗಿದೆ ಎಂದು…
ಬೆಂಗಳೂರು : ಭಾರತದ ಬಾಹ್ಯಾಕಾಶ ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ದೇಶದಲ್ಲಿ ಮೊದಲ ಬಾರಿಗೆ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿದೆ. ಈ ಕೇಂದ್ರವನ್ನು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜ್ಯ ಅನ್ವಯವನ್ನು ವೇಗಗೊಳಿಸುವುದು ಮತ್ತು ಸರ್ಕಾರ, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳ ನಡುವಿನ ಸಹಯೋಗವನ್ನು ಬಲಪಡಿಸುವುದು ಈ ಉಪಕ್ರಮದ ಉದ್ದೇಶವಾಗಿದೆ. ಎಕ್ಸಲೆನ್ಸ್ ಸೆಂಟರ್: ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಎಕ್ಸಲೆನ್ಸ್ ಸೆಂಟರ್ (CoE ಸ್ಪೇಸ್ಟೆಕ್ ಫೌಂಡೇಶನ್) ಅನ್ನು ಕರ್ನಾಟಕ ಸರ್ಕಾರವು ಕರ್ನಾಟಕ ಇನ್ನೋವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ (KITS) ಮೂಲಕ ಸ್ಥಾಪಿಸಿದೆ. ಈ ಉಪಕ್ರಮವು ಸ್ಯಾಟ್ಕಾಮ್ ಇಂಡಸ್ಟ್ರಿ ಅಸೋಸಿಯೇಷನ್ ಆಫ್ ಇಂಡಿಯಾ (SIA-ಇಂಡಿಯಾ) ಸಹಯೋಗವನ್ನು ಸಹ ಒಳಗೊಂಡಿದೆ. ಉದಯೋನ್ಮುಖ ಬಾಹ್ಯಾಕಾಶ ತಂತ್ರಜ್ಞಾನಗಳಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ಸಾಮರ್ಥ್ಯ ವೃದ್ಧಿಗೆ ಕೇಂದ್ರವು ಸಮರ್ಪಿತವಾಗಿದೆ. ಪ್ರಮುಖ ಉದ್ದೇಶಗಳು ಮತ್ತು ಕಾರ್ಯಗಳು: ಈ ಕೇಂದ್ರದ ಪ್ರಾಥಮಿಕ ಗಮನವು ಮುಂದುವರಿದ ಸಂಶೋಧನೆ,…
ಬೆಂಗಳೂರು : ಬೆಂಗಳೂರಿನಲ್ಲಿ ವಾಸಿಸುತ್ತಿರುವ ಎಲ್ಲರಿಗೂ ಈಗ ಮತ್ತೊಂದು ಬೆಲೆ ಏರಿಕೆಯ ಭೀತಿ ಎದುರಾಗಿದೆ. ಕೇಂದ್ರ ಸರ್ಕಾರವು ಆಟೋ ಎಲ್.ಪಿ.ಜಿ ದರವನ್ನು ಪ್ರತಿ ಲೀಟರ್ಗೆ ಬರೋಬ್ಬರಿ 5.73 ರೂಪಾಯಿಗಳಷ್ಟು ದಿಢೀರ್ ಏರಿಕೆ ಮಾಡಿದೆ. ಸರ್ಕಾರದ ಈ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿರುವ ಆಟೋ ಚಾಲಕರು, ಆಟೋ ಪ್ರಯಾಣ ದರವನ್ನು ಹೆಚ್ಚಿಸುವಂತೆ ರಾಜ್ಯ ಸರ್ಕಾರದ ಮೇಲೆ ತೀವ್ರ ಒತ್ತಡ ಹೇರಲಾರಂಭಿಸಿದ್ದಾರೆ. ಇದರಿಂದಾಗಿ ದಿನನಿತ್ಯ ಆಟೋಗಳಲ್ಲಿ ಸಂಚರಿಸುವ ಬೆಂಗಳೂರಿನ ಲಕ್ಷಾಂತರ ಪ್ರಯಾಣಿಕರಿಗೆ ಆಟೋ ಚಾರ್ಜ್ ಏರಿಕೆಯ ಬಿಸಿ ಮುಟ್ಟುವ ಸಾಧ್ಯತೆ ದಟ್ಟವಾಗಿದೆ. ಆಟೋ ಚಾಲಕರ ಪ್ರಮುಖ ಬೇಡಿಕೆಗಳೇನು? ಸದ್ಯ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ (ಮೊದಲ 2 ಕಿಲೋಮೀಟರ್ಗೆ) 36 ರೂ. ನಿಗದಿಪಡಿಸಲಾಗಿದೆ. ಆ ನಂತರದ ಪ್ರತಿ ಕಿಲೋಮೀಟರ್ಗೆ 18 ರೂ. ಇದೆ. ಆದರೆ, ಈಗ ಗ್ಯಾಸ್ ಬೆಲೆ ವಿಪರೀತವಾಗಿ ಏರಿಕೆಯಾಗಿರುವುದರಿಂದ ಈ ದರದಲ್ಲಿ ಆಟೋ ಓಡಿಸಿದರೆ ನಮಗೆ ಯಾವುದೇ ಲಾಭವಿಲ್ಲ. ಹೀಗಾಗಿ ಕನಿಷ್ಠ ದರವನ್ನು 50 ರೂ.ಗಳಿಗೆ ಹಾಗೂ ನಂತರದ ಪ್ರತಿ ಕಿಲೋಮೀಟರ್ಗೆ 25…
ನವದೆಹಲಿ : ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಸರಣಿ ದಾಳಿಗಳು ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿವೆ. ಇತ್ತೀಚೆಗಷ್ಟೇ ಹೋಟೆಲ್ ಒಂದರಲ್ಲಿ ಸಭೆ ನಡೆಸುತ್ತಿದ್ದಾಗ ಅವರ ಮೇಲೆ ಹಲ್ಲೆಗೆ ಪ್ರಯತ್ನ ನಡೆದ ಬೆನ್ನಲ್ಲೇ, ಇದೀಗ ವೈಟ್ ಹೌಸ್ನಲ್ಲಿ (ಶ್ವೇತಭವನ) ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ ಯುವಕನೊಬ್ಬ ಗುಂಡಿನ ದಾಳಿ ನಡೆಸಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಸಭೆಯ ಮಧ್ಯೆ ನುಗ್ಗಿದ ಅಪರಿಚಿತ: ಡೊನಾಲ್ಡ್ ಟ್ರಂಪ್ ಅವರು ಪ್ರಮುಖ ಮುಖಂಡರೊಂದಿಗೆ ಶ್ವೇತಭವನದ ಆವರಣದಲ್ಲಿ ಸಭೆ ನಡೆಸುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಯುವಕನೊಬ್ಬ ಭದ್ರತಾ ಕವಚವನ್ನು ಭೇದಿಸಿ ಒಳನುಗ್ಗಲು ಪ್ರಯತ್ನಿಸಿದ್ದಾನೆ. ಸಭೆ ನಡೆಯುತ್ತಿದ್ದ ಸ್ಥಳದ ಸಮೀಪದಲ್ಲೇ ಆತ ಗುಂಡು ಹಾರಿಸಿದ್ದು, ಕ್ಷಣಾರ್ಧದಲ್ಲಿ ಅಲ್ಲಿ ನೆರೆದಿದ್ದವರು ಭಯಭೀತರಾಗಿದ್ದಾರೆ. ಅದೃಷ್ಟವಶಾತ್, ಟ್ರಂಪ್ ಅವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಭದ್ರತಾ ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆ: ಗುಂಡಿನ ಶಬ್ದ ಕೇಳಿಸುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ಅಮೆರಿಕದ ಸೀಕ್ರೆಟ್ ಸರ್ವಿಸ್ ಸಿಬ್ಬಂದಿಗಳು ಮತ್ತು ಭದ್ರತಾ ಪಡೆಯವರು ತಕ್ಷಣವೇ ಟ್ರಂಪ್ ಅವರನ್ನು ಸುರಕ್ಷಿತ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ನಡೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಪವರ್ ಫೈಟ್ ಗೆ ತೆರೆ ಎಳೆಯಲು ಹೈಕಮಾಂಡ್ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 15ರ ಒಳಗೆ ದೆಹಲಿಗೆ ಸಿಎಂ ಸಿದ್ದರಾಮಯ್ಯ ಮತ್ತು ಕರೆದು ನಾಯಕತ್ವ ಬದಲಾವಣೆ ಕುರಿತು ಹೈಕಮಾಂಡ್ ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೌದು ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಂಪುಟ ಪುನಾರಚನೇ ವಿಚಾರ ಕುರಿತು ಭಾರಿ ಚರ್ಚೆ ನಡೆಯುತ್ತಿತ್ತು. ಇದೀಗ ಮೇ 15ರ ಆಸುಪಾಸಿನಲ್ಲಿ ಹೈಕಮಾಂಡ್ ಚರ್ಚೆ ನಡೆಸುವ ಸಾಧ್ಯತೆ ಇದೆ. ಮೇ 10ರೊಳಗಾಗಿ ಕೇರಳ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಮುಗಿಸಲು ತೀರ್ಮಾನಿಸಿದ್ದು. ಮೇ 15ರ ಆಸುಪಾಸಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ದೆಹಲಿಗೆ ಕರೆದು ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚಿಸಲಿದ್ದಾರೆ ಎಂದು ಇದೀಗ ಬಲ್ಲಮೂಲಗಳಿಂದ ತಿಳಿದುಬಂದಿದೆ.
ಬೀದರ್: ನಗರದ ಹೃದಯಭಾಗದಲ್ಲಿರುವ ಜೈಲ್ ಕಾಲೋನಿಯ ಕಾಮತ್ ಹೋಟೆಲ್ ಸಮೀಪ ಮಂಗಳವಾರ ಮಧ್ಯಾಹ್ನ ಅಮೃತ ಯೋಜನೆಯ ಗ್ಯಾಸ್ ಪೈಪ್ಲೈನ್ ದಿಢೀರ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಪಕ್ಕದಲ್ಲೇ ಅಳವಡಿಸಲಾಗಿದ್ದ ಪೈಪ್ನಿಂದ ಗ್ಯಾಸ್ ಲೀಕ್ ಆಗುತ್ತಿದ್ದಂತೆ ದೊಡ್ಡ ಮಟ್ಟದ ಜ್ವಾಲೆ ಎದ್ದಿದ್ದು, ಸುತ್ತಮುತ್ತಲಿನ ಅಂಗಡಿ ಮುಂಗಟ್ಟುಗಳ ಮಾಲೀಕರು ಹಾಗೂ ಸಾರ್ವಜನಿಕರು ಭಯಭೀತರಾಗಿ ಓಡಿದ ಘಟನೆ ನಡೆಯಿತು. ಕಾಮಗಾರಿ ವೇಳೆ ಎಡವಟ್ಟು? ಪ್ರಾಥಮಿಕ ಮಾಹಿತಿಯ ಪ್ರಕಾರ, ಸದರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯಾವುದೋ ಕಾಮಗಾರಿಯ ವೇಳೆ ಪೈಪ್ಲೈನ್ಗೆ ಹಾನಿಯಾಗಿರಬಹುದು ಎಂದು ಶಂಕಿಸಲಾಗಿದೆ. ಪೈಪ್ ಒಡೆದ ಪರಿಣಾಮ ಅನಿಲವು ಅಧಿಕ ಒತ್ತಡದೊಂದಿಗೆ ಹೊರಬರಲಾರಂಭಿಸಿತು. ಈ ವೇಳೆ ಸಣ್ಣ ಕಿಡಿ ತಗುಲಿದ್ದೇ ತಡ, ಬೆಂಕಿ ಧಗಧಗನೆ ಉರಿಯಲು ಪ್ರಾರಂಭಿಸಿತು. ಹೋಟೆಲ್ ಮತ್ತು ವಾಣಿಜ್ಯ ಸಂಕೀರ್ಣಗಳಿರುವ ಪ್ರದೇಶವಾಗಿದ್ದರಿಂದ ಜನಸಂದಣಿ ಹೆಚ್ಚಾಗಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತ್ವರಿತ ಕಾರ್ಯಾಚರಣೆ ಘಟನೆ ತಿಳಿಯುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಪೈಪ್ಲೈನ್ ನಿರ್ವಹಣಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಧಾವಿಸಿದ…
ಧಾರವಾಡ: ಕಳೆದ ಕೆಲ ದಿನಗಳ ಹಿಂದೆ ನಡೆದಿದ್ದ ಬೌದ್ಧ ಸನ್ಯಾಸಿ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇದಿಸಿದ್ದಾರೆ. ಎಪ್ರಿಲ್ 29 ರಂದು ಧಾರವಾಡದ ಹಳಿಯಾಳ ರಸ್ತೆಯಲ್ಲಿ ಸನ್ಯಾಸಿಯ ಶವ ಪತ್ತೆಯಾಗಿತ್ತು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಏಪ್ರಿಲ್ 29ರಂದು ಧಾರವಾಡದ ಹಳಿಯಾಳ ರಸ್ತೆಯ ನಿರ್ಜನ ಪ್ರದೇಶದಲ್ಲಿ ಬೌದ್ಧ ಸನ್ಯಾಸಿಯೊಬ್ಬರ ಶವ ಪತ್ತೆಯಾಗಿತ್ತು. ಮೃತದೇಹದ ಮೇಲೆ ತೀವ್ರ ಸ್ವರೂಪದ ಗಾಯಗಳಾಗಿದ್ದರಿಂದ ಇದು ವ್ಯವಸ್ಥಿತವಾಗಿ ನಡೆದ ಕೊಲೆ ಎಂಬ ಅನುಮಾನ ವ್ಯಕ್ತವಾಗಿತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಿದ್ದರು. ಪೊಲೀಸರು ತಾಂತ್ರಿಕ ದಾಖಲೆಗಳು ಮತ್ತು ಖಚಿತ ಮಾಹಿತಿಗಳನ್ನು ಆಧರಿಸಿ ಕಾರ್ಯಾಚರಣೆ ನಡೆಸಿದಾಗ, ಆರೋಪಿಗಳು ನೆರೆರಾಜ್ಯ ಮಹಾರಾಷ್ಟ್ರದಲ್ಲಿ ಅಡಗಿರುವ ಸುಳಿವು ಲಭ್ಯವಾಗಿತ್ತು. ತಕ್ಷಣವೇ ಕೊಲ್ಹಾಪುರಕ್ಕೆ ತೆರಳಿದ ಧಾರವಾಡ ಗ್ರಾಮೀಣ ಪೊಲೀಸರ ತಂಡ, ಅಲ್ಲಿ ಅಡಗಿದ್ದ ಮೂವರು ಪ್ರಮುಖ ಆರೋಪಿಗಳನ್ನು ಸಿನಿಮೀಯ ಶೈಲಿಯಲ್ಲಿ…
ಬೆಂಗಳೂರು : ತಮಿಳುನಾಡಿನಲ್ಲಿ ನಟ ವಿಜಯ್ ಅವರು ಮೊದಲ ಬಾರಿ ಇತಿಹಾಸ ನಿರ್ಮಾಣ ಮಾಡಿದ್ದು, ಮೊದಲ ಪ್ರಯತ್ನದಲ್ಲಿ ಅವರ ನೇತೃತ್ವದ ಟಿ ವಿ ಕೆ ಪಕ್ಷ 108 ಸ್ಥಾನಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ. ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಜ್ ಕುಮಾರ್ ನಟ ವಿಜಯ ಅವರಿಗೆ ಅಭಿನಂದನೆ ತಿಳಿಸಿದ್ದಾರೆ. ಇದು ನಿಜವಾಗಿಯೂ ನಿಮಗೆ ಸದಾ ಜನ ಆಶೀರ್ವಾದದ ಜಯ. ತೀವ್ರ ಟೀಕೆಗಳ ಸಮಯದಲ್ಲಿ ಮೌನವಾಗಿದ್ದು ನಿಮ್ಮ ಕೆಲಸವೇ ಮಾತನಾಡಲು ಬಿಡುವುದು ಅದೇ ದೊಡ್ಡ ಜಯ. ತಮಿಳುನಾಡಿನ ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ನೀವು ಈಡೇರಿಸಿ. ಪತ್ರಕರ್ತರೊಂದಿಗೆ ನಡೆದ ಒಂದು ಸಂಭಾಷಣೆಯಲ್ಲಿ ನಾನು ಹಾಸ್ಯವಾಗಿ ಟಿವಿಕೆ ಟ್ರೈ ವಿಜಯ್ ಆಸ್ ಕಿಂಗ್ ಅಂತ ಹೇಳಿದ್ದೆ. ಇಂದು ನೀವು ನಿಜವಾಗಿಯೂ ರಾಜನಂತೆ ಎದ್ದು ನಿಂತಿದ್ದೀರಿ. ತಮಿಳುನಾಡು ಜನತೆಗೆ ನೀಡಿದ ಎಲ್ಲಾ ಭರವಸೆಗಳನ್ನು ನೀವು ಈಡೇರಿಸಿ ಮತ್ತು ಸದಾ ಅಭಿವೃದ್ಧಿ ಮುಂದುವರೆಯಲಿ ಎಂದು ಅಭಿನಂದನೆ ತಿಳಿಸಿದ್ದಾರೆ














