Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಝಾಂಬಿ ಡ್ರಗ್ ಸೇವನೆಗೆ ಸಂಬಂಧಿಸಿದಂತೆ ಬೆಂಗಳೂರು ವ್ಯಕ್ತಿಯ ವಿಡಿಯೋವನ್ನು ವೈರಲ್ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಯುವಕನನ್ನು ಪರೀಕ್ಷೆ ಮಾಡಿದ್ದೇವೆ. ಆತ ಯಾವುದೇ ಝಾಂಬಿ ಡ್ರಗ್ ಸೇವಿಸಿಲ್ಲ. ಈ ವಿಡಿಯೋವನ್ನು ಶೇರ್ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದೇವೆ. ಬಾಗಲೂರು ಪೊಲೀಸರು ವಿಡಿಯೋ ಅಪ್ಲೋಡ್ ಮಾಡಿದ್ದ ವ್ಯಕ್ತಿ ಬಂಧಿಸಿದ್ದು ಈಗ ಆತ ಕ್ಷಮೆ ಕೇಳಿ ವಿಡಿಯೋ ಮಾಡಿದ್ದಾನೆ. ಈ ವಿಡಿಯೋವನ್ನ ಯಾರೆಲ್ಲಾ ಶೇರ್ ಮಾಡಿದ್ದಾರೆ ಅವರಿಗೆ ನೋಟಿಸ್ ನೀಡುತ್ತೇವೆ. ಆಧಾರರಹಿತ ಮಾಹಿತಿ ಶೇರ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದ್ದಾರೆ. ಮೆಡಿಕಲ್ ರಿಪೋರ್ಟ್ ಆಧಾರದ ಮೇಲೆ ಕಾಮೆಂಟ್ ಮಾಡಬೇಕು. ಒಬ್ಬರ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗಬಾರದು. ಊಹೆ ಮಾಡಿಕೊಂಡು ಈ ರೀತಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ವಿದೇಶದಲ್ಲಿ ಈ ರೀತಿ ಡ್ರಗ್ ಸೇವನೆ ಇದೆ ಎಂದು…
ಬೆಂಗಳೂರು : ಕಾಂತಾರ ಚಾಪ್ಟರ್-1 ಚಿತ್ರದ ದೈವಪಾತ್ರಕ್ಕೆ ಅಪಮಾನಕಾರಿ ಸನ್ನೆ ಮಾಡಿ ಮಾತನಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಕ್ಷಮಾಪಣಾ ಪತ್ರ ಸಲ್ಲಿಸುವುದಾಗಿ ನಟ ರಣವೀರ್ ಸಿಂಗ್ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದ್ದಾರೆ. ವಿಚಾರಣೆಯ ವೇಳೆ ದೂರುದಾರರ ಪರ ವಕೀಲರು, ಅರ್ಜಿದಾರ ರಣವೀರ್ ಸಿಂಗ್ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಪಶ್ಚಾತ್ತಾಪವಿಲ್ಲ. ದೂರು ನೀಡಿರುವುದೇ ತಪ್ಪು ಎಂಬಂತೆ ಬಿಂಬಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಅರ್ಜಿದಾರರ ಪರ ವಕೀಲರು, ದೂರುದಾರರೊಂದಿಗೆ ಚರ್ಚಿಸಿ ಅವರಿಗೆ ತೃಪ್ತಿಯಾಗುವ ಭಾಷೆಯಲ್ಲಿಯೇ ಪರಿಷ್ಕೃತ ಪ್ರಮಾಣ ಪತ್ರ ಸಲ್ಲಿಸುವುದಾಗಿ ಹೇಳಿದರು. ಗೋವಾದಲ್ಲಿ ಕೆಲ ತಿಂಗಳ ಹಿಂದೆ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್ಎಫ್ಐ) ಕಾಂತಾರ ಚಾಪ್ಟರ್-1 ಚಿತ್ರದ ಚಾಮುಂಡಿ ದೈವಕ್ಕೆ ಅಪಮಾನ ಮಾಡಿದ ಆರೋಪದಡಿ ದಾಖಲಾಗಿರುವ ಖಾಸಗಿ ದೂರು ಮತ್ತು ಅದರ ಮುಂದುವರಿದ ಭಾಗವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ, ರಣವೀರ್ ಸಿಂಗ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ವಿಚಾರಣೆ ನಡೆಸಿದರು. ಘಟನೆ ನಡೆದ ದಿನ ನಾನು…
ಧಾರವಾಡ : ರಾಜ್ಯದ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. ಹಿಂದಿನ ಪ್ರತಿಭಟನೆಗಳಲ್ಲಿ ಅಹಿತಕರ ಘಟನೆಗಳು ನಡೆದಿದ್ದರಿಂದ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘದ ಮನವಿಯನ್ನು ಪುರಸ್ಕರಿಸಿದ ಕೋರ್ಟ್, 100 ಜನರಿಗೆ ಮಾತ್ರ ಹೋರಾಟಕ್ಕೆ ಅನುಮತಿ ನೀಡಿದೆ. ಹೌದು ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ಕೆಲ ಷರತ್ತುಗಳನ್ನು ವಿಧಿಸಿ ಗ್ರೀನ್ ಸಿಗ್ನಲ್ ನೀಡಿದೆ. ಏಪ್ರಿಲ್ 08ರಂದು ಡಿಸಿ ಕಚೇರಿ ಬಳಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಸಂಘ ಮುಂದಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಘದಿಂದ ಕರೆ ನೀಡಲಾಗಿರುವ ಹೋರಾಟಕ್ಕೆ ಧಾರವಾಡ ಪೊಲೀಸರು ಅನುಮತಿ ನಿರಾಕರಿಸಿದ್ದರು. ಈ ಹಿನ್ನೆಲೆ ಕೋರ್ಟ್ ಮೊರೆ ಹೋಗಲಾಗಿತ್ತು. ಸಂಘಟನೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾ.ಅಶೋಕ ಕಿನಗಿ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ…
ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಒಬ್ಬಳು ಸಾವನಪ್ಪಿದ್ದಾಳೆ. ಇದೀಗ ಇವೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾವನ್ನಪ್ಪಿದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ವಾಟ್ಸಪ್ ಸ್ಟೇಟಸ್ ನಲ್ಲಿ ಒಂದು ಸ್ಟೇಟಸ್ ಹಾಕಿದ್ದು ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ತನುಶ್ರೀ. ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ‘3PM fielding set’ ಎಂದು ಸ್ಟೇಟಸ್ ಹಾಕಿದ್ದಳು ತನುಶ್ರೀ ಸ್ಟೇಟಸ್ ನೋಡಿ ಆಕೆಯ ಸ್ನೇಹಿತೆ ಮನೆಯ ಬಳಿಗೆ ದೌಡಾಯಿಸಿ ಬಂದಿದ್ದಾಳೆ. ಸ್ನೇಹಿತೆ ಮನೆಯ ಬಳಿ ಹೋಗುವಷ್ಟರಲ್ಲಿ ತನುಶ್ರೀ ನೇಣಿಗೆ ಶರಣಾಗಿದ್ದಾಳೆ. ಕೂಡಲೇ ತನುಶ್ರೀ ಸ್ನೇಹಿತೆ ತನ್ನ ತಂದೆಗೆ ಕರೆ ಮಾಡಿದ್ದಾಳೆ ಬಳಿಕ ಬಾಗಿಲು ಒಡೆದು ನೇಣುಕುಣಿಕೆಯಿಂದ ತನುಶ್ರೀಯನ್ನ ಕೆಳಗಡೆ ಇಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇನ್ನು ತನುಶ್ರೀ ಸ್ನೇಹಿತೆ ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾನು ಕಾಮರ್ಸ್ ಸ್ಟೂಡೆಂಟ್ ಆಗಿದ್ದು ಅವಳು ಸೈನ್ಸ್ ಸ್ಟೂಡೆಂಟ್ ಆಗಿದ್ದಳು. ಆಕೆಗೆ ದ್ವಿತೀಯ ಪಿಯುಸಿ ಫಲಿತಾಂಶದ ಭಯ…
ಬೆಂಗಳೂರು : ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಇದೀಗ ಫಲಿತಾಂಶದಲ್ಲಿ ಶಿಕ್ಷಣ ಇಲಾಖೆ ಭಾರಿ ಎಡವಟ್ಟು ಮಾಡಿದೆ. 600 ಅಂಕಗಳಿಗೆ ಬೋರ್ಡ್, 683 ಅಂಕಗಳನ್ನು ಕೊಟ್ಟಿದೆ. ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಇದೀಗ ಭಾರಿ ಲೋಪ ಕಂಡುಬಂದಿದೆ. Karresults.nic.in ವೆಬ್ ಸೈಟ್ ನಲ್ಲಿ ಈ ಒಂದು ಫಲಿತಾಂಶ ಪ್ರಕಟವಾಗಿದ್ದು, ಡಿಜಿ ಲಾಕರ್ ನಲ್ಲಿ ಅಂಕಪಟ್ಟಿ ಸರಿಯಾದ ರೀತಿಯಲ್ಲಿ ಪ್ರಕಟವಾಗಿದೆ. ಆದರೆ ವೆಬ್ಸೈಟ್ನಲ್ಲಿ ಕೊಟ್ಟ ಫಲಿತಾಂಶದಲ್ಲಿ ಮಾತ್ರ ಎಡವಟ್ಟು ಆಗಿದ್ದು, ಬೋರ್ಡ್ ಆರು ವಿಷಯದಲ್ಲೂ ನೂರಕ್ಕಿಂತ ಹೆಚ್ಚು ಅಂಕ ಕೊಟ್ಟಿದೆ. 2025ರ ಬ್ಯಾಚ್ನಲ್ಲಿ ಬರೆದಿರುವ ವಿದ್ಯಾರ್ಥಿ ಫಲಿತಾಂಶದಲ್ಲಿ ಎಡಬಟ್ಟು ಆಗಿದೆ ಮರು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಫಲಿತಾಂಶದಲ್ಲಿ ಈ ಒಂದು ಎಡಬಟ್ಟು ಕಂಡು ಬಂದಿದೆ
ರಾಯಚೂರು : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಟ್ಟಣ ಪಂಚಾಯತಿ ಅಧಿಕಾರಿ ಒಬ್ಬ ವ್ಯಕ್ತಿ ಒಬ್ಬರ ಬಳಿ 1 ಲಕ್ಷ ಪಡೆದು ಲೋಕಾಯುಕ್ತ ಅಧಿಕಾರಿಗಳು ಬರುತ್ತಿದ್ದದ್ದನ್ನು ಕಂಡು ಅಲ್ಲಿಂದ ಪರಾರಿಯಾಗಿ ಯತ್ನಿಸಿದ್ದಾನೆ. ಈ ವೇಳೆ ಸಿನಿಮಾ ಸ್ಟೈಲ್ ನಲ್ಲಿ ಆತನನ್ನು ಚೇಸ್ ಮಾಡಿ ಲೋಕಾಯುಕ್ತ ಅಧಿಕಾರಿಗಳು ಬಲೆಗೆ ಕೆಡುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಈ-ಖಾತೆ ಮಾಡಲು ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಅದರಂತೆ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ರಾಘವೇಂದ್ರ ರೆಡ್ಡಿ ಎಂಬವರಿಗೆ 2 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಅಡ್ವಾನ್ಸ್ ಆಗಿ ಒಂದು ಲಕ್ಷ ರೂ. ತೆಗೆದುಕೊಳ್ಳುವಾಗ ಸಿಕ್ಕಿಬಿದ್ದಿದ್ದಾನೆ. ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಎಸ್ಕೇಪ್ ಆಗಲು ನೋಡಿದ್ದ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಪರಾರಿಯಾಗಲು ಪ್ರಯತ್ನಿಸಿದ್ದ. ಸಿನಿಮೀಯ ರೀತಿ ಕಾರಿನಲ್ಲಿ ಚೇಸ್ ಮಾಡಿ ಅಧಿಕಾರಿಯನ್ನು ಲೋಕಾಯುಕ್ತರು ಹಿಡಿದಿದ್ದಾರೆ. ಸದ್ಯ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ…
ಚಿಕ್ಕಮಗಳೂರು : ಕಳೆದ ನಾಲ್ಕು ದಿನಗಳಿಂದ ಚಿಕ್ಕಮಂಗಳೂರು ತಾಲೂಕಿನ ಚಂದ್ರದ್ರೋಣ ಪರ್ವತದ ಮಾಣಿಕ್ಯಧಾರಾಧಲ್ಲಿ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. 14 ವರ್ಷದ ಶ್ರೀನಂದ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಹೌದು ನಾಲ್ಕು ದಿನಗಳಿಂದ ಶ್ರೀನಂದಗಾಗಿ ಬಹಳ ಹುಡುಕಾಟ ನಡೆಸಿದ್ದರು. ಚಿಕ್ಕಮಂಗಳೂರು ತಾಲೂಕಿನ ಶೋಲಾ ಪ್ರದೇಶದಲ್ಲಿ ನಾಪತ್ತೆಯಾಗಿದ್ದಳು. ಈಕೆ ಕೂಡ ಕೇರಳ ಮೂಲದ ಬಾಲಕಿಯಾಗಿದ್ದಳು. ಇದಕ್ಕೂ ಮೊದಲು ಕೇರಳ ಮೂಲದ ಯುವತಿ ಮೂರು ದಿವಸ ನಾಪತ್ತೆಯಾಗಿದ್ದಳು. ಇವಳ ರಂದು ಕೇರಳ ಮೂಲದ ಹೀನದ ನಾಪತ್ತೆಯಾಗಿದ್ದಳು. ಆನಂತರ ಮೂರು ದಿನದ ಬಳಿಕ ಪತ್ತೆಯಾಗಿದ್ದಳು ಆದರೆ ಶ್ರೀ ನಂದ ಇದೀಗ ಶವವಾಗಿ ಪತ್ತೆಯಾಗಿದ್ದಾಳೆ. ಮಾಣಿಕ್ಯ ದಾರಾದ 2000 ಅಡಿ ಕೆಳಗಡೆ ಆಕೆಯ ಮೂರ್ತಿ ದೇಹ ಪತ್ತೆಯಾಗಿದೆ. ಬಹುಶಹ ಕಾಲು ಜಾರಿ ನೀರಿನಿಂದ ಕೆಳಗೆ ಬಿದ್ದಿದ್ದಳು ಅಥವಾ ಹೇಗೆ ಕೆಳಗೆ ಬಿದ್ದಿದ್ದಾಳೆ ಎನ್ನುವುದರ ಕುರಿತು ಅನುಮಾನ ವ್ಯಕ್ತವಾಗಿದ್ದು ಈ ಕುರಿತು ಇನ್ನು ತನಿಖೆಯ ನಂತರ ಕಾರಣ ಬಯಲಾಗಿದೆ.
ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ ವಿರುದ್ಧ ಕಳ್ಳತನ ಆರೋಪ ಮಾಡಿದ್ದಾರೆ. ಎಂಎಸ್ಐಎಲ್ ಚಿಟ್ ಫಂಡ್ ಚೆಕ್ ಬುಕ್ ಕಳ್ಳತನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ತಪಾಸನೆ ನೆಪದಲ್ಲಿ ಕೊಠಡಿಗೆ ಕರೆದೋಯ್ದು ಮಹಿಳೆಗೆ ಜಾತಿನಿಂದನೆ ಮಾಡಿದ್ದಾರೆ. ಅಲ್ಲದೆ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಅಧಿಕಾರಿಗಳ ವಿರುದ್ಧ ಆರೋಪ ಕೇಳಿ ಬಂದಿದೆ. ಎಂಎಸ್ಐ ಜನರಲ್ ಮ್ಯಾನೇಜರ್ ಚಂದ್ರಶೇಖರ್ ಡೆಪ್ಯೂಟಿ ಮ್ಯಾನೇಜರ್ ನಳಿನಿ ಮತ್ತು ಎಜಿಎಂ ವೀಣಾ ವಿರುದ್ಧ ಈ ಒಂದು ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆ ನಾಗರೀಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ. ಅತ್ತ ಮಹಿಳೆಯ ವಿರುದ್ಧ ಅಧಿಕಾರಿಗಳು ಸಹ ಪ್ರತಿದೂರು ನೀಡಿದ್ದಾರೆ. ವಿಧಾನಸೌಧ ಪೊಲೀಸ್ ಠಾಣೆಗೆ ಅಧಿಕಾರಿಗಳಿಂದಲೂ ದೂರು ಸಲ್ಲಿಕೆಯಾಗಿದೆ. ಎಂ ಎಸ್ ಐ ಎಲ್ ಚಿಟ್ ಫಂಡ್ ಚೆಕ್ ಬುಕ್ ದುರುಪಯೋಗ ಆರೋಪದ ಅಡಿ…
ಬೆಂಗಳೂರು : ರಾಜ್ಯದ ಹಲವಡೆ ಗ್ಯಾಸ್ ಸಿಲಿಂಡರ್ ಗಳ ಅಭಾವ ಹಿನ್ನೆಲೆಯಲ್ಲಿ, ಇಂದು BPCL, HPCL, LOCL ಅಧಿಕಾರಿಗಳ ಜೊತೆಗೆ ಆಹಾರ ಇಲಾಖೆ ಸಚಿವ ಕೆಎಚ್ ಮುನಿಯಪ್ಪ ಸಬಿ ನೆಡೆಸಿದರು ಬೆಂಗಳೂರಿನ ವಸಂತನಗರದಲ್ಲಿರುವ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಭೆಯಲ್ಲಿ ಸಭೆ ನಡೆಸಿದರು ಸಿಲಿಂಡರ್ ಬಗ್ಗೆ ಮುನಿಯಪ್ಪ ಮಾಹಿತಿ ಪಡೆದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಚಿವ ಮುನಿಯಪ್ಪ 25ನೇ ದಿನದಂದು ಯಾರು ಸಿಲಿಂಡರ್ ಬುಕ್ ಮಾಡುತ್ತಾರೋ ಅವರಿಗೆ 26ನೇ ದಿನದಂದು ಸಿಲಿಂಡರ್ ಸಿಗಲೇಬೇಕು. ಯಾರು 45 ದಿನಕ್ಕೆ ಬುಕ್ ಮಾಡುತ್ತಾರೋ ಅವರಿಯೇ 46ನೇ ದಿನಕ್ಕೆ ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಸಿಗಲೇಬೇಕು ಯಾರಾದರೂ ದುಬಾರಿ ಮಾರಾಟ ಮಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಸಹಜವಾಗಿ ಗ್ಯಾಸ್ ಏಜೆನ್ಸಿಗಳನ್ನು ಸೀಜ್ ಮಾಡಲಾಗುತ್ತದೆ. ಸಾರ್ವಜನಿಕರು ಕಷ್ಟದಲ್ಲಿ ಇರುವಾಗ ಡಿಸ್ಟ್ರಿಬ್ಯೂಟರ್ಸ್ ಈ ಸಂದರ್ಭದಲ್ಲಿ ಸಹಕರಿಸಬೇಕು. ಕಾಳಸಂತೆಯಲ್ಲಿ ಮಾರಾಟ ಮಾಡಬಾರದು , ದರ ದುಬಾರಿ ಮಾಡಬಾರದು ಇವೆಲ್ಲ ಮಾಡಿದರೆ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಆಟೋ ಗ್ಯಾಸ್ ನಲ್ಲಿ…
ಆಂಧ್ರಪ್ರದೇಶ : ರಿಲ್ಸ್ ಹುಚ್ಚಾಟದಿಂದ ಎಷ್ಟೋ ಜನರು ಪ್ರಾಣ ಕಳೆದುಕೊಂಡಿರುವ ಪ್ರಕರಣಗಳು ನಡೆದಿವೆ. ಇದೀಗ ಮತ್ತೊಂದು ಘಟನೆ ನಡೆದಿದ್ದು ರೀಲ್ಸ್ ಹುಚ್ಚಾಟದಿಂದ ಘೋರ ದುರಂತ ಸಂಭವಿಸಿದ್ದು ಜಲಪಾತದಲ್ಲಿ ಈಜಾಡುತ್ತಿದ್ದ ಮೂವರು ಬಾಲಕಿಯರು ನೀರು ಪಾಲಾಗಿದ್ದಾರೆ. ಮೂವರು ಬಾಲಕಿಯರು ಜಲಸಮಾಧಿ ಆಗಿರುವ ಘಟನೆ ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯಲ್ಲಿ ಈ ಒಂದು ದುರಂತ ಸಂಭವಿಸಿದೆ. ಬಾಲಕಿಯರು ನೀರು ಪಾಲಾಗುತ್ತಿರುವ ಭಯಾನಕ ದೃಶ್ಯ ಸೆರೆಯಾಗಿದೆ. ರೀಲ್ಸ್ ಹುಚ್ಚಾಟದಿಂದ ಈ ಒಂದು ದುರಂತ ಸಂಭವಿಸಿದೆ. ತ್ರಿಷಾ (17) ರತ್ನಕುಮಾರಿ (16) ಹಾಗೂ ಪವಿತ್ರ (16) ಈ ಮೂವರು ಅಪ್ರಾಪ್ತ ಬಾಲಕಿಯರು ನೀರು ಪಾಲಾಗಿರುವ ಘಟನೆ ಇದೀಗ ವರದಿಯಾಗಿದ್ದು ಈ ಒಂದು ಅಲ್ಲೂರಿ ಜಿಲ್ಲೆಯ ಜಲಪಾತದ ಬಳಿ ದುರಂತ ಸಂಭವಿಸಿದ್ದು, ನೀರಿನ ಆಳಕ್ಕೆ ಹೋಗುತ್ತಿದ್ದಂತೆ ಕ್ಷಣಮಾತ್ರದಲ್ಲಿ ಅಪ್ರಾಪ್ತ ಬಾಲಕಿಯರು ಜಲಸಮಾಧಿಯಾಗಿದ್ದಾರೆ. https://twitter.com/sirajnoorani/status/2042328367182332200?t=VLBJm6cKuxQWiuSyZ9MjjQ&s=19














