Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನೀಟ್ ಪರೀಕ್ಷೆವಾಗಿ 10 ನಿಮಿಷ ತಡವಾಗಿ ಬಂದಿದ್ದಕ್ಕೆ ಸಿಬ್ಬಂದಿಗಳು ವಿದ್ಯಾರ್ಥಿನಿಯರಿಗೆ ನೀಟ್ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿರುವ ಘಟನೆ ಬೆಂಗಳೂರಿನ ಯಲಹಂಕದ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷಾ ಕೇಂದ್ರಕ್ಕೆ 10 ನಿಮಿಷ ತಡವಾಗಿ ಬಂದಿದ್ದರು. ಈ ವೇಳೆ ಸಿಬ್ಬಂದಿಗಳು 10 ನಿಮಿಷ ತಡವಾಗಿದೆ ಎಂದು ನೀಟ್ ಎಕ್ಸಾಮ್ ಪರೀಕ್ಷೆ ಬರೆಯಲು ನಿರಾಕರಿಸಿದ್ದಾರೆ. ಬೆಂಗಳೂರಿನ ಆರ್ ಸಿ ಕಾಲೇಜಿಗೆ ವಿದ್ಯಾರ್ಥಿನಿ 20 ನಿಮಿಷ ತಡವಾಗಿ ಬಂದಿದ್ದಾಳೆ. ಮಧ್ಯಾಹ್ನ 2 ಗಂಟೆಗೆ ನೀಟ್ ಎಕ್ಸಾಮ್ ಆರಂಭವಾಗಿದ್ದು, ಮಧ್ಯಾಹ್ನ 1:30ರ ವರೆಗೆ ಎಕ್ಸಾಮ್ ಸೆಂಟರ್ನ ಗೇಟ್ ಓಪನ್ ಆಗಿತ್ತು. ಟ್ರಾಫಿಕ್ ಜಾಮ್ ನಿಂದ ಯುವತಿ 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಾಳೆ. ಗೇಟ್ ಕ್ಲೋಸ್ ಆಗಿದೆ ಎಂದು ಸಿಬ್ಬಂದಿಗಳು ಅವಕಾಶ ನಿರಾಕರಿಸಿದ್ದಾರೆ. ಎಕ್ಸಾಮ್ ಬರೆಯಲು ಆಗದೆ ಯುವತಿ ಕಣ್ಣೀರು ಹಾಕಿದ್ದಾಳೆ. ಚಾಲುಕ್ಯ ಸರ್ಕಲ್ ಬಳಿಯ ಆರ್ ಸಿ ಕಾಲೇಜಿನ ಎಕ್ಸಾಮ್ ಸೆಂಟರ್ನಲ್ಲಿ ಈ ಒಂದು ಘಟನೆ ನಡೆದಿದೆ. ಅತ್ತಿಬೆಲೆಯಿಂದ…
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಸುಪ್ರೀಂ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಒಂದು ಅರ್ಜಿಯ ವಿಚಾರಣೆ ನಾಳೆ ಸುಪ್ರೀಂ ಕೋರ್ಟಲ್ಲಿ ನಡೆಯಲಿದೆ. ಇದೀಗ ಜಾಮೀನು ಅರ್ಜಿಯಲ್ಲಿ ನಟ ದರ್ಶನ್ ತಮ್ಮ ಅಹವಾಲು ಹೇಳಿಕೊಂಡಿದ್ದಾರೆ. ಅರ್ಜಿಯಲ್ಲಿ ನಟ ದರ್ಶನ್ ಅವರು ಜೈಲಿನಲ್ಲಿ ಸಹ ಕೈದಿಗಳಿಂದ ಬೆದರಿಕೆ ಮತ್ತು ನಿಂದನೆ ಬರುತ್ತಿದೆ. ಜೈಲಿನಲ್ಲಿ ನನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ. ನಿಯಮ ಮೀರಿ ಕ್ವಾರನ್ಟೈನ್ ಸೆಲ್ ನಲ್ಲಿ ಇಡಲಾಗಿದೆ. ವೃತ್ತಿ ಜೀವನದ ಬಗ್ಗೆಯೂ ನಟ ದರ್ಶನ್ ಆತಂಕ ತೋಡಿಕೊಂಡಿದ್ದಾರೆ. ಜೈಲುವಾಸದಿಂದ ನನ್ನ ಜೀವನೋಪಾಯಕ್ಕೆ ಸಮಸ್ಯೆ ಆಗಿದೆ. ಸುದೀರ್ಘ ಜೈಲುವಾಸ ಪೂರ್ತಿ ಜೀವನಕ್ಕೆ ಮರಣ ಗಂಟೆಯಾಗಲಿದೆ ಎಂದು ಜಾಮೀನು ಅರ್ಜಿಯಲ್ಲಿ ನಟ ದರ್ಶನ್ ಅಳಲು ತೋಡಿಕೊಂಡಿದ್ದಾರೆ. ಪ್ರತಿ ವರ್ಷ ಎರಡು ಅಥವಾ ಮೂರು ಚಿತ್ರಗಳಿಗೆ ಸಹಿ ಮಾಡುತ್ತಿದ್ದರು. ಜಾಮೀನು ರದ್ದು ಪಡಿಸುವ ಬೆಳೆಯು ಕೂಡ ನಟ ದರ್ಶನ್ ಮೂರು ಸಿನಿಮಾಗಳಿಗೆ ಸಹಿ ಹಾಕಿದ್ದಾರೆ, KVN…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ಇಂದು ಆಯೋಜಿಸಲಾಗಿದ್ದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಅಲ್ಪಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ನಿರ್ಗಮಿಸುತ್ತಿದ್ದಂತೆಯೇ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಜನರಲ್ಲಿ ನಡುಕ ಹುಟ್ಟಿಸಿತು. ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ: ವೇದಿಕೆಯ ಮೇಲಿದ್ದ ವಿದ್ಯುತ್ ವೈಯರ್ಗಳಲ್ಲಿ ದಿಢೀರನೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಕಿಡಿ ಕಾಣಿಸಿಕೊಂಡ ಬೆನ್ನಲ್ಲೇ ಬೆಂಕಿ ಹತ್ತಿಕೊಂಡಿದೆ. ಡಿ.ಕೆ. ಶಿವಕುಮಾರ್ ಅವರು ವೇದಿಕೆಯಿಂದ ಕೆಳಗಿಳಿದು ತೆರಳುತ್ತಿದ್ದ ಕ್ಷಣಗಳಲ್ಲೇ ಈ ಘಟನೆ ನಡೆದಿದೆ. ವೇದಿಕೆಯ ಅಲಂಕಾರಿಕ ವಸ್ತುಗಳಿಗೆ ಬೆಂಕಿ ತಗುಲುವ ಭೀತಿ ಎದುರಾದ ಕಾರಣ ಕಾರ್ಯಕ್ರಮದಲ್ಲಿದ್ದವರು ಗಾಬರಿಗೊಂಡರು. ಸಚಿವ ಈಶ್ವರ್ ಖಂಡ್ರೆ ರಕ್ಷಣೆ: ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇನ್ನೂ ವೇದಿಕೆಯ ಮೇಲೆಯೇ ಇದ್ದರು. ಬೆಂಕಿಯ ಕಿಡಿಗಳನ್ನು ಗಮನಿಸಿದ ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಮತ್ತು ಸ್ಥಳೀಯ ಕಾರ್ಯಕರ್ತರು ಸಚಿವರನ್ನು ಕೂಡಲೇ ವೇದಿಕೆಯಿಂದ ಸುರಕ್ಷಿತವಾಗಿ ಕೆಳಗಿಳಿಸಿ ಪಾರು ಮಾಡಿದರು. ಸಮಯ ಪ್ರಜ್ಞೆಯಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು…
ಬೆಂಗಳೂರು : ರಾಜ್ಯದಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಒಂದು ರಾತ್ರಿ ಬೆತ್ತಲೆ ಪೂಜೆಗೆ ಕುಳಿತರೆ 30 ಲಕ್ಷ ನೀಡುವುದಾಗಿ ಯುವತಿಗೆ ಪಕ್ಕದ ಮನೆಯ ಕಾಮುಕನೊಬ್ಬ ಆಫರ್ ಕೊಟ್ಟಿದ್ದಾನೆ. ಚೈತ್ರ ಎನ್ನುವ ಯುವತಿಗೆ ಪಕ್ಕದ ಮನೆಯ ಕಾಮುಕ ಕಿರಣ್ ಎಂಬಾತ ಬರೋಬ್ಬರಿ 30 ಲಕ್ಷ ಆಫರ್ ಕೊಟ್ಟಿದ್ದಾನೆ. ಕಿರಣ್ ವಿರುದ್ಧ ಯುವತಿ ಚೈತ್ರ ಗಂಭೀರ ಆರೋಪ ಮಾಡಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದ ದೊಡ್ಡಮಣ್ಣಗುಡ್ಡೆ ದೊಡ್ಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯ ವಿವರ: ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಗೆ ಬರುವ ರಾಮನಗರದ ದೊಡ್ಡಮಣ್ಣಗುಡ್ಡೆ ದೊಡ್ಡಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಚೈತ್ರ ಎಂಬ ಯುವತಿಗೆ ಆಕೆಯ ಪಕ್ಕದ ಮನೆಯಲ್ಲೇ ವಾಸವಾಗಿರುವ ಕಿರಣ್ ಎಂಬಾತ ಈ ರೀತಿಯ ಅಸಭ್ಯ ಆಫರ್ ನೀಡಿದ್ದಾನೆ ಎನ್ನಲಾಗಿದೆ. ಆರೋಪಿ ಕಿರಣ್ ಕಳೆದ ಕೆಲವು ದಿನಗಳಿಂದ ಯುವತಿಗೆ ಕಿರುಕುಳ ನೀಡುತ್ತಿದ್ದು, ವಿಕೃತ ಬೇಡಿಕೆಗಳನ್ನು ಮುಂದಿಟ್ಟಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 30 ಲಕ್ಷದ ಆಮಿಷ ಮತ್ತು ಬೆದರಿಕೆ:…
ಹಾಸನ : ಕಳೆದ 2023 ಡಿಸೆಂಬರ್ 4ರಂದು ಹಾಸನ ಜಿಲ್ಲೆಯ ಯಸಳೂರು ವಲಯದಲ್ಲಿ ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ 6ರ ಬುಧವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕಳೆದ 2023ರ ಡಿಸೆಂಬರ್ 4ರಂದು ನಡೆದ ಕಾರ್ಯಾಚರಣೆಯಲ್ಲಿ ಅರ್ಜುನ ಮೃತಪಟ್ಟ ಸ್ಥಳದಲ್ಲೇ ಈ ಸ್ಮಾರಕವನ್ನು ನಿರ್ಮಿಸಲಾಗಿದೆ. ದಬಳ್ಳಡ್ಕ ಎಂಬಲ್ಲಿ ಅರ್ಜುನನ ಸಮಾಧಿ ಇದ್ದು, ಅಲ್ಲಿಯೇ ಒಂದು ಸುಂದರ ಸ್ಮಾರಕವನ್ನು ನಿರ್ಮಿಸುವ ಮೂಲಕ ಸರ್ಕಾರವು ನಾಡಿನ ಹೆಮ್ಮೆಯ ಆನೆಗೆ ಗೌರವ ಸಲ್ಲಿಸುತ್ತಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ. ವೀರಾವೇಶದ ಹೋರಾಟ: ಕಳೆದ ಡಿಸೆಂಬರ್ನಲ್ಲಿ ಯಸಳೂರು ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿದ್ದ ಕಾಡಾನೆಗಳನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಅರ್ಜುನ ಭಾಗಿಯಾಗಿದ್ದ. ಈ ವೇಳೆ ಕಾಡಾನೆಯೊಂದು ಎದುರಾದಾಗ, ಅರ್ಜುನ ಎದೆಗುಂದದೆ ಹೋರಾಡಿದ್ದ. ಪಶುವೈದ್ಯರು ಮತ್ತು ಅರಣ್ಯ ಸಿಬ್ಬಂದಿಯ…
ಹಾಸನ: ಲೈಂಗಿಕ ಕ್ರಿಯೆಗೆ ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬಳ ಮೇಲೆ ತೀವ್ರ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಅತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮ್ಯಾ.ಎ.ಆರ್ (35) ಕೊಲೆಯಾದ ಮಹಿಳೆಯಾಗಿದ್ದು, ಅದೇ ಗ್ರಾಮದ ಚಂದ್ರ (41) ಹತ್ಯೆಗೈದ ಆರೋಪಿ ಎಂದು ತಿಳಿದುಬಂದಿದೆ. ವಿಧವೆಯಾಗಿದ್ದ ರಮ್ಯಾ ಬೆಂಗಳೂರಿನಲ್ಲಿ ನರ್ಸಿಂಗ್ ಕೆಲಸ ಮಾಡಿಕೊಂಡಿದ್ದು, ಆರೋಪಿ ಚಂದ್ರನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು. ಏ.28ರಂದು ಅತ್ತೆಯ ಅಂತ್ಯಸಂಸ್ಕಾರಕ್ಕೆಂದು ಸ್ವಗ್ರಾಮ ಅತ್ತಿಹಳ್ಳಿಗೆ ಬಂದಿದ್ದಾಗ, ರಾತ್ರಿ ಮನೆಗೆ ಬಂದ ಚಂದ್ರ ಲೈಂ*ಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ. ಇದಕ್ಕೆ ರಮ್ಯಾ ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಆರೋಪಿ, ಆಕೆಯ ಮೇಲೆ ಮನಬಂದಂತೆ ಹ*ಲ್ಲೆ ನಡೆಸಿ ಮರ್ಮಾಂಗಕ್ಕೆ ಒದ್ದಿದ್ದಾನೆ. ಏ.30ರಂದು ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ರಮ್ಯಾ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ತಂದೆಯೊಬ್ಬ ತನ್ನ ಸ್ವಂತ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಭೀಕರ ಘಟನೆ ಸಿಲಿಕಾನ್ ಸಿಟಿಯ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇ 1ರ ಬುಧವಾರ ರಾತ್ರಿ ಪ್ರಗತಿಪುರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಇಡೀ ಬಡಾವಣೆಯನ್ನು ಬೆಚ್ಚಿಬೀಳಿಸಿದೆ. ಘಟನೆಯ ವಿವರ: ಪ್ರಗತಿಪುರ ನಿವಾಸಿ ಆನಂದ್ ದೊಡ್ಡಮನಿ (45) ಎಂಬುವವರೇ ಮಗನ ಮೇಲೆ ಹಲ್ಲೆ ಮಾಡಿದ ಆರೋಪಿ ತಂದೆ. ಆನಂದ್ ಅವರ ಮಗ ಮಲ್ಲಿಕಾರ್ಜುನ್ (19) ತನ್ನ ತಂದೆಯ ಅನುಮತಿ ಪಡೆಯದೆ ಮನೆಯಲ್ಲಿದ್ದ ಬೈಕ್ ತೆಗೆದುಕೊಂಡು ಹೊರಗೆ ಹೋಗಿದ್ದ ಎನ್ನಲಾಗಿದೆ. ರಾತ್ರಿ ಮಗ ಮನೆಗೆ ವಾಪಸ್ ಬಂದಾಗ ಇದೇ ವಿಷಯವಾಗಿ ತಂದೆ ಮತ್ತು ಮಗನ ನಡುವೆ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಆನಂದ್, ಮಗನ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇಬ್ಬರಿಗೂ ಗಂಭೀರ ಗಾಯ: ಬೆಂಕಿ ಹೊತ್ತಿಕೊಂಡ ತಕ್ಷಣ ಮಲ್ಲಿಕಾರ್ಜುನ್ ಕಿರುಚಾಡಲಾರಂಭಿಸಿದ್ದಾನೆ. ಈ ಸಂದರ್ಭದಲ್ಲಿ ಮಗನನ್ನು ಹಿಡಿದುಕೊಂಡಿದ್ದ…
ಸಾಗರ : ಶಿವಮೊಗ್ಗದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಾವು ಕಚ್ಚಿ ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದಿದೆ. ಸುಳಗೋಡು ಗ್ರಾಮದ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ಸ್ವಾತಿ ಆರು ತಿಂಗಳ ಗರ್ಭಿಣಿಯಾಗಿದ್ದರು. ಶನಿವಾರ ಮಧ್ಯಾಹ್ನ ಸುಮಾರು 3:30ರ ವೇಳೆಗೆ ಸುಳಗೋಡು ಗ್ರಾಮದಲ್ಲಿ ಶುಂಠಿ ಕೆಲಸಕ್ಕೆ ತನ್ನ ಪತಿ ಹಾಗೂ ಇತರ ಕೂಲಿ ಕಾರ್ಮಿಕರೊಂದಿಗೆ ಹೋಗಿದ್ದರು. ಕೆಲಸದ ನಡುವೆ ಎಲ್ಲರೂ ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭದಲ್ಲಿ ಸ್ವಾತಿ ಅವರ ಬಲಗಾಲಿನ ಮೊಣಕಾಲಿಗೆ ವಿಷಪೂರಿತ ಹಾವು ಕಚ್ಚಿದೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಪುಣೆ: ಬಲಪಂಥೀಯ ಸಿದ್ಧಾಂತವಾದಿ ವಿನಾಯಕ್ ದಾಮೋದರ ಸಾವರ್ಕರ್ ಬ್ರಿಟಿಷರ ಆಡಳಿತಾವಧಿಯಲ್ಲಿ ಸೆಲ್ಯುಲಾರ್ ಜೈಲಿನಲ್ಲಿದ್ದಾಗ ಐದು ಬಾರಿ ಕ್ಷಮಾದಾನ ಕೋರಿ ಅರ್ಜಿಗಳನ್ನು ಸಲ್ಲಿಸಿದ್ದು ಸಲ್ಲಿಸಿದ್ದು ಸತ್ಯ ಎಂದು ಸಾವರ್ಕರ್ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹೇಳಿದ್ದಾರೆ ಎಂದು livelaw.in ವರದಿ ಮಾಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯ ವೇಳೆ ಈ ವಿಷಯ ಬಹಿರಂಗವಾಗಿದೆ. ಲಂಡನ್ ನಲ್ಲಿ ನೀಡಿದ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಸಾವರ್ಕರ್ ಕುರಿತು ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಈ ದೂರು ದಾಖಲಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪಾಟಿ ಸವಾಲಿನ ವೇಳೆ ಸತ್ಯಕಿ, “ಸಾವರ್ಕರ್ ಜೈಲಿನಲ್ಲಿದ್ದಾಗ ಐದು ಬಾರಿ ಕ್ಷಮಾದಾನ ಅರ್ಜಿಗಳನ್ನು ಸಲ್ಲಿಸಿದ್ದರೆಂಬುದು ನಿಜ. ಸಾವರ್ಕರ್ ಮಾತ್ರವಲ್ಲದೆ ಅನೇಕ ರಾಜಕೀಯ ಕೈದಿಗಳು ಕೂಡ ಬ್ರಿಟಿಷ್ ಸರ್ಕಾರಕ್ಕೆ ಇದೇ ರೀತಿಯ ಅರ್ಜಿಗಳನ್ನು ಸಲ್ಲಿಸಿದ್ದಾರೆ,” ಎಂದು ಹೇಳಿದ್ದಾರೆ. ಗೋವಿನ ಕುರಿತು ಸಾವರ್ಕರ್ ಅವರ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ,…
ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮನೆಗೆ ನುಗ್ಗಿ ಮಾರಕಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ರಾಮದಾಸ್ ಕಾಂಪೌಂಡ್ ಬಡಾವಣೆಯಲ್ಲಿ ಈ ಒಂದು ಭೀಕರ ಕೋಲೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪ್ರಮೋದ್ (46) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ. ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಪ್ರಮೋದನ್ನು ಕೊಲೆ ಮಾಡಿದ್ದು, ಮಹಿಳೆಯ ಜೊತೆ ಆಕ್ರಮ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














