Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ರಾಜ್ಯ ಸರ್ಕಾರ ಇದೀಗ ಸಿಹಿಸುದ್ದಿ ನೀಡಿದ್ದು, MSP ಪ್ರಕಾರ ನೇರವಾಗಿ ರೈತರಿಂದ ಮೆಕ್ಕೆಜೋಳ ಖರೀದಿಸಲು ಅನುಮತಿ ನೀಡಿದೆ. ಹೌದು ಮೆಕ್ಕೆಜೋಳ ಖರೀಡಿಗೆ ಕುಕ್ಕುಟ ಆಹಾರ ಉತ್ಪಾದಕರಿಗೆ ಅನುಮತಿ ನೀಡಿದ್ದು, ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿಗೆ ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು : ರೇಣುಕಾಸ್ವಾಮೀ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲಲ್ಲಿ ಇದ್ದು, ಇದೀಗ ಕೊನೆಗೂ ದರ್ಶನ್ ಗೆ ಟಿವಿ ಭಾಗ್ಯ ದೊರೆತಿದೆ. ಬೆಂಗಳೂರಿನ 57ನೇ CCH ನ್ಯಾಯಾಲಯ ದರ್ಶನ್ ಇರೋ ಬ್ಯಾರಕ್ ನಲ್ಲಿ ಟಿವಿ ಅಳವಡಿಸುವಂತೆ ಕೋರ್ಟ್ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ತಂದೆ-ತಾಯಿಗೆ ಸಮನ್ಸ್ ಜಾರಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಡಿಸೆಂಬರ್ 17 ರಂದು ಸಾಕ್ಷಿಗಳಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ತಂದೆ ಹಾಗು ತಾಯಿಗೆ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ 57ನೇ CCH ಕೋರ್ಟ್ ಈ ಒಂದು ಸಮನ್ಸ್ ಜಾರಿ ಮಾಡಿದ್ದು, ವಿಟ್ನೆಸ್ ನಂಬರ್ CW 7,8 ಆಗಿರುವ ತಂದೆ ತಾಯಿಗೆ ಸಮನ್ಸ್ ಜಾರಿಗೆ ಆದೇಶಸಿದೆ. ದರ್ಶನ್ ಬ್ಯಾರಾಕ್ ನಲ್ಲಿ ಟಿವಿ ಅಳವಡಿಕೆಗೂ ಕೋರ್ಟ್ ಸೂಚನೆ ನೀಡಿದೆ. ಯಾವ ಸಾಕ್ಷಿಗಳನ್ನು ಹಾಜರೂಪಡಿಸಬೇಕೆಂಬುದು ಪ್ರಾಜಿಕ್ಯೂಷನ್ ಆಯ್ಕೆ ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಕೊಪ್ಪಳ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಮಧ್ಯ ಜಟಾಪಟಿ ನಡೆದಿತ್ತು. ಬಳಿಕ ಬ್ರೇಕ್ ಫಾಸ್ಟ್ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.ಕೊಪ್ಪಳದಲ್ಲಿ ಮಾಧ್ಯಮಗಳು ಸಿದ್ದರಾಮಯ್ಯ ಸ್ಥಾನ ಭದ್ರ ಇದೆಯಾ ಎಂದು ಕೇಳಿದಕ್ಕೆ ಸಿಎಂ ಸಿದ್ದರಾಮಯ್ಯ ನೆಗೆದುಬಿದ್ದು ಹೋಗ್ತಿದಾರೆ. ಇನ್ನು ಬೇರೆ ಪದ ಹೇಳಬೆಕಾ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ನೆಗೆದುಬಿದ್ದು ಹೋಗ್ತಿದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೋರ್ಟ್ ಡಿಸೆಂಬರ್ 17 ರಂದು ಸಾಕ್ಷಿಗಳಿಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ರೇಣುಕಾಸ್ವಾಮಿ ತಂದೆ ಹಾಗು ತಾಯಿಗೆ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ 57ನೇ CCH ಕೋರ್ಟ್ ಈ ಒಂದು ಸಮನ್ಸ್ ಜಾರಿ ಮಾಡಿದ್ದು, ವಿಟ್ನೆಸ್ ನಂಬರ್ CW 7,8 ಆಗಿರುವ ತಂದೆ ತಾಯಿಗೆ ಸಮನ್ಸ್ ಜಾರಿಗೆ ಆದೇಶಸಿದೆ. ದರ್ಶನ್ ಬ್ಯಾರಾಕ್ ನಲ್ಲಿ ಟಿವಿ ಅಳವಡಿಕೆಗೂ ಕೋರ್ಟ್ ಸೂಚನೆ ನೀಡಿದೆ. ಯಾವ ಸಾಕ್ಷಿಗಳನ್ನು ಹಾಜರೂಪಡಿಸಬೇಕೆಂಬುದು ಪ್ರಾಜಿಕ್ಯೂಷನ್ ಆಯ್ಕೆ ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕರಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು : ನಟ ಶಾರುಖ್ ಖಾನ್ ಪುತ್ರ ನಿಂದ ಮತ್ತೊಂದು ವಿವಾದ ಆಗಿದ್ದು, ಪಬ್ನಲ್ಲಿ ಮಿಡಲ್ ಫಿಂಗರ್ ತೋರಿಸಿ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಅಸಭೇ ಬರ್ತಾನೆ ತೋರಿರುವ ಘಟನೆ ವರದಿಯಾಗಿದೆ. ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಈ ಒಂದು ದುರ್ವರ್ತನೆ ತೋರಿದ್ದು ಬೆಳಕಿಗೆ ಬಂದಿದೆ. ಕಳೆದ ನವೆಂಬರ್ 28 ರಂದು ನಡೆದಿದ್ದ ಘಟನೆ ಬೆಳಕಿಗೆ ಬಂದಿದೆ ಬೆಂಗಳೂರಿನಲ್ಲಿ ಸಾರ್ವಜನಿಕವಾಗಿ ದುರ್ವರ್ತನೆ ತೋರಿದ್ದು ನವೆಂಬರ್ 28ರ ಘಟನೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಪಬ್ನಲ್ಲಿ ನಟ ಶಾರುಖ್ ಖಾನ್ ಪುತ್ರ ಆರ್ಯಾನ್ ಖಾನ್ ಬಂದಿದ್ದರು. ಈ ವೇಳೆ ಸಾರ್ವಜನಿಕವಾಗಿ ಅಸಭ್ಯವಾಗಿ ಮಧ್ಯದ ಬೆರಳು ತೋರಿಸಿ ದುರ್ವರ್ತನೆ ತೋರಿದ್ದಾರೆ. ಅವರ ಜೊತೆಗೆ ಸಚಿವರಾದ ಜಮೀರ್ ಅಹ್ಮದ್ ಖಾನ್ ಪುತ್ರ ಹಾಗೂ ಶಾಸಕ ಎನ್ ಎ ಹ್ಯಾರಿಸ್ ಪುತ್ರ ನಲಪಾಡ್ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ವಿನಯ್ ಗೌಡ ಸಹ…
ಬೀದರ್ : ಶಾರ್ಟ್ ಸರ್ಕ್ಯೂಟ್ ನಿಂದ 7 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಸಿದ್ದೇಶ್ವರ ಗ್ರಾಮದಲ್ಲಿ ನಡೆದಿದೆ. ಸಿದ್ದೇಶ್ವರ ಗ್ರಾಮದ ರೈತ ಸಂಗಮೇಶ್ವರನಳ್ಳಿಗೆ ಸೇರಿದ 7 ಎಕರೆ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವರ್ಷವಿಡಿ ಕಷ್ಟಪಟ್ಟು ಬೆಳೆದಿದ್ದ ಕಬ್ಬು ಬೆಳೆ ರೈತನ ಕಣ್ಣೆದುರೇ ಸುಟ್ಟು ಬಸ್ಮವಾಗಿದೆ ಏಳು ಎಕರೆ ಕಬ್ಬು ಬೆಳೆ, ಬೆಂಕಿಗೆ ಆಹುತಿಯಾಗಿದ್ದನ್ನು ಕಂಡು ರೈತ ಕಣ್ಣೀರು ಹಾಕಿದ್ದಾರೆ ಜೆಸ್ಕಾಂ ಅಧಿಕಾರಿಗಳ ವಿರುದ್ಧ ರೈತ ಸಂಗಮೇಶ್ ತರನಳ್ಳಿ ಆಕ್ರೋಶ ಹೊರಹಾಕಿದ್ದಾರೆ ಬೆಂಕಿಗೆ ಆಹುತಿಯಾದ ಕಬ್ಬು ಬೆಳೆಗೆ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.
BIG NEWS : ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ : ಗೃಹ ಸಚಿವ ಪರಮೇಶ್ವರ್
ಬೆಂಗಳೂರು : ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್ ಈ ಮಸೂದೆಯನ್ನ ಬಿಜೆಪಿ ಟಾರ್ಗೆಟ್ ಮಾಡೋದಕ್ಕೆ ತರ್ತಿಲ್ಲ ಎಂದು ಹೇಳಿದ್ದಾರೆ. ಶಾಸಕಾಂಗ ಪಕ್ಷದ ಸಭೆಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದ್ವೇಷ ಭಾಷಣ ಸಂಬಂಧ ಮಸೂದೆ ಮಂಡನೆಗೆ ಇಂದು ಸಂಪುಟದಲ್ಲಿ ಚರ್ಚಿಸಿ ಅನುಮತಿ ಪಡೆಯುತ್ತೇವೆ. ಈಗ ಇರುವ ಕಾಯ್ದೆಯನ್ನೇ ಇನ್ನಷ್ಟು ಬಲಪಡಿಸುವ ತಿದ್ದುಪಡಿ ಮಾಡಲಾಗಿದೆ ಎಂದು ಹೇಳಿದರು. ಇನ್ನೂ ದ್ವೇಷ ಭಾಷಣ ಮಸೂದೆಯನ್ನ ಬಿಜೆಪಿ (BJP) ಟಾರ್ಗೆಟ್ ಮಾಡಲು ತರ್ತಿಲ್ಲ. ಅದೆಲ್ಲ ಸುಳ್ಳು ಆರೋಪ. ಅಧಿಕಾರದಲ್ಲಿ ನಾವೇ ಶಾಶ್ವತವಾಗಿ ಇರ್ತೀವಾ? ಅವರು ಬರಲ್ವಾ? ಯಾರೇ ಬಂದರೂ ಕಾಯ್ದೆ ಅದೇ ಇರುತ್ತೆ ಎಂದು ತಿಳಿಸಿದರು.ಸಿಎಂ-ಡಿಸಿಎಂ ಪರ ಘೋಷಣೆ ಕೂಗಿದ ವಿಚಾರಕ್ಕೆ ಉತ್ತರಿಸಿ, ಒಬ್ಬೊಬ್ಬ ನಾಯಕರಿಗೆ ಒಂದಷ್ಟು ಅಭಿಮಾನಿಗಳು ಇರ್ತಾರೆ. ಅವರು ಜೈಕಾರ ಹಾಕುತ್ತಿರುತ್ತಾರೆ, ಅದು ತಪ್ಪು ಅಂತ ಹೇಳಕ್ಕಾಗಲ್ಲ. ಸಮಸ್ಯೆಗಳು ಬಗೆಹರಿದ್ರೆ ಇವೆಲ್ಲ ನಿಂತು ಹೋಗುತ್ತವೆ ಎಂದರು.
BREAKING : ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿ
ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ, ಪರಿಹಾರ ವಿಧೇಯಕ ಸಂಪುಟ ಸಭೆಯಲ್ಲಿ ವಿಧೇಯಕ ಮಂಡನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಗ್ರಾಮ ಅಥವಾ ಸಮುದಾಯದದಿಂದ ಹೊರಹಾಕುವುದಕ್ಕೆ ನಿರ್ಬಂಧ, ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ ವಿಧಿಸಿವುದು, ಸಾರ್ವಜನಿಕ ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು, ಸಾಮಾಜಿಕ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯುವುದು.ವ್ಯವ್ಯಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು ಶಾಲೆ ಆಸ್ಪತ್ರೆ, ಸಮುದಾಯ ಭವನ ಪ್ರವೇಶಕ್ಕೆ ತಡೆಯೋಡ್ದುವುದು. ಸೇವೆ, ಅವಕಾಶ ನಿರಾಕರಿಸುವುದನ್ನು ತಡೆಯಲು ನಿರ್ಬಂಧ, ಮದುವೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವುದಕ್ಕೆ ತಡೆಯೋಡ್ಡುವುದು.ಸಂಬಂಧ ಕಡಿತಗೊಳಿಸಲು ಪ್ರಚೋದನೆ ನೀಡುವುದು. ಲಿಂಗತ್ವದ ಆಧಾರಾದ ಮೇಲೆ ಬೇಧ ಮಾಡುವುದು, ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೋಡ್ದುವುದು ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು.ಮಾನವ ಹಕ್ಕುಗಳ ನಿರಾಕರಣೆ, ಬಟ್ಟೆ ಭಾಷೆ ಸಂಸ್ಕೃತಿಕ ಭೇದ ಮಾಡುವುದು. ಸಂಪುಟ ಸಭೆಯಲ್ಲಿ ವಿಧೇಯಕ ಮಂಡನೆಗೆ ಅನುಮೋದನೆ…
ಬೆಂಗಳೂರು : ಬೆಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ಬಗ್ಗೆ ದೂರು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಲಾಖೆಯ ವಿವಿಧೆಡೆ ಇರುವ 12 ಕಚೇರಿಗಳ ಮೇಲೆ ಬುಧವಾರ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್ ಆದೇಶದ ಮೇರೆಗೆ, ಬೆಂಗಳೂರಿನ ಜಂಟಿನಿರ್ದೇಶಕರ(ಆಡಳಿತ) ಕಚೇರಿ, ಉಪ ನಿರ್ದೇಶಕರ (ಸಾರ್ವ ಜನಿಕ ಶಿಕ್ಷಣ ಇಲಾಖೆ) ಕಚೇರಿ ಹಾಗೂ 9ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳು ಸೇರಿದಂತೆ ಒಟ್ಟು 12 ಕಚೇರಿಗಳಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ದೂರುಗಳ ಸತ್ಯಾಸತ್ಯತೆ ಅರಿಯಲು ಲೋಕ್ತಾ ಅಧಿಕಾರಿಗಳು ಗೌಪ್ಯ ತನಿಖೆ ನಡೆಸಿದ್ದರು. ಈ ವೇಳೆ ಆರೋಪಗಳಲ್ಲಿ ಹುರುಳಿದೆ ಎಂದು ಖಚಿತವಾದ ಬಳಿಕ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖ ಲಿಸಿಕೊಂಡು ದಾಳಿ ನಡೆಸಲಾಗಿದೆ. ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಮಾರ್ಗಸೂಚಿಗಳ ಉಲ್ಲಂಘನೆ ಮತ್ತು ಲಂಚಕ್ಕೆ ಬೇಡಿಕೆ. ಮಕ್ಕಳ ಸುರಕ್ಷತೆಯ ಹೆಸರಿನಲ್ಲಿ ಖಾಸಗಿ ಶಾಲೆಗಳಿಗೆ ಅನಗತ್ಯ ಭೇಟಿ ನೀಡಿ ಕಿರುಕುಳ,…
ಕಲಬುರಗಿ : ಕಲಬುರ್ಗಿಯಲ್ಲಿ ಖತರ್ನಾಕ್ ಕಳ್ಳನೊಬ್ಬ ತನ್ನ ಗೆಳತಿಯ ಜೊತೆಗೆ ಸಹ ಜೀವನ ನಡೆಸಲು ಕಳ್ಳತನಕ್ಕೆ ಇಳಿದಿದ್ದಾನೆ. ಇದೀಗ ಪೊಲೀಸರು ಆತನನ್ನು ಅರೆಸ್ಟ್ ಮಾಡಿದ್ದಾರೆ.ಹೌದು ಗೆಳತಿಯೊಂದಿಗೆ ಸಹ ಜೀವನ (ಲಿವಿಂಗ್ ಟುಗೆದರ್) ನಡೆಸಲು ಮತ್ತು ಆಕೆ ಹಾಗೂ ತನ್ನ ಶೋಕಿ ಆಸೆಗಳನ್ನು ತಿರಿಸಿಕೊಳ್ಳಲು ಕಳ್ಳತನಕ್ಕಿಳಿದ ವ್ಯಕ್ತಿಯನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಸುಲಿಗೆ ಮತ್ತು ಮನೆಗಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಶೋಕಿ ಈಡೇರಿಸಿಕೊಳ್ಳಲು ಇಂತಹ ಕೃತ್ಯಗಳನ್ನು ಎಸಗುತ್ತಿದ್ದ ಎನ್ನುವ ಮಾಹಿತಿ ಹೊರಬಿದ್ದಿದೆ. ಅಫಜಲಪುರದ ಕಲ್ಲಪ್ಪ ಅಲಿಯಾಸ ಸಂಜು ಪೂಜಾರಿ (24) ಬಂಧಿತ ಆರೋಪಿ. ಈತ ಯುವತಿಯೊಂದಿಗೆ ಲಿವಿಂಗ್ ಟುಗೆದರ್ನಲ್ಲಿದ್ದ. ಕೂಲಿ ಕೆಲಸ ಮಾಡುತ್ತಿದ್ದು, ಖರ್ಚಿಗೆ ದುಡಿದ ಹಣ ಸಾಕಾಗದೇ ಇದ್ದಾಗ ಪರ್ಸ್ಗಳನ್ನು ಕದಿಯುತ್ತಿದ್ದ. ಮನೆ ಖರ್ಚು, ತನ್ನ ಖರ್ಚು ಹೆಚ್ಚಾದಂತೆ ಮನೆಗಳ ಕಳ್ಳತನ ಮಾಡುತ್ತಿದ್ದ ಎಂದು ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಮಾಹಿತಿ ನೀಡಿದರು.














